News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಮನಮಿಡಿಯುವ ಕಥೆ

ಹೆಣ್ಣು ಮಗಳು ಹುಟ್ಟಿದ್ರೆ ಅವಳಿಗೆ ನಾನ್ಯಾಕೆ ಕಲಿಸಬೇಕು.?ಎಂದ ಗಂಡ ನಂತರ ಹೇಳಿದ್ದು ಏನು.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

736

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು.

ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..?

ಗಂಡ ಕಿಟಕಿಯಿಂದ ಹೊರಗೆ ಬಾನಿನತ್ತ ನೋಡುತ್ತಾ ಅವನನ್ನು ಮಹಾ ತುಂಟನನ್ನಾಗಿ ಬೆಳೆಸುತ್ತೇನೆ. ಅವನು ಚೆನ್ನಾಗಿ ಈಜಬೇಕು. ಸೈಕಲ್ ಹೊಡೆಯ ಬೇಕು. ಮರ ಹತ್ತಬೇಕು. ಕ್ರಿಕೆಟ್ ಆಡಬೇಕು. ಕರಾಟೆ ಕಲಿಯಬೇಕು. ಬೆಟ್ಟಗುಡ್ಡ ಹತ್ತಬೇಕು. ಬೈಕ್ ಓಡಿಸಬೇಕು. ನಕ್ಷತ್ರ ವೀಕ್ಷಣೆಯನ್ನು ಮಾಡಿಸ ಬೇಕು. ಲೆಕ್ಕವನ್ನು ಚೆನ್ನಾಗಿ ಕಲಿಸಬೇಕು. ಗಿಟಾರ್ ನುಡಿಸೋಕೆ ಬರಬೇಕು. ಹಾಡೋಕ್ ಕಲಿತ್ರೆ ಇನ್ನೂ ಚೆನ್ನಾಗಿರುತ್ತೆ ಎಂದ.

ಹೆಣ್ಣು ಮಗಳು ಹುಟ್ಟಿದರೆ ಅವಳಿಗೆ ನಾನ್ಯಾಕೆ ಕಲಿಸಬೇಕು..?

ಗಂಡ ಇನ್ನೂ ಮಗನಿಗೆ ಕಲಿಸಬೇಕಾದ ಪಟ್ಟಿಯನ್ನು ಮುಂದುವರೆಸುತ್ತಿದ್ದನೋ ಏನೋ?. ಹೆಂಡತಿಯು ಮಧ್ಯೆ ತಲೆಹಾಕಿದಳು. ಸರಿ, ಹೆಣ್ಣು ಮಗು ಹುಟ್ಟಿದರೆ ಅವಳಿಗೇನು ಕಲಿಸುತ್ತೀರಿ? ಕುತೂಹಲದಿಂದ ಕೇಳಿದಳು. ಹೆಣ್ಣು ಮಗಳೆ? ಹೆಣ್ಣು ಮಗಳು ಹುಟ್ಟಿದರೆ ಅವಳಿಗೆ ನಾನ್ಯಾಕೆ ಕಲಿಸಬೇಕು? ಎಂದ ಗಂಡ. ಆಘಾತವಾಯಿತು ಹೆಂಡತಿಗೆ. ಅವಳಿಗರಿವಿಲ್ಲದಂತೆಯೇ ಕಣ್ಣಿನಲ್ಲಿ ನೀರು ಉಕ್ಕಿತು. ಯಾಕ್ರಿ ನಮಗೆ ಗಂಡು ಮಗು ಹೆಣ್ಣು ಮಗು ಎರಡೂ ಒಂದೇ ಅಲ್ವ. ಹೆಣ್ಣು ಮಗುವಿಗೆ ಯಾಕೆ ಏನನ್ನೂ ಕಲಿಸಲ್ಲ! ಎಂದಳು.

ಹೆಣ್ಣು ಮಕ್ಕಳಿಗೆ ನಾವು ಏನೂ ಕಲಿಸಬೇಕಾಗಿಲ್ಲ ..!

ಗಂಡನು ನಗುತ್ತಾ, ಅಯ್ಯೋ.. ಹೆಣ್ಣು ಮಕ್ಕಳಿಗೆ ನಾವು ಏನೂ ಕಲಿಸಬೇಕಾಗಿಲ್ಲ ಕಣೆ. ಅವರಿಗೆ ಅದು ದೈವದತ್ತವಾಗಿ ಬಂದಿರು ತ್ತದೆ ಎಂದನು. ಅರ್ಥವಾಗಲಿಲ್ಲ. ಬಿಡಿಸಿ ಹೇಳಿ ಎಂದಳು ಹೆಂಡತಿ. ಹೆಣ್ಣು ಮಗಳಿಗೆ ನಾವು ಕಲಿಸಬೇಕಾಗಿಲ್ಲ. ಅವಳು ನಮಗೆ ಎಲ್ಲವನ್ನೂ ಕಲಿಸುತ್ತಾಳೆ. ನಾನು ಹೇಗೆ ಬಟ್ಟೆ ಹಾಕ್ಕೋಬೇಕು, ಏನನ್ನು ತಿನ್ನಬೇಕು, ಹೇಗೆ ತಿನ್ನಬೇಕು, ಏನನ್ನು ಮಾತಾಡಬೇಕು, ಏನನ್ನು ಮಾತನಾಡಬಾರದು, ಎಲ್ಲಿಗೆ ಹೋಗಬೇಕು, ಎಷ್ಟು ಹೊತ್ತಿಗೆಲ್ಲ ಮನೆಗೆ ಬರಬೇಕು. ಒಟ್ಟಿನಲ್ಲಿ ಹೇಳುವುದಾದರೆ ಅವಳು ನನಗೆ ಎರಡನೆಯ ಅಮ್ಮನಾಗಿಬಿಡುತ್ತಾಳೆ. ಮಗಳಿಗೆ ತಂದೆಯೇ ಹೀರೋ!. ನಾನು ಬದುಕಿನಲ್ಲಿ ಏನನ್ನೂ ಸಾಧಿಸದಿದ್ದರೂ ಅವಳ ಪಾಲಿಗೆ ನಾನೇ ಹೀರೊ. ಅವಳಿಗೆ ಏನನ್ನಾದರೂ ಕೊಡಿಸಲಾಗದಿದ್ದರೆ, ಅವಳೇ ನನಗೆ ಸಮಾಧಾನ ಹೇಳಿ ಮುಂದಿನ ತಿಂಗಳು ಕೊಡಿಸುವಿಯಂತೆ ಬಿಡಪ್ಪ ಎನ್ನುತ್ತಾಳೆ.

ಅಪ್ಪನಂತಹ ಗಂಡ ಸಿಗಬೇಕು…

ಅವಳ ಮನಸ್ಸಿನಲ್ಲಿ ತನ್ನ ಅಪ್ಪನಂತಹ ಗಂಡ ಸಿಗಬೇಕು ಎನ್ನುವ ಆಸೆ ಸುಪ್ತವಾಗಿ ಬೆಳೆಯುತ್ತಿರುತ್ತದೆ. ಅವಳಿಗೆ ಮಕ್ಕಳು ಮೊಮ್ಮೊಕ್ಕಳಾದರೂ, ನಾನು ಮಾತ್ರ ಅವಳನ್ನು ಮುದ್ದು ಪುಟಾಣಿಯಂತೆ ಮಾತನಾಡಿಸಬೇಕು, ನೋಡಿಕೊಳ್ಳಬೇಕು, ಮುದ್ದು ಮಾಡಬೇಕು. ಅವಳು ಬೆಳೆಯುವುದೇ ಇಲ್ಲ.

ಗಂಡು ಮಕ್ಕಗೆ  ನಾವೇ ಎಲ್ಲವನ್ನೂ ಕಲಿಸಬೇಕು…

ಅಪ್ಪನ ಮನಸ್ಸನ್ನು ನೋಯಿಸುವವರನ್ನು ಅವಳು ಯಾವ ಕಾರಣಕ್ಕೂ ಕ್ಷಮಿಸಲ್ಲ. ಓ ಮಗಳು ಮಾತ್ರ ನಿಮ್ಮನ್ನು ನೋಡ್ಕೋತಾಳ? ಮಗ ನೋಡ್ಕಳ್ಳಲ್ಲ ಅಂತ ನಿಮ್ಮ ಅಭಿಪ್ರಾಯಾನ? ಇಲ್ಲ ಇಲ್ಲ. ಗಂಡು ಮಕ್ಕಳೂ ನೋಡ್ಕೋತಾರೆ. ಆದರೆ ಅವರಿಗೆ ನಾವೇ ಎಲ್ಲವನ್ನೂ ಕಲಿಸಬೇಕು. ಹೆಣ್ಣು ಮಕ್ಕಳಿಗೆ ಯಾರೂ ಕಲಿಸಬೇಕಾಗಿಲ್ಲ. ಎಲ್ಲ ಹುಟ್ಟಿನೊಡನೆಯೇ ಬಂದಿರುತ್ತದೆ ಎಂದನು ಗಂಡ.

ಇರಬಹುದು ರೀ, ಆದರೆ ಅವಳು ಒಂದಲ್ಲ ಒಂದು ದಿನ ನಮ್ಮನ್ನೆಲ್ಲ ಬಿಟ್ಟು ಗಂಡನ ಮನೆಗೆ ಹೋಗಲೇಬೇಕಲ್ಲವೆ? ವಿಷಾದದಿಂದ ನುಡಿದಳು ಹೆಂಡತಿ. ಹೂಂ, ಹೋಗಲೇಬೇಕು. ಆದರೆ, ನಾವು ಸದಾ ಅವಳ ಹೃದಯದಲ್ಲಿ ಬೆಚ್ಚಗೆ ಇರುತ್ತೇವೆ. ಸದಾ ಕಾಲಕ್ಕೂ! ಎಂದನು. ಗಂಡನ ಕಣ್ಣಂಚು ತುಸು ತೇವವಾಗಿತ್ತು.

ಮೂಲ  

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಶುಂಠಿ ನೀರನ್ನು ಕುಡಿಯೋದ್ರಿಂದ ಆಗೋ ಪ್ರಯೋಜನಗಳನ್ನು ಕೇಳಿದ್ರೆ ಈಗ್ಲೇ ಕುಡಿಯೋದಕ್ಕೆ ಸ್ಟಾರ್ಟ್ ಮಾಡ್ತೀರಾ..!

    ಟೀ ರುಚಿ ಹೆಚ್ಚಿಸುವ ಜೊತೆಗೆ ಗಂಟಲು ನೋವನ್ನು ಗುಣಪಡಿಸುವ ಕೆಲಸವನ್ನು ಮಾತ್ರ ಶುಂಠಿ ಟೀ ಮಾಡುವುದಿಲ್ಲ. ಮಸಾಲೆ ರೂಪದಲ್ಲಿ ಬಳಸುವ ಶುಂಠಿ ಬಹು ಉಪಯೋಗಿ. ಇದ್ರ ನೀರನ್ನು ಪ್ರತಿದಿನ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಇದ್ರಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯ, ಆ್ಯಂಟಿ ಫಂಗಲ್ ಅಂಶ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ಊಟ ಮಾಡಿದ 20 ನಿಮಿಷದ ನಂತ್ರ ಒಂದು ಕಪ್ ಶುಂಠಿ ನೀರನ್ನು ಕುಡಿಯಿರಿ. ಇದು ದೇಹದಲ್ಲಿರುವ ಆಮ್ಲ ಪ್ರಮಾಣವನ್ನು ನಿಯಂತ್ರಿಸುತ್ತದೆ. ಇದ್ರಿಂದ ಹೊಟ್ಟೆಯಲ್ಲಾಗುವ ಉರಿ ಕಡಿಮೆಯಾಗುತ್ತದೆ. ಶುಂಠಿಯನ್ನು ಕುಟ್ಟಿ ನೀರಿಗೆ ಹಾಕಿ ಕುದಿಸಿ…

  • ಸುದ್ದಿ

    ತೆಲಂಗಾಣದ ಶಾಲಾ ಹಾಸ್ಟೆಲ್ ಬೆಂಕಿಗೆ ಆಹುತಿ: ವಿದ್ಯಾರ್ಥಿಯ ದುರ್ಮರಣ……!

    ಶಾಲಾ ಹಾಸ್ಟೆಲ್‌ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪುಟ್ಟ ಮಕ್ಕಳಿರುವ ಶಾಲೆ, ಹಾಸ್ಟೆಲ್‌ಗಳಲ್ಲಿ ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಹಾಗಿರುವಾಗ ಬೆಂಕಿ, ಶಿಥಿಲ ಕಟ್ಟಡಗಳ ಬಗ್ಗೆ ನಿಗಾ ಇಡಬೇಕಾಗಿರುವುದು ಆಡಳಿತ ಮಂಡಳಿಯ ಕರ್ತವ್ಯವಾಗಿದೆ. ಶಾಲಾ ಹಾಸ್ಟೆಲ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ 10 ವರ್ಷದ ವಿದ್ಯಾರ್ಥಿ ಬೆಂಕಿಯಲ್ಲೇ ಬೆಂದು ಮೃತಪಟ್ಟಿದ್ದಾನೆ. ತೆಲಂಗಾಣಾದ ಖಮ್ಮಮ್‌ನಲ್ಲಿ ಈ ಘಟನೆ ನಡೆದಿದೆ. ಬಾಲಕನಿಗೆ ಹಾಸ್ಟೆಲ್‌ನಿಂದ ಹೊರಬರಲು ಸಾಧ್ಯವಾಗದೆ ಮೃತಪಟ್ಟಿದ್ದಾನೆ. ಅಷ್ಟೇ ಅಲ್ಲದೆ ಹಾಸ್ಟೆಲ್‌…

  • ಜೈ ಶ್ರೀ ರಾಮ
    ದೇವರು-ಧರ್ಮ

    ಇಂದು ಶ್ರೀರಾಮ ನವಮಿ…ಮಾಡಬೇಕಾಗಿರುವ ಪೂಜಾ ವಿಧಾನದ ಬಗ್ಗೆ ತಿಳಿದುಕೊಳ್ಳಿ…ಎಲ್ಲರಿಗೂ ಶೇರ್ ಮಾಡಿ…

    ಪ್ರತಿವರ್ಷ ಚೈತ್ರ ಮಾಸದ ಶುಧ್ಧ ನವಮಿಯಂದು ಶ್ರೀರಾಮ ನವಮಿ ಮಾಡುತ್ತೇವೆ. ಆದರೆ ಶ್ರೀರಾಮನವಮಿ ಎಂಬುದು ಯಾಕೆ ಬಂದಿದೆ ಎಂದರೆ, ಇದೇ ನವಮಿಯಂದು ಶ್ರೀ ರಾಮಚಂದ್ರ ಹುಟ್ಟಿದ್ದು, ಇದೇ ನವಮಿಯಂದು ಸೀತಾ ಮಾತೆಯನ್ನು ಮದುವೆ ಮಾಡಿಕೊಂಡು ಸೀತರಾಮನಾದ. ಹಾಗೆಯೇ 14 ವರ್ಷಗಳ ವನವಾಸದ ನಂತರ ಸೀತಾದೇವಿಯನ್ನು ರಾವಣನನಿಂದ ಬಿಡಿಸಿ ಅದೇ ದಿನ ಅಯೋಧ್ಯೆ ಮಹಾರಾಜನಾಗಿ ಶ್ರೀರಾಮನು ಪಟ್ಟಾಭಿಷೇಕ ಆದ ದಿನ. ಹಾಗಾಗಿ ಅದೇ ನವಮಿಯ ದಿನ ರಾಮನ ಜನ್ಮದಿನದ ಜೊತೆಗೆ ಸೀತಾರಾಮ ಕಲ್ಯಾಣ ಮಹೋತ್ಸವ ನೋಡಿದರೆ ಜನ್ಮಜನ್ಮದ ಪುಣ್ಯ…

  • ತಂತ್ರಜ್ಞಾನ

    ಜಗತ್ತಿನ ಅತೀ ಸಣ್ಣ ಉಪಗ್ರಹವನ್ನು ತಯಾರಿಸಿದ ಈ ಬಾಲಕನ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ತಮಿಳುನಾಡಿನ ಪಲ್ಲಾಪಟ್ಟಿ ಗ್ರಾಮದ 18 ವರ್ಷದ ಬಾಲಕ ರಿಫತ್‍ ಶಾರೂಕ್ 64 ಗ್ರಾಮ್ ತೂಕದ ಸ್ಯಾಟ್‍ಲೈಟ್‍ ರೂಪಿಸಿದ್ದು, ಇದು ವಿಶ್ವದ ಅತ್ಯಂತ ಕಿರಿಯ ಸ್ಯಾಟ್‍ಲೈಟ್‍ ಎಂಬ ಹಿರಿಮೆಗೆ ಪಾತ್ರವಾಗಿದೆ.

  • ಸುದ್ದಿ

    ರೈತರಿಗೆ ಬಂಪರ್ ಸುದ್ದಿ ಕೊಟ್ಟ ಕುಮಾರಣ್ಣ..!

    ಡಿಸೆಂಬರ್ ಒಳಗೆ ರಾಜ್ಯದ ರೈತರ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ, ಸಾಲಮನ್ನಾ ಫಲಾನುಭವಿ ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ವಿತರಿಸಿದ ಸಿಎಂ, ಡಿಸೆಂಬರ್ ಒಳಗೆ ರೈತರ ಬೆಳೆ ಸಾಲಮನ್ನಾ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ. ಬ್ಯಾಂಕುಗಳಿಗೆ 4 ಕಂತುಗಳಲ್ಲಿ ರೈತರ ಸಾಲ ಮನ್ನಾದ ಮೊತ್ತವನ್ನು ಪಾವತಿಸಲು ಚಿಂತನೆ ನಡೆದಿತ್ತಾದರೂ, 2 ಕಂತುಗಳಲ್ಲಿ ಸಾಲಮನ್ನಾ ಮೊತ್ತವನ್ನು ಬ್ಯಾಂಕುಗಳಿಗೆ ಪಾವತಿಸಿ ಡಿಸೆಂಬರ್ ಒಳಗೆ ಸಂಪೂರ್ಣವಾಗಿ…

  • ಸುದ್ದಿ

    ನಟ ಯಶ್ ಕುಟುಂಬದ ವಿರುದ್ಧ ದೂರು ದಾಕಲೆ…ಕಾರಣ?

    ನಟ ರಾಕಿಂಗ್ ಸ್ಟಾರ್ ಯಶ್ 9 ವರ್ಷಗಳಿಂದ ಇದ್ದ ಬಾಡಿಗೆ ಮನೆಯನ್ನು ಖಾಲಿ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಮೋಡ್, ಲೈಟಿಂಗ್ಸ್ ವೈರಿಂಗ್, ಡೋರ್ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಹೇಳಲಾಗಿದ್ದು, ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮನೆ ಮಾಲೀಕರು ಮುಂದಾಗಿದ್ದಾರೆ. ಬಾಡಿಗೆ ಮನೆ ಡ್ಯಾಮೇಜ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಗಿರಿನಗರ ಪೊಲೀಸ್…