ಸುದ್ದಿ

8ನೇ ತರಗತಿ ವಿದ್ಯಾರ್ಥಿಗಳಿಗೆ ಶಾಸಕ ಸುನಿಲ್ ನಾಯ್ಕರಿಂದ ಉಚಿತ ಬೈಸಿಕಲ್ ವಿತರಣೆ

32

ಭಟ್ಕಳ: ಪಾಲಕರಾದವರು ತಮ್ಮ ಮಕ್ಕಳಿಗೆ ಶಿಕ್ಷಣ ಒಂದರಲ್ಲಿಯೇ ಒತ್ತಡ ಹಾಕದೆ ಕ್ರೀಡೆ, ಸಾಂಸ್ಕೃತಿ ಹಾಗು ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಶಾಸಕ ಸುನೀಲ ನಾಯ್ಕ ಹೇಳಿದರು. ಅವರು ಗುರುವಾರದಂದು ಸರಕಾರಿ ಪ್ರೌಢಶಾಲೆ ಸೋನಾರಕೇರಿಯಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ ಹಾಗೂ ಸರಕಾರಿ ಪ್ರೌಢಶಾಲೆ ಸೋನಾರಕೇರಿ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ ಮಟ್ಟದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು

ವಿದ್ಯಾರ್ಥಿಗಳಿಗೆ ಉಚಿತವಾಗಿ ಸೈಕಲ್ ನೀಡುತ್ತಿರುವ ಉದ್ದೇಶ ಯಾಕೆಂದು ವಿದ್ಯಾರ್ಥಿಗಳು ಮೊದಲು ತಿಳಿದುಕೊಳ್ಳಬೇಕು. ವಿದ್ಯಾರ್ಥಿಗಳ ಶಿಕ್ಷಣದ ಮಟ್ಟ ಹೆಚ್ಚಿಸಲು ಮತ್ತು ನಿಮ್ಮ ಉಜ್ವಲ ಭವಿಷ್ಯವನ್ನು ರೂಪಿಸಬೇಕೆಂಬ ಉದ್ದೇಶದಿಂದ ಸರಿಯಾದ ಸಮಯಕ್ಕೆ ಶಾಲೆಗೆ ಹೋಗಿ ತಲುಪಿಕೊಂಡು ವಿದ್ಯಾಭ್ಯಾಸದಿಂದ ವಂಚಿತರಾಗಬಾರದೆಂದು ಸರ್ಕಾರ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡಿಕೊಂಡು ಬರುತ್ತಿದ್ದೆ. ಅದರ ಸರಿಯಾದ ಉಪಯೋಗ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕಾಗಿದೆ. ವಿದ್ಯಾರ್ಥಿಗಳು ಸರ್ಕಾರ ನಿಮಗೆ ಉಚಿತವಾಗಿ ಸೈಕಲ್ ನೀಡುತ್ತಿದೆ ಎಂದು ತಿಳಿದುಕೊಳ್ಳ ಬೇಡಿ, ಅದು ನಿಮ್ಮ ಹಣ ಸಾರ್ವಜನಿಕರ ಹಣ ನಿಮ್ಮ ಹಣದಲ್ಲಿಯೇ ನಿಮಗೆ ಸೈಕಲ್ ನೀಡುತ್ತಿದ್ದಾರೆ ಆದರೆ ಇತ್ತೀಚಿನ ದಿನಗಳಲ್ಲಿ ಉಚಿತ ಸೈಕಲ್ ವಿತರಣೆಯಾದ ನಂತರ ಅದು ಹೆಚ್ಚಾಗಿ ದುರುಪಯೋಗವಾಗುತ್ತಿದೆ ವಿದ್ಯಾರ್ಥಿಗಳ ಹತ್ತಿರ ಇರದೇ ಬೇರೆ ವ್ಯಕ್ತಿಗಳು ಅದರ ಉಪಯೋಗ ಪಡೆಯುತ್ತಿರುತ್ತಾರೆ ಎಂದು ಹೇಳಿದರು

ನಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಪಂಚಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಶಾಲೆಗೆ ಬರುವ ಉದ್ದೇಶಕ್ಕಾಗಿ ನೀಡುತ್ತಿದ್ದಾರೆ. ಆದರೆ ವಿದ್ಯಾರ್ಥಿಗಳು ಇದರ ದುರುಪಯೋಗ ಪಡೆದುಕೊಳ್ಳದೆ ಶಾಲೆಗಳಿಗೆ ಮಾತ್ರ ಸೈಕಲ್ ತೆಗೆದುಕೊಂಡು ಹೋಗುವಂತೆ ಪಾಲಕರು ಸರಿಯಾಗಿ ಗಮನವಹಿಸಬೇಕು ಮತ್ತು ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಪಾಲಕರು ಕೂಡ ಮಕ್ಕಳು ಶಾಲೆಯಿಂದ ಮನೆಗೆ ಬಂದ ಮೇಲೆ ಅವರ ವಿದ್ಯಾಭ್ಯಾಸದ ಕಡೆ ಗಮನಹರಿಸಬೇಕೆಂದು ಹೇಳಿದರು

