ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪ್ಪಟ ದೇಸಿ ತುಪ್ಪಕ್ಕೆ ಭೇಷ್ ಎನ್ನಲೇಬೇಕು ಆದರೆ ಒಂದು ಎಚ್ಚರಿಕೆ, ಏನೆಂದರೆ ತುಪ್ಪವನ್ನು ಸೇವಿಸಲು ಒಂದು ಮಿತಿ ಇದೆ. ಅತಿಯಾದರೆ ಅಮೃತವೂ ವಿಷ ವೆನ್ನುವಂತೆ ತುಪ್ಪದ ಅತಿಸೇವನೆ ದೇಹದಲ್ಲಿ ಕೊಬ್ಬಿನ ಸಂಗ್ರಹ ಹೆಚ್ಚಿಸಲು ಕಾರಣ ವಾಗುತ್ತದೆ. ತುಪ್ಪವನ್ನು ತುಪ್ಪದಂತೆಯೇ ತಿನ್ನಬೇಕು ಎನ್ನುವ ಕಾರಣಕ್ಕೆ ಚಮಚಕ್ಕಿಂತಲೂ ಚಿಕ್ಕದಾದ ಮಿಳ್ಳೆ ಎಂಬ ಉಪ ಕರಣವನ್ನು ನಮ್ಮ ಹಿರಿಯರು ಉಪಯೋಗಿಸುತ್ತಾ ಬಂದಿ ದ್ದಾರೆ. ಇದರ ಆಳ ಕಡಿಮೆ ಇದ್ದು, ಅಗಲ ಕೊಂಚ ಜಾಸ್ತಿ ಇರುವ ಕಾರಣ ಹೆಚ್ಚು ತುಪ್ಪ ಸುರಿದಂತೆ ಅತಿಥಿಗಳಿಗೆ ಅನ್ನಿಸಿದರೂ ನಿಜವಾಗಿ ಕೊಂಚವೇ ತುಪ್ಪ ತಟ್ಟೆಗೆ ಬಿದ್ದಿರುತ್ತದೆ! ಮಿಳ್ಳೆ ಈಗ ಅದೃಶ್ಯವಾಗಿರುವ ಕಾರಣ ತುಪ್ಪದ ಸೇವನೆಯ ಪ್ರಮಾಣ ಮತ್ತು ನಿಮ್ಮ ಇಂದಿನ ದೇಹಸ್ಥಿತಿಯನ್ನು ಪರಿಗಣಿಸಿ ಎಷ್ಟು ಸೇವಿಸ ಬಹುದು ಎಂಬುದನ್ನು ನಿಮ್ಮ ಕುಟುಂಬ ವೈದ್ಯರು ಸಲಹೆ ನೀಡಬಲ್ಲರು. ಆ ಪ್ರಕಾರವೇ ಸೇವಿಸಿದರೆ ಉತ್ತಮ.
ಆರೋಗ್ಯದ ವಿಷಯಕ್ಕೆ ಬಂದಾಗ ತುಪ್ಪ ಮಹತ್ವದ ಪಾತ್ರ ವಹಿಸುತ್ತದೆ:–

ಜಿಡ್ಡಿನ ಪದಾರ್ಥಗಳಲ್ಲೇ ಅತಿ ಆರೋಗ್ಯಕರವಾದ ತುಪ್ಪ ಹಲವು ಉತ್ತಮ ಗುಣಗಳನ್ನು ಹೊಂದಿದೆ. ಇದರಲ್ಲಿ ಅತಿ ಹೆಚ್ಚಿನ ಪ್ರಮಾಣ ದಲ್ಲಿರುವ ಕ್ಯಾಲೋರಿಗಳು,ಇ ಪೋಷಕಾಂಶ ಗಳು, ವೈರಸ್ಸಿನ ವಿರುದ್ಧ ಹೋರಾಡುವ ಗುಣ, ಶಿಲಿಂಧ್ರ ನಿವಾರಕ, ಬ್ಯಾಕ್ಟೀರಿಯಾ ದೇಸೀ ಹಸುವಿನ ತುಪ್ಪ, ಆರೋಗ್ಯದ ಪಾಲಿನ ಸಂಜೀವಿನಿ ನಿವಾರಕ ಗುಣಗಳು ಮತ್ತು ಅಂಟಿ ಆಕ್ಸಿಡೆಂಟುಗಳ ಜೊತೆಗೆ ಕೊಂಚ ಕೊಬ್ಬಿನ ತೈಲವೂ ಇವೆ. ಆದರೆ ಎಮ್ಮೆಯ ಹಾಲಿನಿಂದ ತಯಾರಿಸಿದ ತುಪ್ಪದಲ್ಲೂ ಬಹುತೇಕ ಈ ಗುಣಗಳಿದ್ದರೂ ಕೊಬ್ಬಿನ ಪ್ರಮಾಣ ಅಪಾರ ವಾದುದರಿಂದ ಎಮ್ಮೆ ಹಾಲಿನ ತುಪ್ಪಕ್ಕಿಂತ ಹಸುವಿನ ಹಾಲಿನ ತುಪ್ಪವೇ ಉತೃಷ್ಕವಾಗಿದೆ. ಸಾಮಾನ್ಯವಾಗಿ ಅನ್ನ, ಚಪಾತಿ, ಸಿಹಿ ಮೊದಲಾದ ಯಾವುದೇ ಆಹಾರದೊಂದಿಗೆ ಕೊಂಚ ತುಪ್ಪವನ್ನು ಬೆರೆಸಿ ತಿಂದರೆ ಆ ಖಾದ್ಯದ ರುಚಿ ಬಹಳಷ್ಟು ಹೆಚ್ಚುತ್ತದೆ. ಅಷ್ಟೆ ಅಲ್ಲ, ಹಸುವಿನ ತುಪ್ಪವನ್ನು ಉಪಯೋಗಿಸಿ ಮೈಯನ್ನು ಮಸಾಜ್ ಮಾಡಿದರೆ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.
ಸುಟ್ಟ ಗಾಯಕ್ಕೆ, ಚಿಕ್ಕ ಪುಟ್ಟ ತರಚು ಗಾಯಗಳಿಗೆ ತುಪ್ಪವನ್ನು ಹಚ್ಚುವ ಮೂಲಕ ಗಾಯಗಳು ಬೇಗನೇ ಮಾಗುತ್ತವೆ. ಅಷ್ಟೆ ಅಲ್ಲ ಇದರ ನಿಯಮಿತ ಸೇವನೆಯಿಂದ ಕೆಟ್ಟ ಕೊಲೆಸ್ಟ್ರಾಲ್ ತೊಲಗಿಸಲೂ ಸಾಧ್ಯವಾಗುತ್ತದೆ. ಜೀವರಾಸಾಯನಿಕ ಕ್ರಿಯೆ ಹೆಚ್ಚಿಸುವುದು, ಕೂದಲು ಉದುರುವುದನ್ನು ತಡೆಗಟ್ಟುವುದು, ಹೃದಯ ಕ್ಷಮತೆಯನ್ನು ಹೆಚ್ಚಿಸುವುದು ಮೊದಲಾದ ಆರೋಗ್ಯ ಕರ ಪ್ರಯೋಜನಗಳಿವೆ.

ಚಿಕ್ಕ ಪ್ರಮಾಣದಲ್ಲಿ ತುಪ್ಪವನ್ನು ಪ್ರತಿ ಊಟದೊಂದಿಗೆ ಸೇವಿಸಿದರೆಜೀರ್ಣಕ್ರಿಯೆ ಸುಲಭಗೊಳ್ಳುತ್ತದೆ. ತುಪ್ಪ ಜೀರ್ಣಕ್ರಿಯೆಗೆ ಪ್ರಚೋದಕದ ರೂಪದಲ್ಲಿ ನೆರವಾಗುತ್ತದೆ.ಕೆಲವು ಸಂಶೋಧನೆಗಳ ಪ್ರಕಾರ ತುಪ್ಪದ ಸೇವನೆಯಿಂದ ಕ್ಯಾನ್ಸರ್ ಬೆಳವಣಿಕೆ ಕುಂಠಿತಗೊಳ್ಳುತ್ತದೆ. ಸಾಮಾನ್ಯವಾಗಿ ತುಪ್ಪವನ್ನು ನಿತ್ಯವೂ ಸೇವಿಸುತ್ತಾ ಬಂದಿರು ವವರಲ್ಲಿ ಕ್ಯಾನ್ಸರ್ ಪ್ರಮಾಣ ಅತಿ ಕಡಿಮೆ ಇರುವುದಕ್ಕೆ ಇದೇ ಕಾರಣವಿರಬಹುದು.

ರಾತ್ರಿ ಮಲಗುವ ಮುನ್ನ ಬಿಸಿಬಿಸಿ ಹಾಲಿಗೆ ಕೊಂಚವೇ ಕೊಂಚ ತುಪ್ಪವನ್ನು ಸೇರಿಸಿ ಕುಡಿಯುವ ಮೂಲಕ ಉತ್ತಮ ನಿದ್ದೆ ಬರುತ್ತದೆ ಹಾಗೂ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ. ಬೆಳಿಗ್ಗೆ ಕಲ್ಮಶಗಳು ಸುಲಭವಾಗಿ ಹೊರ ಹೋಗಲು ಸಾಧ್ಯವಾಗುತ್ತದೆ. ಸ್ಮರಣಶಕ್ತಿ ಮತ್ತು ಬುದ್ದಿಮತ್ತೆ ಹೆಚ್ಚಲು ತುಪ್ಪ ನೆರವಾಗುತ್ತದೆ ಎಂದು ಬಹಳ ಹಿಂದಿಂದಲೂ ಭಾರತ ದಲ್ಲಿ ನಂಬಿಕೊಂಡು ಬರಲಾಗಿದೆ. ಇದೇ ಕಾರಣಕ್ಕೆ ವಿದ್ಯಾರ್ಥಿ ಗಳಿಗೆ ತುಪ್ಪದ ತಿಂಡಿಗಳನ್ನು ಆಗಾಗ ನೀಡಲಾಗುತ್ತಿತ್ತು. ಮೂಗಿನಿಂದ ರಕ್ತ ಬರುತ್ತಿದ್ದರೆ ವೈದ್ಯರಿಗೆ ತೋರಿಸುವ ಮೊದಲು ತುಪ್ಪವನ್ನು ಪ್ರಯೋಗಿಸಿ ಒಂದು ಕೈ ನೋಡಬಹುದು. ಇದಕ್ಕಾಗಿ ಕರಗಿದ ತುಪ್ಪವನ್ನು ಮೂಗಿನ ತುದಿ ಮತ್ತು ಹೊಳ್ಳೆಗಳ ಒಳಗೆ, ವಿಶೇಷವಾಗಿ ರಕ್ತ ಒಸರುವೆಡೆ ದಿನಕ್ಕೆ ಮೂರು ನಾಲ್ಕು ಬಾರಿಯಂತೆ ಎರಡರಿಂದ ಮೂರು ದಿನ ಹಚ್ಚಬೇಕು.

ಇಂದು ದುಬಾರಿ ತುಪ್ಪದೊಂದಿಗೆ ಅಗ್ಗದ ಡಾಲ್ಡಾವನ್ನು ಬೆರೆಸಿ ಮಾರಾಟ ಮಾಡುವ ಖದೀಮರಿದ್ದಾರೆ. ಆದರೆ ತುಪ್ಪವನ್ನು ತಕ್ಷಣ ಪರೀಕ್ಷಿಸಲು ಕೆಲವು ಸುಲಭ ವಿಧಾನಗಳಿವೆ.
ಶುದ್ಧ ತುಪ್ಪ ಬಿಸಿ ಅಂಗೈಯಲ್ಲಿ ತಕ್ಷಣ ಕರಗುತ್ತದೆ. ಇದಕ್ಕಾಗಿ ಎರಡೂ ಹಸ್ತಗಳನ್ನು ಸುಮಾರು ಇಪ್ಪತ್ತು ಸೆಕೆಂಡ್ ಉಜ್ಜಿ ತಕ್ಷಣ ಒಂದು ಚಿಕ್ಕ ಪ್ರಮಾಣದ ಗಟ್ಟಿ ತುಪ್ಪವನ್ನು ಕೈ ಮೇಲೆ ಇಟ್ಟಾಕ್ಷವೇ ಕರಗಲು ಪ್ರಾರಂಭವಾಗಬೇಕು. ಹಾಗೂ ಕೆಲವೇ ಸೆಕೆಂಡುಗಳಲ್ಲಿ ದ್ರವವಾಗಬೇಕು. ಒಂದು ವೇಳೆ ಕರಗಲು ಹೆಚ್ಚು ಸಮಯ ತೆಗೆದುಕೊಂಡರೆ ಇದು ಅಪ್ಪಟವಲ್ಲ ಎಂದು ಖಾತ್ರಿಯಾಗುತ್ತದೆ. ಹಿರಿಯರು ಪರೀಕ್ಷಿಸಲು ಇನ್ನೊಂದು ವಿಧಾನ ಅನು ಸರಿಸುತ್ತಿದ್ದರು. ಇದಕ್ಕೆ ಶುದ್ದ ತುಪ್ಪದ ಪರಿಮಳ ನಿಮ್ಮ ನೆನಪಿನಲ್ಲಿರಬೇಕು. ಕೊಂಚ ತುಪ್ಪವನ್ನು ಹಸ್ತದ ಹಿಂಬದಿಗೆ ಸವರಿ ನಾಲ್ಕಾರು ಬಾರಿ ಉಜ್ಜಿ ಒರೆಸಿಬಿಡಬೇಕು. ಅಪ್ಪಟ ತುಪ್ಪವಾದರೆ ತುಪ್ಪದ ವಾಸನೆ ಹೆಚ್ಚು ಹೊತ್ತು ಉಳಿದಿರುತ್ತದೆ. ಡಾಲ್ಡಾ ಸೇರಿಸಿದ್ದರೆ ಈ ಪರಿಮಳ ಒಂದು ನಿಮಿಷದೊಳಗ ಖಾಲಿಯಾಗುತ್ತದೆ.

ಶುದ್ಧ ತುಪ್ಪದ ಬಾಟಲಿಯ ಮೇಲ್ಭಾಗದಲ್ಲಿ ಕರಗಿದ್ದು ಇದರ ಕೊಂಚವೇ ಕೆಳಗೆ ತುಪ್ಪ ಮರಳು ಮರಳಾಗಿರುತ್ತದೆ. ಆದರೆ ಇದು ಹಸುವಿನ ಮತ್ತು ಎಮ್ಮೆ ಹಾಲಿನ ತುಪ್ಪದಲ್ಲಿ
ಎರಡರಲ್ಲೂ ಕಂಡುಬರುತ್ತದೆ. ಒಂದು ವೇಳೆ ಡಾಲ್ಡಾ ಬೆರೆಸಿದ್ದರೆ ಮೇಲ್ಭಾಗ ಕರಗುವುದಿಲ್ಲ, ಗಟ್ಟಿಯಾಗಿಯೇ ಇರುತ್ತದೆ. ಶುದ್ಧ ತುಪ್ಪದ ದೀಪ ಯಾವುದೇ ಚಿಟಿಪಿಟಿಯಿಲ್ಲದೇ ಉರಿಯುತ್ತದೆ. ತುಪ್ಪವನ್ನು ಹತ್ತಿಯ ಬತ್ತಿಗೆ ಸವರಿ ಬೆಂಕಿ ಕೊಟ್ಟು ಉರಿಸಿ ಸೂಕ್ಷ್ಮವಾಗಿ ಗಮನಿಸಿ. ಶುದ್ದ ತುಪ್ಪವಾದರೆ ಜ್ವಾಲೆ ನೇರವಾಗಿ, ಏಕಪ್ರಕಾರವಾಗಿ ಹೊಗೆಯಿಲ್ಲದೇ ಉರಿಯುತ್ತದೆ. ಡಾಲ್ಡಾ ಬೆರೆಸಿದ್ದರೆ ಜ್ವಾಲೆ ಕೊಂಚ ಚಿಟಿಪಿಟಿ ಎನ್ನುವುದು ಅಥವಾ ವೇಗವಾಗಿ ಚಿಕ್ಕದೊಡ್ಡದಾಗುವುದು ಮತ್ತು ಜ್ವಾಲೆಯ ತುದಿಯಲ್ಲಿ ಕೊಂಚ ಕಪ್ಪು ಹೊಗೆಯಂತಿರುವುದು ಕಂಡುಬರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…
ಬಿಗ್ ಬಾಸ್ ರಿಯಾಲಿಟಿ ಶೋ ಫಿನಾಲೆಗೆ ಒಂದೇ ವಾರ ಉಳಿದಿದೆ. ಈ ವಾರ ಪ್ರಿಯಾಂಕಾ ಬಿಗ್ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಪ್ರಿಯಾಂಕಾ ಬಿಗ್ಬಾಸ್ ಮನೆಗೆ ಎಂಟ್ರಿ ಪಡೆದ ದಿನ ಮತ್ತು ಹೊರ ಬಂದ ದಿನಕ್ಕಿರುವ ಸಾಮ್ಯತೆಯನ್ನು ಹೇಳಿ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ಮನೆಯಿಂದ ಹೊರ ಬಂದು ನಟ ಸುದೀಪ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಮಗಳು ವೇದಿಕೆಯತ್ತ ಬರುತ್ತಿದ್ದಂತೆ ಪ್ರಿಯಾಂಕಾರ ತಾಯಿ ಕಣ್ಣೀರು ಹಾಕಲಾರಂಭಿಸಿದರು. ಈ ವೇಳೆ ಸುದೀಪ್, ಮಗಳು ಮನೆಯಿಂದ ಹೊರ ಬಂದಿದ್ದಕ್ಕೆ…
ಮದುವೆಯಾಗುವುದು ಪ್ರತಿಯೊಬ್ಬರ ಕನಸು. ತಮಗಿಷ್ಟವಾಗುವ ವ್ಯಕ್ತಿಯನ್ನು ಮದುವೆಯಾಗಲು ಪ್ರತಿಯೊಬ್ಬರೂ ಬಯಸ್ತಾರೆ. ದಾಂಪತ್ಯ ಜೀವನ ಪರ್ಯಂತ ಸುಖಕರವಾಗಿರಲೆಂದು ಅಳೆದು ತೂಗಿ ಮದುವೆ ಮಾಡ್ತಾರೆ. ಹಿಂದೂ ಸಂಪ್ರದಾಯದಲ್ಲಿ ಮದುವೆಗೂ ಮುನ್ನ ಜಾತಕ ನೋಡುವ ಪದ್ಧತಿಯಿದೆ. ಜಾತಕ ಹೊಂದಿಕೆಯಾದ್ರೆ ಮದುವೆ ಮಾತುಕತೆ ಮುಂದುವರೆಯುತ್ತದೆ.ಸಾಮಾನ್ಯವಾಗಿ ಒಂದೇ ಗೋತ್ರದವರು ಮದುವೆಯಾಗುವುದಿಲ್ಲ. ಗೋತ್ರ ನೋಡಿಯೇ ಜಾತಕ ತೆಗೆದುಕೊಳ್ತಾರೆ. ಒಂದೇ ಗೋತ್ರದವರನ್ನು ಮದುವೆಯಾಗದಿರಲು ಮುಖ್ಯ ಕಾರಣವಿದೆ. ಸನಾತದ ಧರ್ಮದ ಪ್ರಕಾರ ಒಂದೇ ಗೋತ್ರದವರು ಸಹೋದರ-ಸಹೋದರಿಯಾಗಿರುತ್ತಾರೆ ಎಂಬ ನಂಬಿಕೆಯಿದೆ. ಹಾಗಾಗಿ ಒಂದೇ ಗೋತ್ರದವರನ್ನು ಮದುವೆಯಾಗುವುದಿಲ್ಲ. ಇದಲ್ಲದೆ ಒಂದೇ ಗೋತ್ರದಲ್ಲಿ…
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಚಂದನಾ ಅವರು ಟಾಸ್ಕ್ ಮಾಡಿ ಮೈ…
ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…
ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂವರ್ಕ್ ನೀಡುವ ಶಾಲೆಗಳ ಮಾನ್ಯತೆಯನ್ನೇ ರದ್ದುಪಡಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಖಡಕ್ ಎಚ್ಚರಿಕೆ ನೀಡಿದೆ.2019-20ನೇ ಸಾಲಿನ ಶೈಕ್ಷಣಿಕ ತರಗತಿಗಳು ಈಗಾಗಲೇ ಆರಂಭವಾಗಿವೆ. ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಒಂದು ಮತ್ತು ಎರಡನೇ ತರಗತಿ ಮಕ್ಕಳಿಗೆ ಹೆಚ್ಚಿನ ಹೋಂವರ್ಕ್ ನೀಡಲಾಗುತ್ತಿದೆ. ಇದು ಪಾಲಕ, ಪೋಷಕರಿಗೆ ನೇರ ಹೊರೆಯಾಗಲಿದೆ. ಅಲ್ಲದೆ, ಈ ಮಕ್ಕಳ ಹೋಂ ವರ್ಕ್ನ್ನು ಮನೆಯಲ್ಲಿ ಪಾಲಕ, ಪೋಷಕರೇ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂ…