News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಕೋಲಾರ ಜಿಲ್ಲೆ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023
ಕರ್ನಾಟಕ ಮೇ.೧೦ ಚುನಾವಣೆ
ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್: ಕೊನೆಯ ದಿನಾಂಕವನ್ನು ವಿಸ್ತರಿಸಿದ ಕೇಂದ್ರ ಸರ್ಕಾರ!
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ
RRR ಚಲನಚಿತ್ರಕ್ಕೆ ಆಸ್ಕರ್ ಪ್ರಶಸ್ತಿ
ನೌಕರರ ವೇತನ ಶೇ.17ರಷ್ಟು ಹೆಚ್ಚಿಸಿ ಅಧಿಕೃತ ಆದೇಶ ಹೊರಡಿಸಿದ ಸರ್ಕಾರ:
ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ
ನಿಮ್ಮ ಪಾನ್‌ಕಾರ್ಡ್‌ ಆಧಾರ್‌ ಜೊತೆ ಲಿಂಕ್ ಆಗಿದೆಯೇ? ತಿಳಿಯೋದು ಹೇಗೆ? ಇಲ್ಲಿದೆ ವಿವರ
ಖ್ಯಾತ ನಟ ನಂದಮೂರಿ ತಾರಕರತ್ನ ನಿಧನ
ಪೋಕ್ಸೊ ಕಾಯಿದೆ ಅಡಿ 4 ಆರೋಪಿಗೆ ಜೀವಿತಾವಧಿವರೆಗೂ ಸಜೆ
ಉದ್ಯೋಗ

ಶ್ರೀಮಂತರಾಗಲು ಭಾರತದಲ್ಲಿವೆ ಅತೀ ಹೆಚ್ಚು ಹಣ ಪಡೆಯುವ ಕೆಲಸಗಳು..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

735

ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿ ಯಾಗ ಬಹುದು. ಅಮೂಲ್ಯವೆನಿಸುವ ಯಾವುದೇ ವಸ್ತು ಸುಲಭವಾಗಿ ದಕ್ಕುವುದಿಲ್ಲ. ಹಣವೂ ಅಷ್ಟೇ ! ಯಾರೇ ಆಗಲಿ, ಎಷ್ಟೇ ಹಣವಂತರಿರಲಿ, ಬಾಯಲ್ಲಿ ಬೆಳ್ಳಿ ಚಮಚವನ್ನಿರಿಸಿಕೊಂಡು ಹುಟ್ಟಿರುವುದಿಲ್ಲ. ಆದರೆ ಈ ಭೂಮಿಯಲ್ಲಿ ಹುಟ್ಟಿರುವ ಯಾವುದೇ ವ್ಯಕ್ತಿಗೆ ಹಣವಂತನಾಗುವ ಸಮಾನ ಅವಕಾಶವಿದೆ. ಇದಕ್ಕೆ ಸತತ ಪರಿಶ್ರಮ ಹಾಗೂ ಹಣಗಳಿಕೆಯ ಹಂತವನ್ನು ಮೆಟ್ಟಿಲು ಮೆಟ್ಟಿ ಲಾಗಿ ಏರಲು ಉತ್ತಮ ಉದ್ಯೋಗದ ನೆರವು ಬೇಕು. ಇದು ಸ್ವ ಉದ್ಯೊಗವೂ ಆಗಬಹುದು ಅಥವಾ ಅತಿಹೆಚ್ಚು ಗಳಿಕೆ ನೀಡುವ ಇತರ ಉದ್ಯೋಗವೂ ಆಗಬಹುದು.

ಅಂದ ಮಾತ್ರಕ್ಕೆ ಉದ್ಯೋಗ ಮಾಡುವ ಎಲ್ಲರೂ ಭಾರೀ ಹಣ ಮಾಡುತ್ತಾರೆ ಎಂದು ಹೇಳುವಂತಿಲ್ಲ. ಈ ಉದ್ಯೋಗವನ್ನು ಮಾಡುವವರಿಗೆ ಅತಿಹೆಚ್ಚು ವೇತನ ನೀಡಬೇಕಾದರೆ ಬೇರಯವ ರಲ್ಲಿ ಇರದ ಬಹಳಷ್ಟು ಗುಣಗಳು, ಕೌಶಲ್ಯ ಹಾಗೂ ಅಪಾರವಾದ ಮಾಹಿತಿ ಇವರಲ್ಲಿರಬೇಕಾಗುತ್ತದೆ. ಅಷ್ಟೇ ಅಲ್ಲ, ಇದನ್ನು ಪಡೆದಿರುವುದು ಉತ್ತಮ ವಿಶ್ವವಿದ್ಯಾಲಯದಲ್ಲಿ ಎಂದು ಪ್ರಮಾಣಿ ಸಲೂಬೇಕಾಗುತ್ತದೆ. ಬೆಂಗಳೂರಿನಲ್ಲಿ ಅತಿಹೆಚ್ಚು ಸಂಬಳ ಪಾವತಿಸುವ ಕಂಪನಿಗಳು ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿಯಾಗ ಬಹುದು. (ವೇತನವನ್ನು ವಾರ್ಷಿಕ ರೂ. ಗಳಲ್ಲಿ ನೀಡಲಾಗಿದೆ

ವೃತ್ತಿಪರ ಕಾರ್ಯನಿರ್ವಾಹಕರು  :-                                                                                                                                                   ವೃತ್ತಿಪರ ಕಾರ್ಯನಿರ್ವಾಹಕರನ್ನು ಸಂಸ್ಥೆ/ ಕಂಪನಿಗಳ ಆತ್ಮ ಎಂದು ಕರೆಯಬಹುದು. ಸಂಸ್ಥೆ ನಿರ್ವಹಿಸಬೇಕಾದ ಕಾರ್ಯಗಳನ್ನು ಸರಿಯಾಗಿ ನಿರ್ವಹಿಸುವಂತೆ ನೋಡಿಕೊಳ್ಳುವುದು ಇವರ ಕಾಯಕ. ಇದಕ್ಕೆ ಪ್ರಾರಂಭಿಕ ಹಂತದಿಂದಲೇ ಕಠಿಣ ಪರಿಶ್ರಮ ಅಗತ್ಯ. ಒಂದು ಬಾರಿ ಪ್ರಾರಂಭಿಕ ಹಂತ ದಾಟಿದ ಬಳಿಕ ಮತ್ತೆ ಹಿಂದಿರುಗಿ ನೋಡುವ ಅವಶ್ಯಕತೆಯೇ ಇಲ್ಲ. ಈ ವೃತ್ತಿಯಲ್ಲಿ ಹೆಚ್ಚು ಹೆಚ್ಚು ಪರಿಣಿತಿ ಪಡೆದಂತೆ ಹೆಚ್ಚು ಹೆಚ್ಚು ವೇತನವನ್ನು ನಿರೀಕ್ಷಿಸಬಹುದು. ಪ್ರಾರಂಭಿಕ ಹಂತ – ರೂ. 3,೦೦,೦೦೦, ಮಧ್ಯಮ ಹಂತ – ರೂ. 25,೦೦,೦೦೦, ಅನುಭವಿ ಹಂತ- ರೂ. 8೦,೦೦,೦೦೦

ಬ್ಯಾಂಕ್ ಹೂಡಿಕೆದಾರ:

ಈ ವೃತ್ತಿಯಲ್ಲಿರುವವರು ಬ್ಯಾಂಕ್ ಹಾಗೂ ಇತರ ಹಣಕಾಸು ಸಂಸ್ಥೆಗಳಿಗೆ ಹಣ ಪಡೆಯುವಿಕೆ ಹಾಗೂ ಹೂಡಿಕೆಯ ಬಗ್ಗೆ ಸಲಹೆ ನೀಡುತ್ತಾರೆ. ಇವರು ಸತತವಾಗಿ ಮಾರುಕಟ್ಟೆಯ ಏರಿಳಿತ ಗಳನ್ನು ಅಭ್ಯಸಿಸುತ್ತಾ ಗ್ರಾಹಕರ ಮನೋಭಾವವನ್ನೂ ಪರಿಗಣಿಸಿ ಸಂಸ್ಥೆಗೆ ಲಾಭ ತರುವಂತಹ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಇದೇ ಕಾರಣಕ್ಕೆ ಇವರಿಗೆ “Money Man” ಎಂಬ ಅನ್ವರ್ಥ ನಾಮವನ್ನೂ ನೀಡಲಾಗಿದೆ. ಪ್ರಾರಂಭಿಕ ಹಂತ- ರೂ. 12,೦೦,೦೦೦, ಮಧ್ಯಮ ಹಂತ – ರೂ. 3೦,೦೦,೦೦೦, ಅನುಭವಿ ಹಂತ- ರೂ.5೦,೦೦,೦೦೦+

ಚಾರ್ಟರ್ಡ್ ಅಕೌಂಟೆಂಟ್:

ಇವರು ಒಂದುಸಂಸ್ಥೆಯ ಲೆಕ್ಕಪತ್ರ ಹಾಗೂ ವ್ಯಾಪಾರದ ಮೇಲೆ ಹಿಡಿತವನ್ನಿರಿಸಿ ಕೊಂಡಿರುತ್ತಾರೆ. ಇವರು ತಮ್ಮ ಕೆಲಸದ ಬಗ್ಗೆ ಜಾಗರೂಕರಾಗಿದ್ದು, ಸಂಸ್ಥೆಯ ಹಣದ ವಿಲೇವಾರಿ ಹಾಗೂ ಆದಾಯದ ಬಗ್ಗೆ ವಿವರಗಳನ್ನು ನೀಡುವಂತಿರಬೇಕು ಹಾಗೂ ಸದಾ ಉತ್ತಮವಾಗಿ ಕಾಣಿಸಿಕೊಳ್ಳುವಂತಿರಬೇಕು. ಈ ವೃತ್ತಿ ಭಾರತದಲ್ಲಿ ಅತಿ ಗೌರವಾತ ಹಾಗೂ ಹೆಚ್ಚಿನ ಆದಾಯ ತರುವಂತದ್ದಾಗಿದೆ. ಪ್ರಾರಂಭಿಕ ಹಂತ – ರೂ. 5,5೦,೦೦೦, ಮಧ್ಯಮ ಹಂತ – ರೂ. 12,8೦,೦೦೦, ಅನುಭವಿ ಹಂತ – ರೂ. 25,7೦,೦೦೦

ತೈಲ ಮತ್ತು ನೈಸರ್ಗಿಕ ಅನಿಲ ವಿಭಾಗದ ವೃತ್ತಿಪರರು:

ಈ ವಿಭಾಗ ಇದುವರೆಗೆ ಎಂದೂ ಬತ್ತದ ಲಾಭದ ವೃತ್ತಿ ಎಂದು ಪರಿಗಣಿಸಲ್ಪಟ್ಟಿದೆ. ಈ ವಿಭಾಗದಲ್ಲಿರುವ ಕೆಲವು ವೃತ್ತಿಗಳು ಹೆಚ್ಚಿನ ವೇತನ ನೀಡುತ್ತವೆ. ಉದಾಹರಣೆಗೆ ಭೂ ಗರ್ಭ ಶಾಸ್ತ್ರಜ್ಞ, ಸಾಗರ ಅಭಿಯಂತರ ಇತ್ಯಾದಿ. ಅನುಭವಿ ಹಂತ – ರೂ. 15-2೦ ಲಕ್ಷ ನಿವ್ವಳ ಹಾಗೂ ಸಂಸ್ಥೆಯಿಂದ ಸಿಗುವ ಎಲ್ಲಾ ಸವಲತ್ತುಗಳು

ವಾಣಿಜ್ಯ ವಿಶ್ಲೇಷಕರು (ಬಿಸಿನೆಸ್ ಅನಾಲಿಸ್ಟ್):

ಇಂದು ಭಾರತದಲ್ಲಿಯೂ ವಾಣಿಜ್ಯ ವಹಿವಾಟು ಅತ್ಯಂತ ಪೈಪೋಟಿ ಹೊಂದಿದ್ದು, ಈ ವೃತ್ತಿಯಲ್ಲಿರು ವವರಿಗೆ ಪೈಪೋಟಿಯನ್ನು ಎದುರಿಸುವುದು ಹೇಗೆ ಎಂಬ ಸವಾಲನ್ನು ಎದುರಿಸಬೇಕಾಗುತ್ತದೆ. ಈ ವೃತ್ತಿಗೆಅತಿ ಹೆಚ್ಚು ಬುದ್ದಿ ಚಾಣಾಕ್ಷರು ಹಾಗೂ ತಾರ್ಕಿಕವಾಗಿ ಯೋಚಿಸುವ ವ್ಯಕ್ತಿಗಳ ಅಗತ್ಯವಿದೆ. ಈ ವೃತ್ತಿಯಲ್ಲಿರುವವರು ವಾಣಿಜ್ಯದ ಅಂಕಿ ಅಂಶಗಳನ್ನು ಗಣಿತದ ಸೂತ್ರಗಳ ಮೂಲಕ ವಿವರಿಸಬಲ್ಲವರಾಗಿರಬೇಕು ಹಾಗೂ ನಿತ್ಯವೂ ಬದಲಾಗುವ ತಂತ್ರಜ್ಞಾನವನ್ನು ತಮ್ಮ ವಾಣಿಜ್ಯ ವಹಿವಾಟಿನ ಏಳಿಗೆಗೆ ಹೇಗೆ ಬಳಸಿಕೊಳ್ಳ ಬಹುದು ಎಂಬುದನ್ನು ಎಲ್ಲರಿ ಗಿಂತ ಮೊದಲು ಅರಿತು ಅಳವಡಿಸಿ ಕೊಳ್ಳುವುದು ಇವರ ವೃತ್ತಿಯ ಪ್ರಮುಖಸವಾಲಾಗಿದೆ. ಅಂದಾಜು ವೇತನ: ಪ್ರಾರಂಭಿಕ ಹಂತ: ರೂ. 6,೦೦,೦೦೦

ವೈದ್ಯಕೀಯ ವೃತ್ತಿಪರರು:

ಈ ವೃತ್ತಿಯಲ್ಲಿ ಹಿಂಜರಿತ ಎಂಬುದೇ ಎಲ್ಲ. ಎಲ್ಲಿಯವರೆಗೆ ಮನುಷ್ಯರು ಇರುತ್ತಾರೋ ಅಲ್ಲಿಯವರೆಗೆ ಈ ವೃತ್ತಿಯಲ್ಲಿ ಗಳಿಕೆ ಇದ್ದೇ ಇರುತ್ತದೆ. ವಿಶ್ವದ ಅತ್ಯಂತ ಗೌರವಾನ್ವಿತ ಹಾಗೂ ಆದ್ಯತೆಯ ವೃತ್ತಿಯಾದ ವೈದ್ಯ ವೃತ್ತಿಯಲ್ಲಿ ಜನರು ವೈದ್ಯೋ ನಾರಾಯಣಃ ಹರಿ ಎಂದೇ ಪರಿಗಣಿಸುತ್ತಾರೆ. ಈ ವೃತ್ತಿಯಲ್ಲಿ ಪ್ರಾರಂಭಿಕ ಹಂತದಲ್ಲಿ ವೇತನ ಕಡಿಮೆ ಇದ್ದರೂ ದಿನಗಳೆದಂತೆ ವೇತನವೂ ಏರುತ್ತಾ ಹೋಗುತ್ತದೆ. ಸಾಮಾನ್ಯ ನೈಪುಣ್ಯತೆ – ರೂ. 4,8೦,೦೦೦, ಸಾಮಾನ್ಯ ಶಸ್ತ್ರ ಚಿಕಿತ್ಸಕ- ರೂ. 8,1೦,೦೦೦, ವೃತ್ತಿಪರ ವೈದ್ಯ- ರೂ.17,೦೦,೦೦೦