ನಂತರ ಬಸ್ ಪಾಸ್ ಮತ್ತು ಹಾಸ್ಟೆಲ್ ನಲ್ಲಿ ಇರುವ ವಿದ್ಯಾರ್ಥಿಗಳನ್ನು ಹೊರತುಪಡಿಸಿ  20 ಬಾಲಕರಿಗೆ  ಹಾಗೂ  26  ಬಾಲಕಿಯರಿಗೆ ಸೈಕಲಗಳನ್ನು ವಿತರಿಸಿದರು .ಇದಕ್ಕೂ ಪೂರ್ವದಲ್ಲಿ ಪ್ರೌಢಶಾಲೆಗಳಲ್ಲಿ ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳ ಮರುನಿರ್ಮಾಣ ಶೀರ್ಷಿಕೆಯಡಿ 15 ಲಕ್ಷ ರೂಪಾಯಿ ವೆಚ್ಚದಲ್ಲಿ ಸೋನಾರಕೇರಿ ಸರ್ಕಾರಿ ಪ್ರೌಢಶಾಲೆಯ ನೂತನ ಕೊಠಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು. ಮತ್ತು ಕೃಷಿ ಇಲಾಖೆಯಲ್ಲಿ ರೈತ ಫಲಾನುಭವಿಗಳಿಗೆ ಕೃಷಿಗೆ ಸಂಬಂಧ ಪಟ್ಟ ಸಲಕರಣೆ ಗಳನ್ನು ವಿತರಿಸಲಾಯಿತು. ಈ ಸಂಧರ್ಭದಲ್ಲಿ ಬಿಜೆಪಿ ಮಂಡಲ ಘಟಕದ ಅಧ್ಯಕ ರಾಜೇಶ ನಾಯ್ಕ, ಜಿಲ್ಲಾ ಪಂಚಾಯತ ಸದಸ್ಯೆ ಸಿಂಧು ಭಾಸ್ಕರ್ ನಾಯ್ಕ, ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ವೆಂಕಟೇಶ ನಾಯ್ಕ, ರಾಘವೇಂದ್ರ ಶೇಟ್, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್.ಮುಂಜಿ ಮುಂತಾದವರು ಉಪಸ್ಥಿತರಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಮೋದಿ ನೇತೃತ್ವದ: ಷೇರುಪೇಟೆಯಲ್ಲಿ ಹೂಡಿಕೆದಾರರಿಗೆ ಬಂಪರ್, 2 ದಿನದಲ್ಲಿ 3.86 ಲಕ್ಷ ಕೋಟಿ ರೂ. ಲಾಭ!

    ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿದ್ದು, ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಬಂಪರ್ ಲಾಭ ಗಳಿಸಿದ್ದಾರೆ.ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಮರಳುತ್ತಿರುವುದು ಷೇರು ಮಾರುಕಟ್ಟೆಯಲ್ಲಿ ಭಾರಿ ಜಿಗಿತಕ್ಕೆ ಕಾರಣವಾಗಿದ್ದು, ಸೋಮವಾರ ಮುಂಬೈ ಷೇರು ಪೇಟೆಯ ಸೆನ್ಸೆಕ್ಸ್‌ ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಪ್ಟಿ ಮತ್ತೊಂದು ದಾಖಲೆಯ ಎತ್ತರವನ್ನು ತಲುಪಿದೆ. ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಬಿಎಸ್ ಇ 871.9 ಅಂಕಗಳ ಜಿಗಿತವನ್ನು ದಾಖಲಿಸಿದ್ದು, ಸೋಮವಾರ…

  • ವಿಚಿತ್ರ ಆದರೂ ಸತ್ಯ

    ಈ ಮಹಿಳೆ 60 ವರ್ಷದ ವ್ಯಕ್ತಿಯೊಂದಿಗೆ ಮದುವೆಯಾಗಿ ಮನೆಯಲ್ಲಿ ಮಾಡಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಇಂದೋರ್ ನಲ್ಲಿ ಮಹಿಳೆಯೊಬ್ಬಳು 60 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬನನ್ನು ಮದುವೆಯಾಗಿ ಅರೇ ದಿನದಲ್ಲಿ ಮನೆಯಲ್ಲಿ ಚನ್ನಾಭರಣ ಮತ್ತು ನಗದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.

