ಸಿನಿಮಾ

ಶ್ರೀಮಂತ ಕುಟುಂಬದಲ್ಲಿ ಬೆಳೆದಿದ್ರೂ,ಈ ನಟನ ಜನಪರ ಕಾಳಜಿ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..!ತಿಳಿಯಲು ಈ ಲೇಖನಿ ಓದಿ…

1421

ಇವರನ್ನು ಬಿಟ್ಟರೆ ಬೇರೆ ಯಾರಾದರೂ, ಸಿನಿಮಾ ನಟ ಸಮಾಜ ಸುಧಾರಣೆಯ ಕೆಲಸಕ್ಕೆ ಕೈ ಹಾಕಿದ್ರೆ  ತೋರಿಸಿ. ಮತ್ತೊಂದು ವಿಚಾರ ಇವರ ಬಗ್ಗೆ ನಾವು ಹೆಮ್ಮೆ ಪಡಬೇಕು ಇದುವರೆಗೆ ಯಾವ ಸಿನಿಮಾ ನಟನ ಬಾಯಿಂದ ಅಂಬೇಡ್ಕರ್,ಬುದ್ದರ ,ಬಸವಣ್ಣ ಟಿಪ್ಪು, ರವರ ಹೆಸರನ್ನು ವೇದಿಕೆ ಮೇಲೆ ಅಲ್ಲ ಸಿನಿಮಾದಲ್ಲು ಕೂಡ, ಹೇಳಿರುವ ಯಾವ ನಟರನ್ನು ನಾನು ನೋಡಿಲ್ಲ ಇಂಥಹ ನಾಯಕನನ್ನು ಪಡೆದ ನಾವೇ ಪುಣ್ಯ ವಂತರು. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲೋಣ…

ಇಷ್ಟೆಲ್ಲಾ ಪೀಠಿಕೆ ಕೊಟ್ಟಿದ್ದು, ಯಾರೂ ಎನ್ನುವ ಯೋಚನೆಯಲ್ಲಿದ್ದೀರಾ! ಅವರೇ “ಆ ದಿನಗಳು” ಚಿತ್ರದ ನಟ ಚೇತನ್. ಅವರ ಬಗ್ಗೆ ನಿಮಗೆ ಗೊತ್ತಿಲ್ಲದ ಕೆಲವು ವಿಷಯಗಳ ಬಗ್ಗೆ ತಿಳಿಯೋಣ…

ಚೇತನ್’ರವರ ಬಾಲ್ಯ ಜೀವನ ಮತ್ತು ವಿಧ್ಯಾಭ್ಯಾಸ:-

ಚೇತನ್ ಹುಟ್ಟಿದ್ದು ಅಮೆರಿಕಾದ ಚಿಕಾಗೋನಗರದಲ್ಲಿ 24 ಫೆಬ್ರವರಿ 1983ರಂದು ಜನಿಸಿದರು.  ಚಿತ್ರದುರ್ಗ  ಮೂಲದ  ವೀರಶೈವ  ಸಮಾಜದ ಈ ಕುಟುಂಬ ಸಾಕಷ್ಟು ವರ್ಷಗಳ ಹಿಂದೆ ಅಮೆರಿಕೆಗೆ ಬಂದು ನೆಲೆಸಿದೆ. ಚೇತನ್ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಣ ಪಡೆದದ್ದು ಅಮೇರಿಕೆಯ ಪ್ರತಿಷ್ಠಿತ ಶಾಲೆಗಳಲ್ಲಿ.

ಪದವಿ ಮತ್ತು ಸ್ನಾತಕೋತ್ತರ ವ್ಯಾಸಂಗ ಮಾಡಿದ್ದು ಅಮೆರಿಕಾದ ವಿಶ್ವ ಪ್ರಸಿದ್ಧ ಯೇಲ್ ವಿಶ್ವವಿದ್ಯಾಲಯದಲ್ಲಿ. ಈ ಯೇಲ್ ವಿಶ್ವವಿದ್ಯಾಲಯ ಅನೇಕ ಕ್ಷೇತ್ರಗಳಲ್ಲಿ ಹಾರ್ವರ್ಡನ್ನೂ ಮೀರಿಸುವಂಥದ್ದು. ಜೀವನದ ಬಹುತೇಕ ವರ್ಷಗಳನ್ನು ಅಮೆರಿಕಾದ ಕಳೆದಿದ್ದರೂ ಸಾಹಿತಿಗಳನ್ನೂ ನಾಚಿಸುವವಷ್ಟು ಪರಿಶುದ್ಧವಾಗಿ ಕನ್ನಡದಲ್ಲಿ ಸಂವಾದ ನಡೆಸುತ್ತಾರೆ.

ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದು ಹೇಗೆ?

ಚೇತನ್ ಸಂಪೂರ್ಣ ಅಪ್ಪಟ  ಕಲಾವಿದ. ಆಧುನಿಕನೃತ್ಯ ಪರಿಣಿತಿಯ ಜೊತೆಗೆ ನೃತ್ಯ ತರಬೇತಿ ಮತ್ತು ನೃತ್ಯ ನಿರ್ದೇಶನದಲ್ಲೂ ಪಳಗಿದ್ದಾರೆ. ಪಾಶ್ಚಾತ್ಯ ಜಾಜ್ ಸಂಗೀತ, ಭಾರತೀಯ ಶಾಸ್ತ್ರೀಯ ಸಂಗೀತ, ಅದರಲ್ಲೂ ಕರ್ನಾಟಕ ಸಂಗೀತವನ್ನು ಅದ್ಭುತವಾಗಿ ಸ್ಯಾಕ್ಸೋಫೋನ್ ವಾದ್ಯದಲ್ಲಿ ನುಡಿಸಬಲ್ಲರು ಚೇತನ್.

2007ರಲ್ಲಿ ‘ಆ ದಿನಗಳು’ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಅಪಾರ ಬೇಡಿಕೆಯಿದ್ದರೂ ಇಲ್ಲಿಯವರೆಗೆ ಕೇವಲ 6 ಸಿನೆಮಾಗಳಲ್ಲಿ ನಟಿಸಿ ಸಿನೆಮಾರಂಗದಿಂದ ದೂರವುಳಿದಿದ್ದ ನಟ ಚೇತನ್ ಕುಮಾರ್ ಮತ್ತೆ ಚಿತ್ರರಂಗಕ್ಕೆ ಹಿಂದಿರುಗುವ ತಯಾರಿಯಲ್ಲಿದ್ದಾರೆ.

ನಟನೆಗೆ ತಮ್ಮ ಆದ್ಯತೆಯಾಗಿದ್ದರು ತೆಗೆದುಕೊಂಡಿರುವ ಈ ವಿರಾಮದಲ್ಲಿ ಸಮಾಜಮುಖಿ ಕಾರ್ಯಗಳತ್ತ ತಮ್ಮನ್ನು ತೊಡಗಿಸಿಕೊಂಡಿದ್ದನ್ನು ತಿಳಿಸುತ್ತಾರೆ.

ಎಲ್ಲರೂ ಮೆಚ್ಚುವಂತಾದ್ದು ಚೇತನ್’ರವರ ಸಮಾಜ ಮುಖಿ ಕಾರ್ಯಗಳು…

ಜನಪರ ಕಾಳಜಿಎಲ್ಲಕ್ಕಿಂತ ಚೇತನ್ ಹೆಚ್ಚು ಆಪ್ತರಾಗಲು ಕಾರಣವಾಗುವುದು ಚೇತನರ ಅವಿರತ ಜನಪರ ಕಾಳಜಿ.ಒಂದೇ ಒಂದು ದಿನ ತಲೆಯ ಬುಡಕ್ಕಿಟ್ಟುಕೊಳ್ಳುವ ದಿಂಬು ಒಂಚೂರು ಏರುಪೇರಾದರೂ ಸಹಿಸದ ನಮ್ಮಂಥವರಿಗೆ ಧೊಪ್ಪನೆ ಸುರಿಯುವ ಕೊಡಗಿನ ಮಳೆಯಲ್ಲಿ ಬಯಲನ್ನೇ ಹಾಸಿಕೊಂಡು ಮಲಗುವ ಕಲ್ಪನೆಯೇ ಅಸಾಧ್ಯವಾಗದದ್ದು.

