News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
inspirational

ಹೃದಯಾಘಾತ ( Heart attack ) ತಪ್ಪಿಸಲು ಇಲ್ಲಿವೆ ಸಿಂಪಲ್ ಟಿಪ್ಸ್

121
Heart attack

ಚಳಿಗೂ ಹಾರ್ಟ್ ಅಟ್ಯಾಕ್‌ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆ
ಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್‌ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ.

ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ ಹೆಚ್ಚಿನ ಪ್ರಮಾಣದ ಸಿಂಥೇಜಿಕ್ ಡಿಸ್ಟಾರ್ಜ್ ಅಂದರೆ ಅಡ್ರಿನಾಲಿನ್ ಪಂಪಿಂಗ್ ಅಧಿಕವಿರುತ್ತದೆ. ಇದರಿಂದಾಗಿ ಹೃದಯದ ಮೇಲೆ ಹೆಚ್ಚಿನ ಒತ್ತಡ ಉಂಟಾಗಿ ಅದು ಹೆಚ್ಚು ಕಠಿಣವಾಗಿ ಕೆಲಸದಲ್ಲಿ ತೊಡಗುವಂತಾಗುತ್ತದೆ. ಹೃದಯಾಘಾತ ಸಂಭವಿಸುವ ಸಾಧ್ಯತೆಯುಳ್ಳ ಅಥವಾ ಈಗಾಗಲೇ ಹೃದಯ ಸಂಬಂಧಿ ತೊಂದರೆಗಳಿಂದ ಬಳಲುತ್ತಿರುವವರಲ್ಲಿ ಹೃದಯಾಘಾತದ ಪ್ರಮಾಣ ಇನ್ನೂ ಹೆಚ್ಚು. 

ಅಲ್ಲದೆ, ಚಳಿಗಾಲದಲ್ಲಿ ಸಂಭವಿಸುವ ಹೃದಯಾಘಾತ ಹೆಚ್ಚು ಗಂಭೀರ ಸ್ವರೂಪದ್ದಾಗಿರುತ್ತದೆ. ಚಳಿಗಾಲದಲ್ಲಿ ಕೊಬ್ಬರಿ ಎಣ್ಣೆ ಗಟ್ಟಿಯಾಗುವುದನ್ನು ಗಮನಿಸಿದ್ದೀರಿ. ರಕ್ತದ ಚಲನೆ ಕಡಿಮೆಯಾಗಿ ಕೊಬ್ಬು ಅಧಿಕವಿದ್ದರೆ ಇಂಥ ಅಪಾಯ ದೇಹದೊಳಗೂ ಸಂಭವಿಸೀತು!

Heart problems

ಹೃದಯದ ಹೊರಗೆ ಗೋಡೆಗಳಲ್ಲಿ ಸೂಕ್ಷ್ಮತಿಸೂಕ್ಷ್ಮ ಕಿರುನಾಳಗಳಲ್ಲಿ ರಕ್ತ ಪ್ರವಾಹ ನಿರಂತರವಾಗಿರಬೇಕು. ಆದರೆ, ಚಳಿಯ ದಿನಗಳಲ್ಲಿ ಇದು ಸಾಧ್ಯವಾಗದೆ ಹೋಗಬಹುದು. ಕಿರುನಾಳಗಳ ಒಳಪದರ ಕಿರಿದಾಗಿದ್ದರೆ, ಕೊಬ್ಬಿನ ಕರಣೆ ಕಟ್ಟಿದರಂತೂ ಸಂಚಾರ ಕಠಿಣ. ಆಗಲೂ ಹೃದಯಾಘಾತ ಕಟ್ಟಿಟ್ಟ ಬುತ್ತಿ. ರೋಗಿಗೆ ಶೇ.30 ಮಾರ್ಗ ಕಿರಿದಾಗಿದೆ ಎಂದರೆ, ಅದು ಉಳಿದ ದಿನಗಳಂತಲ್ಲ. ಚಳಿಯಲ್ಲಿ ಅದು ಶೇ.70ಕ್ಕೆ ಸಮ!

