ಮನಮಿಡಿಯುವ ಕಥೆ

ಹೆಣ್ಣು ಮಗಳು ಹುಟ್ಟಿದ್ರೆ ಅವಳಿಗೆ ನಾನ್ಯಾಕೆ ಕಲಿಸಬೇಕು.?ಎಂದ ಗಂಡ ನಂತರ ಹೇಳಿದ್ದು ಏನು.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

726

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು.

ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..?

ಗಂಡ ಕಿಟಕಿಯಿಂದ ಹೊರಗೆ ಬಾನಿನತ್ತ ನೋಡುತ್ತಾ ಅವನನ್ನು ಮಹಾ ತುಂಟನನ್ನಾಗಿ ಬೆಳೆಸುತ್ತೇನೆ. ಅವನು ಚೆನ್ನಾಗಿ ಈಜಬೇಕು. ಸೈಕಲ್ ಹೊಡೆಯ ಬೇಕು. ಮರ ಹತ್ತಬೇಕು. ಕ್ರಿಕೆಟ್ ಆಡಬೇಕು. ಕರಾಟೆ ಕಲಿಯಬೇಕು. ಬೆಟ್ಟಗುಡ್ಡ ಹತ್ತಬೇಕು. ಬೈಕ್ ಓಡಿಸಬೇಕು. ನಕ್ಷತ್ರ ವೀಕ್ಷಣೆಯನ್ನು ಮಾಡಿಸ ಬೇಕು. ಲೆಕ್ಕವನ್ನು ಚೆನ್ನಾಗಿ ಕಲಿಸಬೇಕು. ಗಿಟಾರ್ ನುಡಿಸೋಕೆ ಬರಬೇಕು. ಹಾಡೋಕ್ ಕಲಿತ್ರೆ ಇನ್ನೂ ಚೆನ್ನಾಗಿರುತ್ತೆ ಎಂದ.

ಹೆಣ್ಣು ಮಗಳು ಹುಟ್ಟಿದರೆ ಅವಳಿಗೆ ನಾನ್ಯಾಕೆ ಕಲಿಸಬೇಕು..?

ಗಂಡ ಇನ್ನೂ ಮಗನಿಗೆ ಕಲಿಸಬೇಕಾದ ಪಟ್ಟಿಯನ್ನು ಮುಂದುವರೆಸುತ್ತಿದ್ದನೋ ಏನೋ?. ಹೆಂಡತಿಯು ಮಧ್ಯೆ ತಲೆಹಾಕಿದಳು. ಸರಿ, ಹೆಣ್ಣು ಮಗು ಹುಟ್ಟಿದರೆ ಅವಳಿಗೇನು ಕಲಿಸುತ್ತೀರಿ? ಕುತೂಹಲದಿಂದ ಕೇಳಿದಳು. ಹೆಣ್ಣು ಮಗಳೆ? ಹೆಣ್ಣು ಮಗಳು ಹುಟ್ಟಿದರೆ ಅವಳಿಗೆ ನಾನ್ಯಾಕೆ ಕಲಿಸಬೇಕು? ಎಂದ ಗಂಡ. ಆಘಾತವಾಯಿತು ಹೆಂಡತಿಗೆ. ಅವಳಿಗರಿವಿಲ್ಲದಂತೆಯೇ ಕಣ್ಣಿನಲ್ಲಿ ನೀರು ಉಕ್ಕಿತು. ಯಾಕ್ರಿ ನಮಗೆ ಗಂಡು ಮಗು ಹೆಣ್ಣು ಮಗು ಎರಡೂ ಒಂದೇ ಅಲ್ವ. ಹೆಣ್ಣು ಮಗುವಿಗೆ ಯಾಕೆ ಏನನ್ನೂ ಕಲಿಸಲ್ಲ! ಎಂದಳು.

ಹೆಣ್ಣು ಮಕ್ಕಳಿಗೆ ನಾವು ಏನೂ ಕಲಿಸಬೇಕಾಗಿಲ್ಲ ..!

