ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.

ನಿಮ್ಮ ನೆಚ್ಚಿನ ಪಾದರಕ್ಷೆ ಯನ್ನು ತೊಡಲು ಹಿಂದೇಟು ಹಾಕುತ್ತಿದ್ದೀರಾ? ಒಡೆದ ಹಿಮ್ಮಡಿಗಳೇ ಇದಕ್ಕೆ ಕಾರಣವೇ? ಇದು ಕಾಣಿಸಬಾರದೆಂದು ಎಷ್ಟೇ ಪ್ರಯತ್ನ ಪಟ್ಟರೂ ಯಾವುದೋ ಸಂದ ರ್ಭದಲ್ಲಿ ಕಾಣಿಸಿಕೊಂಡು ಮುಜುಗರ ಅನುಭವಿಸಿದ್ದೀರಾ?
ಹಿಮ್ಮಡಿಗಳ ಬಿರುಕಿನ ಕಾರಣ ಎದುರಾಗುವ ನೋವಿನಿಂದ ಕೆಲವು ಪಾದ ರಕ್ಷೆಗಳನ್ನು ತೊಡಲೂ ಸಾಧ್ಯವಾಗುತ್ತಿಲ್ಲವೇ? ಬಿರುಕು ಮುಚ್ಚಿಕೊಳ್ಳಲು ಕಾಲುಚೀಲ ಧರಿಸುತ್ತಿದ್ದೀರಾ? ಈ ಬಿರುಕು ಗಳನ್ನು ತುಂಬುವ ವಿಧಾನಗಳೆಲ್ಲವೂ ಕೈ ಕೊಟ್ಟಿವೆಯೇ? ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.

ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಪಾದಗಳು ಇಡಿಯ ಶರೀರದ ಭಾರವನ್ನು ಹೊರಬೇಕಾದುದರಿಂದ ಇಲ್ಲಿಯ ಚರ್ಮ ಅತ್ಯಂತ ದಪ್ಪನಾಗಿರುತ್ತದೆ.
ಅದರಲ್ಲಿಯೂ ಅಂಚುಗಳಲ್ಲಿ ಹೆಚ್ಚು ದಪ್ಪನಾಗಿರುತ್ತದೆ. ಈ ದಪ್ಪನಾದ ಪಡೆ ಜೀವಕೋಶಗಳು ಸತ್ತರೂ ಸುಲಭವಾಗಿ ನಿವಾರಣೆಯಾಗದೇ ಅಂಟಿಕೊಂಡೇ ಇರುತ್ತವೆ.
ಕ್ರಮೇಣ ಇವು ಒಣಗಿ ಸೆಳೆತ ಹೆಚ್ಚಾಗುವ ಕಾರಣ ಚಿಕ್ಕ ಬಿರುಕು ಉಂಟಾಗುತ್ತದೆ. ಒಣಗುವ ಪ್ರಮಾಣ ಹೆಚ್ಚಾದಂತೆ ಬಿರುಕು ಆಳವಾಗುತ್ತಾ ಹೋಗುತ್ತದೆ. ಆದ್ದರಿಂದ ಈ ಭಾಗವನ್ನು ಆಗಾಗ ಉಜ್ಜಿಕೊಂಡು ಈ ಸತ್ತ ಜೀವಕೋಶಗಳನ್ನು ನಿವಾರಿಸುತ್ತಾ ಇರಬೇಕು. ಒಣಚರ್ಮ, ದೇಹದ ಭಾರ ವನ್ನು ಸಮರ್ಪಕವಾಗಿ ಹರಡದ ವಿನ್ಯಾಸದ ಪಾದ ರಕ್ಷೆಗಳು, ಶಿಲೀಂಧ್ರದ ಸೋಂಕು, ಸ್ಥೂಲ ಕಾಯ, ಸ್ವಚ್ಛತೆಯಲ್ಲಿ ಕೊರತೆ ಮೊದಲಾದ ಕಾರಣ ಗಳಿಂದ ಈ ಬಿರುಕುಗಳು ಇನ್ನಷ್ಟು ಆಳಕ್ಕೆ ಇಳಿದು ಜವಾದ ಚರ್ಮವನ್ನು ಹರಿದು ರಕ್ತಬರಿಸಬಹುದು.
ಸಾಮಾನ್ಯವಾಗಿ ಬಿರುಕುಗಳು ಕಾಣಿಸಿಕೊಂಡ ಬಳಿಕವೂ ಇದರಲ್ಲಿ ತಕ್ಷಣಕ್ಕೆ ಯಾವುದೇ ನೋವು ಇರದ ಕಾರಣ ನಾವೆಲ್ಲರೂ ಇದನ್ನು ಅಲಕ್ಷಿಸಿಬಿಡುತ್ತೇವೆ.

ಅಯ್ಯೋ ನಾಳೆ ಸ್ನಾನ ಮಾಡಿಕೊಂಡಾಗ ಉಜ್ಜಿಕೊಂಡರಾಯಿತು ಎಂಬ ಅಸಡ್ಡೆಯಿಂದಲೇ ಹೆಚ್ಚಿನವರಿಗೆ ಈ ತೊಂದರೆ ಉಲ್ಬಣಾವಸ್ಥೆಗೆ ಅಂದರೆ ಸೋರಿಯಾಸಿಸ್ (psoriasis) ಎಂಬ ಸ್ಥಿತಿಗೆ ತಲುಪಲೂ ಕಾರಣವಾಗಬಹುದು.
ಆದ್ದರಿಂದ ಈ ಬಿರುಕುಗಳನ್ನು ಮುಚ್ಚುವತ್ತ ಎಷ್ಟು ಬೇಗನೇ ಮನಸ್ಸು ಮಾಡುತ್ತೀರೋ ಅಷ್ಟೇ ಉತ್ತಮ.

* ಓಟ್ಸ್ ಅಥವಾ ಓಟ್ ಮೀಲ್ – ಎರಡು ದೊಡ್ಡ ಚಮಚ
* ಲಿಂಬೆ ರಸ – ಒಂದು ದೊಡ್ಡ ಚಮಚ
* ಉಪ್ಪು- ಎರಡು ಚಿಕ್ಕ ಚಮಚ
ಈ ಮೂರೂ ಪರಿಕರಗಳು ಸತ್ತ ಜೀವಕೋಶಗಳನ್ನು ಸಡಿಲಗೊಳಿಸಿ ನಿವಾರಿಸುವಲ್ಲಿ ಸಮರ್ಥವಾಗಿವೆ. ಲಿಂಬೆರಸ ಚರ್ಮದ ಜೀವಕೋಶಗಳನ್ನು ತೇವಗೊಳಿಸಿ ಪ್ರತಿ ಜೀವ ಕೋಶವನ್ನು ಬೇರೆ ಬೇರೆ ಯಾಗಿಸಲು ನೆರವಾಗುತ್ತದೆ ಹಾಗೂ ಬಿರುಕುಗಳಲ್ಲಿ ಆಶ್ರಯ ಪಡೆದಿದ್ದ ಕ್ರಿಮಿ, ಧೂಳು, ಕೀಟಾಣುಗಳನ್ನು ನಿವಾರಿಸಲು ನೆರವಾಗುತ್ತದೆ.
ಉಪ್ಪು ಮತ್ತು ಓಟ್ಸ್ ಸಡಿಲವಾದ ಈ ಜೀವಕೋಶ ಗಳನ್ನು ತಮ್ಮೊಂದಿಗೆ ಅಂಟಿಸಿ ಕೊಂಡು ಹೊರ ಹೋಗಲು ನೆರವಾಗುತ್ತವೆ. ಇದರಿಂದ ಬಿರುಕಿನ ಅಕ್ಕಪಕ್ಕದಲ್ಲಿದ್ದ ದಪ್ಪನೆಯ ಚರ್ಮದ ಭಾಗ ನಿಧಾನವಾಗಿ ನಿವಾರಣೆಯಾಗುತ್ತದೆ ಹಾಗೂ ಬಿರುಕಿನ ಆಳ ದಲ್ಲಿ ಹೊಸ ಚರ್ಮ ಬೆಳೆಯಲು ಸಾಧ್ಯವಾಗುತ್ತದೆ. ಕೆಲವೇ ದಿನಗಳಲ್ಲಿ ಈ ಬಿರುಕುಗಳು ಕಾಣದಂತೆ ಮಾಯವಾಗುತ್ತವೆ.

* ಒಂದು ಚಿಕ್ಕ ಬೋಗುಣಿಯಲ್ಲಿ ಎಲ್ಲಾ ಸಾಮಾಗ್ರಿಗಳನ್ನು ಚೆನ್ನಾಗಿ ಮಿಶ್ರಣ ಮಾಡಿ.
* ಒಂದು ಅಗಲವಾದ ಬಕೆಟ್ ಅಥವಾ ಪಾತ್ರೆಯಲ್ಲಿ ಕೊಂಚವೇ ಬಿಸಿ ನೀರಿನಲ್ಲಿ ಕೊಂಚ ಉಪ್ಪು ಹಾಕಿ (ನಿಮ್ಮ ಪಾದಗಳು ಸಹಿಸುವಷ್ಟು) ಹಾಕಿ ಕೊಂಚ ಕಾಲ ಈ ನೀರಿನಲ್ಲಿ ಎರಡೂ ಪಾದಗಳನ್ನು ಮುಳುಗಿಸಿಡಿ.
* ಬಳಿಕ ಪಾದಗಳನ್ನು ನೀರಿನಿಂದ ಹೊರ ತೆಗೆದು ಟವೆಲ್ನಿಂದ ಒರೆಸಿಕೊಳ್ಳಿ.
* ಕಾಲುಗಳ ಕೆಳಗೆ ದಿಂಬೊಂದನ್ನು ಇಟ್ಟು ಪಾದಗಳಿಗೆ ಈ ಲೇಪನವನ್ನು ದಪ್ಪನಾಗಿ ಹಚ್ಚಿ. ಬಿರುಕುಗಳಿರುವಲ್ಲಿ ಕೆಲ ನಿಮಿಷಗಳ ಕಾಲ ಮಸಾಜ್ ಮಾಡಿ.
* ಈ ಲೇಪನವನ್ನು ಸುಮಾರು ಹದಿನೈದು ನಿಮಿಷಗಳ ಕಾಲ ಹಾಗೇ ಬಿಡಿ.
* ಬಳಿಕ ಉಗುರು ಬೆಚ್ಚನೆಯ ನೀರಿನಿಂದ ತೊಳೆದು ಕೊಳ್ಳಿ.
* ನಂತರವೂ ಪಾದಗಳನ್ನು ಸುಮಾರು ಹತ್ತು ನಿಮಿಷಗಳು ಬಿಸಿ ನೀರಿನಲ್ಲಿ ಮುಳುಗಿಸಿಡಿ.
* ಬಳಿಕ ಸ್ಕ್ರಬರ್ ಉಪಯೋಗಿಸಿ ಅಂಚಿನ ಭಾಗಗಳನ್ನು ಕೆರೆದು ತೆಗೆಯಿಸಿ. ಸ್ಕ್ರಬರ್ ಇಲ್ಲದಿದ್ದರೆ ಒರಟಾದ ಕಲ್ಲಿಗೆ ಉಜ್ಜಿಕೊಳ್ಳಲೂಬಹುದು.
* ಒಂದು ವಾರದ ಕಾಲ ಸತತವಾಗಿ ಈ ವಿಧಾನ ಅನುಸರಿಸಿದರೆ ಬಿರುಕುಗಳು ಇಲ್ಲವಾಗುತ್ತವೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ಪೈರಸಿ ಸಿನಿಮಾದ ನೋಡದೇ, ಚಿತ್ರಮಂದಿರಗಳಿಗೆ ಹೋಗಿ ಚಿತ್ರ ವೀಕ್ಷಣೆ ಮಾಡಿರುವ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನಮ್ಮ ಹಾರ್ಡ್ ವರ್ಕ್ ಪರಿಗಣಿಸಿ ಸಿನಿಮಾವನ್ನು ಥಿಯೇಟರ್ ಗಳಲ್ಲಿ ವೀಕ್ಷಣೆ ಮಾಡಿರೋದು ನಿಮ್ಮ ಪ್ರಾಮಾಣಿಕತೆಯನ್ನು ತೋರಿಸುತ್ತದೆ. ನಮ್ಮ ಸಿನಿಮಾಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಶುಕ್ರವಾರ ರಾತ್ರಿ ಚಿತ್ರದ ಪೈರಸಿ ಬಗ್ಗೆ ಖಡಕ್ ಟ್ವೀಟ್ ಮಾಡಿದ್ದ ಸುದೀಪ್, ನಾನು ಹಾಗೂ ನನ್ನ ಸ್ನೇಹಿತರು ಕೈಗೆ ಹಾಕಿರುವುದು ಕಡಗ, ಬಳೆ…
ನಾವೆಲ್ಲರೂ ರಸ್ತೆಯಲ್ಲಿ ಹೋಗುವಾಗ ಕಿಲೋಮೀಟರ್ ಸೂಚಕಗಳನ್ನು ಕಾಣುವುದು ಸಾಮಾನ್ಯ. ಈ ಮೈಲಿಗಲ್ಲುಗಳನ್ನು ಕೇವಲ ಕಿಲೋಮೀಟರ್ ಬಗ್ಗೆ ಅರಿತುಕೊಳ್ಳಲು ಮಾತ್ರ ಉಪಯೋಗಿಸುತ್ತೇವೆ ಎನ್ನವುದು ಸತ್ಯ ಸಂಗತಿ.
