inspirational

ಹೃದಯಾಘಾತ ( Heart attack ) ತಪ್ಪಿಸಲು ಇಲ್ಲಿವೆ ಸಿಂಪಲ್ ಟಿಪ್ಸ್

114
Heart attack

ಚಳಿಗೂ ಹಾರ್ಟ್ ಅಟ್ಯಾಕ್‌ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆ
ಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್‌ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ.

ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ ಹೆಚ್ಚಿನ ಪ್ರಮಾಣದ ಸಿಂಥೇಜಿಕ್ ಡಿಸ್ಟಾರ್ಜ್ ಅಂದರೆ ಅಡ್ರಿನಾಲಿನ್ ಪಂಪಿಂಗ್ ಅಧಿಕವಿರುತ್ತದೆ. ಇದರಿಂದಾಗಿ ಹೃದಯದ ಮೇಲೆ ಹೆಚ್ಚಿನ ಒತ್ತಡ ಉಂಟಾಗಿ ಅದು ಹೆಚ್ಚು ಕಠಿಣವಾಗಿ ಕೆಲಸದಲ್ಲಿ ತೊಡಗುವಂತಾಗುತ್ತದೆ. ಹೃದಯಾಘಾತ ಸಂಭವಿಸುವ ಸಾಧ್ಯತೆಯುಳ್ಳ ಅಥವಾ ಈಗಾಗಲೇ ಹೃದಯ ಸಂಬಂಧಿ ತೊಂದರೆಗಳಿಂದ ಬಳಲುತ್ತಿರುವವರಲ್ಲಿ ಹೃದಯಾಘಾತದ ಪ್ರಮಾಣ ಇನ್ನೂ ಹೆಚ್ಚು. 

ಅಲ್ಲದೆ, ಚಳಿಗಾಲದಲ್ಲಿ ಸಂಭವಿಸುವ ಹೃದಯಾಘಾತ ಹೆಚ್ಚು ಗಂಭೀರ ಸ್ವರೂಪದ್ದಾಗಿರುತ್ತದೆ. ಚಳಿಗಾಲದಲ್ಲಿ ಕೊಬ್ಬರಿ ಎಣ್ಣೆ ಗಟ್ಟಿಯಾಗುವುದನ್ನು ಗಮನಿಸಿದ್ದೀರಿ. ರಕ್ತದ ಚಲನೆ ಕಡಿಮೆಯಾಗಿ ಕೊಬ್ಬು ಅಧಿಕವಿದ್ದರೆ ಇಂಥ ಅಪಾಯ ದೇಹದೊಳಗೂ ಸಂಭವಿಸೀತು!

Heart problems

ಹೃದಯದ ಹೊರಗೆ ಗೋಡೆಗಳಲ್ಲಿ ಸೂಕ್ಷ್ಮತಿಸೂಕ್ಷ್ಮ ಕಿರುನಾಳಗಳಲ್ಲಿ ರಕ್ತ ಪ್ರವಾಹ ನಿರಂತರವಾಗಿರಬೇಕು. ಆದರೆ, ಚಳಿಯ ದಿನಗಳಲ್ಲಿ ಇದು ಸಾಧ್ಯವಾಗದೆ ಹೋಗಬಹುದು. ಕಿರುನಾಳಗಳ ಒಳಪದರ ಕಿರಿದಾಗಿದ್ದರೆ, ಕೊಬ್ಬಿನ ಕರಣೆ ಕಟ್ಟಿದರಂತೂ ಸಂಚಾರ ಕಠಿಣ. ಆಗಲೂ ಹೃದಯಾಘಾತ ಕಟ್ಟಿಟ್ಟ ಬುತ್ತಿ. ರೋಗಿಗೆ ಶೇ.30 ಮಾರ್ಗ ಕಿರಿದಾಗಿದೆ ಎಂದರೆ, ಅದು ಉಳಿದ ದಿನಗಳಂತಲ್ಲ. ಚಳಿಯಲ್ಲಿ ಅದು ಶೇ.70ಕ್ಕೆ ಸಮ!

ಹೃದಯಾಘಾತ ಸಂಭವಿಸಿದ ಕ್ಷಣಗಳಲ್ಲಿ ಹೃದಯ ಬಡಿತದ ಮೇಲೆ ವಾತಾವರಣದಲ್ಲಿ ಆಗುವ ಏರುಪೇರುಗಳೂ ಪ್ರಭಾವ ಬೀರುತ್ತವೆ. ‘ಡಿ’ ಜೀವಸತ್ವದ ಕೊರತೆಯೂ ಹಾರ್ಟ್ ಅಟ್ಯಾಕ್‌ಗೆ ಕಾರಣ ಆಗಬಹುದು. ಸೂರ್ಯನ ಕಿರಣ ‘ಡಿ’ ಜೀವಸತ್ವದ ಆಕರ. ಚಳಿಗಾಲದಲ್ಲಿ ಮನೆಯೊಳಗೇ ಇದ್ದರೆ, ದೇಹದಲ್ಲಿ ವಿಟಮಿನ್ ‘ಡಿ’ ಉತ್ಪಾದನೆ ಕಡಿಮೆಯಾಗುತ್ತದೆ. ವೈದ್ಯವಿಜ್ಞಾನದ ಸಂಶೋಧನೆಗಳ ಪ್ರಕಾರ, ಎತ್ತರ ಪ್ರದೇಶಗಳ ಜನರಿಗೆ ಹೃದಯಾಘಾತದ ರಿಸ್ಕ್ ಕಡಿಮೆಯಂತೆ. 

ಏಕೆಂದರೆ ಎತ್ತರಕ್ಕೆ ಹೋದಂತೆ ಸೂರ್ಯನ ಕಿರಣಗಳಲ್ಲಿನ ಅಲ್ಟ್ರಾವೈಲೆಟ್ ಪ್ರಮಾಣ ಹೆಚ್ಚಿ, ವಿಟಮಿನ್ ‘ಡಿ’ ಉತ್ಪಾದನೆ ಪ್ರಮಾಣವೂ ಅಧಿಕವಾಗುತ್ತದೆ. ಈ ಕಾರಣದಿಂದಲೇ ರಕ್ತದೊತ್ತಡ ಇಲ್ಲದ, ಕೊಲೆಸ್ಟೆರಾಲ್ ಕಡಿಮೆ ಇರುವ ಕೆಳ ಪ್ರದೇಶದ ಜನರಲ್ಲೂ ಹೃದಯಾಘಾತದ ಪ್ರಮಾಣ ಅಧಿಕವಿರುತ್ತದೆ!

ಚಳಿಗಾಲದಲ್ಲಿ ಎಲ್ಲರೂ ಆಲಸಿಗಳೇ.
ಮಧುಮೇಹ ರೋಗವು ಈ ಕಾಲದಲ್ಲಿ ಉಲ್ಬಣಿಸುತ್ತದೆ. ಸ್ಥೂಲ ಕಾಯಗಳನ್ನು ಕಂಡರೆ ಹೃದಯಾಘಾತಕ್ಕೆ ಎಲ್ಲಿಲ್ಲದ ಪ್ರೀತಿ! ಚಳಿಗಾಲದಲ್ಲಿ ಸಾಮಾನ್ಯವಾಗಿ ಹಸಿವು ಹೆಚ್ಚಾಗುತ್ತದೆ. ವೈರಸ್‌ಗಳು ಹೆಚ್ಚು ಕ್ರಿಯಾಶೀಲಗೊಳ್ಳುವುದೂ ಇದೇ ವೇಳೆಯೇ. ಚಳಿಯಲ್ಲಿ ಕುರುಕಲು ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುವುದರಿಂದ ಇದೂ ಹೃದಯದ ಆರೋಗ್ಯಕ್ಕೆ ಮಾರಕ ಆಗಬಹುದು.

ಹೃದಯಾಘಾತ

ಆಘಾತ ತಪ್ಪಿಸಲು ಇಷ್ಟು ಮಾಡಿ
– ತೀರಾ ನಸುಕಿನಲ್ಲಿ ವಾಕಿಂಗ್‌ಗೆ ಹೋಗಬೇಡಿ. ಹಾಗೆಂದು ಸುಮ್ಮನೆ ಹೊದ್ದು ಮಲಗ್ಬೇಡಿ.
– ಚಳಿಗಾಲದಲ್ಲಿ ಹೆಚ್ಚು ಆ್ಯಕ್ಟಿವ್ ಇರಿ.
– ಬೆಚ್ಚಗಿನ ಬಟ್ಟೆ ಧರಿಸಿ.
– ಬಿಪಿ, ಶುಗರ್ ಕಂಟ್ರೋಲ್‌ನಲ್ಲಿರಲಿ.
– ಶ್ವಾಸಕೋಶದ ಸಮಸ್ಯೆ ಕಂಡು ಬಂದಲ್ಲಿ, ಸೂಕ್ತ ಚಿಕಿತ್ಸೆ ಪಡೆಯಿರಿ..
– ಉಸಿರಾಟದ ಸಮಸ್ಯೆ ಕಂಡು ಬಂದಲ್ಲಿ, ತಕ್ಷಣವೇ ವೈದ್ಯರನ್ನು ಭೇಟಿಯಾಗಿ.
– ಲಘು ಆಹಾರ ಸೇವಿಸಿ. ಕೊಬ್ಬು ಹೆಚ್ಚಿರುವ, ಮದ್ಯ, ಧೂಮಪಾನ ವರ್ಜಿಸಿ. 
– ಕೋಣೆಯೊಳಗೆ ತಣ್ಣನೆ ಗಾಳಿ ಸುಳಿಯದಂತೆ ಎಚ್ಚರ ವಹಿಸಿ. 

Published by

Mayoon N / Biotechnologist / Director of DRM Career Build Center, Kolar

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಇಂದು 8 ಮಂದಿ ನೂತನ ಸಚಿವರ ಪ್ರಮಾಣವಚನ!ಈ ಪಟ್ಟಿಯಲ್ಲಿ ನಿಮ್ಮ ಕ್ಷೇತ್ರದ ಶಾಸಕರು ಇದ್ದಾರಯೇ ನೋಡಿ…

    ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…

  • ಸುದ್ದಿ

    ಖ್ಯಾತ ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮಾಡಿದ್ದೇನು ಗೊತ್ತಾ..?

    ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮದುವೆಯಾಗುವಂತೆ ಒತ್ತಾಯಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ. ನಟಿ ರಿತಿಕಾ ತಮ್ಮ ತಂದೆ ಜೊತೆ ಚೆನ್ನೈನ ವಡಪಳನಿಯಲ್ಲಿರುವ ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದರು. ಈ ವೇಳೆ ಅವರಿದ್ದ ಅಪಾರ್ಟ್‍ಮೆಂಟ್‍ಗೆ ಬಂದು ಎಂಜಿನಿಯರಿಂಗ್ ವಿದ್ಯಾರ್ಥಿ ಭರತ್‍ ಬಾಗಿಲು ತಟ್ಟಿದ್ದಾನೆ. ರಿತಿಕಾ ಅವರ ತಂದೆ ಬಾಗಿಲು ತೆರೆದ ತಕ್ಷಣ ಮನೆಯೊಳಗೆ ನುಗ್ಗಿ, ರಿತಿಕಾರನ್ನು ತನಗೆ ಕೊಟ್ಟು ಮದುವೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾನೆ. ಯುವಕನ ಮಾತು ಕೇಳಿ ರಿತಿಕಾ ತಂದೆಗೆ ಶಾಕ್ ಆಗಿದೆ. ಬಳಿಕ ಇಬ್ಬರ ನಡುವೆ…

  • ಸುದ್ದಿ

    ಮೋದಿ ಹುಟ್ಟುಹಬ್ಬಕ್ಕೆ ಜೆಡಿಎಸ್ ಶಾಸಕರಿಂದ ವಿಶೇಷ ಪೂಜೆ….!

    ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂತೆಯೇ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಮೊದಲಾದವರು ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಂಡಿದ್ದು, ಈ ಪೂಜೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಭಾಗಿಯಾಗಿದ್ದಾರೆ. ಬಿಜೆಪಿ ನಾಯಕರೊಂದಿಗೆ ವಿಶೇಷ ಪೂಜೆ ನೆರವೇರಿಸಿದ ಮಾಜಿ ಸಚಿವ ಜಿ.ಟಿ. ದೇವೇಗೌಡ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಜೆಡಿಎಸ್ ನಾಯಕರನ್ನು ಟೀಕಿಸುತ್ತಲೇ ಬಿಜೆಪಿ ಹತ್ತಿರವಾಗುತ್ತಿದ್ದಾರೆ. ರಾಜಕೀಯ…

  • ಜ್ಯೋತಿಷ್ಯ

    ದುರ್ಗಾ ಮಾತೆಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಸುದ್ದಿ

    ಕೆಲವೇ ನಿಮಿಶಗಳಲ್ಲಿ ಪಾಕಿಸ್ತಾನದಲ್ಲಿನ 300 ಉಗ್ರರನ್ನು ಉಡೀಸ್ ಮಾಡಿದ ಭಾರತೀಯ ವಾಯುಸೇನೆ

    ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, 21 ನಿಮಿಷದಲ್ಲಿ ಮೂರು ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್‍ಗಾಗಿ ಮಿರಾಜ್-2000 ಹೆಸರಿನ 12 ಜೆಟ್ (ಐಎಎಫ್)ಗಳನ್ನು ಬಳಸಿಕೊಳ್ಳಲಾಗಿದೆ. ಉಗ್ರರ…

  • ವಿಜ್ಞಾನ

    ಕೊನೆಗೂ ಚಂದ್ರನ ಮೇಲೆ ಇಳಿದ ವಿಕ್ರಮ್ ಲ್ಯಾಂಡರ್, ರೋಚಕ ಮಾಹಿತಿ ಬಹಿರಂಗ,.!

    ಭಾರತದ ಮಹಾತ್ವಾಕಾಂಕ್ಷೆ ಯೋಜನೆಯಾಗಿರುವ ಚಂದ್ರಯಾನ-2 ಅನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ISRO ವಿಜ್ಞಾನಿಗಳು ಆಹೋರಾತ್ರಿ ಪ್ರಯತ್ನಪಡುತ್ತಿದ್ದಾರೆ. ಕಳೆದ ಸೆ.7ರಂದುಸಂಪರ್ಕ ಕಡಿದುಕೊಂಡಿರುವ ವಿಕ್ರಮ್ ಲ್ಯಾಂಡರ್ ಈಗಚಂದ್ರನ ಮೇಲೆ ಲ್ಯಾಂಡ್ ಆಗಿದೆ.ವಿಕ್ರಮ್ ಲ್ಯಾಂಡರ್ ವಾಲಿದ ಸ್ಥಿತಿಯಲ್ಲಿದೆ ಎಂದುತಿಳಿದುಬಂದಿದೆ. ಆದರೆ ಸಂಪರ್ಕ ಇನ್ನೂಸಾಧ್ಯವಾಗಿಲ್ಲ. ನಾವಿನ್ನೂ ಭರವಸೆ ಕಳೆದುಕೊಂಡಿಲ್ಲ ಎಂದುವಿಜ್ಞಾನಿಗಳು ಹೇಳಿದ್ದಾರೆ. ಭೂಮಿಯ ಜತೆ ಸಂಪರ್ಕ ಕಳೆದುಕೊಂಡು ಚಂದ್ರನ ಮೇಲೆ ಅಪ್ಪಳಿಸಿರುವ ಚಂದ್ರಯಾನ-2 ನೌಕೆಯ ‘ಲ್ಯಾಂಡರ್‌’ ಛಿದ್ರವಾಗಿಲ್ಲ. ಆದರೆ ವಾಲಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಲ್ಯಾಂಡರ್‌ ಜತೆ ಸಂಪರ್ಕವನ್ನು ಮರುಸ್ಥಾಪಿಸಲು ಭಾರತೀಯ ಬಾಹ್ಯಾಕಾಶ…