News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉದ್ಯೋಗ

ಸಾಫ್ಟ್ ವೇರ್ ಉದ್ಯೋಗಿಗಳಲ್ಲಿ ಕವಿದ ಆತಂಕದ ಕಾರ್ಮೋಡ!!!

211

ಆತ ಸಾಫ್ಟವೇರ್ ಟೆಕ್ಕಿ. ಒಳ್ಳೆಯ ಪ್ಯಾಕೇಜ್‌ನ ಸಂಬಳ. ಪ್ರತಿಷ್ಠಿತ ಶಾಲೆಯಲ್ಲಿ ಓದುವ ಇಬ್ಬರು ಮುದ್ದಾದ ಮಕ್ಕಳ ಸಂಸಾರ. ಸಕಲ ಆಧುನಿಕ ಸೌಲಭ್ಯಗಳಿರುವ ಅಪಾರ್ಟ್‌ಮೆಂಟ್‌ನಲ್ಲಿ ಬ್ಯಾಂಕ್ ಸಾಲದಿಂದ ಖರೀದಿಸಿದ ಮೂರು ಬೆಡ್ ರೂಮ್‌ನ ಐಷಾರಾಮಿ ಫ್ಲ್ಯಾಟ್.

ಸದಾ ಚಟುವಟಿಕೆಯಿಂದ, ನಗುವಿನಿಂದ ತುಂಬಿರುತ್ತಿದ್ದ ಮನೆಯಲ್ಲಿ ಇತ್ತೀಚೆಗೆ ಸ್ವಲ್ಪ ಆತಂಕ ಕಾಣುತ್ತಿದೆ. ಮಕ್ಕಳ ವಿದ್ಯಾಭ್ಯಾಸ, 30-40 ಲಕ್ಷದಷ್ಟಿರುವ ಗೃಹಸಾಲ ಅವನನ್ನು ಅಣಕಿಸುತ್ತಿವೆ.

ಸಹೋದ್ಯೋಗಿಗಳು ಬಿಟ್ಟು ಹೋದ ತಿರುಗುವ ಕುರ್ಚಿಗಳು ಅವನನ್ನು ಬೆವರಿಸುತ್ತವೆ. ತನ್ನ ಕುರ್ಚಿಯೂ ಹೀಗೆ ಬರಿದಾಗಬಹುದೇನೋ ಎನ್ನುವ ಅವ್ಯಕ್ತ ಭಯ ಅವನನ್ನು ಕಾಡಲು ಶುರು ಮಾಡಿದೆ.

ಸಂಜೆ ಆಫೀಸು ಮುಗಿಯುವಾಗ ಬರುವ ಇ ಮೇಲ್ ತೆರೆಯುವಾಗ ಕೈ ನಡುಗುತ್ತದೆ. ಹಾಗೆಯೇ ಮುಂಜಾನೆ ಆಫೀಸಿನಲ್ಲಿ ಲಾಗ್ ಇನ್ ಮಾಡುವಾಗ ಎಸಿ ಕ್ಯಾಬಿನ್‌ನಲ್ಲಿಯೂ ಬೆವರುತ್ತಾನೆ.

ಇದು ಇವನೊಬ್ಬನ ಕಥೆಯಲ್ಲ. ಭಾರತದ ಐಟಿ ಉದ್ಯಮದಲ್ಲಿ ಸುಮಾರು 13,000 ಕಂಪನಿಗಳಲ್ಲಿ ದುಡಿಯುವ 28 ಲಕ್ಷ ಟೆಕ್ಕಿಗಳು ನೇರವಾಗಿ ಮತ್ತು ಇದರ ಮೂಲಕ ಪರೋಕ್ಷವಾಗಿ ಕೆಲಸ ಮಾಡುವ 89 ಲಕ್ಷ ಜನರು ಎದುರಿಸುತ್ತಿರುವ ಭಯ, ಆತಂಕ.

ಬೆಂಗಳೂರು ನಗರವೊಂದರಲ್ಲೇ ಸುಮಾರು 5,000 ಟೆಕ್ ಕಂಪನಿಗಳಿವೆ. ಇತ್ತೀಚೆಗಿನ ದಿನಗಳಲ್ಲಿ ಇನ್ ಫೋಸಿಸ್, ವಿಪ್ರೋ, ಟೆಕ್ ಮಹೀಂದ್ರ, ಕಾಗ್ನಿಜೆಂಟ್ ಮತ್ತು ಐಬಿಎಂನಂಥ ಕಂಪನಿಗಳು ಸುಮಾರು 58,000 ಸಿಬ್ಬಂದಿಯನ್ನು ಕೆಲಸದಿಂದ ತೆಗೆದಿವೆ ಎಂದು ಹೇಳಲಾಗುತ್ತಿದ್ದು, ಈ ಹಾದಿಯಲ್ಲಿ ಇನ್ನೂ ಕೆಲವು ಕಂಪನಿಗಳು ಇವೆಯಂತೆ.

ಹಾಗೆಯೇ ಈ ದೊಡ್ಡ ಕಂಪನಿಗಳ ಹಾದಿಯಲ್ಲಿಯೇ ಸಣ್ಣ ಸಣ್ಣ ಕಂಪನಿಗಳು ಇನ್ನೂ ದೂರ ಸಾಗಿದರೆ ಆಶ್ಚರ್ಯವಿಲ್ಲ.

ಈ ಕಂಪನಿಗಳ ಪ್ರಕಾರ ಇದು ಸಾಧಿಸಿದವರನ್ನು ಉಳಿಸಿಕೊಳ್ಳುವ ಮತ್ತು ಸಾಧಿಸದವರನ್ನು ಕೆಲಸದಿಂದ ತೆಗೆದು ಹಾಕುವ ವಾರ್ಷಿಕ ಪ್ರಕ್ರಿಯೆಯಷ್ಟೆ. ಇದು ಸಿಬ್ಬಂದಿ ವೇತನದ ಬಿಲ್‌ನ್ನು ಕಡಿಮೆ ಮಾಡುವ ಮತ್ತು ನಿರ್ವಹಣಾ ವೆಚ್ಚವನ್ನು ತಗ್ಗಿಸಲು shifting to automation, robotic, manning legacy system to digital and cloud  ಎನ್ನುವ ಸತ್ಯವನ್ನು ಮರೆಮಾಚಲಾಗುತ್ತದೆ ಎಂದು ಸಾಫ್ಟವೇರ್ ತಜ್ಞರು ಅಭಿಪ್ರಾಯ ಪಡುತ್ತಾರೆ.

ಟೆಕ್ಕಿಗಳ ಉದ್ಯೋಗ ಉಳಿಯಬೇಕಾದರೆ ಅವರು ತಮ್ಮ ತಾಂತ್ರಿಕ ಕೌಶಲ ಮತ್ತು ವಿದ್ಯಾರ್ಹತೆಯನ್ನು ಹೆಚ್ಚಿಸಿಕೊಬೇಕಾದ ಅನಿವಾರ್ಯ ಉಂಟಾಗಿದೆ.

ಸಾಫ್ಟ್‌ವೇರ್ ಉದ್ಯಮದಲ್ಲಿನ ಕಳೆದ ಒಂದೆರಡು ವರ್ಷಗಳ ಆಗುಹೋಗುಗಳನ್ನು ಮತ್ತು ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಇಂಥ ಪರಿಸ್ಥಿತಿಯ ಆಗಮನದ ಸಂಕೇತ ಮತ್ತು ಸೂಚನೆಗಳು ಎದ್ದು ಕಾಣುತ್ತಿದ್ದವು ಮತ್ತು ಅದನ್ನು ಗೋಡೆಯ ಮೇಲೆ ನಿಚ್ಚಳವಾಗಿ ಬರೆಯಲಾಗಿತ್ತು ಕೂಡಾ.

ಆದರೆ, ವ್ಯಾಧಿ ಪಸರಿಸಿ ಹತೋಟಿ ತಪ್ಪುವ ಹಂತಕ್ಕೆ ಬಂದಾಗ ಮಾತ್ರ ಎಚ್ಚೆತ್ತುಕೊಳ್ಳುವ ನಮ್ಮ ಮನೋಸ್ಥಿತಿಗೆ ಇದು ಬೇಗ ಅರ್ಥವಾಗಲಿಲ್ಲವಷ್ಟೆ. ಉದ್ಯೋಗಿಗಳು ಕೂಡ ಸ್ವಲ್ಪ ನಿರ್ಲಿಪ್ತತೆ ತೋರಿಸಿದರು.

ಐಟಿ ಕ್ಷೇತ್ರದ ಮಾಜಿ ದಿಗ್ಗಜರೊಬ್ಬರ ಪ್ರಕಾರ ಸಾಫ್ಟ್ ವೇರ್ ಕ್ಷೇತ್ರದಲ್ಲಿ ಅಡಿಯಿಡುತ್ತಿರುವ ಅಟೋಮೇಷನ್ ವ್ಯವಸ್ಥೆ, ಭಾರತದಲ್ಲಿ ಇನ್ನು 9 ವರ್ಷಗಳಲ್ಲಿ 20 ಕೋಟಿ ಯುವಕರನ್ನು ನಿರುದ್ಯೋಗಿಗಳನ್ನಾಗಿ ಮಾಡುವ ಸಾಧ್ಯತೆ ಇದೆ.

ಸುಮಾರು 2ರಿಂದ 2.50 ಲಕ್ಷ ಹೆಚ್ಚುವರಿ ಉದ್ಯೋಗಗಳು ಬೆಳಕು ಕಾಣುವ ಸಾಧ್ಯತೆ ಕಡಿಮೆ. ಹಾಗೆಯೇ 2.25 ಲಕ್ಷ ಮಧ್ಯಮ ದರ್ಜೆ ಉದ್ಯೋಗಗಳು ಕಡಿಮೆಯಾಗಬಹುದು. ವಿಶೇಷ ತಂತ್ರಜ್ಞಾನ ಇದ್ದವರು ಮಾತ್ರ ಉಳಿಯಬಲ್ಲರು.

ಈಗಿನಂತೆ ಕೇವಲ ಒಂದು ಎಂಜಿನಿಯರಿಂಗ್ ಪದವಿ ಉದ್ಯೋಗ ಕೊಡಲಾರದು. ವಿಶ್ವ ಬ್ಯಾಂಕಿನ ಒಂದು ವರದಿ ಪ್ರಕಾರ ಸಾಫ್ಟ್ ವೇರ್ ಉದ್ಯಮದ ಈ ಹೊಸ ಆವಿಷ್ಕಾರ ಭಾರತದಲ್ಲಿ 69% ಉದ್ಯೋಗಿಗಳನ್ನು ಎತ್ತಂಗಡಿ ಮಾಡುವ ಸಾಧ್ಯತೆ ಇದೆ.

ಬರಗಾಲದಲ್ಲಿ ಅಧಿಕ ಮಾಸ ಅಥವಾ ಗಾಯದ ಮೇಲೆ ಬರೆ ಎನ್ನುವಂತೆ ಅಮೆರಿಕದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಎಚ್1ಬಿ ವೀಸಾ ಹೆಸರಿನಲ್ಲಿ ಭಾರತದ ಸಾಫ್ಟ್ ವೇರ್ ಉದ್ಯಮವನ್ನು ಹಳಿ ತಪ್ಪಿಸುತ್ತಿದ್ದಾರೆ.

ಈ ವರದಿಯ ಪ್ರಕಾರ ತಂತ್ರಜ್ಞಾನ ವಲಯದಲ್ಲಿ ಅಟೋಮೇಷನ್ ನುಸುಳುವುದರಿಂದ ಮುಂದಿನ 5 ವರ್ಷಗಳಲ್ಲಿ 5 ರಿಂದ 6.50 ಲಕ್ಷ ಟೆಕ್ಕಿಗಳು ನಿರುದ್ಯೋಗಿಗಳಾಗುವ ಸಂಭವ ಇದೆ.

2021ರ ಹೊತ್ತಿಗೆ ತಂತ್ರಜ್ಞಾನ ವಲಯದಲ್ಲಿ ಸುಮಾರು 9% ಅಥವಾ 14 ಲಕ್ಷ ಉದ್ಯೋಗ ಕಡಿತವಾಗಲಿದೆ. ಇದು ನಿಜವಾದರೆ, ದೇಶದ ಹತ್ತು ಲಕ್ಷ ಕೋಟಿ ಮೌಲ್ಯದ ಉದ್ಯಮಕ್ಕೆ ಆಘಾತಕಾರಿ ಅಥವಾ ಮಾರಣಾಂತಿಕ ಪೆಟ್ಟು ಬೀಳಲಿದೆ ಎನ್ನಬಹುದು.

ಕೆಲವು ಮೂಲಗಳ ಪ್ರಕಾರ ಆರಂಭದಲ್ಲಿ ಈ ಅಟೋಮೇಷನ್ ಆವಿಷ್ಕಾರ 37 ಲಕ್ಷ ಉದ್ಯೋಗಿಗಳನ್ನು ಹೊಂದಿದ ಬಿಪಿಓ ವಲಯವನ್ನು ಹೆಚ್ಚು ಸಂಕಷ್ಟಕ್ಕೆ ದೂಡಬಹುದು.

ಹಾಗೆಯೇ ಮಧ್ಯಮ ಕೌಶಲದ 8% ಉದ್ಯೋಗಗಳನ್ನು ಮತ್ತು ಕಡಿಮೆ ಕೌಶಲದ 30% ಉದ್ಯೋಗಗಳನ್ನು ಕಡಿತಗೊಳಿಸಬಹುದು ಎಂದು ತಜ್ಞರು ಅಭಿಪ್ರಾಯ ಪಡುತ್ತಾರೆ.

ಇವರ ಪ್ರಕಾರ 30-50 ಲಕ್ಷ ಸಂಬಳ ದುಡಿಯುವ 50% ಮ್ಯಾನೇಜರ್‌ಗಳು ಪ್ರತಿವರ್ಷ ಉದ್ಯೋಗ ಕಳೆದು ಕೊಳ್ಳಬಹುದು. ಆರಂಭಿಕ ಹಂತದ ನೇಮಕದಲ್ಲಿ 10-12% ಕಡಿಮೆಯಾಗುವ ಸಾಧ್ಯತೆ ಇದೆ. ಪ್ರತಿವರ್ಷ ಕಾಲೇಜುಗಳು 15 ಲಕ್ಷ ಎಂಜಿನಿಯರ್‌ಗಳನ್ನು ಕಳಿಸುತ್ತಿದ್ದು, ಉದ್ಯೋಗ ಲಭ್ಯತೆ ಕೇವಲ 2ರಿಂದ 2.25 ಲಕ್ಷ ಎಂದು ಹೇಳಲಾಗುತ್ತಿದೆ.

ಯಾವುದು ಸತ್ಯ?

ವಿಪರ್ಯಾಸವೆಂದರೆ ಪಿಂಕ್ ಸ್ಲಿಪ್ ಭಯದಲ್ಲಿ ಐಟಿ ಸೆಕ್ಟರ್ ತಳಮಳಗೊಳ್ಳುತ್ತಿರುವಾಗ ಟೆಕ್ ಕಂಪನಿಗಳ ಮಹಾ ಸಂಘ (Nasscom)  ಅಧ್ಯಕ್ಷ ಆರ್. ಚಂದ್ರಶೇಖರ ಅವರು ವ್ಯತಿರಿಕ್ತ ಹೇಳಿಕೆ ನೀಡಿದ್ದು, 2017ರಲ್ಲಿ ಟೆಕ್ ಕಂಪನಿಗಳು 1.70 ಲಕ್ಷ ನೇಮಕ ಮಾಡಿದ್ದು, ಮಾರ್ಚ್ 2017ರ ತ್ರೈಮಾಸಿಕದಲ್ಲಿಯೇ 50,000 ನೇಮಕ ಮಾಡಿವೆಯಂತೆ.

2025ರ ಹೊತ್ತಿಗೆ ಐಟಿ ಸೆಕ್ಟರ್‌ನಲ್ಲಿ 30 ಲಕ್ಷ ಉದ್ಯೋಗ ಸೃಷ್ಟಿಯಾಗುವ ಆಶಾಭಾವನೆಯನ್ನು ಅವರು ವ್ಯಕ್ತ ಪಡಿಸಿದ್ದಾರೆ. ಈ ಹೇಳಿಕೆಗೆ ಪುಷ್ಟಿ ಕೊಡುವಂತೆ ಟೆಕ್ ಕಂಪನಿಗಳ ಹಿರಿಯಣ್ಣ ಇನ್‌ಫೋಸಿಸ್ 2017ರಲ್ಲಿ 20,000 ನೇಮಕ ಮಾಡುವುದಾಗಿ ಹೇಳಿದೆ.

ಇದು ಸತ್ಯವೋ ಅಥವಾ ಮಿಥ್ಯವೋ ಎನ್ನುವುದನ್ನು ಮುಂದಿನ ದಿನಗಳಲ್ಲಿ ನೋಡಬೇಕು. ಐಟಿ ಕಂಪನಿಗಳಲ್ಲಿ ಉಂಟಾದ ಪಿಂಕ್ ಸ್ಲಿಪ್ ತಳಮಳದ ದಾವಾಗ್ನಿಯನ್ನು ತಣ್ಣಗಾಗಿಸುವ ಪ್ರಯತ್ನ ಇದು ಎಂದು ವಿಶ್ಲೇಷಕರು ಭಾಷ್ಯ ಬರೆಯುತ್ತಿದ್ದಾರೆ.

ಸಾಫ್ಟವೇರ್ ಕ್ಷೇತ್ರದ ಇಂದಿನ ತಳಮಳವನ್ನು ಕಂಪನಿಗಳ ಸ್ವಯಂಕೃತ ಅಪರಾಧ ಎಂದು ಧಾರಾಳವಾಗಿ ಹೇಳಬಹುದು. ತನ್ನ ಸಿಬ್ಬಂದಿಯ ವೇತನ, ಸೌಲಭ್ಯವನ್ನು ನಿಗದಿ ಮಾಡುವಾಗ ಅದು ಇನ್ನಿತರ ರಂಗಗಳಲ್ಲಿಯ ವೇತನ ಸೌಲಭ್ಯವನ್ನು ಪರಿಗಣನೆಗೆ ತೆಗೆದುಕೊಂಡಂತೆ ಕಾಣುವುದಿಲ್ಲ.

