ಸುದ್ದಿ

ಸೋಲಿನಿಂದ ಬೇಸರಗೊಂಡಿರುವ ಮೊಮ್ಮಗನಿಗೆ ರಾಜಕೀಯ ಪಾಠ ಹೇಳಿಕೊಟ್ಟ ತಾತ:ದೇವೇಗೌಡರು…..!

48

ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡರು ನಿಖಿಲ್ ಗೆ ರಾಜನೀತಿಯ ಪಾಠ ಮಾಡಿದ್ದಾರೆ. ಸೋಲನ್ನ ಹೇಗೆ ಎದುರಿಸಬೇಕು, ಸೋಲಿನಿಂದ ಗೆಲುವಿನ ಕಡೆಗೆ ನಡೆದು ಹೋಗುವುದು ಹೇಗೆ ಎಂಬುದರ ಕುರಿತು ಪಾಠ ಮಾಡಿದ್ದಾರೆ.ಸೋಲಿನಿಂದ ಬೇಸರವಾಗಿದ್ದ ನಿಖಿಲ್ ಅವರನ್ನ ಪದ್ಮನಾಭ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವ ದೇವೇಗೌಡರು ರಾಜನೀತಿ ಬೋಧಿಸಿದ್ದಾರೆ. ಸೋಲು ಗೆಲುವು ಜೀವನದಲ್ಲಿ ಸಾಮಾನ್ಯ. ಎರಡನ್ನೂ ಆತ್ಮವಿಶ್ವಾಸದಿಂದಲೇ ಎದುರಿಸಬೇಕು ಎಂದು ತಮ್ಮ ಮೊಮ್ಮಗನಿಗೆ ರಾಜಪಾಠ ಬೋಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಚುನಾವಣೆ ಅಂದಮೇಲೆ ಸೋಲು-ಗೆಲುವು ಎಲ್ಲವೂ ಸಹಜ. ಅದನ್ನ ಮನಸ್ಸಿಗೆ ಹಚ್ಚಿಕೊಂಡು ಬೇಸರ ಮಾಡಿಕೊಳ್ಳುವುದಲ್ಲ. ಎಲ್ಲವನ್ನ ಮರೆತು ಮುಂದುವರಿಯಬೇಕು ಎಂದು ಎಚ್‍ಡಿಡಿ ಹೇಳಿದ್ದಾರೆ. ಇದಕ್ಕೆ ನಾನೇನು ಸೋತ ಬೇಸರದಲ್ಲಿಲ್ಲ. ಆದರೆ ನಿಮಗೆ ಹಾಗೂ ಅಪ್ಪನಿಗೆ ಅಷ್ಟೊಂದು ಪ್ರೀತಿ ತೋರಿಸುವ ಮಂಡ್ಯ ಜನ ನನ್ನನ್ನ ಕೈ ಬಿಟ್ಟಿದ್ದು ನನಗೆ ಬೇಜಾರಾಯಿತು ಅಷ್ಟೇ ಎಂದಿದ್ದಾರೆ.