ತಲೆಯ ಮೇಲಿನ ಸೂರು ಕಳೆದುಕೊಂಡ ಸುಮಾರು 3000 ಜನ ಸುಮಾರು 578 ಕುಟುಂಬಗಳು,ಜೇನುಕುರುಬ, ಬೆಟ್ಟಕುರುಬ, ಎರವ. ಶೋಲಿಯ, ಪಣಿಯ ಮತ್ತಿತರ ಆದಿವಾಸಿ ಸಮುದಾಯಗಳ ಜೀವನದ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಅಲ್ಲೇ ಹೊರಟು ಅವರ ಮಧ್ಯೆಯೇ ಒಬ್ಬನಾಗಿ ಬೆರೆತುಹೋಗಿರುವ ಚೇತನರಂಥವರು ಇಂದಿಗೂ ನಮ್ಮ ನಡುವೆ ಬದುಕಿದ್ದಾರೆ ಎಂದು ನಂಬಿಸಿಕೊಳ್ಳಲು ಸಾಹಸಪಡಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಕೆಮ್ಮನ್ನು ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ತಯಾರಿಸುವುದು ಹೇಗೆ.?ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

    ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಈ ಕೆಮ್ಮನ್ನು ಎರಡೇ ದಿನದಲ್ಲಿ  ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ನೀವೆ ಸುಲಭವಾಗಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಿಸಬಹುದು. ಕೆಮ್ಮು ಮತ್ತು ಸಾವು ಯಾರನ್ನೂ ಕೇಳಿ ಬರುವುದಿಲ್ಲ ವಂತೆ. ಯಾವುದೋ ಮುಖ್ಯ ಕಾರ್ಯದಲ್ಲಿದ್ದಾಗ ಕೆಮ್ಮು ಕಾಡಿದರೆ ಆಗ ಎದು ರಾಗುವ ತಾಪತ್ರಯ ಒಂದೆರ ಡಲ್ಲ. ಅದರಲ್ಲೂ ಕೆಮ್ಮು ಸತತವಾದರೆ ಮುಖ್ಯ…

  • ನೀತಿ ಕಥೆ

    ಮಕ್ಕಳ ಮೋಹಕ್ಕೆ ಸಿಲುಕೀರಿ ಜೋಕೆ…

    ವಕೀಲ ನಾಗನಗೌಡ ಪಾಟೀಲರು ಪ್ರಾಮಾಣಿಕರೆಂದೇ ಗುರುತಿಸಿಕೊಂಡವರು. ಸಹಕಾರಿ ಕಾಯ್ದೆಗಳಿಗೆ ಸಂಬಂಧಿಸಿದ ಬ್ಯಾಂಕ್ಗಳ ಕೇಸುಗಳನ್ನು ನಡೆಸುವುದಲ್ಲಿ ನಿಪುಣರು ಅವರು.  ಕಠಿಣ ಪರಿಶ್ರಮದಿಂದ ಮೇಲೆ ಬಂದು ಹಣ ಸಂಪಾದಿಸಿದರು. ಯಾವ ದುರಭ್ಯಾಸಕ್ಕೂ ಕೈಹಾಕದ ಕಾರಣ, ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡದಾದ ಬಂಗಲೆಯನ್ನೂ ಕಟ್ಟಿಸಿದರು. ಒಂದು ಹೆಣ್ಣು, ಒಂದು ಗಂಡು ಮಗುವಿನ ತಂದೆಯಾದ ಪಾಟೀಲರಿಗೆ ಎಲ್ಲ ಪೋಷಕರಂತೆ ಮಕ್ಕಳ ಉಜ್ವಲ ಭವಿಷ್ಯದ ಚಿಂತೆ. ಮಕ್ಕಳನ್ನು ಡಾಕ್ಟರ್, ಎಂಜಿನಿಯರ್ ಮಾಡಬೇಕೆಂದು ಕೊಂಡರು. ಭರ್ಜರಿಯಾಗಿ ಅವರ ಮದುವೆ ಮಾಡುವ ಕನಸು ಕಂಡರು. ಹಾಗೂ ಹೀಗೂ ಹಣ…

  • ಸುದ್ದಿ, ಸ್ಪೂರ್ತಿ

    3 ಕೋಟಿ ರೂಪಾಯಿ ಬೆಲೆ ಬಾಳುವ ಕಾರನ್ನ ಸಮಾಧಿ ಮಾಡಿದ, ಕಾರಣ ಮಾತ್ರ ಶಾಕಿಂಗ್.

    ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…

  • ಸುದ್ದಿ

    ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಸಂವಾದ ನಡೆಸಿ ಮಾದರಿಯಾದ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು..

    ಚುನಾಯಿತರಾದ ಶಾಸಕರು ತಮ್ಮ ತಮ್ಮ ಕ್ಷೇತ್ರಕ್ಕೆ ಎಷ್ಟರ ಮಟ್ಟಿಗೆ ಭೇಟಿ ನೀಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ.. ಆದರೆ ಇಲ್ಲೊಬ್ಬರು ಶಾಸಕರಿದ್ದಾರೆ.. ತಮ್ಮ ಕ್ಷೇತ್ರದ ಜನರ ಜೊತೆ ಸಾಮಾನ್ಯ ಜನರಂತೆ ಬೆರೆತು ಕ್ಷೇತ್ರದ ಹಾಗು ಹೋಗುಗಳ ಬಗ್ಗೆ ಸ್ವತಃ ತಾವೇ ಖುದ್ದಾಗಿ ವಿಚಾರಿಸುತ್ತಿರುತ್ತಾರೆ.. ಹೌದು ಇವರು ಮತ್ಯಾರು ಅಲ್ಲ ಅಭಿವೃದ್ಧಿ ಹೊಂದಿದ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು.. ಈಗಾಗಲೇ ಪ್ರತಿಭೆಗಳಿಗಾಗಿ ತಮ್ಮ ಕ್ಷೇತ್ರದಲ್ಲಿ ಮಾಡಿಕೊಟ್ಟಿರುವ ಅನುಕೂಲಗಳು ಲೆಕ್ಕವಿಲ್ಲ.. ಶಾಸಕರ ಅನುದಾನ…

  • ತಂತ್ರಜ್ಞಾನ

    ನೀವು ಫೇಸ್ಬುಕ್ ನಲ್ಲಿ ಬೇರೆಯವರ ಫೋಟೋ ಹಾಕುವ ಮುನ್ನ ನಿಮ್ಗೆ ಇದು ತಿಳಿದಿರಬೇಕು..!

    ಫೋಟೋ ಪೋಸ್ಟ್ ಮಾಡಿದ ವ್ಯಕ್ತಿ ನಿಮಗೆ ಟ್ಯಾಗ್ ಮಾಡಿಲ್ಲವಾದಲ್ಲಿ ಮಾತ್ರ ಈ ಸಂದೇಶ ನಿಮಗೆ ಬರಲಿದೆ. ಸಾಮಾಜಿಕ ಜಾಲತಾಣದ ದೈತ್ಯ ಫೇಸ್ಬುಕ್ ಫೋಟೋವನ್ನು ಗುರುತಿಸಲು ಫೇಶಿಯಲ್ ರೆಕಗ್ನೈಸ್ ಟೆಕ್ನಾಲಜಿಯನ್ನು ಬಳಸಲಿದೆ.

  • ಸುದ್ದಿ

    ಡಿಕೆಶಿ ಪುತ್ರಿಗೂ ಸಿದ್ದಾರ್ಥ ಅವರ ಪುತ್ರನಿಗೂ ಮದುವೆ ನಿಶ್ಚಯ, ಮದುವೆ ಯಾವಾಗ!

    ಇಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ. ಮೂರು ದಿನಗಳ ಹಿಂದೆ ಎಸ್ ಎಂಕೆ ನಿವಾಸಕ್ಕೆ ಡಿಕೆಶಿ ಕುಟಂಬದವರು ಹೋಗಿದ್ದರು ಈಗ ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್ ಮನೆಗೆ ಎಂಸ್ ಕೃಷ್ಣ ಅವರ ಕುಟುಂಬ ಆಗಮಿಸಿದ್ದು ಗುರು ಹಿರಿಯ ಸಮ್ಮುಖದಲ್ಲಿ ಸಿದ್ದಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯಗೂ ಮತ್ತು ಡಿಕೆಶಿ ಪುತ್ರಿ ಐಶ್ವರ್ಯಗೂ ಮದುವೆ ಫಿಕ್ಸ್ ಆಗಿದೆ. ಡಿಕೆ…