ಪೊಲೀಸರು ಕಳ್ಳರ ಬಾಯಿ ಬಿಡಿಸಲು ಲಾಠಿಯಲ್ಲಿ ಹೊಡೆಯುತ್ತಾರೆ, ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ (ಅಮಾನವೀಯ ಚಿತ್ರಹಿಂಸೆ) ಅನ್ನು ಪ್ರಯೋಗಿಸುತ್ತಾರೆ. ಅಥವಾ ಬೇರೆ ಬೇರೆ ರೀತಿಯಲ್ಲಿ ಪ್ರಯತ್ನ ಮಾಡುತ್ತಾರೆ.ಆದರೆ ಇಂಡೋನೇಷ್ಯಾ ಪೊಲೀಸರು ದೇಹದ ಮೇಲೆ ಹಾವನ್ನು ಬಿಟ್ಟು ಬಾಯಿ ಬಿಡಿಸಿದ್ದಾರೆ. ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿ ಮೊಬೈಲ್ ಕದ್ದ ಆರೋಪದ ಮೇಲೆ ಒಬ್ಬನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಾರೆ. ಆಗ ಆತ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ. ಕೊನೆಗೆ ಪೊಲೀಸರು ಆತನ ಕೈಗಳನ್ನು ಕಟ್ಟಿ ಹಾಕಿ ಕುತ್ತಿಗೆಯ ಸುತ್ತ ಹಾವನ್ನು ಬಿಟ್ಟಿದ್ದಾರೆ….
ರಾತ್ರಿ ಮಾಡಿದ ಅನ್ನ ಹಾಗೆಯೇ ಉಳಿದು ಬಿಟ್ಟದೆ, ಸುಮ್ಮನೆ ವ್ಯರ್ಥ ಆಯಿತು ಎಂದು ಚಿಂತಿಸಬೇಡಿ. ಉಳಿದ ಅನ್ನದಲ್ಲಿ ನಿಮ್ಮ ಆರೋಗ್ಯಕ್ಕೆ ಉತ್ತಮವಾದ ಕೆಲವು ಅಂಶಗಳಿವೆ. ಇಲ್ಲಿದೆ ನೋಡಿ ಉಳಿದ ಅನ್ನದಲ್ಲಿನ ನಿಮ್ಮ ಆರೋಗ್ಯದ ಗುಟ್ಟು. ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ. ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ…
ಕೊರೆಯುವ, ಥರಗುಟ್ಟುವ ಚಳಿಯಲ್ಲಿ ಕೆಲವರು ಪ್ರತಿದಿನ ಸ್ನಾನ ಮಾಡಲು ಇಷ್ಟ ಪಡುವುದಿಲ್ಲ. ಅನೇಕರು ಪ್ರತಿದಿನ ಸ್ನಾನ ಮಾಡ್ತಾರೆ. ಪ್ರತಿದಿನ ಸ್ನಾನ ಮಾಡೋರು ಬೆಸ್ಟ್ ಅಂತಾ ನೀವು ಹೇಳಬಹುದು. ಆದ್ರೆ ಸಂಶೋಧನೆಯೊಂದು ನಿಮಗೆ ಆಶ್ಚರ್ಯವಾಗುವಂತಹ ಸಂಗತಿ ಹೇಳಿದೆ. ಪ್ರತಿದಿನ ಸ್ನಾನ ಮಾಡೋರು ಗಮನ ಇಟ್ಟು ಓದಿ. ಪ್ರತಿದಿನ ಸ್ನಾನ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲವಂತೆ. ಹಾಗೆ ಮಾಡುವವರು ಹೆಚ್ಚಿನ ಬಾರಿ ಅನಾರೋಗ್ಯಕ್ಕೆ ತುತ್ತಾಗ್ತಾರಂತೆ. ಯಸ್, ಸಂಶೋಧನೆಯೊಂದು ಈ ವಿಷಯವನ್ನು ಹೇಳಿದೆ. ನಮ್ಮ ದೇಹಕ್ಕೆ ಎಣ್ಣೆಯ ಅವಶ್ಯಕತೆ ಇದೆ. ದೇಹದಲ್ಲಿರುವ ತೈಲದ ಅಂಶ…
ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಕೂಡಾ ಸಾಹಸ ನಿರ್ದೇಶನ ಮಾಡಿ, ಸಿನಿಮಾ ರಂಗದಲ್ಲಿ ತನ್ನದೇ ಆದಂತಹ ಹೆಸರು, ಖ್ಯಾತಿ ಮತ್ತು ಸ್ಥಾನವನ್ನು ಪಡೆದಿರುವ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು. ದಶಕಗಳಿಂದ ಚಿತ್ರರಂಗದಲ್ಲಿ ಸಾಹಸ ನಿರ್ದೇಶನ ಮಾಡಿರುವ ಅವರು ನಟ ಹಾಗೂ ನಿರ್ದೇಶಕನಾಗಿ ಕೂಡಾ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ರಂಗದ ಈ ಸಾಧನೆ, ಅವರ ಶ್ರಮ ಹಾಗೂ ಪರಿಶ್ರಮಕ್ಕೆ ತಕ್ಕ ಫಲವಾಗಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸತ್ಕರಿಸಲಾಗಿದೆ. ಥ್ರಿಲ್ಲರ್ ಮಂಜು ಅವರಿಗೆ ಸಂದಿರುವ…