ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
“ನಾಯಿ ಮೊಲೆಯಲ್ಲಿ ಕಂಡುಗ ಹಾಲಿದ್ದರೇನು ಪ್ರಯೋಜನ” ಎಂಬ ಗಾದೆ ಮಾತಿದೆ. ಅದೇ ರೀತಿ ಕತ್ತೆ ಹಾಲಿಗೂ ಅದೇ ರೀತಿ ಹೇಳುವವರೂ ಇದ್ದಾರೆ. ಆದರೆ ಹಸುವಿನ ಹಾಲಿಗಿಂತ ಕತ್ತೆ ಹಾಲೇ ಉತ್ತಮ ಎನ್ನುತ್ತಿದ್ದಾರೆ ವಿಜ್ಞಾನಿಗಳು. ಆ ಹಾಲಿನ ಮೇಲೆ ಪ್ರಯೋಗ ಮಾಡಿ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ.

‘ಕತ್ತೆಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು…., ಮಕ್ಳು ಮರಿ, ದೊಡ್ಡೋರ್, ಚಿಕ್ಕೋರ್ ಎಲ್ಲರಿಗೂ ಕತ್ತೆಹಾಲು….!’ ಇದು ಯಾವುದೋ ನಾಟಕದ ಸಂಭಾಷಣೆಯಲ್ಲ, ಬದಲಾಗಿ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಈಚೆಗೆ ಈ ರೀತಿಯ ಧ್ವನಿಯೊಂದು ಕೇಳಿ ಬರುತ್ತಿತ್ತು.

ನ್ಯಾಷನಲ್ ಲೈಬ್ರರಿ ಆಫ್ ಮೆಡಿಸಿನ್ ಅವರ ಕರೆಂಟ್ ಫಾರ್ಮಾಸೂಟಿಕಲ್ ಡಿಸೈನ್ ಪ್ರಕಾರ, ಜರ್ನಲ್ ಆಫ್ ಫುಡ್ ಸೈನ್ಸ್ ಲೇಖನದಲ್ಲಿ ಕತ್ತೆ ಹಾಲಿನ ಬಗೆಗಿನ ಸಂಗತಿಗಳನ್ನು ಹೊರಹಾಕಿದ್ದಾರೆ.

ಕತ್ತೆ ಹಾಲಿನ ಮೇಲೆ ವಿಜ್ಞಾನಿಗಳು ಮಾಡಿದ ಪ್ರಯೋಗಗಳು ಏನು ಹೇಳುತ್ತಿವೆ ಎಂದರೆ….ಹಸುವಿನ ಹಾಲಿಗಿಂತಲೂ ಕತ್ತೆ ಹಾಲಿನಲ್ಲಿ ಕೊಬ್ಬಿನ ಪ್ರಮಾಣ ತುಂಬಾ ಕಡಿಮೆ ಇರುತ್ತದಂತೆ. ಇನ್ನೊಂದು ಆಸಕ್ತಿಕರವಾದ ಸಂಗತಿ ಎಂದರೆ…ಕತ್ತೆ ಹಾಲು ಹೆಚ್ಚುಕಡಿಮೆ ಮನುಷ್ಯನ ಹಾಲಿನಷ್ಟೇ ಶ್ರೇಷ್ಠವಂತೆ.

ಆದರೆ ಹಸು ಮತ್ತು ಎಮ್ಮೆ ಹಾಲಿಗೆ ಹೋಲಿಸಿದರೆ ಕತ್ತೆ ಹಾಲಿನ ಬೆಲೆ ತುಂಬಾ ದುಬಾರಿ. ಎಷ್ಟು ಎಂದರೆ 15 ಎಂಎಲ್ ಕತ್ತೆ ಹಾಲಿನ ಬೆಲೆ ರೂ.50ರವರೆಗೂ ಇರುತ್ತದೆ. ಅಂದರೆ ಸಾಮಾನ್ಯವಾಗಿ ನಾವು ಕೊಳ್ಳುವ ಲೀಟರ್ ಹಾಲಿನ ಬೆಲೆಗೆ ಸಮ. ಒಂದು ಲೀಟರ್ ಕತ್ತೆ ಹಾಲಿನ ಬೆಲೆ ರೂ.3,300ವರೆಗೂ ಇರುತ್ತದೆ. ಇನ್ನು ಕತ್ತೆಗಳು ಹಸು, ಎಮ್ಮೆ ತರಹ ಲೀಟರ್ಗಟ್ಟಲೆ ಹಾಲು ಕೊಡಲ್ಲ.