ವೈಮಾನಿಕ ವೃತ್ತಿ :

ಈ ವೃತ್ತಿಯಲ್ಲಿರುವವರಿಗೆ ಆದಾಯದ ಮಿತಿ ಆಗಸವೇ ಸರಿ. ಈ ವೃತ್ತಿಯಲ್ಲಿ ನೈಪುಣ್ಯತೆ ಪಡೆದವರು ವಾರ್ಷಿಕ ಇಪ್ಪತ್ತು ಲಕ್ಷದಷ್ಟು ವೇತನ ಪಡೆಯುತ್ತಾರೆ. ಸರಾಸರಿ ವೇತನ: ಕಮರ್ಷಿಯಲ್ ಪೈಲಟ್: ರೂ. 2೦,೦೦,೦೦೦, ಹೆಲಿಕಾಪ್ಟರ್ ಪೈಲಟ್- ರೂ. 18,೦೦,೦೦೦, ವಿಮಾನ ದುರಸ್ತಿ ಸಿಬ್ಬಂದಿ- ರೂ. 9,8೦,೦೦೦

ಕಾನೂನು ವೃತ್ತಿಪರರು :

ಖ್ಯಾತ ವಕೀಲರಿಗೆ ಉಚ್ಛಮಟ್ಟದ ನ್ಯಾಯಾಧೀಶರಾಗುವ ಅವಕಾಶ ತಾನೇ ತಾನಾಗಿ ಒದಗಿ ಬಂದಾಗ ಇದನ್ನು ಹಲವರು ನಿರಾಕರಿಸಿದ್ದಾರೆ. ಏಕೆಂದರೆ ವೃತ್ತಿಪರ ವಕೀಲರಾಗಿ ಗಳಿಸುದಷ್ಟು ವೇತನ ಉಚ್ಛನ್ಯಾಯಾಧೀಶರಿಗೆ ದೊರಕುವುದಿಲ್ಲ. ಇದು ವಾಸ್ತವ. ವೃತ್ತಿಪರ ವಕೀಲರಾಗಬೇಕಾದರೆ ಉನ್ನತ ಶಿಕ್ಷಣ, ಅಪಾರ ತಾಳ್ಮೆ, ಹಾಗೂ ಅದ್ಭುತ ವಾಕ್ಚತುರತೆಯ ಅಗತ್ಯವಿದೆ. ಈ ವೃತ್ತಿಯಲ್ಲಿ ಪಳಗುತ್ತಾ ಹೋದಂತೆ ಪ್ರತಿವಾದಕ್ಕೂ ಹೆಚ್ಚು ಹೆಚ್ಚಿನ ವೇತನವನ್ನು ನಿರೀಕ್ಷಿಸಬಹುದು. ಸರಾಸರಿ ವೇತನ: ಕಾರ್ಪೋರೇಟ್ (ಸಂಸ್ಥೆಗೆ ಮೀಸಲಾದ) ವಕೀಲರು- 6,1೦,೦೦೦, ಹಿರಿಯ ಅಟಾರ್ನಿ – 9,5೦,೦೦೦,

ಮಾರ್ಕೆಟಿಂಗ್ (ಮಾರುಕಟ್ಟೆ ಪ್ರವೀಣ):

ಯಾವುದೇ ವಹಿವಾಟಿನಲ್ಲಿ ಉತ್ಪನ್ನ ಅಥವಾ ಸೇವೆ ಮಾರಾಟ ವಾಗಿ ಹೋದಾಗ ಮಾತ್ರವೇ ಲಾಭ ಪಡೆಯಲು ಸಾಧ್ಯ. ಈ ವೃತ್ತಿಯಲ್ಲಿರುವವರು ಗ್ರಾಹಕರ ಅಂತಃಕರಣವನ್ನು ಅರಿತು ಪ್ರಲೋಭನೆಗಳನ್ನು ಒಡ್ಡಿ ಮಾರಾಟವನ್ನು ಹೆಚ್ಚಿಸಬೇಕಾಗುತ್ತದೆ. ಈ ತಂತ್ರಗಳು ಫಲ ಡಿದರೆ ಹೆಚ್ಚಿನ ವೇತನ ಮಾತ್ರವಲ್ಲ, ಸಂಸ್ಥೆಯ ಉನ್ನತ ಹುದ್ದೆಗಳನ್ನೂ ಪಡೆಯಲು ಸಾಧ್ಯ. ಇದಕ್ಕಾಗಿ ಮಾರುಕಟ್ಟೆಯ ಅಂತರಾಳವನ್ನು ಅರಿತು ಗ್ರಾಹಕರು ಈ ಉತ್ಪನ್ನಗಳಿಗೆ ಒಲವು ನೀಡುವಂತೆ ಉತ್ಪನ್ನ ಅಥವಾ ಸೇವೆಗಳನ್ನು ಬದಲಾವಣೆಗೊಳಪಡಿಸುವುದು ಸಹಾ ಇವರಿಗೆ ಕಾರ್ಯಗತ ವಾಗಿರಬೇಕಾಗುತ್ತದೆ. ಸರಾಸರಿ ವೇತನ: ಪ್ರಾರಂಭಿಕ ಹಂತ- ರೂ. 1,5೦,೦೦೦, ಮಧ್ಯಮ ಹಂತ- ರೂ. 5,೦೦,೦೦೦, ಅನುಭವಿ ಹಂತರೂ. 1೦,೦೦,೦೦೦+

 ಮಾಹಿತಿ ತಂತ್ರಜ್ಞಾನ ಹಾಗೂ ಸಾಫ್ಟ್ವೇರ್ ಅಭಿಯಂತರರು:

ಇದೊಂದು ನಿತ್ಯಹರಿದ್ವರ್ಣದ ಉದ್ಯೋಗವಾಗಿದ್ದು ಹೆಚ್ಚಿನ ಆದಾಯವನ್ನು ಗಳಿಸಬಹುದು. ಇದಕ್ಕಾಗಿ ಕಂಪ್ಯೂಟರುಗಳ ಬಗ್ಗೆ ಆಳವಾದ ಅಧ್ಯಯನ ಹಾಗೂ ಕಂಪ್ಯೂಟರ್ ಭಾಷೇ ಅರ್ಥಮಾಡಿಕೊಳ್ಳುವ ಹಾಗೂ ಅಗತ್ಯಕ್ಕೆ ತಕ್ಕಂತೆ ಬರೆಯುವ ನೈಪುಣ್ಯತೆಯನ್ನು ಪಡೆಯಬೇಕಾಗುತ್ತದೆ. ಈ ವೃತ್ತಿಯಲ್ಲಿರುವವರು ಹೊಸ ಪ್ರೋಗ್ರಾಂಗಳನ್ನು ವಿನ್ಯಾಸಗೊಳಿಸುವ, ಹೊಸ ವ್ಯವಸ್ಥೆಯನ್ನು ಪ್ರತಿಷ್ಠಾಪಿಸುವ ಹಾಗೂ ನಿರ್ವಹಿಸುವ ಕಾರ್ಯಗಳನ್ನು ಕೈಗೆತ್ತಿಕೊಳ್ಳಬೇಕಾಗುತ್ತದೆ. ಸರಾಸರಿ ವೇತನ: ಪ್ರಾರಂಭಿಕ ಹಂತ- ರೂ. 3,5೦,೦೦೦, ಮಧ್ಯಮ ಹಂತ- ರೂ. 8,3೦,೦೦೦, ಅನುಭವಿ ಹಂತ ರೂ. 15,5೦,೦೦೦

 

