ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಚಳಿಗೂ ಹಾರ್ಟ್ ಅಟ್ಯಾಕ್ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆ
ಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ.
ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ ಹೆಚ್ಚಿನ ಪ್ರಮಾಣದ ಸಿಂಥೇಜಿಕ್ ಡಿಸ್ಟಾರ್ಜ್ ಅಂದರೆ ಅಡ್ರಿನಾಲಿನ್ ಪಂಪಿಂಗ್ ಅಧಿಕವಿರುತ್ತದೆ. ಇದರಿಂದಾಗಿ ಹೃದಯದ ಮೇಲೆ ಹೆಚ್ಚಿನ ಒತ್ತಡ ಉಂಟಾಗಿ ಅದು ಹೆಚ್ಚು ಕಠಿಣವಾಗಿ ಕೆಲಸದಲ್ಲಿ ತೊಡಗುವಂತಾಗುತ್ತದೆ. ಹೃದಯಾಘಾತ ಸಂಭವಿಸುವ ಸಾಧ್ಯತೆಯುಳ್ಳ ಅಥವಾ ಈಗಾಗಲೇ ಹೃದಯ ಸಂಬಂಧಿ ತೊಂದರೆಗಳಿಂದ ಬಳಲುತ್ತಿರುವವರಲ್ಲಿ ಹೃದಯಾಘಾತದ ಪ್ರಮಾಣ ಇನ್ನೂ ಹೆಚ್ಚು.
ಅಲ್ಲದೆ, ಚಳಿಗಾಲದಲ್ಲಿ ಸಂಭವಿಸುವ ಹೃದಯಾಘಾತ ಹೆಚ್ಚು ಗಂಭೀರ ಸ್ವರೂಪದ್ದಾಗಿರುತ್ತದೆ. ಚಳಿಗಾಲದಲ್ಲಿ ಕೊಬ್ಬರಿ ಎಣ್ಣೆ ಗಟ್ಟಿಯಾಗುವುದನ್ನು ಗಮನಿಸಿದ್ದೀರಿ. ರಕ್ತದ ಚಲನೆ ಕಡಿಮೆಯಾಗಿ ಕೊಬ್ಬು ಅಧಿಕವಿದ್ದರೆ ಇಂಥ ಅಪಾಯ ದೇಹದೊಳಗೂ ಸಂಭವಿಸೀತು!

ಹೃದಯದ ಹೊರಗೆ ಗೋಡೆಗಳಲ್ಲಿ ಸೂಕ್ಷ್ಮತಿಸೂಕ್ಷ್ಮ ಕಿರುನಾಳಗಳಲ್ಲಿ ರಕ್ತ ಪ್ರವಾಹ ನಿರಂತರವಾಗಿರಬೇಕು. ಆದರೆ, ಚಳಿಯ ದಿನಗಳಲ್ಲಿ ಇದು ಸಾಧ್ಯವಾಗದೆ ಹೋಗಬಹುದು. ಕಿರುನಾಳಗಳ ಒಳಪದರ ಕಿರಿದಾಗಿದ್ದರೆ, ಕೊಬ್ಬಿನ ಕರಣೆ ಕಟ್ಟಿದರಂತೂ ಸಂಚಾರ ಕಠಿಣ. ಆಗಲೂ ಹೃದಯಾಘಾತ ಕಟ್ಟಿಟ್ಟ ಬುತ್ತಿ. ರೋಗಿಗೆ ಶೇ.30 ಮಾರ್ಗ ಕಿರಿದಾಗಿದೆ ಎಂದರೆ, ಅದು ಉಳಿದ ದಿನಗಳಂತಲ್ಲ. ಚಳಿಯಲ್ಲಿ ಅದು ಶೇ.70ಕ್ಕೆ ಸಮ!
ಹೃದಯಾಘಾತ ಸಂಭವಿಸಿದ ಕ್ಷಣಗಳಲ್ಲಿ ಹೃದಯ ಬಡಿತದ ಮೇಲೆ ವಾತಾವರಣದಲ್ಲಿ ಆಗುವ ಏರುಪೇರುಗಳೂ ಪ್ರಭಾವ ಬೀರುತ್ತವೆ. ‘ಡಿ’ ಜೀವಸತ್ವದ ಕೊರತೆಯೂ ಹಾರ್ಟ್ ಅಟ್ಯಾಕ್ಗೆ ಕಾರಣ ಆಗಬಹುದು. ಸೂರ್ಯನ ಕಿರಣ ‘ಡಿ’ ಜೀವಸತ್ವದ ಆಕರ. ಚಳಿಗಾಲದಲ್ಲಿ ಮನೆಯೊಳಗೇ ಇದ್ದರೆ, ದೇಹದಲ್ಲಿ ವಿಟಮಿನ್ ‘ಡಿ’ ಉತ್ಪಾದನೆ ಕಡಿಮೆಯಾಗುತ್ತದೆ. ವೈದ್ಯವಿಜ್ಞಾನದ ಸಂಶೋಧನೆಗಳ ಪ್ರಕಾರ, ಎತ್ತರ ಪ್ರದೇಶಗಳ ಜನರಿಗೆ ಹೃದಯಾಘಾತದ ರಿಸ್ಕ್ ಕಡಿಮೆಯಂತೆ.
