ಸುದ್ದಿ

ಸೋಲಿನಿಂದ ಬೇಸರಗೊಂಡಿರುವ ಮೊಮ್ಮಗನಿಗೆ ರಾಜಕೀಯ ಪಾಠ ಹೇಳಿಕೊಟ್ಟ ತಾತ:ದೇವೇಗೌಡರು…..!

48

ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡರು ನಿಖಿಲ್ ಗೆ ರಾಜನೀತಿಯ ಪಾಠ ಮಾಡಿದ್ದಾರೆ. ಸೋಲನ್ನ ಹೇಗೆ ಎದುರಿಸಬೇಕು, ಸೋಲಿನಿಂದ ಗೆಲುವಿನ ಕಡೆಗೆ ನಡೆದು ಹೋಗುವುದು ಹೇಗೆ ಎಂಬುದರ ಕುರಿತು ಪಾಠ ಮಾಡಿದ್ದಾರೆ.ಸೋಲಿನಿಂದ ಬೇಸರವಾಗಿದ್ದ ನಿಖಿಲ್ ಅವರನ್ನ ಪದ್ಮನಾಭ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವ ದೇವೇಗೌಡರು ರಾಜನೀತಿ ಬೋಧಿಸಿದ್ದಾರೆ. ಸೋಲು ಗೆಲುವು ಜೀವನದಲ್ಲಿ ಸಾಮಾನ್ಯ. ಎರಡನ್ನೂ ಆತ್ಮವಿಶ್ವಾಸದಿಂದಲೇ ಎದುರಿಸಬೇಕು ಎಂದು ತಮ್ಮ ಮೊಮ್ಮಗನಿಗೆ ರಾಜಪಾಠ ಬೋಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಚುನಾವಣೆ ಅಂದಮೇಲೆ ಸೋಲು-ಗೆಲುವು ಎಲ್ಲವೂ ಸಹಜ. ಅದನ್ನ ಮನಸ್ಸಿಗೆ ಹಚ್ಚಿಕೊಂಡು ಬೇಸರ ಮಾಡಿಕೊಳ್ಳುವುದಲ್ಲ. ಎಲ್ಲವನ್ನ ಮರೆತು ಮುಂದುವರಿಯಬೇಕು ಎಂದು ಎಚ್‍ಡಿಡಿ ಹೇಳಿದ್ದಾರೆ. ಇದಕ್ಕೆ ನಾನೇನು ಸೋತ ಬೇಸರದಲ್ಲಿಲ್ಲ. ಆದರೆ ನಿಮಗೆ ಹಾಗೂ ಅಪ್ಪನಿಗೆ ಅಷ್ಟೊಂದು ಪ್ರೀತಿ ತೋರಿಸುವ ಮಂಡ್ಯ ಜನ ನನ್ನನ್ನ ಕೈ ಬಿಟ್ಟಿದ್ದು ನನಗೆ ಬೇಜಾರಾಯಿತು ಅಷ್ಟೇ ಎಂದಿದ್ದಾರೆ.

ರಾಜಕಾರಣದಲ್ಲಿ ನಮ್ಮಗುರಿ ಸ್ಪಷ್ಟವಾಗಿರಬೇಕು. ಎಷ್ಟೇ ಕಷ್ಟ ಆದರೂ ಗುರಿ ಮುಟ್ಟುವ ಛಲ ಇರಬೇಕು. ನೀನು ಮಂಡ್ಯದಲ್ಲೇ ರಾಜಕಾರಣ ಮಾಡೋದಾದ್ರೆ ಸ್ಪಷ್ಟವಾದ ತೀರ್ಮಾನ ಮಾಡಿ ಮುಂದುವರಿ. ಮುಂದೆ ಹೋದ ಮೇಲೆ ಹಿಂದೆ ಬರೋ ಹಾಗಿರಬಾರದು ಎಂದು ಎಚ್‍ಡಿಡಿ ಮಾತಿಗೆ ನಿಖಿಲ್, ಇಲ್ಲ ತಾತಾ ಇಷ್ಟು ಮುಂದೆ ಹೋದ ಮೇಲೆ ಹಿಂದೆ ಬರುವ ಪ್ರಶ್ನೆಯೇ ಇಲ್ಲ. ಎಲ್ಲಿ ಸೋತಿದ್ದೀನಿ ಅಲ್ಲೇ ಗೆಲ್ಲಬೇಕು ಗೆಲ್ಲುತ್ತೇನೆ ಎಂದು ತಿಳಿಸಿದ್ದಾರೆ.
ಯಾರ ವಿರುದ್ಧ ಮಾತನಾಡಬೇಡ. ನಿನ್ನ ಪಾಡಿಗೆ ನೀನು ಕೈಲಾದ ಕೆಲಸ ಮಾಡಿಕೊಂಡು ಹೋಗು. ಜನ ಅವರಾಗಿಯೇ ನಿನ್ನ ಇಷ್ಟ ಪಡಬೇಕು. ಸೋಲಿಸಿದರೂ ನಮ್ಮ ಜೊತೆಗಿದ್ದು ಕಷ್ಟ ಸುಖಕ್ಕೆ ಸ್ಪಂದಿಸಿದ ಅನ್ನಬೇಕು. ಹಾಗೆ ಕೆಲಸ ಮಾಡಬೇಕು ಅದಕ್ಕೆ ಬದ್ಧತೆ ಇರಬೇಕು ಎಂದಿದ್ದಾರೆ. ಇದಕ್ಕೆ ನಾನು ಯಾರ ವಿರುದ್ಧವೂ ಮಾತನಾಡಲ್ಲ. ಮಂಡ್ಯದಲ್ಲೇ ಇದ್ದು ಕೆಲಸ ಮಾಡುತ್ತೇನೆ ಎಂದು ನಿಖಿಲ್ ಉತ್ತರಿಸಿದ್ದಾರೆ.

ಇನ್ನೊಂದು ವಿಷಯ ತಿಳ್ಕೋ ನೀನು ಮಂಡ್ಯದಲ್ಲಿ ಓಡಾಡೋದು ನಾಳೆ ಇನ್ಯಾರೋ ರಾಮನಗರ, ಮಾಗಡಿ ಅಲ್ಲಿ ನಿಂತ್ರೆ ಸುಲಭವಾಗಿ ಗೆಲ್ಲಬಹುದು ಅಂದ್ರೆ ಅವಾಗ ಇನ್ನೊಂದು ತರ ಯೋಚನೆ ಮಾಡೋ ಹಾಗೆ ಮಾಡ್ಕೋಬೇಡ ಎಂದು ಹೇಳಿದ್ದಕ್ಕೆ ನಿಖಿಲ್, ಖಂಡಿತಾ ಇಲ್ಲ ತಾತಾ ನಾನು ಬೇರೆ ಯೋಚನೆ ಮಾಡಲ್ಲ. ನನಗೆ ನನ್ನ ಸೋಲಿಗಿಂತ ನಿಮ್ಮ ಸೋಲು ಜಾಸ್ತಿ ನೋವಾಯ್ತು ಎಂದು ತಿಳಿಸಿದ್ದಾರೆ.

ಸೋಲಿಗೆ ಎದೆಗುಂದಬೇಡ. ಯಾರಿಗೂ ಬೈಬೇಡ, ಗುರಿ ಸ್ಪಷ್ಟವಾಗಿರಲಿ ರಾಜಕೀಯವಾಗಿ ಮುಂದುವರಿ ಎಂದು ಪಾಠ ಮಾಡಿದ್ದಾರೆ. ಒಟ್ಟಿನಲ್ಲಿ ಇದೀಗ ರಾಜಕೀಯ ಚಾಣಕ್ಯ ದೇವೇಗೌಡರ ಹಿತ ನುಡಿ, ಗುರುಬೋಧನೆಗೆ ನಿಖಿಲ್ ರಿಂದ ಯಾವ ರೀತಿಯ ರಾಜಕೀಯ ನಡೆಗೆ ಕಾರಣವಾಗಬಹುದು ಎಂಬ ಕುತೂಹಲವನ್ನು ಈಗ ಹುಟ್ಟು ಹಾಕಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಇಲ್ಲಿ ಕತ್ತಲಾಗುತ್ತಿದ್ದಂತೆ ಪುರುಷರ ಮೇಲೆ ಹೆಣ್ಣು ಪ್ರೇತಾತ್ಮಗಳು ದಾಳಿ ಮಾಡುತ್ತಿವೆಯಂತೆ..!ಈ ಲೇಖನ ಓದಿ ಶಾಕ್ ಆಗ್ತೀರಾ…

    ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ. ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್‍ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ. ಕಾಶಿಗುಡ್‍’ನ ಈ ಗ್ರಾಮದಲ್ಲಿ ಕತ್ತಲಾದ…

  • ಸುದ್ದಿ

    ತೂಕ ಇಳಿಸಿಕೊಳ್ಳಬೇಕೇ ಹಾಗಾದ್ರೆ ದೋಸೆ ತಿನ್ನಿ ಸ್ಲಿಮ್ ಆಗಿರಿ…!

    ದೇಹದ ಫಿಟ್ ನೆಸ್ ಕಾಪಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದರೆ ಈ ವೇಗದ ಜಗತ್ತಿನಲ್ಲಿ ದೇಹದ ಸದೃಢತೆ ಕಾಪಾಡಲು ಗಂಟೆಗಳ ಕಾಲ ವ್ಯಾಯಾಮ ಮಾಡುವ ವ್ಯವಧಾನ ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ ದೇಹ ಕರಗಿಸುವ ಪ್ರಯತ್ನ ಮಾಡಿದರೂ ವ್ಯಾಯಾಮದ ನಂತರ ಅಗತ್ಯ ಪ್ರಮಾಣದ ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ ಕಟ್ಟಿಹಾಕಿ ಡಯಟ್ ಮಾಡುವ ನಮ್ಮ ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ ಮುರಿದಿರುತ್ತದೆ. ಆದರೆ ನಾವು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಹೊಟ್ಟೆ ತೊಳಸಿಂದಂತೆ ಆಗುವುದು, ವಾಂತಿಯಂತಹ ಕಾಯಿಲೆಗಳಿಗೆ ತಕ್ಷಣದ ಪರಿಹಾರ…

    ಕೆಲವೊಮ್ಮೆ ನಮ್ಮ ದೇಹದ ಒಳಗೆ ಆಹಾರ ಅಥವಾ ನೀರಿನ ಮೂಲಕ ಸೇರಿಕೊಂಡ ಕಲ್ಮಶಗಳು ನಮಗೆ ಹೊಟ್ಟೆ, ತೊಳಸುವುದ, ವಾಂತಿಯಂತಹ ಕಾಯಿಲೆಗಳನ್ನು ತಂದೊಡ್ಡುತ್ತದೆ. ಮತ್ತು ಈ ಸಮಸ್ಯೆಗೆ ತಲೆ ನೋವಿನಂತಹ ಬೇರೆ ಕಾರಣಗಳೂ ಇರಬಹುದು. ಆದರೆ ನೀವು ಕೆಲವು ಉಪಾಯ ಅನುಸರಿಸಿ ಈ ಸಮಸ್ಯೆ ಇಂದ ಪಾರಾಗಬಹುದು… 1. ದೀರ್ಘವಾಗಿ ಉಸಿರಾಡುವುದು. ವಾಂತಿ ಹೊಟ್ಟೆಯಲ್ಲಿ ತೊಳಸಿದದಂತೆ ಆಗುವುದು ಈ ರೀತಿಯ ಸಮಸ್ಯೆ ಇರುವಾಗ ನೀವು ಮೊದಲು ಮಾಡಬೇಕಾಗಿರುವುದು ದೀರ್ಘವಾದ ಉಸಿರಾಟ. ಮೊದಲು ದೀರ್ಘವಾಗಿ ಒಳ್ಳೆಯ ಗಾಳಿಯನ್ನು( ಆಮ್ಲಜನಕವನ್ನು )…

  • ಸುದ್ದಿ

    ನಡೆದಾಡುವ ದೇವರ ಆರೋಗ್ಯ ಗಂಭೀರ!ಚಿಕಿತ್ಸೆ ಫಲಕಾರಿ ಆಗತ್ತೋ ಇಲ್ವೋ ಎಂದ ಡಾ. ಪರಮೇಶ್?

    ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ. ಶ್ರೀಗಳ ಆರೋಗ್ಯದ ಕುರಿತಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2 ಗಂಟೆಗಳಲ್ಲಿ ಶ್ರೀಗಳ ಆರೋಗ್ಯದ ಬಗ್ಗೆ ಅಪ್‍ಡೇಟ್ಸ್ ಕೊಡುತ್ತೇವೆ. ಭಾನುವಾರ ರಾತ್ರಿಯಿಂದ ಶ್ರೀಗಳ ಬಿಪಿ ಹಾಗೂ ಶ್ವಾಸಕೋಶದಲ್ಲಿ ಏರುಪೇರುಗಳಾಗುತ್ತಿವೆ. ಹೀಗಾಗಿ ನಮ್ಮ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದೇವೆ. ಇದರಲ್ಲಿ ಎಷ್ಟು ಪ್ರಮಾಣದಲ್ಲಿ ಸಕ್ಸಸ್ ಆಗುತ್ತೇವೆ ಅಂತ ಹೇಳಲು ಸಾಧ್ಯವಿಲ್ಲ. ಯಾಕಂದ್ರೆ ಸ್ವಲ್ಪ ಗಂಭೀರ ಸ್ಥಿತಿಯಲ್ಲೇ…

  • ಸ್ಪೂರ್ತಿ

    ಜೀವನದಲ್ಲಿ ಸಮಾಜಕ್ಕೆ ಏನನ್ನಾದರೂ ಕೊಡುಗೆ ನೀಡಬೇಕೆಂಬುದು ಸತ್ಯ..ಅದಕ್ಕೆ ಸುನಿತಾ ಮಂಜುನಾಥ್ ರವರೇ ನೈಜ್ಯ ಉದಾಹರಣೆ…

    ಸಾಕಷ್ಟು ಸಮಾಜಸೇವೆಗಳನ್ನು ಮಾಡಿ ಹೆಸರಾಗಿರುವ ಸುನಿತಾ ಮಂಜುನಾಥ್ ರವರ ಬಹು ದೊಡ್ಡ ಕನಸಿನ ಆಂದೋಲನವೇ “ಕಸದಿಂದ ರಸ” ತಮ್ಮದೇ ಶಾಲೆಯ ಮಕ್ಕಳಿಗೆ ಹುರಿದುಂಬಿಸಿ..‌ ದೇಶದ ಬಗ್ಗೆ ಅಭಿಮಾನವನ್ನು ಹೆಚ್ಚು ಮಾಡುತ್ತಿರುವ ಇವರು ನಿಜಕ್ಕೂ ಗ್ರೇಟ್..

  • ಆರೋಗ್ಯ, ಉಪಯುಕ್ತ ಮಾಹಿತಿ

    ಒಣ ದ್ರಾಕ್ಷಿ ನೆನೆಸಿದ ನೀರನ್ನು ಚೆಲ್ಲುವ ಬದಲು, ಪ್ರತಿದಿನ ಬೆಳ್ಳಗ್ಗೆ ಒಂದು ಗ್ಲಾಸ್ ಒಣ ದ್ರಾಕ್ಷಿ ನೀರು ಕುಡಿದು ನೋಡಿ…

    ಒಣದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡುತ್ತಾರೆ. ಅದರಲ್ಲೂ ಗೋಡಂಬಿ ಜೊತೆ ತಿನ್ನಲು ತುಂಬಾ ಸಿಹಿಯಾಗಿರುತ್ತದೆ. ಅದನ್ನು ಹಾಗೇ ತಿನ್ನುವ ಬದಲು ನೀರಿನಲ್ಲಿ ನೆನೆಸಿ ತಿಂದರೆ ಆರೋಗ್ಯಕ್ಕೆ ಇನ್ನೂ ಉತ್ತಮ. ಆದರೆ ಒಣದ್ರಾಕ್ಷಿ ತಿಂದ ಬಳಿಕ ನೆನೆಸಿದ ನೀರನ್ನು ಚೆಲ್ಲುತ್ತೇವೆ. ಆ ನೀರಿನಿಂದ ಆಗುವ ಪ್ರಯೋಜನ ತಿಳಿದರೆ ಖಂಡಿತ ಎಸೆಯುವುದಿಲ್ಲ. * ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ನೆನೆಸಿದ ನೀರನ್ನು ಕುದಿಸಿ ಕುಡಿಯುವುದರಿಂದ ಮಲಬದ್ಧತೆ, ಅಸಿಡಿಟಿ ಹಾಗೂ ಆಯಾಸ ಸಮಸ್ಯೆ ದೂರವಾಗುತ್ತದೆ. * ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. * ಇದು…