ಉದ್ಯೋಗ

ಶ್ರೀಮಂತರಾಗಲು ಭಾರತದಲ್ಲಿವೆ ಅತೀ ಹೆಚ್ಚು ಹಣ ಪಡೆಯುವ ಕೆಲಸಗಳು..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

767

ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿ ಯಾಗ ಬಹುದು. ಅಮೂಲ್ಯವೆನಿಸುವ ಯಾವುದೇ ವಸ್ತು ಸುಲಭವಾಗಿ ದಕ್ಕುವುದಿಲ್ಲ. ಹಣವೂ ಅಷ್ಟೇ ! ಯಾರೇ ಆಗಲಿ, ಎಷ್ಟೇ ಹಣವಂತರಿರಲಿ, ಬಾಯಲ್ಲಿ ಬೆಳ್ಳಿ ಚಮಚವನ್ನಿರಿಸಿಕೊಂಡು ಹುಟ್ಟಿರುವುದಿಲ್ಲ. ಆದರೆ ಈ ಭೂಮಿಯಲ್ಲಿ ಹುಟ್ಟಿರುವ ಯಾವುದೇ ವ್ಯಕ್ತಿಗೆ ಹಣವಂತನಾಗುವ ಸಮಾನ ಅವಕಾಶವಿದೆ. ಇದಕ್ಕೆ ಸತತ ಪರಿಶ್ರಮ ಹಾಗೂ ಹಣಗಳಿಕೆಯ ಹಂತವನ್ನು ಮೆಟ್ಟಿಲು ಮೆಟ್ಟಿ ಲಾಗಿ ಏರಲು ಉತ್ತಮ ಉದ್ಯೋಗದ ನೆರವು ಬೇಕು. ಇದು ಸ್ವ ಉದ್ಯೊಗವೂ ಆಗಬಹುದು ಅಥವಾ ಅತಿಹೆಚ್ಚು ಗಳಿಕೆ ನೀಡುವ ಇತರ ಉದ್ಯೋಗವೂ ಆಗಬಹುದು.

ಅಂದ ಮಾತ್ರಕ್ಕೆ ಉದ್ಯೋಗ ಮಾಡುವ ಎಲ್ಲರೂ ಭಾರೀ ಹಣ ಮಾಡುತ್ತಾರೆ ಎಂದು ಹೇಳುವಂತಿಲ್ಲ. ಈ ಉದ್ಯೋಗವನ್ನು ಮಾಡುವವರಿಗೆ ಅತಿಹೆಚ್ಚು ವೇತನ ನೀಡಬೇಕಾದರೆ ಬೇರಯವ ರಲ್ಲಿ ಇರದ ಬಹಳಷ್ಟು ಗುಣಗಳು, ಕೌಶಲ್ಯ ಹಾಗೂ ಅಪಾರವಾದ ಮಾಹಿತಿ ಇವರಲ್ಲಿರಬೇಕಾಗುತ್ತದೆ. ಅಷ್ಟೇ ಅಲ್ಲ, ಇದನ್ನು ಪಡೆದಿರುವುದು ಉತ್ತಮ ವಿಶ್ವವಿದ್ಯಾಲಯದಲ್ಲಿ ಎಂದು ಪ್ರಮಾಣಿ ಸಲೂಬೇಕಾಗುತ್ತದೆ. ಬೆಂಗಳೂರಿನಲ್ಲಿ ಅತಿಹೆಚ್ಚು ಸಂಬಳ ಪಾವತಿಸುವ ಕಂಪನಿಗಳು ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿಯಾಗ ಬಹುದು. (ವೇತನವನ್ನು ವಾರ್ಷಿಕ ರೂ. ಗಳಲ್ಲಿ ನೀಡಲಾಗಿದೆ