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • God

    ಧರ್ಮಸ್ಥಳ ಮಂಜುನಾಥನನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Monday, November 22, 2021) ಮೇಷರಾಶಿಯಲ್ಲಿ ಹುಟ್ಟಿದವರಲ್ಲಿ ನಿಮ್ಮ ಅಸೂಯೆ ವರ್ತನೆ ನಿಮ್ಮನ್ನು ದುಃಖಿಗಳಾಗಿಯೂ ಮತ್ತು ಖಿನ್ನರಾಗಿಯೂ ಮಾಡಬಹುದು. ಆದರೆ ಇದು ಒಂದು ಸ್ವಯಂಕೃತ ಗಾಯವಾಗಿರುವುದರಿಂದ ಇದರ ಬಗ್ಗೆ ಪ್ರಲಾಪಿಸುವ ಅಗತ್ಯವಿಲ್ಲ. ಇತರರ ಸಂತೋಷ ಮತ್ತು ಅತೃಪ್ತಿಯನ್ನು ಹಂಚಿಕೊಳ್ಳುವ ಮೂಲಕ ಇದನ್ನು ತೊಡೆದುಹಾಕಲು ಪಣತೊಡಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ನೀವು ಕುಟುಂಬದ ಸದಸ್ಯರ ಜೊತೆ ಸ್ವಲ್ಪ ತೊಂದರೆ ಹೊಂದಿದ್ದರೂ ಇದು ನಿಮ್ಮ ಮನಶ್ಶಾಂತಿಯನ್ನು ಹಾಳು ಮಾಡಲು ಅವಕಾಶ ನೀಡಬೇಡಿ….

  • ಸುದ್ದಿ

    ಅಡುಗೆ ಮಾಡಲು ಹೊಲದಲ್ಲಿ ಕ್ಯಾರೆಟ್ ಕಿತ್ತಾಗ, ಅದರಲ್ಲಿ ಇದ್ದ ವಸ್ತುವನ್ನು ನೋಡಿ ಶಾಕ್ ಆದ ಮಹಿಳೆ.

    ಸ್ವೀಡನ್ ದೇಶಕ್ಕೆ ಸೇರಿದ ಲೀನಾ ಅನ್ನುವ ಮಹಿಳೆ 16 ವರ್ಷಗಳ ಹಿಂದೆ ತನ್ನ ಮನೆಯಲ್ಲಿ ಇದ್ದಾಗ ತನ್ನ ಮದುವೆಯ ದಿನ ಗಂಡ ಕೊಡಿಸಿದ್ದ ಅಮೂಲ್ಯವಾದ ವಸ್ತುವನ್ನ ಕಳೆದುಕೊಳ್ಳುತ್ತಾಳೆ. ಇನ್ನು ಅದೂ ವೆಡ್ಡಿಂಗ್ ರಿಂಗ್ ಮತ್ತು ದುಬಾರಿ ಬೆಲೆಯ ವಜ್ರದ ಉಂಗುರ ಆದ್ದರಿಂದ ತುಂಬಾ ಬೇಜಾರು ಮಾಡಿಕೊಂಡು ಕಣ್ಣೀರು ಹಾಕುತ್ತ ಮಕ್ಕಳ ಜೊತೆ ಮನೆಯ ತುಂಬಾ ಹುಡುಕಿದಳು ಲೀನಾ, ಆದರೆ ಎಷ್ಟೇ ಹುಡುಕಿದರೂ ಕೂಡ ಆ ಉಂಗುರ ಮಾತ್ರ ಸಿಗಲೇ ಇಲ್ಲ. ಹೀಗೆ 16 ವರ್ಷ ಕಳೆದ ನಂತರ…

