ಆರೋಗ್ಯ

‘ಸೀತಾಫಲ’ದಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

618

ಸೀತಾಫಲ… ಈ ಕಾಲದಲ್ಲಿ ನಮಗೆ ಲಭಿಸುವ ಹಣ್ಣುಗಳಲ್ಲಿ ಇದೂ ಒಂದು. ಇದರಲ್ಲಿ ವಿಟಮಿನ್ ಎ, ಮೆಗ್ನಿಷಿಯಮ್, ಪೊಟ್ಯಾಷಿಯಂ, ಫೈಬರ್, ವಿಟಮಿನ್ ಬಿ6, ಕ್ಯಾಲ್ಸಿಯಂ,ವಿಟಮಿನ್ ಸಿ, ಐರನ್‌ನಂತಹ ಅತ್ಯಂತ ಮುಖ್ಯವಾದ ಪೋಷಕಗಳು ಅದೆಷ್ಟೋ ಇವೆ. ಇದನ್ನು ನಿತ್ಯ ನಾವು ಆಹಾರದ ಭಾಗವಾಗಿ ತಿನ್ನುವುದರಿಂದ ನಮಗೆ ಅದೆಷ್ಟೋ ವಿಧದ ಅನಾರೋಗ್ಯಗಳು ದೂರವಾಗುತ್ತವೆ. ಸೀತಾಫಲವಷ್ಟೇ ಅಲ್ಲ ಇದರ ಎಲೆಗಳು, ತೊಗಟೆ, ಬೇರು… ಹೀಗೆ ಎಲ್ಲಾ ಭಾಗಗಳು ನಮಗೆ ಸಾಕಷ್ಟು ಉಪಯುಕ್ತ.

ಸೀತಾಫಲ  ಲಾಭಗಳ:-

  • ದೇಹದ ಮೇಲೆ ಬೆವರಿನ ಗುಳ್ಳೆಗಳಾದರೆ ಸೀತಾಫಲ ಎಲೆಗಳನ್ನು ತೆಗೆದುಕೊಂಡು, ಅರೆದು ಆ ಮಿಶ್ರಣವನ್ನು ಕಟ್ಟಬೇಕು. ಇದರಿಂದ ಬೆವರಿನ ಗುಳ್ಳೆಗಳ ಸಮಸ್ಯೆ ನಿವಾರಣೆಯಾಗುತ್ತದೆ.
  • ಸೀತಾಫಲದ ಎಲೆಗಳಿಂದ ತೆಗೆದ ರಸವನ್ನು ನಿತ್ಯ ಬೆಳಗ್ಗೆ ಒಂದು ಟೀಸ್ಫೂನ್ ಪ್ರಮಾಣದಲ್ಲಿ ಕುಡಿಯುತ್ತಿದ್ದರೆ ಮಹುಮೇಹ ನಿಯಂತ್ರಣಕ್ಕೆ ಬರುತ್ತದೆ. ಅಷ್ಟೇ ಅಲ್ಲದೆ ತೂಕ ಸಹ ಕಡಿಮೆಯಾಗುತ್ತಾರೆ.

  • ಸೀತಾಫಲದ ಗಿಡದಿಂದ ತೆಗೆದ ತೊಗಟೆಯನ್ನು ನೀರಿನಲ್ಲಿ ಹಾಕಿ ಅದರಿಂದ ಕಷಾಯ ಮಾಡಿಕೊಂಡು ಕುಡಿದರೆ ಡಯೇರಿಯಾದಂತಹ ಅನಾರೋಗ್ಯ ಸಮಸ್ಯೆಗಳು ನಿವಾರಣೆಯಾಗುತ್ತವೆ.
  • ಸೀತಾಫಲ ಎಲೆಗಳನ್ನು ನೀರಿನಲ್ಲಿ ಹಾಕಿ ಕಷಾಯ ಮಾಡಿಕೊಂಡು ಕುಡಿದರೆ ನೆಗಡಿ ಕಡಿಮೆಯಾಗುತ್ತದೆ.ವಿಟಮಿನ್ ಎ ಹೆಚ್ಚಾಗಿ ಇರುವುದರಿಂದ ಕಣ್ಣಿನ ರೋಗಗಳು ನಿವಾರಣೆಯಾಗುತ್ತವೆ. ದೃಷ್ಟಿ ಸಮಸ್ಯೆಗಳು ದೂರವಾಗುತ್ತವೆ.

 

  • ಸೀತಾಫಲದಲ್ಲಿರುವ ಮೆಗ್ನಿಷಿಯಂ ಹೃದಯ ಕಾಯಿಲೆಗಳು ಬರದಂತೆ ತಡೆಯುತ್ತದೆ. ಇವುಗಳಲ್ಲಿ ಇರುವ ಪೋಷಕಗಳು ದೇಹದಲ್ಲಿ ಸೇರಿಕೊಂಡ ಕೊಬ್ಬನ್ನು ಕರಗಿಸುತ್ತದೆ.
  • ಸೀತಾಫಲವನ್ನು ನಿತ್ಯ ಸೇವಿಸಿದರೆ ಹೊಟ್ಟೆಯಲ್ಲಿರುವ ಜಂತುಹುಳುಗಳ ಸಾಯುತ್ತವೆ. ಅಲ್ಸರ್ ನಿವಾರಣೆಯಾಗುತ್ತದೆ. ಗ್ಯಾಸ್, ಅಸಿಡಿಟಿ, ಅಜೀರ್ಣ, ಮಲಬದ್ಧತೆಯಂತಹ ಜೀರ್ಣ ಸಂಬಂಧಿ ಸಮಸ್ಯೆಗಳು ಗುಣವಾಗುತ್ತವೆ.

  • ರಕ್ತ ಕಡಿಮೆ ಇರುವವರು ಸೀತಾಫಲ ತಿನ್ನುವುದು ಉತ್ತಮ. ಇದರಿಂದ ರಕ್ತ ಹೆಚ್ಚುತ್ತದೆ.
  • ದೇಹ ತುಂಬಾ ಬಿಸಿಯಾಗಿರುವವರು ಸೀತಾಫಲವನ್ನು ತಿಂದರೆ ಕೂಡಲೆ ಉಷ್ಣತೆಯಿಂದ ಉಪಶಮನ ಪಡೆಯಬಹುದು.
  • ಸೀತಾಫಲದ ತಿರುಳನ್ನು ತೆಗೆದುಕೊಂಡು ರಸದಂತೆ ಮಾಡಿ ಅದಕ್ಕೆ ಹಾಲು ಬೆರೆಸಿ ಮಕ್ಕಳಿಗೆ ಕುಡಿಸಬೇಕು. ಇದರಿಂದ ಅವರಿಗೆ ಶಕ್ತಿ ಲಭಿಸುತ್ತದೆ.
  • ಸೀತಾಫಲ ಎಲೆಗಳನ್ನು ನುಣ್ಣಗೆ ಅರೆದು ಹಚ್ಚಿಕೊಂಡರೆ ಗಾಯಗಳು, ಕಜ್ಜಿ, ಗಜಕರ್ಣದಂತಹ ಸಮಸ್ಯೆಗಳು ನಿವಾರಣೆಯಾಗುತ್ತದೆ.
  • ಇವುಗಳ ಎಲೆಗಳನ್ನು ನುಣ್ಣಗೆ ಅರೆದು ಬೋರಿಕ್ ಪೌಡರ್ ಬೆರೆಸಿ ಮಂಚ, ಕುರ್ಚಿಗಳ ಮೂಲೆಗಳಲ್ಲಿ ಇಟ್ಟರೆ ತಿಗಣೆ ಸಮಸ್ಯೆ ಇರಲ್ಲ.

  • ಸೀತಾಫಲವನ್ನು ಅತಿಯಾಗಿ ಒಮ್ಮೆಲೆ ತಿನ್ನಬಾರದು. ಇದರಿಂದ ಹೊಟ್ಟೆಯಲ್ಲಿ ಉರಿ, ಉಬ್ಬಸ ಉಂಟಾಗುತ್ತದೆ. ಅಂತಹ ಸಂದರ್ಭದಲ್ಲಿ ಬಿಸಿ ನೀರು ಕುಡಿದರು, ಅರ್ಧ ಸ್ಫೂನು ಓಂಕಾಳು ಅಥವಾ ಸ್ವಲ್ಪ ಉಪ್ಪು ಜಗಿದರೂ ಫಲಿತಾಂಶ ಇರುತ್ತದೆ. ಅದೇ ರೀತಿ ಮಧುಮೇಹ ಇರುವವರು, ಸ್ಥೂಲಕಾಯ ಸಮಸ್ಯೆ ಇರುವವರು ಈ ಹಣ್ಣನ್ನು ವೈದ್ಯರ ಸಲಹೆ ಮೇರೆಗೆ ತಿನ್ನಬೇಕು. ಇಲ್ಲದಿದ್ದರೆ ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿರುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಸಂವಾದ ನಡೆಸಿ ಮಾದರಿಯಾದ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು..

