ಮನಮಿಡಿಯುವ ಕಥೆ

ಹೆಣ್ಣು ಮಗಳು ಹುಟ್ಟಿದ್ರೆ ಅವಳಿಗೆ ನಾನ್ಯಾಕೆ ಕಲಿಸಬೇಕು.?ಎಂದ ಗಂಡ ನಂತರ ಹೇಳಿದ್ದು ಏನು.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

721

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು.

ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..?

ಗಂಡ ಕಿಟಕಿಯಿಂದ ಹೊರಗೆ ಬಾನಿನತ್ತ ನೋಡುತ್ತಾ ಅವನನ್ನು ಮಹಾ ತುಂಟನನ್ನಾಗಿ ಬೆಳೆಸುತ್ತೇನೆ. ಅವನು ಚೆನ್ನಾಗಿ ಈಜಬೇಕು. ಸೈಕಲ್ ಹೊಡೆಯ ಬೇಕು. ಮರ ಹತ್ತಬೇಕು. ಕ್ರಿಕೆಟ್ ಆಡಬೇಕು. ಕರಾಟೆ ಕಲಿಯಬೇಕು. ಬೆಟ್ಟಗುಡ್ಡ ಹತ್ತಬೇಕು. ಬೈಕ್ ಓಡಿಸಬೇಕು. ನಕ್ಷತ್ರ ವೀಕ್ಷಣೆಯನ್ನು ಮಾಡಿಸ ಬೇಕು. ಲೆಕ್ಕವನ್ನು ಚೆನ್ನಾಗಿ ಕಲಿಸಬೇಕು. ಗಿಟಾರ್ ನುಡಿಸೋಕೆ ಬರಬೇಕು. ಹಾಡೋಕ್ ಕಲಿತ್ರೆ ಇನ್ನೂ ಚೆನ್ನಾಗಿರುತ್ತೆ ಎಂದ.

ಹೆಣ್ಣು ಮಗಳು ಹುಟ್ಟಿದರೆ ಅವಳಿಗೆ ನಾನ್ಯಾಕೆ ಕಲಿಸಬೇಕು..?

ಗಂಡ ಇನ್ನೂ ಮಗನಿಗೆ ಕಲಿಸಬೇಕಾದ ಪಟ್ಟಿಯನ್ನು ಮುಂದುವರೆಸುತ್ತಿದ್ದನೋ ಏನೋ?. ಹೆಂಡತಿಯು ಮಧ್ಯೆ ತಲೆಹಾಕಿದಳು. ಸರಿ, ಹೆಣ್ಣು ಮಗು ಹುಟ್ಟಿದರೆ ಅವಳಿಗೇನು ಕಲಿಸುತ್ತೀರಿ? ಕುತೂಹಲದಿಂದ ಕೇಳಿದಳು. ಹೆಣ್ಣು ಮಗಳೆ? ಹೆಣ್ಣು ಮಗಳು ಹುಟ್ಟಿದರೆ ಅವಳಿಗೆ ನಾನ್ಯಾಕೆ ಕಲಿಸಬೇಕು? ಎಂದ ಗಂಡ. ಆಘಾತವಾಯಿತು ಹೆಂಡತಿಗೆ. ಅವಳಿಗರಿವಿಲ್ಲದಂತೆಯೇ ಕಣ್ಣಿನಲ್ಲಿ ನೀರು ಉಕ್ಕಿತು. ಯಾಕ್ರಿ ನಮಗೆ ಗಂಡು ಮಗು ಹೆಣ್ಣು ಮಗು ಎರಡೂ ಒಂದೇ ಅಲ್ವ. ಹೆಣ್ಣು ಮಗುವಿಗೆ ಯಾಕೆ ಏನನ್ನೂ ಕಲಿಸಲ್ಲ! ಎಂದಳು.

ಹೆಣ್ಣು ಮಕ್ಕಳಿಗೆ ನಾವು ಏನೂ ಕಲಿಸಬೇಕಾಗಿಲ್ಲ ..!

ಗಂಡನು ನಗುತ್ತಾ, ಅಯ್ಯೋ.. ಹೆಣ್ಣು ಮಕ್ಕಳಿಗೆ ನಾವು ಏನೂ ಕಲಿಸಬೇಕಾಗಿಲ್ಲ ಕಣೆ. ಅವರಿಗೆ ಅದು ದೈವದತ್ತವಾಗಿ ಬಂದಿರು ತ್ತದೆ ಎಂದನು. ಅರ್ಥವಾಗಲಿಲ್ಲ. ಬಿಡಿಸಿ ಹೇಳಿ ಎಂದಳು ಹೆಂಡತಿ. ಹೆಣ್ಣು ಮಗಳಿಗೆ ನಾವು ಕಲಿಸಬೇಕಾಗಿಲ್ಲ. ಅವಳು ನಮಗೆ ಎಲ್ಲವನ್ನೂ ಕಲಿಸುತ್ತಾಳೆ. ನಾನು ಹೇಗೆ ಬಟ್ಟೆ ಹಾಕ್ಕೋಬೇಕು, ಏನನ್ನು ತಿನ್ನಬೇಕು, ಹೇಗೆ ತಿನ್ನಬೇಕು, ಏನನ್ನು ಮಾತಾಡಬೇಕು, ಏನನ್ನು ಮಾತನಾಡಬಾರದು, ಎಲ್ಲಿಗೆ ಹೋಗಬೇಕು, ಎಷ್ಟು ಹೊತ್ತಿಗೆಲ್ಲ ಮನೆಗೆ ಬರಬೇಕು. ಒಟ್ಟಿನಲ್ಲಿ ಹೇಳುವುದಾದರೆ ಅವಳು ನನಗೆ ಎರಡನೆಯ ಅಮ್ಮನಾಗಿಬಿಡುತ್ತಾಳೆ. ಮಗಳಿಗೆ ತಂದೆಯೇ ಹೀರೋ!. ನಾನು ಬದುಕಿನಲ್ಲಿ ಏನನ್ನೂ ಸಾಧಿಸದಿದ್ದರೂ ಅವಳ ಪಾಲಿಗೆ ನಾನೇ ಹೀರೊ. ಅವಳಿಗೆ ಏನನ್ನಾದರೂ ಕೊಡಿಸಲಾಗದಿದ್ದರೆ, ಅವಳೇ ನನಗೆ ಸಮಾಧಾನ ಹೇಳಿ ಮುಂದಿನ ತಿಂಗಳು ಕೊಡಿಸುವಿಯಂತೆ ಬಿಡಪ್ಪ ಎನ್ನುತ್ತಾಳೆ.

ಅಪ್ಪನಂತಹ ಗಂಡ ಸಿಗಬೇಕು…

ಅವಳ ಮನಸ್ಸಿನಲ್ಲಿ ತನ್ನ ಅಪ್ಪನಂತಹ ಗಂಡ ಸಿಗಬೇಕು ಎನ್ನುವ ಆಸೆ ಸುಪ್ತವಾಗಿ ಬೆಳೆಯುತ್ತಿರುತ್ತದೆ. ಅವಳಿಗೆ ಮಕ್ಕಳು ಮೊಮ್ಮೊಕ್ಕಳಾದರೂ, ನಾನು ಮಾತ್ರ ಅವಳನ್ನು ಮುದ್ದು ಪುಟಾಣಿಯಂತೆ ಮಾತನಾಡಿಸಬೇಕು, ನೋಡಿಕೊಳ್ಳಬೇಕು, ಮುದ್ದು ಮಾಡಬೇಕು. ಅವಳು ಬೆಳೆಯುವುದೇ ಇಲ್ಲ.

ಗಂಡು ಮಕ್ಕಗೆ  ನಾವೇ ಎಲ್ಲವನ್ನೂ ಕಲಿಸಬೇಕು…

ಅಪ್ಪನ ಮನಸ್ಸನ್ನು ನೋಯಿಸುವವರನ್ನು ಅವಳು ಯಾವ ಕಾರಣಕ್ಕೂ ಕ್ಷಮಿಸಲ್ಲ. ಓ ಮಗಳು ಮಾತ್ರ ನಿಮ್ಮನ್ನು ನೋಡ್ಕೋತಾಳ? ಮಗ ನೋಡ್ಕಳ್ಳಲ್ಲ ಅಂತ ನಿಮ್ಮ ಅಭಿಪ್ರಾಯಾನ? ಇಲ್ಲ ಇಲ್ಲ. ಗಂಡು ಮಕ್ಕಳೂ ನೋಡ್ಕೋತಾರೆ. ಆದರೆ ಅವರಿಗೆ ನಾವೇ ಎಲ್ಲವನ್ನೂ ಕಲಿಸಬೇಕು. ಹೆಣ್ಣು ಮಕ್ಕಳಿಗೆ ಯಾರೂ ಕಲಿಸಬೇಕಾಗಿಲ್ಲ. ಎಲ್ಲ ಹುಟ್ಟಿನೊಡನೆಯೇ ಬಂದಿರುತ್ತದೆ ಎಂದನು ಗಂಡ.

ಇರಬಹುದು ರೀ, ಆದರೆ ಅವಳು ಒಂದಲ್ಲ ಒಂದು ದಿನ ನಮ್ಮನ್ನೆಲ್ಲ ಬಿಟ್ಟು ಗಂಡನ ಮನೆಗೆ ಹೋಗಲೇಬೇಕಲ್ಲವೆ? ವಿಷಾದದಿಂದ ನುಡಿದಳು ಹೆಂಡತಿ. ಹೂಂ, ಹೋಗಲೇಬೇಕು. ಆದರೆ, ನಾವು ಸದಾ ಅವಳ ಹೃದಯದಲ್ಲಿ ಬೆಚ್ಚಗೆ ಇರುತ್ತೇವೆ. ಸದಾ ಕಾಲಕ್ಕೂ! ಎಂದನು. ಗಂಡನ ಕಣ್ಣಂಚು ತುಸು ತೇವವಾಗಿತ್ತು.

ಮೂಲ  

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಇವರು ಮುಖ್ಯಮಂತ್ರಿಯಾಗಿ ಇಂದಿಗೆ 23 ವರ್ಷಗಳಾಗಿವೆ.ಇವರ ಬಗ್ಗೆ ನಿಮ್ಗೆ ತಿಳಿಯದ ಎಷ್ಟೋ ಸತ್ಯಗಳಿವೆ..!ತಿಳಿಯಲು ಈ ಲೇಖನ ಓದಿ…

    ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ 12 ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. ‘ಮಣ್ಣಿನ ಮಗ’ ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.

  • ಜ್ಯೋತಿಷ್ಯ

    15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಒಂದೆ ಕೀ ಬಳಸಿ ಕದ್ದ ಪೋರ……!

    ತಾನೇ ಸಿದ್ದಪಡಿಸಿದ ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಮೆಕ್ಯಾನಿಕ್ ಒಬ್ಬಾತ ಸಿಕ್ಕಿ ಬಿದ್ದಿದ್ದಾನೆ. ರಾಜ್ಯ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ದ್ವಿಚಕ್ರ ವಾಹನ ಮತ್ತು ಮೊಪೆಡ್‌ಗಳ ಮೆಕ್ಯಾನಿಕ್‌ ಒಬ್ಬಾತ ತಾನೇ ಸಿದ್ದಪಡಿಸಿದ ಒಂದೇ ಒಂದು ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಸಿಕ್ಕಿ ಬಿದ್ದಿದ್ದಾನೆ. ಕೆಂಪೇಗೌಡ ಲೇಔಟ್‌ನ ನಿವಾಸಿ ನವೀನ್‌ ಅಲಿಯಾಸ್‌ ಡಿಯೋ ನವೀನ್‌ (19) ಸಿಕ್ಕಿ ಬಿದ್ದವ. ಈತನ ಸಹಚರ…

  • ಸಿನಿಮಾ

    ಸ್ಯಾಂಡಲ್ ವುಡ್ ತಾರಾ ಜೋಡಿ ದಿಗಂತ್-ಐಂದ್ರಿತಾ ಮದುವೆಗೆ ಹೋಗುವ ಅತಿಥಿಗಳು ಈ ಷರತ್ತನ್ನು ಪಾಲಿಸಬೇಕು..!

    ಚಂದನವನದ ಈ ಕ್ಯೂಟ್ ಜೋಡಿ ಬಗ್ಗೆ ಹಲವಾರು ಸುದ್ದಿಗಳು ಬರುತ್ತಲೇ ಇದ್ದವು. ಇವರಿಬ್ಬರು ಲವ್ ಮಾಡ್ತಿದ್ದಾರೆ, ಮದುವೆ ಆಗ್ತಾರೆ ಎಂಬ ಸುದ್ದಿಗಳು ಆಗಾಗ ಬರ್ತಾ ಇತ್ತು. ಆ ಕ್ಯೂಟ್ ಜೋಡಿಗಳೇ ದುದ್ ಪೇಡಾ ದಿಗಂತ್ ಮತ್ತು ಐಂದ್ರಿತಾ ರೈ. ಈಗ ಜೋಡಿ ಮದುವೆಯಾಗಿ ನವಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ಬೆಂಗಳೂರು ನಗರದ ರಾಜರಾಜೇಶ್ವರಿ ನಗರದ ಸುಭಾಷ್ ಭವನದಲ್ಲಿ ಈ ನವ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ದಾವಾಗಿದ್ದು, ಸಿಂಪಲ್ ಆಗಿ ಮಾಡುವೆ ಆಗಲಿದ್ದಾರಂತೆ.ಈಗಾಗಲೇ ಕುಟುಂಬದವರು ಇವರ ಮದುವೆಗೆ ಬಂಬಂಧು…

  • ಆಧ್ಯಾತ್ಮ, ಜ್ಯೋತಿಷ್ಯ

    ಚಂಡಿಯಾಗ ಎಂದರೇನು,? ಯಾರು ಯಾವಾಗ ಮಾಡಬೇಕು,? ಇದರಿಂದಾಗುವ ಲಾಭಗಳೇನು ಗೊತ್ತಾ..??

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ದೇವಿ ಉಪಾಸನೆಯ ಪ್ರಮುಖ ಭಾಗವೇ ದುರ್ಗಾಸಪ್ತಶತಿ ಪಾರಾಯಣ. ದುರ್ಗಾಸಪ್ತಶತಿಯಲ್ಲಿ 700 ಶ್ಲೋಕಗಳಿವೆ. ಪ್ರತಿಯೊಂದು ಶ್ಲೋಕವನ್ನು ಮಂತ್ರರೂಪಕವಾಗಿ ಚರುವಿನ ಮೂಲಕ ಮಾಡುವ ಯಜ್ಞವೇ ಚಂಡಿಕಾಯಾಗ. ಚಂಡಿಕಾಯಾಗದ ಮೂಲಕ ಮಹಾಲಕ್ಷ್ಮಿ,…

  • ಸುದ್ದಿ

    ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ!ಪರೀಕ್ಷೆ ಬರೆಯುವ ವಿಧ್ಯಾರ್ಥಿಗಳಿಗೆ ಇದು ಉಚಿತ…

    ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್‍ಆರ್ ಟಿಸಿ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ…

  • ಉಪಯುಕ್ತ ಮಾಹಿತಿ, ದೇವರು

    ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಒಮ್ಮೆ ನೋಡಿ.!

    ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…