  • govt, nation, ಉಪಯುಕ್ತ ಮಾಹಿತಿ, ಸರ್ಕಾರದ ಯೋಜನೆಗಳು, ಸರ್ಕಾರಿ ಯೋಜನೆಗಳು

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ ಎಂದರೇನು? ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 6,000 ರೂಪಾಯಿಗಳನ್ನು ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುತ್ತದೆ ನೋಂದಣಿಗೆ ಯಾವ ದಾಖಲೆ ಬೇಕು? ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಲಾಭ ಪಡೆಯುವ ರೈತನಿಗೆ ಆಧಾರ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ನೀವು ಆಧಾರ್ ಕಾರ್ಡ್ ನೀಡದಿದ್ದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಜೊತೆಗೆ ಕಂತು ಪಡೆಯಲು, ನೀವು ಬ್ಯಾಂಕ್ ಖಾತೆ…

  • ಕಾಯಿಲೆ

    19 ನೇ ಶತಮಾನದಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗವನ್ನು ಹೇಗೆ ಎದುರಿಸಿತು

    1800 ರ ಉತ್ತರಾರ್ಧದಲ್ಲಿ ಮತ್ತು 1900 ರ ದಶಕದ ಆರಂಭದಲ್ಲಿ ಜಗತ್ತನ್ನು ಧ್ವಂಸಗೊಳಿಸಿದ ಮೂರನೇ ಪ್ಲೇಗ್ ಸಾಂಕ್ರಾಮಿಕವು ಇಂದಿನ COVID-19 ಸಾಂಕ್ರಾಮಿಕ ರೋಗಕ್ಕೆ ಹೋಲುತ್ತದೆ. ಇದು 1860 ರ ದಶಕದಲ್ಲಿ ಚೀನಾದಲ್ಲಿ ತನ್ನ ಕೊಳಕು ತಲೆಯನ್ನು ಬೆಳೆಸಿತು, 1894 ರಲ್ಲಿ ಹಾಂಗ್ ಕಾಂಗ್, ಆಗಸ್ಟ್ 1896 ರಲ್ಲಿ ಮುಂಬೈ, ಡಿಸೆಂಬರ್ 1897 ರಲ್ಲಿ ಹುಬ್ಬಳ್ಳಿ ಮತ್ತು ಆಗಸ್ಟ್ 1898 ರಲ್ಲಿ ಬೆಂಗಳೂರು ತಲುಪಿತು.

  • ಸುದ್ದಿ

    ನಟ ಕಮಲ್ ಹಾಸನ್ ಅವರ ಮೇಲೆ ಚಪ್ಪಲಿ ತೂರಾಟ….ಧೂರು ದಾಕಲು….!

    ಮಕ್ಕಳ ನೀಧಿ ಮಯ್ಯಂ ಪಕ್ಷದ ನಾಯಕ ಕಮಲ್ ಹಾಸನ್ ಅವರ ಮೇಲೆ ಅಪರಿಚಿತರು ಚಪ್ಪಲಿ ಎಸೆದ ಘಟನೆ ಬುಧವಾರ ನಡೆದಿದೆ. ಬುಧವಾರ ಸಂಜೆ ತಮಿಳುನಾಡಿನ ತಿರುಪ್ಪರನಕುಂಡ್ರಂ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ಕಮಲ್ ಹಾಸನ್ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದ ಸಮಯದಲ್ಲ ಚಪ್ಪಲಿ ಎಸೆಯಲಾಗಿದ್ದು, ಅದು ಅವರಿಗೆ ತಾಕದೆ, ಜನರ ಗುಂಪಿನ ನಡುವೆ ಬಂದು ಬಿದ್ದಿದೆ.ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಹನುಮಾನ್ ಸೇನೆಯ ಒಟ್ಟು ಹನ್ನೊಂದು ಜನರ ಮೇಲೆ ಪೊಲೀಸರಿಗೆ ದೂರು ನೀಡಲಾಗಿದೆ. ತಮಿಳುನಾಡಿನ ಅರವಕುರಿಚಿಯಲ್ಲಿ ಮೇ 19…

  • ಸುದ್ದಿ

    ಇಲಿಗಳನ್ನು ತಿಂದು ಜೀವನವನ್ನು ನಡೆಸುತ್ತಿದ್ದರೆ ಇಲ್ಲಿನ ಜನರು …ಕಾರಣ..?

    ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ! ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು…