ಮನಮಿಡಿಯುವ ಕಥೆ

ಹೆಣ್ಣು ಮಗಳು ಹುಟ್ಟಿದ್ರೆ ಅವಳಿಗೆ ನಾನ್ಯಾಕೆ ಕಲಿಸಬೇಕು.?ಎಂದ ಗಂಡ ನಂತರ ಹೇಳಿದ್ದು ಏನು.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

722

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು.

ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..?

ಗಂಡ ಕಿಟಕಿಯಿಂದ ಹೊರಗೆ ಬಾನಿನತ್ತ ನೋಡುತ್ತಾ ಅವನನ್ನು ಮಹಾ ತುಂಟನನ್ನಾಗಿ ಬೆಳೆಸುತ್ತೇನೆ. ಅವನು ಚೆನ್ನಾಗಿ ಈಜಬೇಕು. ಸೈಕಲ್ ಹೊಡೆಯ ಬೇಕು. ಮರ ಹತ್ತಬೇಕು. ಕ್ರಿಕೆಟ್ ಆಡಬೇಕು. ಕರಾಟೆ ಕಲಿಯಬೇಕು. ಬೆಟ್ಟಗುಡ್ಡ ಹತ್ತಬೇಕು. ಬೈಕ್ ಓಡಿಸಬೇಕು. ನಕ್ಷತ್ರ ವೀಕ್ಷಣೆಯನ್ನು ಮಾಡಿಸ ಬೇಕು. ಲೆಕ್ಕವನ್ನು ಚೆನ್ನಾಗಿ ಕಲಿಸಬೇಕು. ಗಿಟಾರ್ ನುಡಿಸೋಕೆ ಬರಬೇಕು. ಹಾಡೋಕ್ ಕಲಿತ್ರೆ ಇನ್ನೂ ಚೆನ್ನಾಗಿರುತ್ತೆ ಎಂದ.

ಹೆಣ್ಣು ಮಗಳು ಹುಟ್ಟಿದರೆ ಅವಳಿಗೆ ನಾನ್ಯಾಕೆ ಕಲಿಸಬೇಕು..?

ಗಂಡ ಇನ್ನೂ ಮಗನಿಗೆ ಕಲಿಸಬೇಕಾದ ಪಟ್ಟಿಯನ್ನು ಮುಂದುವರೆಸುತ್ತಿದ್ದನೋ ಏನೋ?. ಹೆಂಡತಿಯು ಮಧ್ಯೆ ತಲೆಹಾಕಿದಳು. ಸರಿ, ಹೆಣ್ಣು ಮಗು ಹುಟ್ಟಿದರೆ ಅವಳಿಗೇನು ಕಲಿಸುತ್ತೀರಿ? ಕುತೂಹಲದಿಂದ ಕೇಳಿದಳು. ಹೆಣ್ಣು ಮಗಳೆ? ಹೆಣ್ಣು ಮಗಳು ಹುಟ್ಟಿದರೆ ಅವಳಿಗೆ ನಾನ್ಯಾಕೆ ಕಲಿಸಬೇಕು? ಎಂದ ಗಂಡ. ಆಘಾತವಾಯಿತು ಹೆಂಡತಿಗೆ. ಅವಳಿಗರಿವಿಲ್ಲದಂತೆಯೇ ಕಣ್ಣಿನಲ್ಲಿ ನೀರು ಉಕ್ಕಿತು. ಯಾಕ್ರಿ ನಮಗೆ ಗಂಡು ಮಗು ಹೆಣ್ಣು ಮಗು ಎರಡೂ ಒಂದೇ ಅಲ್ವ. ಹೆಣ್ಣು ಮಗುವಿಗೆ ಯಾಕೆ ಏನನ್ನೂ ಕಲಿಸಲ್ಲ! ಎಂದಳು.

ಹೆಣ್ಣು ಮಕ್ಕಳಿಗೆ ನಾವು ಏನೂ ಕಲಿಸಬೇಕಾಗಿಲ್ಲ ..!

ಗಂಡನು ನಗುತ್ತಾ, ಅಯ್ಯೋ.. ಹೆಣ್ಣು ಮಕ್ಕಳಿಗೆ ನಾವು ಏನೂ ಕಲಿಸಬೇಕಾಗಿಲ್ಲ ಕಣೆ. ಅವರಿಗೆ ಅದು ದೈವದತ್ತವಾಗಿ ಬಂದಿರು ತ್ತದೆ ಎಂದನು. ಅರ್ಥವಾಗಲಿಲ್ಲ. ಬಿಡಿಸಿ ಹೇಳಿ ಎಂದಳು ಹೆಂಡತಿ. ಹೆಣ್ಣು ಮಗಳಿಗೆ ನಾವು ಕಲಿಸಬೇಕಾಗಿಲ್ಲ. ಅವಳು ನಮಗೆ ಎಲ್ಲವನ್ನೂ ಕಲಿಸುತ್ತಾಳೆ. ನಾನು ಹೇಗೆ ಬಟ್ಟೆ ಹಾಕ್ಕೋಬೇಕು, ಏನನ್ನು ತಿನ್ನಬೇಕು, ಹೇಗೆ ತಿನ್ನಬೇಕು, ಏನನ್ನು ಮಾತಾಡಬೇಕು, ಏನನ್ನು ಮಾತನಾಡಬಾರದು, ಎಲ್ಲಿಗೆ ಹೋಗಬೇಕು, ಎಷ್ಟು ಹೊತ್ತಿಗೆಲ್ಲ ಮನೆಗೆ ಬರಬೇಕು. ಒಟ್ಟಿನಲ್ಲಿ ಹೇಳುವುದಾದರೆ ಅವಳು ನನಗೆ ಎರಡನೆಯ ಅಮ್ಮನಾಗಿಬಿಡುತ್ತಾಳೆ. ಮಗಳಿಗೆ ತಂದೆಯೇ ಹೀರೋ!. ನಾನು ಬದುಕಿನಲ್ಲಿ ಏನನ್ನೂ ಸಾಧಿಸದಿದ್ದರೂ ಅವಳ ಪಾಲಿಗೆ ನಾನೇ ಹೀರೊ. ಅವಳಿಗೆ ಏನನ್ನಾದರೂ ಕೊಡಿಸಲಾಗದಿದ್ದರೆ, ಅವಳೇ ನನಗೆ ಸಮಾಧಾನ ಹೇಳಿ ಮುಂದಿನ ತಿಂಗಳು ಕೊಡಿಸುವಿಯಂತೆ ಬಿಡಪ್ಪ ಎನ್ನುತ್ತಾಳೆ.

ಅಪ್ಪನಂತಹ ಗಂಡ ಸಿಗಬೇಕು…

ಅವಳ ಮನಸ್ಸಿನಲ್ಲಿ ತನ್ನ ಅಪ್ಪನಂತಹ ಗಂಡ ಸಿಗಬೇಕು ಎನ್ನುವ ಆಸೆ ಸುಪ್ತವಾಗಿ ಬೆಳೆಯುತ್ತಿರುತ್ತದೆ. ಅವಳಿಗೆ ಮಕ್ಕಳು ಮೊಮ್ಮೊಕ್ಕಳಾದರೂ, ನಾನು ಮಾತ್ರ ಅವಳನ್ನು ಮುದ್ದು ಪುಟಾಣಿಯಂತೆ ಮಾತನಾಡಿಸಬೇಕು, ನೋಡಿಕೊಳ್ಳಬೇಕು, ಮುದ್ದು ಮಾಡಬೇಕು. ಅವಳು ಬೆಳೆಯುವುದೇ ಇಲ್ಲ.

ಗಂಡು ಮಕ್ಕಗೆ  ನಾವೇ ಎಲ್ಲವನ್ನೂ ಕಲಿಸಬೇಕು…

ಅಪ್ಪನ ಮನಸ್ಸನ್ನು ನೋಯಿಸುವವರನ್ನು ಅವಳು ಯಾವ ಕಾರಣಕ್ಕೂ ಕ್ಷಮಿಸಲ್ಲ. ಓ ಮಗಳು ಮಾತ್ರ ನಿಮ್ಮನ್ನು ನೋಡ್ಕೋತಾಳ? ಮಗ ನೋಡ್ಕಳ್ಳಲ್ಲ ಅಂತ ನಿಮ್ಮ ಅಭಿಪ್ರಾಯಾನ? ಇಲ್ಲ ಇಲ್ಲ. ಗಂಡು ಮಕ್ಕಳೂ ನೋಡ್ಕೋತಾರೆ. ಆದರೆ ಅವರಿಗೆ ನಾವೇ ಎಲ್ಲವನ್ನೂ ಕಲಿಸಬೇಕು. ಹೆಣ್ಣು ಮಕ್ಕಳಿಗೆ ಯಾರೂ ಕಲಿಸಬೇಕಾಗಿಲ್ಲ. ಎಲ್ಲ ಹುಟ್ಟಿನೊಡನೆಯೇ ಬಂದಿರುತ್ತದೆ ಎಂದನು ಗಂಡ.

ಇರಬಹುದು ರೀ, ಆದರೆ ಅವಳು ಒಂದಲ್ಲ ಒಂದು ದಿನ ನಮ್ಮನ್ನೆಲ್ಲ ಬಿಟ್ಟು ಗಂಡನ ಮನೆಗೆ ಹೋಗಲೇಬೇಕಲ್ಲವೆ? ವಿಷಾದದಿಂದ ನುಡಿದಳು ಹೆಂಡತಿ. ಹೂಂ, ಹೋಗಲೇಬೇಕು. ಆದರೆ, ನಾವು ಸದಾ ಅವಳ ಹೃದಯದಲ್ಲಿ ಬೆಚ್ಚಗೆ ಇರುತ್ತೇವೆ. ಸದಾ ಕಾಲಕ್ಕೂ! ಎಂದನು. ಗಂಡನ ಕಣ್ಣಂಚು ತುಸು ತೇವವಾಗಿತ್ತು.

ಮೂಲ  

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಬಯಲುಸೀಮೆ ಕೋಲಾರದ ಈಗಿನ ಬರಗಾಲದ ಪರಿಸ್ಥಿತಿಗೆ ಇದು ಮುಖ್ಯ ಕಾರಣ ಇರಬಹುದಾ? ನೀವೇನಂತೀರಾ?

    ಇದು ಬಯಲುಸೀಮೆಯ ಗಡಿನಾಡು ಕೋಲಾರ ಜಿಲ್ಲೆಯ ಸ್ಥಿತಿ. ಒಂದು ಕಾಲದಲ್ಲಿ ಅತಿ ಹೆಚ್ಚು ಕೆರೆಗಳ ನಾಡು ಎಂದು ಪ್ರಸಿದ್ಧಿ ಪಡೆದು ಸದಾ ಹಸಿರಿನಿಂದ ಕೂಡಿದ್ದ ಜಿಲ್ಲೆಯಾಗಿತ್ತು ಕೋಲಾರ. ಕಾಲಾಂತರ ಮಳೆರಾಯನ ಮುನಿಸು ಜಿಲ್ಲೆಯ ಮೇಲೆ ಬಂದಿದ್ರಿಂದ ಇಲ್ಲಿನ ರೈತರು ಪರ್ಯಾಯ ಹಾಗೂ ಆಧುನಿಕ ಕೃಷಿಯತ್ತ ಮುಂದಾದ್ರು. ಇದ್ರಿಂದ ಹೆಚ್ಚು ಲಾಭ ಹಾಗೂ ಕಡಿಮೆ ಶ್ರಮವುಳ್ಳ ನೀಲಗಿರಿ ಸಸಿಗಳನ್ನು ನೆಡಲು ರೈತ್ರು ಮುಂದಾದ್ರು. ಇದ್ರಿಂದ ಭೂಮಿಯಲ್ಲಿ ಇರುವ ನೀರಿನ ಪ್ರಮಾಣವನ್ನು ಈ ಮರಗಳು ತೆಗೆದುಕೊಂಡು ನೆಲವನ್ನು ಬರಡುಗೊಳಿಸಿತು. ಇದರಿಂದ ಅಂತರ್ಜಲಮಟ್ಟ ತೀವ್ರ ಕುಸಿದಿದೆ.

  • ಸುದ್ದಿ

    ʼಚಿನ್ನʼ ಪ್ರಿಯರಿಗೆ ಬಿಗ್‌ ಶಾಕ್: 39 ಸಾವಿರ‌ ರೂ. ಗಡಿ ದಾಟಿದ ಚಿನ್ನದ ಬೆಲೆ

    ಚಿನ್ನ ಜನಸಾಮಾನ್ಯರಿಗೆ ಕೈಗೆಟುಕುತ್ತಿಲ್ಲ. ನಿರಂತರವಾಗಿ ಬಂಗಾರದ ಬೆಲೆ ಏರಿಕೆಯಾಗ್ತಿದೆ. ಸತತ 6ನೇ ದಿನವೂ ಬಂಗಾರದ ಬೆಲೆ ಹೆಚ್ಚಾಗಿದೆ. ಚಿನ್ನ ಈವರೆಗೆ ಶೇಕಡಾ 25 ರಷ್ಟು ಏರಿಕೆ ಕಂಡಿದ್ದು, ಸೋಮವಾರ 10 ಗ್ರಾಂ ಚಿನ್ನದ ಬೆಲೆ 39,196 ರೂಪಾಯಿಯಾಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಶೇಕಡಾ 1ರಷ್ಟು ಹೆಚ್ಚಳ ಕಂಡಿದೆ. ಸೋಮವಾರ ಬೆಳ್ಳಿ ಬೆಲೆ ಕೆ.ಜಿ.ಗೆ 45,058 ರೂಪಾಯಿಗೆ ಮಾರಾಟವಾಗ್ತಿದೆ. ಶುಕ್ರವಾರ ಕೆ.ಜಿ. ಬೆಳ್ಳಿ 45,148 ರೂಪಾಯಿಯಿತ್ತು. ಇದು 2016ರ ನಂತ್ರ ಗರಿಷ್ಠ…

  • ಸಿನಿಮಾ

    ಶಾಕಿಂಗ್ ಸುದ್ದಿ.!ನಟನನ್ನು ನೋಡಲಾಗದೇ ಆತ್ಮಹತ್ಯೆ ಯತ್ನಿಸಿದ್ದ ಅಭಿಮಾನಿ ಸಾವು..!

    ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಭಾಶಯ ಹೇಳಲು ಬಂದಿದ್ದ ಅಭಿಮಾನಿಯೊಬ್ಬ ಯಶ್ ಭೇಟಿ ಸಾಧ್ಯವಾಗದ ಹಿನ್ನಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ರವಿ ಮಧ್ಯರಾತ್ರಿಯೇ ಸಾವನ್ನಪ್ಪಿದ್ದಾನೆ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಮಂಗಳವಾರ ತನ್ನ ನೆಚ್ಚಿನ ನಟ ಯಶ್ ಅವರ ಹುಟ್ಟುಹಬ್ಬವಿದ್ದ ಕಾರಣ ಅವರನ್ನು ಭೇಟಿ ಮಾಡಲು ಬೆಂಗಳೂರಿನ…

  • ಸ್ಪೂರ್ತಿ

    ಈ ಮಹಾನುಭಾವ ಏನ್ ಮಾಡ್ತಾ ಇದ್ದಾರೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನೀವು ಹಲವು ರೀತಿಯ ಸಾಮಾಜಿಕ ಕಾರ್ಯ ಮಾಡುವವರನ್ನು ನೋಡಿರುತ್ತೀರ ಹಾಗು ಅವರ ಬಗ್ಗೆ ಕೇಳಿರುತ್ತೀರ. ಅದೇ ರೀತಿಯಲ್ಲಿ ನಾವು ನಿಮ್ಮನ್ನು ಒಬ್ಬ ಉದ್ಯಮಿ ಬಡ ಹೆಣ್ಣು ಮಕ್ಕಳಿಗಾಗಿ ತಾನು ಮಾಡಿರುವಂತ ಸಾಮಾಜಿಕ ಕಾರ್ಯದ ಬಗ್ಗೆ ತಿಳಿಸಿ ಕೊಡುತ್ತೇವೆ ನೋಡಿ. ಹೆಸರು ಮಹೇಶ್ ಸಾವನಿ ಇವರು ಮೂಲತಃ ಗುಜರಾತ್ ನವರು ಇವರು ಒಬ್ಬ ವಜ್ರದ ವ್ಯಾಪಾರೀ ಕೂಡ. ಸಾವನಿ ಅವರ ತ೦ದೆ ವಲ್ಲಭಭಾಯಿ ಅವರು ಸುಮಾರು 40 ವಷ೯ಗಳ ಹಿ೦ದೆ…

  • Animals

    ಆನೆಯ ಬಗ್ಗೆ ಆಸಕ್ತಿದಾಯಕ ಸಂಗತಿಗಳು

    ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ  ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ  ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು…