ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಚಳಿಗೂ ಹಾರ್ಟ್ ಅಟ್ಯಾಕ್ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆ
ಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ.
ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ ಹೆಚ್ಚಿನ ಪ್ರಮಾಣದ ಸಿಂಥೇಜಿಕ್ ಡಿಸ್ಟಾರ್ಜ್ ಅಂದರೆ ಅಡ್ರಿನಾಲಿನ್ ಪಂಪಿಂಗ್ ಅಧಿಕವಿರುತ್ತದೆ. ಇದರಿಂದಾಗಿ ಹೃದಯದ ಮೇಲೆ ಹೆಚ್ಚಿನ ಒತ್ತಡ ಉಂಟಾಗಿ ಅದು ಹೆಚ್ಚು ಕಠಿಣವಾಗಿ ಕೆಲಸದಲ್ಲಿ ತೊಡಗುವಂತಾಗುತ್ತದೆ. ಹೃದಯಾಘಾತ ಸಂಭವಿಸುವ ಸಾಧ್ಯತೆಯುಳ್ಳ ಅಥವಾ ಈಗಾಗಲೇ ಹೃದಯ ಸಂಬಂಧಿ ತೊಂದರೆಗಳಿಂದ ಬಳಲುತ್ತಿರುವವರಲ್ಲಿ ಹೃದಯಾಘಾತದ ಪ್ರಮಾಣ ಇನ್ನೂ ಹೆಚ್ಚು.
ಅಲ್ಲದೆ, ಚಳಿಗಾಲದಲ್ಲಿ ಸಂಭವಿಸುವ ಹೃದಯಾಘಾತ ಹೆಚ್ಚು ಗಂಭೀರ ಸ್ವರೂಪದ್ದಾಗಿರುತ್ತದೆ. ಚಳಿಗಾಲದಲ್ಲಿ ಕೊಬ್ಬರಿ ಎಣ್ಣೆ ಗಟ್ಟಿಯಾಗುವುದನ್ನು ಗಮನಿಸಿದ್ದೀರಿ. ರಕ್ತದ ಚಲನೆ ಕಡಿಮೆಯಾಗಿ ಕೊಬ್ಬು ಅಧಿಕವಿದ್ದರೆ ಇಂಥ ಅಪಾಯ ದೇಹದೊಳಗೂ ಸಂಭವಿಸೀತು!

ಹೃದಯದ ಹೊರಗೆ ಗೋಡೆಗಳಲ್ಲಿ ಸೂಕ್ಷ್ಮತಿಸೂಕ್ಷ್ಮ ಕಿರುನಾಳಗಳಲ್ಲಿ ರಕ್ತ ಪ್ರವಾಹ ನಿರಂತರವಾಗಿರಬೇಕು. ಆದರೆ, ಚಳಿಯ ದಿನಗಳಲ್ಲಿ ಇದು ಸಾಧ್ಯವಾಗದೆ ಹೋಗಬಹುದು. ಕಿರುನಾಳಗಳ ಒಳಪದರ ಕಿರಿದಾಗಿದ್ದರೆ, ಕೊಬ್ಬಿನ ಕರಣೆ ಕಟ್ಟಿದರಂತೂ ಸಂಚಾರ ಕಠಿಣ. ಆಗಲೂ ಹೃದಯಾಘಾತ ಕಟ್ಟಿಟ್ಟ ಬುತ್ತಿ. ರೋಗಿಗೆ ಶೇ.30 ಮಾರ್ಗ ಕಿರಿದಾಗಿದೆ ಎಂದರೆ, ಅದು ಉಳಿದ ದಿನಗಳಂತಲ್ಲ. ಚಳಿಯಲ್ಲಿ ಅದು ಶೇ.70ಕ್ಕೆ ಸಮ!
ಹೃದಯಾಘಾತ ಸಂಭವಿಸಿದ ಕ್ಷಣಗಳಲ್ಲಿ ಹೃದಯ ಬಡಿತದ ಮೇಲೆ ವಾತಾವರಣದಲ್ಲಿ ಆಗುವ ಏರುಪೇರುಗಳೂ ಪ್ರಭಾವ ಬೀರುತ್ತವೆ. ‘ಡಿ’ ಜೀವಸತ್ವದ ಕೊರತೆಯೂ ಹಾರ್ಟ್ ಅಟ್ಯಾಕ್ಗೆ ಕಾರಣ ಆಗಬಹುದು. ಸೂರ್ಯನ ಕಿರಣ ‘ಡಿ’ ಜೀವಸತ್ವದ ಆಕರ. ಚಳಿಗಾಲದಲ್ಲಿ ಮನೆಯೊಳಗೇ ಇದ್ದರೆ, ದೇಹದಲ್ಲಿ ವಿಟಮಿನ್ ‘ಡಿ’ ಉತ್ಪಾದನೆ ಕಡಿಮೆಯಾಗುತ್ತದೆ. ವೈದ್ಯವಿಜ್ಞಾನದ ಸಂಶೋಧನೆಗಳ ಪ್ರಕಾರ, ಎತ್ತರ ಪ್ರದೇಶಗಳ ಜನರಿಗೆ ಹೃದಯಾಘಾತದ ರಿಸ್ಕ್ ಕಡಿಮೆಯಂತೆ.
ಏಕೆಂದರೆ ಎತ್ತರಕ್ಕೆ ಹೋದಂತೆ ಸೂರ್ಯನ ಕಿರಣಗಳಲ್ಲಿನ ಅಲ್ಟ್ರಾವೈಲೆಟ್ ಪ್ರಮಾಣ ಹೆಚ್ಚಿ, ವಿಟಮಿನ್ ‘ಡಿ’ ಉತ್ಪಾದನೆ ಪ್ರಮಾಣವೂ ಅಧಿಕವಾಗುತ್ತದೆ. ಈ ಕಾರಣದಿಂದಲೇ ರಕ್ತದೊತ್ತಡ ಇಲ್ಲದ, ಕೊಲೆಸ್ಟೆರಾಲ್ ಕಡಿಮೆ ಇರುವ ಕೆಳ ಪ್ರದೇಶದ ಜನರಲ್ಲೂ ಹೃದಯಾಘಾತದ ಪ್ರಮಾಣ ಅಧಿಕವಿರುತ್ತದೆ!
ಚಳಿಗಾಲದಲ್ಲಿ ಎಲ್ಲರೂ ಆಲಸಿಗಳೇ.
ಮಧುಮೇಹ ರೋಗವು ಈ ಕಾಲದಲ್ಲಿ ಉಲ್ಬಣಿಸುತ್ತದೆ. ಸ್ಥೂಲ ಕಾಯಗಳನ್ನು ಕಂಡರೆ ಹೃದಯಾಘಾತಕ್ಕೆ ಎಲ್ಲಿಲ್ಲದ ಪ್ರೀತಿ! ಚಳಿಗಾಲದಲ್ಲಿ ಸಾಮಾನ್ಯವಾಗಿ ಹಸಿವು ಹೆಚ್ಚಾಗುತ್ತದೆ. ವೈರಸ್ಗಳು ಹೆಚ್ಚು ಕ್ರಿಯಾಶೀಲಗೊಳ್ಳುವುದೂ ಇದೇ ವೇಳೆಯೇ. ಚಳಿಯಲ್ಲಿ ಕುರುಕಲು ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುವುದರಿಂದ ಇದೂ ಹೃದಯದ ಆರೋಗ್ಯಕ್ಕೆ ಮಾರಕ ಆಗಬಹುದು.

ಆಘಾತ ತಪ್ಪಿಸಲು ಇಷ್ಟು ಮಾಡಿ
– ತೀರಾ ನಸುಕಿನಲ್ಲಿ ವಾಕಿಂಗ್ಗೆ ಹೋಗಬೇಡಿ. ಹಾಗೆಂದು ಸುಮ್ಮನೆ ಹೊದ್ದು ಮಲಗ್ಬೇಡಿ.
– ಚಳಿಗಾಲದಲ್ಲಿ ಹೆಚ್ಚು ಆ್ಯಕ್ಟಿವ್ ಇರಿ.
– ಬೆಚ್ಚಗಿನ ಬಟ್ಟೆ ಧರಿಸಿ.
– ಬಿಪಿ, ಶುಗರ್ ಕಂಟ್ರೋಲ್ನಲ್ಲಿರಲಿ.
– ಶ್ವಾಸಕೋಶದ ಸಮಸ್ಯೆ ಕಂಡು ಬಂದಲ್ಲಿ, ಸೂಕ್ತ ಚಿಕಿತ್ಸೆ ಪಡೆಯಿರಿ..
– ಉಸಿರಾಟದ ಸಮಸ್ಯೆ ಕಂಡು ಬಂದಲ್ಲಿ, ತಕ್ಷಣವೇ ವೈದ್ಯರನ್ನು ಭೇಟಿಯಾಗಿ.
– ಲಘು ಆಹಾರ ಸೇವಿಸಿ. ಕೊಬ್ಬು ಹೆಚ್ಚಿರುವ, ಮದ್ಯ, ಧೂಮಪಾನ ವರ್ಜಿಸಿ.
– ಕೋಣೆಯೊಳಗೆ ತಣ್ಣನೆ ಗಾಳಿ ಸುಳಿಯದಂತೆ ಎಚ್ಚರ ವಹಿಸಿ.
Published by
Mayoon N / Biotechnologist / Director of DRM Career Build Center, Kolar
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇ 23ರ ಗುರುವಾರದಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಮತಗಟ್ಟೆ ಸಮೀಕ್ಷೆಗಳು ಎನ್ಡಿಎ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿದ್ದು, ಜನಸಾಮಾನ್ಯರಿಂದ ಹಿಡಿದು ಎಲ್ಲಾ ವರ್ಗಗಳಲ್ಲೂ ಇದರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ಮತಗಟ್ಟೆ ಸಮೀಕ್ಷೆ ಫಲಿತಾಂಶ ಷೇರುಪೇಟೆಯ ಮೇಲೆ ಪ್ರಭಾವ ಬೀರಿದ್ದು, ಹೂಡಿಕೆದಾರರು ಬೃಹತ್ ಲಾಭದ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಆಹಾರ ವಿತರಣಾ ಸಂಸ್ಥೆ ಜೋಮ್ಯಾಟೊ (Zomato) ಸಾರ್ವಜನಿಕರಿಗೆ ಭರ್ಜರಿ ಉಡುಗೊರೆ ನೀಡುವ ಘೋಷಣೆ ಮಾಡಿದೆ. ದೇಶದ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎಂದು…
ನಗರದಲ್ಲಿ ಎಲ್ಲೆಲ್ಲಿ ಟ್ರಾಫಿಕ್ ಸಮಸ್ಯೆ ಇದೆ ಎನ್ನುವ ಮಾಹಿತಿ ನೀಡುವ ಗೂಗಲ್ ಕಂಪನಿಗೆ ವ್ಯಕ್ತಿಯೊಬ್ಬ ಚಮಕ್ ಕೊಟ್ಟ ಘಟನೆ ಜರ್ಮನಿಯಲ್ಲಿ ನಡೆದಿದೆ. ಗೂಗಲ್ ಮ್ಯಾಪ್ ಸಂಚಾರದ ಸಂದರ್ಭದಲ್ಲಿ ಜಿಪಿಎಸ್ ಸಾಧನಗಳು ಎಷ್ಟು ಆನ್ ಆಗಿದೆ ಎನ್ನುವುದನ್ನು ತಿಳಿದುಕೊಂಡು ಜನರಿಗೆ ಪ್ರದೇಶದಲ್ಲಿ ಎಷ್ಟು ಸಂಚಾರ ದಟ್ಟಣೆಯಿದೆ ಎನ್ನುವ ವಿವರ ಇರುವ ಸಂದೇಶವನ್ನು ನೀಡುತ್ತಿರುತ್ತದೆ. ಈ ವಿಚಾರವನ್ನು ತಿಳಿದ ವ್ಯಕ್ತಿಯೊಬ್ಬ ಗೂಗಲ್ ಕಂಪನಿ ಮುಂದೆ ಕೃತಕವಾಗಿ ಟ್ರಾಫಿಕ್ ಜಾಮ್ ಸೃಷ್ಟಿಸಿ ಸುದ್ದಿ ಮಾಡಿದ್ದಾನೆ. ಜರ್ಮನಿಯ ಕಲಾವಿದ ಸೈಮನ್ ವೆಕರ್ಟ್ ಬರ್ಲಿನ್…
ಸ್ವಿಟ್ಜರ್ಲೆಂಡ್ನಲ್ಲಿ ನಟ ದರ್ಶನ್. ಒಡೆಯ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಾಲೆಂಜಿಂಗ್ ಸ್ಟಾರ್. ಎಂ.ಡಿ ಶ್ರೀಧರ್ ನಿರ್ದೇಶಿಸುತ್ತಿರುವ ಒಡೆಯ ಸಿನಿಮಾದ ಕೊನೆಯ ಎರಡು ಹಾಡುಗಳ ಚಿತ್ರೀಕರಣಕ್ಕೆಂದು ಚಿತ್ರತಂಡ ಅಕ್ಟೋಬರ್ 15ರಂದು ಸ್ವಿಟ್ಜರ್ಲೆಂಡ್ಗೆ ಹಾರಿದ್ದರು. ಹತ್ತು ದಿನಗಳ ಕಾಲ ನಡೆಯಲಿರುವ ಚಿತ್ರೀಕರಣದ ನಂತರ ಇದೇ ಅಕ್ಟೋಬರ್ 26ರಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ದಚ್ಚು ಆ್ಯಂಡ್ ಟೀಮ್. ಸಂದೇಶ್ ನಾಗರಾಜ್ ನಿರ್ಮಾಣದಲ್ಲಿ ಚಿತ್ರ ಮೂಡಿಬರುತ್ತಿದ್ದು ಈ ವರ್ಷದ ಕೊನೆಯಲ್ಲಿ ಒಡೆಯ ಚಿತ್ರ ಡಿ ಬಾಸ್ ಫ್ಯಾನ್ಸ್ಗಳ ಮುಂದೆ ಬರಲಿದೆ. ಅಕ್ಟೋಬರ್ 15ರಂದು…
ಸಮ್ಮಿಶ್ರ ಸರ್ಕಾರದಲ್ಲಿ ತಪ್ಪುಗಳಾಗಿವೆ ಅದು ಜೆಡಿಎಸ್ ಸರ್ಕಾರದ ಸಚಿವರು ಹಾಗೂ ಶಾಸಕರಿಂದ ಆಗಿವೆ ಇದನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಬುಧವಾರ ಹೇಳಿದರು. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ನಿನ್ನೆ ಹದ್ದು ಗಿಣಿ ಟ್ವೀಟ್ಗೆ ಬಗ್ಗೆ ಕಾಗವಾಡ ಮತಕ್ಷೇತ್ರದ ಮಂಗಸೂಳಿ ಗ್ರಾಮದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇದ್ದಾಗೊಂದು, ಇಲ್ಲದಾಗೊಂದು ಹೇಳಿಕೆ ಸರಿಯಲ್ಲ, 14 ತಿಂಗಳು ಸಿಎಂ ಆಗಿದ್ದ ಸಂದರ್ಭದಲ್ಲಿ ಈ ಮಾತನ್ನು ಹೇಳಬೇಳಕಿತ್ತು….
ಮಕ್ಕಳ ಜೊತೆ ಗರಂ ಆಗಿ ವರ್ತಿಸಿದ್ದಕ್ಕೆ ತನ್ನ ಸೆಕ್ಯೂರಿಟಿ ಕಪಾಳಕ್ಕೆ ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಅವರು ಬಾರಿಸಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಮಂಗಳವಾರ ರಾತ್ರಿ ಸಲ್ಮಾನ್ ತಾವು ನಟಿಸಿದ ‘ಭಾರತ್’ ಚಿತ್ರದ ಸ್ಪೆಷಲ್ ಸ್ಕ್ರೀನಿಂಗ್ಗೆ ಹೋಗಿದ್ದರು. ಹೀಗಾಗಿ ಸಲ್ಮಾನ್ಗಾಗಿ ಸೆಕ್ಯೂರಿಟಿ ಗಾರ್ಡ್ ದಾರಿ ಮಾಡಿಕೊಡುತ್ತಿದ್ದರು. ಈ ವೇಳೆ ಮಕ್ಕಳ ಜೊತೆ ಖಾರವಾಗಿ ವರ್ತಿಸಿದ್ದಕ್ಕೆ ಸಲ್ಮಾನ್ ಖಾನ್ ಸೆಕ್ಯೂರಿಟಿಯ ಕಪಾಳಕ್ಕೆ ಹೊಡೆದಿದ್ದಾರೆ. ಸಲ್ಮಾನ್ ಖಾನ್ ಸೆಕ್ಯೂರಿಟಿಗೆ ಹೊಡೆದ ಫೋಟೋ ಮೊದಲು ಪೀಪಿಂಗ್…
ನಿನ್ನೆಯ ಬಿಗ್ಬಾಸ್ ಸಂಚಿಕೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದೆ ನಿವೇದಿತಾ-ದಿವಾಕರ್ ಮಧ್ಯೆ ನಡೆದ ವಾಗ್ವಾದ! ಸದಸ್ಯರೆಲ್ಲ ಸೇರಿ ಕೊನೆಗೂ ವಿಷ್ಣುವರ್ಧನ್ ಅವರ ಹಾಡನ್ನು ನಿರಾಕರಿಸಿ,