inspirational

ಹವಾ ಮಹಲ್

68

  ಇದು ಭಾರತದ ಜೈಪುರ್‌ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡ
ಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು, ಕಾರಣ ಅಂದು ಅವರು ಕಟ್ಟುನಿಟ್ಟಾಗಿ “ಪರಧಾ” ಅನ್ನು (ಮುಖದ ಹೊದಿಕೆ) ಪಾಲಿಸಬೇಕಿತ್ತು

ಕೆಂಪು ಹಾಗೂ ಗುಲಾಬಿ ಮರಳುಗಲ್ಲಿನಿಂದ ಕಟ್ಟಲಾದ, ಈ ಅರಮನೆ ಜೈಪುರ್‌ನ ವ್ಯಾಪಾರ ಕೇಂದ್ರದ ಮುಖ್ಯ ಸಾರ್ವಜನಿಕ ರಸ್ತೆಯ ಹೃದಯ ಸ್ಥಾನದಲ್ಲಿದೆ. ಇದು ನಗರದ ಅರಮನೆಯ ಭಾಗವಾಗಿದ್ದು, ಜೆನೇನ ಅಥವಾ ಮಹಿಳೆಯರ ಕೋಣೆಗಳಿಗೆ ವಿಸ್ತರಿಸಿದೆ, ಜನಾನರ ಕೋಣೆಗಳು. ವಿಶೇಷವಾಗಿ ನಸುಕಿನಲ್ಲಿ ನೋಡಿದಾಗ ಇದು ಸೂರ್ಯೋದಯದ ಹೊಂಗಿರಣಗಳಿಂದ ಬೆಳಗಿ ಗಮನಾರ್ಹವಾಗಿ ಕಾಣುತ್ತದೆ

ಕಛ್‌ವಾಹ ವಂಶದ ಮಹಾರಾಜ ಸವಾಯಿ ಜೈ ಸಿಂಗ್, ರಾಜಸ್ಥಾನದ ಅರಸ ಮೂಲತಹ ಜೈಪುರ್ ನಗರವನ್ನು 1727ರಲ್ಲಿ ಯೋಜಸಿ ನಿರ್ಮಿಸಿದರು. ಹೇಗಿದ್ದರು, ಅವರ ಮೊಮ್ಮಗ ಹಾಗೂ ಮಹಾರಾಜ ಸವಾಯಿ ಮಾಧೊಸಿಂಗ್ I ರ ಮಗನಾದ, ಸವಾಯಿ ಪ್ರತಾಪ್ ಸಿಂಗ್‌ರವರು 1799ರಲ್ಲಿ ರಾಜಯೋಗ್ಯ ನಗರದ ಅರಮನೆಯ ಮುಂದುವರಿಕೆಯಾಗಿ ಹವಾ ಮಹಲ್ ಅನ್ನು ಕಟ್ಟಿದರು. ಹಿಂದೂ ದೇವರಾದ ಕೃಷ್ಣನ ಪ್ರತಿವಿದ್ದ ಆಳವಾದ ಭಕ್ತಿ ಪ್ರತಾಪ್ ಸಿಂಗ್‌ರನ್ನು ಭಗವಂತನ ಮುಕುಟ ಅಥವಾ ರುಮಾಲಾಗಿ ಅಲಂಕರಿಸಿದ ಭಂಗಿಯ ಈ ನಿರ್ಮಾಣದ ಸಮರ್ಪಣೆಗೆ ಪ್ರೇರಿಸಿತು ಎಂದು ಅನುಮಾನಿಸಲಾಗಿದೆ.ಇದರ ನಿಖರ ಇತಿಹಾಸಕ್ಕೆ ಯಾವುದೇ ಐತಿಹಾಸಿಕ ದಾಖಲೆ ಇಲ್ಲದಿದ್ದರು, ಕಟ್ಟುನಿಟ್ಟಾದ ಪರಧಾ (ಮಹಿಳೆಯರನ್ನು ಪುರುಷರು ನೋಡಲು ತಡೆಯುವ ರೂಢಿ) ಸಂಪ್ರದಾಯದ ಅಡಿಯಲ್ಲಿದ್ದ ರಾಜ ಮನೆತನದ ಮಹಿಳೆಯರು ಮಾರುಕಟ್ಟೆಯ ಕೇಂದ್ರದ ನಡಾವಳಿ ಹಾಗೂ ರಾಜಯೋಗ್ಯ ಮೆರವಣಿಗೆ ಹಾಗೂ ಉತ್ಸವಗಳನ್ನು ಕಲ್ಲಿನಿಂದ ಕೊರೆದ ಪರದೆಯ ಹಿಂದೆ ಕುಳಿತು ವೀಕ್ಷಿಸಲು ಅವಕಾಶ ಕಲ್ಪಿಸಿದ್ದರು ಎಂದು ಊಹಿಸಲಾಗಿದೆ. ಹೊರ ಜನರು ನೋಡದಂತೆ, ಸುಖಸಾಧನಗಳ ಸೌಕರ್ಯಗಳ ಹಾಗೂ ಕಟ್ಟುನಿಟ್ಟಾದ ಪರದೆಯ ಹಿಂದಿನ ಅನನ್ಯತೆಯ ಮಧ್ಯದಲ್ಲಿ, ಇದನ್ನೆ ಹವಾ ಮಹಲ್ ವೈಖರಿಯಲ್ಲಿ ಮಾಡಿತು


ಇದರ ಅಸಾಮಾನ್ಯ ವಿನ್ಯಾಸದ ಕಿಟಕಿ ಪರದೆಗಳು ಬೇಕಿರುವ ತಂಪು ತಂಗಾಳಿಯನ್ನು ಒದಗಿಸುವ ಕಾರಣ, ಹಲವು ವರ್ಷಗಳವರೆಗೆ ಜೈಪುರ್‌ನ ರಾಜ ಮನೆತನದ ಆಳ್ವಿಕೆಯಲ್ಲಿ ಈ ಮಹಲ್ ಅನ್ನು ಬೇಸಿಗೆ ಕಾಲದ ಉಸಿರುಕಟ್ಟುವ ಬಿಸಿ ವಾತಾವರಣದಲ್ಲಿ ಆಶ್ರಯಧಾಮವೆಂದು ಕೂಡ ಬಳಸುತ್ತಿದ್ದರು. ಇದೊಂದು ಐತಿಹಾಸಿಕ ಅದ್ಭುತ ಅರಮನೆ.
ಈ ಅದ್ವಿತೀಯ ನಿರ್ಮಾಣದ ವಾಸ್ತುಶಿಲ್ಪಿ ಅಂದಿನ ಕಾಲದಲ್ಲಿ ಭಾರತದ ಅತ್ಯುತ್ತಮ-ಯೋಜಿತ ನಗರದಲ್ಲೊಂದಾದ ಜೈಪುರ್ ನಗರದ ಯೋಜನೆಯನ್ನು ಸಾಕಾರಿಸಿದ ಲಾಲ್ ಛಂಧ್ ಉಸ್ತಾ. ನಗರದ ಇತರ ಸ್ಮಾರಕಗಳ ರಂಗಸಜ್ಜಿಕೆಯ ಹೋಲಿಕೆಯಂತೆ ಇದನ್ನು ಕೆಂಪು ಹಾಗೂ ಗುಲಾಬಿ ಬಣ್ಣದ ಮರಲುಗಲ್ಲಿನಿಂದ ಕಟ್ಟಲಾಗಿದೆ, ಇದರ ಬಣ್ಣ ಜೈಪುರ್‌ಗೆ ನೀಡಿದ “ಪಿನ್ಕ್ ಸಿಟಿ” ಎಂಬ ಬಿರುದಿನ ವಿಶೇಷಣವನ್ನು ಪೂರ್ತಿಯಾಗಿ ಪ್ರಮಾಣಿಸುತ್ತದೆ. ಇದರ ಮುಂಭಾಗ ಕಠಿಣವಾಗಿ ಕೊರೆದ 953 ಗೂಡುಗಳ ಝರೋಕಗಳನ್ನು ಚಿತ್ರಿಸುತ್ತದೆ (ಕೆಲವನ್ನು ಮರದಿಂದ ಮಾಡಲಾಗಿವೆ), ಇದು ನಿರ್ಮಾಣದ ಹಿಂಭಾಗದ ನಿರಾಡಂಬರವಾಗಿ ಕಾಣುವ ಭಾಗಕ್ಕೆ ಬಲವಾದ ವಿಭಿನ್ನತೆಯನ್ನು ತೋರಿಸುತ್ತದೆ. ಇದರ ಸಾಂಪ್ರದಾಯಿಕ ಹಾಗೂ ವಾಸ್ತುಶಿಲ್ಪದ ಪರಂಪರೆ ಹಿಂದೂ ರಾಜಪುತರ ವಾಸ್ತುಶಿಲ್ಪ ಹಾಗೂ ಇಸ್ಲಾಮರವಾಸ್ತುಶಿಲ್ಪ ದ ಸಮ್ಮಿಲನದ ನಿಜವಾದ ಪ್ರತಿಬಿಂಬ; ಗುಮ್ಮಟದ ಮೇಲ್ಛಾವಣಿಗಳು, ಕೊಳವೆಯಾಕಾರದ ಸ್ಥಂಬಗಳು, ಕಮಲ ಹಾಗೂ ಹೂವಿನ ಚಿತ್ರಾಕೃತಿಗಳು ರಾಜಪುತರ ಶೈಲಿಯಲ್ಲಿ ಕಂಡು ಬರುತ್ತದೆ, ಮತ್ತು ಇದರ ಕಲ್ಲುಗಳ ಮೇಲೆ ಬಳ್ಳಿಗೆಲಸದ ಅಲಂಕಾರ ಮಾಡಿ ಖಚಿತಗೊಳಿಸಿದ ಕೃತಿ ಹಾಗೂ ಕಮಾನುಗಳು ಇಸ್ಲಾಮಿಕ್ ಶೈಲಿಯನ್ನು ಸ್ಪಷ್ಟವಾಗಿ ಪ್ರದರ್ಶಿಸುತ್ತದೆ

ಹವಾ ಮಹಲ್ ಮಹಾರಾಜ ಜೈ ಸಿಂಗ್‌ರ chef-d’œuvre ಎಂದು ಕೂಡ ಪ್ರಚಲಿತವಾಗಿತ್ತು, ಇದರ ಸೊಬಗು ಹಾಗೂ ಮಹಲಿನಲ್ಲಿ ಒಳಗೊಂಡ ಒಳಭಾಗದ ಕಾರಣ ಇದು ಅವರ ಅತ್ಯಂತ ಪ್ರಿಯ ವಿಶ್ರಾಂತಿಧಾಮವಾಗಿತ್ತು. ಮುಂಭಾಗದ ಸಣ್ಣ ಕಿಟಕಿಗಳ ಮೂಲಕ ಹಾದು ಸಾಗುವ ತಂಗಾಳಿಯಿಂದ ಕೋಣೆಗಳಲ್ಲಾಗುವ ತಂಪು ಪ್ರಭಾವವನ್ನು, ಪ್ರತಿ ಕೋಣೆಯ ಮಧ್ಯದಲ್ಲಿ ಕಟ್ಟಲಾದ ಕಾರಂಜಿಗಳು ಹೆಚ್ಚಿಸುತ್ತವೆ.

ಮಹಲಿನ ಮೇಲ್ಛಾವಣಿಯಿಂದ ನೋಡಿದ ದೃಶ್ಯಾವಳಿ ಸ್ತಬ್ಧಗೊಳಿಸುವಂತಿದೆ.. ಹಸಿರು ಕಂದರಗಳು ಹಾಗೂ ಗುಡ್ಡಗಳು ಹಾಗೂ ಆಮೆರ್ ಕೊಟೆ ಪಶ್ಚಿಮ ಹಾಗೂ ಉತ್ತರದ ದೃಶ್ಯವಿವರವನ್ನು ನಿರ್ಮಿಸುತ್ತದೆ. ಥಾರ್‌ ಮರುಭೂಮಿಯ, ತೀರಾ ಸಡಿಲವಾದ ಮರಳು ಹೊಂದಿರುವ ಪ್ರದೇಶವು ದಕ್ಷಿಣ ಮತ್ತು ಪೂರ್ವಕ್ಕೆ ಹೊಂದಿದೆ. ಹಿಂದಿನ ಕಠಿಣವಾದ ಹಾಗೂ ನಿರ್ಜನ ಪ್ರದೇಶವಾದ ಈ ಭೂ ಪ್ರದೇಶದ ಎಲ್ಲ ಪರಿವರ್ತನೆಯು ಜೈಪುರ್‌ನ ಮಹಾರಾಜರ ಐಕ್ಯ ಪ್ರಯಾಸದ ಕಾರಣದಿಂದಾಗಿ ಸಂಭವಿಸಿತು.ಎಷ್ಟು ಮಟ್ಟಿಗೆ ಅಂದರೆ ಈ ಮಹಲ್ ಅನ್ನು ವರ್ಸೆಲಿಸ್‌ನ ಪ್ರತಿರೂಪ ಎಂದು ಹೇಳಲಾಗಿದೆ.ಸ್ಮಾರಕದ ಮೇಲಿನ ಅಂತಸ್ತಿನಿಂದ ಜಂತರ್ ಮಂತರ್ ಹಾಗೂ ಸಿಟಿ ಪ್ಯಾಲೆಸ್‌ನ ದೃಶ್ಯಗಳನ್ನು ಕೂಡ ವೀಕ್ಷಿಸಬಹುದು.

ಹವಾ ಮಹಲ್‌ನ ಮೇಲಿನ ಎರಡು ಅಂತಸ್ತುಗಳ ಪ್ರವೇಶದ್ವಾರವನ್ನು ಬರಿ ಇಳಿವೋರೆ ಮೂಲಕ ತಯಾರಿಸಲಾಗಿದೆ. ರಾಜಸ್ಥಾನ ಸರ್ಕಾರದ ಪುರಾತತ್ವ ಶಾಸ್ತ್ರ ಇಲಾಖೆಯು ಮಹಲಿನ ಊಸ್ತುವಾರಿಯನ್ನು ನೋಡಿಕೊಳ್ಳುತ್ತದೆ

Source internet

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    10ನೇ ತರಗತಿ ಬಾಲಕನ, ಈ ಸಾಧನೆ ಬಗ್ಗೆ ಕೇಳಿದ್ರೆ ನೀವು ಖಂಡಿತಾ ಶಾಕ್ ಆಗ್ತೀರಾ! ತಿಳಿಯಲು ಈ ಲೇಖನಿ ಓದಿ…

    ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ.

  • ಸುದ್ದಿ

    ಮೊದಲ ಬಾರಿ ಸರ್ಕಾರಿ ಶಾಲೆಯಲ್ಲಿ ಎಸ್‍ಪಿ ರವಿ ಚನ್ನಣ್ಣನವರ್ ಗ್ರಾಮ ವಾಸ್ತವ್ಯ. ಇದರ ಹಿನ್ನೆಲೆಯೇನು.

    ರಾಜಕಾರಣಿಗಳಾಯಿತು ಇದೀಗ ಐಪಿಎಸ್ ಅಧಿಕಾರಿಯ ಸರದಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‍ಪಿ ರವಿ ಡಿ ಚನ್ನಣ್ಣನವರ್ ಇದೇ ಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಅರೇ ಬೊಮ್ಮನಹಳ್ಳಿ ಗ್ರಾಮದಲ್ಲಿ ಈದ್ ಮಿಲಾದ್ ಹಬ್ಬವಿರುವ ಹಿನ್ನೆಲೆಯಲ್ಲಿ ರವಿ ಚನ್ನಣ್ಣನವರ್ ಅವರು ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಕೋಮು ಗಲಭೆ ತಡೆಯಲು ಈ ಪ್ರಯತ್ನ ಮಾಡಲಾಗಿದ್ದು, ಅವರಿಗಾಗಿ ಶಾಲೆಯಲ್ಲಿ ಬೆಡ್, ಬೆಡ್ ಶೀಟ್, ಇನ್ನಿತರ ವಸ್ತುಗಳ ಸಿದ್ಧತೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ…

  • Sports

    ಕ್ರಿಕೆಟ್ ವೃತ್ತಿಯಲ್ಲಿ ಆಟವಾಡದೆಯೇ ಗಳಿಸಬಹುದು 20 ಲಕ್ಷದವರೆಗೆ ಸಂಬಳ…!

    ಕ್ರಿಕೆಟ್ ಬಹುತೇಕರ ಕನಸು. ಆದ್ರೆ ಅಂತರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯುವುದು ಸುಲಭದ ಕೆಲಸವಲ್ಲ. ಕ್ರೀಡೆ ಗೊತ್ತಿಲ್ಲದವರಿಗೂ ಕ್ರಿಕೆಟ್ ಜಗತ್ತಿನಲ್ಲಿ ಕೆಲಸ ಸಿಗುತ್ತದೆ. ಒಳ್ಳೆ ವಿದ್ಯಾಭ್ಯಾಸ ಹೊಂದಿರುವವರು ಕ್ರಿಕೆಟ್ ವೃತ್ತಿಯನ್ನಾಗಿ ಆಯ್ಕೆ ಮಾಡಿಕೊಂಡು ಲಕ್ಷಾಂತರ ರೂಪಾಯಿ ಗಳಿಕೆ ಮಾಡ್ತಿದ್ದಾರೆ. ಬ್ಯಾಟಿಂಗ್, ಬೌಲಿಂಗ್ ಮಾತ್ರವಲ್ಲ, ಮೈದಾನದಲ್ಲಿ ಹಾಗೂ ಮೈದಾನದ ಹೊರಗೆ ಕ್ರಿಕೆಟ್ ಗೆ ಸಂಬಂಧಿಸಿದ ಅನೇಕ ಕೆಲಸಗಳಿವೆ. ಪಂದ್ಯದ ತೀರ್ಪುಗಾರನಾಗಿ ನೀವು ಕೆಲಸ ಮಾಡಬಹುದು. ಪ್ರತಿ ಪಂದ್ಯಕ್ಕೆ 30 ಸಾವಿರ ರೂಪಾಯಿ ನೀಡಲಾಗುತ್ತದೆ. ಐಸಿಸಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ…

  • ಜ್ಯೋತಿಷ್ಯ

    ಶ್ರೀ ಗುರುರಾಯರನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿಅತ್ಯಂತ ಪ್ರಭಾವಿ…

  • ಸೌಂದರ್ಯ

    ಆಲೂಗಡ್ಡೆಯಲ್ಲಿ ಅಡಗಿದೆ ಮುಖದ ಹಾಗೂ ಕೂದಲಿನ ಸೌಂದರ್ಯದ ಸಿಕ್ರೆಟ್..!ತಿಳಿಯಲು ಈ ಲೇಖನ ಓದಿ..

    ತರಕಾರಿಗಳಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ಮಾತ್ರ ಲಾಭ ನೀಡುತ್ತದೆ ಎಂದು ನಾವು ಭಾವಿಸಿದ್ದೇವೆ. ಆದರೆ ಪ್ರತಿಯೊಂದು ತರಕಾರಿಯಲ್ಲಿ ಇರುವಂತಹ ಕೆಲವೊಂದು ಅಂಶಗಳು ನಮ್ಮ ತ್ವಚೆ ಹಾಗೂ ಕೂದಲಿಗೆ ತುಂಬಾ ಉಪಯೋಗಕಾರಿ.

  • ಸುದ್ದಿ

    ಶಾಕಿಂಗ್ ನ್ಯೂಸ್!ಯಶ್ ಹತ್ಯೆಗೆ ಸಂಚು ರೂಪಿಸಿದ್ದ ಕಿಲ್ಲರ್ಸ್ ಅರೆಸ್ಟ್!ಸುಪಾರಿ ಕೊಟ್ಟದ್ದು ಯಾರು ಗೊತ್ತಾ..?

    ಕನ್ನಡದ ಪ್ರಸಿದ್ದ ನಟರೊಬ್ಬರನ್ನ ಹತ್ಯೆ ಮಾಡಲು ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶೇಷಾದ್ರಿಪುರಂನ ನಿತೇಶ್, ನಿತ್ಯಾನಂದ, ವಿಜಯನಗರದ ಮಧು ಹಾಗೂ ಪಿಜಿಹಳ್ಳಿಯ ಪೃಥ್ವಿ ಬಂಧಿತ ಆರೋಪಿಗಳು. ಸಿಸಿಬಿ ಪೊಲೀಸರು ಶೇಷಾದ್ರಿಪುರಂ ಠಾಣೆಯ ಬಿಡಿಎ ಕಚೇರಿ ಬಳಿ ಆರೋಪಿಗಳನ್ನ ಬಂಧಿಸಿದ್ದಾರೆ, ಮಾರ್ಚ್ 7 ರಂದು ಎಸಿಪಿ ಬಾಲರಾಜ್ ನೇತೃತ್ವದಲ್ಲಿ ಸಿಸಿಬಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದರು. ಬಂಧಿತ ನಾಲ್ವರ ಬಳಿಯೂ ಲಾಂಗು ಮತ್ತು ಡ್ರಾಗರ್ ಸೇರಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಸಿಸಿಬಿ ದಾಳಿ ವೇಳೆ ಐದು ಮಂದಿ…