ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೊಂದು ಭಯಾನಕ ಸುದ್ದಿ. ಎಲ್ಲರೂ ಭಹಯಬೀಳುವಂತಹ ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು. ಬಾಕಿ ಇಲಿಗಳು ಹಾವಿನ ಬಾಯಿಯಿಂದ ತಪ್ಪಿಸಿಕೊಂಡು ಓಡಿದರೆ ಒಂದು ಮಾತ್ರ ಹೆಬ್ಬಾವಿಗೆ ಆಹಾರವಾಗಿತ್ತು. ಈ ಭಯಾನಕ ದೃಶ್ಯ ಕಂಡ ಮಹಿಳೆ ಹೆದರಿ ತಕ್ಷಣ ತನ್ನ ಮಗ ಮಲಗಿದ್ದ ಕೋಣೆ ಹೋಗಿ ಮಗನನ್ನೂ ಎಬ್ಬಿಸಿದ್ದರು.

ಆದರೆ, ಈ ಘಟನೆಯಿಂದ ಎಂಗ್ಲರ್ ಭಯಗೊಂಡಿದ್ದರೆ ಮಗ ಮಾತ್ರ ತುಂಬಾ ಕುತೂಹಲಿಗನಾಗಿದ್ದ. ಕಾರಣ, ಹಾವು ಇಲಿಯನ್ನು ಬೇಟೆಯಾಡುವುದನ್ನು ಆತ ನೋಡಿರಲಿಲ್ಲ. ಇದೇ ಕಾರಣಕ್ಕೆ ಮಗ ಅಮ್ಮನನ್ನೂ ಕರೆದುಕೊಂಡು ಹೆಬ್ಬಾವಿನ ಇಲಿ ಬೇಟೆಯನ್ನು ನೋಡಲು ನಿಂತಿದ್ದ. ಆದರೆ, ಎಂಗ್ಲರ್ ಮಾತ್ರ ಭಯದಲ್ಲಿ ನಡುಗುತ್ತಿದ್ದರು, ಅವರ ಧ್ವನಿಯೂ ಕಂಪಿಸುತ್ತಿತ್ತು… ಈ ಭಯದ ನಡುವೆಯೇ ಜನ್ನಾ ಈ ಹೆಬ್ಬಾವಿನ ಇಲಿ ಶಿಕಾರಿಯ ಫೋಟೋಗಳನ್ನು ತೆಗೆದಿಟ್ಟುಕೊಂಡಿದ್ದರು. ಇದನ್ನು ಜನ್ನಾ ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ ಸಾಕಷ್ಟು ಲೈಕ್ ಕಾಮೆಂಟ್ ಬಂದಿದೆ.

ಹಾವನ್ನು ಕಂಡ ಬಳಿಕ ಜನ್ನಾ ಬಾತ್ ರೂಮ್ನ ಬಾಗಿಲನ್ನು ಮುಚ್ಚಿದ್ದರು. ಸಣ್ಣ ಸಣ್ಣ ರಂಧ್ರಗಳಿಗೂ ಬಟ್ಟೆ ಇಟ್ಟು ಹಾವು ಮನೆಯೊಳಗೆ ಬರದಂತೆ ತಡೆದಿದ್ದರು. ಬಳಿಕ ಇವರು ಕೆಲಸಕ್ಕೆ ಹೋಗಿದ್ದರು. ಇಲ್ಲಿಂದ ಮರಳಿದ ಬಳಿಕ ಬಾತ್ ರೂಮ್ನ ಬಾಗಿಲು ತೆಗೆದರೆ ಹೆಬ್ಬಾವು ಇರಲಿಲ್ಲ. ಆದರೆ, ಇಲಿಗಳು ಸತ್ತು ಬಿದ್ದಿದ್ದವು. ಉರಗ ಸೆರೆ ಹಿಡಿಯುವವರು ಬಂದು ಹುಡುಕಿದಾಗಲೂ ಹಾವು ಪತ್ತೆಯಾಗಿರಲಿಲ್ಲ. ಬಹುಶಃ ಅಂದು ಹಾವು ಪೈಪಿನ ಮೂಲಕ ಹೊರಗೆ ಹೋಗಿರಬಹುದು ಎಂದು ಎಂಗ್ಲರ್ ಹೇಳಿಕೊಂಡಿದ್ದಾರೆ.