ಜಗತ್ತಿನಲ್ಲಿ ಯಾರೂ ಮಾಡದ, ತೋರದ ಕೆಲಸ ಮತ್ತು ನೈಪುಣ್ಯವನ್ನು ಟೆಕ್ಕಿಗಳು ಮಾಡುತ್ತಾರೆ ಎನ್ನುವ ಭ್ರಮಾಲೋಕವನ್ನು ಸೃಷ್ಟಿಸಲಾಯಿತು ಮತ್ತು ಆರಂಭದ ಹಂತದಲ್ಲಿಯೇ ಐದಂಕಿ ವೇತನ ನೀಡಲಾಯಿತು. ಮುಂಬರಲಿರುವ ಪರಿಣಾಮವನ್ನು ಯಾರೂ ಯೋಚಿಸುವ ಪ್ರಯತ್ನ ಮಾಡಲಿಲ್ಲ. ಟೆಕ್ಕಿಗಳು ಕೂಡ ಇಂಥ ಒಳ್ಳೆಯ ಪರಿಸ್ಥಿತಿಯೇ ಯಾವಾಗಲೂ ಇರುತ್ತದೆ ಎಂದು ಬಲವಾಗಿ ನಂಬಿದ್ದರು.

ಬದಲಾವಣೆಯ ಸಾಧ್ಯತೆಯನ್ನು ಎಂದೂ ಚಿಂತಿಸಲಿಲ್ಲ. ಆರಂಭದ ದಿನಗಳಲ್ಲಿ ಸಾಫ್ಟ್‌ವೇರ್ ಬಿಜಿನೆಸ್‌ನಲ್ಲಿ ಪೂರೈಕೆ ಕಡಿಮೆ ಇದ್ದು, ಬೇಡಿಕೆ ಹೆಚ್ಚಾಗಿತ್ತು. ಹಾಗೆಯೇ ವ್ಯವಹಾರದಲ್ಲಿ ಬೇರೆ ಉದ್ಯಮದವರು ಹೊಟ್ಟೆ ಕಿಚ್ಚು ಪಡುವಷ್ಟು ಮಾರ್ಜಿನ್ ಕೂಡಾ ಇತ್ತು.

ದಿನಗಳು ಕಳೆದಂತೆ ಪೂರೈಸುವ ಕಂಪನಿಗಳು ನಾಯಿಕೊಡೆಗಳಂತೆ ಹೆಚ್ಚಿ, ಬೇಡಿಕೆ ಕಡಿಮೆಯಾಗಿ ಮಾರ್ಜಿನ್ ಕಡಿಮೆಯಾಯಿತು. ಅದೇ ರೀತಿ ನಿರ್ವಹಣಾ ವೆಚ್ಚ ಕಡಿಮೆಯಾಗಲಿಲ್ಲ.

ಒಂದು ಟೆಕ್ ಕಂಪನಿಯ ಮುಖ್ಯಸ್ಥನ ವಾರ್ಷಿಕ ಸಂಬಳ 67 ಕೋಟಿ ಎಂದರೆ, ಬಹುತೇಕ ಟೆಕ್ಕಿಗಳ ಸಂಬಳದ ಗಾತ್ರದ ಪರಿಚಯವಾಗಬಹುದು. ಈ ಸಂಬಳ ಸೌಲಭ್ಯಗಳಿಗೆ ಜೀವನ ಚಕ್ರವನ್ನು ಹೊಂದಿಸಿಕೊಂಡವರು, ಎಲ್ಲೂ ಕೆಲಸ ಪಡೆಯದೆ, ಅಥವಾ ಕಡಿಮೆ ಸಂಬಳಕ್ಕೆ ಒಪ್ಪಿಕೊಳ್ಳದೆ ಜೀವನ ರಥ ಓಡಿಸಬಹುದೇ ಎನ್ನುವುದು ಮುಖ್ಯಪ್ರಶ್ನೆ. ಇದೇ ಅವರ ದುಃಸ್ವಪ್ನದ ಹಿಂದಿನ ವ್ಯಾಕುಲತೆ.

