ಮನಮಿಡಿಯುವ ಕಥೆ

ಹೆಣ್ಣು ಮಗಳು ಹುಟ್ಟಿದ್ರೆ ಅವಳಿಗೆ ನಾನ್ಯಾಕೆ ಕಲಿಸಬೇಕು.?ಎಂದ ಗಂಡ ನಂತರ ಹೇಳಿದ್ದು ಏನು.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

725

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು.

ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..?

ಗಂಡ ಕಿಟಕಿಯಿಂದ ಹೊರಗೆ ಬಾನಿನತ್ತ ನೋಡುತ್ತಾ ಅವನನ್ನು ಮಹಾ ತುಂಟನನ್ನಾಗಿ ಬೆಳೆಸುತ್ತೇನೆ. ಅವನು ಚೆನ್ನಾಗಿ ಈಜಬೇಕು. ಸೈಕಲ್ ಹೊಡೆಯ ಬೇಕು. ಮರ ಹತ್ತಬೇಕು. ಕ್ರಿಕೆಟ್ ಆಡಬೇಕು. ಕರಾಟೆ ಕಲಿಯಬೇಕು. ಬೆಟ್ಟಗುಡ್ಡ ಹತ್ತಬೇಕು. ಬೈಕ್ ಓಡಿಸಬೇಕು. ನಕ್ಷತ್ರ ವೀಕ್ಷಣೆಯನ್ನು ಮಾಡಿಸ ಬೇಕು. ಲೆಕ್ಕವನ್ನು ಚೆನ್ನಾಗಿ ಕಲಿಸಬೇಕು. ಗಿಟಾರ್ ನುಡಿಸೋಕೆ ಬರಬೇಕು. ಹಾಡೋಕ್ ಕಲಿತ್ರೆ ಇನ್ನೂ ಚೆನ್ನಾಗಿರುತ್ತೆ ಎಂದ.

ಹೆಣ್ಣು ಮಗಳು ಹುಟ್ಟಿದರೆ ಅವಳಿಗೆ ನಾನ್ಯಾಕೆ ಕಲಿಸಬೇಕು..?

ಗಂಡ ಇನ್ನೂ ಮಗನಿಗೆ ಕಲಿಸಬೇಕಾದ ಪಟ್ಟಿಯನ್ನು ಮುಂದುವರೆಸುತ್ತಿದ್ದನೋ ಏನೋ?. ಹೆಂಡತಿಯು ಮಧ್ಯೆ ತಲೆಹಾಕಿದಳು. ಸರಿ, ಹೆಣ್ಣು ಮಗು ಹುಟ್ಟಿದರೆ ಅವಳಿಗೇನು ಕಲಿಸುತ್ತೀರಿ? ಕುತೂಹಲದಿಂದ ಕೇಳಿದಳು. ಹೆಣ್ಣು ಮಗಳೆ? ಹೆಣ್ಣು ಮಗಳು ಹುಟ್ಟಿದರೆ ಅವಳಿಗೆ ನಾನ್ಯಾಕೆ ಕಲಿಸಬೇಕು? ಎಂದ ಗಂಡ. ಆಘಾತವಾಯಿತು ಹೆಂಡತಿಗೆ. ಅವಳಿಗರಿವಿಲ್ಲದಂತೆಯೇ ಕಣ್ಣಿನಲ್ಲಿ ನೀರು ಉಕ್ಕಿತು. ಯಾಕ್ರಿ ನಮಗೆ ಗಂಡು ಮಗು ಹೆಣ್ಣು ಮಗು ಎರಡೂ ಒಂದೇ ಅಲ್ವ. ಹೆಣ್ಣು ಮಗುವಿಗೆ ಯಾಕೆ ಏನನ್ನೂ ಕಲಿಸಲ್ಲ! ಎಂದಳು.

ಹೆಣ್ಣು ಮಕ್ಕಳಿಗೆ ನಾವು ಏನೂ ಕಲಿಸಬೇಕಾಗಿಲ್ಲ ..!

