ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಚಳಿಗೂ ಹಾರ್ಟ್ ಅಟ್ಯಾಕ್ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆ
ಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ.
ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ ಹೆಚ್ಚಿನ ಪ್ರಮಾಣದ ಸಿಂಥೇಜಿಕ್ ಡಿಸ್ಟಾರ್ಜ್ ಅಂದರೆ ಅಡ್ರಿನಾಲಿನ್ ಪಂಪಿಂಗ್ ಅಧಿಕವಿರುತ್ತದೆ. ಇದರಿಂದಾಗಿ ಹೃದಯದ ಮೇಲೆ ಹೆಚ್ಚಿನ ಒತ್ತಡ ಉಂಟಾಗಿ ಅದು ಹೆಚ್ಚು ಕಠಿಣವಾಗಿ ಕೆಲಸದಲ್ಲಿ ತೊಡಗುವಂತಾಗುತ್ತದೆ. ಹೃದಯಾಘಾತ ಸಂಭವಿಸುವ ಸಾಧ್ಯತೆಯುಳ್ಳ ಅಥವಾ ಈಗಾಗಲೇ ಹೃದಯ ಸಂಬಂಧಿ ತೊಂದರೆಗಳಿಂದ ಬಳಲುತ್ತಿರುವವರಲ್ಲಿ ಹೃದಯಾಘಾತದ ಪ್ರಮಾಣ ಇನ್ನೂ ಹೆಚ್ಚು.
ಅಲ್ಲದೆ, ಚಳಿಗಾಲದಲ್ಲಿ ಸಂಭವಿಸುವ ಹೃದಯಾಘಾತ ಹೆಚ್ಚು ಗಂಭೀರ ಸ್ವರೂಪದ್ದಾಗಿರುತ್ತದೆ. ಚಳಿಗಾಲದಲ್ಲಿ ಕೊಬ್ಬರಿ ಎಣ್ಣೆ ಗಟ್ಟಿಯಾಗುವುದನ್ನು ಗಮನಿಸಿದ್ದೀರಿ. ರಕ್ತದ ಚಲನೆ ಕಡಿಮೆಯಾಗಿ ಕೊಬ್ಬು ಅಧಿಕವಿದ್ದರೆ ಇಂಥ ಅಪಾಯ ದೇಹದೊಳಗೂ ಸಂಭವಿಸೀತು!

ಹೃದಯದ ಹೊರಗೆ ಗೋಡೆಗಳಲ್ಲಿ ಸೂಕ್ಷ್ಮತಿಸೂಕ್ಷ್ಮ ಕಿರುನಾಳಗಳಲ್ಲಿ ರಕ್ತ ಪ್ರವಾಹ ನಿರಂತರವಾಗಿರಬೇಕು. ಆದರೆ, ಚಳಿಯ ದಿನಗಳಲ್ಲಿ ಇದು ಸಾಧ್ಯವಾಗದೆ ಹೋಗಬಹುದು. ಕಿರುನಾಳಗಳ ಒಳಪದರ ಕಿರಿದಾಗಿದ್ದರೆ, ಕೊಬ್ಬಿನ ಕರಣೆ ಕಟ್ಟಿದರಂತೂ ಸಂಚಾರ ಕಠಿಣ. ಆಗಲೂ ಹೃದಯಾಘಾತ ಕಟ್ಟಿಟ್ಟ ಬುತ್ತಿ. ರೋಗಿಗೆ ಶೇ.30 ಮಾರ್ಗ ಕಿರಿದಾಗಿದೆ ಎಂದರೆ, ಅದು ಉಳಿದ ದಿನಗಳಂತಲ್ಲ. ಚಳಿಯಲ್ಲಿ ಅದು ಶೇ.70ಕ್ಕೆ ಸಮ!
ಹೃದಯಾಘಾತ ಸಂಭವಿಸಿದ ಕ್ಷಣಗಳಲ್ಲಿ ಹೃದಯ ಬಡಿತದ ಮೇಲೆ ವಾತಾವರಣದಲ್ಲಿ ಆಗುವ ಏರುಪೇರುಗಳೂ ಪ್ರಭಾವ ಬೀರುತ್ತವೆ. ‘ಡಿ’ ಜೀವಸತ್ವದ ಕೊರತೆಯೂ ಹಾರ್ಟ್ ಅಟ್ಯಾಕ್ಗೆ ಕಾರಣ ಆಗಬಹುದು. ಸೂರ್ಯನ ಕಿರಣ ‘ಡಿ’ ಜೀವಸತ್ವದ ಆಕರ. ಚಳಿಗಾಲದಲ್ಲಿ ಮನೆಯೊಳಗೇ ಇದ್ದರೆ, ದೇಹದಲ್ಲಿ ವಿಟಮಿನ್ ‘ಡಿ’ ಉತ್ಪಾದನೆ ಕಡಿಮೆಯಾಗುತ್ತದೆ. ವೈದ್ಯವಿಜ್ಞಾನದ ಸಂಶೋಧನೆಗಳ ಪ್ರಕಾರ, ಎತ್ತರ ಪ್ರದೇಶಗಳ ಜನರಿಗೆ ಹೃದಯಾಘಾತದ ರಿಸ್ಕ್ ಕಡಿಮೆಯಂತೆ.
ಏಕೆಂದರೆ ಎತ್ತರಕ್ಕೆ ಹೋದಂತೆ ಸೂರ್ಯನ ಕಿರಣಗಳಲ್ಲಿನ ಅಲ್ಟ್ರಾವೈಲೆಟ್ ಪ್ರಮಾಣ ಹೆಚ್ಚಿ, ವಿಟಮಿನ್ ‘ಡಿ’ ಉತ್ಪಾದನೆ ಪ್ರಮಾಣವೂ ಅಧಿಕವಾಗುತ್ತದೆ. ಈ ಕಾರಣದಿಂದಲೇ ರಕ್ತದೊತ್ತಡ ಇಲ್ಲದ, ಕೊಲೆಸ್ಟೆರಾಲ್ ಕಡಿಮೆ ಇರುವ ಕೆಳ ಪ್ರದೇಶದ ಜನರಲ್ಲೂ ಹೃದಯಾಘಾತದ ಪ್ರಮಾಣ ಅಧಿಕವಿರುತ್ತದೆ!
ಚಳಿಗಾಲದಲ್ಲಿ ಎಲ್ಲರೂ ಆಲಸಿಗಳೇ.
ಮಧುಮೇಹ ರೋಗವು ಈ ಕಾಲದಲ್ಲಿ ಉಲ್ಬಣಿಸುತ್ತದೆ. ಸ್ಥೂಲ ಕಾಯಗಳನ್ನು ಕಂಡರೆ ಹೃದಯಾಘಾತಕ್ಕೆ ಎಲ್ಲಿಲ್ಲದ ಪ್ರೀತಿ! ಚಳಿಗಾಲದಲ್ಲಿ ಸಾಮಾನ್ಯವಾಗಿ ಹಸಿವು ಹೆಚ್ಚಾಗುತ್ತದೆ. ವೈರಸ್ಗಳು ಹೆಚ್ಚು ಕ್ರಿಯಾಶೀಲಗೊಳ್ಳುವುದೂ ಇದೇ ವೇಳೆಯೇ. ಚಳಿಯಲ್ಲಿ ಕುರುಕಲು ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುವುದರಿಂದ ಇದೂ ಹೃದಯದ ಆರೋಗ್ಯಕ್ಕೆ ಮಾರಕ ಆಗಬಹುದು.

ಆಘಾತ ತಪ್ಪಿಸಲು ಇಷ್ಟು ಮಾಡಿ
– ತೀರಾ ನಸುಕಿನಲ್ಲಿ ವಾಕಿಂಗ್ಗೆ ಹೋಗಬೇಡಿ. ಹಾಗೆಂದು ಸುಮ್ಮನೆ ಹೊದ್ದು ಮಲಗ್ಬೇಡಿ.
– ಚಳಿಗಾಲದಲ್ಲಿ ಹೆಚ್ಚು ಆ್ಯಕ್ಟಿವ್ ಇರಿ.
– ಬೆಚ್ಚಗಿನ ಬಟ್ಟೆ ಧರಿಸಿ.
– ಬಿಪಿ, ಶುಗರ್ ಕಂಟ್ರೋಲ್ನಲ್ಲಿರಲಿ.
– ಶ್ವಾಸಕೋಶದ ಸಮಸ್ಯೆ ಕಂಡು ಬಂದಲ್ಲಿ, ಸೂಕ್ತ ಚಿಕಿತ್ಸೆ ಪಡೆಯಿರಿ..
– ಉಸಿರಾಟದ ಸಮಸ್ಯೆ ಕಂಡು ಬಂದಲ್ಲಿ, ತಕ್ಷಣವೇ ವೈದ್ಯರನ್ನು ಭೇಟಿಯಾಗಿ.
– ಲಘು ಆಹಾರ ಸೇವಿಸಿ. ಕೊಬ್ಬು ಹೆಚ್ಚಿರುವ, ಮದ್ಯ, ಧೂಮಪಾನ ವರ್ಜಿಸಿ.
– ಕೋಣೆಯೊಳಗೆ ತಣ್ಣನೆ ಗಾಳಿ ಸುಳಿಯದಂತೆ ಎಚ್ಚರ ವಹಿಸಿ.
Published by
Mayoon N / Biotechnologist / Director of DRM Career Build Center, Kolar
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್ಪ್ಲೇಸ್ ಆಗಿರುವ ಫ್ಲಿಪ್ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್ಕಾರ್ಟ್ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ. ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ…
ರಜೆ ಬಂದರೆ ಸಾಕು ಮನೆಯಲ್ಲಿ ಎಲ್ಲರು ಇರುತ್ತಾರೆ. ಒಂದು ಕಡೆ ಎಲ್ರೂ ಇದ್ದರೆ ಸಾಕು ಏನಾದರೂ ಸ್ಪೈಸಿಯಾಗಿ ತಿನ್ನಲೂ ಕೇಳುತ್ತಾರೆ. ಪ್ರತಿದಿನ ಅದೇ ತಿಂಡಿ ಅಂತ ಬೇಸರ ಮಾಡಿಕೊಂಡು ತಿನ್ನುವುದಿಲ್ಲ. ಹೀಗಾಗಿ ಬೇಗ ತಯಾರಾಗುವ ಎಗ್ ಪೆಪ್ಪರ್ ಫ್ರೈ ಮಾಡುವ ವಿಧಾನ.. ಬೇಕಾಗುವ ಸಾಮಾಗ್ರಿಗಳು 1. ಮೊಟ್ಟೆ – 4 3. ಎಣ್ಣೆ – 2-3 ಚಮಚ3. ಮೆಣಸು – 1 ಚಮಚ 4. ಉಪ್ಪು – ರುಚಿಗೆ ತಕ್ಕಷ್ಟು5. ಕೊತ್ತಂಬರಿ ಸೊಪ್ಪು -ಸ್ವಲ್ಪ 6. ಅರಿಶಿಣ –…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಫೆಬ್ರವರಿ, 2019) ದಿನದ ಉತ್ತರಾರ್ಧದಲ್ಲಿ ಅತ್ಯಾಕರ್ಷಕ ಮತ್ತು ಮನರಂಜನೆಯ ಏನನ್ನಾದರೂ ಹೊಂದಿಸಿ. ಪ್ರಣಯ ಮತ್ತು…
ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡಲಿದೆ ಎಂಬ ಸುದ್ದಿಯೊಂದು ಹರಿದಾಡಿ ಸಂಚಲನ ಮೂಡಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಚಿಂತನೆ ನಡೆಸಿಲ್ಲವೆಂದು ಹೇಳಲಾಗಿದೆ. ಇದೇ ವೇಳೆ ಸಾಲಮನ್ನಾ ಹೊರತಾಗಿ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ ಮೋದಿ ವಿವಿಧ ಸುತ್ತಿನ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ, ಕೃಷಿ ಕ್ಷೇತ್ರದಲ್ಲಿ ಜನಪ್ರಿಯ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ. ಫಸಲ್…
ಪ್ರಸ್ತುತ ದಿನಗಳಲ್ಲಿ ಮತದಾನ ಮಾಡಲು ಹಿಂದೆ ಮುಂದೆ ನೋಡುವ ಜನರ ಮುಂದೆ ಇವರು ಎಲ್ಲರಿಗಿಂತ ಮೊದಲೇ ಮತ ಹಾಕಲು ಬಯಸುತ್ತಾರೆ.ಆದರೆ ಶಿಮ್ಲಾದ ಶ್ಯಾಮ್ ಶರಣ್ ನೇಗಿ ಯವರು ಸ್ವತಂತ್ರ ಭಾರತದ ಮೊದಲ ಮತದಾರ ಎಂದು ಪ್ರಸಿದ್ಧರಾಗಿದ್ದಾರೆ.
ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.