ಒಂದೊಂದು ಕತ್ತೆ ಕೇವಲ 250 ಎಂಎಲ್ ಪ್ರಮಾಣದಲ್ಲಿ ಮಾತ್ರ ಹಾಲು ಕೊಡುತ್ತದೆ. ಅದು ಸಹ ವರ್ಷದಲ್ಲಿ ಕೇವಲ 7 ರಿಂದ 8 ತಿಂಗಳು ಮಾತ್ರ. ಆ ಸಮಯ ಮುಗಿಯಿತು ಎಂದರೆ ಮತ್ತೆ 3 ವರ್ಷ ಕಾಯಬೇಕು. ಆ ಬಳಿಕವಷ್ಟೇ ಕತ್ತೆ ಮರಿಹಾಕಿ ಮತ್ತೆ ಹಾಲು ಕೊಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಗನ ಸೀಳಿ ಬ್ರಹ್ಮಾಂಡ ತಲುಪಿದ್ದ ಈರುಳ್ಳಿ ಬೆಲೆ ಇದೀಗ ನಿಧಾನವಾಗಿ ಇಳಿಕೆಯತ್ತ ಮುಖ ಮಾಡಿದೆ. ದೇಶದ ವಿವಿಧೆಡೆ 200 ರೂ. ಗಡಿ ದಾಟಿದ್ದ ಈರುಳ್ಳಿ ಬೆಲೆ ಇದೀಗ 170 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಆದರೆ ನೆರೆಯ ಆಂಧ್ರಪ್ರದೇಶದಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಅಂದರೆ ನಿಮಗೆ ಅಚ್ಚರಿಯಾದಿತು. ಹೌದು, ಆಂಧ್ರ ಸರ್ಕಾರ ಈರುಳ್ಳಿಗೆ ಸಬ್ಸಿಡಿ ಘೋಷಣೆ ಮಾಡಿದ್ದು, ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಆಗಿದೆ. ರಾಜ್ಯದ ರೈತು ಬಜಾರ್ಗಳಲ್ಲಿ ಒಂದು…
ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ.ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.
ಅವಿವಾಹಿತ ಜೋಡಿಯೊಂದು ಮುಂದಿನ ಜೀವನವನ್ನು ಜೊತೆಯಾಗಿ ಕಳೆಯುವ ನಿರ್ಧಾರ ಕೈಗೊಂಡಾಗ ಇಬ್ಬರೂ ಮುಂದಿನ ಜೀವನದ ಸಾಧಕ ಬಾಧಕಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಯಾವ ಸಮಾಜ ತಮ್ಮನ್ನು ಸ್ವೀಕರಿಸುತ್ತದೆ ಎಂಬುದರಿಂದ ಹಿಡಿದು ಇತರ ಸವಾಲುಗಳನ್ನೂ ಎದುರಿಸಬೇಕಾಗುತ್ತದೆ.
ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ…
ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.
ನಮ್ಮ ಗ್ರಾಮೀಣ ಜನರಿಗಾಗಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಪಹಣಿ, ಜಾತಿ ಪ್ರಮಾಣ ಪತ್ರ, ಬೆಳೆ ದೃಢೀಕರಣ ಸೇರಿದಂತೆ ನಾನಾ ಇಲಾಖೆಗಳ ಸುಮಾರು 100 ಕ್ಕಿಂತ ಹೆಚ್ಚು ಸೇವೆಗಳು ‘ಪಂಚಾಯತಿ-100 ಬಾಪೂಜಿ ಸೇವಾ ಕೇಂದ್ರ’ಹೆಸರಿನಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಕೇಂದ್ರಗಳಲ್ಲೇ ಸಿಗಲಿವೆ.