ಗಂಡನು ನಗುತ್ತಾ, ಅಯ್ಯೋ.. ಹೆಣ್ಣು ಮಕ್ಕಳಿಗೆ ನಾವು ಏನೂ ಕಲಿಸಬೇಕಾಗಿಲ್ಲ ಕಣೆ. ಅವರಿಗೆ ಅದು ದೈವದತ್ತವಾಗಿ ಬಂದಿರು ತ್ತದೆ ಎಂದನು. ಅರ್ಥವಾಗಲಿಲ್ಲ. ಬಿಡಿಸಿ ಹೇಳಿ ಎಂದಳು ಹೆಂಡತಿ. ಹೆಣ್ಣು ಮಗಳಿಗೆ ನಾವು ಕಲಿಸಬೇಕಾಗಿಲ್ಲ. ಅವಳು ನಮಗೆ ಎಲ್ಲವನ್ನೂ ಕಲಿಸುತ್ತಾಳೆ. ನಾನು ಹೇಗೆ ಬಟ್ಟೆ ಹಾಕ್ಕೋಬೇಕು, ಏನನ್ನು ತಿನ್ನಬೇಕು, ಹೇಗೆ ತಿನ್ನಬೇಕು, ಏನನ್ನು ಮಾತಾಡಬೇಕು, ಏನನ್ನು ಮಾತನಾಡಬಾರದು, ಎಲ್ಲಿಗೆ ಹೋಗಬೇಕು, ಎಷ್ಟು ಹೊತ್ತಿಗೆಲ್ಲ ಮನೆಗೆ ಬರಬೇಕು. ಒಟ್ಟಿನಲ್ಲಿ ಹೇಳುವುದಾದರೆ ಅವಳು ನನಗೆ ಎರಡನೆಯ ಅಮ್ಮನಾಗಿಬಿಡುತ್ತಾಳೆ. ಮಗಳಿಗೆ ತಂದೆಯೇ ಹೀರೋ!. ನಾನು ಬದುಕಿನಲ್ಲಿ ಏನನ್ನೂ ಸಾಧಿಸದಿದ್ದರೂ ಅವಳ ಪಾಲಿಗೆ ನಾನೇ ಹೀರೊ. ಅವಳಿಗೆ ಏನನ್ನಾದರೂ ಕೊಡಿಸಲಾಗದಿದ್ದರೆ, ಅವಳೇ ನನಗೆ ಸಮಾಧಾನ ಹೇಳಿ ಮುಂದಿನ ತಿಂಗಳು ಕೊಡಿಸುವಿಯಂತೆ ಬಿಡಪ್ಪ ಎನ್ನುತ್ತಾಳೆ.

ಅಪ್ಪನಂತಹ ಗಂಡ ಸಿಗಬೇಕು…

ಅವಳ ಮನಸ್ಸಿನಲ್ಲಿ ತನ್ನ ಅಪ್ಪನಂತಹ ಗಂಡ ಸಿಗಬೇಕು ಎನ್ನುವ ಆಸೆ ಸುಪ್ತವಾಗಿ ಬೆಳೆಯುತ್ತಿರುತ್ತದೆ. ಅವಳಿಗೆ ಮಕ್ಕಳು ಮೊಮ್ಮೊಕ್ಕಳಾದರೂ, ನಾನು ಮಾತ್ರ ಅವಳನ್ನು ಮುದ್ದು ಪುಟಾಣಿಯಂತೆ ಮಾತನಾಡಿಸಬೇಕು, ನೋಡಿಕೊಳ್ಳಬೇಕು, ಮುದ್ದು ಮಾಡಬೇಕು. ಅವಳು ಬೆಳೆಯುವುದೇ ಇಲ್ಲ.

ಗಂಡು ಮಕ್ಕಗೆ  ನಾವೇ ಎಲ್ಲವನ್ನೂ ಕಲಿಸಬೇಕು…

ಅಪ್ಪನ ಮನಸ್ಸನ್ನು ನೋಯಿಸುವವರನ್ನು ಅವಳು ಯಾವ ಕಾರಣಕ್ಕೂ ಕ್ಷಮಿಸಲ್ಲ. ಓ ಮಗಳು ಮಾತ್ರ ನಿಮ್ಮನ್ನು ನೋಡ್ಕೋತಾಳ? ಮಗ ನೋಡ್ಕಳ್ಳಲ್ಲ ಅಂತ ನಿಮ್ಮ ಅಭಿಪ್ರಾಯಾನ? ಇಲ್ಲ ಇಲ್ಲ. ಗಂಡು ಮಕ್ಕಳೂ ನೋಡ್ಕೋತಾರೆ. ಆದರೆ ಅವರಿಗೆ ನಾವೇ ಎಲ್ಲವನ್ನೂ ಕಲಿಸಬೇಕು. ಹೆಣ್ಣು ಮಕ್ಕಳಿಗೆ ಯಾರೂ ಕಲಿಸಬೇಕಾಗಿಲ್ಲ. ಎಲ್ಲ ಹುಟ್ಟಿನೊಡನೆಯೇ ಬಂದಿರುತ್ತದೆ ಎಂದನು ಗಂಡ.

ಇರಬಹುದು ರೀ, ಆದರೆ ಅವಳು ಒಂದಲ್ಲ ಒಂದು ದಿನ ನಮ್ಮನ್ನೆಲ್ಲ ಬಿಟ್ಟು ಗಂಡನ ಮನೆಗೆ ಹೋಗಲೇಬೇಕಲ್ಲವೆ? ವಿಷಾದದಿಂದ ನುಡಿದಳು ಹೆಂಡತಿ. ಹೂಂ, ಹೋಗಲೇಬೇಕು. ಆದರೆ, ನಾವು ಸದಾ ಅವಳ ಹೃದಯದಲ್ಲಿ ಬೆಚ್ಚಗೆ ಇರುತ್ತೇವೆ. ಸದಾ ಕಾಲಕ್ಕೂ! ಎಂದನು. ಗಂಡನ ಕಣ್ಣಂಚು ತುಸು ತೇವವಾಗಿತ್ತು.

