ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.
ಆದರೆ ಈ ಹಣ್ಣು ಕಾಯಿಲೆ ತರುವುದಿಲ್ಲ, ಕಾಯಿಲೆ ಹೋಗಲಾಡಿಸಲು ಸಹಕಾರಿಯಾಗಿದೆ.
ಹಲಸಿನ ಹಣ್ಣು ತಿಂದ್ರೆ ತಿಂದರೆ ಏನೆಲ್ಲಾ ಆರೋಗ್ಯಕಾರಿ ಲಾಭಗಳಿವೆ ಗೊತ್ತಾ? ತಿಳಿಯಲು ಮುಂದೆ ಓದಿ…
ಹಲಸಿನ ಹಣ್ಣು ತಿಂದ್ರೆ ತಿಂದರೆ ಜ್ವರ ಬರುವುದಿಲ್ಲ, ಆದರೆ ಜ್ವರ ಇದ್ದಾಗ ಈ ಹಣ್ಣುಗಳನ್ನು ತಿನ್ನಲು ಹೋಗಬೇಡಿ.
ಹಲಸಿನ ಹಣ್ಣಿನ ಆರೋಗ್ಯಕರ ಗುಣಗಳು:
ಹಲಸಿನ ಹಣ್ಣು ತಿಂದರೆ ಕಾಯಿಲೆ ಬರುತ್ತದೆ ಎಂದು ತಿನ್ನಲು ಭಯಪಡುವಾಗ ಇದನ್ನು ತಿಂದರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಅಂದರೆ ಆಶ್ಚರ್ಯವಾಗುವುದು ಸಹಜ. ಹಲಸಿನ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಉತ್ತಮ ಪೋಷಕಾಂಶಗಳಿದ್ದು ಶೀತ, ಸೋಂಕು ಇವುಗಳನ್ನು ತಪ್ಪಿಸಲು ಸಹಕಾರಿಯಾಗಿದೆ. ಇದರಲ್ಲಿ antioxidant ಪ್ರಮಾಣ ಅಧಿಕವಾಗಿದೆ.
ದೇಹದಲ್ಲಿ ಖನಿಜಾಂಶಗಳ ಕೊರತೆ ಉಂಟಾದರೆ ದೇಹದಲ್ಲಿ ಸಕ್ಕರೆ ಪ್ರಮಾಣ ಅಧಿಕವಾಗುತ್ತದೆ. ಹಲಸಿನ ಹಣ್ಣಿನಲ್ಲಿ ಖನಿಜಾಂಶಗಳು ಅಧಿಕವಾಗಿ ಇರುವುದರಿಂದ ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ.
ಈ ಹಣ್ಣಿನಲ್ಲಿ ಅಧಿಕ ಮ್ಯಾಗ್ನಿಷಿಯಂ ಮತ್ತು ಕ್ಯಾಲ್ಸಿಯಂ ಅಂಶವಿರುವುದರಿಂದ ಮೂಳೆಗಳನ್ನು ಬಲಪಡಿಸಲು ಸಹಕಾರಿಯಾಗಿದೆ. ಮ್ಯಾಗ್ನಿಷಿಯಂ, ಕ್ಯಾಲ್ಸಿಯಂ, ಪೊಟಾಷ್ಯಿಯಂ ಅಧಿಕವಿರುವ ಆಹಾರ ತಿಂದರೆ ಮೂಳೆಗಳು ಗಟ್ಟಿಯಾಗುವುದು.
ಹಲಸಿನ ಹಣ್ಣಿನಲ್ಲಿರುವ ಖನಿಜಂಶಗಳು (micromineral) ಥೈರಾಯ್ಡ್ ಗ್ರಂಥಿಯ ಆರೋಗ್ಯವನ್ನು ಕಾಪಾಡುತ್ತದೆ. ದೇಹದಲ್ಲಿ ಹಾರ್ಮೋನ್ ಗಳ ಉತ್ಪತ್ತಿಯನ್ನು ಸರಿ ಪ್ರಮಾಣದಲ್ಲಿ ಇಡಲು ಥೈರಾಯ್ಡ್ ಗ್ರಂಥಿ ಮುಖ್ಯ ಪಾತ್ರವಹಿಸುತ್ತದೆ.
ಒಂದು ಹಲಸಿನ ಹಣ್ಣಿನಲ್ಲಿ ಬಾಳೆಹಣ್ಣಿನಲ್ಲಿರುವಷ್ಟು ಪೊಟಾಷ್ಯಿಯಂ ಅಂಶವಿರುತ್ತದೆ. ಪೊಟಾಷ್ಯಿಯಂ ದೇಹದಲ್ಲಿ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುವಲ್ಲಿ ಸಹಕಾರಿಯಾಗಿದೆ.
ಇದರಲ್ಲಿ ನಾರಿನಂಶವಿರುವುದರಿಂದ ಮಲಬದ್ಧತೆ ಸಮಸ್ಯೆ ಇರುವವರು ಇದನ್ನು ತಿನ್ನುವುದು ಒಳ್ಳೆಯದು.
ಇದರಲ್ಲಿ ಕ್ಯಾರೆಟ್ ನಲ್ಲಿರುವ ಕಾಲು ಭಾಗದಷ್ಟು ವಿಟಮಿನ್ ಎ ಅಂಶವಿರುವುದರಿಂದ ಹಣ್ಣಿನ ದೃಷ್ಟಿ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ವಿಟಮಿನ್ ಎ ಕೊರತೆ ಉಂಟಾದರೆ ಇರುಳು ಕುರುಡುತನ ಉಂಟಾಗುವುದು.
ಇದರಲ್ಲಿ ವಿಟಮಿನ್ ಬಿ6 ಅಂಶವಿರುವುದರಿಂದ ರಕ್ತದಲ್ಲಿರುವ homocystein ಪ್ರಮಾಣ ಕಡಿಮೆ ಮಾಡಿ ಹೃದಯದ ಸ್ವಾಸ್ಥ್ಯ ಹೆಚ್ಚಿಸಲು ಸಹಕಾರಿಯಾಗಿದೆ.
ಇದರಲ್ಲಿರುವ ವಿಟಮಿನ್ ಮತ್ತು ಖನಿಜಾಂಶಗಳು ದೇಹದಲ್ಲಿ ರಕ್ತ ಸರಾಗವಾಗಿ ಹರಿಯಲು ಸಹಕಾರಿಯಾಗಿದೆ. ಮೂಳೆಗಳನ್ನು ಬಲಪಡಿಸಿ ಶರೀರದಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆಯನ್ನು ತಡೆಗಟ್ಟುತ್ತದೆ.
ಇದರಲ್ಲಿ ಕಬ್ಬಿಣದಂಶ ಕೂಡ ಇರುವುದರಿಂದ ರಕ್ತ ಹೀನತೆ ಸಮಸ್ಯೆ ನಿವಾರಣೆಗೆ ಇದನ್ನು ತಿನ್ನುವುದು ಒಳ್ಳೆಯದು.
ಮೂಲ: ಸಂಗ್ರಹ ಮಾಹಿತಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಸ್ತಾನ ಪೊಲೀಸರು ಸ್ವಯಂಘೋಷಿತ ದೇವಮಾನವ ಕುಲದೀಪ್ ಸಿಂಗ್ ಝಾಲಾ ಎಂಬಾತನನ್ನು ಬಂಧಿಸಿದ್ದಾರೆ. 20 ವರ್ಷದ ಯುವಕ ಯುವರಾಜ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಈತನ ಬಂಧನವಾಗಿದೆ. ದೇವತೆಯರಾದ ಶಕ್ತಿ ಹಾಗೂ ಜಗದಂಬೆ ತನ್ನಲ್ಲಿ ಪುನರ್ಜನ್ಮ ಪಡೆದಿದ್ದಾರೆ ಅಂತಾ ಕುಲದೀಪ್ ಹೇಳಿಕೊಳ್ತಾನೆ. ನವರಾತ್ರಿ ಸಮಯದಲ್ಲಿ ಈತ ಮಹಿಳೆಯರಂತೆ ವೇಷ ಧರಿಸಿ ಲಿಪ್ ಸ್ಟಿಕ್ ಹಚ್ಚಿಕೊಳ್ತಾನೆ. ಈತನನ್ನು ಜನ ಲಿಪ್ ಸ್ಟಿಕ್ ಬಾಬಾ ಎಂದೇ ಕರೆಯುತ್ತಾರೆ. ಮಗನ ಸಾವಿಗೆ ಬಾಬಾ ಕಾರಣ ಅಂತಾ ಯುವರಾಜ್ ತಂದೆ ಸೋಹನ್ ಸಿಂಗ್ ಪೊಲೀಸರಿಗೆ ದೂರು…
2019ರ ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾಗ್ತಿದ್ದಂತೆ ನೀತಿ ಸಂಹಿತೆ ಜಾರಿಗೆ ಬಂದಿದೆ. ನೀತಿ ಸಂಹಿತೆ ಜಾರಿಯಾದ ಕಾರಣ ದೇಶದಾದ್ಯಂತ ಅನೇಕ ನಿಯಮಾವಳಿಗಳು ಜಾರಿಗೆ ಬರುತ್ತವೆ. ಚುನಾವಣಾ ಆಯೋಗ ಹೊಸ ನಿಯಮಗಳನ್ನು ಕೂಡ ಜಾರಿಗೆ ತಂದಿದೆ. ಸಾಮಾನ್ಯವಾಗಿ ಏಪ್ರಿಲ್-ಮೇ ತಿಂಗಳಿನಲ್ಲಿ ಮದುವೆಗಳು ನಡೆಯುವುದು ಹೆಚ್ಚು. ಆದ್ರೆ ಚುನಾವಣೆ ಹಿನ್ನೆಲೆಯಲ್ಲಿ ಮದುವೆ ವಾದ್ಯಗಳು ಈ ಬಾರಿ ಕಡಿಮೆ ಪ್ರಮಾಣದಲ್ಲಿ ಕೇಳಿ ಬರಲಿವೆ. ಮದುವೆ ಸಂದರ್ಭದಲ್ಲಿ ವಾದ್ಯಗಳ ಬಳಕೆಗೆ ಒಪ್ಪಿಗೆ ಪಡೆಯಬೇಕಾಗುತ್ತದೆ. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಎಸ್ಡಿಎಂ ಒಪ್ಪಿಗೆ ಪಡೆದು…
ಮೈಸೂರು ಸ್ಯಾಂಡಲ್ ಸೋಪ್ ಎಂಬುದು ಕರ್ನಾಟಕದ ಸರ್ಕಾರಿ ಒಡೆತನದ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ಕಂಪನಿಯಿಂದ ಉತ್ಪಾದಿಸಲ್ಪಟ್ಟ ಸಾಬೂರಿನ ಬ್ರಾಂಡ್ ಆಗಿದೆ. 100% ಶುದ್ಧ ಶ್ರೀಗಂಧದ ಎಣ್ಣೆಯಿಂದ ತಯಾರಿಸಿದ ವಿಶ್ವದ ಏಕೈಕ ಸೋಪ್ .
ಇಂದಿನ ಸ್ಮಾರ್ಟ್ಫೋನ್ಗಳೇ ಗಂಡ-ಹೆಂಡತಿಯ ನಡುವೆ ದೂರ ಹೆಚ್ಚಿಸುತ್ತಿವೆಯೇ? ಇತ್ತೀಚಿನ ವರ್ಷಗಳಲ್ಲಿ ಸ್ಮಾರ್ಟ್ಫೋನ್ಗಳು ನಮ್ಮ ಬದುಕಿನ ಅವಿಭಾಜ್ಯ ಅಂಗಗಳಾಗಿವೆ. ಬೆಳಗ್ಗೆ ಎದ್ದ ಕ್ಷಣದಿಂದ ರಾತ್ರಿ ಮಲಗುವವರೆಗೂ ಮೊಬೈಲ್ ಕೈಯಲ್ಲೇ ಇರುತ್ತದೆ. ಆದರೆ ಇದೇ ಸ್ಮಾರ್ಟ್ಫೋನ್ಗಳು ಈಗ ಕುಟುಂಬ ಸಂಬಂಧಗಳ ಮೇಲೆ, ವಿಶೇಷವಾಗಿ ಗಂಡ-ಹೆಂಡತಿ ಸಂಬಂಧಗಳ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ ಎಂಬ ಆತಂಕಕಾರಿ ವರದಿಗಳು ಹೊರಬಿದ್ದಿವೆ. ಭಾರತದಲ್ಲಿ ನಡೆದ ಹಲವು ಅಧ್ಯಯನಗಳು ದಾಂಪತ್ಯ ಜೀವನದಲ್ಲಿ “ಮೊಬೈಲ್ ಅಂತರ” ವೇಗವಾಗಿ ಹೆಚ್ಚುತ್ತಿದೆ ಎಂದು ಸೂಚಿಸುತ್ತಿವೆ. ಏನು ಹೇಳುತ್ತಿವೆ ಅಧ್ಯಯನಗಳು? ಭಾರತದಲ್ಲಿ…
ಇಂಗ್ಲಿಷ್ ನಲ್ಲಿ ಬಿಟರ್ ಗೌರ್ಡ್ ಎಂದು ಕರೆಯಲಾಗುವ ಇದು,ಸೌತೆಕಾಯಿಯಂತಹ ಕ್ಯುಕರ್ಬಿಟೇಸಿಯೆ ಜಾತಿಗೆ ಸೇರಿದ ಉಷ್ಣವಲಯ ಹಾಗು ಉಪೋಷ್ಣವಲಯದ ಬಳ್ಳಿಯಾಗಿದೆ. ಇದು ತಿನ್ನಲು ಯೋಗ್ಯವಾದ ಹಣ್ಣನ್ನು ಹೊಂದಿರುವ ಕಾರಣಕ್ಕೆ ಏಷಿಯಾ , ಆಫ್ರಿಕಾ ಹಾಗು ಕ್ಯಾರೆಬಿಯನ್ ಅಂದರೆ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣು ಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದರಲ್ಲಿಯೂ ಮೂಲಭೂತವಾಗಿ ಹಣ್ಣಿನ ಆಕಾರ ಹಾಗು ಕಹಿಯಲ್ಲಿ ವ್ಯತ್ಯಾಸ ಹೊಂದಿರುವ ಹಲವು ಪ್ರಭೇದಗಳಿವೆ. ಹಾಗಲಕಾಯಿಯ ಉಪಯೋಗಗಳು ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ: ಹಾಗಲಕಾಯಿಯಲ್ಲಿ ಪೈಟೋನ್ಯೂಟ್ರಿಯೆಂಟ್ಗಳೆಂಬ ಆಂಟಿ ಆಕ್ಸಿಡೆಂಟಗಳಿರುತ್ತದೆ. ಇವು ಕೆಟ್ಟ…
ಕನ್ನಡ ಚಿತ್ರ ರಂಗದ ನಟ ಉಪೇಂದ್ರರವರ ರಾಜಕೀಯ ಸುದ್ದಿಗಳು ದಿನಕ್ಕೊಂದಂತೆ ತಿರುವು ಪಡೆದುಕೊಳ್ಳುತ್ತಿವೆ.ಈಗ ಬಂದಿರುವ ಹೊಸ ಸುದ್ದಿ ಏನಪ್ಪಾ ಅಂದ್ರೆ, ನಿಮಗೆಲ್ಲ ಗೊತ್ತಿರುವಂತೆ ಅವರು ಸ್ಥಾಪಸಲು ಹೊರಟಿರುವ ಪಕ್ಷದ ಹೆಸರು ಪ್ರಜಾಕೀಯ ಎಂದು. ಆದ್ರೆ ಮೂಲಗಳ ಪ್ರಕಾರ ಅವರ ಪಕ್ಷದ ಹೆಸರು ಪ್ರಜಾಕೀಯ ಅಲ್ಲ..!