News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
inspirational

ಹೃದಯಾಘಾತ ( Heart attack ) ತಪ್ಪಿಸಲು ಇಲ್ಲಿವೆ ಸಿಂಪಲ್ ಟಿಪ್ಸ್

122
Heart attack

ಚಳಿಗೂ ಹಾರ್ಟ್ ಅಟ್ಯಾಕ್‌ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆ
ಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್‌ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ.

ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ ಹೆಚ್ಚಿನ ಪ್ರಮಾಣದ ಸಿಂಥೇಜಿಕ್ ಡಿಸ್ಟಾರ್ಜ್ ಅಂದರೆ ಅಡ್ರಿನಾಲಿನ್ ಪಂಪಿಂಗ್ ಅಧಿಕವಿರುತ್ತದೆ. ಇದರಿಂದಾಗಿ ಹೃದಯದ ಮೇಲೆ ಹೆಚ್ಚಿನ ಒತ್ತಡ ಉಂಟಾಗಿ ಅದು ಹೆಚ್ಚು ಕಠಿಣವಾಗಿ ಕೆಲಸದಲ್ಲಿ ತೊಡಗುವಂತಾಗುತ್ತದೆ. ಹೃದಯಾಘಾತ ಸಂಭವಿಸುವ ಸಾಧ್ಯತೆಯುಳ್ಳ ಅಥವಾ ಈಗಾಗಲೇ ಹೃದಯ ಸಂಬಂಧಿ ತೊಂದರೆಗಳಿಂದ ಬಳಲುತ್ತಿರುವವರಲ್ಲಿ ಹೃದಯಾಘಾತದ ಪ್ರಮಾಣ ಇನ್ನೂ ಹೆಚ್ಚು. 

ಅಲ್ಲದೆ, ಚಳಿಗಾಲದಲ್ಲಿ ಸಂಭವಿಸುವ ಹೃದಯಾಘಾತ ಹೆಚ್ಚು ಗಂಭೀರ ಸ್ವರೂಪದ್ದಾಗಿರುತ್ತದೆ. ಚಳಿಗಾಲದಲ್ಲಿ ಕೊಬ್ಬರಿ ಎಣ್ಣೆ ಗಟ್ಟಿಯಾಗುವುದನ್ನು ಗಮನಿಸಿದ್ದೀರಿ. ರಕ್ತದ ಚಲನೆ ಕಡಿಮೆಯಾಗಿ ಕೊಬ್ಬು ಅಧಿಕವಿದ್ದರೆ ಇಂಥ ಅಪಾಯ ದೇಹದೊಳಗೂ ಸಂಭವಿಸೀತು!

Heart problems

ಹೃದಯದ ಹೊರಗೆ ಗೋಡೆಗಳಲ್ಲಿ ಸೂಕ್ಷ್ಮತಿಸೂಕ್ಷ್ಮ ಕಿರುನಾಳಗಳಲ್ಲಿ ರಕ್ತ ಪ್ರವಾಹ ನಿರಂತರವಾಗಿರಬೇಕು. ಆದರೆ, ಚಳಿಯ ದಿನಗಳಲ್ಲಿ ಇದು ಸಾಧ್ಯವಾಗದೆ ಹೋಗಬಹುದು. ಕಿರುನಾಳಗಳ ಒಳಪದರ ಕಿರಿದಾಗಿದ್ದರೆ, ಕೊಬ್ಬಿನ ಕರಣೆ ಕಟ್ಟಿದರಂತೂ ಸಂಚಾರ ಕಠಿಣ. ಆಗಲೂ ಹೃದಯಾಘಾತ ಕಟ್ಟಿಟ್ಟ ಬುತ್ತಿ. ರೋಗಿಗೆ ಶೇ.30 ಮಾರ್ಗ ಕಿರಿದಾಗಿದೆ ಎಂದರೆ, ಅದು ಉಳಿದ ದಿನಗಳಂತಲ್ಲ. ಚಳಿಯಲ್ಲಿ ಅದು ಶೇ.70ಕ್ಕೆ ಸಮ!

ಹೃದಯಾಘಾತ ಸಂಭವಿಸಿದ ಕ್ಷಣಗಳಲ್ಲಿ ಹೃದಯ ಬಡಿತದ ಮೇಲೆ ವಾತಾವರಣದಲ್ಲಿ ಆಗುವ ಏರುಪೇರುಗಳೂ ಪ್ರಭಾವ ಬೀರುತ್ತವೆ. ‘ಡಿ’ ಜೀವಸತ್ವದ ಕೊರತೆಯೂ ಹಾರ್ಟ್ ಅಟ್ಯಾಕ್‌ಗೆ ಕಾರಣ ಆಗಬಹುದು. ಸೂರ್ಯನ ಕಿರಣ ‘ಡಿ’ ಜೀವಸತ್ವದ ಆಕರ. ಚಳಿಗಾಲದಲ್ಲಿ ಮನೆಯೊಳಗೇ ಇದ್ದರೆ, ದೇಹದಲ್ಲಿ ವಿಟಮಿನ್ ‘ಡಿ’ ಉತ್ಪಾದನೆ ಕಡಿಮೆಯಾಗುತ್ತದೆ. ವೈದ್ಯವಿಜ್ಞಾನದ ಸಂಶೋಧನೆಗಳ ಪ್ರಕಾರ, ಎತ್ತರ ಪ್ರದೇಶಗಳ ಜನರಿಗೆ ಹೃದಯಾಘಾತದ ರಿಸ್ಕ್ ಕಡಿಮೆಯಂತೆ. 

ಏಕೆಂದರೆ ಎತ್ತರಕ್ಕೆ ಹೋದಂತೆ ಸೂರ್ಯನ ಕಿರಣಗಳಲ್ಲಿನ ಅಲ್ಟ್ರಾವೈಲೆಟ್ ಪ್ರಮಾಣ ಹೆಚ್ಚಿ, ವಿಟಮಿನ್ ‘ಡಿ’ ಉತ್ಪಾದನೆ ಪ್ರಮಾಣವೂ ಅಧಿಕವಾಗುತ್ತದೆ. ಈ ಕಾರಣದಿಂದಲೇ ರಕ್ತದೊತ್ತಡ ಇಲ್ಲದ, ಕೊಲೆಸ್ಟೆರಾಲ್ ಕಡಿಮೆ ಇರುವ ಕೆಳ ಪ್ರದೇಶದ ಜನರಲ್ಲೂ ಹೃದಯಾಘಾತದ ಪ್ರಮಾಣ ಅಧಿಕವಿರುತ್ತದೆ!

ಚಳಿಗಾಲದಲ್ಲಿ ಎಲ್ಲರೂ ಆಲಸಿಗಳೇ.
ಮಧುಮೇಹ ರೋಗವು ಈ ಕಾಲದಲ್ಲಿ ಉಲ್ಬಣಿಸುತ್ತದೆ. ಸ್ಥೂಲ ಕಾಯಗಳನ್ನು ಕಂಡರೆ ಹೃದಯಾಘಾತಕ್ಕೆ ಎಲ್ಲಿಲ್ಲದ ಪ್ರೀತಿ! ಚಳಿಗಾಲದಲ್ಲಿ ಸಾಮಾನ್ಯವಾಗಿ ಹಸಿವು ಹೆಚ್ಚಾಗುತ್ತದೆ. ವೈರಸ್‌ಗಳು ಹೆಚ್ಚು ಕ್ರಿಯಾಶೀಲಗೊಳ್ಳುವುದೂ ಇದೇ ವೇಳೆಯೇ. ಚಳಿಯಲ್ಲಿ ಕುರುಕಲು ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುವುದರಿಂದ ಇದೂ ಹೃದಯದ ಆರೋಗ್ಯಕ್ಕೆ ಮಾರಕ ಆಗಬಹುದು.

