ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಚಳಿಗೂ ಹಾರ್ಟ್ ಅಟ್ಯಾಕ್ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆ
ಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ.
ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ ಹೆಚ್ಚಿನ ಪ್ರಮಾಣದ ಸಿಂಥೇಜಿಕ್ ಡಿಸ್ಟಾರ್ಜ್ ಅಂದರೆ ಅಡ್ರಿನಾಲಿನ್ ಪಂಪಿಂಗ್ ಅಧಿಕವಿರುತ್ತದೆ. ಇದರಿಂದಾಗಿ ಹೃದಯದ ಮೇಲೆ ಹೆಚ್ಚಿನ ಒತ್ತಡ ಉಂಟಾಗಿ ಅದು ಹೆಚ್ಚು ಕಠಿಣವಾಗಿ ಕೆಲಸದಲ್ಲಿ ತೊಡಗುವಂತಾಗುತ್ತದೆ. ಹೃದಯಾಘಾತ ಸಂಭವಿಸುವ ಸಾಧ್ಯತೆಯುಳ್ಳ ಅಥವಾ ಈಗಾಗಲೇ ಹೃದಯ ಸಂಬಂಧಿ ತೊಂದರೆಗಳಿಂದ ಬಳಲುತ್ತಿರುವವರಲ್ಲಿ ಹೃದಯಾಘಾತದ ಪ್ರಮಾಣ ಇನ್ನೂ ಹೆಚ್ಚು.
ಅಲ್ಲದೆ, ಚಳಿಗಾಲದಲ್ಲಿ ಸಂಭವಿಸುವ ಹೃದಯಾಘಾತ ಹೆಚ್ಚು ಗಂಭೀರ ಸ್ವರೂಪದ್ದಾಗಿರುತ್ತದೆ. ಚಳಿಗಾಲದಲ್ಲಿ ಕೊಬ್ಬರಿ ಎಣ್ಣೆ ಗಟ್ಟಿಯಾಗುವುದನ್ನು ಗಮನಿಸಿದ್ದೀರಿ. ರಕ್ತದ ಚಲನೆ ಕಡಿಮೆಯಾಗಿ ಕೊಬ್ಬು ಅಧಿಕವಿದ್ದರೆ ಇಂಥ ಅಪಾಯ ದೇಹದೊಳಗೂ ಸಂಭವಿಸೀತು!

ಹೃದಯದ ಹೊರಗೆ ಗೋಡೆಗಳಲ್ಲಿ ಸೂಕ್ಷ್ಮತಿಸೂಕ್ಷ್ಮ ಕಿರುನಾಳಗಳಲ್ಲಿ ರಕ್ತ ಪ್ರವಾಹ ನಿರಂತರವಾಗಿರಬೇಕು. ಆದರೆ, ಚಳಿಯ ದಿನಗಳಲ್ಲಿ ಇದು ಸಾಧ್ಯವಾಗದೆ ಹೋಗಬಹುದು. ಕಿರುನಾಳಗಳ ಒಳಪದರ ಕಿರಿದಾಗಿದ್ದರೆ, ಕೊಬ್ಬಿನ ಕರಣೆ ಕಟ್ಟಿದರಂತೂ ಸಂಚಾರ ಕಠಿಣ. ಆಗಲೂ ಹೃದಯಾಘಾತ ಕಟ್ಟಿಟ್ಟ ಬುತ್ತಿ. ರೋಗಿಗೆ ಶೇ.30 ಮಾರ್ಗ ಕಿರಿದಾಗಿದೆ ಎಂದರೆ, ಅದು ಉಳಿದ ದಿನಗಳಂತಲ್ಲ. ಚಳಿಯಲ್ಲಿ ಅದು ಶೇ.70ಕ್ಕೆ ಸಮ!
ಹೃದಯಾಘಾತ ಸಂಭವಿಸಿದ ಕ್ಷಣಗಳಲ್ಲಿ ಹೃದಯ ಬಡಿತದ ಮೇಲೆ ವಾತಾವರಣದಲ್ಲಿ ಆಗುವ ಏರುಪೇರುಗಳೂ ಪ್ರಭಾವ ಬೀರುತ್ತವೆ. ‘ಡಿ’ ಜೀವಸತ್ವದ ಕೊರತೆಯೂ ಹಾರ್ಟ್ ಅಟ್ಯಾಕ್ಗೆ ಕಾರಣ ಆಗಬಹುದು. ಸೂರ್ಯನ ಕಿರಣ ‘ಡಿ’ ಜೀವಸತ್ವದ ಆಕರ. ಚಳಿಗಾಲದಲ್ಲಿ ಮನೆಯೊಳಗೇ ಇದ್ದರೆ, ದೇಹದಲ್ಲಿ ವಿಟಮಿನ್ ‘ಡಿ’ ಉತ್ಪಾದನೆ ಕಡಿಮೆಯಾಗುತ್ತದೆ. ವೈದ್ಯವಿಜ್ಞಾನದ ಸಂಶೋಧನೆಗಳ ಪ್ರಕಾರ, ಎತ್ತರ ಪ್ರದೇಶಗಳ ಜನರಿಗೆ ಹೃದಯಾಘಾತದ ರಿಸ್ಕ್ ಕಡಿಮೆಯಂತೆ.
ಏಕೆಂದರೆ ಎತ್ತರಕ್ಕೆ ಹೋದಂತೆ ಸೂರ್ಯನ ಕಿರಣಗಳಲ್ಲಿನ ಅಲ್ಟ್ರಾವೈಲೆಟ್ ಪ್ರಮಾಣ ಹೆಚ್ಚಿ, ವಿಟಮಿನ್ ‘ಡಿ’ ಉತ್ಪಾದನೆ ಪ್ರಮಾಣವೂ ಅಧಿಕವಾಗುತ್ತದೆ. ಈ ಕಾರಣದಿಂದಲೇ ರಕ್ತದೊತ್ತಡ ಇಲ್ಲದ, ಕೊಲೆಸ್ಟೆರಾಲ್ ಕಡಿಮೆ ಇರುವ ಕೆಳ ಪ್ರದೇಶದ ಜನರಲ್ಲೂ ಹೃದಯಾಘಾತದ ಪ್ರಮಾಣ ಅಧಿಕವಿರುತ್ತದೆ!
ಚಳಿಗಾಲದಲ್ಲಿ ಎಲ್ಲರೂ ಆಲಸಿಗಳೇ.
ಮಧುಮೇಹ ರೋಗವು ಈ ಕಾಲದಲ್ಲಿ ಉಲ್ಬಣಿಸುತ್ತದೆ. ಸ್ಥೂಲ ಕಾಯಗಳನ್ನು ಕಂಡರೆ ಹೃದಯಾಘಾತಕ್ಕೆ ಎಲ್ಲಿಲ್ಲದ ಪ್ರೀತಿ! ಚಳಿಗಾಲದಲ್ಲಿ ಸಾಮಾನ್ಯವಾಗಿ ಹಸಿವು ಹೆಚ್ಚಾಗುತ್ತದೆ. ವೈರಸ್ಗಳು ಹೆಚ್ಚು ಕ್ರಿಯಾಶೀಲಗೊಳ್ಳುವುದೂ ಇದೇ ವೇಳೆಯೇ. ಚಳಿಯಲ್ಲಿ ಕುರುಕಲು ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುವುದರಿಂದ ಇದೂ ಹೃದಯದ ಆರೋಗ್ಯಕ್ಕೆ ಮಾರಕ ಆಗಬಹುದು.

ಆಘಾತ ತಪ್ಪಿಸಲು ಇಷ್ಟು ಮಾಡಿ
– ತೀರಾ ನಸುಕಿನಲ್ಲಿ ವಾಕಿಂಗ್ಗೆ ಹೋಗಬೇಡಿ. ಹಾಗೆಂದು ಸುಮ್ಮನೆ ಹೊದ್ದು ಮಲಗ್ಬೇಡಿ.
– ಚಳಿಗಾಲದಲ್ಲಿ ಹೆಚ್ಚು ಆ್ಯಕ್ಟಿವ್ ಇರಿ.
– ಬೆಚ್ಚಗಿನ ಬಟ್ಟೆ ಧರಿಸಿ.
– ಬಿಪಿ, ಶುಗರ್ ಕಂಟ್ರೋಲ್ನಲ್ಲಿರಲಿ.
– ಶ್ವಾಸಕೋಶದ ಸಮಸ್ಯೆ ಕಂಡು ಬಂದಲ್ಲಿ, ಸೂಕ್ತ ಚಿಕಿತ್ಸೆ ಪಡೆಯಿರಿ..
– ಉಸಿರಾಟದ ಸಮಸ್ಯೆ ಕಂಡು ಬಂದಲ್ಲಿ, ತಕ್ಷಣವೇ ವೈದ್ಯರನ್ನು ಭೇಟಿಯಾಗಿ.
– ಲಘು ಆಹಾರ ಸೇವಿಸಿ. ಕೊಬ್ಬು ಹೆಚ್ಚಿರುವ, ಮದ್ಯ, ಧೂಮಪಾನ ವರ್ಜಿಸಿ.
– ಕೋಣೆಯೊಳಗೆ ತಣ್ಣನೆ ಗಾಳಿ ಸುಳಿಯದಂತೆ ಎಚ್ಚರ ವಹಿಸಿ.
Published by
Mayoon N / Biotechnologist / Director of DRM Career Build Center, Kolar
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಳಿಗಳು ಸಾಮನ್ಯವಾಗಿ ಒಂದು ದಿನದಲ್ಲಿ ಒಂದೆರಡು ಅಥವಾ ಹೆಚ್ಚೆಂದರೆ ಮೂರು ಮೊಟ್ಟೆ ಇಡುತ್ತವೆ. ಆದರೆ ಈ ಕೋಳಿ ಅದ್ಭುತವನ್ನು ಸೃಷ್ಟಿಸಿದೆ. ಜೈಪುರದ ಘಾಟ್ಗೇಟ್ನಲ್ಲಿರುವ ಹುಝೂರಿ ಛೋಟಾ ಪಾರ್ಕ್ನಲ್ಲಿ ಈ ಅದ್ಭುತ ಕಾಣಲು ಸಿಕ್ಕಿದೆ.
ದೇಶಾದ್ಯಂತ ಮೊಬೈಲ್ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..! 🔴 ಏನಿದು ಮೊಬೈಲ್ ಅಲರ್ಟ್? ಇತ್ತೀಚೆಗೆ ದೇಶದಾದ್ಯಂತ ಹಲವು ಜನರ ಮೊಬೈಲ್ಗಳಲ್ಲಿ ಏಕಾಏಕಿ ಜೋರಾಗಿ ಸೈರನ್ ಶಬ್ದದೊಂದಿಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಕಾಣಿಸಿಕೊಂಡಿತು.ಇದು ಯಾವುದೇ ಅಪಾಯದ ಸೂಚನೆ ಅಲ್ಲ — ಇದು ಸರ್ಕಾರದ ಪರೀಕ್ಷಾ ಅಲರ್ಟ್ (Test Alert) ಆಗಿತ್ತು. ಯಾರು ಕಳುಹಿಸಿದರು? ಈ ಅಲರ್ಟ್ ಅನ್ನು National Disaster Management Authority (NDMA) ಹಾಗೂ ಟೆಲಿಕಾಂ ಇಲಾಖೆ (DoT) ಒಟ್ಟಾಗಿ ಪರೀಕ್ಷೆಯ ಭಾಗವಾಗಿ ಕಳುಹಿಸಿದರು. ಹೇಗೆ ಕೆಲಸ ಮಾಡುತ್ತದೆ?…
ಬಾಲಿವುಡ್ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಇದೀಗ ದಬಾಂಗ್ 3 ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ದೇಶಾದ್ಯಂತ ಕಾತರ ಮೂಡಿಸಿರೋ ಈ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ. ಇದೀಗ ಈ ಸಿನಿಮಾದ ಟ್ರೇಲರ್ ಕೂಡಾ ಬಿಡುಗಡೆಯಾಗಿದೆ. ಈ ಕುರಿತಾದ ಸಮಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಿರುವ ಸಲ್ಮಾನ್ ಖಾನ್ ಕನ್ನಡದಲ್ಲಿಯೇ ಮಾತಾಡೋ ಮೂಲಕ ಕನ್ನಡಿಗರೆಲ್ಲರ ಮನ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ಸಿನಿಮಾದಲ್ಲಿ ನಟಿಸಲೂ ಉತ್ಸುಕರಾಗಿರೋದರ ಬಗ್ಗೆಯೂ ಮಾತಾಡಿದ್ದಾರೆ. ಬೆಂಗಳೂರಿನಲ್ಲಿ ದಬಾಂಗ್ 3 ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವೀಡಿಯೋ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು. ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ…
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಗ್ರಾಂಡ್ ಫಿನಾಲೆಯಲ್ಲಿ ಮಂಗಳೂರಿನ ಕೀರ್ತನ್ ಹೊಳ್ಳ ವಿನ್ನರ್ ಆಗಿದ್ದಾರೆ. ಹಾವೇರಿಯ ಚೀಲೂರು ಬಡ್ನಿ ತಾಂಡಾದ ಹನುಮಂತ ಅವರು ರನ್ನರ್ ಆಗಿದ್ದಾರೆ.ಕೀರ್ತನ್ ಹೊಳ್ಳ ಆರಂಭದಿಂದಲೂ ಅದ್ಭುತವಾಗಿ ಹಾಡುವ ಮೂಲಕ ಜಡ್ಜಸ್ ಗಳು ಹಾಗೂ ಮಹಾಗುರುಗಳ ಮೆಚ್ಚುಗೆ ಗಳಿಸಿದ್ದರು. ಅದೇ ರೀತಿ ಹನುಮಂತ ತಮ್ಮ ಮುಗ್ಧತೆಯಿಂದಲೇ ಜನಪ್ರಿಯರಾಗಿದ್ದರು. ಶನಿವಾರ ನಡೆದ ಗ್ರಾಂಡ್ ಫಿನಾಲೆಯಲ್ಲಿ ನಿಹಾಲ್ ತಾವ್ರೊ, ಹನುಮಂತ, ಕೀರ್ತನ ಹೊಳ್ಳ, ವಿಜೇತ್, ಹೃತ್ವಿಕ್ ಹಾಗೂ ಸಾಧ್ವಿನಿ ಅವರು ಫಿನಾಲೆಗೆ ಎಂಟ್ರಿ ಕೊಟ್ಟಿದ್ದರು. ಅವರಲ್ಲಿ…
ಹೈವೋಲ್ಟೇಜ್ ಕಣವಾಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮಾತಿನ ಸಮರ ತಾರಕಕ್ಕೇರಿದೆ. ಸಿಎಂ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಏಟಿಗೆ – ಎದುರೇಟು ನೀಡತೊಡಗಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿರುವ ಸುಮಲತಾ ಅವರ ಕುರಿತಾಗಿ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಪಕ್ಷೇತರ ಅಭ್ಯರ್ಥಿಯ ಭಾಷಣದಲ್ಲಿ ಎಲ್ಲಿಯೂ ಮಂಡ್ಯ ಜಿಲ್ಲೆಯ ಜನರ ಸಮಸ್ಯೆ ಬಗ್ಗೆ ಪ್ರಸ್ತಾಪವಾಗಿಲ್ಲ. ಅವರಲ್ಲಿ ನೋವಿನ ಛಾಯೆಯೂ ಕಾಣುತ್ತಿಲ್ಲ. ನಾಟಕೀಯವಾಗಿ ಸಿನಿಮಾ ಡೈಲಾಗ್ ಹೊಡೆಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಬಿಜೆಪಿ…