ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಚಳಿಗೂ ಹಾರ್ಟ್ ಅಟ್ಯಾಕ್ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆ
ಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ.
ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ ಹೆಚ್ಚಿನ ಪ್ರಮಾಣದ ಸಿಂಥೇಜಿಕ್ ಡಿಸ್ಟಾರ್ಜ್ ಅಂದರೆ ಅಡ್ರಿನಾಲಿನ್ ಪಂಪಿಂಗ್ ಅಧಿಕವಿರುತ್ತದೆ. ಇದರಿಂದಾಗಿ ಹೃದಯದ ಮೇಲೆ ಹೆಚ್ಚಿನ ಒತ್ತಡ ಉಂಟಾಗಿ ಅದು ಹೆಚ್ಚು ಕಠಿಣವಾಗಿ ಕೆಲಸದಲ್ಲಿ ತೊಡಗುವಂತಾಗುತ್ತದೆ. ಹೃದಯಾಘಾತ ಸಂಭವಿಸುವ ಸಾಧ್ಯತೆಯುಳ್ಳ ಅಥವಾ ಈಗಾಗಲೇ ಹೃದಯ ಸಂಬಂಧಿ ತೊಂದರೆಗಳಿಂದ ಬಳಲುತ್ತಿರುವವರಲ್ಲಿ ಹೃದಯಾಘಾತದ ಪ್ರಮಾಣ ಇನ್ನೂ ಹೆಚ್ಚು.
ಅಲ್ಲದೆ, ಚಳಿಗಾಲದಲ್ಲಿ ಸಂಭವಿಸುವ ಹೃದಯಾಘಾತ ಹೆಚ್ಚು ಗಂಭೀರ ಸ್ವರೂಪದ್ದಾಗಿರುತ್ತದೆ. ಚಳಿಗಾಲದಲ್ಲಿ ಕೊಬ್ಬರಿ ಎಣ್ಣೆ ಗಟ್ಟಿಯಾಗುವುದನ್ನು ಗಮನಿಸಿದ್ದೀರಿ. ರಕ್ತದ ಚಲನೆ ಕಡಿಮೆಯಾಗಿ ಕೊಬ್ಬು ಅಧಿಕವಿದ್ದರೆ ಇಂಥ ಅಪಾಯ ದೇಹದೊಳಗೂ ಸಂಭವಿಸೀತು!

ಹೃದಯದ ಹೊರಗೆ ಗೋಡೆಗಳಲ್ಲಿ ಸೂಕ್ಷ್ಮತಿಸೂಕ್ಷ್ಮ ಕಿರುನಾಳಗಳಲ್ಲಿ ರಕ್ತ ಪ್ರವಾಹ ನಿರಂತರವಾಗಿರಬೇಕು. ಆದರೆ, ಚಳಿಯ ದಿನಗಳಲ್ಲಿ ಇದು ಸಾಧ್ಯವಾಗದೆ ಹೋಗಬಹುದು. ಕಿರುನಾಳಗಳ ಒಳಪದರ ಕಿರಿದಾಗಿದ್ದರೆ, ಕೊಬ್ಬಿನ ಕರಣೆ ಕಟ್ಟಿದರಂತೂ ಸಂಚಾರ ಕಠಿಣ. ಆಗಲೂ ಹೃದಯಾಘಾತ ಕಟ್ಟಿಟ್ಟ ಬುತ್ತಿ. ರೋಗಿಗೆ ಶೇ.30 ಮಾರ್ಗ ಕಿರಿದಾಗಿದೆ ಎಂದರೆ, ಅದು ಉಳಿದ ದಿನಗಳಂತಲ್ಲ. ಚಳಿಯಲ್ಲಿ ಅದು ಶೇ.70ಕ್ಕೆ ಸಮ!
ಹೃದಯಾಘಾತ ಸಂಭವಿಸಿದ ಕ್ಷಣಗಳಲ್ಲಿ ಹೃದಯ ಬಡಿತದ ಮೇಲೆ ವಾತಾವರಣದಲ್ಲಿ ಆಗುವ ಏರುಪೇರುಗಳೂ ಪ್ರಭಾವ ಬೀರುತ್ತವೆ. ‘ಡಿ’ ಜೀವಸತ್ವದ ಕೊರತೆಯೂ ಹಾರ್ಟ್ ಅಟ್ಯಾಕ್ಗೆ ಕಾರಣ ಆಗಬಹುದು. ಸೂರ್ಯನ ಕಿರಣ ‘ಡಿ’ ಜೀವಸತ್ವದ ಆಕರ. ಚಳಿಗಾಲದಲ್ಲಿ ಮನೆಯೊಳಗೇ ಇದ್ದರೆ, ದೇಹದಲ್ಲಿ ವಿಟಮಿನ್ ‘ಡಿ’ ಉತ್ಪಾದನೆ ಕಡಿಮೆಯಾಗುತ್ತದೆ. ವೈದ್ಯವಿಜ್ಞಾನದ ಸಂಶೋಧನೆಗಳ ಪ್ರಕಾರ, ಎತ್ತರ ಪ್ರದೇಶಗಳ ಜನರಿಗೆ ಹೃದಯಾಘಾತದ ರಿಸ್ಕ್ ಕಡಿಮೆಯಂತೆ.
ಏಕೆಂದರೆ ಎತ್ತರಕ್ಕೆ ಹೋದಂತೆ ಸೂರ್ಯನ ಕಿರಣಗಳಲ್ಲಿನ ಅಲ್ಟ್ರಾವೈಲೆಟ್ ಪ್ರಮಾಣ ಹೆಚ್ಚಿ, ವಿಟಮಿನ್ ‘ಡಿ’ ಉತ್ಪಾದನೆ ಪ್ರಮಾಣವೂ ಅಧಿಕವಾಗುತ್ತದೆ. ಈ ಕಾರಣದಿಂದಲೇ ರಕ್ತದೊತ್ತಡ ಇಲ್ಲದ, ಕೊಲೆಸ್ಟೆರಾಲ್ ಕಡಿಮೆ ಇರುವ ಕೆಳ ಪ್ರದೇಶದ ಜನರಲ್ಲೂ ಹೃದಯಾಘಾತದ ಪ್ರಮಾಣ ಅಧಿಕವಿರುತ್ತದೆ!
ಚಳಿಗಾಲದಲ್ಲಿ ಎಲ್ಲರೂ ಆಲಸಿಗಳೇ.
ಮಧುಮೇಹ ರೋಗವು ಈ ಕಾಲದಲ್ಲಿ ಉಲ್ಬಣಿಸುತ್ತದೆ. ಸ್ಥೂಲ ಕಾಯಗಳನ್ನು ಕಂಡರೆ ಹೃದಯಾಘಾತಕ್ಕೆ ಎಲ್ಲಿಲ್ಲದ ಪ್ರೀತಿ! ಚಳಿಗಾಲದಲ್ಲಿ ಸಾಮಾನ್ಯವಾಗಿ ಹಸಿವು ಹೆಚ್ಚಾಗುತ್ತದೆ. ವೈರಸ್ಗಳು ಹೆಚ್ಚು ಕ್ರಿಯಾಶೀಲಗೊಳ್ಳುವುದೂ ಇದೇ ವೇಳೆಯೇ. ಚಳಿಯಲ್ಲಿ ಕುರುಕಲು ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುವುದರಿಂದ ಇದೂ ಹೃದಯದ ಆರೋಗ್ಯಕ್ಕೆ ಮಾರಕ ಆಗಬಹುದು.

ಆಘಾತ ತಪ್ಪಿಸಲು ಇಷ್ಟು ಮಾಡಿ
– ತೀರಾ ನಸುಕಿನಲ್ಲಿ ವಾಕಿಂಗ್ಗೆ ಹೋಗಬೇಡಿ. ಹಾಗೆಂದು ಸುಮ್ಮನೆ ಹೊದ್ದು ಮಲಗ್ಬೇಡಿ.
– ಚಳಿಗಾಲದಲ್ಲಿ ಹೆಚ್ಚು ಆ್ಯಕ್ಟಿವ್ ಇರಿ.
– ಬೆಚ್ಚಗಿನ ಬಟ್ಟೆ ಧರಿಸಿ.
– ಬಿಪಿ, ಶುಗರ್ ಕಂಟ್ರೋಲ್ನಲ್ಲಿರಲಿ.
– ಶ್ವಾಸಕೋಶದ ಸಮಸ್ಯೆ ಕಂಡು ಬಂದಲ್ಲಿ, ಸೂಕ್ತ ಚಿಕಿತ್ಸೆ ಪಡೆಯಿರಿ..
– ಉಸಿರಾಟದ ಸಮಸ್ಯೆ ಕಂಡು ಬಂದಲ್ಲಿ, ತಕ್ಷಣವೇ ವೈದ್ಯರನ್ನು ಭೇಟಿಯಾಗಿ.
– ಲಘು ಆಹಾರ ಸೇವಿಸಿ. ಕೊಬ್ಬು ಹೆಚ್ಚಿರುವ, ಮದ್ಯ, ಧೂಮಪಾನ ವರ್ಜಿಸಿ.
– ಕೋಣೆಯೊಳಗೆ ತಣ್ಣನೆ ಗಾಳಿ ಸುಳಿಯದಂತೆ ಎಚ್ಚರ ವಹಿಸಿ.
Published by
Mayoon N / Biotechnologist / Director of DRM Career Build Center, Kolar
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ದಕ್ಷಿಣ ಭಾರತದ ಪ್ರಮುಖ ಬ್ರೇಕ್ಫಾಸ್ಟ್ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.
ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.
ಪಾಸಿಟೀವೋ, ನೆಗೆಟಿವೋ.. ಒಟ್ನಲ್ಲಿ ಪ್ರಚಾರ ಸಿಕ್ಕರೆ ಸಾಕು ಅಂತ ಕೆಲ ಸಿನಿಮಾ ತಂಡವರು ಏನೇನೋ ಪ್ಲಾನ್ ಮಾಡ್ತಾರೆ. ನೆಗೆಟಿವ್ ಪಬ್ಲಿಸಿಟಿ ಆದರೂ ಪರ್ವಾಗಿಲ್ಲ, ಒಟ್ನಲ್ಲಿ ಹೆಚ್ಚು ಜನರನ್ನು ತಲುಪಲು ಗಾಂಧಿನಗರದ ಕೆಲ ಮಂದಿ ಸರ್ಕಸ್ ಮಾಡುವುದು ನಿಮಗೆಲ್ಲ ಗೊತ್ತೇ ಇದೆ. ಸೇಮ್ ಟು ಸೇಮ್ ಇದೇ ಸ್ಟ್ರಾಟೆಜಿಯನ್ನ ನಟಿ ಮತ್ತು ಬರಹಗಾರ್ತಿ ಚೈತ್ರ ಕೊಟ್ಟೂರು ‘ಬಿಗ್ ಬಾಸ್’ ಮನೆಯಲ್ಲಿ ಅಪ್ಲೈ ಮಾಡುತ್ತಿರುವ ಹಾಗಿದೆ. ‘ಬಿಗ್ ಬಾಸ್’ ಮನೆಯಲ್ಲಿ ಮೂರು ಹೊತ್ತು ಸುಮ್ಮನೆ ಇದ್ದರೆ, ಕ್ಯಾಮರಾಗಳು ಕೂಡ ಝೂಮ್…
ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ. ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ…
ಮೇಷ ರಾಶಿ ಭವಿಷ್ಯ (Monday, November 22, 2021) ಮೇಷರಾಶಿಯಲ್ಲಿ ಹುಟ್ಟಿದವರಲ್ಲಿ ನಿಮ್ಮ ಅಸೂಯೆ ವರ್ತನೆ ನಿಮ್ಮನ್ನು ದುಃಖಿಗಳಾಗಿಯೂ ಮತ್ತು ಖಿನ್ನರಾಗಿಯೂ ಮಾಡಬಹುದು. ಆದರೆ ಇದು ಒಂದು ಸ್ವಯಂಕೃತ ಗಾಯವಾಗಿರುವುದರಿಂದ ಇದರ ಬಗ್ಗೆ ಪ್ರಲಾಪಿಸುವ ಅಗತ್ಯವಿಲ್ಲ. ಇತರರ ಸಂತೋಷ ಮತ್ತು ಅತೃಪ್ತಿಯನ್ನು ಹಂಚಿಕೊಳ್ಳುವ ಮೂಲಕ ಇದನ್ನು ತೊಡೆದುಹಾಕಲು ಪಣತೊಡಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ನೀವು ಕುಟುಂಬದ ಸದಸ್ಯರ ಜೊತೆ ಸ್ವಲ್ಪ ತೊಂದರೆ ಹೊಂದಿದ್ದರೂ ಇದು ನಿಮ್ಮ ಮನಶ್ಶಾಂತಿಯನ್ನು ಹಾಳು ಮಾಡಲು ಅವಕಾಶ ನೀಡಬೇಡಿ….