News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

‘ಸೀತಾಫಲ’ದಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

640

ಸೀತಾಫಲ… ಈ ಕಾಲದಲ್ಲಿ ನಮಗೆ ಲಭಿಸುವ ಹಣ್ಣುಗಳಲ್ಲಿ ಇದೂ ಒಂದು. ಇದರಲ್ಲಿ ವಿಟಮಿನ್ ಎ, ಮೆಗ್ನಿಷಿಯಮ್, ಪೊಟ್ಯಾಷಿಯಂ, ಫೈಬರ್, ವಿಟಮಿನ್ ಬಿ6, ಕ್ಯಾಲ್ಸಿಯಂ,ವಿಟಮಿನ್ ಸಿ, ಐರನ್‌ನಂತಹ ಅತ್ಯಂತ ಮುಖ್ಯವಾದ ಪೋಷಕಗಳು ಅದೆಷ್ಟೋ ಇವೆ. ಇದನ್ನು ನಿತ್ಯ ನಾವು ಆಹಾರದ ಭಾಗವಾಗಿ ತಿನ್ನುವುದರಿಂದ ನಮಗೆ ಅದೆಷ್ಟೋ ವಿಧದ ಅನಾರೋಗ್ಯಗಳು ದೂರವಾಗುತ್ತವೆ. ಸೀತಾಫಲವಷ್ಟೇ ಅಲ್ಲ ಇದರ ಎಲೆಗಳು, ತೊಗಟೆ, ಬೇರು… ಹೀಗೆ ಎಲ್ಲಾ ಭಾಗಗಳು ನಮಗೆ ಸಾಕಷ್ಟು ಉಪಯುಕ್ತ.

ಸೀತಾಫಲ  ಲಾಭಗಳ:-

  • ದೇಹದ ಮೇಲೆ ಬೆವರಿನ ಗುಳ್ಳೆಗಳಾದರೆ ಸೀತಾಫಲ ಎಲೆಗಳನ್ನು ತೆಗೆದುಕೊಂಡು, ಅರೆದು ಆ ಮಿಶ್ರಣವನ್ನು ಕಟ್ಟಬೇಕು. ಇದರಿಂದ ಬೆವರಿನ ಗುಳ್ಳೆಗಳ ಸಮಸ್ಯೆ ನಿವಾರಣೆಯಾಗುತ್ತದೆ.
  • ಸೀತಾಫಲದ ಎಲೆಗಳಿಂದ ತೆಗೆದ ರಸವನ್ನು ನಿತ್ಯ ಬೆಳಗ್ಗೆ ಒಂದು ಟೀಸ್ಫೂನ್ ಪ್ರಮಾಣದಲ್ಲಿ ಕುಡಿಯುತ್ತಿದ್ದರೆ ಮಹುಮೇಹ ನಿಯಂತ್ರಣಕ್ಕೆ ಬರುತ್ತದೆ. ಅಷ್ಟೇ ಅಲ್ಲದೆ ತೂಕ ಸಹ ಕಡಿಮೆಯಾಗುತ್ತಾರೆ.

  • ಸೀತಾಫಲದ ಗಿಡದಿಂದ ತೆಗೆದ ತೊಗಟೆಯನ್ನು ನೀರಿನಲ್ಲಿ ಹಾಕಿ ಅದರಿಂದ ಕಷಾಯ ಮಾಡಿಕೊಂಡು ಕುಡಿದರೆ ಡಯೇರಿಯಾದಂತಹ ಅನಾರೋಗ್ಯ ಸಮಸ್ಯೆಗಳು ನಿವಾರಣೆಯಾಗುತ್ತವೆ.
  • ಸೀತಾಫಲ ಎಲೆಗಳನ್ನು ನೀರಿನಲ್ಲಿ ಹಾಕಿ ಕಷಾಯ ಮಾಡಿಕೊಂಡು ಕುಡಿದರೆ ನೆಗಡಿ ಕಡಿಮೆಯಾಗುತ್ತದೆ.ವಿಟಮಿನ್ ಎ ಹೆಚ್ಚಾಗಿ ಇರುವುದರಿಂದ ಕಣ್ಣಿನ ರೋಗಗಳು ನಿವಾರಣೆಯಾಗುತ್ತವೆ. ದೃಷ್ಟಿ ಸಮಸ್ಯೆಗಳು ದೂರವಾಗುತ್ತವೆ.

 

  • ಸೀತಾಫಲದಲ್ಲಿರುವ ಮೆಗ್ನಿಷಿಯಂ ಹೃದಯ ಕಾಯಿಲೆಗಳು ಬರದಂತೆ ತಡೆಯುತ್ತದೆ. ಇವುಗಳಲ್ಲಿ ಇರುವ ಪೋಷಕಗಳು ದೇಹದಲ್ಲಿ ಸೇರಿಕೊಂಡ ಕೊಬ್ಬನ್ನು ಕರಗಿಸುತ್ತದೆ.
  • ಸೀತಾಫಲವನ್ನು ನಿತ್ಯ ಸೇವಿಸಿದರೆ ಹೊಟ್ಟೆಯಲ್ಲಿರುವ ಜಂತುಹುಳುಗಳ ಸಾಯುತ್ತವೆ. ಅಲ್ಸರ್ ನಿವಾರಣೆಯಾಗುತ್ತದೆ. ಗ್ಯಾಸ್, ಅಸಿಡಿಟಿ, ಅಜೀರ್ಣ, ಮಲಬದ್ಧತೆಯಂತಹ ಜೀರ್ಣ ಸಂಬಂಧಿ ಸಮಸ್ಯೆಗಳು ಗುಣವಾಗುತ್ತವೆ.

  • ರಕ್ತ ಕಡಿಮೆ ಇರುವವರು ಸೀತಾಫಲ ತಿನ್ನುವುದು ಉತ್ತಮ. ಇದರಿಂದ ರಕ್ತ ಹೆಚ್ಚುತ್ತದೆ.
  • ದೇಹ ತುಂಬಾ ಬಿಸಿಯಾಗಿರುವವರು ಸೀತಾಫಲವನ್ನು ತಿಂದರೆ ಕೂಡಲೆ ಉಷ್ಣತೆಯಿಂದ ಉಪಶಮನ ಪಡೆಯಬಹುದು.
  • ಸೀತಾಫಲದ ತಿರುಳನ್ನು ತೆಗೆದುಕೊಂಡು ರಸದಂತೆ ಮಾಡಿ ಅದಕ್ಕೆ ಹಾಲು ಬೆರೆಸಿ ಮಕ್ಕಳಿಗೆ ಕುಡಿಸಬೇಕು. ಇದರಿಂದ ಅವರಿಗೆ ಶಕ್ತಿ ಲಭಿಸುತ್ತದೆ.
  • ಸೀತಾಫಲ ಎಲೆಗಳನ್ನು ನುಣ್ಣಗೆ ಅರೆದು ಹಚ್ಚಿಕೊಂಡರೆ ಗಾಯಗಳು, ಕಜ್ಜಿ, ಗಜಕರ್ಣದಂತಹ ಸಮಸ್ಯೆಗಳು ನಿವಾರಣೆಯಾಗುತ್ತದೆ.
  • ಇವುಗಳ ಎಲೆಗಳನ್ನು ನುಣ್ಣಗೆ ಅರೆದು ಬೋರಿಕ್ ಪೌಡರ್ ಬೆರೆಸಿ ಮಂಚ, ಕುರ್ಚಿಗಳ ಮೂಲೆಗಳಲ್ಲಿ ಇಟ್ಟರೆ ತಿಗಣೆ ಸಮಸ್ಯೆ ಇರಲ್ಲ.

  • ಸೀತಾಫಲವನ್ನು ಅತಿಯಾಗಿ ಒಮ್ಮೆಲೆ ತಿನ್ನಬಾರದು. ಇದರಿಂದ ಹೊಟ್ಟೆಯಲ್ಲಿ ಉರಿ, ಉಬ್ಬಸ ಉಂಟಾಗುತ್ತದೆ. ಅಂತಹ ಸಂದರ್ಭದಲ್ಲಿ ಬಿಸಿ ನೀರು ಕುಡಿದರು, ಅರ್ಧ ಸ್ಫೂನು ಓಂಕಾಳು ಅಥವಾ ಸ್ವಲ್ಪ ಉಪ್ಪು ಜಗಿದರೂ ಫಲಿತಾಂಶ ಇರುತ್ತದೆ. ಅದೇ ರೀತಿ ಮಧುಮೇಹ ಇರುವವರು, ಸ್ಥೂಲಕಾಯ ಸಮಸ್ಯೆ ಇರುವವರು ಈ ಹಣ್ಣನ್ನು ವೈದ್ಯರ ಸಲಹೆ ಮೇರೆಗೆ ತಿನ್ನಬೇಕು. ಇಲ್ಲದಿದ್ದರೆ ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿರುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀದಿನ ಊಟದ ಜೊತೆಗೆ ತುಪ್ಪ ತಿಂದರೆ ಏನಾಗುತ್ತೆ ಗೊತ್ತಾ..?

    ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಜಿಮ್, ವ್ಯಾಯಾಮ ಜೊತೆಗೆ ಉತ್ತಮ ಆಹಾರ ಸೇವನೆ ಬಗ್ಗೆ ಗಮನ ನೀಡುವ ಮಂದಿ ತುಪ್ಪದಿಂದ ದೂರ ಉಳಿಯುತ್ತಿದ್ದಾರೆ. ಅವರ ಪ್ರಕಾರ ತುಪ್ಪ ಹಾಗೂ ಎಣ್ಣೆಯಿಂದ ಮಾಡಿದ ಪ್ರತಿಯೊಂದು ಆಹಾರವೂ ಹಾನಿಕಾರ. ನೀವು ಹೀಗೆ ಯೋಚನೆ ಮಾಡುವವರಾಗಿದ್ದರೆ ನಿಮ್ಮ ಕಲ್ಪನೆ ತಪ್ಪು. ಸ್ವಲ್ಪ ಪ್ರಮಾಣದ ತುಪ್ಪ ದೇಹಕ್ಕೆ ಬೇಕು. ಹಾಗಂತ ಅತಿಯಾಗಿ ಸೇವನೆ ಮಾಡಬಾರದು. ಅಧ್ಯಯನವೊಂದರ ಪ್ರಕಾರ ಹಾಲಿನಿಂದ ಮಾಡಿದ ಪದಾರ್ಥದಲ್ಲಿ ಸ್ಯಾಚ್ಯುರೇಟೆಡ್ ಕೊಬ್ಬಿರುತ್ತದೆ. ಇದು…

  • ಸುದ್ದಿ

    ಮೀನಿಗಾಗಿ ಬಲೆ ಬೀಸಿದವನಿಗೆ ಸಿಕ್ಕಿದ್ದು ಬರೋಬ್ಬರಿ 20 ಕೋಟಿ, ಅದೇಗೆ ಗೊತ್ತೆ

    ಇತ್ತೀಚಿಗೆ ಗೋಲ್ಡ್ ಜಾತಿಯ ಮೀನು ಹಿಡಿದ್ದಿದ್ದ ಮೀನುಗಾರ 5 ಲಕ್ಷ ಸಂಪಾದನೆ ಮಾಡಿರುವ ಬಗ್ಗೆ ಸುದ್ದಿ ಆಗಿತ್ತು. ಈಗ ಮೀನುಗಾರನೊಬ್ಬ 20 ಕೋಟಿ ಗಳಿಸಿದ್ದಾನೆ ಎಂದು ತಿಳಿದು ಬಂದಿದೆ. ಅದೇಗೆ ಅಂತೀರಾ. ಓಮನ್ ದೇಶಕ್ಕೆ ಸೇರಿದ ಖಾಲಿದ್ ತನ್ನ ಇಬ್ಬರು ಗೆಳೆಯರೊಡನೆ ಹೋಗಿ ಹಗಲೆಲ್ಲ ಮೀನು ಹಿಡಿದು ಕುಟುಂಬಕ್ಕೆ ಪೋಷಣೆ ಮಾಡುತ್ತಿದ್ದ, ಈತ ಬಡತನದಲ್ಲಿ ಬೆಂದು ಹೋಗಿದ್ದ ಆದರೆ ಅವತ್ತು ಆತನ ಅದೃಷ್ಟದ ದಿನವಾಗಿತ್ತು. ಒಂದು ದಿನ ಹೀಗೆ ಮೀನು ಹಿಡಿಯಲು ಹೋದಾಗ ಅಷ್ಟೊಂದು ಮೀನು ಸಿಗಲಿಲ್ಲ….

  • Animals, India, National, tourism

    ಇದು ಒಂಟೆಗಳ ಜಾತ್ರೆ !

    ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್‌ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…

  • ಸುದ್ದಿ

    ಇನ್ನು15 ದಿನ ಮಳೆ ಬರದಿದ್ದರೆ ಮಂಜುನಾಥಸ್ವಾಮಿಯ ಅಭಿಷೇಕಕ್ಕೂ ನೀರಿಲ್ಲ: ಡಾ. ವೀರೇಂದ್ರ ಹೆಗ್ಗಡೆ

    15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಕಳವಳವನ್ನು ಹೊರಹಾಕಿದ್ದಾರೆ.ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಘಟ್ಟದ ಭಾಗದಲ್ಲಿ ಮಳೆಯಾಗದ ಕಾರಣ ನೇತ್ರಾವತಿಯಲ್ಲಿ ನೀರಿಲ್ಲ. ಅಲ್ಲದೆ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ…