ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಚಳಿಗೂ ಹಾರ್ಟ್ ಅಟ್ಯಾಕ್ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆ
ಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ.
ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ ಹೆಚ್ಚಿನ ಪ್ರಮಾಣದ ಸಿಂಥೇಜಿಕ್ ಡಿಸ್ಟಾರ್ಜ್ ಅಂದರೆ ಅಡ್ರಿನಾಲಿನ್ ಪಂಪಿಂಗ್ ಅಧಿಕವಿರುತ್ತದೆ. ಇದರಿಂದಾಗಿ ಹೃದಯದ ಮೇಲೆ ಹೆಚ್ಚಿನ ಒತ್ತಡ ಉಂಟಾಗಿ ಅದು ಹೆಚ್ಚು ಕಠಿಣವಾಗಿ ಕೆಲಸದಲ್ಲಿ ತೊಡಗುವಂತಾಗುತ್ತದೆ. ಹೃದಯಾಘಾತ ಸಂಭವಿಸುವ ಸಾಧ್ಯತೆಯುಳ್ಳ ಅಥವಾ ಈಗಾಗಲೇ ಹೃದಯ ಸಂಬಂಧಿ ತೊಂದರೆಗಳಿಂದ ಬಳಲುತ್ತಿರುವವರಲ್ಲಿ ಹೃದಯಾಘಾತದ ಪ್ರಮಾಣ ಇನ್ನೂ ಹೆಚ್ಚು.
ಅಲ್ಲದೆ, ಚಳಿಗಾಲದಲ್ಲಿ ಸಂಭವಿಸುವ ಹೃದಯಾಘಾತ ಹೆಚ್ಚು ಗಂಭೀರ ಸ್ವರೂಪದ್ದಾಗಿರುತ್ತದೆ. ಚಳಿಗಾಲದಲ್ಲಿ ಕೊಬ್ಬರಿ ಎಣ್ಣೆ ಗಟ್ಟಿಯಾಗುವುದನ್ನು ಗಮನಿಸಿದ್ದೀರಿ. ರಕ್ತದ ಚಲನೆ ಕಡಿಮೆಯಾಗಿ ಕೊಬ್ಬು ಅಧಿಕವಿದ್ದರೆ ಇಂಥ ಅಪಾಯ ದೇಹದೊಳಗೂ ಸಂಭವಿಸೀತು!

ಹೃದಯದ ಹೊರಗೆ ಗೋಡೆಗಳಲ್ಲಿ ಸೂಕ್ಷ್ಮತಿಸೂಕ್ಷ್ಮ ಕಿರುನಾಳಗಳಲ್ಲಿ ರಕ್ತ ಪ್ರವಾಹ ನಿರಂತರವಾಗಿರಬೇಕು. ಆದರೆ, ಚಳಿಯ ದಿನಗಳಲ್ಲಿ ಇದು ಸಾಧ್ಯವಾಗದೆ ಹೋಗಬಹುದು. ಕಿರುನಾಳಗಳ ಒಳಪದರ ಕಿರಿದಾಗಿದ್ದರೆ, ಕೊಬ್ಬಿನ ಕರಣೆ ಕಟ್ಟಿದರಂತೂ ಸಂಚಾರ ಕಠಿಣ. ಆಗಲೂ ಹೃದಯಾಘಾತ ಕಟ್ಟಿಟ್ಟ ಬುತ್ತಿ. ರೋಗಿಗೆ ಶೇ.30 ಮಾರ್ಗ ಕಿರಿದಾಗಿದೆ ಎಂದರೆ, ಅದು ಉಳಿದ ದಿನಗಳಂತಲ್ಲ. ಚಳಿಯಲ್ಲಿ ಅದು ಶೇ.70ಕ್ಕೆ ಸಮ!
ಹೃದಯಾಘಾತ ಸಂಭವಿಸಿದ ಕ್ಷಣಗಳಲ್ಲಿ ಹೃದಯ ಬಡಿತದ ಮೇಲೆ ವಾತಾವರಣದಲ್ಲಿ ಆಗುವ ಏರುಪೇರುಗಳೂ ಪ್ರಭಾವ ಬೀರುತ್ತವೆ. ‘ಡಿ’ ಜೀವಸತ್ವದ ಕೊರತೆಯೂ ಹಾರ್ಟ್ ಅಟ್ಯಾಕ್ಗೆ ಕಾರಣ ಆಗಬಹುದು. ಸೂರ್ಯನ ಕಿರಣ ‘ಡಿ’ ಜೀವಸತ್ವದ ಆಕರ. ಚಳಿಗಾಲದಲ್ಲಿ ಮನೆಯೊಳಗೇ ಇದ್ದರೆ, ದೇಹದಲ್ಲಿ ವಿಟಮಿನ್ ‘ಡಿ’ ಉತ್ಪಾದನೆ ಕಡಿಮೆಯಾಗುತ್ತದೆ. ವೈದ್ಯವಿಜ್ಞಾನದ ಸಂಶೋಧನೆಗಳ ಪ್ರಕಾರ, ಎತ್ತರ ಪ್ರದೇಶಗಳ ಜನರಿಗೆ ಹೃದಯಾಘಾತದ ರಿಸ್ಕ್ ಕಡಿಮೆಯಂತೆ.
ಏಕೆಂದರೆ ಎತ್ತರಕ್ಕೆ ಹೋದಂತೆ ಸೂರ್ಯನ ಕಿರಣಗಳಲ್ಲಿನ ಅಲ್ಟ್ರಾವೈಲೆಟ್ ಪ್ರಮಾಣ ಹೆಚ್ಚಿ, ವಿಟಮಿನ್ ‘ಡಿ’ ಉತ್ಪಾದನೆ ಪ್ರಮಾಣವೂ ಅಧಿಕವಾಗುತ್ತದೆ. ಈ ಕಾರಣದಿಂದಲೇ ರಕ್ತದೊತ್ತಡ ಇಲ್ಲದ, ಕೊಲೆಸ್ಟೆರಾಲ್ ಕಡಿಮೆ ಇರುವ ಕೆಳ ಪ್ರದೇಶದ ಜನರಲ್ಲೂ ಹೃದಯಾಘಾತದ ಪ್ರಮಾಣ ಅಧಿಕವಿರುತ್ತದೆ!
ಚಳಿಗಾಲದಲ್ಲಿ ಎಲ್ಲರೂ ಆಲಸಿಗಳೇ.
ಮಧುಮೇಹ ರೋಗವು ಈ ಕಾಲದಲ್ಲಿ ಉಲ್ಬಣಿಸುತ್ತದೆ. ಸ್ಥೂಲ ಕಾಯಗಳನ್ನು ಕಂಡರೆ ಹೃದಯಾಘಾತಕ್ಕೆ ಎಲ್ಲಿಲ್ಲದ ಪ್ರೀತಿ! ಚಳಿಗಾಲದಲ್ಲಿ ಸಾಮಾನ್ಯವಾಗಿ ಹಸಿವು ಹೆಚ್ಚಾಗುತ್ತದೆ. ವೈರಸ್ಗಳು ಹೆಚ್ಚು ಕ್ರಿಯಾಶೀಲಗೊಳ್ಳುವುದೂ ಇದೇ ವೇಳೆಯೇ. ಚಳಿಯಲ್ಲಿ ಕುರುಕಲು ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುವುದರಿಂದ ಇದೂ ಹೃದಯದ ಆರೋಗ್ಯಕ್ಕೆ ಮಾರಕ ಆಗಬಹುದು.

ಆಘಾತ ತಪ್ಪಿಸಲು ಇಷ್ಟು ಮಾಡಿ
– ತೀರಾ ನಸುಕಿನಲ್ಲಿ ವಾಕಿಂಗ್ಗೆ ಹೋಗಬೇಡಿ. ಹಾಗೆಂದು ಸುಮ್ಮನೆ ಹೊದ್ದು ಮಲಗ್ಬೇಡಿ.
– ಚಳಿಗಾಲದಲ್ಲಿ ಹೆಚ್ಚು ಆ್ಯಕ್ಟಿವ್ ಇರಿ.
– ಬೆಚ್ಚಗಿನ ಬಟ್ಟೆ ಧರಿಸಿ.
– ಬಿಪಿ, ಶುಗರ್ ಕಂಟ್ರೋಲ್ನಲ್ಲಿರಲಿ.
– ಶ್ವಾಸಕೋಶದ ಸಮಸ್ಯೆ ಕಂಡು ಬಂದಲ್ಲಿ, ಸೂಕ್ತ ಚಿಕಿತ್ಸೆ ಪಡೆಯಿರಿ..
– ಉಸಿರಾಟದ ಸಮಸ್ಯೆ ಕಂಡು ಬಂದಲ್ಲಿ, ತಕ್ಷಣವೇ ವೈದ್ಯರನ್ನು ಭೇಟಿಯಾಗಿ.
– ಲಘು ಆಹಾರ ಸೇವಿಸಿ. ಕೊಬ್ಬು ಹೆಚ್ಚಿರುವ, ಮದ್ಯ, ಧೂಮಪಾನ ವರ್ಜಿಸಿ.
– ಕೋಣೆಯೊಳಗೆ ತಣ್ಣನೆ ಗಾಳಿ ಸುಳಿಯದಂತೆ ಎಚ್ಚರ ವಹಿಸಿ.
Published by
Mayoon N / Biotechnologist / Director of DRM Career Build Center, Kolar
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ.. ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು… ಯುಗಾದಿ ಅಂದ್ರೆ ಏನು… ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು….
ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ ಈ ಸೊಪ್ಪಲ್ಲಿ ಪ್ರೋಟೀನ್, ಐರನ್, ಕ್ಯಾಲ್ಷಿಯಂ, ಪೊಟ್ಯಾಷಿಯಂ, ಫಾಸ್ಫರಸ್,ಮಗ್ನೀಷಿಯಂ ಅಲ್ಲದೇ ವಿಟಮಿನ್ A ಹಾಗು C ಇರೋದ್ರೀಂದ ಆರೋಗ್ಯಕ್ಕೆ ಬಹಳ ಒಳ್ಳೇದು.
ರಾಜ್ಯದ ಮೂಲೆ ಮೂಲೆಗಳಲ್ಲೂ ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ ಸಂಗ್ರಾಮದ ಮಾದರಿಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಸಂಘಟನೆ ಚಟುವಟಿಕೆಗಳು ನಡೆಯುತ್ತಿದ್ದು, ಡಿಸಂಬರ್.19 ರಂದು ಕೂಡಲ ಸಂಗಮದಲ್ಲಿ ನಡೆಯುವ ಐತಿಹಾಸಿಕ ಸಮಾವೇಶವು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಕ್ರಾಂತಿ ಆಗಲಿದೆಯೆಂದು ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಹೇಳಿದ್ದಾರೆ.
ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ. ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ 90 ದಿನಗಳನ್ನು ಮುಗಿಸಿದೆ. ಈ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವು ದಿನಗಳು ಇರುವಾಗಲೇ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಡಬಲ್ ಎಲಿಮಿನೇಟ್ ಆಗಿದ್ದಾರೆ. ಹೌದು.ಭಾನುವಾರ ನಟ ಸುದೀಪ್ ಅವರು ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಇಬ್ಬರನ್ನು ಎಲಿಮಿನೇಟ್ ಮಾಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ಮುಂದಿನ ವಾರ ಡಬಲ್ ಎಲಿಮಿನೇಷನ್ ಇದೆ. ಹೀಗಾಗಿ ಈ ವಾರ ಎಲಿಮಿನೇಟ್ ಇರಲಿಲ್ಲ. ಈ ವಿಚಾರ ಮನೆಯ ಸದಸ್ಯರಿಗೆ ಗೊತ್ತಿರಲಿಲ್ಲ….
20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯ ಭೋಗಲ್ ಪ್ರದೇಶದಲ್ಲಿ ನಡೆದಿದೆ.ಈ ಘಟನೆ ಭೋಗಲ್ ಬಸ್ ನಿಲ್ದಾಣದ ಬಳಿ ನಡೆದಿದೆ. ಆರೋಪಿಯನ್ನು ಮುನಾಸೀರ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಆತನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ದೆಹಲಿ ಪೊಲೀಸರು ಆರೋಪಿ ಮತ್ತು ಮೃತ ಯುವತಿಗೆ ಸಂಬಂಧ ಇದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಮೊದಲಿಗೆ ಮೃತ ಯುವತಿಯ ಬಳಿ ಬಂದು ಮಾತನಾಡುತ್ತಿದ್ದನು. ಆದರೆ…