News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಹಸುವಿನ ತುಪ್ಪದಲ್ಲಿ ಅಡಗಿದೆ ಪೋಷಕಾಂಶಗಳ ಆಗರ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

1334

ಅಪ್ಪಟ ದೇಸಿ ತುಪ್ಪಕ್ಕೆ ಭೇಷ್ ಎನ್ನಲೇಬೇಕು ಆದರೆ ಒಂದು ಎಚ್ಚರಿಕೆ, ಏನೆಂದರೆ ತುಪ್ಪವನ್ನು ಸೇವಿಸಲು ಒಂದು ಮಿತಿ ಇದೆ. ಅತಿಯಾದರೆ ಅಮೃತವೂ ವಿಷ ವೆನ್ನುವಂತೆ ತುಪ್ಪದ ಅತಿಸೇವನೆ ದೇಹದಲ್ಲಿ ಕೊಬ್ಬಿನ ಸಂಗ್ರಹ ಹೆಚ್ಚಿಸಲು ಕಾರಣ ವಾಗುತ್ತದೆ. ತುಪ್ಪವನ್ನು ತುಪ್ಪದಂತೆಯೇ ತಿನ್ನಬೇಕು ಎನ್ನುವ ಕಾರಣಕ್ಕೆ ಚಮಚಕ್ಕಿಂತಲೂ ಚಿಕ್ಕದಾದ ಮಿಳ್ಳೆ ಎಂಬ ಉಪ ಕರಣವನ್ನು ನಮ್ಮ ಹಿರಿಯರು ಉಪಯೋಗಿಸುತ್ತಾ ಬಂದಿ ದ್ದಾರೆ. ಇದರ ಆಳ ಕಡಿಮೆ ಇದ್ದು, ಅಗಲ ಕೊಂಚ ಜಾಸ್ತಿ ಇರುವ ಕಾರಣ ಹೆಚ್ಚು ತುಪ್ಪ ಸುರಿದಂತೆ ಅತಿಥಿಗಳಿಗೆ ಅನ್ನಿಸಿದರೂ ನಿಜವಾಗಿ ಕೊಂಚವೇ ತುಪ್ಪ ತಟ್ಟೆಗೆ ಬಿದ್ದಿರುತ್ತದೆ! ಮಿಳ್ಳೆ ಈಗ ಅದೃಶ್ಯವಾಗಿರುವ ಕಾರಣ ತುಪ್ಪದ ಸೇವನೆಯ ಪ್ರಮಾಣ ಮತ್ತು ನಿಮ್ಮ ಇಂದಿನ ದೇಹಸ್ಥಿತಿಯನ್ನು ಪರಿಗಣಿಸಿ ಎಷ್ಟು  ಸೇವಿಸ ಬಹುದು ಎಂಬುದನ್ನು ನಿಮ್ಮ ಕುಟುಂಬ ವೈದ್ಯರು ಸಲಹೆ ನೀಡಬಲ್ಲರು. ಆ ಪ್ರಕಾರವೇ ಸೇವಿಸಿದರೆ ಉತ್ತಮ.

ಆರೋಗ್ಯದ ವಿಷಯಕ್ಕೆ  ಬಂದಾಗ ತುಪ್ಪ ಮಹತ್ವದ ಪಾತ್ರ ವಹಿಸುತ್ತದೆ:

ಜಿಡ್ಡಿನ ಪದಾರ್ಥಗಳಲ್ಲೇ ಅತಿ ಆರೋಗ್ಯಕರವಾದ ತುಪ್ಪ ಹಲವು ಉತ್ತಮ ಗುಣಗಳನ್ನು ಹೊಂದಿದೆ. ಇದರಲ್ಲಿ ಅತಿ ಹೆಚ್ಚಿನ ಪ್ರಮಾಣ ದಲ್ಲಿರುವ ಕ್ಯಾಲೋರಿಗಳು,ಇ ಪೋಷಕಾಂಶ ಗಳು, ವೈರಸ್ಸಿನ ವಿರುದ್ಧ ಹೋರಾಡುವ ಗುಣ, ಶಿಲಿಂಧ್ರ ನಿವಾರಕ, ಬ್ಯಾಕ್ಟೀರಿಯಾ ದೇಸೀ ಹಸುವಿನ ತುಪ್ಪ, ಆರೋಗ್ಯದ ಪಾಲಿನ ಸಂಜೀವಿನಿ ನಿವಾರಕ ಗುಣಗಳು ಮತ್ತು ಅಂಟಿ ಆಕ್ಸಿಡೆಂಟುಗಳ ಜೊತೆಗೆ ಕೊಂಚ ಕೊಬ್ಬಿನ ತೈಲವೂ ಇವೆ. ಆದರೆ ಎಮ್ಮೆಯ ಹಾಲಿನಿಂದ ತಯಾರಿಸಿದ ತುಪ್ಪದಲ್ಲೂ ಬಹುತೇಕ ಈ ಗುಣಗಳಿದ್ದರೂ ಕೊಬ್ಬಿನ ಪ್ರಮಾಣ ಅಪಾರ ವಾದುದರಿಂದ ಎಮ್ಮೆ ಹಾಲಿನ ತುಪ್ಪಕ್ಕಿಂತ ಹಸುವಿನ ಹಾಲಿನ ತುಪ್ಪವೇ ಉತೃಷ್ಕವಾಗಿದೆ. ಸಾಮಾನ್ಯವಾಗಿ ಅನ್ನ, ಚಪಾತಿ, ಸಿಹಿ ಮೊದಲಾದ ಯಾವುದೇ ಆಹಾರದೊಂದಿಗೆ ಕೊಂಚ ತುಪ್ಪವನ್ನು ಬೆರೆಸಿ ತಿಂದರೆ ಆ ಖಾದ್ಯದ ರುಚಿ ಬಹಳಷ್ಟು ಹೆಚ್ಚುತ್ತದೆ. ಅಷ್ಟೆ ಅಲ್ಲ, ಹಸುವಿನ ತುಪ್ಪವನ್ನು ಉಪಯೋಗಿಸಿ ಮೈಯನ್ನು ಮಸಾಜ್ ಮಾಡಿದರೆ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.

ದೇಸೀ ಹಸುವಿನ ತುಪ್ಪ, ಆರೋಗ್ಯದ ಪಾಲಿನ ಸಂಜೀವಿನಿ:-

ಸುಟ್ಟ ಗಾಯಕ್ಕೆ, ಚಿಕ್ಕ ಪುಟ್ಟ ತರಚು ಗಾಯಗಳಿಗೆ ತುಪ್ಪವನ್ನು ಹಚ್ಚುವ ಮೂಲಕ ಗಾಯಗಳು ಬೇಗನೇ ಮಾಗುತ್ತವೆ. ಅಷ್ಟೆ ಅಲ್ಲ ಇದರ ನಿಯಮಿತ ಸೇವನೆಯಿಂದ ಕೆಟ್ಟ ಕೊಲೆಸ್ಟ್ರಾಲ್ ತೊಲಗಿಸಲೂ ಸಾಧ್ಯವಾಗುತ್ತದೆ. ಜೀವರಾಸಾಯನಿಕ ಕ್ರಿಯೆ ಹೆಚ್ಚಿಸುವುದು, ಕೂದಲು ಉದುರುವುದನ್ನು ತಡೆಗಟ್ಟುವುದು, ಹೃದಯ ಕ್ಷಮತೆಯನ್ನು ಹೆಚ್ಚಿಸುವುದು ಮೊದಲಾದ ಆರೋಗ್ಯ ಕರ ಪ್ರಯೋಜನಗಳಿವೆ.

ತುಪ್ಪದ ಆರೋಗ್ಯಕರ ಪ್ರಯೋಜನಗಳ ವಿವರ:-

ಚಿಕ್ಕ ಪ್ರಮಾಣದಲ್ಲಿ ತುಪ್ಪವನ್ನು ಪ್ರತಿ ಊಟದೊಂದಿಗೆ ಸೇವಿಸಿದರೆಜೀರ್ಣಕ್ರಿಯೆ ಸುಲಭಗೊಳ್ಳುತ್ತದೆ. ತುಪ್ಪ ಜೀರ್ಣಕ್ರಿಯೆಗೆ ಪ್ರಚೋದಕದ ರೂಪದಲ್ಲಿ ನೆರವಾಗುತ್ತದೆ.ಕೆಲವು ಸಂಶೋಧನೆಗಳ ಪ್ರಕಾರ ತುಪ್ಪದ ಸೇವನೆಯಿಂದ ಕ್ಯಾನ್ಸರ್ ಬೆಳವಣಿಕೆ ಕುಂಠಿತಗೊಳ್ಳುತ್ತದೆ. ಸಾಮಾನ್ಯವಾಗಿ ತುಪ್ಪವನ್ನು ನಿತ್ಯವೂ ಸೇವಿಸುತ್ತಾ ಬಂದಿರು ವವರಲ್ಲಿ ಕ್ಯಾನ್ಸರ್ ಪ್ರಮಾಣ ಅತಿ ಕಡಿಮೆ ಇರುವುದಕ್ಕೆ ಇದೇ ಕಾರಣವಿರಬಹುದು.

ತುಪ್ಪದ ಆರೋಗ್ಯಕರ ಪ್ರಯೋಜನಗಳ ವಿವರ:-

ರಾತ್ರಿ ಮಲಗುವ ಮುನ್ನ ಬಿಸಿಬಿಸಿ ಹಾಲಿಗೆ ಕೊಂಚವೇ ಕೊಂಚ ತುಪ್ಪವನ್ನು ಸೇರಿಸಿ ಕುಡಿಯುವ ಮೂಲಕ ಉತ್ತಮ ನಿದ್ದೆ ಬರುತ್ತದೆ ಹಾಗೂ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ. ಬೆಳಿಗ್ಗೆ ಕಲ್ಮಶಗಳು ಸುಲಭವಾಗಿ ಹೊರ ಹೋಗಲು ಸಾಧ್ಯವಾಗುತ್ತದೆ. ಸ್ಮರಣಶಕ್ತಿ ಮತ್ತು ಬುದ್ದಿಮತ್ತೆ ಹೆಚ್ಚಲು ತುಪ್ಪ ನೆರವಾಗುತ್ತದೆ ಎಂದು ಬಹಳ ಹಿಂದಿಂದಲೂ ಭಾರತ ದಲ್ಲಿ ನಂಬಿಕೊಂಡು ಬರಲಾಗಿದೆ. ಇದೇ ಕಾರಣಕ್ಕೆ ವಿದ್ಯಾರ್ಥಿ ಗಳಿಗೆ ತುಪ್ಪದ ತಿಂಡಿಗಳನ್ನು ಆಗಾಗ ನೀಡಲಾಗುತ್ತಿತ್ತು. ಮೂಗಿನಿಂದ ರಕ್ತ ಬರುತ್ತಿದ್ದರೆ ವೈದ್ಯರಿಗೆ ತೋರಿಸುವ ಮೊದಲು ತುಪ್ಪವನ್ನು ಪ್ರಯೋಗಿಸಿ ಒಂದು ಕೈ ನೋಡಬಹುದು. ಇದಕ್ಕಾಗಿ ಕರಗಿದ ತುಪ್ಪವನ್ನು ಮೂಗಿನ ತುದಿ ಮತ್ತು ಹೊಳ್ಳೆಗಳ ಒಳಗೆ, ವಿಶೇಷವಾಗಿ ರಕ್ತ ಒಸರುವೆಡೆ ದಿನಕ್ಕೆ ಮೂರು ನಾಲ್ಕು ಬಾರಿಯಂತೆ ಎರಡರಿಂದ ಮೂರು ದಿನ ಹಚ್ಚಬೇಕು.

ಶುದ್ಧ ತುಪ್ಪವನ್ನು ಪರೀಕ್ಷಿಸುವುದು ಹೇಗೆ?