ಏಕೆಂದರೆ ಎತ್ತರಕ್ಕೆ ಹೋದಂತೆ ಸೂರ್ಯನ ಕಿರಣಗಳಲ್ಲಿನ ಅಲ್ಟ್ರಾವೈಲೆಟ್ ಪ್ರಮಾಣ ಹೆಚ್ಚಿ, ವಿಟಮಿನ್ ‘ಡಿ’ ಉತ್ಪಾದನೆ ಪ್ರಮಾಣವೂ ಅಧಿಕವಾಗುತ್ತದೆ. ಈ ಕಾರಣದಿಂದಲೇ ರಕ್ತದೊತ್ತಡ ಇಲ್ಲದ, ಕೊಲೆಸ್ಟೆರಾಲ್ ಕಡಿಮೆ ಇರುವ ಕೆಳ ಪ್ರದೇಶದ ಜನರಲ್ಲೂ ಹೃದಯಾಘಾತದ ಪ್ರಮಾಣ ಅಧಿಕವಿರುತ್ತದೆ!
ಚಳಿಗಾಲದಲ್ಲಿ ಎಲ್ಲರೂ ಆಲಸಿಗಳೇ.
ಮಧುಮೇಹ ರೋಗವು ಈ ಕಾಲದಲ್ಲಿ ಉಲ್ಬಣಿಸುತ್ತದೆ. ಸ್ಥೂಲ ಕಾಯಗಳನ್ನು ಕಂಡರೆ ಹೃದಯಾಘಾತಕ್ಕೆ ಎಲ್ಲಿಲ್ಲದ ಪ್ರೀತಿ! ಚಳಿಗಾಲದಲ್ಲಿ ಸಾಮಾನ್ಯವಾಗಿ ಹಸಿವು ಹೆಚ್ಚಾಗುತ್ತದೆ. ವೈರಸ್ಗಳು ಹೆಚ್ಚು ಕ್ರಿಯಾಶೀಲಗೊಳ್ಳುವುದೂ ಇದೇ ವೇಳೆಯೇ. ಚಳಿಯಲ್ಲಿ ಕುರುಕಲು ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುವುದರಿಂದ ಇದೂ ಹೃದಯದ ಆರೋಗ್ಯಕ್ಕೆ ಮಾರಕ ಆಗಬಹುದು.

ಆಘಾತ ತಪ್ಪಿಸಲು ಇಷ್ಟು ಮಾಡಿ
– ತೀರಾ ನಸುಕಿನಲ್ಲಿ ವಾಕಿಂಗ್ಗೆ ಹೋಗಬೇಡಿ. ಹಾಗೆಂದು ಸುಮ್ಮನೆ ಹೊದ್ದು ಮಲಗ್ಬೇಡಿ.
– ಚಳಿಗಾಲದಲ್ಲಿ ಹೆಚ್ಚು ಆ್ಯಕ್ಟಿವ್ ಇರಿ.
– ಬೆಚ್ಚಗಿನ ಬಟ್ಟೆ ಧರಿಸಿ.
– ಬಿಪಿ, ಶುಗರ್ ಕಂಟ್ರೋಲ್ನಲ್ಲಿರಲಿ.
– ಶ್ವಾಸಕೋಶದ ಸಮಸ್ಯೆ ಕಂಡು ಬಂದಲ್ಲಿ, ಸೂಕ್ತ ಚಿಕಿತ್ಸೆ ಪಡೆಯಿರಿ..
– ಉಸಿರಾಟದ ಸಮಸ್ಯೆ ಕಂಡು ಬಂದಲ್ಲಿ, ತಕ್ಷಣವೇ ವೈದ್ಯರನ್ನು ಭೇಟಿಯಾಗಿ.
– ಲಘು ಆಹಾರ ಸೇವಿಸಿ. ಕೊಬ್ಬು ಹೆಚ್ಚಿರುವ, ಮದ್ಯ, ಧೂಮಪಾನ ವರ್ಜಿಸಿ.
– ಕೋಣೆಯೊಳಗೆ ತಣ್ಣನೆ ಗಾಳಿ ಸುಳಿಯದಂತೆ ಎಚ್ಚರ ವಹಿಸಿ.
Published by
Mayoon N / Biotechnologist / Director of DRM Career Build Center, Kolar
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.
ಕಂಪ್ಯೂಟರ್ಗಳು, ಕಂಪನಿಯ ಸರ್ವರ್ಗಳನ್ನು ಹ್ಯಾಕ್ ಮಾಡುವುದನ್ನು ಕೇಳಿದ್ದೇವೆ. ಆದರೆ ಸೂರತ್ನಲ್ಲಿ ಕಂಡುಕೇಳರಿಯದ ಪ್ರಕರಣವೊಂದು ವರದಿಯಾಗಿದೆ. ಮನೆಯೊಂದರ ಬೆಡ್ರೂಂನಲ್ಲಿ ಅಳವಡಿಸಲಾಗಿದ್ದ ಸ್ಮಾರ್ಟ್ ಟೀವಿಯನ್ನು ಹ್ಯಾಕ್ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯಗಳನ್ನು ಸೆರೆ ಹಿಡಿದು, ಅಶ್ಲೀಲ ಜಾಲತಾಣಕ್ಕೆ ಅಪ್ಲೋಡ್ ಮಾಡಲಾಗಿರುವ ಘಟನೆ ನಡೆದಿದೆ. ತನ್ನದೇ ವಿಡಿಯೋ ಆನ್ಲೈನ್ ಅಶ್ಲೀಲ ಜಾಲತಾಣದಲ್ಲಿರುವುದನ್ನು ಪತಿ ನೋಡಿದ ಬಳಿಕ ಈ ಅಕ್ರಮ ಬಯಲಾಗಿದೆ. ಇದು ಸ್ಮಾರ್ಟ್ ಟೀವಿ ಬಳಕೆದಾರರಿಗೆ ಎಚ್ಚರಿಕೆ ಗಂಟೆಯಾಗಿದೆ. ಪೊಲೀಸರಿಗೆ ದೂರು ನೀಡಿದರೆ ಮುಜುಗರಕ್ಕೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಈ…
ದಿನೇ ದಿನೆ ರಾಜ್ಯ ರಾಜಕಾರಣ ಕುತೂಹಲ ಕೆರೆಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡ ರವರ ಕಿರಿಯ ಪುತ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ
ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಏಪ್ರಿಲ್, 2019) ಅನಾವಶ್ಯಕ ಉದ್ವೇಗ ಮತ್ತು ಚಿಂತೆ ನಿಮ್ಮ ಜೀವನದ ರಸ ಹೀರಬಹುದು ಮತ್ತು ನಿಮ್ಮನ್ನು…
ಬಿಗ್ ಬಾಸ್ ಮನೆಯಲ್ಲಿ ಕೋಪ, ಜಗಳ, ಲವ್, ಕೇರ್ ಇವೆಲ್ಲಾ ಮಾಮೂಲಿ.ಅದರಲ್ಲೂ ನಟ-ನಟಿಯರು ಬೇಗ ಗಂಟು ಹಾಕಿಕೊಳ್ಳುತ್ತಾರೆ ಎಂಬುವುದು ವೀಕ್ಷಕರ ಅಭಿಪ್ರಾಯ. ಮೊದಲ ವಾರದಲ್ಲೇ ಅತಿ ಹೆಚ್ಚು ವೋಟ್ ಪಡೆದು ನಾಮಿನೇಶನ್ ಪಟ್ಟಿಯಲ್ಲಿ ಸೇರಿಕೊಂಡಿರುವ ಸ್ಪರ್ಧಿ ಚೈತ್ರಾ ಕೊಟ್ಟೂರ್ ಟಾಸ್ಕ್ ನಡೆದ ನಂತರ ಮಧ್ಯರಾತ್ರಿ ‘ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಶೈನ್ ಶೆಟ್ಟಿ ಜೊತೆ ಕುಳಿತು ಮಾತನಾಡುತ್ತಿರುತ್ತಾರೆ. ಆಗ ಮನಸ್ಸಲ್ಲಿದ್ದ ಲವ್ ವಿಚಾರವನ್ನು ತೆರೆದಿಟ್ಟಿದ್ದಾರೆ. ಬಿಗ್ ಬಾಸ್ ಮನೆಗೆ ಪ್ರವೇಶಿಸಿದ ಬಳಿಕ ಶೈನ್ ಶೆಟ್ಟಿ ಜೊತೆ ಕಾಣಿಸಿಕೊಳ್ಳದ ಚೈತ್ರಾ…