ಕೆಲವರಿಗೆ ಪಿಂಕ್ ಸ್ಲಿಪ್ ಕೊಡಲು ಸಿಬ್ಬಂದಿಯ ಪಟ್ಟಿ ತಯಾರಿಸುವಂತೆ ಕಂಪನಿಯೊಂದರ ಮುಖ್ಯಸ್ಥರು ಮಾನವ ಸಂಪನ್ಮೂಲ ಅಧಿಕಾರಿ (ಎಚ್‌ಆರ್)ಗೆ ಹೇಳಿದಾಗ, ಯಾರನ್ನು ಮನೆಗೆ ಕಳಿಸುವುದು ಎಂದು ಸುಲಭಕ್ಕೆ ನಿರ್ಣಯಿಸಲಾಗದೆ ವಾರಗಟ್ಟಲೆ ಸಂದಿಗ್ಧದಲ್ಲಿ ಒದ್ದಾಡಿದ್ದರಂತೆ. ಒಬ್ಬರ ಅನ್ನ ಕಸಿಯುವಾಗ ಅನುಭವಿಸುವ ಪಾಪ ಪ್ರಜ್ಞೆ ಊಹೆಗೆ ನಿಲುಕದ್ದು!

ಗಣಕೀಕರಣ ಅಥವಾ ಸಾಫ್ಟವೇರ್ ಮೂಲಕ ಬ್ಯಾಂಕ್, ವಿಮಾ, ರೈಲ್ವೆ ಹೀಗೆ ಸಾವಿರಾರು ಇಲಾಖೆಗಳಲ್ಲಿ ಕೋಟ್ಯಂತರ ಉದ್ಯೋಗಿಗಳ ಬದುಕಿನ ಆಸರೆಯನ್ನು ಕಸಿದುಕೊಂಡ ಸಾಫ್ಟವೇರ್ ಉಧ್ಯಮ ಅದೇ ತಂತ್ರಜ್ಞಾನಕ್ಕೇ ಬಲಿಯಾಗುತ್ತಿರುವದು, ಆಧುನಿಕ ಜಗತ್ತಿನ ಒಂದು ಮಹಾ ವಿಪರ್ಯಾಸ ಎನ್ನಬಹುದು.

ಹಾಗೆಯೇ ತಮ್ಮ ಬೇಡಿಕೆಗಳಿಗೆ, ವೇತನ ಹೆಚ್ಚಳಕ್ಕೆ, ಸೌಲಭ್ಯಗಳಿಗೆ ಮತ್ತು ಉದ್ಯೋಗ ಸ್ಥಿರತೆಗಾಗಿ ಸದಾ ತಮ್ಮ ಕಾರ್ಯಾಲಯದ ದ್ವಾರದ ಮುಂದೆ ಕೆಂಪು ಬಾವುಟದಡಿಯಲ್ಲಿ ಮುಷ್ಟಿ ಎತ್ತಿ, ಕುತ್ತಿಗೆ ನರ ಉಬ್ಬಿಸಿ ಘೋಷಣೆ ಕೂಗುವ ದುಡಿಯುವ ವರ್ಗವನ್ನು ಆಶ್ಚರ್ಯದಿಂದ ನೋಡುತ್ತಿದ್ದ ಟೆಕ್ಕಿಗಳು ಮುಂದಿನ ದಿನಗಳಲ್ಲಿ ಅವರಿಗೆ ಕೈ ಜೋಡಿಸುವ ಮತ್ತು ಅವರೊಂದಿಗೆ ಧ್ವನಿಗೂಡಿಸುವ ಕಾಲ ಬಂದಿದ್ದು ಇನ್ನೊಂದು ವಿಪರ್ಯಾಸ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶಾಕಿಂಗ್ ನ್ಯೂಸ್ ಪೀಣ್ಯದ 10 ಸಾವಿರ ಕೈಗಾರಿಕೆಗಳು ಕ್ಲೋಸ್, 15 ಲಕ್ಷ ಕಾರ್ಮಿಕರು ಬೀದಿಗೆ,..ಇದಕ್ಕೆ ಕಾರಣವಾದರು ಏನು..?

    ಬೆಂಗಳೂರು: ಸಿಲಿಕಾನ್ ಸಿಟಿ ಉದ್ಯೋಗಿಗಳಿಗೆ ಇದು ನಿಜಕ್ಕೂ ಶಾಕಿಂಗ್ ನ್ಯೂಸ್. ಏಷ್ಯಾದಲ್ಲೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ ಎಂದು ಪ್ರಸಿದ್ಧಿ ಪಡೆದಿದ್ದ ಪೀಣ್ಯ ಕೈಗಾರಿಕಾ ಪ್ರದೇಶದ 10 ಸಾವಿರ ಕೈಗಾರಿಕೆಗಳು ಮುಚ್ಚುವ ಸ್ಥಿತಿ ನಿರ್ಮಾಣವಾಗಿದ್ದು, 15 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಬೀದಿಗೆ ಬೀಳುವ ಸಾಧ್ಯತೆಯಿದೆ. ಮಾಹಿತಿ ತಂತ್ರಜ್ಞಾನ ಆಗಮಿಸದ 80,90ರ ದಶಕದಲ್ಲಿ ರಾಜ್ಯದ ಮೂಲೆ ಮೂಲೆಗಳಲ್ಲದೆ, ದೇಶದ ವಿವಿಧ ಭಾಗಗಳಿಂದ ಉದ್ಯೋಗ ಆರಿಸಿ ಬೆಂಗಳೂರಿಗೆ ಬರುತ್ತಿದ್ದರು. ಅವರೆಲ್ಲರಿಗೂ ಪೀಣ್ಯ ಕೈಗಾರಿಕಾ ಪ್ರದೇಶ ಆಸರೆಯಾಗಿತ್ತು. ಆರ್ಥಿಕ ಹಿಂಜರಿತದ ಎಫೆಕ್ಟ್​…

  • ಆರೋಗ್ಯ

    ನೀವು ಸುಂದರವಾಗಿ ಕಾಣಬೇಕು ಅಂದ್ರೆ ಸಿಕ್ಕಾಪಟ್ಟೆ ಹಣ ಖರ್ಚು ಮಾಡಬೇಡಿ ಈ ಪರಂಗಿ ಹಣ್ಣು ಬಳಸಿ ನೋಡಿ..!

    ಹೌದು ಇವತ್ತಿನ ದಿನಗಳಲ್ಲಿ ನಾನು ಸುಂದರವಾಗಿ ಕಾಣಬೇಕು ಅಂತ ಸಿಕ್ಕಾಪಟ್ಟೆ ಹಣ ಖರ್ಚು ಮಾಡಿ ಇರೋ ಬಾರೋ ಮೇಕಪ್ ಕ್ರೀಮ್ ಬಳಸುತ್ತಾರೆ ಆದ್ರೂ ಅವರು ಮೊದಲಿನ ಹಾಗೆ ಇರುತ್ತಾರೆ. ಆದ್ರೆ ಈ ಪರಂಗಿ ಹಣ್ಣಿನಲ್ಲಿರುವ ಗುಣಗಳು ನಿಮ್ಮನ್ನು ಯಾವ ರೀತಿ ಕಾಣುವಂತೆ ಮಾಡುತ್ತೆ ಅನ್ನೋದು ಇಲ್ಲಿದೆ ನೋಡಿ. ಪರಂಗಿ ಹಣ್ಣನ್ನು ರುಬ್ಬಿ. ಅದರ ಮಿಶ್ರಣವನ್ನು ಪ್ರತಿನಿತ್ಯಾ ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿ ಹೊಳಪು ಬರುತ್ತದೆ. ಪರಂಗಿ ಹಣ್ಣಿನ ತಿರುಳನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಜೇನುತುಪ್ಪ ಹಾಕಿ ಇದನ್ನು ಫೇಸ್…

  • ಗ್ಯಾಜೆಟ್

    ಈ ಫೋನ್ ಗಳಲ್ಲಿ ಹೊಸ ವರ್ಷಕ್ಕೆ ಕೊನೆಗೊಳ್ಳಲಿದೆ ವಾಟ್ಸಾಪ್ ಸೇವೆ..!ತಿಳಿಯಲು ಈ ಲೇಖನ ಓದಿ..

    ಅಂತರ್ಜಾಲ ಬಳಕೆ ಹೆಚ್ಚಾದಂತೆ ಸಾಮಾಜಿಕ ಜಾಲತಾಣಗಳ ಬಳಕೆ ಕೂಡ ಜಾಸ್ತಿಯಾಗಿದೆ. ಜನಪ್ರಿಯ ಜಾಲತಾಣವಾಗಿರುವ ವಾಟ್ಸಾಪ್ ಡಿಸೆಂಬರ್ 31 ರಿಂದ ಕೆಲವು ಸ್ಮಾರ್ಟ್ ಫೋನ್ ಗಳಲ್ಲಿ ಕಾರ್ಯ ನಿರ್ವಹಿಸುವುದನ್ನು ಸ್ಥಗಿತಗೊಳಿಸಲಿದೆ.

  • Histrocial, inspirational, karnataka

    ನೆಲ್ಲಿತೀರ್ಥ ಗುಹಾಲಯ ಮಂದಿರಾ – ಮಂಡೀ ಉರೀ ಶಿವನ ದರ್ಶನ

    ನೆಲ್ಲಿತೀರ್ಥ ಗುಹಾಲಯ ಮಂದಿರಾ ಇರುವುದು  ಮಂಗಳೂರು  ಕಟೀಲ್  ದುರ್ಗಾ  ಪರಮೇಶವರೀ  ದೇವಸ್ಥಾನ  ಮೂಡಬಿದ್ರಿ. ಸುಮಾರು  ೫ ಕೆ.ಮ್ ಅಷ್ಟು  ದೂರದಲೇ  ಇರುವುಧು ಈ  ಮಂದಿರ. ಇತೀಹಾಸ : ಸುಮಾರು  ೧೪೮೭ ಇತೀಹಾಸವೀರುವ  ಗುಹಾಲಯದಲೇ ಶಿವನ  ಲಿಂಗ  ಇರುವುಧು.  ೬೬೦ ಅಡೀ  ಉದ್ದಾ  ಹಾಗೂ  ೨ ಅಡೀ ಯಥರ  ಇರುವ  ಗುಹೆಯ್ಯ್ಯ ಲೀ  ಭಕತದೀಗಳು ಮಂಡೀ ಉರೀ ದರ್ಶನವನ್ನು ಪಡಯ  ಬೇಕು . ಗುಹೆಯ್ಯ್ಯ ಲೀ  ನೀರುಹರಿಯುತದೆ.ಇಲೆಯೇ ನೆಲ್ಲಿಯಾ ಗಾತ್ರಧಲೀ ಹನೀ ಹನೀಯಾಗೀ ನೀರು ಬೀಳುತದೆ. ಹಾಗಾಗೀ  ಈ …

  • ತಂತ್ರಜ್ಞಾನ

    ಪಾಡ್ ಕಾರ್ ಸೇವೆ ಈಗ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶೀಘ್ರದಲ್ಲೇ ಆರಂಭ..!ತಿಳಿಯಲು ಈ ಲೇಖನಓದಿ…

    ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಸಮಸ್ಯೆ ಹೆಚ್ಚುತ್ತಲೇ ಇದೆ. ಈ ನಡುವೆ ಹೊಸ ಹೊಸ ಸಾರಿಗೆ ವ್ಯವಸ್ಥೆಗಳನ್ನು ಪರಿಚಯಿಸಿದ್ರು ಟ್ರಾಫಿಕ್ ಸಮಸ್ಯೆ ಮಾತ್ರ ಯಾವುದೇ ಕಾರಣಕ್ಕೂ ಕಡಿಮೆಯಾಗುತ್ತಿಲ್ಲ.

  • ಸುದ್ದಿ

    ಮತ್ತೆ ಮಂಡ್ಯದಲ್ಲಿ ಜೋಡೆತ್ತುಗಳ ಅಬ್ಬರ: ಸುಮಲತಾ ಅವರ ಮುಂದಿನ ಪ್ಲಾನ್ ಏನು?

    ಮಂಡ್ಯ ಚುನಾವಣೆ ಮುಗಿದಿದೆ. ಸುಮಲತಾ ಅಂಬರೀಶ್ ಮಂಡ್ಯದ ನೂತನ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಜೋಡೆತ್ತುಗಳಾಗಿ ಸುಮಲತಾ ಅವರ ‘ವಿಜಯದ ಬಂಡಿ’ ಎಳೆದ ದರ್ಶನ್ ಮತ್ತು ಯಶ್ ಮಂಡ್ಯದ ಜನರಿಗೆ ಹೃದಯಪೂರ್ವಕವಾಗಿ ಧನ್ಯವಾದ ಹೇಳಿದರು. ಫಲಿತಾಂಶದ ನಂತರ ಮಂಡ್ಯದಲ್ಲಿ ಆಯೋಜಿಸಿದ್ದ ‘ಸ್ವಾಭಿಮಾನದ ವಿಜಯೋತ್ಸವ’ ಸಮಾರಂಭದಲ್ಲಿ ಸುಮಲತಾ, ದರ್ಶನ್, ಯಶ್ ಎಲ್ಲರೂ ಪಾಲ್ಗೊಂಡು ತಲೆ ಬಾಗಿ ನಮಸ್ಕರಿಸಿದರು. ಇದಾದ ಬಳಿಕವೂ ಜೋಡೆತ್ತುಗಳು ಮಂಡ್ಯದಲ್ಲಿ ಕಾಣಿಸಿಕೊಳ್ತಾರಾ ಎಂಬ ಅನುಮಾನಗಳು, ಪ್ರಶ್ನೆಗಳು ಕೇಳುತ್ತಲೇ ಇದೆ. 200 ಹಳ್ಳಿಗಳಿಗೂ ದರ್ಶನ್-ಯಶ್ ಭೇಟಿ ಸುಮಲತಾ ಪರ ಪ್ರಚಾರ…