ರಾಜಕಾರಣದಲ್ಲಿ ನಮ್ಮಗುರಿ ಸ್ಪಷ್ಟವಾಗಿರಬೇಕು. ಎಷ್ಟೇ ಕಷ್ಟ ಆದರೂ ಗುರಿ ಮುಟ್ಟುವ ಛಲ ಇರಬೇಕು. ನೀನು ಮಂಡ್ಯದಲ್ಲೇ ರಾಜಕಾರಣ ಮಾಡೋದಾದ್ರೆ ಸ್ಪಷ್ಟವಾದ ತೀರ್ಮಾನ ಮಾಡಿ ಮುಂದುವರಿ. ಮುಂದೆ ಹೋದ ಮೇಲೆ ಹಿಂದೆ ಬರೋ ಹಾಗಿರಬಾರದು ಎಂದು ಎಚ್‍ಡಿಡಿ ಮಾತಿಗೆ ನಿಖಿಲ್, ಇಲ್ಲ ತಾತಾ ಇಷ್ಟು ಮುಂದೆ ಹೋದ ಮೇಲೆ ಹಿಂದೆ ಬರುವ ಪ್ರಶ್ನೆಯೇ ಇಲ್ಲ. ಎಲ್ಲಿ ಸೋತಿದ್ದೀನಿ ಅಲ್ಲೇ ಗೆಲ್ಲಬೇಕು ಗೆಲ್ಲುತ್ತೇನೆ ಎಂದು ತಿಳಿಸಿದ್ದಾರೆ.
ಯಾರ ವಿರುದ್ಧ ಮಾತನಾಡಬೇಡ. ನಿನ್ನ ಪಾಡಿಗೆ ನೀನು ಕೈಲಾದ ಕೆಲಸ ಮಾಡಿಕೊಂಡು ಹೋಗು. ಜನ ಅವರಾಗಿಯೇ ನಿನ್ನ ಇಷ್ಟ ಪಡಬೇಕು. ಸೋಲಿಸಿದರೂ ನಮ್ಮ ಜೊತೆಗಿದ್ದು ಕಷ್ಟ ಸುಖಕ್ಕೆ ಸ್ಪಂದಿಸಿದ ಅನ್ನಬೇಕು. ಹಾಗೆ ಕೆಲಸ ಮಾಡಬೇಕು ಅದಕ್ಕೆ ಬದ್ಧತೆ ಇರಬೇಕು ಎಂದಿದ್ದಾರೆ. ಇದಕ್ಕೆ ನಾನು ಯಾರ ವಿರುದ್ಧವೂ ಮಾತನಾಡಲ್ಲ. ಮಂಡ್ಯದಲ್ಲೇ ಇದ್ದು ಕೆಲಸ ಮಾಡುತ್ತೇನೆ ಎಂದು ನಿಖಿಲ್ ಉತ್ತರಿಸಿದ್ದಾರೆ.

ಇನ್ನೊಂದು ವಿಷಯ ತಿಳ್ಕೋ ನೀನು ಮಂಡ್ಯದಲ್ಲಿ ಓಡಾಡೋದು ನಾಳೆ ಇನ್ಯಾರೋ ರಾಮನಗರ, ಮಾಗಡಿ ಅಲ್ಲಿ ನಿಂತ್ರೆ ಸುಲಭವಾಗಿ ಗೆಲ್ಲಬಹುದು ಅಂದ್ರೆ ಅವಾಗ ಇನ್ನೊಂದು ತರ ಯೋಚನೆ ಮಾಡೋ ಹಾಗೆ ಮಾಡ್ಕೋಬೇಡ ಎಂದು ಹೇಳಿದ್ದಕ್ಕೆ ನಿಖಿಲ್, ಖಂಡಿತಾ ಇಲ್ಲ ತಾತಾ ನಾನು ಬೇರೆ ಯೋಚನೆ ಮಾಡಲ್ಲ. ನನಗೆ ನನ್ನ ಸೋಲಿಗಿಂತ ನಿಮ್ಮ ಸೋಲು ಜಾಸ್ತಿ ನೋವಾಯ್ತು ಎಂದು ತಿಳಿಸಿದ್ದಾರೆ.

ಸೋಲಿಗೆ ಎದೆಗುಂದಬೇಡ. ಯಾರಿಗೂ ಬೈಬೇಡ, ಗುರಿ ಸ್ಪಷ್ಟವಾಗಿರಲಿ ರಾಜಕೀಯವಾಗಿ ಮುಂದುವರಿ ಎಂದು ಪಾಠ ಮಾಡಿದ್ದಾರೆ. ಒಟ್ಟಿನಲ್ಲಿ ಇದೀಗ ರಾಜಕೀಯ ಚಾಣಕ್ಯ ದೇವೇಗೌಡರ ಹಿತ ನುಡಿ, ಗುರುಬೋಧನೆಗೆ ನಿಖಿಲ್ ರಿಂದ ಯಾವ ರೀತಿಯ ರಾಜಕೀಯ ನಡೆಗೆ ಕಾರಣವಾಗಬಹುದು ಎಂಬ ಕುತೂಹಲವನ್ನು ಈಗ ಹುಟ್ಟು ಹಾಕಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ನಿಮ್ಗೆ ಸಿಳ್ಳೆ (ವಿಸಿಲ್) ಹೊಡೆಯೋದು ಬರಲ್ವಾ?ಹಾಗಾದ್ರೆ ಈ ಸರಳ ಕ್ರಮಗಳನ್ನು ಅನುಸರಿಸಿ ವಿಸಿಲ್ ಹೊಡೆಯಿರಿ…

    ತುಂಬಾ ಜನ ಸಿಳ್ಳೆ (ವಿಸಿಲ್) ಹೊಡೆಯೋಕೆ ತುಂಬಾ ಇಷ್ಟ ಪಡುತ್ತಾರೆ. ಆದ್ರೆ ಕೆಲವರಿಗೆ ವಿಸಿಲ್ ಹೊಡೆಯೋದು ಹೇಗೆ ಅಂತ ಗೊತ್ತಾಗದೆ ತುಂಬಾ ಕಷ್ಟ ಪಡುತ್ತಾರೆ. ನೀವೇನಾದ್ರೂ ವಿಸಿಲ್ ಹೊಡೆಯೋದು ಹೇಗೆ ಅಂತ ಕಲಿಬೇಕು ಅನ್ಕೊಂಡ್ರೆ ಕೆಳಗೆ ಕೊಟ್ಟಿರುವ ಸರಳ ಕ್ರಮಗಳನ್ನು ಅನುಸರಿಸಿ…

  • ಸುದ್ದಿ

    ಎಸ್ಒಎಸ್ ಸಂಕೇತದಿಂದ ಪ್ರಾಣಾಪಾಯದಿಂದ ಪಾರಾದ ಮಹಿಳೆ,. ಹೇಗೆ ಗೊತ್ತಾ.?

    ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು  ಗೊತ್ತಾಗದೇ ದಾರಿ  ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ  ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ  ಮಹಿಳೆ ಪತ್ತೆಯಾಗಿದ್ದು        ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್  ದಾರಿ ತಪ್ಪಿದ್ದರು. ಹೀಗಾಗಿ,…

  • ಉಪಯುಕ್ತ ಮಾಹಿತಿ

    ಅಪ್ಪಳಿಸಲಿದೆ ಗಜ ಚಂದ ಮಾರುತ..!ಎಲ್ಲೆಲ್ಲಿ ಮಳೆಯಾಗುತ್ತೆ ಗೊತ್ತಾ..?

    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಚಂಡಮಾರುತ ಎದ್ದಿದ್ದು ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಸ್ತುತ ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ಗಜ ಚಂಡಮಾರುತ ದಕ್ಷಿಣ ಆಂಧ್ರ ಪ್ರದೇಶ ಕರಾವಳಿಯಲ್ಲೂ ಭಾರಿ ಮಳೆ ಆತಂಕ ಸೃಷ್ಟಿ ಮಾಡಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ…

  • ಸುದ್ದಿ

    BPL ಕಾರ್ಡ್ ಇದ್ದವರು ರೆಷೆನ್ ಬೇಕೆಂದರೆ ಜುಲೈ 31 ಒಳಗೆ ಈ ಕೆಲಸ ಮಾಡಬೇಕು…..!

    ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…

  • ಆರೋಗ್ಯ

    ಬಾಳೆಹಣ್ಣಿನ ಈ ಉಪಯೋಗಗಳನ್ನು ಕೇಳಿದ್ರೇ, ನೀವು ಮರೆಯದೆ ದಿನಾ ಬಾಳೆಹಣ್ಣು ತಿಂತೀರಾ…

    ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ.

  • ಆಧ್ಯಾತ್ಮ

    ರುದ್ರಾಕ್ಷಿ ಧರಿಸುವುದರ ಹಿಂದಿದೆ ನಿಮಗೆ ಗೊತ್ತಿಲ್ಲದ ವೈಜ್ಞಾನಿಕ ಸತ್ಯ! ಹಾಗಾದ್ರೆ ರುದ್ರಾಕ್ಷಿ ಮಹತ್ವ ಏನು ಗೊತ್ತಾ???

    ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.