ಆಧ್ಯಾತ್ಮ

ಶ್ರೀ ಶಿರಡಿ ಸಾಯಿಬಾಬಾ ಅವರ ಬಗ್ಗೆ ನಿಮ್ಗೆ ಗೊತ್ತಿಲ್ಲದ ವಿಷಯಗಳು..!

3344

ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.

ಅಂತಹವರಲ್ಲಿ ರಾಘವೇಂದ್ರ ಸ್ವಾಮಿಗಳು, ಶಂಕರಾಚಾರ್ಯರು ಹಾಗೂ ಇನ್ನೂ ಅನೇಕ ದೇವಾಂಶ ಸಂಭೂತರು ಸೇರಿದ್ದಾರೆ.ಅಂಥಹ ದೇವಾಂಶ ಸಂಭೂತರಲ್ಲಿ ಶ್ರೀ ಶಿರಡಿ ಸಾಯಿ ಬಾಬಾ ರವರು ಕೂಡ ಅಗ್ರಗಣ್ಯರು.

ತಮ್ಮ ಭಕ್ತರಿಂದ ಅವರವರ ವೈಯಕ್ತಿಕ ಒಲವುಗಳು ಹಾಗು ನಂಬಿಕೆಗಳ ಪ್ರಕಾರ ಒಬ್ಬ ಸಂತ, ಫಕೀರ, ಅವತಾರ ಅಥವಾ ಸದ್ಗುರು ಎಂದು ಪರಿಗಣಿಸಲಾಗಿದ್ದ ಮತ್ತು ಪರಿಗಣಿಸಲಾಗುವ ಒಬ್ಬ ಮಹಾನ್ ಆಧ್ಯಾತ್ಮಿಕ ಗುರುಗಳಾಗಿದ್ದರು. ಅವರು ತಮ್ಮ ಮುಸ್ಲಿಮ ಮತ್ತು ಹಿಂದೂ ಭಕ್ತರಿಂದ ಗೌರವಿಸಲ್ಪಡುತ್ತಿದ್ದರು.

ಗೋದಾವರಿ ತಟದ ಅಹಮದ್ ನಗರವು ಹಲವಾರು ಪುಣ್ಯ ಪುರುಷರಿಗೆ ಆಶ್ರಯಸ್ಥಾನವಾಗಿ ಪುಣ್ಯ ಸಂಪಾದಿಸಿದೆ. ಸಾಧು ಸಂತರು ಈ ಪ್ರದೇಶದಲ್ಲಿ ಅವತಾರವೆತ್ತಿ ಈ ಸ್ಥಳವನ್ನು ಪಾವನವಾಗಿಸಿದ್ದಾರೆ.

ಅಹಮದ್ ನಗರ ಜಿಲ್ಲೆಯ ಕೋಪರ್‌ಗಾಂವ್ ತಾಲೂಕಿನಲ್ಲಿದೆ ಶಿರಡಿ. ಗೋದಾವರಿ ನದಿ ದಾಟಿದ ತಕ್ಷಣವೇ ಮಾರ್ಗವು ನಮ್ಮನ್ನು ಶಿರಡಿ ಕ್ಷೇತ್ರಕ್ಕೆ ಕರೆದೊಯ್ಯುತ್ತದೆ. ಎಂಟು ಮೈಲು ಸಾಗಿದರೆ ನಾವು ನೀಮ್‌ಗಾಂವ್ ತಲುಪುತ್ತೇವೆ. ಅಲ್ಲಿಂದ ಶಿರಡಿಯ ವೈಭವವನ್ನು ಕಣ್ಣಾರೆ ಕಾಣಬಹುದಾಗಿದೆ. ಕೃಷ್ಣಾ ನದಿ ತಟದಲ್ಲಿ ಶಿರಡಿಯಂತೆಯೇ ಗಾಣಗಾಪುರ, ನರಸಿಂಹವಾಡಿ ಮತ್ತು ಔದುಂಬರ ಮೊದಲಾದ ಇತರ ತೀರ್ಥ ಕ್ಷೇತ್ರಗಳೂ ಇವೆ.

ಶ್ರೀ ಸಾಯಿಬಾಬಾ ಅವರ ಜನ್ಮತಿಥಿ, ಜನ್ಮಸ್ಥಾನ ಮತ್ತು ಅವರ ಹೆತ್ತವರ ಬಗ್ಗೆ ಯಾರಿಗೂ ತಿಳಿದಿಲ್ಲ. ಈ ಕುರಿತು ಸಾಕಷ್ಟು ಚರ್ಚೆಗಳು ನಡೆದಿವೆ. ಬಾಬಾರಿಂದ ಮತ್ತು ಅವರ ಸಮೀಪವರ್ತಿಗಳಲ್ಲಿ ಈ ಕುರಿತು ಕೇಳಲಾಗಿತ್ತಾದರೂ, ಯಾವುದೇ ಫಲಪ್ರದ ಉತ್ತರ ದೊರೆತಿರಲಿಲ್ಲ. ಅದೇ ರೀತಿ ಸಾಯಿಬಾಬಾರನ್ನು ಸಂತ ಕಬೀರರ ಅವತಾರ ಎಂದೂ ಹೇಳುವವರಿದ್ದಾರೆ.

ಶ್ರೀ ಸಾಯಿಬಾಬಾ ಅವರ ಏಕೈಕ ಲಭ್ಯ ಜೀವನ ಚರಿತ್ರೆ “ಶ್ರೀ ಸಾಯಿ ಸತ್‌ಚರಿತೆ”ಯನ್ನು 1914ರಲ್ಲಿ ಶ್ರೀ ಅನ್ನಾ ಸಾಹೇಬ್ ಧಾಬೋಲ್ಕರ್ ಎಂಬವರು ಬರಹರೂಪಕ್ಕಿಳಿಸಿದ್ದರು.

ಒಂದು ನಂಬಿಕೆಯ ಪ್ರಕಾರ, ಮಹಾರಾಷ್ಟ್ರದ ಪರ್‌ಭನಿ ಜಿಲ್ಲೆಯ ಪಾಥರಿ ಎಂಬ ಗ್ರಾಮದಲ್ಲಿ ಸಾಯಿಬಾಬಾ ಅವರ ಜನನವು 1835ರಲ್ಲಿ ಆಯಿತು. (ಶಿರಡಿ ಸಾಯಿಬಾಬಾ ಅವರ ಜನನವು ಪಾಥರಿ ಗ್ರಾಮದಲ್ಲಿ 1830ರ ಡಿಸೆಂಬರ್ 27ರಂದು ಆಗಿತ್ತು ಎಂದು ಸತ್ಯ ಸಾಯಿಬಾಬಾ ಅವರು ಹೇಳಿದ್ದಾರೆ.)


ಮೂಲ
1835ರಿಂದ 1846ರವರೆಗಿನ 12 ವರ್ಷ ಪೂರ್ತಿ ಸಾಯಿಬಾಬಾ ಅವರು ತಮ್ಮ ಮೊದಲ ಗುರು ರೋಶನ್‌ಷಾ ಫಕೀರರ ನಿವಾಸದಲ್ಲೇ ಇದ್ದರು ಎಂದು ಹೇಳಲಾಗುತ್ತಿದೆ. ತದನಂತರ 1854ರವರೆಗೆ ಬಾಬಾ ಅವರು ಬೇಂಕುಷ್ ಆಶ್ರಮದಲ್ಲಿದ್ದರು ಎನ್ನಲಾಗುತ್ತಿದೆ.


ಮೂಲ
1858ರಿಂದ 1918ರ ಅಕ್ಟೋಬರ್ 15ರಂದು ದೇಹತ್ಯಾಗ ಮಾಡುವವರೆಗೂ ಬಾಬಾ ಅವರು ಶಿರಡಿಯಲ್ಲಿ ನೆಲೆನಿಂತು ತಮ್ಮ ಲೀಲೆಗಳಿಂದ ಭಗವದ್ಭಕ್ತರನ್ನು ಹರಸುತ್ತಿದ್ದರು.

ದೇವರಿದ್ದಾನೆ ಎಂದು ಜನತೆಗೆ ಮನವರಿಕೆ ಮಾಡುವ ನಿಟ್ಟಿನಲ್ಲಿ ಬಾಬಾ ಅವರು ಹಲವಾರು ಪವಾಡಗಳನ್ನು ಮಾಡಿದರು. ರೋಗ ಶಮನಗೊಳಿಸಿದರು. ತಮ್ಮ ಭಕ್ತರಿಗೆ ನೈತಿಕ ಆತ್ಮಬಲ ಮತ್ತು ಭೌತಿಕ ಬಲವನ್ನು ಒದಗಿಸಿದರು. ಎಲ್ಲಾ ಸಮುದಾಯಗಳಲ್ಲಿ ಏಕತೆ ಮತ್ತು ಸೌಹಾರ್ದತೆ ಮೂಡಿಸಲು ಶ್ರಮಿಸಿದರು. ದೇವರೊಬ್ಬನೇ, ನಾಮ ಹಲವು ಎಂಬುದನ್ನ ಜನರಿಗೆ ಮನವರಿಕೆ ಮಾಡಿಸಲು ಪ್ರಯತ್ನಿಸಿದರು. ನಿಮ್ಮದೇ ಧರ್ಮ ಅನುಸರಿಸಿ, ಸತ್ಯ ದರ್ಶನವಾಗುತ್ತದೆ ಎಂದು ಬೋಧಿಸಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾಜ್ಯ ಸರ್ಕಾರದ ಖಡಕ್ ಎಚ್ಚರಿಕೆ :2ನೇ ತರಗತಿವರೆಗೂ ಹೋಂ ವರ್ಕ್‌ ನೀಡುವಂತಿಲ್ಲ…..!

    ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂವರ್ಕ್‌ ನೀಡುವ ಶಾಲೆಗಳ ಮಾನ್ಯತೆಯನ್ನೇ ರದ್ದುಪಡಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಖಡಕ್‌ ಎಚ್ಚರಿಕೆ ನೀಡಿದೆ.2019-20ನೇ ಸಾಲಿನ ಶೈಕ್ಷಣಿಕ ತರಗತಿಗಳು ಈಗಾಗಲೇ ಆರಂಭವಾಗಿವೆ. ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಒಂದು ಮತ್ತು ಎರಡನೇ ತರಗತಿ ಮಕ್ಕಳಿಗೆ ಹೆಚ್ಚಿನ ಹೋಂವರ್ಕ್‌ ನೀಡಲಾಗುತ್ತಿದೆ. ಇದು ಪಾಲಕ, ಪೋಷಕರಿಗೆ ನೇರ ಹೊರೆಯಾಗಲಿದೆ. ಅಲ್ಲದೆ, ಈ ಮಕ್ಕಳ ಹೋಂ ವರ್ಕ್‌ನ್ನು ಮನೆಯಲ್ಲಿ ಪಾಲಕ, ಪೋಷಕರೇ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂ…

  • ಸುದ್ದಿ

    ಕೊನೆಗೂ ಬಯಲಾಯ್ತು ಪ್ರಸಾದದಲ್ಲಿ ವಿಷ ಬೇರೆಸಿದ್ದ ಪಾಪಿಗಳ ಬೆಚ್ಚಿ ಬೀಳಿಸುವ ಸತ್ಯ..!

    ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ವಿಷ ಮಿಶ್ರಿತ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 15 ಕ್ಕೆ ಏರಿದೆ. ಇನ್ನೂ ಹಲವಾರು ಮಂದಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಪ್ರಸಾದಕ್ಕೆ ವಿಷ ಬೆರೆಸಿದವರು ಯಾರು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಹತ್ವದ ಮಾಹಿತಿ ದೊರೆತಿದೆ ಎನ್ನಲಾಗಿದೆ. ಸಾಲೂರು ಮಠದ ಸ್ವಾಮಿಗಳ ನಡುವಿನ ಒಳಜಗಳದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಿರಿಯ ಸ್ವಾಮೀಜಿ ಮಹಾದೇವಸ್ವಾಮಿ ಚಿತಾವಣೆ ಮೇರೆಗೆ ದೊಡ್ಡಯ್ಯ ಎಂಬಾತ…

  • ಸುದ್ದಿ

    ವೇಶ್ಯೆಯರನ್ನೂ ಬಿಡದ ಕಾಮುಕರು, ಮೂವರ ಮೇಲೆ 9 ಮಂದಿಯಿಂದ ಸಾಮೂಹಿಕ ಅತ್ಯಾಚಾರ…!

    ಉತ್ತರ ಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಮೂವರು ವೇಶ್ಯರನ್ನು 9 ಮಂದಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದಿರುವ ವಿದ್ರಾವಕ ಘಟನೆ ನಡೆದಿದೆ. ದೆಹಲಿಯ ಲಜಪತ್ ನಗರದ ಮೆಟ್ರೋ ನಿಲ್ದಾಣದ ಬಳಿ ಗಿರಾಕಿಗಳಿಗಾಗಿ ಕಾಯುತ್ತಿದ್ದಾಗ ಓಲಾ ಕ್ಯಾಬ್ ನ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದ ಇಬ್ಬರು ಗಿರಾಕಿಗಳ ಸೋಗಿನಲ್ಲಿ ಮಹಿಳೆಯರನ್ನು ಸಂಪರ್ಕಿಸಿದ್ದಾರೆ. 3000 ಸಾವಿರ ರೂಗಳಿಗೆ ಡೀಲ್ ಮಾಡಿಕೊಂಡ ದುಷ್ಕರ್ಮಿಗಳು ಮಹಿಳೆಯರನ್ನು ನೊಯ್ಡಾದ ಸೆಕ್ಟರ್ 18ಗೆ ಬರುವಂತೆ ಹೇಳಿ 3600 ರೂ ಮುಂಗಡ ಹಣವನ್ನೂ ನೀಡಿದ್ದಾರೆ. ಬಳಿಕ ಮಹಿಳೆಯರನ್ನು…

  • ಜ್ಯೋತಿಷ್ಯ, ಭವಿಷ್ಯ

    ಶಾಸ್ತ್ರಗಳು ಹೇಳಿದ ಪ್ರಕಾರ, ರತ್ನಗಳನ್ನು ಧರಿಸುವ ಮುಂಚೆ ಈ ನಿಯಮಗಳನ್ನು ಪಾಲಿಸುವುದು ಅವಶ್ಯಕತಿಳಿಯಲು ಈ ಲೇಖನ ಓದಿ…ಶೇರ್ ಮಾಡಿ…

    ಹಿಂದೂ ಧರ್ಮದ ಜ್ಯೋತಿಷ್ಯದ ಪ್ರಕಾರ ರತ್ನಗಳ ಧಾರಣೆಯಿಂದ ಕ್ಷೇಮ ಪ್ರಾಪ್ತವಾಗುತ್ತದೆ ಹಾಗೂ ಉದ್ಯೋಗ, ವ್ಯಾಪಾರ, ವಿವಾಹ, ಸಂತಾನ ಹೀಗೆ ನಾನಾ ಬಯಕೆಗಳ ಈಡೇರಿಕೆ ಹಾಗೂ ಜೀವನದಲ್ಲಿ ಉಂಟಾಗುವ ತೊಂದರೆಗಳಿಗೂ ರತ್ನಗಲಿಂದ ಪರಿಹಾರ ಸಿಗುತ್ತೆ ಎಂದು ಹಿಂದೂಗಳಲ್ಲಿ ನಂಬಿಕೆ ಇದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದಕ್ಕೂ ತನ್ನದೇ ಆದ ನಿಯಮವನ್ನು ಹೊಂದಿರುತ್ತದೆ ಅಂತೆಯೇ ನೀವು ರತ್ನಗಳನ್ನು ಧರಿಸುವಾಗ ಕೆಲವೊಂದು ನಿಯಮಗಳನ್ನು ಅನುಸರಿಸುವುದು ಒಳಿತು. ನೀವು ಧರಿಸುವ ರತ್ನಗಳು ನಿಮಗೆ ಒಳಿತು ಮಾಡಬಬೇಕು ಅಂದ್ರೆ ನೀವು ಇಂತಹ ನಿಯಮಗಳನ್ನು ಪಾಲಿಸಲೇಬೇಕು…