ಗಂಡನು ನಗುತ್ತಾ, ಅಯ್ಯೋ.. ಹೆಣ್ಣು ಮಕ್ಕಳಿಗೆ ನಾವು ಏನೂ ಕಲಿಸಬೇಕಾಗಿಲ್ಲ ಕಣೆ. ಅವರಿಗೆ ಅದು ದೈವದತ್ತವಾಗಿ ಬಂದಿರು ತ್ತದೆ ಎಂದನು. ಅರ್ಥವಾಗಲಿಲ್ಲ. ಬಿಡಿಸಿ ಹೇಳಿ ಎಂದಳು ಹೆಂಡತಿ. ಹೆಣ್ಣು ಮಗಳಿಗೆ ನಾವು ಕಲಿಸಬೇಕಾಗಿಲ್ಲ. ಅವಳು ನಮಗೆ ಎಲ್ಲವನ್ನೂ ಕಲಿಸುತ್ತಾಳೆ. ನಾನು ಹೇಗೆ ಬಟ್ಟೆ ಹಾಕ್ಕೋಬೇಕು, ಏನನ್ನು ತಿನ್ನಬೇಕು, ಹೇಗೆ ತಿನ್ನಬೇಕು, ಏನನ್ನು ಮಾತಾಡಬೇಕು, ಏನನ್ನು ಮಾತನಾಡಬಾರದು, ಎಲ್ಲಿಗೆ ಹೋಗಬೇಕು, ಎಷ್ಟು ಹೊತ್ತಿಗೆಲ್ಲ ಮನೆಗೆ ಬರಬೇಕು. ಒಟ್ಟಿನಲ್ಲಿ ಹೇಳುವುದಾದರೆ ಅವಳು ನನಗೆ ಎರಡನೆಯ ಅಮ್ಮನಾಗಿಬಿಡುತ್ತಾಳೆ. ಮಗಳಿಗೆ ತಂದೆಯೇ ಹೀರೋ!. ನಾನು ಬದುಕಿನಲ್ಲಿ ಏನನ್ನೂ ಸಾಧಿಸದಿದ್ದರೂ ಅವಳ ಪಾಲಿಗೆ ನಾನೇ ಹೀರೊ. ಅವಳಿಗೆ ಏನನ್ನಾದರೂ ಕೊಡಿಸಲಾಗದಿದ್ದರೆ, ಅವಳೇ ನನಗೆ ಸಮಾಧಾನ ಹೇಳಿ ಮುಂದಿನ ತಿಂಗಳು ಕೊಡಿಸುವಿಯಂತೆ ಬಿಡಪ್ಪ ಎನ್ನುತ್ತಾಳೆ.

ಅಪ್ಪನಂತಹ ಗಂಡ ಸಿಗಬೇಕು…

ಅವಳ ಮನಸ್ಸಿನಲ್ಲಿ ತನ್ನ ಅಪ್ಪನಂತಹ ಗಂಡ ಸಿಗಬೇಕು ಎನ್ನುವ ಆಸೆ ಸುಪ್ತವಾಗಿ ಬೆಳೆಯುತ್ತಿರುತ್ತದೆ. ಅವಳಿಗೆ ಮಕ್ಕಳು ಮೊಮ್ಮೊಕ್ಕಳಾದರೂ, ನಾನು ಮಾತ್ರ ಅವಳನ್ನು ಮುದ್ದು ಪುಟಾಣಿಯಂತೆ ಮಾತನಾಡಿಸಬೇಕು, ನೋಡಿಕೊಳ್ಳಬೇಕು, ಮುದ್ದು ಮಾಡಬೇಕು. ಅವಳು ಬೆಳೆಯುವುದೇ ಇಲ್ಲ.

ಗಂಡು ಮಕ್ಕಗೆ  ನಾವೇ ಎಲ್ಲವನ್ನೂ ಕಲಿಸಬೇಕು…

ಅಪ್ಪನ ಮನಸ್ಸನ್ನು ನೋಯಿಸುವವರನ್ನು ಅವಳು ಯಾವ ಕಾರಣಕ್ಕೂ ಕ್ಷಮಿಸಲ್ಲ. ಓ ಮಗಳು ಮಾತ್ರ ನಿಮ್ಮನ್ನು ನೋಡ್ಕೋತಾಳ? ಮಗ ನೋಡ್ಕಳ್ಳಲ್ಲ ಅಂತ ನಿಮ್ಮ ಅಭಿಪ್ರಾಯಾನ? ಇಲ್ಲ ಇಲ್ಲ. ಗಂಡು ಮಕ್ಕಳೂ ನೋಡ್ಕೋತಾರೆ. ಆದರೆ ಅವರಿಗೆ ನಾವೇ ಎಲ್ಲವನ್ನೂ ಕಲಿಸಬೇಕು. ಹೆಣ್ಣು ಮಕ್ಕಳಿಗೆ ಯಾರೂ ಕಲಿಸಬೇಕಾಗಿಲ್ಲ. ಎಲ್ಲ ಹುಟ್ಟಿನೊಡನೆಯೇ ಬಂದಿರುತ್ತದೆ ಎಂದನು ಗಂಡ.

ಇರಬಹುದು ರೀ, ಆದರೆ ಅವಳು ಒಂದಲ್ಲ ಒಂದು ದಿನ ನಮ್ಮನ್ನೆಲ್ಲ ಬಿಟ್ಟು ಗಂಡನ ಮನೆಗೆ ಹೋಗಲೇಬೇಕಲ್ಲವೆ? ವಿಷಾದದಿಂದ ನುಡಿದಳು ಹೆಂಡತಿ. ಹೂಂ, ಹೋಗಲೇಬೇಕು. ಆದರೆ, ನಾವು ಸದಾ ಅವಳ ಹೃದಯದಲ್ಲಿ ಬೆಚ್ಚಗೆ ಇರುತ್ತೇವೆ. ಸದಾ ಕಾಲಕ್ಕೂ! ಎಂದನು. ಗಂಡನ ಕಣ್ಣಂಚು ತುಸು ತೇವವಾಗಿತ್ತು.

ಮೂಲ  

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಾಶ್ಮೀರದಲ್ಲಿ ಯಾರೇ ಗನ್​​ ಹಿಡಿದರೂ, ಅವರನ್ನು ಖಂಡಿತಾ ಕೊಂದು ಹಾಕುತ್ತೇವೆ…ವಾರ್ನಿಂಗ್ ಕೊಟ್ಟ ಭಾರತೀಯ ಸೇನೆ…

    ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ. ಜೊತೆಗೆ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ ಖಡಕ್ ಸಂದೇಶವನ್ನು ರವಾನಿಸಿದೆ. ಸೇನಾಧಿಕಾರಿ ಕನ್ವಾಲ್ ಜೀತ್ ಸಿಂಗ್ ಧಿಲ್ಲಾನ್ ಅವರು, ಕಣಿವೆ ರಾಜ್ಯದಲ್ಲಿ ಯಾರೇ ಆದಾರೂ ಬಂದೂಕು ಮುಟ್ಟುವ ಮುನ್ನ ನೂರು ಬಾರಿ ಯೋಚಿಸಿ, ಏಕೆಂದರೆ ಬಂದೂಕು ಕೈಗೆತ್ತಿಕೊಂಡರೆ ನಾವು ನಿಮ್ಮನ್ನು…

  • ಸುದ್ದಿ

    884 ವರ್ಷಗಳಿಂದ ರಾಮಾನುಜಾಚಾರ್ಯರ ಮೂಲ ಶರೀರವನ್ನು ಯಾವುದೇ ರಾಸಾಯನಿಕಗಳ ಪ್ರಯೋಗವಿಲ್ಲದೆ ಸಂರಕ್ಷಿಸಿ ಇಡಲಾಗಿದೆ…!

    ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ. ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ…

  • ವಿಸ್ಮಯ ಜಗತ್ತು

    ಏಟು ತಿಂದ ಹಾವುಗಳು, ಹೊಡೆದವರನ್ನು ಸುಮ್ಮನೆ ಬಿಡಲ್ವಾ!ತಿಳಿಯಲು ಈ ಲೇಖನ ಓದಿ…

    ಹಾವುಗಳನ್ನು ಕಂಡ್ರೆ ಎಂತಹವರಿಗೂ ಎದೆ ಜಲ್ ಅನ್ನುವ ಅನುಭವ ಆಗ್ತದೆ. ಆಗಂತ ಹಾವಿಗೆ ಭಯ ಇಲ್ದೆ ಇರಲ್ಲ. ಆದ್ರೆ ಹಾವನ್ನು ಸಾಯಿಸಬೇಕಾದ್ರೆ ಅರ್ಧ ಪ್ರಾಣ ಹೋಗಿ ಅರ್ಧ ಪ್ರಾಣ ಉಳಿಯುವಂತೆ ಸಾಯಿಸಬೇಡಿ ಅಂತ ಹೇಳುವುದು ವಾಡಿಕೆ. ಯಾಕಂದ್ರೆ ಅಂತಹವರನ್ನು ಏಟು ತಿಂದ ಹಾವುಗಳು ಸುಮ್ಮನ್ನೇ ಬಿಡೋದಿಲ್ಲ ಅಂತ ಹೇಳ್ತಾರೆ.

  • ಸುದ್ದಿ

    ಮೀನಿಗೆ ಬಲೇ ಬಿಸಿದಾಗ ಈತನಿಗೆ ಸಿಕ್ಕಿದ್ದು ಎಷ್ಟು ಕೋಟಿ ರೂಪಾಯಿ ಗೊತ್ತಾ.

    ಸ್ನೇಹಿತರೆ ಅದೃಷ್ಟ ಅನ್ನುವುದು ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಅನ್ನುವುದನ್ನ ಊಹೆ ಮಾಡಲು ಸಾಧ್ಯವಿಲ್ಲ ಮತ್ತು ಕೆಲವೊಮ್ಮೆ ಅದೃಷ್ಟ ನಮ್ಮ ಸುತ್ತಮುತ್ತ ಇದ್ದರೂ ಕೂಡ ನಮಗೆ ತಿಳಿಯುವುದಿಲ್ಲ. ನಾವು ಹೇಳುವ ಈತನ ವಿಷಯದಲ್ಲಿ ನಡೆದಿದ್ದು ಮಾತ್ರ ಒಂದು ದೊಡ್ಡ ವಿಚಿತ್ರ ಎಂದು ಹೇಳಿದರೆ ತಪ್ಪಾಗಲ್ಲ, ಅದೃಷ್ಟ ಈತನ ಕೈ ಹಿಡಿದರೂ ಕೂಡ ಅದರ ಬಗ್ಗೆ ಅವನಿಗೆ ತಿಳಿಯದೆ ಪ್ರತಿದಿನ ಎಂದಿನಂತೆ ಕಷ್ಟಪಡುತ್ತಿದ್ದ. ಹಾಗಾದರೆ ಅಲ್ಲಿ ನಡೆದಿದ್ದು ಏನು ಮತ್ತು ಆ ಅದೃಷ್ಟ ಆತನಿಗೆ ಯಾವ ರೂಪದಲ್ಲಿ…

  • ಉಪಯುಕ್ತ ಮಾಹಿತಿ

    ಅಕ್ಕಿ ತೊಳೆದ ನೀರನ್ನು ಚೆಲ್ಲುವ ಮೊದಲು ಇದನ್ನು ತಿಳಿದುಕೊಳ್ಳಿ.

    ದಿನನಿತ್ಯ ಅಡುಗೆ ಮಾಡುವುದು ಸಾಮಾನ್ಯ. ಅದರಲ್ಲೂ ನಾವು ತಿನ್ನುವ ಪ್ರಮುಖ ಅಡುಗೆ ಪದಾರ್ತವೆಂದರೇ ಅಕ್ಕಿ. ನಮ್ಮ ದೇಹದ ಪೌಷ್ಟಿಕತೆಗೆ ಬೇಕಾದ ಅಕ್ಕಿಯನ್ನು ಅನ್ನ ಮಾಡುವಾಗ ಅದನ್ನು ಚೆನ್ನಾಗಿ ತೊಳೆದು ಬಳಸುತ್ತೇವೆ. ಆ ನೀರನ್ನು ಚೆಲ್ಲುತ್ತೇವೆ. ಆದರೆ ಚೆಲ್ಲುವ ಮುನ್ನ ಈ ಸುದ್ದಿಯತ್ತ ಗಮನಿಸಿ.  ನಮ್ಮ ಸಧೃಡ ಕೂದಲಿಗೆ ವಿಧ-ವಿಧವಾದ ಎಣ್ಣೆ, ಶ್ಯಾಂಪೂ, ಹೇರ್ ಪ್ಯಾಕ್ ಬಳಸುತ್ತೇವೆ. ಅದರಲ್ಲೂ ಕೂದಲು ಉದುರುವ ಸಮಸ್ಯೆ ಇದ್ದರಂತೂ ಎಲ್ಲರ ಸಲಹೆ ಪಡೆದು ದಿನಕ್ಕೊಂದು ಮನೆ ಮದ್ದು ಮಾಡುತ್ತೇವೆ. ಆದರೆ ಇಷ್ಟೆಲ್ಲ ಮಾಡುವ…

  • ದೇವರು-ಧರ್ಮ

    ಸತ್ತವರನ್ನು ಹಿಂದೂ ಧರ್ಮದಲ್ಲಿ ದಹನ ಮಾಡುತ್ತಾರೆ ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಜಗತ್ತಿನಾದ್ಯಂತ ಅನೇಕ ಧರ್ಮಗಳಿಗೆ ಸೇರಿದವರು ತಮ್ಮ ಆಚಾರ ಸಂಪ್ರದಾಯ ಪಾಲಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಯಾವುದೇ ಧರ್ಮವನ್ನು ತೆಗೆದುಕೊಂಡರೂ ಅದರಲ್ಲಿ ತಮ್ಮ ಧರ್ಮದವರು ತೀರಿಕೊಂಡರೆ ಹೂಳುವುದೋ, ಸುಡುವುದನ್ನೋ ಮಾಡುತ್ತಾರೆ.