News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಉಪಯುಕ್ತ ಮಾಹಿತಿ

ಹಸುವಿನ ತುಪ್ಪದಲ್ಲಿ ಅಡಗಿದೆ ಪೋಷಕಾಂಶಗಳ ಆಗರ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

1332

ಅಪ್ಪಟ ದೇಸಿ ತುಪ್ಪಕ್ಕೆ ಭೇಷ್ ಎನ್ನಲೇಬೇಕು ಆದರೆ ಒಂದು ಎಚ್ಚರಿಕೆ, ಏನೆಂದರೆ ತುಪ್ಪವನ್ನು ಸೇವಿಸಲು ಒಂದು ಮಿತಿ ಇದೆ. ಅತಿಯಾದರೆ ಅಮೃತವೂ ವಿಷ ವೆನ್ನುವಂತೆ ತುಪ್ಪದ ಅತಿಸೇವನೆ ದೇಹದಲ್ಲಿ ಕೊಬ್ಬಿನ ಸಂಗ್ರಹ ಹೆಚ್ಚಿಸಲು ಕಾರಣ ವಾಗುತ್ತದೆ. ತುಪ್ಪವನ್ನು ತುಪ್ಪದಂತೆಯೇ ತಿನ್ನಬೇಕು ಎನ್ನುವ ಕಾರಣಕ್ಕೆ ಚಮಚಕ್ಕಿಂತಲೂ ಚಿಕ್ಕದಾದ ಮಿಳ್ಳೆ ಎಂಬ ಉಪ ಕರಣವನ್ನು ನಮ್ಮ ಹಿರಿಯರು ಉಪಯೋಗಿಸುತ್ತಾ ಬಂದಿ ದ್ದಾರೆ. ಇದರ ಆಳ ಕಡಿಮೆ ಇದ್ದು, ಅಗಲ ಕೊಂಚ ಜಾಸ್ತಿ ಇರುವ ಕಾರಣ ಹೆಚ್ಚು ತುಪ್ಪ ಸುರಿದಂತೆ ಅತಿಥಿಗಳಿಗೆ ಅನ್ನಿಸಿದರೂ ನಿಜವಾಗಿ ಕೊಂಚವೇ ತುಪ್ಪ ತಟ್ಟೆಗೆ ಬಿದ್ದಿರುತ್ತದೆ! ಮಿಳ್ಳೆ ಈಗ ಅದೃಶ್ಯವಾಗಿರುವ ಕಾರಣ ತುಪ್ಪದ ಸೇವನೆಯ ಪ್ರಮಾಣ ಮತ್ತು ನಿಮ್ಮ ಇಂದಿನ ದೇಹಸ್ಥಿತಿಯನ್ನು ಪರಿಗಣಿಸಿ ಎಷ್ಟು  ಸೇವಿಸ ಬಹುದು ಎಂಬುದನ್ನು ನಿಮ್ಮ ಕುಟುಂಬ ವೈದ್ಯರು ಸಲಹೆ ನೀಡಬಲ್ಲರು. ಆ ಪ್ರಕಾರವೇ ಸೇವಿಸಿದರೆ ಉತ್ತಮ.

ಆರೋಗ್ಯದ ವಿಷಯಕ್ಕೆ  ಬಂದಾಗ ತುಪ್ಪ ಮಹತ್ವದ ಪಾತ್ರ ವಹಿಸುತ್ತದೆ:

ಜಿಡ್ಡಿನ ಪದಾರ್ಥಗಳಲ್ಲೇ ಅತಿ ಆರೋಗ್ಯಕರವಾದ ತುಪ್ಪ ಹಲವು ಉತ್ತಮ ಗುಣಗಳನ್ನು ಹೊಂದಿದೆ. ಇದರಲ್ಲಿ ಅತಿ ಹೆಚ್ಚಿನ ಪ್ರಮಾಣ ದಲ್ಲಿರುವ ಕ್ಯಾಲೋರಿಗಳು,ಇ ಪೋಷಕಾಂಶ ಗಳು, ವೈರಸ್ಸಿನ ವಿರುದ್ಧ ಹೋರಾಡುವ ಗುಣ, ಶಿಲಿಂಧ್ರ ನಿವಾರಕ, ಬ್ಯಾಕ್ಟೀರಿಯಾ ದೇಸೀ ಹಸುವಿನ ತುಪ್ಪ, ಆರೋಗ್ಯದ ಪಾಲಿನ ಸಂಜೀವಿನಿ ನಿವಾರಕ ಗುಣಗಳು ಮತ್ತು ಅಂಟಿ ಆಕ್ಸಿಡೆಂಟುಗಳ ಜೊತೆಗೆ ಕೊಂಚ ಕೊಬ್ಬಿನ ತೈಲವೂ ಇವೆ. ಆದರೆ ಎಮ್ಮೆಯ ಹಾಲಿನಿಂದ ತಯಾರಿಸಿದ ತುಪ್ಪದಲ್ಲೂ ಬಹುತೇಕ ಈ ಗುಣಗಳಿದ್ದರೂ ಕೊಬ್ಬಿನ ಪ್ರಮಾಣ ಅಪಾರ ವಾದುದರಿಂದ ಎಮ್ಮೆ ಹಾಲಿನ ತುಪ್ಪಕ್ಕಿಂತ ಹಸುವಿನ ಹಾಲಿನ ತುಪ್ಪವೇ ಉತೃಷ್ಕವಾಗಿದೆ. ಸಾಮಾನ್ಯವಾಗಿ ಅನ್ನ, ಚಪಾತಿ, ಸಿಹಿ ಮೊದಲಾದ ಯಾವುದೇ ಆಹಾರದೊಂದಿಗೆ ಕೊಂಚ ತುಪ್ಪವನ್ನು ಬೆರೆಸಿ ತಿಂದರೆ ಆ ಖಾದ್ಯದ ರುಚಿ ಬಹಳಷ್ಟು ಹೆಚ್ಚುತ್ತದೆ. ಅಷ್ಟೆ ಅಲ್ಲ, ಹಸುವಿನ ತುಪ್ಪವನ್ನು ಉಪಯೋಗಿಸಿ ಮೈಯನ್ನು ಮಸಾಜ್ ಮಾಡಿದರೆ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.

ದೇಸೀ ಹಸುವಿನ ತುಪ್ಪ, ಆರೋಗ್ಯದ ಪಾಲಿನ ಸಂಜೀವಿನಿ:-

ಸುಟ್ಟ ಗಾಯಕ್ಕೆ, ಚಿಕ್ಕ ಪುಟ್ಟ ತರಚು ಗಾಯಗಳಿಗೆ ತುಪ್ಪವನ್ನು ಹಚ್ಚುವ ಮೂಲಕ ಗಾಯಗಳು ಬೇಗನೇ ಮಾಗುತ್ತವೆ. ಅಷ್ಟೆ ಅಲ್ಲ ಇದರ ನಿಯಮಿತ ಸೇವನೆಯಿಂದ ಕೆಟ್ಟ ಕೊಲೆಸ್ಟ್ರಾಲ್ ತೊಲಗಿಸಲೂ ಸಾಧ್ಯವಾಗುತ್ತದೆ. ಜೀವರಾಸಾಯನಿಕ ಕ್ರಿಯೆ ಹೆಚ್ಚಿಸುವುದು, ಕೂದಲು ಉದುರುವುದನ್ನು ತಡೆಗಟ್ಟುವುದು, ಹೃದಯ ಕ್ಷಮತೆಯನ್ನು ಹೆಚ್ಚಿಸುವುದು ಮೊದಲಾದ ಆರೋಗ್ಯ ಕರ ಪ್ರಯೋಜನಗಳಿವೆ.

ತುಪ್ಪದ ಆರೋಗ್ಯಕರ ಪ್ರಯೋಜನಗಳ ವಿವರ:-

ಚಿಕ್ಕ ಪ್ರಮಾಣದಲ್ಲಿ ತುಪ್ಪವನ್ನು ಪ್ರತಿ ಊಟದೊಂದಿಗೆ ಸೇವಿಸಿದರೆಜೀರ್ಣಕ್ರಿಯೆ ಸುಲಭಗೊಳ್ಳುತ್ತದೆ. ತುಪ್ಪ ಜೀರ್ಣಕ್ರಿಯೆಗೆ ಪ್ರಚೋದಕದ ರೂಪದಲ್ಲಿ ನೆರವಾಗುತ್ತದೆ.ಕೆಲವು ಸಂಶೋಧನೆಗಳ ಪ್ರಕಾರ ತುಪ್ಪದ ಸೇವನೆಯಿಂದ ಕ್ಯಾನ್ಸರ್ ಬೆಳವಣಿಕೆ ಕುಂಠಿತಗೊಳ್ಳುತ್ತದೆ. ಸಾಮಾನ್ಯವಾಗಿ ತುಪ್ಪವನ್ನು ನಿತ್ಯವೂ ಸೇವಿಸುತ್ತಾ ಬಂದಿರು ವವರಲ್ಲಿ ಕ್ಯಾನ್ಸರ್ ಪ್ರಮಾಣ ಅತಿ ಕಡಿಮೆ ಇರುವುದಕ್ಕೆ ಇದೇ ಕಾರಣವಿರಬಹುದು.

ತುಪ್ಪದ ಆರೋಗ್ಯಕರ ಪ್ರಯೋಜನಗಳ ವಿವರ:-

ರಾತ್ರಿ ಮಲಗುವ ಮುನ್ನ ಬಿಸಿಬಿಸಿ ಹಾಲಿಗೆ ಕೊಂಚವೇ ಕೊಂಚ ತುಪ್ಪವನ್ನು ಸೇರಿಸಿ ಕುಡಿಯುವ ಮೂಲಕ ಉತ್ತಮ ನಿದ್ದೆ ಬರುತ್ತದೆ ಹಾಗೂ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ. ಬೆಳಿಗ್ಗೆ ಕಲ್ಮಶಗಳು ಸುಲಭವಾಗಿ ಹೊರ ಹೋಗಲು ಸಾಧ್ಯವಾಗುತ್ತದೆ. ಸ್ಮರಣಶಕ್ತಿ ಮತ್ತು ಬುದ್ದಿಮತ್ತೆ ಹೆಚ್ಚಲು ತುಪ್ಪ ನೆರವಾಗುತ್ತದೆ ಎಂದು ಬಹಳ ಹಿಂದಿಂದಲೂ ಭಾರತ ದಲ್ಲಿ ನಂಬಿಕೊಂಡು ಬರಲಾಗಿದೆ. ಇದೇ ಕಾರಣಕ್ಕೆ ವಿದ್ಯಾರ್ಥಿ ಗಳಿಗೆ ತುಪ್ಪದ ತಿಂಡಿಗಳನ್ನು ಆಗಾಗ ನೀಡಲಾಗುತ್ತಿತ್ತು. ಮೂಗಿನಿಂದ ರಕ್ತ ಬರುತ್ತಿದ್ದರೆ ವೈದ್ಯರಿಗೆ ತೋರಿಸುವ ಮೊದಲು ತುಪ್ಪವನ್ನು ಪ್ರಯೋಗಿಸಿ ಒಂದು ಕೈ ನೋಡಬಹುದು. ಇದಕ್ಕಾಗಿ ಕರಗಿದ ತುಪ್ಪವನ್ನು ಮೂಗಿನ ತುದಿ ಮತ್ತು ಹೊಳ್ಳೆಗಳ ಒಳಗೆ, ವಿಶೇಷವಾಗಿ ರಕ್ತ ಒಸರುವೆಡೆ ದಿನಕ್ಕೆ ಮೂರು ನಾಲ್ಕು ಬಾರಿಯಂತೆ ಎರಡರಿಂದ ಮೂರು ದಿನ ಹಚ್ಚಬೇಕು.

ಶುದ್ಧ ತುಪ್ಪವನ್ನು ಪರೀಕ್ಷಿಸುವುದು ಹೇಗೆ?

ಇಂದು ದುಬಾರಿ ತುಪ್ಪದೊಂದಿಗೆ ಅಗ್ಗದ ಡಾಲ್ಡಾವನ್ನು ಬೆರೆಸಿ ಮಾರಾಟ ಮಾಡುವ ಖದೀಮರಿದ್ದಾರೆ. ಆದರೆ ತುಪ್ಪವನ್ನು ತಕ್ಷಣ ಪರೀಕ್ಷಿಸಲು ಕೆಲವು ಸುಲಭ ವಿಧಾನಗಳಿವೆ.
ಶುದ್ಧ ತುಪ್ಪ ಬಿಸಿ ಅಂಗೈಯಲ್ಲಿ ತಕ್ಷಣ ಕರಗುತ್ತದೆ. ಇದಕ್ಕಾಗಿ ಎರಡೂ ಹಸ್ತಗಳನ್ನು ಸುಮಾರು ಇಪ್ಪತ್ತು ಸೆಕೆಂಡ್ ಉಜ್ಜಿ ತಕ್ಷಣ ಒಂದು ಚಿಕ್ಕ ಪ್ರಮಾಣದ ಗಟ್ಟಿ ತುಪ್ಪವನ್ನು ಕೈ ಮೇಲೆ ಇಟ್ಟಾಕ್ಷವೇ ಕರಗಲು ಪ್ರಾರಂಭವಾಗಬೇಕು. ಹಾಗೂ ಕೆಲವೇ ಸೆಕೆಂಡುಗಳಲ್ಲಿ ದ್ರವವಾಗಬೇಕು. ಒಂದು ವೇಳೆ ಕರಗಲು ಹೆಚ್ಚು ಸಮಯ ತೆಗೆದುಕೊಂಡರೆ ಇದು ಅಪ್ಪಟವಲ್ಲ ಎಂದು ಖಾತ್ರಿಯಾಗುತ್ತದೆ. ಹಿರಿಯರು ಪರೀಕ್ಷಿಸಲು ಇನ್ನೊಂದು ವಿಧಾನ ಅನು ಸರಿಸುತ್ತಿದ್ದರು. ಇದಕ್ಕೆ ಶುದ್ದ  ತುಪ್ಪದ ಪರಿಮಳ ನಿಮ್ಮ ನೆನಪಿನಲ್ಲಿರಬೇಕು. ಕೊಂಚ ತುಪ್ಪವನ್ನು ಹಸ್ತದ ಹಿಂಬದಿಗೆ ಸವರಿ ನಾಲ್ಕಾರು ಬಾರಿ ಉಜ್ಜಿ ಒರೆಸಿಬಿಡಬೇಕು. ಅಪ್ಪಟ ತುಪ್ಪವಾದರೆ ತುಪ್ಪದ ವಾಸನೆ ಹೆಚ್ಚು ಹೊತ್ತು ಉಳಿದಿರುತ್ತದೆ. ಡಾಲ್ಡಾ ಸೇರಿಸಿದ್ದರೆ ಈ ಪರಿಮಳ ಒಂದು ನಿಮಿಷದೊಳಗ ಖಾಲಿಯಾಗುತ್ತದೆ.

ಶುದ್ಧ ತುಪ್ಪವನ್ನು ಪರೀಕ್ಷಿಸುವ ವಿಧಾನ :-

 

ಶುದ್ಧ ತುಪ್ಪದ ಬಾಟಲಿಯ ಮೇಲ್ಭಾಗದಲ್ಲಿ ಕರಗಿದ್ದು ಇದರ ಕೊಂಚವೇ ಕೆಳಗೆ ತುಪ್ಪ ಮರಳು ಮರಳಾಗಿರುತ್ತದೆ. ಆದರೆ ಇದು ಹಸುವಿನ ಮತ್ತು ಎಮ್ಮೆ ಹಾಲಿನ ತುಪ್ಪದಲ್ಲಿ
ಎರಡರಲ್ಲೂ ಕಂಡುಬರುತ್ತದೆ. ಒಂದು ವೇಳೆ ಡಾಲ್ಡಾ ಬೆರೆಸಿದ್ದರೆ ಮೇಲ್ಭಾಗ ಕರಗುವುದಿಲ್ಲ, ಗಟ್ಟಿಯಾಗಿಯೇ ಇರುತ್ತದೆ. ಶುದ್ಧ ತುಪ್ಪದ ದೀಪ ಯಾವುದೇ ಚಿಟಿಪಿಟಿಯಿಲ್ಲದೇ ಉರಿಯುತ್ತದೆ. ತುಪ್ಪವನ್ನು ಹತ್ತಿಯ ಬತ್ತಿಗೆ ಸವರಿ ಬೆಂಕಿ ಕೊಟ್ಟು ಉರಿಸಿ ಸೂಕ್ಷ್ಮವಾಗಿ ಗಮನಿಸಿ. ಶುದ್ದ ತುಪ್ಪವಾದರೆ ಜ್ವಾಲೆ ನೇರವಾಗಿ, ಏಕಪ್ರಕಾರವಾಗಿ ಹೊಗೆಯಿಲ್ಲದೇ ಉರಿಯುತ್ತದೆ. ಡಾಲ್ಡಾ ಬೆರೆಸಿದ್ದರೆ ಜ್ವಾಲೆ ಕೊಂಚ ಚಿಟಿಪಿಟಿ ಎನ್ನುವುದು ಅಥವಾ ವೇಗವಾಗಿ ಚಿಕ್ಕದೊಡ್ಡದಾಗುವುದು ಮತ್ತು ಜ್ವಾಲೆಯ ತುದಿಯಲ್ಲಿ ಕೊಂಚ ಕಪ್ಪು ಹೊಗೆಯಂತಿರುವುದು ಕಂಡುಬರುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಟೋಮೊಬೈಲ್ಸ್

    ಕೇವಲ 1 ರೂ. ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ..!ತಿಳಿಯಲು ಈ ಲೇಖನ ಓದಿ ..

    ಈ ವರ್ಷ ಹೊಸ ಕಾರು ಖರೀದಿಸಲು ಯೋಜನೆ ರೂಪಿಸಿರುವಿರಾ ? ಹಾಗಾದ್ರೆ, ಟಾಟಾ ಮೋಟಾರ್ಸ್ ಕಂಪನಿಯು ಭಾರತದ ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ನೀಡಲು ಮುಂದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ತನ್ನ ‘ಮೆಗಾ ಆಫರ್ ಮ್ಯಾಕ್ಸ್ ಸೆಲೆಬ್ರೇಷನ್ ಕ್ಯಾಂಪೇನ್’ ಅಡಿಯಲ್ಲಿ, ಖರೀದಿದಾರರು ಕೇವಲ ರೂ.1 ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ. ಹೌದು, ಕೇವಲ ಒಂದು ರೂಪಾಯಿ ಡೌನ್‌ಪೇಮೆಂಟ್ ಮಾಡುವ ಮೂಲಕ ಟಾಟಾ ಕಾರಿನ ಮೇಲೆ ರೂ.1 ಲಕ್ಷ ಉಳಿತಾಯ…

  • ಮನರಂಜನೆ

    ಮಹಿಳಾ ಸ್ಪರ್ಧಿಗಳ ಬಗ್ಗೆ ರಹಸ್ಯವನ್ನ ಬಿಚ್ಚಿಟ್ಟ ಚಂದನ್, ಮರ್ಯಾದೆ ಹೋಗ್ತಿದೆ ಎಂದ ದೀಪಿಕ ದಾಸ್.