ಮೂಲ  

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸೌಂದರ್ಯ

    ವಯಸ್ಸು 50 ವರ್ಷವಾದರೂ, 20 ವರ್ಷದ ಹುಡುಗನಂತೆ ಕಾಣಿಸುತ್ತಾನೆ..!ತಿಳಿಯಲು ಈ ಲೇಖನ ಓದಿ..

    ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • ಸುದ್ದಿ

    ರಣಂ ಚಿತ್ರದ ಶೂಟಿಂಗ್ ಸಮಯದಲ್ಲಿ ಇಬ್ಬರ ದುರ್ಮರಣ ಪ್ರಕರಣ- ತನಿಖೆ ನಡೆಸುವವೇಳೆ ಸ್ಫೋಟಕ ಟ್ವಿಸ್ಟ್…….!

    ನಟ ಚಿರಂಜೀವಿ ಸರ್ಜಾ ಅಭಿನಯದ `ರಣಂ’ ಚಿತ್ರದ ಶೂಟಿಂಗ್ ವೇಳೆ ಇಬ್ಬರು ದುರ್ಮರಣಕ್ಕೀಡಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸಪ್ಪನ ಹಣದ ದಾಹಕ್ಕೆ ಇಬ್ಬರು ಅಮಾಯಕರು ಬಲಿಯಾಗಿರುವುದು ಆಂತರಿಕ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.ಶೂಟಿಂಗ್ಗೆ ಅನುಮತಿ ಇಲ್ಲದೇ ಹೋದರೂ 5 ಸಾವಿರ ಹಣ ಪಡೆದು ಪೇದೆ ಶೂಟಿಂಗ್ ಮಾಡಿಸಿದ್ದನು. ತನಿಖಾ ವರದಿ ಕೈ ಸೇರುತ್ತಿದ್ದಂತೆಯೇ ಪೊಲೀಸ್ ಪೇದೆಯನ್ನು ಅಮಾನತು ಮಾಡುವಂತೆ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ. ಬಾಗಲೂರು ಠಾಣೆಯ ಪೇದೆಯಾಗಿದ್ದ ಭೀಮಾ…

  • ಸುದ್ದಿ

    ‘ಲೈಫ್ ಬಿಗಿನ್ಸ್ ಅಟ್90’ ಎಂಬ ಮಾತನ್ನು ಸ್ಕೂಬಾ ಡೈವಿಂಗ್ಸ್ ನಲ್ಲಿ ವಿಶ್ವದಾಖಲೆ ಸೃಷ್ಟಿಸಿದ ಅಜ್ಜ..!

    ಸಾಧನೆ ಮತ್ತು ಸಾಹಸಕ್ಕೆ ವಯೋಮಾನ ಎಂದಿಗೂ ಅಡ್ಡಿಯಲ್ಲ ಎಂಬುದು ಈ ಜಗತ್ತಿನಲ್ಲಿ ಅನೇಕ ಬಾರಿ ಸಾಬೀತಾಗಿದೆ. ವಯೋವೃದ್ದರೊಬ್ಬರು ಈ ಹಿಂದೆ ತಾವೇ ಸೃಷ್ಟಿಸಿದ ವಿಶ್ವ ದಾಖಲೆಯನ್ನು ತಾವೇಮುರಿದು ಗಮನಸೆಳೆದಿದ್ದಾರೆ. ಬನ್ನಿ ಈ ಕಿಲಾಡಿತಾತನನ್ನು ನಾವೀಗ ಭೇಟಿ ಮಾಡೋಣ.. ಎರಡನೇ ವಿಶ್ವ ಯುದ್ಧದ ಮಾಜಿಯೋಧ ಹಾಗೂ 96 ವರ್ಷದ ಸಾಹಸಿವೂಲೇ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು ಸ್ಕೂಬಾ ಡೈವಿಂಗ್ ಮಾಡಿತಮ್ಮ ವಿಶ್ವ ದಾಖಲೆಯನ್ನು ಈ ವಯೋವೃದ್ದರು ಮುರಿದಿದ್ಧಾರೆ. ವಿಶ್ವದ ಅತ್ಯಂತ ಹಿರಿಯ ಸ್ಕೂಬಾ ಡೈವರ್ ಎಂದೇ ಖ್ಯಾತಿಪಡೆದಿರುವ ಇವರು…

  • ಜ್ಯೋತಿಷ್ಯ

    ಆಂಜನೇಯನ ಕೃಪೆಯಿಂದ ನಿಮ್ಮ ದಿನ‌ ಭವಿಷ್ಯ ಶನಿವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಜ್ಯೋತಿಷ್ಯ

    ದಿನ ಭವಿಷ್ಯ , ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….

    ನಿತ್ಯ ಭವಿಷ್ಯ………… ಮೇಷ ರಾಶಿ ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ವೃಷಭ ರಾಶಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು.  ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ…