ಸಿನಿಮಾ

ಶ್ರೀಮಂತ ಕುಟುಂಬದಲ್ಲಿ ಬೆಳೆದಿದ್ರೂ,ಈ ನಟನ ಜನಪರ ಕಾಳಜಿ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..!ತಿಳಿಯಲು ಈ ಲೇಖನಿ ಓದಿ…

1421

ಇವರನ್ನು ಬಿಟ್ಟರೆ ಬೇರೆ ಯಾರಾದರೂ, ಸಿನಿಮಾ ನಟ ಸಮಾಜ ಸುಧಾರಣೆಯ ಕೆಲಸಕ್ಕೆ ಕೈ ಹಾಕಿದ್ರೆ  ತೋರಿಸಿ. ಮತ್ತೊಂದು ವಿಚಾರ ಇವರ ಬಗ್ಗೆ ನಾವು ಹೆಮ್ಮೆ ಪಡಬೇಕು ಇದುವರೆಗೆ ಯಾವ ಸಿನಿಮಾ ನಟನ ಬಾಯಿಂದ ಅಂಬೇಡ್ಕರ್,ಬುದ್ದರ ,ಬಸವಣ್ಣ ಟಿಪ್ಪು, ರವರ ಹೆಸರನ್ನು ವೇದಿಕೆ ಮೇಲೆ ಅಲ್ಲ ಸಿನಿಮಾದಲ್ಲು ಕೂಡ, ಹೇಳಿರುವ ಯಾವ ನಟರನ್ನು ನಾನು ನೋಡಿಲ್ಲ ಇಂಥಹ ನಾಯಕನನ್ನು ಪಡೆದ ನಾವೇ ಪುಣ್ಯ ವಂತರು. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲೋಣ…

ಇಷ್ಟೆಲ್ಲಾ ಪೀಠಿಕೆ ಕೊಟ್ಟಿದ್ದು, ಯಾರೂ ಎನ್ನುವ ಯೋಚನೆಯಲ್ಲಿದ್ದೀರಾ! ಅವರೇ “ಆ ದಿನಗಳು” ಚಿತ್ರದ ನಟ ಚೇತನ್. ಅವರ ಬಗ್ಗೆ ನಿಮಗೆ ಗೊತ್ತಿಲ್ಲದ ಕೆಲವು ವಿಷಯಗಳ ಬಗ್ಗೆ ತಿಳಿಯೋಣ…

ಚೇತನ್’ರವರ ಬಾಲ್ಯ ಜೀವನ ಮತ್ತು ವಿಧ್ಯಾಭ್ಯಾಸ:-

ಚೇತನ್ ಹುಟ್ಟಿದ್ದು ಅಮೆರಿಕಾದ ಚಿಕಾಗೋನಗರದಲ್ಲಿ 24 ಫೆಬ್ರವರಿ 1983ರಂದು ಜನಿಸಿದರು.  ಚಿತ್ರದುರ್ಗ  ಮೂಲದ  ವೀರಶೈವ  ಸಮಾಜದ ಈ ಕುಟುಂಬ ಸಾಕಷ್ಟು ವರ್ಷಗಳ ಹಿಂದೆ ಅಮೆರಿಕೆಗೆ ಬಂದು ನೆಲೆಸಿದೆ. ಚೇತನ್ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಣ ಪಡೆದದ್ದು ಅಮೇರಿಕೆಯ ಪ್ರತಿಷ್ಠಿತ ಶಾಲೆಗಳಲ್ಲಿ.

ಪದವಿ ಮತ್ತು ಸ್ನಾತಕೋತ್ತರ ವ್ಯಾಸಂಗ ಮಾಡಿದ್ದು ಅಮೆರಿಕಾದ ವಿಶ್ವ ಪ್ರಸಿದ್ಧ ಯೇಲ್ ವಿಶ್ವವಿದ್ಯಾಲಯದಲ್ಲಿ. ಈ ಯೇಲ್ ವಿಶ್ವವಿದ್ಯಾಲಯ ಅನೇಕ ಕ್ಷೇತ್ರಗಳಲ್ಲಿ ಹಾರ್ವರ್ಡನ್ನೂ ಮೀರಿಸುವಂಥದ್ದು. ಜೀವನದ ಬಹುತೇಕ ವರ್ಷಗಳನ್ನು ಅಮೆರಿಕಾದ ಕಳೆದಿದ್ದರೂ ಸಾಹಿತಿಗಳನ್ನೂ ನಾಚಿಸುವವಷ್ಟು ಪರಿಶುದ್ಧವಾಗಿ ಕನ್ನಡದಲ್ಲಿ ಸಂವಾದ ನಡೆಸುತ್ತಾರೆ.

ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದು ಹೇಗೆ?

ಚೇತನ್ ಸಂಪೂರ್ಣ ಅಪ್ಪಟ  ಕಲಾವಿದ. ಆಧುನಿಕನೃತ್ಯ ಪರಿಣಿತಿಯ ಜೊತೆಗೆ ನೃತ್ಯ ತರಬೇತಿ ಮತ್ತು ನೃತ್ಯ ನಿರ್ದೇಶನದಲ್ಲೂ ಪಳಗಿದ್ದಾರೆ. ಪಾಶ್ಚಾತ್ಯ ಜಾಜ್ ಸಂಗೀತ, ಭಾರತೀಯ ಶಾಸ್ತ್ರೀಯ ಸಂಗೀತ, ಅದರಲ್ಲೂ ಕರ್ನಾಟಕ ಸಂಗೀತವನ್ನು ಅದ್ಭುತವಾಗಿ ಸ್ಯಾಕ್ಸೋಫೋನ್ ವಾದ್ಯದಲ್ಲಿ ನುಡಿಸಬಲ್ಲರು ಚೇತನ್.

2007ರಲ್ಲಿ ‘ಆ ದಿನಗಳು’ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಅಪಾರ ಬೇಡಿಕೆಯಿದ್ದರೂ ಇಲ್ಲಿಯವರೆಗೆ ಕೇವಲ 6 ಸಿನೆಮಾಗಳಲ್ಲಿ ನಟಿಸಿ ಸಿನೆಮಾರಂಗದಿಂದ ದೂರವುಳಿದಿದ್ದ ನಟ ಚೇತನ್ ಕುಮಾರ್ ಮತ್ತೆ ಚಿತ್ರರಂಗಕ್ಕೆ ಹಿಂದಿರುಗುವ ತಯಾರಿಯಲ್ಲಿದ್ದಾರೆ.

ನಟನೆಗೆ ತಮ್ಮ ಆದ್ಯತೆಯಾಗಿದ್ದರು ತೆಗೆದುಕೊಂಡಿರುವ ಈ ವಿರಾಮದಲ್ಲಿ ಸಮಾಜಮುಖಿ ಕಾರ್ಯಗಳತ್ತ ತಮ್ಮನ್ನು ತೊಡಗಿಸಿಕೊಂಡಿದ್ದನ್ನು ತಿಳಿಸುತ್ತಾರೆ.

ಎಲ್ಲರೂ ಮೆಚ್ಚುವಂತಾದ್ದು ಚೇತನ್’ರವರ ಸಮಾಜ ಮುಖಿ ಕಾರ್ಯಗಳು…

ಜನಪರ ಕಾಳಜಿಎಲ್ಲಕ್ಕಿಂತ ಚೇತನ್ ಹೆಚ್ಚು ಆಪ್ತರಾಗಲು ಕಾರಣವಾಗುವುದು ಚೇತನರ ಅವಿರತ ಜನಪರ ಕಾಳಜಿ.ಒಂದೇ ಒಂದು ದಿನ ತಲೆಯ ಬುಡಕ್ಕಿಟ್ಟುಕೊಳ್ಳುವ ದಿಂಬು ಒಂಚೂರು ಏರುಪೇರಾದರೂ ಸಹಿಸದ ನಮ್ಮಂಥವರಿಗೆ ಧೊಪ್ಪನೆ ಸುರಿಯುವ ಕೊಡಗಿನ ಮಳೆಯಲ್ಲಿ ಬಯಲನ್ನೇ ಹಾಸಿಕೊಂಡು ಮಲಗುವ ಕಲ್ಪನೆಯೇ ಅಸಾಧ್ಯವಾಗದದ್ದು.

ತಲೆಯ ಮೇಲಿನ ಸೂರು ಕಳೆದುಕೊಂಡ ಸುಮಾರು 3000 ಜನ ಸುಮಾರು 578 ಕುಟುಂಬಗಳು,ಜೇನುಕುರುಬ, ಬೆಟ್ಟಕುರುಬ, ಎರವ. ಶೋಲಿಯ, ಪಣಿಯ ಮತ್ತಿತರ ಆದಿವಾಸಿ ಸಮುದಾಯಗಳ ಜೀವನದ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಅಲ್ಲೇ ಹೊರಟು ಅವರ ಮಧ್ಯೆಯೇ ಒಬ್ಬನಾಗಿ ಬೆರೆತುಹೋಗಿರುವ ಚೇತನರಂಥವರು ಇಂದಿಗೂ ನಮ್ಮ ನಡುವೆ ಬದುಕಿದ್ದಾರೆ ಎಂದು ನಂಬಿಸಿಕೊಳ್ಳಲು ಸಾಹಸಪಡಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ನಟಿ ವಿಜಯಲಕ್ಷ್ಮಿ ವಿರುದ್ದವೇ ದೂರು ಕೊಟ್ಟ ನಟ..!

    ಸ್ಪತ್ರೆಯಲ್ಲಿದ್ದ ಸಂದರ್ಭದಲ್ಲಿ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಿದ ನಟ ರವಿ ಪ್ರಕಾಶ್ ಅವರ ವಿರುದ್ಧ ನಟಿ ವಿಜಯಲಕ್ಷ್ಮಿ ಲೈಂಗಿಕ ಕಿರುಕುಳ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತಾಗಿ ನಟ ರವಿಪ್ರಕಾಶ್ ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ಕಿರುಕುಳ ನೀಡಿಲ್ಲ. ಅವರಿಗೆ ಹಣಕಾಸು ನೆರವು ನೀಡಿ, ಅವರನ್ನು 2  ಬಾರಿ ಭೇಟಿ ಮಾಡಿದ್ದೇನೆ ಹೊರತು, ಯಾವುದೇ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ರವಿಪ್ರಕಾಶ್ ಅವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಟಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ದಿನನಿತ್ಯ ಈ ಒಂದು ಹಣ್ಣು ತಿಂದರೆ ಸಾಕು. ನಿಮ್ಮ ಅತ್ತಿರ ಯಾವ ಕಾಯಿಲೆಯು ಸುಳಿವುದಿಲ್ಲ. ಈ ಅರೋಗ್ಯ ಮಾಹಿತಿ ನೋಡಿ.

    ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ. ತೂಕ ಹೆಚ್ಚಿಸಬೇಕಾದವರಿಗೆ…

  • ದೇಗುಲ ದರ್ಶನ, ಸುದ್ದಿ

    ದೇವಸ್ಥಾನಕ್ಕೆ ಇನ್ಮುಂದೆ ಜೀನ್ಸ್, ಶರ್ಟ್ ಹಾಕ್ಕೊಂಡು ಹೋಗಂಗಿಲ್ಲ! ಇಲ್ಲ ಅಂದರೆ ದೇವರ ದರ್ಶನಕ್ಕೆ ನೋ ಎಂಟ್ರಿ.

    ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ.  ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ…

  • ಸುದ್ದಿ

    ಸಹಕಾರಿ ಬ್ಯಾಂಕ್ ಗಳಿಂದ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ‘ಬಿಗ್ ಶಾಕ್’

    ಹೊಸ ಬೆಳೆ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಿದ್ದು, ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಬ್ರೇಕ್ ಹಾಕಲಾಗಿದೆ. ಸಂಪನ್ಮೂಲ ಕೊರತೆ ಕಾರಣದಿಂದ ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿದೆ ಎನ್ನಲಾಗಿದ್ದು, ಇದರಿಂದಾಗಿ ಸಹಕಾರಿ ಬ್ಯಾಂಕುಗಳಿಗೆ ಸಂಕಷ್ಟ ಎದುರಾಗಿದೆ. ಪರಿಣಾಮ ರೈತರು ಹೊಸದಾಗಿ ಬೆಳೆ ಸಾಲ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ. ಸರ್ಕಾರದ ಸೂಚನೆ ಮೇರೆಗೆ ರೈತರ ಸಾಲ ಮನ್ನಾ ಯೋಜನೆಯಡಿ ಮರುಪಾವತಿ ಮೊತ್ತ ಬಿಡುಗಡೆಯನ್ನು ಹಣಕಾಸು ಇಲಾಖೆ ತಡೆಹಿಡಿದಿದೆ. ಸಹಕಾರ…

  • corona, Health

    ರಾಜ್ಯಾದ್ಯಂತ 4ಲಕ್ಷ ಮಕ್ಕಳಿಗೆ ಉಚಿತ ಲಸಿಕೆ

    ಮೊದಲದಿನ 4 ಲಕ್ಷ ಮಕ್ಕಳಿಗೆ ಉಚಿತ ಲಸಿಕೆ  ರಾಜ್ಯದಲ್ಲಿ 15-18ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿದೆ.ಮೊದಲದಿನ 4.03 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಆ ಮೂಲಕ ಶೇ.63 ಗುರಿ ಸಾಧನೆ ಮಾಡಲಾಗಿದೆ. ಸೋಮವಾರ ರಾಜ್ಯಾದ್ಯಂತ ನಡೆದ ಲಸಿಕೆ ಅಭಿಯಾನದಲ್ಲಿ 6,38,891 ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು.ಈ ಪೈಕಿ (ಸಂಜೆ 7:30ರವೆರಗೂ) 4,03,928 ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಈ ವಯೋಮಾನದ ಎಲ್ಲ ಮಕ್ಕಳಿಗೂ ಕೋವ್ಯಾಕ್ಸೀನ್ ಹಾಕಿರುವುದರಿಂದ 28ದಿನಗಳ ನಂತರ 2ನೇ ಡೋಸ್…

    Loading

  • ಸ್ಪೂರ್ತಿ

    ಐಎಎಸ್ ಅಧಿಕಾರಿ ಕನಸನ್ನು ಹೊತ್ತ ಈ ಮಹಿಳೆಯ ಕತೆ ಅತ್ಯಂತ ರೋಚಕ ಮತ್ತು ಎಲ್ಲರಿಗೂ ಸ್ಪುರ್ತಿಯೂ ಕೂಡ..!ತಿಳಿಯಲು ಈ ಲೇಖನ ಓದಿ…

    ನಿಮ್ಮ ಗುರಿಯನ್ನು ತಲುಪಲು ಶ್ರಮ ಪಡಬೇಕು. ಶ್ರಮ ಪಟ್ಟಾಗಲೇ ಅದಕ್ಕೆ ಪ್ರತಿಫಲ ಸಿಗುವುದು. ಗಂಡ ಇಲ್ಲದ ಈ 22 ವರ್ಷದ ಹೆಣ್ಣು ತಾನು ಆಟೋ ಓಡಿಸಿ ತನ್ನ ಚಿಕ್ಕ ಮಗುವಿನೊಂದಿಗೆ ಜೀವನ ಸಾಗಿಸುತ್ತಿದ್ದಾಳೆ .