    ಶನಿವಾರ ‘ವಾರದ ಕತೆ ಕಿಚ್ಚನ ಜೊತೆ’ ಸಂಚಿಕೆಯಲ್ಲಿ ಸುದೀಪ್ ಬಿಗ್ ಬಾಸ್ ಮನೆಯ ಮೊದಲನೇ ದಿನದ ಅನುಭವವನ್ನು ಕೇಳುತ್ತಿರುತ್ತಾರೆ. ಸುದೀಪ್, ಚಂದನ್ ಅವರನ್ನು ಕೇಳಿದಾಗ ಅವರು ಮಹಿಳಾ ಸ್ಪರ್ಧಿಗಳ ರಹಸ್ಯ ಬಿಚ್ಚಿಟ್ಟಿದ್ದಾರೆ. ಚಂದನ್ ಅವರ ಮಾತು ಕೇಳಿ ದೀಪಿಕಾ, ಪ್ರಿಯಾಂಕಾ ಹಾಗೂ ಭೂಮಿ ಮೊದಲು ಮುಜುಗರಕ್ಕೆ ಒಳಗಾದರು. ನಂತರ ದೀಪಿಕಾ ನನ್ನ ಮರ್ಯಾದೆ ಹೋಗುತ್ತಿದೆ ಎಂದು ತಮ್ಮ ಮುಖವನ್ನು ಮುಚ್ಚಿಕೊಂಡರು. ಬಿಗ್ ಬಾಸ್ ಮನೆಗೆ ಬಂದ ಮೊದಲನೇ ದಿನ ನಾನು ಮಹಿಳಾ ಸ್ಪರ್ಧಿಗಳನ್ನು ಮಾತನಾಡಿಸಿ ಮಲಗಿದ್ದೆ. ಮರುದಿನ…

  • inspirational

    ಹೆಚ್ಚು ಅನ್ನ ತಿನ್ನುವುದರಿಂದ ಏನಾಗುತ್ತೆ, ಹಲವು ಜನರಿಗೆ ಈ ಸತ್ಯಗಳೇ ಗೊತ್ತಿಲ್ಲ.

    ಪ್ರಪಂಚದಲ್ಲಿ ಅತಿ ಹೆಚ್ಚು ಮಂದಿ ತಮ್ಮ ಊಟದಲ್ಲಿ ಅನ್ನವನ್ನು ಹೆಚ್ಚು ಬಳಸುತ್ತಾರೆ. ಅಕ್ಕಿ ಪ್ರಪಂಚದ ಅರ್ಧಕ್ಕಿಂತಲೂ ಹೆಚ್ಚು ಜನಸಂಖ್ಯೆಯ ಮುಖ್ಯ ಅಂಶವಾಗಿ ಬಳಸುವ ವಿಶಿಷ್ಟ ಧಾನ್ಯವಾಗಿದೆ, ಯಾವುದೇ ಸುವಾಸನೆ ಮತ್ತು ಮಸಾಲೆಗೆ ಹೊಂದಿಕೊಳ್ಳುವ ಸಾಮರ್ಥ್ಯದ ಕಾರಣದಿಂದ ಭಾಗಶಃ ಭಾಗವಾಗಿದೆ. ಯಾವುದೇ ವಿಧದ ತಿನಿಸುಗಳಲ್ಲಿ ಮೌಲ್ಯದ ಅಂಶವಾಗಿ ಕಾರ್ಯನಿರ್ವಹಿಸುವುದಾದರೆ, ಅಕ್ಕಿ ಒಂದು ಚೆವ್ನೆಸ್ ಮತ್ತು ಮೃದುವಾದ ವಿನ್ಯಾಸವನ್ನು ಹೊಂದಿರುತ್ತದೆ, ಅದು ಊಟಕ್ಕೆ ಪದಾರ್ಥವನ್ನು ಸೇರಿಸುತ್ತದೆ ಮತ್ತು ಅನೇಕ ವಿಧದ ಊಟದ ಯೋಜನೆಗಳನ್ನು ಪೂರೈಸುತ್ತದೆ. ಇನ್ನು ನಮ್ಮ ದೇಹಕ್ಕೆ ಬೇಕಾದ…

  • ಆರೋಗ್ಯ

    ಹಸುವಿನ ಹಾಲಿಗಿಂತ ಕತ್ತೆ ಹಾಲೇ ಉತ್ತಮನಾ..?ತಿಳಿಯಲು ಈ ಲೇಖನ ಓದಿ…

    ಕತ್ತೆಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು…., ಮಕ್ಳು ಮರಿ, ದೊಡ್ಡೋರ್‌, ಚಿಕ್ಕೋರ್‌ ಎಲ್ಲರಿಗೂ ಕತ್ತೆಹಾಲು….!’ ಇದು ಯಾವುದೋ ನಾಟಕದ ಸಂಭಾಷಣೆಯಲ್ಲ, ಬದಲಾಗಿ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಈಚೆಗೆ ಈ ರೀತಿಯ ಧ್ವನಿಯೊಂದು ಕೇಳಿ ಬರುತ್ತಿತ್ತು.

  • ಜೀವನಶೈಲಿ

    ಈ ಟೈಮ್’ನಲ್ಲಿ ಇವರಿಗೆ ಫ್ರೆಂಡ್ಸ್ ಬೇಕಾಗಿಲ್ಲ,ಹೊಟ್ಟೆಹುರಿ ಬಗ್ಗೆ ಹೇಳಾನ್ಗಿಲ್ಲ..!ಏನ್ ಗೊತ್ತಾ..?ಮುಂದೆ ಓದಿ…

    ಅನೇಕ ಜನರು ಹೆಣ್ಣು ಹೆತ್ತವರಿಗೆ ತುಂಬಾ ಕಷ್ಟ ಅನ್ನೋದು ಎಷ್ಟು ಸತ್ಯ ಅಲ್ವಾ.ಪೋಷಕರಿಗೆ ಮಗಳು ಏನಾದ್ರು ಹುಡುಗರ ಬಗ್ಗೆ ಮಾತನಾಡಿದ್ರೆ ತುಂಬಾ ಆತಂಕ ಉಂಟಾಗುತ್ತದೆ. ಎಲ್ಲಿ ನಮ್ಮ ಮಗಳು ಪ್ರೀತಿಯ ಬಲೆಗೆ ಸಿಗಾಕಿಕೊಳ್ಳುತ್ತಾಳೋ ಎಂಬ ಆತಂಕ ಶುರುವಾಗುತ್ತದೆ. ಹುಡುಗಿಯರು ಪ್ರೀತಿಯಲ್ಲಿ ಬಿದ್ದರೆ ತಮ್ಮ ಜೀವನದಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳುತ್ತಾರೆ.ಅದು ಏನು ಅಂತ ನಾವು ಹೇಳಿದ್ದೀವಿ ನೋಡಿ.

  • ಸುದ್ದಿ

    ಶ್ರೀಮುರಳಿ ಅಭಿಮಾನಿಗಳಿಗೊಂದು ಸಿಹಿ ಸುದ್ದಿ ; ‘ಭರಾಟೆ’ ಚಿತ್ರಕ್ಕೆ ಕೌಂಟ್‍ಡೌನ್ ಸ್ಟಾರ್ಟ್..!

    ಸಿನಿಮಾವೊಂದರ ಬಗ್ಗೆ ಬಿಡುಗಡೆಗು  ಮುನ್ನವೇ  ಸಹಜವಾಗಿ ಬರುವ ನಿರೀಕ್ಷೆಯಾ ತೀವ್ರತೆಯಿದೆಯಲ್ಲಾ? ಅದಕ್ಕೆ ಮಾಸ್ಟರ್ ಪೀಸ್‍ನಂಥಾ ಚಿತ್ರಗಳು ಅನೇಕವಿವೆ. ಇತ್ತೀಚಿನ ತಾಜಾ ಮಾದರಿಯಾಗಿ ನಿಲ್ಲುವಂಥಾ ಚಿತ್ರ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಭರಾಟೆ. ಈ ಟೈಟಲ್ ಅನೌನ್ಸ್ ಮಾಡಿದಗಿನಿಂದಲೇ  ಸೆನ್ಸೇಷನಲ್ ಭರಾಟೆ ಶುರುವಾಗಿ ಹೋಗಿತ್ತು. ರಾಜಸ್ಥಾನದ ಸುಂದರ ಸ್ಥಳಗಲ್ಲಿ , ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದ ಶ್ರೀಮುರಳಿ ಅಭಿಮಾನಿಗಳನ್ನು ಹುಚ್ಚೆಬ್ಬಿಸಿ ಕುಣಿಸಿದ್ದರು. ಅದೇ ರಭಸದೊಂದಿಗೆ ಸಾಗಿ ಬಂದಿರೋ ಭರಾಟೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಯುವ ಆವೇಗದ  ಚೇತನ್ ಅವರು ಈ…