ಹೃದಯಾಘಾತ ಸಂಭವಿಸಿದ ಕ್ಷಣಗಳಲ್ಲಿ ಹೃದಯ ಬಡಿತದ ಮೇಲೆ ವಾತಾವರಣದಲ್ಲಿ ಆಗುವ ಏರುಪೇರುಗಳೂ ಪ್ರಭಾವ ಬೀರುತ್ತವೆ. ‘ಡಿ’ ಜೀವಸತ್ವದ ಕೊರತೆಯೂ ಹಾರ್ಟ್ ಅಟ್ಯಾಕ್‌ಗೆ ಕಾರಣ ಆಗಬಹುದು. ಸೂರ್ಯನ ಕಿರಣ ‘ಡಿ’ ಜೀವಸತ್ವದ ಆಕರ. ಚಳಿಗಾಲದಲ್ಲಿ ಮನೆಯೊಳಗೇ ಇದ್ದರೆ, ದೇಹದಲ್ಲಿ ವಿಟಮಿನ್ ‘ಡಿ’ ಉತ್ಪಾದನೆ ಕಡಿಮೆಯಾಗುತ್ತದೆ. ವೈದ್ಯವಿಜ್ಞಾನದ ಸಂಶೋಧನೆಗಳ ಪ್ರಕಾರ, ಎತ್ತರ ಪ್ರದೇಶಗಳ ಜನರಿಗೆ ಹೃದಯಾಘಾತದ ರಿಸ್ಕ್ ಕಡಿಮೆಯಂತೆ. 

ಏಕೆಂದರೆ ಎತ್ತರಕ್ಕೆ ಹೋದಂತೆ ಸೂರ್ಯನ ಕಿರಣಗಳಲ್ಲಿನ ಅಲ್ಟ್ರಾವೈಲೆಟ್ ಪ್ರಮಾಣ ಹೆಚ್ಚಿ, ವಿಟಮಿನ್ ‘ಡಿ’ ಉತ್ಪಾದನೆ ಪ್ರಮಾಣವೂ ಅಧಿಕವಾಗುತ್ತದೆ. ಈ ಕಾರಣದಿಂದಲೇ ರಕ್ತದೊತ್ತಡ ಇಲ್ಲದ, ಕೊಲೆಸ್ಟೆರಾಲ್ ಕಡಿಮೆ ಇರುವ ಕೆಳ ಪ್ರದೇಶದ ಜನರಲ್ಲೂ ಹೃದಯಾಘಾತದ ಪ್ರಮಾಣ ಅಧಿಕವಿರುತ್ತದೆ!

ಚಳಿಗಾಲದಲ್ಲಿ ಎಲ್ಲರೂ ಆಲಸಿಗಳೇ.
ಮಧುಮೇಹ ರೋಗವು ಈ ಕಾಲದಲ್ಲಿ ಉಲ್ಬಣಿಸುತ್ತದೆ. ಸ್ಥೂಲ ಕಾಯಗಳನ್ನು ಕಂಡರೆ ಹೃದಯಾಘಾತಕ್ಕೆ ಎಲ್ಲಿಲ್ಲದ ಪ್ರೀತಿ! ಚಳಿಗಾಲದಲ್ಲಿ ಸಾಮಾನ್ಯವಾಗಿ ಹಸಿವು ಹೆಚ್ಚಾಗುತ್ತದೆ. ವೈರಸ್‌ಗಳು ಹೆಚ್ಚು ಕ್ರಿಯಾಶೀಲಗೊಳ್ಳುವುದೂ ಇದೇ ವೇಳೆಯೇ. ಚಳಿಯಲ್ಲಿ ಕುರುಕಲು ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುವುದರಿಂದ ಇದೂ ಹೃದಯದ ಆರೋಗ್ಯಕ್ಕೆ ಮಾರಕ ಆಗಬಹುದು.

ಹೃದಯಾಘಾತ

ಆಘಾತ ತಪ್ಪಿಸಲು ಇಷ್ಟು ಮಾಡಿ
– ತೀರಾ ನಸುಕಿನಲ್ಲಿ ವಾಕಿಂಗ್‌ಗೆ ಹೋಗಬೇಡಿ. ಹಾಗೆಂದು ಸುಮ್ಮನೆ ಹೊದ್ದು ಮಲಗ್ಬೇಡಿ.
– ಚಳಿಗಾಲದಲ್ಲಿ ಹೆಚ್ಚು ಆ್ಯಕ್ಟಿವ್ ಇರಿ.
– ಬೆಚ್ಚಗಿನ ಬಟ್ಟೆ ಧರಿಸಿ.
– ಬಿಪಿ, ಶುಗರ್ ಕಂಟ್ರೋಲ್‌ನಲ್ಲಿರಲಿ.
– ಶ್ವಾಸಕೋಶದ ಸಮಸ್ಯೆ ಕಂಡು ಬಂದಲ್ಲಿ, ಸೂಕ್ತ ಚಿಕಿತ್ಸೆ ಪಡೆಯಿರಿ..
– ಉಸಿರಾಟದ ಸಮಸ್ಯೆ ಕಂಡು ಬಂದಲ್ಲಿ, ತಕ್ಷಣವೇ ವೈದ್ಯರನ್ನು ಭೇಟಿಯಾಗಿ.
– ಲಘು ಆಹಾರ ಸೇವಿಸಿ. ಕೊಬ್ಬು ಹೆಚ್ಚಿರುವ, ಮದ್ಯ, ಧೂಮಪಾನ ವರ್ಜಿಸಿ. 
– ಕೋಣೆಯೊಳಗೆ ತಣ್ಣನೆ ಗಾಳಿ ಸುಳಿಯದಂತೆ ಎಚ್ಚರ ವಹಿಸಿ. 

Published by

Mayoon N / Biotechnologist / Director of DRM Career Build Center, Kolar

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಪದೇ ಪದೇ ಫೋನ್ ಹ್ಯಾಂಗ್ ಆಗುತ್ತಿದ್ದರೆ ಈ ಒಂದು ಕೆಲಸ ಮಾಡಿ ಸಾಕು.!

    ಹೆಚ್ಚಿನ ಜನರು ಫೋನ್ ಹ್ಯಾಂಗ್‌ಗಳ ಸಮಸ್ಯೆಯಿಂದ ಅಥವಾ ನಿಧಾನವಾಗಿರುವುದರಿಂದ ತೊಂದರೆಗೀಡಾಗುತ್ತಾರೆ. ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ನೀವು ಸಹ ಈ ರೀತಿಯ ತೊಂದರೆಯಿಂದ ಬಳಲುತ್ತಿದ್ದರೆ, ಈ ಸಮಸ್ಯೆಯಿಂದ ನಿಮಗೆ ಮುಕ್ತಿ ನೀಡಲು ಐದು ಕ್ರಮಗಳನ್ನು ಅನುಸರಿಸಿ. ಈ ಕ್ರಮಗಳೊಂದಿಗೆ ನಿಮ್ಮ ಫೋನ್ ಸ್ಥಗಿತಗೊಳ್ಳುವುದನ್ನು ಅಥವಾ ನಿಧಾನಗೊಳಿಸುವುದನ್ನು ಸಹ ನೀವು ನಿಲ್ಲಿಸಬಹುದು. ಕೆಲವೊಮ್ಮೆ ಫೋನ್‌ನ ಮೆಮೊರಿ ತುಂಬಿರುತ್ತದೆ. ಆದ್ದರಿಂದ ಫೋನ್ ನಿಧಾನವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ. ಫೋನ್‌ನ ಆಂತರಿಕ ಸ್ಥಳದ ಹೊರತಾಗಿ, ಫೋನ್ ನಿಧಾನವಾಗಲು ಫೋನ್‌ನ RAM ಸಹ ಕಾರಣವಾಗಿದೆ. ನಿಮ್ಮ ಫೋನ್…

  • ಸುದ್ದಿ

    ಅನಾಥ ಯುವತಿಯರನ್ನು ಮದುವೆಯಾದ ಅಂಕೋಲದ ಯುವಕರು ವಿಜೃಂಭಣೆಯಿಂದ, ಶಾಸ್ತ್ರೋಕ್ತವಾಗಿ ಧಾರೆಯೆರೆದು ಕೊಟ್ಟ ಮಾತೃಛಾಯಾ ಟ್ರಸ್ಟ್…!

    ಕನಸನ್ನು ಹೊತ್ತಿರುವ ಅನಾಥರ ಬಾಳಲ್ಲಿ ಬೆಳಗುವ ದೀಪದಂತೆ ಅವರ ಜೀವನ ಸಾಕಾರಗೊಳಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯ ಸೇವಾಭಾರತಿ ಟ್ರಸ್ಟ್​ನಿಂದ ಕಳೆದ 25 ವರ್ಷಗಳಿಂದ ಆರಂಭಿಸಿರುವ ಮಾತೃಛಾಯಾ ಬಾಲ ಕಲ್ಯಾಣ ಕೇಂದ್ರದ ಆಶ್ರಯದಲ್ಲಿ ಬೆಳೆದ ಇಬ್ಬರು ಹೆಣ್ಣು ಮಕ್ಕಳ ಬಾಳಿಗೆ ಇಂದು ಹೊಸ ಜೀವನ ನೀಡಲಾಯಿತು. ಚಿಕ್ಕಂದಿನಿಂದಲೂ ಮನೆಯ ಮಕ್ಕಳಂತೆ ಮಾತೃಛಾಯಾ ಟ್ರಸ್ಟ್ ಆಶ್ರಮದಲ್ಲಿ ಬೆಳೆದ ಜಾಹ್ನವಿ ಹಾಗೂ ಸಂಜನಾ ಎಂಬ ಯುವತಿಯರು ಇವತ್ತು ಅಂಕೋಲಾ ಮೂಲದ ಹುಡುಗರನ್ನು ವರಿಸಿದರು. ಮನೆಯ ಮಕ್ಕಳಂತೆ ಪೋಷಣೆ ಮಾಡಿದ್ದ ಟ್ರಸ್ಟ್ ಇಂದು ಅತ್ಯಂತ…

  • ಸೌಂದರ್ಯ

    ಮನೆಯ ಡಬ್ಬಿಯಲ್ಲಿರುವ ಇದು ಈ 5 ಆರೋಗ್ಯ ಮತ್ತು ಸೌಂದರ್ಯ ತರುವ ಗುಣಗಳನ್ನು ಹೊಂದಿದೆ!!!

    ಅರಿಶಿನವು ಭಾರತೀಯ ಅಡುಗೆಮನೆಯಲ್ಲಿ ಬಳಸಲಾಗುವ ಪ್ರಸಿದ್ಧ ಮಸಾಲೆಯಾಗಿದೆ. ಆಹಾರಕ್ಕಾಗಿ ಸುವಾಸನೆಯನ್ನು ಮತ್ತು ರುಚಿಯನ್ನು ಸೇರಿಸುವುದರ ಜೊತೆಗೆ, ನಿಮಗೆ ಗೊತ್ತಿಲ್ಲದ ಅರಿಶಿನದ ಇನ್ನೂ 5 ಉಪಯೋಗಗಳಿವೆ.

  • ಸುದ್ದಿ

    ಸ್ಟೇಷನ್‌ ಮಾಸ್ಟರ್‌ ನಿರ್ಲಕ್ಷ್ಯಕ್ಕೆ ರೈಲ್ವೇ ಸಿಬ್ಬಂದಿ ಬಲಿ…!

    ರೈಲ್ವೆ ಹಳಿಯಲ್ಲಿ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ಹೌರಾ- ಜಗದಾಲ್ಪುರ ಸಮಲೇಶ್ವರಿ ಎಕ್ಸ್‌ಪ್ರೆಸ್‌ ರೈಲು ಆಗಮಿಸಿದ್ದು ಅಪಘಾತಕ್ಕೆ ಕಾರಣವಾಗಿದೆ. ರೈಲ್ವೆ ಹಳಿ ನಿರ್ವಹಣೆ ಮಾಡುವ ನಿರ್ವಹಣಾ ಕಾರಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗಲೇ ಅದೇ ದಾರಿಯಲ್ಲಿ ಸಮಲೇಶ್ವರಿ ಎಕ್ಸ್ ಪ್ರೆಸ್ ಬಂದಿದೆ. ಈ ಘಟನೆಯಿಂದ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲಿನ ಕೆಲವು ಬೋಗಿಗಳು ಹಳಿ ತಪ್ಪಿದ್ದು ಎಂಜಿನ್ ಗೆ ಹಾನಿಯಾಗಿದೆ. ಆದರೆ ರೈಲು ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ ಎನ್ನಲಾಗಿದೆ. ರೈಲ್ವೆ ಹಳಿ ನಿರ್ವಹಣೆ ನಡೆಯುವಾಗಲೇ ರೈಲು ಸಂಚಾರಕ್ಕೆ…

  • ಸುದ್ದಿ

    65 ವರ್ಷದ ವೃದ್ಧೆಯೊಬ್ಬರು ಕಳೆದ 19 ವರ್ಷಗಳಿಂದ ಸಾರ್ವಜನಿಕ ಶೌಚಾಲಯದಲ್ಲೇ ಜೀವನವನ್ನು ನಡೆಸುತ್ತಿದ್ದಾರೆ,..ಇದಕ್ಕೆ ಕಾರಣವೇನೆಂದು ತಿಳಿಯಿರಿ..?

    ಚೆನ್ನೈನ  65 ವರ್ಷದ ವೃದ್ಧೆಯೊಬ್ಬರು ಕಳೆದ 19 ವರ್ಷಗಳಿಂದ ಸಾರ್ವಜನಿಕ ಶೌಚಾಲಯದಲ್ಲೇ ಜೀವನ ನಡೆಸುತ್ತಿರುವ ಮನಕಲಕುವ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ವಾಸಿಸಲು ಮನೆ ಇಲ್ಲದ ಕಾರಣದಿಂದಾಗಿ ಕರುಪ್ಪಾಯಿ ಅವರು ಶೌಚಾಲಯದ ಕೋಣೆಯಲ್ಲೇ ವಾಸವಾಗಿದ್ದಾರೆ. ವೃದ್ಧೆ ಕರುಪ್ಪಾಯಿ ಸಾರ್ವಜನಿಕ ಶೌಚಾಲಯ ಸ್ವಚ್ಛಗೊಳಿಸಿ ಅದರಿಂದ ಬರುವ ಹಣದಿಂದಲೇ ಜೀವನ ನಡೆಸುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ವೃದ್ಧೆ, ಹಿರಿಯ ನಾಗರಿಕ ಪಿಂಚಣಿಗಾಗಿ ನಾನು ಅನೇಕ ಬಾರಿ ಅರ್ಜಿ ಸಲ್ಲಿಸಿದ್ದೇನೆ. ಅದು ಆಗದಿದ್ದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯನ್ನು ಭೇಟಿಯಾಗಿದ್ದೇನೆ….

  • ಸುದ್ದಿ

    ವಿದ್ಯಾರ್ಥಿನಿ ವರಲಕ್ಷ್ಮಿ ಸೋಲಿಗೆ ಕಾರಣವಾಯಿತು ಅವರ ಟೀಚರ್ ಮಾಡಿದ ಎಡವಟ್ಟು…!

    ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…