  • ಸಿನಿಮಾ, ಸುದ್ದಿ

    ಕಿಚ್ಚ ಸುದೀಪ್ ಗೆ ಪತ್ನಿಯಿಂದಲೇ ಧಮ್ಕಿ, ಪತ್ನಿಗೆ ಹೆದರಿ ಹನ್ನೊಂದು ಬಾರಿ ಒಂದೇ ಸಿನಿಮಾ ನೋಡಿದ ಕಿಚ್ಚ.!

    ತಿಯೊಬ್ಬ ಸಿನಿಮಾ ಅಭಿಮಾನಿಯಾಗಲಿ ನಟನಾಗಲಿ‌ ಒಂದು ಸಿನಿಮಾವನ್ನು ಎಷ್ಟು ಬಾರಿ ನೋಡಬಹುದು ಹೇಳಿ? ಹೇಗಾದರು ಮಾಡಿ ಎರಡರಿಂದ ಮೂರು ಬಾರಿ ಸಿನಿಮಾ ವೀಕ್ಷಣೆ ಮಾಡಬಹುದು. ಅದರಲ್ಲೂ ಸ್ಟಾರ್ ನಟರಂತೂ ತಾವು ಮಾಡಿದ ಸಿನಿಮಾವನ್ನು ಒಂದು ಬಾರಿ ನೋಡುವುದೇ ಕಷ್ಟದ ಪರಿಸ್ಥಿತಿ. ಆದರೆ, ಚಿತ್ರರಂಗದ ಕಿಚ್ಚ ಮಾತ್ರ ಒಂದೇ ಸಿನಿಮಾವನ್ನು ಹತ್ತರಿಂದ ಹನ್ನೊಂದು ಬಾರಿ ನೋಡಿದ್ದಾರಂತೆ. ಅದೂ ಅವರ ಪತ್ನಿಯೊಂದಿಗೆ! ಪತ್ನಿಯ ಧಮ್ಕಿಗೆ ಹೆದರದೆ ಫೈಲ್ವಾನ್ ಈ ರೀತಿ ಮಾಡಿದ್ದಾರಂತೆ. ಕಿಚ್ಚ ಸುದೀಪ್ ಅಭಿನಯದ ದಬಾಂಗ್-3 ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ….

  • inspirational

    ಕೇರಳದಲ್ಲಿ ಸಿಲುಕಿಕೊಂಡಿದ್ದ 177 ಯುವತಿಯರನ್ನು ತವರು ರಾಜ್ಯಕ್ಕೆ ಕಳುಹಿಸಿ ಮತ್ತೆ ಮಾನವೀಯತೆ ಮೆರೆದ ಸೋನು ಸೂದ್.

    ಕೊರೊನಾ ಹಿನ್ನೆಲೆಯಲ್ಲಿ ಲಾಕ್‍ಡೌನ್ ಶುರುವಾದಾಗಿನಿಂದ ಒಡಿಶಾದ ಸುಮಾರು 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು. ತಕ್ಷಣ ಯುವತಿಗೆ ಸಹಾಯ ಮಾಡಲು ಮುಂದಾಗಿದ್ದು, ನಂತರ ವಿಮಾನ ನಿಲ್ದಾಣಗಳನ್ನು ತೆರೆಯಲು ಕೇರಳ ಮತ್ತು ಒಡಿಶಾ ಸರ್ಕಾರಗಳಿಂದ ಅನೇಕ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಸೋನು ಸೂದ್ ಯುವತಿಯರ ರಕ್ಷಣೆ ಮಾಡಿದ್ದು, ಅಲ್ಲಿಂದ ಅವರನ್ನು ವೈಮಾನಿಕ ಮಾರ್ಗದ ಮೂಲಕ…