ಇದಾದ ಬಳಿಕ ಮತ್ತೆ ಎಂಗ್ಲರ್ ತಮ್ಮ ಮನೆಯ ಆವರಣದಲ್ಲಿ ಮತ್ತೆ ಹೆಬ್ಬಾವನ್ನು ಕಂಡಿದ್ದರು. ತಕ್ಷಣ ಇವರು ಸಂಬಂಧಪಟ್ಟವರಿಗೆ ಮಾಹಿತಿ ನೀಡಿ ಇವರು ಈ ಹೆಬ್ಬಾವನ್ನು ಸೆರೆ ಹಿಡಿಸಿದ್ದಾರೆ. ಬಳಿಕ ಈ ಹಾವನ್ನು ಹಿಡಿದು ಸುರಕ್ಷಿತವಾಗಿ ಬೇರೆ ಕಡೆಗೆ ಸಾಗಿಸಲಾಗಿದೆ ಎಂದಿದ್ದಾರೆ . ಇದಕ್ಕೂ ಮೊದಲು ಇದೇ ಪ್ರದೇಶದಲ್ಲಿ ಇಂತಹದ್ದೇ ಮತ್ತೊಂದು ಘಟನೆಯೂ ಸಹ ನಡೆದಿತ್ತು. ಈ ಫೋಟೋಗಳನ್ನು ಹಾವು ರಕ್ಷಿಸುವ ತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.ಸದ್ಯ ಇಂತಹ ಘಟನೆಯಿಂದ ಜನರು ತುಂಬಾ ಭಯಭೀತರಾಗಿದ್ದಾರೆ. ಯಾವಾಗ ಮನೆಯೊಳಗೆ ಹಾವು ಕಾಣಿಸಿಕೊಳ್ಳುತ್ತದೋ ಎಂಬ ಆತಂಕದಲ್ಲೇ ಇವರು ಜೀವನವನ್ನು ನಡೆಸಲು ಮುಂದಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯೋಗ ಈಗ ಸೌದಿ ಅರೇಬಿಯಾದ ಅಧಿಕೃತ ಕ್ರೀಡಾ ಚಟುವಟಿಕೆಗಳಲ್ಲಿ ಒಂದು ಎಂದು ಮಾನ್ಯತೆ ಪಡೆದುಕೊಂಡಿದೆ. ಈ ಮೂಲಕ ಇಸ್ಲಾಮಿಕ್ ರಾಷ್ಟ್ರದಲ್ಲಿ ಜನತೆಗೆ ಇನ್ಮುಂದೆ ಅಧಿಕೃತವಾಗಿ ಯೋಗ ಕಲಿಕೆ ಹಾಗೂ ಬೋಧನೆಗೆ ಪರವಾನಿಗೆ ದೊರೆಯಲಿದೆ
ಶನಿವಾರ ಬೆಳಗ್ಗೆ ಜಾಲಿ ಗ್ರ್ಯಾಂಟ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿ, ಬಳಿಕ ವಿಶೇಷ ಹೆಲಿಕಾಪ್ಟರ್ನಲ್ಲಿ ಕೇದಾರನಾಥ ಮಂದಿರಕ್ಕೆ ತೆರಳಿದರು. ಸಮುದ್ರ ಮಟ್ಟದಿಂದ 11,755 ಅಡಿ ಎತ್ತರದಲ್ಲಿರುವ ಕೇದಾರನಾಥ ಮಂದಿರದ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಪ್ರವಾಹ ಮತ್ತು ಪ್ರಕೃತಿ ವಿಕೋಪದಿಂದ ಹಾನಿಗೀಡಾದ ಕೇದಾರನಾಥ ಕ್ಷೇತ್ರದ ಪುನರ್ನಿರ್ಮಾಣ ಕಾರ್ಯಗಳ ಪ್ರಗತಿಯನ್ನು ಪ್ರಧಾನಿ ಪರಾಮರ್ಶಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಉತ್ತರಾಖಂಡದ ಕೇದಾರನಾಥಕ್ಕೆ ಶನಿವಾರ ಆಗಮಿಸಿದರು. ಸಾರ್ವತ್ರಿಕ ಚುನಾವಣೆಯ ಪ್ರಚಾರ ಕೊನೆಗೊಂಡ ಮರುದಿನವೇ ಪ್ರಧಾನಿ…
ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.
ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ ನಡೆಯುತ್ತಿರುವ ಸಾವಿನಲ್ಲಿ ಶೇಕಡಾ 60ರಷ್ಟು ಪಾಲು ಭಾರತದ್ದಿದೆ. ಕಳೆದ ಎರಡು ವರ್ಷಗಳ ಅಂಕಿ-ಅಂಶ ಇದನ್ನು ಸ್ಪಷ್ಟಪಡಿಸಿದೆ.
ಆತ್ಮೀಯ ಸ್ನೇಹಿತರೆ ನಮ್ಮದೊಂದು ಕೋರಿಕೆ, ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ ಮತ್ತು ನಿಮ್ಮ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ…
ದಿನನಿತ್ಯ ಬೆಳಗಿನ ಜಾವದಲ್ಲಿ ಖಾಲಿ ಹೊಟ್ಟೆಯಲ್ಲಿ ಒ೦ದು ಲೋಟದಷ್ಟು ತಾಜಾ ಸೌತೆಕಾಯಿಯ ರಸವನ್ನು ಕುಡಿಯಲು ಪ್ರಯತ್ನಿಸಿದರೆ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಹಾಗು ನಿಮ್ಮ ಶರೀರದ ತೂಕನು ಕಡಿಮೆ ಮಾಡಿಕೊಳ್ಳಬಹುದು.