ಇಂದು ದುಬಾರಿ ತುಪ್ಪದೊಂದಿಗೆ ಅಗ್ಗದ ಡಾಲ್ಡಾವನ್ನು ಬೆರೆಸಿ ಮಾರಾಟ ಮಾಡುವ ಖದೀಮರಿದ್ದಾರೆ. ಆದರೆ ತುಪ್ಪವನ್ನು ತಕ್ಷಣ ಪರೀಕ್ಷಿಸಲು ಕೆಲವು ಸುಲಭ ವಿಧಾನಗಳಿವೆ.
ಶುದ್ಧ ತುಪ್ಪ ಬಿಸಿ ಅಂಗೈಯಲ್ಲಿ ತಕ್ಷಣ ಕರಗುತ್ತದೆ. ಇದಕ್ಕಾಗಿ ಎರಡೂ ಹಸ್ತಗಳನ್ನು ಸುಮಾರು ಇಪ್ಪತ್ತು ಸೆಕೆಂಡ್ ಉಜ್ಜಿ ತಕ್ಷಣ ಒಂದು ಚಿಕ್ಕ ಪ್ರಮಾಣದ ಗಟ್ಟಿ ತುಪ್ಪವನ್ನು ಕೈ ಮೇಲೆ ಇಟ್ಟಾಕ್ಷವೇ ಕರಗಲು ಪ್ರಾರಂಭವಾಗಬೇಕು. ಹಾಗೂ ಕೆಲವೇ ಸೆಕೆಂಡುಗಳಲ್ಲಿ ದ್ರವವಾಗಬೇಕು. ಒಂದು ವೇಳೆ ಕರಗಲು ಹೆಚ್ಚು ಸಮಯ ತೆಗೆದುಕೊಂಡರೆ ಇದು ಅಪ್ಪಟವಲ್ಲ ಎಂದು ಖಾತ್ರಿಯಾಗುತ್ತದೆ. ಹಿರಿಯರು ಪರೀಕ್ಷಿಸಲು ಇನ್ನೊಂದು ವಿಧಾನ ಅನು ಸರಿಸುತ್ತಿದ್ದರು. ಇದಕ್ಕೆ ಶುದ್ದ  ತುಪ್ಪದ ಪರಿಮಳ ನಿಮ್ಮ ನೆನಪಿನಲ್ಲಿರಬೇಕು. ಕೊಂಚ ತುಪ್ಪವನ್ನು ಹಸ್ತದ ಹಿಂಬದಿಗೆ ಸವರಿ ನಾಲ್ಕಾರು ಬಾರಿ ಉಜ್ಜಿ ಒರೆಸಿಬಿಡಬೇಕು. ಅಪ್ಪಟ ತುಪ್ಪವಾದರೆ ತುಪ್ಪದ ವಾಸನೆ ಹೆಚ್ಚು ಹೊತ್ತು ಉಳಿದಿರುತ್ತದೆ. ಡಾಲ್ಡಾ ಸೇರಿಸಿದ್ದರೆ ಈ ಪರಿಮಳ ಒಂದು ನಿಮಿಷದೊಳಗ ಖಾಲಿಯಾಗುತ್ತದೆ.

ಶುದ್ಧ ತುಪ್ಪವನ್ನು ಪರೀಕ್ಷಿಸುವ ವಿಧಾನ :-

 

ಶುದ್ಧ ತುಪ್ಪದ ಬಾಟಲಿಯ ಮೇಲ್ಭಾಗದಲ್ಲಿ ಕರಗಿದ್ದು ಇದರ ಕೊಂಚವೇ ಕೆಳಗೆ ತುಪ್ಪ ಮರಳು ಮರಳಾಗಿರುತ್ತದೆ. ಆದರೆ ಇದು ಹಸುವಿನ ಮತ್ತು ಎಮ್ಮೆ ಹಾಲಿನ ತುಪ್ಪದಲ್ಲಿ
ಎರಡರಲ್ಲೂ ಕಂಡುಬರುತ್ತದೆ. ಒಂದು ವೇಳೆ ಡಾಲ್ಡಾ ಬೆರೆಸಿದ್ದರೆ ಮೇಲ್ಭಾಗ ಕರಗುವುದಿಲ್ಲ, ಗಟ್ಟಿಯಾಗಿಯೇ ಇರುತ್ತದೆ. ಶುದ್ಧ ತುಪ್ಪದ ದೀಪ ಯಾವುದೇ ಚಿಟಿಪಿಟಿಯಿಲ್ಲದೇ ಉರಿಯುತ್ತದೆ. ತುಪ್ಪವನ್ನು ಹತ್ತಿಯ ಬತ್ತಿಗೆ ಸವರಿ ಬೆಂಕಿ ಕೊಟ್ಟು ಉರಿಸಿ ಸೂಕ್ಷ್ಮವಾಗಿ ಗಮನಿಸಿ. ಶುದ್ದ ತುಪ್ಪವಾದರೆ ಜ್ವಾಲೆ ನೇರವಾಗಿ, ಏಕಪ್ರಕಾರವಾಗಿ ಹೊಗೆಯಿಲ್ಲದೇ ಉರಿಯುತ್ತದೆ. ಡಾಲ್ಡಾ ಬೆರೆಸಿದ್ದರೆ ಜ್ವಾಲೆ ಕೊಂಚ ಚಿಟಿಪಿಟಿ ಎನ್ನುವುದು ಅಥವಾ ವೇಗವಾಗಿ ಚಿಕ್ಕದೊಡ್ಡದಾಗುವುದು ಮತ್ತು ಜ್ವಾಲೆಯ ತುದಿಯಲ್ಲಿ ಕೊಂಚ ಕಪ್ಪು ಹೊಗೆಯಂತಿರುವುದು ಕಂಡುಬರುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(4 ಜನವರಿ, 2019) ನೀವು ಇಂದು ಹಣ ಉಳಿಸುವುದು ಕಷ್ಟ – ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ( 22 ಡಿಸೆಂಬರ್, 2018) ನೀವು ಸಂತೋಷನೀಡುವ ಮೂಲಕ ಮತ್ತು ಹಿಂದಿನ ತಪ್ಪುಗಳನ್ನು ಮನ್ನಿಸುವ ಮೂಲಕ ನಿಮ್ಮ ಜೀವನವನ್ನು ಸಮರ್ಥಗೊಳಿಸಲಿದ್ದೀರಿ. ನಿಮ್ಮ ಸಂಬಂಧದ ಆ ಎಲ್ಲಾ…

  • inspirational

    Human Brain: ಆಲೋಚಿಸಿದ್ರೆ ಸಾಕು, ಅದು ಅಕ್ಷರವಾಗಿ ಬದಲಾಗುತ್ತೆ…ಮೆದುಳಿನ ವಿಶಿಷ್ಟ ಶಕ್ತಿ ಬಳಸಿ ಬರೆದ ಸ್ಟ್ರೋಕ್​​ ರೋಗಿ !

    ಕತ್ತಿನ ಭಾಗದಲ್ಲಿ ಪಾರ್ಶ್ವವಾಯು ಸಮಸ್ಯೆಯನ್ನು ಹೊಂದಿರುವ 65 ವರ್ಷದ ವೃದ್ಧರೊಬ್ಬರು ಕೈ ಚಲನೆಯನ್ನು ಊಹಿಸಿಕೊಳ್ಳುವ ಮೂಲಕ ಬರವಣಿಗೆಯನ್ನು ಸಾಧಿಸಿದ್ದಾರೆ. ಬ್ರೈನ್‌ ಕಂಪ್ಯೂಟರ್ ಇಂಟರ್ಫೇಸ್ (BCI) ಸಾಧನವನ್ನು ಬಳಸಿ ಹೆಚ್ಚು ಕಾರ್ಯಕ್ಷಮತೆಯುಳ್ಳ ಮೆದುಳು ಪಠ್ಯದ ಮೂಲಕ ಸಂವಹನವನ್ನು ಸಾಧಿಸಿದೆ. ಅಮೆರಿಕದ ನರವಿಜ್ಞಾನಿಗಳು ಈ ಸಾಧನೆಯನ್ನು ಸಂಶೋಧನಾ ಸಹಯೋಗಿ ಬ್ರೈನ್‌ಗೇಟ್‌ನೊಂದಿಗೆ ಸೇರಿ ಅಭಿವೃದ್ಧಿಪಡಿಸಿದ್ದಾರೆ. ಬ್ರೈನ್‌ ಕಂಪ್ಯೂಟರ್ ಇಂಟರ್ಫೇಸ್ ಎನ್ನುವ ಸಾಧನವು ಮೆದುಳಿನ ಮೇಲೆ ಚಿಪ್‌ಗಳಿಂದ ಕಾರ್ಯ ನಿರ್ವಹಿಸುತ್ತದೆ. ಅದು ಬಳಕೆದಾರರು ಯೋಚಿಸಿದಾಗ ಮೆದುಳಿನ ಚಟುವಟಿಕೆಯನ್ನು ಪತ್ತೆ ಮಾಡುತ್ತದೆ ಮತ್ತು ಅದನ್ನು…

  • ಸಿನಿಮಾ

    ಅಂಬಿ ಅಂತಿಮ ದರ್ಶನಕ್ಕೆ ಬಾರದೆ ಮಂಡ್ಯದ ಜನರ ಕೆಂಗಣ್ಣಿಗೆ ಗುರಿಯಾಗಿದ್ದ ರಮ್ಯಾ ವಿರುದ್ದ ಮತ್ತೆ ಮಂಡ್ಯದಲ್ಲಿ ಆಕ್ರೋಶ…

    ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅನಾರೋಗ್ಯದ ನೆಪವೊಡ್ಡಿ ಅಂತಿಮ ದರ್ಶನಕ್ಕೆ ಆಗಮಿಸದೇ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಮಾಜಿ ಸಂಸದೆ ರಮ್ಯಾ ವಿರುದ್ಧ ಮತ್ತೆ ಮಂಡ್ಯ ಜಿಲ್ಲೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ಮಾಡಲು ಮಂಡ್ಯ ಬೇಕು. ಆದರೆ, ಮಂಡ್ಯ ಜನತೆಯ ಕಷ್ಟ-ಸುಖದಲ್ಲಿ ರಮ್ಯಾ ಭಾಗಿಯಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ. ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಮಂಡ್ಯದ ಮಾಜಿ ಸಂಸದರಾಗಿರುವ ರಮ್ಯಾ ಯೋಧನ ಕುಟುಂಬದವರಿಗೆ ಸಾಂತ್ವನ ಹೇಳಿಲ್ಲ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಕಾರ್ತೀಕ ಹುಣ್ಣಿಮೆಯ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(23 ನವೆಂಬರ್, 2018) ಸಂಜೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ. ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಹ್ಲಾದಕರ…

  • ವಿಚಿತ್ರ ಆದರೂ ಸತ್ಯ

    ಗೊಂದಲದಲ್ಲಿ ಸಿಲುಕಿ ಈ ವ್ಯಕ್ತಿ ತನ್ನ ಲಿಂಗವನ್ನು ಎಷ್ಟು ಸಲ ಬದಲಾಯಿಸಿಕೊಂಡ ಗೊತ್ತಾ..?ತಿಳಿಯಲು ಈ ಲೇಖನ ಓದಿ

    ಆ ವ್ಯಕ್ತಿಯೇ ರಿಯಾ ಕೂಪರ್. ಆತ ತನ್ನ ಲಿಂಗದ ಗೊಂದಲದಲ್ಲಿ ಮೂರು ಸಲ ಲಿಂಗ ಪರಿವರ್ತನೆ ಮಾಡಿಕೊಂಡಿದ್ದಾನೆ. ರಿಯಾ ಕೂಪರ್ ಇಂಗ್ಲೆಂಡಿನಲ್ಲಿ ಅತೀ ಸಣ್ಣ ವಯಸ್ಸಿನಲ್ಲಿ ಲಿಂಗ ಪರಿವರ್ತನೆ ಮಾಡಿಕೊಂಡವ ಎನ್ನುವ ಪ್ರಸಿದ್ಧಿಗೆ ಒಳಗಾದ. ಆತ ಕೇವಲ 15 ವರ್ಷದಲ್ಲಿ ಮಹಿಳೆಯಾಗಿ ಲಿಂಗ ಪರಿವರ್ತನೆ ಮಾಡಿ ಕೊಂಡ ಮತ್ತು ಇದರಿಂದ ಬೇಸತ್ತು ಮತ್ತೆ ಲಿಂಗ ಪರಿವರ್ತನೆಗೆ ಮುಂದಾದ.