ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆವೆರೆಂಡ್ ಎಫ್. ಕಿಟ್ಟೆಲ್ ರ ಕನ್ನಡ– ಇಂಗ್ಲೀಷ್ ನಿಘಂಟಿನಷ್ಟು ಅಪೂರ್ವವಾದದ್ದು ಕನ್ನಡದಲ್ಲಿ ಇನ್ನೊಂದಿಲ್ಲ. ಅದರ ಗಾತ್ರ, ಘನತೆ, ಸಂಗ್ರಹ, ಪದ್ಧತಿಗಳು ಅನನ್ಯವಾದವುಗಳು. ಅದರ ಪ್ರಕಟಣೆ ನೂರುವರ್ಷದ ಮೇಲಾದಾಗ್ಯೂ ಇಂದಿನ ಸಂದರ್ಭದಲ್ಲೂ ಕಿಟೆಲ್ ರು ಕನ್ನಡ ಸಾರಸ್ವತಕ್ಕೆ ಸಲ್ಲಿಸಿದ ಅಮೋಘ ಸೇವೆಯ ಸ್ಮರಣೆ ಮಾಡುವುದು ಔಚಿತ್ಯಪೂರ್ಣವಾಗಿದೆ.

ಅವರು ಕ್ರೈಸ್ತ ಮತ ಪ್ರಚಾರಕ್ಕಾಗಿಯೇ ೧೮೫೩ ರಲ್ಲಿ ಬಾರತಕ್ಕೆ ಬಂದವರು. ಮೊದಲು ಧಾರವಾಡ, ಮಂಗಳೂರು, ಹುಬ್ಬಳ್ಳಿ ಯಲ್ಲಿ ಮತಪ್ರಚಾರದ ಕಾರ್ಯ ನಡೆಸಿದರು. ಭಾಷಾ ಪ್ರಚಾರಕ್ಕೆ ಮುಖ್ಯವಾದದ್ದು ಅಲ್ಲಿನ ದೇಸಿ ಭಾಷೆ. ಅದಕ್ಕಾಗಿ ಅವರು ಎಲ್ಲಕ್ಕಿಂತ ಮೊದಲೇ ಕನ್ನಡಭಾಷೆಯನ್ನು ಕಲಿತರು. ಧರ್ಮಪ್ರಚಾರವನ್ನು ಸ್ವಲ್ಪ ಕಾಲ ಬದಿಗಿಟ್ಟು ದೇಸಿ ಭಾಷೆ, ಸಾಹಿತ್ಯ, ಸಂಸ್ಕೃತಿ ಇತ್ಯಾದಿಗಳನ್ನು ಕಲಿತಿದ್ದಲ್ಲದೆ ಅದರಲ್ಲಿ ಪ್ರಾವೀಣ್ಯತೆಯನ್ನೂ ಪಡೆದರೆಂಬುದು ಇಲ್ಲಿ ನಾವು ಗಮನಿಸಬೇಕಾದ ಸಂಗತಿ.

ಕಿಟ್ಟೆಲ್ ರು ಜರ್ಮನಿಯ ‘ಹ್ಯಾನ್ ವರ್ ‘ನಲ್ಲಿ ೧೮೩೨ ನೆಯ ಏಪ್ರಿಲ್ ೭ ರಂದು ಜನಿಸಿದರು. ಅವರ ಫಾಸ್ಟರ್ ತಂದೆಯೂ ಮತಪ್ರಚಾರ ಮಾಡುತ್ತಿದ್ದರು. ಹೀಗೆ ತಮ್ಮ ಚಿಕ್ಕಂದಿನಲ್ಲೇ ಅವರು ಮತಪ್ರಚಾರವನ್ನು ಸ್ವೀಕರಿಸಲೇಬೇಕಾಯಿತು. ಕಿಟ್ಟಲ್ ಮಂಗಳೂರಿನ ‘ಪಾಲೆನಿತ್” ಎಂಬ ಹುಡುಗಿಯೊಡನೆ ೧೮೬೦ ರಲ್ಲಿ ವಿವಾಹವಾದರು.
ಕನ್ನಡ ಸಾಹಿತ್ಯಕ್ಕೆ ಅವರ ಸೇವೆ ಅಪಾರ :–
ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.

ಅವರ ಕನ್ನಡ ಭಾಷಾ ಪ್ರೇಮ ಶ್ಲಾಘನೀಯವಾದದ್ದು. ‘ಶಬ್ದ ಮಣಿ ದರ್ಪಣ’ ಎಂಬ, ಗ್ರಂಥವನ್ನು (೯ ಹಸ್ತಪ್ರತಿಗಳ ಆಧಾರದಿಂದ) ಶಾಸ್ತ್ರೀಯವಾಗಿ ಸಂಪಾ ದಿಸಿದ್ದಾರೆ. ಅದರ ಪ್ರಸ್ತಾವನೆ, ಟಿಪ್ಪಣಿಗಳು ವಿದ್ವಾಂಸರನ್ನು ಇಂದಿಗೂ ಕಾಡಿವೆ. ೧೫ ಹಸ್ತಪ್ರತಿಗಳ ಆಧಾರದಿಂದ ‘ಛಂದೋಂಬುಧಿ’ ಎಂಬ ನಾಗವರ್ಮನ ಕಾವ್ಯವನ್ನು ಸಂಪಾದಿಸಿ, ವಿಸ್ತಾರವಾದ ಪೀಠಿಕಾ ಟಿಪ್ಪಣಿಯನ್ನು ತಯಾರಿಸಿದ್ದಾರೆ. ‘ ಶಬ್ದಮಣಿದರ್ಶನ’ ವನ್ನು ಮೂಲವಾಗಿಟ್ಟುಕೊಂಡು ಭಾಷಾಶಾಸ್ತ್ರಕ್ಕೆ ಸಹಾಯಮಾಡುವಂತಹ ರಚನೆ.

೧೯೦೩ ರಲ್ಲಿ, ರೆವರೆಂಡ್ ಎಫ್.ಕಿಟೆಲ್ ತಮ್ಮ ತಾಯ್ನಾಡಿನಲ್ಲೆ ದೈವಾಧೀನರಾದರು. ೨೦೦೩ ರಲ್ಲಿ ಅವರ ಮರಣಶತಮಾನೋತ್ಸವ ದಿನವನ್ನು ಜರ್ಮನಿ ಮತ್ತು ಕರ್ನಾಟಕದಲ್ಲಿ ಆಚರಿಸಲಾಯಿತು. ಕಿಟೆಲ್ಲರ ಕನ್ನಡ ಭಾಷೆಯ ಪ್ರೇಮ ಮತ್ತು ಅದನ್ನು ಕಾರ್ಯಗತಗೊಳಿಸಲು ಜೀವನವಿಡೀ ತಮ್ಮ ಅಮೂಲ್ಯ ಸಮಯವನ್ನು ಮುಡಿಪಾಗಿಟ್ಟರು.

ಬೆಂಗಳೂರಿನ ಆಸ್ಟಿನ್ ಟೌನ್ ಪ್ರದೇಶವನ್ನು “ರೆವರೆಂಡ್ ಕಿಟೆಲ್ ನಗರ” ವೆಂದು ಹೊಸದಾಗಿ ನಾಮಕರಣ ಮಾಡಲಾಗಿದೆ. ಈ ಮಹಾನುಭಾವರ ನೆನಪಿಗಾಗಿ ಧಾರವಾಡದಲ್ಲಿ ಕಿಟೆಲ್ ಕಾಲೇಜು ಸ್ಥಾಪನೆಯಾಗಿದೆ. ‘ಇವು ಕರ್ನಾಟಕದ ಜನತೆ, ಕಿಟೆಲ್ ರವರ ಜ್ಞಾಪಕಾರ್ಥವಾಗಿ ಅರ್ಪಿಸಿದ ಅನುಪಮ ಶ್ರದ್ಧಾಂಜಲಿಗಳು’.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ರಿಯಾಲಿಟಿ ಶೋ ಫಿನಾಲೆಗೆ ಒಂದೇ ವಾರ ಉಳಿದಿದೆ. ಈ ವಾರ ಪ್ರಿಯಾಂಕಾ ಬಿಗ್ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಪ್ರಿಯಾಂಕಾ ಬಿಗ್ಬಾಸ್ ಮನೆಗೆ ಎಂಟ್ರಿ ಪಡೆದ ದಿನ ಮತ್ತು ಹೊರ ಬಂದ ದಿನಕ್ಕಿರುವ ಸಾಮ್ಯತೆಯನ್ನು ಹೇಳಿ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ಮನೆಯಿಂದ ಹೊರ ಬಂದು ನಟ ಸುದೀಪ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಮಗಳು ವೇದಿಕೆಯತ್ತ ಬರುತ್ತಿದ್ದಂತೆ ಪ್ರಿಯಾಂಕಾರ ತಾಯಿ ಕಣ್ಣೀರು ಹಾಕಲಾರಂಭಿಸಿದರು. ಈ ವೇಳೆ ಸುದೀಪ್, ಮಗಳು ಮನೆಯಿಂದ ಹೊರ ಬಂದಿದ್ದಕ್ಕೆ…
ವಯಸ್ಸಿಗೆ ಸಭಂದಪಟ್ಟ ವಿಷಯ ಬಂದಾಗ ಯಾರನ್ನಾದರೂ ನೋಡಿದ್ರೆ, ಅಂದಾಜು ಅವರ ವಯಸ್ಸನ್ನು ಗುರುತಿಸುವುದು ಕಷ್ಟದ ಕೆಲಸವೇನಲ್ಲ. ಆದ್ರೆ ಕೆಲವೊಬ್ಬರನ್ನು ನೋಡಿದಾಗ ಅದು ಕಷ್ಟ ಸಾಧ್ಯವೆನಿಸಬಹುದು. ಅಂತವರೇ ಆದ ಒಬ್ಬರ ಬಗ್ಗೆ ನಾವು ಹೇಳುತ್ತಿದ್ದೇವೆ.
‘ಬಿಗ್ ಬಾಸ್ ಕನ್ನಡ ಸೀಸನ್ 7’ ಆರಂಭವಾಗಿ ಐದು ವಾರಗಳು ಕಳೆದಿವೆ.ನಾಲ್ಕು ಸ್ಫರ್ಧಿಗಳು ಎಲಿಮಿನೇಶನ್ನಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಅವರಲ್ಲಿ ಗುರುಲಿಂಗ ಸ್ವಾಮೀಜಿ,ಚೈತ್ರಾ ವಾಸುದೇವನ್, ದುನಿಯಾ ರಶ್ಮಿ, ಚೈತ್ರಾಕೋಟೂರ್. ಕಳೆದ ವಾರ ಚೈತ್ರಾಕೋಟೂರ್ ಬಿಗ್ ಮನೆಯಿಂದ ಹೊರಬಂದುಶಾಕ್ ಕೊಟ್ಟಿದ್ದರು. ಈ ವಾರ ಯಾರು ಬಿಗ್ ಮನೆಯಿಂದ ಹೊರಬರುತ್ತಾರೆ. 5ನೇವಾರ ಬಿಗ್ ಮನೆಯಿಂದ ಹೊರ ಬರುವವರಾರು : ಮೂಲಗಳ ಪ್ರಕಾರ ಈ ಬಾರಿ ಜೈ ಜಗದೀಶ್ ಬಿಗ್ ಮನೆಯಿಂದ ಹೊರಬರಲಿದ್ದಾರೆ. ಆಮನೆಯಲ್ಲಿ ಜೈಜಗದೀಶ್ ಎಲ್ಲರ ಜೊತೆ ಬೆರೆತು ತಮ್ಮಕೈಲಾದಷ್ಟು ಟಾಸ್ಕ್ಗಳಲ್ಲಿ ಪಾಲ್ಗೊಂಡು…
ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ….
ಬಾರ್ಲಿ ನೀರು ದೇಹಕ್ಕೆ ಉತ್ತಮ. ಡಿಹೈಡ್ರೇಷನ್ ಉಂಟಾದಾಗ ಬಾರ್ಲಿ ನೀರು ಕುಡಿದರೆ ಇನ್ನೂ ಒಳ್ಳೆಯದು. ಅಷ್ಟೇ ಅಲ್ಲ, ಇದರಿಂದ ಇನ್ನು ಏನೇನೆಲ್ಲಾ ಲಾಭಗಳಿವೆ ನೋಡಿ. * ಬಾರ್ಲಿಯಲ್ಲಿರುವ ಬೀಟಾ ಗ್ಲೂಕೋನ್ ಅಂಶ ದೇಹದೊಳಗಿನ ವಿಷಾಂಶ ಹೊರಹಾಕಲು ನೆರವಾಗುತ್ತದೆ. * ಮೂತ್ರದ ಸೋಂಕು ಹೋಗುವವರೆಗೂ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಬಾರ್ಲಿ ನೀರು ಕುಡಿಯುವುದು ಒಳ್ಳೆಯದು. * ಅಜೀರ್ಣ, ಗ್ಯಾಸ್ಟ್ರಿಕ್ ಹಾಗೂ ಉಷ್ಣದಿಂದ ಆಗುವ ಸಮಸ್ಯೆಗಳಿಗೆ ಬಾರ್ಲಿ ನೀರು ಒಳ್ಳೆಯದು. * ಮಲಬದ್ಧತೆ, ಬೇಧಿ ಮುಂತಾದ ಸಮಸ್ಯೆ ಇದ್ದರೂ ಬಾರ್ಲಿ…
ಇದು ಒಂದೆಡೆ ಕೆಐಡಿಬಿ ಹುಚ್ಚಾಟಕ್ಕೆ ಹಿಡಿದ ಕೈಗನ್ನಡಿಯಾದರೆ ಮತ್ತೊಂದೆಡೆ ಇದು ಮನಬಂದಂತೆ ಭೂಮಿ ಕೊಟ್ಟವರು ಈಗ ಕೈ ಕೈ ಹಿಸುಕಿಕೊಳ್ಳುವಂತ ಪರಿಸ್ಥಿತಿ.
ನಂಜನಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಒಂದು ಕಾಲದಲ್ಲಿ ಜಮೀನ್ದಾರರೆನಿಸಿಕೊಂಡವರಿಗೆ ಇಂದು ತಮ್ಮ ಕುಟುಂಬದವರ ಶವಸಂಸ್ಕಾರ ಮಾಡಲು ಯೋಚಿಸಬೇಕಾದ ದುರ್ಗತಿ ಒದಗಿಬಂದಿದೆ.