ಹೃದಯಾಘಾತ

ಆಘಾತ ತಪ್ಪಿಸಲು ಇಷ್ಟು ಮಾಡಿ
– ತೀರಾ ನಸುಕಿನಲ್ಲಿ ವಾಕಿಂಗ್‌ಗೆ ಹೋಗಬೇಡಿ. ಹಾಗೆಂದು ಸುಮ್ಮನೆ ಹೊದ್ದು ಮಲಗ್ಬೇಡಿ.
– ಚಳಿಗಾಲದಲ್ಲಿ ಹೆಚ್ಚು ಆ್ಯಕ್ಟಿವ್ ಇರಿ.
– ಬೆಚ್ಚಗಿನ ಬಟ್ಟೆ ಧರಿಸಿ.
– ಬಿಪಿ, ಶುಗರ್ ಕಂಟ್ರೋಲ್‌ನಲ್ಲಿರಲಿ.
– ಶ್ವಾಸಕೋಶದ ಸಮಸ್ಯೆ ಕಂಡು ಬಂದಲ್ಲಿ, ಸೂಕ್ತ ಚಿಕಿತ್ಸೆ ಪಡೆಯಿರಿ..
– ಉಸಿರಾಟದ ಸಮಸ್ಯೆ ಕಂಡು ಬಂದಲ್ಲಿ, ತಕ್ಷಣವೇ ವೈದ್ಯರನ್ನು ಭೇಟಿಯಾಗಿ.
– ಲಘು ಆಹಾರ ಸೇವಿಸಿ. ಕೊಬ್ಬು ಹೆಚ್ಚಿರುವ, ಮದ್ಯ, ಧೂಮಪಾನ ವರ್ಜಿಸಿ. 
– ಕೋಣೆಯೊಳಗೆ ತಣ್ಣನೆ ಗಾಳಿ ಸುಳಿಯದಂತೆ ಎಚ್ಚರ ವಹಿಸಿ. 

Published by

Mayoon N / Biotechnologist / Director of DRM Career Build Center, Kolar

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಮೆಜಾನ್‌ನಲ್ಲಿ ಹಿಂದೂ ದೇವರ ಭಾವಚಿತ್ರವುಳ್ಳ ಟಾಯ್ಲೆಟ್‌ ಸೀಟ್‌ ಮಾರಾಟ: ಪ್ರಜೆಗಳಿಂದ ಆಕ್ರೋಶ

    ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್‌ನಲ್ಲಿ ಶೂ, ರಗ್‌ಗಳು ಹಾಗೂ ಟಾಯ್ಲೆಟ್‌ ಸೀಟ್‌ ಕವರ್‌ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ಅಮೆಜಾನ್‌ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್‌ ಮತ್ತೆ ಟೀಕೆಗೆ ಗುರಿಯಾಗಿದೆ. ಈ ಬಾರಿ ಹಿಂದೂ ದೇವರ ಭಾವಚಿತ್ರಗಳುಳ್ಳ ಟಾಯ್ಲೆಟ್‌ ಸೀಟ್‌ ಕವರ್‌ಗಳನ್ನು, ಶೂಗಳನ್ನು ಹಾಗೂ ರಗ್‌ಗಳನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡಲಾಗುತ್ತಿದೆ. ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ…

  • ಸುದ್ದಿ

    ಇನ್ಫೋಸಿಸ್ ದಂಪತಿಗಳ ಸಿನಿಮಾದಲ್ಲಿ ಸುಧಾ ಮೂರ್ತಿಯವರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಬಾಲಿವುಡ್ ನ ಈ ಸ್ಟಾರ್ ನಟಿ..!ಆ ನಟಿ ಯಾರು?

    ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್​​ ನಾರಾಯಣ​​ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್​ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್​ನಲ್ಲಿ ವೇದಿಕೆ ಸಿದ್ಧವಾಗಿದೆ.ಈಗಾಗಲೆ ಚಿತ್ರಕ್ಕೆ ‘ಮೂರ್ತಿ’ ಎಂದು ಟೈಟಲ್ ಇಡಲಾಗಿದೆ. ಆದರೆ ಈಗ  ಪ್ರೇಕ್ಷಕರಲ್ಲಿ ಸುಧಾ ಮೂರ್ತಿ ಪಾತ್ರದಲ್ಲಿಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸುಧಾಮೂರ್ತಿ ಜೀವನವನ್ನು ತೆರೆಮೇಲೆ ತರುವ ಸಾಹಸಕ್ಕೆ ಕೈ ಹಾಕಿರುವುದು ಬಾಲಿವುಡ್ ನ ಖ್ಯಾತನಿರ್ದೇಶಕಿ ಅಶ್ವಿನಿ ಅಯ್ಯರ್ ತಿವಾರಿ. ಈಗಾಗಲೆ ಸ್ಕ್ರಿಪ್ಟ್ ಫೈನಲ್ ಮಾಡಿಕೊಂಡಿರುವ ಅಶ್ವಿನಿ ಪಾತ್ರಗಳ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಅವರ…

  • Cinema

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳಿಂದ ಮತ್ತೊಂದು ಬಿರುದು….! ಏನೆಂದು ತಿಳಿಯಲು ಇದನ್ನೊಮ್ಮೆ ಓದಿ.

    ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ. ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ. ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ….

  • ಮನರಂಜನೆ

    ನಾನು ಈ ಕೆಲಸ ಮಾಡಿದ್ದರೆ ಬಿಗ್ ಬಾಸ್ ಗೆಲ್ಲುತ್ತಿದ್ದೆ ಎಂದ ರ್ಯಾಪಿಡ್ ರಶ್ಮಿ..!ರಶ್ಮಿ ಲೈವ್ ನಲ್ಲಿ ಹೇಳಿದ್ದೇನು ಗೊತ್ತಾ..?

    ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್‍ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ..  ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ…

  • ಸುದ್ದಿ

    ರೈತ ಯುವಕನನ್ನು ಮಾಡುವೆ ಆಗೋ ಹುಡುಗಿಗೆ ಸಿಗಲಿದೆ ಒಂದು ಲಕ್ಷ ಬಂಪರ್ ಆಫರ್..!

    ಉತ್ತರ ಕನ್ನಡ ಜಿಲ್ಲೆಯ ಯೆಲ್ಲಾಪುರ ಗ್ರಾಮದ ಸಹಕಾರ ಸೊಸೈಟಿ  ಶಾದಿಭಾಗ್ಯ ಯೋಜನೆಯಡಿ ಬಂಪರ್ ಬಹುಮಾನ ಘೋಷಿಸಿದೆ.ಆನಗೋಡು ಗ್ರಾಮದ ರೈತನನ್ನು ವಿವಾಹವಾದ ಯಾವುದೇ ಯುವತಿಯ ಅಕೌಂಟ್ ಗೆ 1 ಲಕ್ಷ ರು ಹಣ ಡೆಪಾಸಿಟ್ ಮಾಡಲಾಗುವುದು. ಈ ಆಫರ್ ಆನಗೋಡು ಗ್ರಾಮಸ್ಥರಿಗೆ ಹಾಗೂ ಆನಗೋಡು ಸೇವಾ ಸಹಕಾರಿ ಸಂಘದ ಸದಸ್ಯರಿಗೆ  ಮಾತ್ರ ಅನ್ವಯಿಸುತ್ತಿದೆ.ಈ ಯೋಜನೆ 2019ರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಸಹಾಯಕರಾಗಿರುವ ಕುಟುಂಬಗಳಿಗೆ ಧನ ಸಹಾಯವಾಗಲಿದೆ, ಭವಿಷ್ಯದಲ್ಲಿ ಅವರಿಗೆ ಸಹಾಯವಾಗಲಿ ಎಂಬ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಇಂದಿನ ನಿಮ್ಮ ಭವಿಷ್ಯ ಶುಭವೋ ಅಶುಭವೋ, ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಭಾನುವಾರ, 8/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು : 9663542672 ಸೂರ್ಯೋದಯ : 06:14 ಸೂರ್ಯಾಸ್ತ : 18:43 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ಸಪ್ತಮಿ ನಕ್ಷತ್ರ : ಪೂರ್ವಷಾಡ…