    ಚುನಾಯಿತರಾದ ಶಾಸಕರು ತಮ್ಮ ತಮ್ಮ ಕ್ಷೇತ್ರಕ್ಕೆ ಎಷ್ಟರ ಮಟ್ಟಿಗೆ ಭೇಟಿ ನೀಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ.. ಆದರೆ ಇಲ್ಲೊಬ್ಬರು ಶಾಸಕರಿದ್ದಾರೆ.. ತಮ್ಮ ಕ್ಷೇತ್ರದ ಜನರ ಜೊತೆ ಸಾಮಾನ್ಯ ಜನರಂತೆ ಬೆರೆತು ಕ್ಷೇತ್ರದ ಹಾಗು ಹೋಗುಗಳ ಬಗ್ಗೆ ಸ್ವತಃ ತಾವೇ ಖುದ್ದಾಗಿ ವಿಚಾರಿಸುತ್ತಿರುತ್ತಾರೆ.. ಹೌದು ಇವರು ಮತ್ಯಾರು ಅಲ್ಲ ಅಭಿವೃದ್ಧಿ ಹೊಂದಿದ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು.. ಈಗಾಗಲೇ ಪ್ರತಿಭೆಗಳಿಗಾಗಿ ತಮ್ಮ ಕ್ಷೇತ್ರದಲ್ಲಿ ಮಾಡಿಕೊಟ್ಟಿರುವ ಅನುಕೂಲಗಳು ಲೆಕ್ಕವಿಲ್ಲ.. ಶಾಸಕರ ಅನುದಾನ…

  • ಸುದ್ದಿ

    ಸೋತ ನಂತರ ಮದ್ಯ ಸೇವಿಸಿ ನಿಖಿಲ್ ರಂಪಾಟ, ಬಯಲಾಯ್ತು ಸುದ್ದಿಯ ಅಸಲಿಯತ್ತು…!

    ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ಧ ಪರಾಭವಗೊಂಡ ಸಿಎಂ ಪುತ್ರ ನಿಖಿಲ್ ಕುಮಾರ್ ಬೇಸರದಲ್ಲಿ ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಸುದ್ದಿಯಾಗಿದ್ದು, ಆದರೆ ಇದು ಸುಳ್ಳು ಸುದ್ದಿ ಎಂದು ಹೇಳಲಾಗಿದೆ. ನಿಖಿಲ್ ಸೋತ ನಂತರ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ತೆರಳಿ ಕೂಗಾಡಿದ್ದಾರೆ. ಅಲ್ಲದೆ, ಮೈಸೂರಿನ ಹೋಟೆಲ್ ನಲ್ಲಿ ತಂಗಿದ್ದ ಅವರು ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಇದು ಸುಳ್ಳು ಸುದ್ದಿ ಎನ್ನುವುದು ಗೊತ್ತಾಗಿದೆ….

  • inspirational

    ಹೃದಯಾಘಾತ ( Heart attack ) ತಪ್ಪಿಸಲು ಇಲ್ಲಿವೆ ಸಿಂಪಲ್ ಟಿಪ್ಸ್

    ಚಳಿಗೂ ಹಾರ್ಟ್ ಅಟ್ಯಾಕ್‌ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್‌ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ. ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ…

  • ಗ್ಯಾಜೆಟ್

    ಇನ್ನು ಮುಂದೆ ಸಮುದ್ರದಾಳದಲ್ಲಿ ಕೂಡ ಫೋನ್ ಮಾಡಬಹುದು!!!

    ಸರ್ಕಾರಿ ಒಡೆತನದ ಬಿಎಸ್ಎನ್‌ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.

  • ಸಿನಿಮಾ

    ಟಾಲಿವುಡ್ ಸ್ಟಾರ್ ಮಹೇಶ್ ಬಾಬು ಚಿತ್ರದ ಆಫರ್ ತಿರಸ್ಕರಿಸಿದ ರಿಯಲ್ ಸ್ಟಾರ್?ಈ ಸುದ್ದಿ ನೋಡಿ

    ತಮ್ಮ ಪ್ರಜಾಕೀಯ ಪಕ್ಷದ ಮೂಲಕ ಲೋಕಸಭಾ ಚುನಾವಣಾ ಸಮರಕ್ಕೆ ಸಿದ್ಧರಾಗಿರುವ ನಟ ರಿಯಲ್ ಸ್ಟಾರ್ ಉಪೇಂದ್ರ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಬಹು ನಿರೀಕ್ಷಿತ ಚಿತ್ರದ ಆಫರ್ ಗೆ ನೋ ಎಂದು ಹೇಳಿದ್ದಾರೆ. ಹೌದು.. ಪ್ರಸ್ತುತ ಪ್ರಜಾಕೀಯದಲ್ಲಿ ಬಿಸಿಯಾಗಿರುವ ನಟ ಉಪೇಂದ್ರ ಚಿತ್ರೀಕರಣಕ್ಕೆ ತಾತ್ಕಾಲಿಕ ವಿರಾಮ ಹಾಕಿದ್ದು, ಇದೇ ಕಾರಣಕ್ಕೆ ತಮ್ಮದೇ ಚಿತ್ರಗಳನ್ನು ಮುಂದೂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಪ್ರಜಾಕೀಯದತ್ತ ಗಮನ ಕೇಂದ್ರೀಕರಿಸುವ ನಟ ಉಪೇಂದ್ರ ತೆಲುಗಿನ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ನೂತನ…

  • ಉಪಯುಕ್ತ ಮಾಹಿತಿ, ಜ್ಯೋತಿಷ್ಯ

    ಹರಿದ ಬಟ್ಟೆ, ಜೀನ್ಸ್ ತೊಡೋದರಿಂದ ಏನಾಗುತ್ತೆ ಗೊತ್ತಾ?

    ಈವರೆಗೆ ವಾಸ್ತುವಿಗೆ ಸಂಬಂಧಿಸಿದಂತೆ ಅನೇಕ ವಿಷಯಗಳನ್ನು ಹೇಳಿದ್ದೇವೆ. ಫೆಂಗ್ ಶೂಯಿಯಲ್ಲಿ ಯಾವ ವಸ್ತು ಮನೆಯಲ್ಲಿದ್ದರೆ ಶುಭ ಹಾಗೆ ಯಾವ ಜಾಗದಲ್ಲಿ ಯಾವ ವಸ್ತು ಇರಬೇಕು ಎಂಬೆಲ್ಲ ವಿಷಯಗಳನ್ನು ಹೇಳಲಾಗಿದೆ. ಇದ್ರ ಜೊತೆಗೆ ಫೆಂಗ್ ಶೂಯಿಯಲ್ಲಿ ಬಟ್ಟೆಗೂ ಮಹತ್ವ ನೀಡಲಾಗಿದೆ.  ಯಾವ ಬಟ್ಟೆ ಧರಿಸ್ತೇವೆ ಹಾಗೆ ಬಟ್ಟೆಯನ್ನು ಹೇಗೆ ಬಳಸ್ತೇವೆ ಎಂಬುದು ಫೆಂಗ್ ಶೂಯಿಯಲ್ಲಿ ಮಹತ್ವ ಪಡೆದಿದೆ. ನೀವು ಧರಿಸುವ ಬಟ್ಟೆ ನಿಮ್ಮ ಸೌಂದರ್ಯವನ್ನು ಹೆಚ್ಚಿಸಬಹುದು. ಆದ್ರೆ ಇದೇ ಬಟ್ಟೆ ನಿಮ್ಮ ದುರಾದೃಷ್ಟಕ್ಕೆ ಕಾರಣವಾಗಬಹುದು. ಮನೆಯಿಂದ ಹೊರ ಹೋಗುವಾಗಲ್ಲ…