  • ಗ್ಯಾಜೆಟ್

    ನಿಮ್ಮ ಸ್ಮಾರ್ಟ್‌ಫೋನ್‌ ಹ್ಯಾಂಗ್‌ ಆಗದಿರಲು ಇಲ್ಲಿದೆ ಉಪಾಯ ..!ತಿಳಿಯಲು ಈ ಲೇಖನ ಓದಿ..

    ಸ್ಮಾರ್ಟ್‌ಫೋನ್‌ ಹಳೆಯದಾದಷ್ಟು ಅದು ಹ್ಯಾಂಗ್‌ ಹಾಗೂ ಸ್ಲೋ ಆಗುವ ಚಾನ್ಸ್‌ ಹೆಚ್ಚಾಗಿರುತ್ತದೆ. ಅಂದರೆ ಬಳಕೆ ಮಾಡುವಾಗ ಲೇಟ್‌ ಆಗಿ ರೆಸ್ಪಾನ್ಸ್‌ ಮಾಡುತ್ತದೆ. ನಂತರ ಹ್ಯಾಂಗ್‌ ಆಗುತ್ತದೆ. ಹೀಗೆ ಆದರೆ ಫೋನ್‌ನ್ನು ಮತ್ತೆ ಮತ್ತೆ ರಿಸ್ಟಾರ್ಟ್‌ ಮಾಡಬೇಕಾಗುತ್ತದೆ.

  • ಗ್ಯಾಜೆಟ್

    ಹುಷಾರ್!ನೀವು ಚೀನಾ ಮೊಬೈಲ್ ಬಳುಸುತ್ತಿದ್ದರೆ ತಪ್ಪದೆ ಈ ಲೇಖನಿ ಓದಿ…

    ಭಾರತವು ಚೀನಾದ ಒಪ್ಪೋ, ಷಿಯಾಮಿ, ಜಿಯೋನಿ, ಕಂಪನಿಗಳಿಗೆ ನೋಟಿಸ್ ನೀಡಿದೆ. ಮತ್ತು ಕೇಂದ್ರ ಸರ್ಕಾರವು , ಹ್ಯಾಕಿಂಗ್ ಭದ್ರತಾ ಫೀಚರ್`ಗಳ ಬಗ್ಗೆ ಕಂಪನಿಗಳಲ್ಲಿ ವಿವರಣೆ ಕೇಳಿದೆ.

  • ಮನರಂಜನೆ

    ಮಹಿಳಾ ಸ್ಪರ್ಧಿಗಳ ಬಗ್ಗೆ ರಹಸ್ಯವನ್ನ ಬಿಚ್ಚಿಟ್ಟ ಚಂದನ್, ಮರ್ಯಾದೆ ಹೋಗ್ತಿದೆ ಎಂದ ದೀಪಿಕ ದಾಸ್.

    ಶನಿವಾರ ‘ವಾರದ ಕತೆ ಕಿಚ್ಚನ ಜೊತೆ’ ಸಂಚಿಕೆಯಲ್ಲಿ ಸುದೀಪ್ ಬಿಗ್ ಬಾಸ್ ಮನೆಯ ಮೊದಲನೇ ದಿನದ ಅನುಭವವನ್ನು ಕೇಳುತ್ತಿರುತ್ತಾರೆ. ಸುದೀಪ್, ಚಂದನ್ ಅವರನ್ನು ಕೇಳಿದಾಗ ಅವರು ಮಹಿಳಾ ಸ್ಪರ್ಧಿಗಳ ರಹಸ್ಯ ಬಿಚ್ಚಿಟ್ಟಿದ್ದಾರೆ. ಚಂದನ್ ಅವರ ಮಾತು ಕೇಳಿ ದೀಪಿಕಾ, ಪ್ರಿಯಾಂಕಾ ಹಾಗೂ ಭೂಮಿ ಮೊದಲು ಮುಜುಗರಕ್ಕೆ ಒಳಗಾದರು. ನಂತರ ದೀಪಿಕಾ ನನ್ನ ಮರ್ಯಾದೆ ಹೋಗುತ್ತಿದೆ ಎಂದು ತಮ್ಮ ಮುಖವನ್ನು ಮುಚ್ಚಿಕೊಂಡರು. ಬಿಗ್ ಬಾಸ್ ಮನೆಗೆ ಬಂದ ಮೊದಲನೇ ದಿನ ನಾನು ಮಹಿಳಾ ಸ್ಪರ್ಧಿಗಳನ್ನು ಮಾತನಾಡಿಸಿ ಮಲಗಿದ್ದೆ. ಮರುದಿನ…

  • ಸುದ್ದಿ

    ಮಹಾಮಳೆಯ ಆರ್ಭಟಕ್ಕೆ ಉತ್ತರ ತತ್ತರ ..!

    ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…