ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಚಳಿಗೂ ಹಾರ್ಟ್ ಅಟ್ಯಾಕ್ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆ
ಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ.
ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ ಹೆಚ್ಚಿನ ಪ್ರಮಾಣದ ಸಿಂಥೇಜಿಕ್ ಡಿಸ್ಟಾರ್ಜ್ ಅಂದರೆ ಅಡ್ರಿನಾಲಿನ್ ಪಂಪಿಂಗ್ ಅಧಿಕವಿರುತ್ತದೆ. ಇದರಿಂದಾಗಿ ಹೃದಯದ ಮೇಲೆ ಹೆಚ್ಚಿನ ಒತ್ತಡ ಉಂಟಾಗಿ ಅದು ಹೆಚ್ಚು ಕಠಿಣವಾಗಿ ಕೆಲಸದಲ್ಲಿ ತೊಡಗುವಂತಾಗುತ್ತದೆ. ಹೃದಯಾಘಾತ ಸಂಭವಿಸುವ ಸಾಧ್ಯತೆಯುಳ್ಳ ಅಥವಾ ಈಗಾಗಲೇ ಹೃದಯ ಸಂಬಂಧಿ ತೊಂದರೆಗಳಿಂದ ಬಳಲುತ್ತಿರುವವರಲ್ಲಿ ಹೃದಯಾಘಾತದ ಪ್ರಮಾಣ ಇನ್ನೂ ಹೆಚ್ಚು.
ಅಲ್ಲದೆ, ಚಳಿಗಾಲದಲ್ಲಿ ಸಂಭವಿಸುವ ಹೃದಯಾಘಾತ ಹೆಚ್ಚು ಗಂಭೀರ ಸ್ವರೂಪದ್ದಾಗಿರುತ್ತದೆ. ಚಳಿಗಾಲದಲ್ಲಿ ಕೊಬ್ಬರಿ ಎಣ್ಣೆ ಗಟ್ಟಿಯಾಗುವುದನ್ನು ಗಮನಿಸಿದ್ದೀರಿ. ರಕ್ತದ ಚಲನೆ ಕಡಿಮೆಯಾಗಿ ಕೊಬ್ಬು ಅಧಿಕವಿದ್ದರೆ ಇಂಥ ಅಪಾಯ ದೇಹದೊಳಗೂ ಸಂಭವಿಸೀತು!

ಹೃದಯದ ಹೊರಗೆ ಗೋಡೆಗಳಲ್ಲಿ ಸೂಕ್ಷ್ಮತಿಸೂಕ್ಷ್ಮ ಕಿರುನಾಳಗಳಲ್ಲಿ ರಕ್ತ ಪ್ರವಾಹ ನಿರಂತರವಾಗಿರಬೇಕು. ಆದರೆ, ಚಳಿಯ ದಿನಗಳಲ್ಲಿ ಇದು ಸಾಧ್ಯವಾಗದೆ ಹೋಗಬಹುದು. ಕಿರುನಾಳಗಳ ಒಳಪದರ ಕಿರಿದಾಗಿದ್ದರೆ, ಕೊಬ್ಬಿನ ಕರಣೆ ಕಟ್ಟಿದರಂತೂ ಸಂಚಾರ ಕಠಿಣ. ಆಗಲೂ ಹೃದಯಾಘಾತ ಕಟ್ಟಿಟ್ಟ ಬುತ್ತಿ. ರೋಗಿಗೆ ಶೇ.30 ಮಾರ್ಗ ಕಿರಿದಾಗಿದೆ ಎಂದರೆ, ಅದು ಉಳಿದ ದಿನಗಳಂತಲ್ಲ. ಚಳಿಯಲ್ಲಿ ಅದು ಶೇ.70ಕ್ಕೆ ಸಮ!
ಹೃದಯಾಘಾತ ಸಂಭವಿಸಿದ ಕ್ಷಣಗಳಲ್ಲಿ ಹೃದಯ ಬಡಿತದ ಮೇಲೆ ವಾತಾವರಣದಲ್ಲಿ ಆಗುವ ಏರುಪೇರುಗಳೂ ಪ್ರಭಾವ ಬೀರುತ್ತವೆ. ‘ಡಿ’ ಜೀವಸತ್ವದ ಕೊರತೆಯೂ ಹಾರ್ಟ್ ಅಟ್ಯಾಕ್ಗೆ ಕಾರಣ ಆಗಬಹುದು. ಸೂರ್ಯನ ಕಿರಣ ‘ಡಿ’ ಜೀವಸತ್ವದ ಆಕರ. ಚಳಿಗಾಲದಲ್ಲಿ ಮನೆಯೊಳಗೇ ಇದ್ದರೆ, ದೇಹದಲ್ಲಿ ವಿಟಮಿನ್ ‘ಡಿ’ ಉತ್ಪಾದನೆ ಕಡಿಮೆಯಾಗುತ್ತದೆ. ವೈದ್ಯವಿಜ್ಞಾನದ ಸಂಶೋಧನೆಗಳ ಪ್ರಕಾರ, ಎತ್ತರ ಪ್ರದೇಶಗಳ ಜನರಿಗೆ ಹೃದಯಾಘಾತದ ರಿಸ್ಕ್ ಕಡಿಮೆಯಂತೆ.
ಏಕೆಂದರೆ ಎತ್ತರಕ್ಕೆ ಹೋದಂತೆ ಸೂರ್ಯನ ಕಿರಣಗಳಲ್ಲಿನ ಅಲ್ಟ್ರಾವೈಲೆಟ್ ಪ್ರಮಾಣ ಹೆಚ್ಚಿ, ವಿಟಮಿನ್ ‘ಡಿ’ ಉತ್ಪಾದನೆ ಪ್ರಮಾಣವೂ ಅಧಿಕವಾಗುತ್ತದೆ. ಈ ಕಾರಣದಿಂದಲೇ ರಕ್ತದೊತ್ತಡ ಇಲ್ಲದ, ಕೊಲೆಸ್ಟೆರಾಲ್ ಕಡಿಮೆ ಇರುವ ಕೆಳ ಪ್ರದೇಶದ ಜನರಲ್ಲೂ ಹೃದಯಾಘಾತದ ಪ್ರಮಾಣ ಅಧಿಕವಿರುತ್ತದೆ!
ಚಳಿಗಾಲದಲ್ಲಿ ಎಲ್ಲರೂ ಆಲಸಿಗಳೇ.
ಮಧುಮೇಹ ರೋಗವು ಈ ಕಾಲದಲ್ಲಿ ಉಲ್ಬಣಿಸುತ್ತದೆ. ಸ್ಥೂಲ ಕಾಯಗಳನ್ನು ಕಂಡರೆ ಹೃದಯಾಘಾತಕ್ಕೆ ಎಲ್ಲಿಲ್ಲದ ಪ್ರೀತಿ! ಚಳಿಗಾಲದಲ್ಲಿ ಸಾಮಾನ್ಯವಾಗಿ ಹಸಿವು ಹೆಚ್ಚಾಗುತ್ತದೆ. ವೈರಸ್ಗಳು ಹೆಚ್ಚು ಕ್ರಿಯಾಶೀಲಗೊಳ್ಳುವುದೂ ಇದೇ ವೇಳೆಯೇ. ಚಳಿಯಲ್ಲಿ ಕುರುಕಲು ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುವುದರಿಂದ ಇದೂ ಹೃದಯದ ಆರೋಗ್ಯಕ್ಕೆ ಮಾರಕ ಆಗಬಹುದು.

ಆಘಾತ ತಪ್ಪಿಸಲು ಇಷ್ಟು ಮಾಡಿ
– ತೀರಾ ನಸುಕಿನಲ್ಲಿ ವಾಕಿಂಗ್ಗೆ ಹೋಗಬೇಡಿ. ಹಾಗೆಂದು ಸುಮ್ಮನೆ ಹೊದ್ದು ಮಲಗ್ಬೇಡಿ.
– ಚಳಿಗಾಲದಲ್ಲಿ ಹೆಚ್ಚು ಆ್ಯಕ್ಟಿವ್ ಇರಿ.
– ಬೆಚ್ಚಗಿನ ಬಟ್ಟೆ ಧರಿಸಿ.
– ಬಿಪಿ, ಶುಗರ್ ಕಂಟ್ರೋಲ್ನಲ್ಲಿರಲಿ.
– ಶ್ವಾಸಕೋಶದ ಸಮಸ್ಯೆ ಕಂಡು ಬಂದಲ್ಲಿ, ಸೂಕ್ತ ಚಿಕಿತ್ಸೆ ಪಡೆಯಿರಿ..
– ಉಸಿರಾಟದ ಸಮಸ್ಯೆ ಕಂಡು ಬಂದಲ್ಲಿ, ತಕ್ಷಣವೇ ವೈದ್ಯರನ್ನು ಭೇಟಿಯಾಗಿ.
– ಲಘು ಆಹಾರ ಸೇವಿಸಿ. ಕೊಬ್ಬು ಹೆಚ್ಚಿರುವ, ಮದ್ಯ, ಧೂಮಪಾನ ವರ್ಜಿಸಿ.
– ಕೋಣೆಯೊಳಗೆ ತಣ್ಣನೆ ಗಾಳಿ ಸುಳಿಯದಂತೆ ಎಚ್ಚರ ವಹಿಸಿ.
Published by
Mayoon N / Biotechnologist / Director of DRM Career Build Center, Kolar
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…
ಕೋಲಾರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ, ಹೊಳೂರು ಹೋಬಳಿ, ನಾಯಕರಹಳ್ಳಿ ಗ್ರಾಮದ ಮುಬಾರಕ್ ಪಾಷ ಬಿನ್ ಅಜೀಜ್ಸಾಬಿ ಎಂಬಾತನು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಬೈರರವರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಸ್ಪೇಷಲ್ ಸಿ. (ಪೋಕ್ಸೋ) ಪ್ರಕರಣದ ಸಂಖ್ಯೆ: 70/2022ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಶ್ರೀ…
ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.
1000 ಮತ್ತು 500ರೂಗಳ ನೋಟ್ ಬ್ಯಾನ್ ಮಾಡಿ ಕಾಳಧನಿಕರ ಸೊಕ್ಕಡಿಗಿಸಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಈಗ ಮತ್ತೊಂದು ಕಾರ್ಯಕ್ಕೆ ಡೆಡ್ ಲೈನ್ ಕೊಟ್ಟಿದೆ.
ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ..
ಇಂದು ಭಾನುವಾರ, 04/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…