ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ. ಅದಕ್ಕೆ ಟೀಚರ್…’ ಮಕ್ಕಳೆ ನಾಳೆ ಬೆಳಿಗ್ಗೆ ಶಾಲೆಗೆ ಬೇಗ ಬನ್ನಿ …ನಿಮಗೆ ಸ್ವರ್ಗ ಹಾಗೂ ನರಕಗಳನ್ನು ತೋರಿಸುತ್ತೇನೆ’ ಎಂದು ಹೇಳುತ್ತಾರೆ. ಅವುಗಳನ್ನು ನೋಡಿದ ಮೇಲೆ ಅವುಗಳ ವ್ಯತ್ಯಾಸ ನಿಮಗೇ ತಿಳಿಯುತ್ತದೆ. ಎನ್ನುತ್ತಾರೆ.

ಮಾರನೇ ದಿನ ಮಕ್ಕಳೆಲ್ಲರೂ ಬೇಗ ಶಾಲೆಗೆ ಬರುತ್ತಾರೆ.ಅವರಲ್ಲಿ ಸ್ವರ್ಗ ಹಾಗೂ ನರಕಗಳ ಬಗ್ಗೆ ತಿಳಿದುಕೊಳ್ಳುವ ಕುತೂಹಲವಿರುತ್ತದೆ.ಭೋಜನ ವಿರಾಮದ ಸಮಯದಲ್ಲಿ … ನರಕದಲ್ಲಿ ಇರುವವರೆಲ್ಲರೂ ಊಟ ಮಾಡಲು ಕುಳಿತುಕೊಳ್ಳುತ್ತಾರೆ. ಅವರ ತಟ್ಟೆಗಳಲ್ಲಿ ಪಂಚ ಭಕ್ಷ್ಯ ಪರಮಾನ್ನಗಳಿರುತ್ತವೆ. ಆದರೆ, ಯಾರಿಂದಲೂ ತಿನ್ನಲು ಸಾಧ್ಯವಾಗುತ್ತಿಲ್ಲ. ಕಾರಣವೇನೆಂದರೆ… ಅವರೆಲ್ಲರ ಕೈಗಳಿಗೆ ಮುಳ್ಳುಗಳಿಂದ ಕೂಡಿರುವ ಬಳೆಗಳನ್ನು ಹಾಕಿರುತ್ತಾರೆ. ಪದಾರ್ಥಗಳನ್ನು ತಿನ್ನಲು ಮುಂದಾದಾಗ ,ಬಳೆಯ ಮುಳ್ಳುಗಳು ತುಟಿಗಳಿಗೆ ಚುಚ್ಚುತ್ತವೆ. ಹಾಗಾಗಿ ತಮ್ಮ ಎದುರು ಪಂಚ ಭಕ್ಷ್ಯ ಪರಮಾನ್ನಗಳಿದ್ದರೂ ಅವುಗಳನ್ನು ತಿನ್ನಲಾಗುವುದಿಲ್ಲ. ಅರ್ಧ ಹಸಿವೆಯಿಂದಲೇ ಕಾಲ ಕಳೆಯ ಬೇಕಾಗಿದೆ.

ಈಗ ಟೀಚರ್ ಮಕ್ಕಳನ್ನು… ಸ್ವರ್ಗಕ್ಕೆ ಕರೆದುಕೊಂಡು ಹೋಗುತ್ತಾರೆ. ಇಲ್ಲಿಯೂ ಸಹ ಅವರ ತಟ್ಟೆಗಳಲ್ಲಿ ಪಂಚಭಕ್ಷ್ಯ ಪರಮಾನ್ನಗಳಿರುತ್ತವೆ. ಎಲ್ಲರ ಕೈಗಳಿಗೂ ಮುಳ್ಳುಗಳಿಂದ ಕೂಡಿದ ಬಳೆಗಳಿರುತ್ತವೆ. ಆದರೆ, ಇವರು ಯಾವುದೇ ತೊಂದರೆ ಪಡದೆ ತಮ್ಮ ಮುಂದಿರುವ ಆಹಾರವನ್ನು ಹೊಟ್ಟೆ ತುಂಬಾ ತಿನ್ನುತ್ತಾರೆ.

ಈಗ ಟೀಚರ್ ಮಕ್ಕಳಲ್ಲಿ…ಮಕ್ಕಳೇ ನೀವೇ ನೋಡಿದಿರಲ್ಲಾ..?ಎಂದು ಕೇಳುತ್ತಾರೆ. ನರಕದಲ್ಲಿರುವವರ ಕೈಗಳಲ್ಲಿ ಮುಳ್ಳುಗಳಿಂದ ಕೂಡಿದ ಬಳೆಗಳಿವೆ , ಸ್ವರ್ಗದಲ್ಲಿರುವವರ ಕೈಯಲ್ಲೂ ಇವೆ. ಆದರೆ, ಅವರಿಂದ ತಿನ್ನಲಾಗಲಿಲ್ಲ. ಇವರು ಹೊಟ್ಟೆ ತುಂಬಾ ತಿಂದರು.
ಇದು ಹೇಗೆ ಸಾಧ್ಯವಾಯಿತೆಂದರೆ…ನರಕದಲ್ಲಿರುವವರು ತಮ್ಮ ಕೈಗಳಿಂದ ಅಹಾರವನ್ನು ತಿನ್ನಲು ಹೋದಾಗ ಬಳೆಗಳಲ್ಲಿದ್ದ ಮುಳ್ಳುಗಳು ಅವರ ಮೂತಿಗೆ ಚುಚ್ಚಿಕೊಳ್ಳುತ್ತಿದ್ದವು. ಆದರೆ, ಸ್ವರ್ಗದಲ್ಲಿರುವವರು… ಪ್ರತಿಯೊಬ್ಬರೂ ತಾವೇ ತಿನ್ನದೆ…ತಮ್ಮ ಎದುರಿಗೆ ಕುಳಿತವರಿಗೆ ತಿನ್ನಿಸುತ್ತಿದ್ದರು. ಹಾಗಾಗಿ ಮುಳ್ಳುಗಳು ಚುಚ್ಚಿಕೊಳ್ಳುವ ಪ್ರಶ್ನೆಯೇಯಿಲ್ಲ.

ಅಂದರೆ…ಮನುಷ್ಯ ಪರೋಪಕಾರದಿಂದ ಜೀವಿಸುವುದೇ ಸ್ವರ್ಗ. ಸ್ವಾರ್ಥದಿಂದ ಜೀವಿಸುವುದೇ ನರಕ. ಎಂದು ಟೀಚರ್ ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ. ಆದ್ರೆ ಈ ಹಾರ್ಟ್ ಅಟ್ಯಾಕ್ ಬರೋ ಮುನ್ಸೂಚನೆ ಮೊದ್ಲೇ ನಮ್ಗೆ ಗೊತ್ತಾದ್ರೆ ಹೇಗಿರುತ್ತೆ ಗೊತ್ತಾ?
ಪ್ರಧಾನಿಮಂತ್ರಿಯವರು `ಮುದ್ರ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.
ನಮ್ಮ ಭಾರತ ಶಾಂತಿ ಪ್ರಿಯ ರಾಷ್ಟ್ರ. ಪಕ್ಕದ ಶತ್ರು ರಾಷ್ಟ್ರಗಳು ಏನೇ ಮಾಡಿದರೂ,ಅವರಿಗೆ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ.ಇನ್ನೊಮ್ಮೆ ಹೀಗೆ ಮಾಡಿದ್ರೆ ನಾವು ಸುಮ್ಮನಿರಲ್ಲ ಅಂತ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ. ಆದ್ರೆ ಕೆಲವೊಂದು ರಾಷ್ಟ್ರಗಳು ಇದಕ್ಕೆ ತದ್ವಿರುದ್ದ.ಏಕೆಂದರೆ ಅವರು ನಮ್ಮ ತರ ಎಚ್ಚರಿಕೆ ಮಾತ್ರ, ಯಾವುದೋ ಒಂದು ರೀತಿ ಸೇಡು ತೀರಿಸಿಕೊಳ್ಳುತ್ತವೆ
ಈಗಾಗಲೇ ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನು ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ
ವಯಸ್ಸಿಗೆ ಸಭಂದಪಟ್ಟ ವಿಷಯ ಬಂದಾಗ ಯಾರನ್ನಾದರೂ ನೋಡಿದ್ರೆ, ಅಂದಾಜು ಅವರ ವಯಸ್ಸನ್ನು ಗುರುತಿಸುವುದು ಕಷ್ಟದ ಕೆಲಸವೇನಲ್ಲ. ಆದ್ರೆ ಕೆಲವೊಬ್ಬರನ್ನು ನೋಡಿದಾಗ ಅದು ಕಷ್ಟ ಸಾಧ್ಯವೆನಿಸಬಹುದು. ಅಂತವರೇ ಆದ ಒಬ್ಬರ ಬಗ್ಗೆ ನಾವು ಹೇಳುತ್ತಿದ್ದೇವೆ.