News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

ಸಿಲಿಕಾನ್ ಸಿಟಿ ಜನರೆ ಹುಷಾರ್ ದಟ್ಟಣೆ ತಟ್ಟಲಿದೆ ಬಿಸಿ ; ರಸ್ತೆಗಿಳಿಯುವ ಮುನ್ನ ಎಚ್ಚರ..ಎಚ್ಚರ…..!

47

ಸಿಲಿಕಾನ್ ಸಿಟಿ ಜನರಿಗೆ ಇಂದು ಸಂಚಾರ ದಟ್ಟಣೆ ಬಿಸಿ ತಟ್ಟಲಿದೆ. ನೆರೆ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ. ಜೆಡಿಎಸ್ ಕಚೇರಿಯಿಂದ ಫ್ರೀಡಂ ಪಾರ್ಕ್ ವರೆಗೆ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಕೂಡಲೇ ನೆರೆ ಪರಿಹಾರ ಹಣ ಬಿಡುಗಡೆಗೆ ಅಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ರೈತ ಮುಖಂಡ ಕೊಡಿಹಳ್ಳಿ ಚಂದ್ರಶೇಖರ ಅವರು ಹೇಳಿದ್ದು, ಇವರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಆರಂಭವಾಗಲಿದೆ. ಸುಮಾರು 10 ಸಾವಿರಕ್ಕೂ ಹೆಚ್ಚು ರೈತರು ಈ ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ರೈತ ಸಂಘಟನೆಗಳ ವತಿಯಿಂದ ರೈಲು ನಿಲ್ದಾಣದಿಂದ ವಿಧಾನಸೌಧದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದು, ಬೆಂಗಳೂರಿನ ಹೃದಯ ಭಾಗಗಳಾದ ಮೆಜೆಸ್ಟಿಕ್, ಮಲ್ಲೇಶ್ವರಂ, ರೇಸ್ ಕೋರ್ಸ್ ರಸ್ತೆ, ಕೆಜಿ ರಸ್ತೆ, ಕಾರ್ಪೋರೇಷನ್ ಬಳಿ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಇದೆ.

ರೈತರ ಪ್ರತಿಭಟನೆ ಮತ್ತು ಜೆಡಿಎಸ್ ಪ್ರತಿಭಟನೆ ನಡೆಯಲಿರುವ ಹಿನ್ನಲೆಯಲ್ಲಿ ಭದ್ರತೆಗಾಗಿ ಸಿಆರ್ಪಿಎಫ್ ತುಕಡಿ ಮತ್ತು ಪೊಲೀಸರನ್ನು ನಿಯೋಜಿಸಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ರೈತರು ಬೆಂಗಳೂರಿಗೆ ಆಗಮಿಸುತ್ತಿದ್ದು, ಈ ವಿಧಾನಸೌಧ ಸುತ್ತಮುತ್ತ ಹಾಗೂ ಶೇಷಾದ್ರಿಪುರಂ ಬಳಿ ಹೆಚ್ಚು ಟ್ರಾಫಿಕ್ ಜಾಮ್ ಆಗುವ ಸಾಧ್ಯತೆ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