ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರು ನಿಖಿಲ್ ಗೆ ರಾಜನೀತಿಯ ಪಾಠ ಮಾಡಿದ್ದಾರೆ. ಸೋಲನ್ನ ಹೇಗೆ ಎದುರಿಸಬೇಕು, ಸೋಲಿನಿಂದ ಗೆಲುವಿನ ಕಡೆಗೆ ನಡೆದು ಹೋಗುವುದು ಹೇಗೆ ಎಂಬುದರ ಕುರಿತು ಪಾಠ ಮಾಡಿದ್ದಾರೆ.ಸೋಲಿನಿಂದ ಬೇಸರವಾಗಿದ್ದ ನಿಖಿಲ್ ಅವರನ್ನ ಪದ್ಮನಾಭ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವ ದೇವೇಗೌಡರು ರಾಜನೀತಿ ಬೋಧಿಸಿದ್ದಾರೆ. ಸೋಲು ಗೆಲುವು ಜೀವನದಲ್ಲಿ ಸಾಮಾನ್ಯ. ಎರಡನ್ನೂ ಆತ್ಮವಿಶ್ವಾಸದಿಂದಲೇ ಎದುರಿಸಬೇಕು ಎಂದು ತಮ್ಮ ಮೊಮ್ಮಗನಿಗೆ ರಾಜಪಾಠ ಬೋಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಚುನಾವಣೆ ಅಂದಮೇಲೆ ಸೋಲು-ಗೆಲುವು ಎಲ್ಲವೂ ಸಹಜ. ಅದನ್ನ ಮನಸ್ಸಿಗೆ ಹಚ್ಚಿಕೊಂಡು ಬೇಸರ ಮಾಡಿಕೊಳ್ಳುವುದಲ್ಲ. ಎಲ್ಲವನ್ನ ಮರೆತು ಮುಂದುವರಿಯಬೇಕು ಎಂದು ಎಚ್ಡಿಡಿ ಹೇಳಿದ್ದಾರೆ. ಇದಕ್ಕೆ ನಾನೇನು ಸೋತ ಬೇಸರದಲ್ಲಿಲ್ಲ. ಆದರೆ ನಿಮಗೆ ಹಾಗೂ ಅಪ್ಪನಿಗೆ ಅಷ್ಟೊಂದು ಪ್ರೀತಿ ತೋರಿಸುವ ಮಂಡ್ಯ ಜನ ನನ್ನನ್ನ ಕೈ ಬಿಟ್ಟಿದ್ದು ನನಗೆ ಬೇಜಾರಾಯಿತು ಅಷ್ಟೇ ಎಂದಿದ್ದಾರೆ.

ರಾಜಕಾರಣದಲ್ಲಿ ನಮ್ಮಗುರಿ ಸ್ಪಷ್ಟವಾಗಿರಬೇಕು. ಎಷ್ಟೇ ಕಷ್ಟ ಆದರೂ ಗುರಿ ಮುಟ್ಟುವ ಛಲ ಇರಬೇಕು. ನೀನು ಮಂಡ್ಯದಲ್ಲೇ ರಾಜಕಾರಣ ಮಾಡೋದಾದ್ರೆ ಸ್ಪಷ್ಟವಾದ ತೀರ್ಮಾನ ಮಾಡಿ ಮುಂದುವರಿ. ಮುಂದೆ ಹೋದ ಮೇಲೆ ಹಿಂದೆ ಬರೋ ಹಾಗಿರಬಾರದು ಎಂದು ಎಚ್ಡಿಡಿ ಮಾತಿಗೆ ನಿಖಿಲ್, ಇಲ್ಲ ತಾತಾ ಇಷ್ಟು ಮುಂದೆ ಹೋದ ಮೇಲೆ ಹಿಂದೆ ಬರುವ ಪ್ರಶ್ನೆಯೇ ಇಲ್ಲ. ಎಲ್ಲಿ ಸೋತಿದ್ದೀನಿ ಅಲ್ಲೇ ಗೆಲ್ಲಬೇಕು ಗೆಲ್ಲುತ್ತೇನೆ ಎಂದು ತಿಳಿಸಿದ್ದಾರೆ.
ಯಾರ ವಿರುದ್ಧ ಮಾತನಾಡಬೇಡ. ನಿನ್ನ ಪಾಡಿಗೆ ನೀನು ಕೈಲಾದ ಕೆಲಸ ಮಾಡಿಕೊಂಡು ಹೋಗು. ಜನ ಅವರಾಗಿಯೇ ನಿನ್ನ ಇಷ್ಟ ಪಡಬೇಕು. ಸೋಲಿಸಿದರೂ ನಮ್ಮ ಜೊತೆಗಿದ್ದು ಕಷ್ಟ ಸುಖಕ್ಕೆ ಸ್ಪಂದಿಸಿದ ಅನ್ನಬೇಕು. ಹಾಗೆ ಕೆಲಸ ಮಾಡಬೇಕು ಅದಕ್ಕೆ ಬದ್ಧತೆ ಇರಬೇಕು ಎಂದಿದ್ದಾರೆ. ಇದಕ್ಕೆ ನಾನು ಯಾರ ವಿರುದ್ಧವೂ ಮಾತನಾಡಲ್ಲ. ಮಂಡ್ಯದಲ್ಲೇ ಇದ್ದು ಕೆಲಸ ಮಾಡುತ್ತೇನೆ ಎಂದು ನಿಖಿಲ್ ಉತ್ತರಿಸಿದ್ದಾರೆ.

ಇನ್ನೊಂದು ವಿಷಯ ತಿಳ್ಕೋ ನೀನು ಮಂಡ್ಯದಲ್ಲಿ ಓಡಾಡೋದು ನಾಳೆ ಇನ್ಯಾರೋ ರಾಮನಗರ, ಮಾಗಡಿ ಅಲ್ಲಿ ನಿಂತ್ರೆ ಸುಲಭವಾಗಿ ಗೆಲ್ಲಬಹುದು ಅಂದ್ರೆ ಅವಾಗ ಇನ್ನೊಂದು ತರ ಯೋಚನೆ ಮಾಡೋ ಹಾಗೆ ಮಾಡ್ಕೋಬೇಡ ಎಂದು ಹೇಳಿದ್ದಕ್ಕೆ ನಿಖಿಲ್, ಖಂಡಿತಾ ಇಲ್ಲ ತಾತಾ ನಾನು ಬೇರೆ ಯೋಚನೆ ಮಾಡಲ್ಲ. ನನಗೆ ನನ್ನ ಸೋಲಿಗಿಂತ ನಿಮ್ಮ ಸೋಲು ಜಾಸ್ತಿ ನೋವಾಯ್ತು ಎಂದು ತಿಳಿಸಿದ್ದಾರೆ.
ಸೋಲಿಗೆ ಎದೆಗುಂದಬೇಡ. ಯಾರಿಗೂ ಬೈಬೇಡ, ಗುರಿ ಸ್ಪಷ್ಟವಾಗಿರಲಿ ರಾಜಕೀಯವಾಗಿ ಮುಂದುವರಿ ಎಂದು ಪಾಠ ಮಾಡಿದ್ದಾರೆ. ಒಟ್ಟಿನಲ್ಲಿ ಇದೀಗ ರಾಜಕೀಯ ಚಾಣಕ್ಯ ದೇವೇಗೌಡರ ಹಿತ ನುಡಿ, ಗುರುಬೋಧನೆಗೆ ನಿಖಿಲ್ ರಿಂದ ಯಾವ ರೀತಿಯ ರಾಜಕೀಯ ನಡೆಗೆ ಕಾರಣವಾಗಬಹುದು ಎಂಬ ಕುತೂಹಲವನ್ನು ಈಗ ಹುಟ್ಟು ಹಾಕಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.
ಕಳೆದ ಕೆಲ ವರ್ಷಗಳಿಂದ ಎಪಿಡರ್ಮೋಡೈಸ್ ಪ್ಲಾಸಿಯಾ ವೆರುಸಿಫಾರ್ಮ್ (ಟ್ರೀ ಮ್ಯಾನ್ ರೋಗ) ಎಂಬ ವಿಚಿತ್ರವಾದ ಚರ್ಮದ ಕಾಯಿಲೆಗೆ ತುತ್ತಾಗಿ ಕೈಯ್ಯಾರೆ ಊಟ ಅಥವಾ ಬೇರೆ ಕೆಲಸ ಮಾಡಲು ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ 27 ವರ್ಷದ ಅಬುಲ್ ಬಜಂದಾರ್ಗೆ ಬರೋಬ್ಬರಿ 19 ಶಸ್ತ್ರ ಚಿಕಿತ್ಸೆ ಮಾಡಿದ್ರೂ ತೊಂದರೆ ನಿವಾರಣೆ ಆಗಿಲ್ಲ.
ಕೋಲಾರ: ತಾಲೂಕಿನ ಐತರಾಸನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಜ್ಞಾನ ಸಹ ಶಿಕ್ಷಕರಾದ ಸಿ.ಮುನಿರಾಜು ಅವರಿಗೆ ಕರ್ನಾಟಕದಲ್ಲಿ ಏಕಕಾಲಕ್ಕೆ ಅತೀ ಹೆಚ್ಚು ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ಕರ್ನಾಟಕದ ವಿವಿಧ ವಿಭಾಗಗಳಲ್ಲಿ ಒಂದೇ ಬಾರಿಗೆ ಆಯೋಜಿಸಿ ಅನುಷ್ಠಾನಗೊಳಿಸಿದ್ದಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ 2023 ಅವಾರ್ಡ್ ನೀಡಲಾಗಿದೆ. ಈ ರೆಕಾರ್ಡನ್ನು ಕರ್ನಾಟಕ ಜೂನಿಯರ್ ಚೆಂಬರ್ ಇಂಟರ್ನ್ಯಾಷನಲ್ ಕರ್ನಾಟಕ ತಂಡದಿಂದ ಆಯೋಜಿಸಿದ್ದು, ಕರ್ನಾಟಕದ 253 ಶಾಲೆಗಳಲ್ಲಿ 13 ರಿಂದ 18 ವರ್ಷದೊಳಗಿನ ಮಕ್ಕಳಿಗೆ “ಬದುಕಿನಲ್ಲಿ ನಿರ್ಧಾರ ತೆಗೆದುಕೊಳ್ಳು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218891 ಮೇಷ(29 ನವೆಂಬರ್, 2018) ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಸಂತೋಷದ – ಚೈತನ್ಯದಾಯಕ – ಪ್ರಿಯವಾದ ಚಿತ್ತದ – ನಿಮ್ಮ ಖುಷಿಯ…
ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…
ರೈಲ್ವೆ ಇಲಾಖೆ ಕೇಂದ್ರ ಸರ್ಕಾರಕ್ಕೊಂದು ಪತ್ರ ಬರೆದಿದೆ. ರೈಲ್ವೆ ಇಲಾಖೆಯಲ್ಲಿ ಕುಟುಂಬ ಪಿಂಚಣಿ ವ್ಯವಸ್ಥೆಯಿದೆ. ಅದಕ್ಕೆ ಕೆಲವೊಂದು ನಿಯಮಗಳಿವೆ. ಆದ್ರೆ ಒಂದು ವರ್ಷದ ಹಿಂದೆ ರೈಲ್ವೆ ಸಿಬ್ಬಂದಿ ಪುತ್ರ ಈಗ ಪುತ್ರಿಯಾಗಿರುವ ವ್ಯಕ್ತಿ ಕುಟುಂಬ ಪಿಂಚಣಿಗಾಗಿ ಪತ್ರ ಬರೆದಿದ್ದಾನೆ. ಇದೇ ವಿಚಾರ ಸದ್ಯ ಕೇಂದ್ರದ ಮೆಟ್ಟಿಲೇರಿದೆ. 2017ರಲ್ಲಿ ರೈಲ್ವೆ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಅವ್ರ 32 ವರ್ಷದ ಮಗ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ವಾಸ್ತವವಾಗಿ ಸಿಬ್ಬಂದಿ ಹಣವನ್ನೇ ಕುಟುಂಬ ಆಶ್ರಯಿಸಿಕೊಂಡಿದ್ದರೆ ಮಾತ್ರ ಪಿಂಚಣಿ ನೀಡಲಾಗುತ್ತದೆ. 25 ವರ್ಷದೊಳಗಿನ ಮದುವೆಯಾಗದ…