ಸುದ್ದಿ

ಸೋಲಿನಿಂದ ಬೇಸರಗೊಂಡಿರುವ ಮೊಮ್ಮಗನಿಗೆ ರಾಜಕೀಯ ಪಾಠ ಹೇಳಿಕೊಟ್ಟ ತಾತ:ದೇವೇಗೌಡರು…..!

48

ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡರು ನಿಖಿಲ್ ಗೆ ರಾಜನೀತಿಯ ಪಾಠ ಮಾಡಿದ್ದಾರೆ. ಸೋಲನ್ನ ಹೇಗೆ ಎದುರಿಸಬೇಕು, ಸೋಲಿನಿಂದ ಗೆಲುವಿನ ಕಡೆಗೆ ನಡೆದು ಹೋಗುವುದು ಹೇಗೆ ಎಂಬುದರ ಕುರಿತು ಪಾಠ ಮಾಡಿದ್ದಾರೆ.ಸೋಲಿನಿಂದ ಬೇಸರವಾಗಿದ್ದ ನಿಖಿಲ್ ಅವರನ್ನ ಪದ್ಮನಾಭ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವ ದೇವೇಗೌಡರು ರಾಜನೀತಿ ಬೋಧಿಸಿದ್ದಾರೆ. ಸೋಲು ಗೆಲುವು ಜೀವನದಲ್ಲಿ ಸಾಮಾನ್ಯ. ಎರಡನ್ನೂ ಆತ್ಮವಿಶ್ವಾಸದಿಂದಲೇ ಎದುರಿಸಬೇಕು ಎಂದು ತಮ್ಮ ಮೊಮ್ಮಗನಿಗೆ ರಾಜಪಾಠ ಬೋಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಚುನಾವಣೆ ಅಂದಮೇಲೆ ಸೋಲು-ಗೆಲುವು ಎಲ್ಲವೂ ಸಹಜ. ಅದನ್ನ ಮನಸ್ಸಿಗೆ ಹಚ್ಚಿಕೊಂಡು ಬೇಸರ ಮಾಡಿಕೊಳ್ಳುವುದಲ್ಲ. ಎಲ್ಲವನ್ನ ಮರೆತು ಮುಂದುವರಿಯಬೇಕು ಎಂದು ಎಚ್‍ಡಿಡಿ ಹೇಳಿದ್ದಾರೆ. ಇದಕ್ಕೆ ನಾನೇನು ಸೋತ ಬೇಸರದಲ್ಲಿಲ್ಲ. ಆದರೆ ನಿಮಗೆ ಹಾಗೂ ಅಪ್ಪನಿಗೆ ಅಷ್ಟೊಂದು ಪ್ರೀತಿ ತೋರಿಸುವ ಮಂಡ್ಯ ಜನ ನನ್ನನ್ನ ಕೈ ಬಿಟ್ಟಿದ್ದು ನನಗೆ ಬೇಜಾರಾಯಿತು ಅಷ್ಟೇ ಎಂದಿದ್ದಾರೆ.

ರಾಜಕಾರಣದಲ್ಲಿ ನಮ್ಮಗುರಿ ಸ್ಪಷ್ಟವಾಗಿರಬೇಕು. ಎಷ್ಟೇ ಕಷ್ಟ ಆದರೂ ಗುರಿ ಮುಟ್ಟುವ ಛಲ ಇರಬೇಕು. ನೀನು ಮಂಡ್ಯದಲ್ಲೇ ರಾಜಕಾರಣ ಮಾಡೋದಾದ್ರೆ ಸ್ಪಷ್ಟವಾದ ತೀರ್ಮಾನ ಮಾಡಿ ಮುಂದುವರಿ. ಮುಂದೆ ಹೋದ ಮೇಲೆ ಹಿಂದೆ ಬರೋ ಹಾಗಿರಬಾರದು ಎಂದು ಎಚ್‍ಡಿಡಿ ಮಾತಿಗೆ ನಿಖಿಲ್, ಇಲ್ಲ ತಾತಾ ಇಷ್ಟು ಮುಂದೆ ಹೋದ ಮೇಲೆ ಹಿಂದೆ ಬರುವ ಪ್ರಶ್ನೆಯೇ ಇಲ್ಲ. ಎಲ್ಲಿ ಸೋತಿದ್ದೀನಿ ಅಲ್ಲೇ ಗೆಲ್ಲಬೇಕು ಗೆಲ್ಲುತ್ತೇನೆ ಎಂದು ತಿಳಿಸಿದ್ದಾರೆ.
ಯಾರ ವಿರುದ್ಧ ಮಾತನಾಡಬೇಡ. ನಿನ್ನ ಪಾಡಿಗೆ ನೀನು ಕೈಲಾದ ಕೆಲಸ ಮಾಡಿಕೊಂಡು ಹೋಗು. ಜನ ಅವರಾಗಿಯೇ ನಿನ್ನ ಇಷ್ಟ ಪಡಬೇಕು. ಸೋಲಿಸಿದರೂ ನಮ್ಮ ಜೊತೆಗಿದ್ದು ಕಷ್ಟ ಸುಖಕ್ಕೆ ಸ್ಪಂದಿಸಿದ ಅನ್ನಬೇಕು. ಹಾಗೆ ಕೆಲಸ ಮಾಡಬೇಕು ಅದಕ್ಕೆ ಬದ್ಧತೆ ಇರಬೇಕು ಎಂದಿದ್ದಾರೆ. ಇದಕ್ಕೆ ನಾನು ಯಾರ ವಿರುದ್ಧವೂ ಮಾತನಾಡಲ್ಲ. ಮಂಡ್ಯದಲ್ಲೇ ಇದ್ದು ಕೆಲಸ ಮಾಡುತ್ತೇನೆ ಎಂದು ನಿಖಿಲ್ ಉತ್ತರಿಸಿದ್ದಾರೆ.

ಇನ್ನೊಂದು ವಿಷಯ ತಿಳ್ಕೋ ನೀನು ಮಂಡ್ಯದಲ್ಲಿ ಓಡಾಡೋದು ನಾಳೆ ಇನ್ಯಾರೋ ರಾಮನಗರ, ಮಾಗಡಿ ಅಲ್ಲಿ ನಿಂತ್ರೆ ಸುಲಭವಾಗಿ ಗೆಲ್ಲಬಹುದು ಅಂದ್ರೆ ಅವಾಗ ಇನ್ನೊಂದು ತರ ಯೋಚನೆ ಮಾಡೋ ಹಾಗೆ ಮಾಡ್ಕೋಬೇಡ ಎಂದು ಹೇಳಿದ್ದಕ್ಕೆ ನಿಖಿಲ್, ಖಂಡಿತಾ ಇಲ್ಲ ತಾತಾ ನಾನು ಬೇರೆ ಯೋಚನೆ ಮಾಡಲ್ಲ. ನನಗೆ ನನ್ನ ಸೋಲಿಗಿಂತ ನಿಮ್ಮ ಸೋಲು ಜಾಸ್ತಿ ನೋವಾಯ್ತು ಎಂದು ತಿಳಿಸಿದ್ದಾರೆ.

ಸೋಲಿಗೆ ಎದೆಗುಂದಬೇಡ. ಯಾರಿಗೂ ಬೈಬೇಡ, ಗುರಿ ಸ್ಪಷ್ಟವಾಗಿರಲಿ ರಾಜಕೀಯವಾಗಿ ಮುಂದುವರಿ ಎಂದು ಪಾಠ ಮಾಡಿದ್ದಾರೆ. ಒಟ್ಟಿನಲ್ಲಿ ಇದೀಗ ರಾಜಕೀಯ ಚಾಣಕ್ಯ ದೇವೇಗೌಡರ ಹಿತ ನುಡಿ, ಗುರುಬೋಧನೆಗೆ ನಿಖಿಲ್ ರಿಂದ ಯಾವ ರೀತಿಯ ರಾಜಕೀಯ ನಡೆಗೆ ಕಾರಣವಾಗಬಹುದು ಎಂಬ ಕುತೂಹಲವನ್ನು ಈಗ ಹುಟ್ಟು ಹಾಕಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಚಂಧನ್ ಶೆಟ್ಟಿ ಮತ್ತು ನಿವೇದಿತಾಗೆ ಕುಟುಂಬದವರಿಂದ ಭರ್ಜರಿ ಉಡುಗೊರೆ. ಕಾರಿನ ಬೆಲೆ ಎಷ್ಟು ಗೊತ್ತಾ.

    ನಿನ್ನೆ ತಾನೇ ಚಂದನ್ ಶೆಟ್ಟಿ ಅವರು ತನ್ನ ಬಹುದಿನಗಳ ಪ್ರೇಯಸಿ ನಿವೇಧಿತಾ ಗೌಡ ಅವರನ್ನ ಗುರು ಹಿರಿಯರ ಸಮ್ಮುಖದಲ್ಲಿ ಮೈಸೂರಿನಲ್ಲಿ ಮದುವೆಯಾಗಿದ್ದು ನಿಮಗೆಲ್ಲ ಗೊತ್ತೇ. ಬಿಗ್ ಬಾಸ್ ನಲ್ಲಿ ಆರಂಭ ಆದ ಇವರಿಬ್ಬರ ಪ್ರೀತಿಗೆ ನಿನ್ನೆ ಒಂದು ಅರ್ಥ ಬಂತು ಹೇಳಿದರೆ ತಪ್ಪಾಗಲ್ಲ, ಹೌದು ಯುವದಸರ ವೇದಿಕೆಯ ಮೇಲೆ ಲಕ್ಷಾಂತರ ಜನರ ಸಮ್ಮುಖದಲ್ಲಿ ಚಂದನ್ ಶೆಟ್ಟಿ ಅವರು ನಿವೇಧಿತಾ ಗೌಡ ಅವರಿಗೆ ಪ್ರೊಪೋಸ್ ಮಾಡಿ ಕೈಗೆ ರಿಂಗ್ ತೊಡಿಸಿದ್ದರು. ಇನ್ನು ಯುವದಸರ ವೇಧಿಕೆಯ ಮೇಲೆ ಕೊಟ್ಟ ಮಾತಿನಂತೆ…

  • inspirational

    ಚೈತ್ರ ಮಾಸದಲ್ಲಿ ಬೇವನ್ನು ತಿನ್ನುವುದು ಪ್ರಯೋಜನಕಾರಿ

    ಪ್ರಸ್ತುತ, ಚೈತ್ರ ಮಾಸ ನಡೆಯುತ್ತಿದೆ. ಈ ಸಮಯದಲ್ಲಿ, ಬೇವಿನ ಸೇವನೆಯನ್ನು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆಯುರ್ವೇದದಲ್ಲೂ ಚೈತ್ರ ಮಾಸದಲ್ಲಿ ಬೇವಿನ ಎಲೆಗಳನ್ನು ತಿನ್ನುವುದು ಪ್ರಯೋಜನಕಾರಿ, ಚೈತ್ರ ಮಾಸದಲ್ಲಿ ಬೇವಿನ ಎಲೆ ಸೇವಿಸುವುದರಿಂದ ಅವರು ವರ್ಷಪೂರ್ತಿ ರೋಗಗಳಿಂದ ದೂರವಿರುತ್ತಾರೆ ಎಂದು ಹೇಳಲಾಗುತ್ತದೆ. ಬೇವಿನ ಎಲೆಗಳು ಮಾತ್ರವಲ್ಲ, ಅದರ ಕಾಂಡ, ತೊಗಟೆ, ಬೇರು ಮತ್ತು ಹಸಿ ಹಣ್ಣುಗಳೆಲ್ಲವೂ ಔ’ಷಧೀಯ ಗುಣಗಳಿಂದ ತುಂಬಿವೆ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 4 ಬೇವಿನ ಎಲೆಗಳನ್ನು ತಿನ್ನುವ ಮೂಲಕ, ಯಾವ…

  • ಸುದ್ದಿ

    ಮದುವೆಯಾದ ಕೇವಲ ಮೂರೇ ನಿಮಿಷಕ್ಕೆ ಡಿವೋರ್ಸ್..!ಶಾಕ್ ಆಗ್ತೀರಾ ಕರಣ ಕೇಳಿದ್ರೆ..?

    ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್‍ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…

  • ಗ್ಯಾಜೆಟ್

    ವೊಡಾಫೋನ್ ಗ್ರಾಹಕರಿಗೆ ಸಿಹಿ ಸುದ್ದಿ! ತನ್ನ ಗ್ರಾಹಕರಿಗಾಗಿ ಭರ್ಜರಿ ಆಫರ್ ನೀಡಿದ ವೊಡಾಫೋನ್ !!!

    ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.

  • ಜ್ಯೋತಿಷ್ಯ

    ಸೋಮವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಇಂದು ಸೋಮವಾರ, 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಖರ್ಚುವೆಚ್ಚಗಳಿದ್ದರೂ ಧನಾಗಮನ ಉತ್ತಮ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುವುದು. ತುಸು ಅನಾರೋಗ್ಯ ಕಾಡುವ ಸ್ಥಿತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ . ವೃಷಭ:- ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಶತ್ರುಗಳಿಂದ ಭೀತಿಯ ವಾತಾವರಣ ಸೃಷ್ಟಿ. ಹಣವನ್ನು ಒಯ್ಯುವಾಗ ಎಚ್ಚರಿಕೆಯಿಂದ ಇರಿ.ಅಧಿಕಾರಿಗಳ ಕೆಂಗಣ್ಣಿಗೆ ಗುರಿ. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮ್ಮ ಪರವಾಗಿ ತೀರ್ಪು . ಮಿಥುನ:– ದೂರ ಸಂಚಾರದಲ್ಲಿ ಜಾಗ್ರತೆ.ತಾಯಿಯವರ ಆರೋಗ್ಯದಲ್ಲಿ ವ್ಯತ್ಯಯ. ಯೋಗ್ಯ ವಯಸ್ಕರಿಗೆ ಕಂಕಣಬಲ.ಯಂತ್ರೋಪಕರಣಗಳಿಂದ ಆದಾಯ….

  • ಗ್ಯಾಜೆಟ್

    ಕೇವಲ 98 ರೂ..! ತನ್ನ ಗ್ರಾಹಕರಿಗೆ ಜಿಯೋ ಕೊಡ್ತು ಬಿಗ್ ಆಫರ್…

    ಜಿಯೋ ಬಂದಮೇಲೆ ಮೊಬೈಲ್ ಕಂಪನಿಗಳ ನಡುವಿನ ಪೈಪೋಟಿ ಶುರುವಾಗಿದ್ದು,ಇದರಿಂದ ಗ್ರಾಹಕರಿಗೆ ಅನುಕೂಲವಾಗಿದೆ. ಜಿಯೋ ಗ್ರಾಹಕರಿಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದು, 98 ರೂಪಾಯಿಗೆ