ವೃತ್ತಿಪರ ಕಾರ್ಯನಿರ್ವಾಹಕರು  :-                                                                                                                                                   ವೃತ್ತಿಪರ ಕಾರ್ಯನಿರ್ವಾಹಕರನ್ನು ಸಂಸ್ಥೆ/ ಕಂಪನಿಗಳ ಆತ್ಮ ಎಂದು ಕರೆಯಬಹುದು. ಸಂಸ್ಥೆ ನಿರ್ವಹಿಸಬೇಕಾದ ಕಾರ್ಯಗಳನ್ನು ಸರಿಯಾಗಿ ನಿರ್ವಹಿಸುವಂತೆ ನೋಡಿಕೊಳ್ಳುವುದು ಇವರ ಕಾಯಕ. ಇದಕ್ಕೆ ಪ್ರಾರಂಭಿಕ ಹಂತದಿಂದಲೇ ಕಠಿಣ ಪರಿಶ್ರಮ ಅಗತ್ಯ. ಒಂದು ಬಾರಿ ಪ್ರಾರಂಭಿಕ ಹಂತ ದಾಟಿದ ಬಳಿಕ ಮತ್ತೆ ಹಿಂದಿರುಗಿ ನೋಡುವ ಅವಶ್ಯಕತೆಯೇ ಇಲ್ಲ. ಈ ವೃತ್ತಿಯಲ್ಲಿ ಹೆಚ್ಚು ಹೆಚ್ಚು ಪರಿಣಿತಿ ಪಡೆದಂತೆ ಹೆಚ್ಚು ಹೆಚ್ಚು ವೇತನವನ್ನು ನಿರೀಕ್ಷಿಸಬಹುದು. ಪ್ರಾರಂಭಿಕ ಹಂತ – ರೂ. 3,೦೦,೦೦೦, ಮಧ್ಯಮ ಹಂತ – ರೂ. 25,೦೦,೦೦೦, ಅನುಭವಿ ಹಂತ- ರೂ. 8೦,೦೦,೦೦೦

ಬ್ಯಾಂಕ್ ಹೂಡಿಕೆದಾರ:

ಈ ವೃತ್ತಿಯಲ್ಲಿರುವವರು ಬ್ಯಾಂಕ್ ಹಾಗೂ ಇತರ ಹಣಕಾಸು ಸಂಸ್ಥೆಗಳಿಗೆ ಹಣ ಪಡೆಯುವಿಕೆ ಹಾಗೂ ಹೂಡಿಕೆಯ ಬಗ್ಗೆ ಸಲಹೆ ನೀಡುತ್ತಾರೆ. ಇವರು ಸತತವಾಗಿ ಮಾರುಕಟ್ಟೆಯ ಏರಿಳಿತ ಗಳನ್ನು ಅಭ್ಯಸಿಸುತ್ತಾ ಗ್ರಾಹಕರ ಮನೋಭಾವವನ್ನೂ ಪರಿಗಣಿಸಿ ಸಂಸ್ಥೆಗೆ ಲಾಭ ತರುವಂತಹ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಇದೇ ಕಾರಣಕ್ಕೆ ಇವರಿಗೆ “Money Man” ಎಂಬ ಅನ್ವರ್ಥ ನಾಮವನ್ನೂ ನೀಡಲಾಗಿದೆ. ಪ್ರಾರಂಭಿಕ ಹಂತ- ರೂ. 12,೦೦,೦೦೦, ಮಧ್ಯಮ ಹಂತ – ರೂ. 3೦,೦೦,೦೦೦, ಅನುಭವಿ ಹಂತ- ರೂ.5೦,೦೦,೦೦೦+

ಚಾರ್ಟರ್ಡ್ ಅಕೌಂಟೆಂಟ್:

ಇವರು ಒಂದುಸಂಸ್ಥೆಯ ಲೆಕ್ಕಪತ್ರ ಹಾಗೂ ವ್ಯಾಪಾರದ ಮೇಲೆ ಹಿಡಿತವನ್ನಿರಿಸಿ ಕೊಂಡಿರುತ್ತಾರೆ. ಇವರು ತಮ್ಮ ಕೆಲಸದ ಬಗ್ಗೆ ಜಾಗರೂಕರಾಗಿದ್ದು, ಸಂಸ್ಥೆಯ ಹಣದ ವಿಲೇವಾರಿ ಹಾಗೂ ಆದಾಯದ ಬಗ್ಗೆ ವಿವರಗಳನ್ನು ನೀಡುವಂತಿರಬೇಕು ಹಾಗೂ ಸದಾ ಉತ್ತಮವಾಗಿ ಕಾಣಿಸಿಕೊಳ್ಳುವಂತಿರಬೇಕು. ಈ ವೃತ್ತಿ ಭಾರತದಲ್ಲಿ ಅತಿ ಗೌರವಾತ ಹಾಗೂ ಹೆಚ್ಚಿನ ಆದಾಯ ತರುವಂತದ್ದಾಗಿದೆ. ಪ್ರಾರಂಭಿಕ ಹಂತ – ರೂ. 5,5೦,೦೦೦, ಮಧ್ಯಮ ಹಂತ – ರೂ. 12,8೦,೦೦೦, ಅನುಭವಿ ಹಂತ – ರೂ. 25,7೦,೦೦೦

ತೈಲ ಮತ್ತು ನೈಸರ್ಗಿಕ ಅನಿಲ ವಿಭಾಗದ ವೃತ್ತಿಪರರು:

ಈ ವಿಭಾಗ ಇದುವರೆಗೆ ಎಂದೂ ಬತ್ತದ ಲಾಭದ ವೃತ್ತಿ ಎಂದು ಪರಿಗಣಿಸಲ್ಪಟ್ಟಿದೆ. ಈ ವಿಭಾಗದಲ್ಲಿರುವ ಕೆಲವು ವೃತ್ತಿಗಳು ಹೆಚ್ಚಿನ ವೇತನ ನೀಡುತ್ತವೆ. ಉದಾಹರಣೆಗೆ ಭೂ ಗರ್ಭ ಶಾಸ್ತ್ರಜ್ಞ, ಸಾಗರ ಅಭಿಯಂತರ ಇತ್ಯಾದಿ. ಅನುಭವಿ ಹಂತ – ರೂ. 15-2೦ ಲಕ್ಷ ನಿವ್ವಳ ಹಾಗೂ ಸಂಸ್ಥೆಯಿಂದ ಸಿಗುವ ಎಲ್ಲಾ ಸವಲತ್ತುಗಳು

ವಾಣಿಜ್ಯ ವಿಶ್ಲೇಷಕರು (ಬಿಸಿನೆಸ್ ಅನಾಲಿಸ್ಟ್):

ಇಂದು ಭಾರತದಲ್ಲಿಯೂ ವಾಣಿಜ್ಯ ವಹಿವಾಟು ಅತ್ಯಂತ ಪೈಪೋಟಿ ಹೊಂದಿದ್ದು, ಈ ವೃತ್ತಿಯಲ್ಲಿರು ವವರಿಗೆ ಪೈಪೋಟಿಯನ್ನು ಎದುರಿಸುವುದು ಹೇಗೆ ಎಂಬ ಸವಾಲನ್ನು ಎದುರಿಸಬೇಕಾಗುತ್ತದೆ. ಈ ವೃತ್ತಿಗೆಅತಿ ಹೆಚ್ಚು ಬುದ್ದಿ ಚಾಣಾಕ್ಷರು ಹಾಗೂ ತಾರ್ಕಿಕವಾಗಿ ಯೋಚಿಸುವ ವ್ಯಕ್ತಿಗಳ ಅಗತ್ಯವಿದೆ. ಈ ವೃತ್ತಿಯಲ್ಲಿರುವವರು ವಾಣಿಜ್ಯದ ಅಂಕಿ ಅಂಶಗಳನ್ನು ಗಣಿತದ ಸೂತ್ರಗಳ ಮೂಲಕ ವಿವರಿಸಬಲ್ಲವರಾಗಿರಬೇಕು ಹಾಗೂ ನಿತ್ಯವೂ ಬದಲಾಗುವ ತಂತ್ರಜ್ಞಾನವನ್ನು ತಮ್ಮ ವಾಣಿಜ್ಯ ವಹಿವಾಟಿನ ಏಳಿಗೆಗೆ ಹೇಗೆ ಬಳಸಿಕೊಳ್ಳ ಬಹುದು ಎಂಬುದನ್ನು ಎಲ್ಲರಿ ಗಿಂತ ಮೊದಲು ಅರಿತು ಅಳವಡಿಸಿ ಕೊಳ್ಳುವುದು ಇವರ ವೃತ್ತಿಯ ಪ್ರಮುಖಸವಾಲಾಗಿದೆ. ಅಂದಾಜು ವೇತನ: ಪ್ರಾರಂಭಿಕ ಹಂತ: ರೂ. 6,೦೦,೦೦೦

ವೈದ್ಯಕೀಯ ವೃತ್ತಿಪರರು:

ಈ ವೃತ್ತಿಯಲ್ಲಿ ಹಿಂಜರಿತ ಎಂಬುದೇ ಎಲ್ಲ. ಎಲ್ಲಿಯವರೆಗೆ ಮನುಷ್ಯರು ಇರುತ್ತಾರೋ ಅಲ್ಲಿಯವರೆಗೆ ಈ ವೃತ್ತಿಯಲ್ಲಿ ಗಳಿಕೆ ಇದ್ದೇ ಇರುತ್ತದೆ. ವಿಶ್ವದ ಅತ್ಯಂತ ಗೌರವಾನ್ವಿತ ಹಾಗೂ ಆದ್ಯತೆಯ ವೃತ್ತಿಯಾದ ವೈದ್ಯ ವೃತ್ತಿಯಲ್ಲಿ ಜನರು ವೈದ್ಯೋ ನಾರಾಯಣಃ ಹರಿ ಎಂದೇ ಪರಿಗಣಿಸುತ್ತಾರೆ. ಈ ವೃತ್ತಿಯಲ್ಲಿ ಪ್ರಾರಂಭಿಕ ಹಂತದಲ್ಲಿ ವೇತನ ಕಡಿಮೆ ಇದ್ದರೂ ದಿನಗಳೆದಂತೆ ವೇತನವೂ ಏರುತ್ತಾ ಹೋಗುತ್ತದೆ. ಸಾಮಾನ್ಯ ನೈಪುಣ್ಯತೆ – ರೂ. 4,8೦,೦೦೦, ಸಾಮಾನ್ಯ ಶಸ್ತ್ರ ಚಿಕಿತ್ಸಕ- ರೂ. 8,1೦,೦೦೦, ವೃತ್ತಿಪರ ವೈದ್ಯ- ರೂ.17,೦೦,೦೦೦

ವೈಮಾನಿಕ ವೃತ್ತಿ :

ಈ ವೃತ್ತಿಯಲ್ಲಿರುವವರಿಗೆ ಆದಾಯದ ಮಿತಿ ಆಗಸವೇ ಸರಿ. ಈ ವೃತ್ತಿಯಲ್ಲಿ ನೈಪುಣ್ಯತೆ ಪಡೆದವರು ವಾರ್ಷಿಕ ಇಪ್ಪತ್ತು ಲಕ್ಷದಷ್ಟು ವೇತನ ಪಡೆಯುತ್ತಾರೆ. ಸರಾಸರಿ ವೇತನ: ಕಮರ್ಷಿಯಲ್ ಪೈಲಟ್: ರೂ. 2೦,೦೦,೦೦೦, ಹೆಲಿಕಾಪ್ಟರ್ ಪೈಲಟ್- ರೂ. 18,೦೦,೦೦೦, ವಿಮಾನ ದುರಸ್ತಿ ಸಿಬ್ಬಂದಿ- ರೂ. 9,8೦,೦೦೦

ಕಾನೂನು ವೃತ್ತಿಪರರು :

ಖ್ಯಾತ ವಕೀಲರಿಗೆ ಉಚ್ಛಮಟ್ಟದ ನ್ಯಾಯಾಧೀಶರಾಗುವ ಅವಕಾಶ ತಾನೇ ತಾನಾಗಿ ಒದಗಿ ಬಂದಾಗ ಇದನ್ನು ಹಲವರು ನಿರಾಕರಿಸಿದ್ದಾರೆ. ಏಕೆಂದರೆ ವೃತ್ತಿಪರ ವಕೀಲರಾಗಿ ಗಳಿಸುದಷ್ಟು ವೇತನ ಉಚ್ಛನ್ಯಾಯಾಧೀಶರಿಗೆ ದೊರಕುವುದಿಲ್ಲ. ಇದು ವಾಸ್ತವ. ವೃತ್ತಿಪರ ವಕೀಲರಾಗಬೇಕಾದರೆ ಉನ್ನತ ಶಿಕ್ಷಣ, ಅಪಾರ ತಾಳ್ಮೆ, ಹಾಗೂ ಅದ್ಭುತ ವಾಕ್ಚತುರತೆಯ ಅಗತ್ಯವಿದೆ. ಈ ವೃತ್ತಿಯಲ್ಲಿ ಪಳಗುತ್ತಾ ಹೋದಂತೆ ಪ್ರತಿವಾದಕ್ಕೂ ಹೆಚ್ಚು ಹೆಚ್ಚಿನ ವೇತನವನ್ನು ನಿರೀಕ್ಷಿಸಬಹುದು. ಸರಾಸರಿ ವೇತನ: ಕಾರ್ಪೋರೇಟ್ (ಸಂಸ್ಥೆಗೆ ಮೀಸಲಾದ) ವಕೀಲರು- 6,1೦,೦೦೦, ಹಿರಿಯ ಅಟಾರ್ನಿ – 9,5೦,೦೦೦,

ಮಾರ್ಕೆಟಿಂಗ್ (ಮಾರುಕಟ್ಟೆ ಪ್ರವೀಣ):

ಯಾವುದೇ ವಹಿವಾಟಿನಲ್ಲಿ ಉತ್ಪನ್ನ ಅಥವಾ ಸೇವೆ ಮಾರಾಟ ವಾಗಿ ಹೋದಾಗ ಮಾತ್ರವೇ ಲಾಭ ಪಡೆಯಲು ಸಾಧ್ಯ. ಈ ವೃತ್ತಿಯಲ್ಲಿರುವವರು ಗ್ರಾಹಕರ ಅಂತಃಕರಣವನ್ನು ಅರಿತು ಪ್ರಲೋಭನೆಗಳನ್ನು ಒಡ್ಡಿ ಮಾರಾಟವನ್ನು ಹೆಚ್ಚಿಸಬೇಕಾಗುತ್ತದೆ. ಈ ತಂತ್ರಗಳು ಫಲ ಡಿದರೆ ಹೆಚ್ಚಿನ ವೇತನ ಮಾತ್ರವಲ್ಲ, ಸಂಸ್ಥೆಯ ಉನ್ನತ ಹುದ್ದೆಗಳನ್ನೂ ಪಡೆಯಲು ಸಾಧ್ಯ. ಇದಕ್ಕಾಗಿ ಮಾರುಕಟ್ಟೆಯ ಅಂತರಾಳವನ್ನು ಅರಿತು ಗ್ರಾಹಕರು ಈ ಉತ್ಪನ್ನಗಳಿಗೆ ಒಲವು ನೀಡುವಂತೆ ಉತ್ಪನ್ನ ಅಥವಾ ಸೇವೆಗಳನ್ನು ಬದಲಾವಣೆಗೊಳಪಡಿಸುವುದು ಸಹಾ ಇವರಿಗೆ ಕಾರ್ಯಗತ ವಾಗಿರಬೇಕಾಗುತ್ತದೆ. ಸರಾಸರಿ ವೇತನ: ಪ್ರಾರಂಭಿಕ ಹಂತ- ರೂ. 1,5೦,೦೦೦, ಮಧ್ಯಮ ಹಂತ- ರೂ. 5,೦೦,೦೦೦, ಅನುಭವಿ ಹಂತರೂ. 1೦,೦೦,೦೦೦+

 ಮಾಹಿತಿ ತಂತ್ರಜ್ಞಾನ ಹಾಗೂ ಸಾಫ್ಟ್ವೇರ್ ಅಭಿಯಂತರರು:

ಇದೊಂದು ನಿತ್ಯಹರಿದ್ವರ್ಣದ ಉದ್ಯೋಗವಾಗಿದ್ದು ಹೆಚ್ಚಿನ ಆದಾಯವನ್ನು ಗಳಿಸಬಹುದು. ಇದಕ್ಕಾಗಿ ಕಂಪ್ಯೂಟರುಗಳ ಬಗ್ಗೆ ಆಳವಾದ ಅಧ್ಯಯನ ಹಾಗೂ ಕಂಪ್ಯೂಟರ್ ಭಾಷೇ ಅರ್ಥಮಾಡಿಕೊಳ್ಳುವ ಹಾಗೂ ಅಗತ್ಯಕ್ಕೆ ತಕ್ಕಂತೆ ಬರೆಯುವ ನೈಪುಣ್ಯತೆಯನ್ನು ಪಡೆಯಬೇಕಾಗುತ್ತದೆ. ಈ ವೃತ್ತಿಯಲ್ಲಿರುವವರು ಹೊಸ ಪ್ರೋಗ್ರಾಂಗಳನ್ನು ವಿನ್ಯಾಸಗೊಳಿಸುವ, ಹೊಸ ವ್ಯವಸ್ಥೆಯನ್ನು ಪ್ರತಿಷ್ಠಾಪಿಸುವ ಹಾಗೂ ನಿರ್ವಹಿಸುವ ಕಾರ್ಯಗಳನ್ನು ಕೈಗೆತ್ತಿಕೊಳ್ಳಬೇಕಾಗುತ್ತದೆ. ಸರಾಸರಿ ವೇತನ: ಪ್ರಾರಂಭಿಕ ಹಂತ- ರೂ. 3,5೦,೦೦೦, ಮಧ್ಯಮ ಹಂತ- ರೂ. 8,3೦,೦೦೦, ಅನುಭವಿ ಹಂತ ರೂ. 15,5೦,೦೦೦

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಡಲೆ ತಿನ್ನುವುದರಿಂದ ಗರ್ಭಿಣಿಯರಿಗಿರುವ ಪ್ರಯೋಜನಗಳೇನು ಗೊತ್ತಾ?ತಿಳಿಯಲು ಇದನ್ನೊಮ್ಮೆ ಓದಿ..!

    ಗರ್ಭಿಣಿ ಮಹಿಳೆಯರಿಗೆ ಈ ಆಹಾರ ತಿನ್ನು, ಇದನ್ನು ತಿನ್ನಬೇಡ ಎಂದು ಮನೆಯವರು, ಸ್ನೇಹಿತರು ಸಲಹೆ ನೀಡುತ್ತಾರೆ. ವೈದ್ಯರು ಕೂಡ ಯಾವ ಆಹಾರಗಳನ್ನು ತೆಗೆದುಕೊಳ್ಳಬೇಕು, ಯಾವುದನ್ನು ತಿನ್ನದಿರುವುದು ಸೂಕ್ತ ಎಂಬ ಮಾಹಿತಿ ನೀಡುತ್ತಾರೆ. ಏಕೆಂದರೆ ಗರ್ಭಿಣಿ ಮಹಿಳೆಯರ ಆಹಾರಕ್ರಮ ಗರ್ಭದಲ್ಲಿ ಬೆಳೆಯುತ್ತಿರುವ ಮಕ್ಕಳ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಗರ್ಭಿಣಿಯರು ಪೌಷ್ಟಿಕಾಂಶಗಳಿರುವ ಆಹಾರವನ್ನು ತೆಗೆದುಕೊಳ್ಳುವುದರಿಂದ ಮಗು ಆರೋಗ್ಯಕರವಾಗಿ ಬೆಳೆಯುತ್ತದೆ. ಆದ್ದರಿಂದ ಕಾಳುಗಳನ್ನು ತಿನ್ನುವಂತೆ ಹೇಳುತ್ತಾರೆ. ಕಾಳುಗಳಲ್ಲಿ ಒಂದು ಬಗೆಯಾದ ಚೆನ್ನಾ ಕೂಡ ಗರ್ಭಿಣಿಯರಿಗೆ ಸೇವಿಸಲು ಸೂಕ್ತವಾದ ಆಹಾರವಾಗಿದ್ದು…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ರಾಶಿ ಭವಿಷ್ಯದ ಜೊತೆಗೆ ನಿಮ್ಮ ಇಂದಿನ ಅದೃಷ್ಟದ ಸಂಖ್ಯೆ ಯಾವುದು ನೋಡಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಏಪ್ರಿಲ್, 2019) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ…

  • ಶ್ರದ್ಧಾಂಜಲಿ

    ಖ್ಯಾತ ನಟ ನಂದಮೂರಿ ತಾರಕರತ್ನ ನಿಧನ

    ಬೆಂಗಳೂರು: ಟಾಲಿವುಡ್​ ಖ್ಯಾತ ನಟ ನಂದಮೂರಿ ತಾರಕರತ್ನ (Nandamuri Taraka Ratna) ನಿಧನರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಇಂದು(ಫೆ.18) ಬೆಂಗಳೂರಿನ ನಾರಾಯಣ ಹೃದಯಾಲದಲ್ಲಿ ತಾರಕರತ್ನ(39) ಕೊನೆಯುಸಿರೆಳೆದಿದ್ದಾರೆ.  ಜನವರಿ 27ರಂದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಕುಪ್ಪಂ ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದುಬಿದ್ದಿದ್ದರು. ಆ ವೇಳೆ ತಾರಕರತ್ನಗೆ ಹೃದಯಸ್ತಂಭನವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬೆಂಗಳೂರಿನ ನಾರಾಯಣ ಹೃದಯಾಲಕ್ಕೆ ಶಿಫ್ಟ್​ ಮಾಡಲಾಗಿತ್ತು.  23 ದಿನಗಳಿಂದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಾರಕರತ್ನ ಅವರಿಗೆ, ಬೆಂಗಳೂರಿನ ನಾರಾಯಣ ಆಸ್ಪತ್ರೆಯಲ್ಲಿ ನುರಿತ…

  • ಜ್ಯೋತಿಷ್ಯ

    ಚಾಮುಂಡೇಶ್ವರಿ ದೇವಿಯನ್ನು ಸ್ಮರಿಸುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯ ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಆಸಕ್ತಿಗಳನ್ನು…

  • ಸುದ್ದಿ

    ರಾಜಸ್ಥಾನದ ಈ ಗ್ರಾಮದಲ್ಲಿ ಹೆಣ್ಣು ಮಗು ಜನಿಸಿದರೆ 111 ಗಿಡ ನೆಡುವ ಪದ್ದತಿ…ಯಾಕೆ ಗೊತ್ತ?

    ರಾಜಸ್ಥಾನದ ರಾಜ್‍ಸಮಂಡ್ ಜಿಲ್ಲಾ ಕೇಂದ್ರದಿಂದ 12 ಕಿ.ಮೀ. ದೂರದಲ್ಲಿರುವ ಪಿಪ್ಲಾಂತ್ರಿ ಗ್ರಾಮದಲ್ಲಿ ಪ್ರತಿ ದಿನವೂ ಮಹಿಳಾ ದಿನ; ಪ್ರತಿ ದಿನವೂ ಪರಿಸರ ದಿನ. ಹೆಣ್ಣು ಮಗು ಜನಿಸಿದರೆ ಹಬ್ಬದ ವಾತಾವರಣ. 111 ಗಿಡ ನೆಡುವ ಮೂಲಕ ಸಂಭ್ರಮಾಚರಣೆ. ವ್ಯಕ್ತಿಯೊಬ್ಬರು ನಿಧನರಾದಾಗ 11 ಮರ ಬೆಳೆಸುವುದರೊಂದಿಗೆ ಗೌರವ ನಮನ. ದಶಕದಿಂದಲೂ ಈ ಪರಿಪಾಠ ಹೀಗಾಗಿ ಅಲ್ಲಿನ ಬೋಳು ಗುಡ್ಡಬೆಟ್ಟಗಳಲ್ಲಿ ಹಸಿರು ಹಬ್ಬಿ ಅದೀಗ ಆ ರಾಜ್ಯದ ಓಯಸಿಸ್. ಪಿಪ್ಲಾಂತ್ರಿಯ ಸ್ವರಾಜ್ಯ-ಸುಸ್ಥಿರ ಅಭಿವೃದ್ಧಿ ಮಾದರಿ ಇತರೆಡೆಗಳಿಗೂ ಸ್ಫೂರ್ತಿ. ಈ ಯಶೋಗಾಥೆಯ…

  • ಸುದ್ದಿ

    ಬಿಗಿದಪ್ಪಿದ ಸ್ಥಿತಿಯಲ್ಲಿ ತಾಯಿ-ಮಗು ಶವ ಪತ್ತೆ..! ಕರುಳು ಹಿಂಡಿದ ದೃಶ್ಯ..!

    ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…