ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೊಂದು ಭಯಾನಕ ಸುದ್ದಿ. ಎಲ್ಲರೂ ಭಹಯಬೀಳುವಂತಹ ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು. ಬಾಕಿ ಇಲಿಗಳು ಹಾವಿನ ಬಾಯಿಯಿಂದ ತಪ್ಪಿಸಿಕೊಂಡು ಓಡಿದರೆ ಒಂದು ಮಾತ್ರ ಹೆಬ್ಬಾವಿಗೆ ಆಹಾರವಾಗಿತ್ತು. ಈ ಭಯಾನಕ ದೃಶ್ಯ ಕಂಡ ಮಹಿಳೆ ಹೆದರಿ ತಕ್ಷಣ ತನ್ನ ಮಗ ಮಲಗಿದ್ದ ಕೋಣೆ ಹೋಗಿ ಮಗನನ್ನೂ ಎಬ್ಬಿಸಿದ್ದರು.

ಆದರೆ, ಈ ಘಟನೆಯಿಂದ ಎಂಗ್ಲರ್ ಭಯಗೊಂಡಿದ್ದರೆ ಮಗ ಮಾತ್ರ ತುಂಬಾ ಕುತೂಹಲಿಗನಾಗಿದ್ದ. ಕಾರಣ, ಹಾವು ಇಲಿಯನ್ನು ಬೇಟೆಯಾಡುವುದನ್ನು ಆತ ನೋಡಿರಲಿಲ್ಲ. ಇದೇ ಕಾರಣಕ್ಕೆ ಮಗ ಅಮ್ಮನನ್ನೂ ಕರೆದುಕೊಂಡು ಹೆಬ್ಬಾವಿನ ಇಲಿ ಬೇಟೆಯನ್ನು ನೋಡಲು ನಿಂತಿದ್ದ. ಆದರೆ, ಎಂಗ್ಲರ್ ಮಾತ್ರ ಭಯದಲ್ಲಿ ನಡುಗುತ್ತಿದ್ದರು, ಅವರ ಧ್ವನಿಯೂ ಕಂಪಿಸುತ್ತಿತ್ತು… ಈ ಭಯದ ನಡುವೆಯೇ ಜನ್ನಾ ಈ ಹೆಬ್ಬಾವಿನ ಇಲಿ ಶಿಕಾರಿಯ ಫೋಟೋಗಳನ್ನು ತೆಗೆದಿಟ್ಟುಕೊಂಡಿದ್ದರು. ಇದನ್ನು ಜನ್ನಾ ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ ಸಾಕಷ್ಟು ಲೈಕ್ ಕಾಮೆಂಟ್ ಬಂದಿದೆ.

ಹಾವನ್ನು ಕಂಡ ಬಳಿಕ ಜನ್ನಾ ಬಾತ್ ರೂಮ್ನ ಬಾಗಿಲನ್ನು ಮುಚ್ಚಿದ್ದರು. ಸಣ್ಣ ಸಣ್ಣ ರಂಧ್ರಗಳಿಗೂ ಬಟ್ಟೆ ಇಟ್ಟು ಹಾವು ಮನೆಯೊಳಗೆ ಬರದಂತೆ ತಡೆದಿದ್ದರು. ಬಳಿಕ ಇವರು ಕೆಲಸಕ್ಕೆ ಹೋಗಿದ್ದರು. ಇಲ್ಲಿಂದ ಮರಳಿದ ಬಳಿಕ ಬಾತ್ ರೂಮ್ನ ಬಾಗಿಲು ತೆಗೆದರೆ ಹೆಬ್ಬಾವು ಇರಲಿಲ್ಲ. ಆದರೆ, ಇಲಿಗಳು ಸತ್ತು ಬಿದ್ದಿದ್ದವು. ಉರಗ ಸೆರೆ ಹಿಡಿಯುವವರು ಬಂದು ಹುಡುಕಿದಾಗಲೂ ಹಾವು ಪತ್ತೆಯಾಗಿರಲಿಲ್ಲ. ಬಹುಶಃ ಅಂದು ಹಾವು ಪೈಪಿನ ಮೂಲಕ ಹೊರಗೆ ಹೋಗಿರಬಹುದು ಎಂದು ಎಂಗ್ಲರ್ ಹೇಳಿಕೊಂಡಿದ್ದಾರೆ.

ಇದಾದ ಬಳಿಕ ಮತ್ತೆ ಎಂಗ್ಲರ್ ತಮ್ಮ ಮನೆಯ ಆವರಣದಲ್ಲಿ ಮತ್ತೆ ಹೆಬ್ಬಾವನ್ನು ಕಂಡಿದ್ದರು. ತಕ್ಷಣ ಇವರು ಸಂಬಂಧಪಟ್ಟವರಿಗೆ ಮಾಹಿತಿ ನೀಡಿ ಇವರು ಈ ಹೆಬ್ಬಾವನ್ನು ಸೆರೆ ಹಿಡಿಸಿದ್ದಾರೆ. ಬಳಿಕ ಈ ಹಾವನ್ನು ಹಿಡಿದು ಸುರಕ್ಷಿತವಾಗಿ ಬೇರೆ ಕಡೆಗೆ ಸಾಗಿಸಲಾಗಿದೆ ಎಂದಿದ್ದಾರೆ . ಇದಕ್ಕೂ ಮೊದಲು ಇದೇ ಪ್ರದೇಶದಲ್ಲಿ ಇಂತಹದ್ದೇ ಮತ್ತೊಂದು ಘಟನೆಯೂ ಸಹ ನಡೆದಿತ್ತು. ಈ ಫೋಟೋಗಳನ್ನು ಹಾವು ರಕ್ಷಿಸುವ ತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.ಸದ್ಯ ಇಂತಹ ಘಟನೆಯಿಂದ ಜನರು ತುಂಬಾ ಭಯಭೀತರಾಗಿದ್ದಾರೆ. ಯಾವಾಗ ಮನೆಯೊಳಗೆ ಹಾವು ಕಾಣಿಸಿಕೊಳ್ಳುತ್ತದೋ ಎಂಬ ಆತಂಕದಲ್ಲೇ ಇವರು ಜೀವನವನ್ನು ನಡೆಸಲು ಮುಂದಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ. ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ. ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ. ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ…
ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಡಿಸೆಂಬರ್, 2018) ಕುಟುಂಬದ ಸದಸ್ಯರೊಂದಿಗೆ ಒಂದು ಶಾಂತಿಯುತ ಮತ್ತು ಶಾಂತ ದಿನವನ್ನು ಆನಂದಿಸಿ – ಜನರು ಸಮಸ್ಯೆಗಳೊಡನೆನಿಮ್ಮನ್ನು ಸಮೀಪಿಸಿದರೆ – ಅವರನ್ನು…
‘ಕುರಿ’ ಪ್ರತಾಪ್ ಈಗ ಸಖತ್ ಟ್ರೆಂಡಿಂಗ್ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್ ಏನೇನೋ ಆಗ್ತಿದೆ!…
ಅಮ್ಮನಿಗೆ ವರ ಬೇಕಿದೆ ಎಂದು ಯುವಕನೋರ್ವನ ಫೇಸ್ಬುಕ್ ಪೋಸ್ಟ್ ವೈರಲ್ ಆಗಿದೆ. ತಾಯಿಗೆ ವರ ಹುಡುಕುತ್ತಿರುವ ಯುವಕನ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದನ್ ನಗರದ ಫ್ರೆಂಚ್ ಕಾಲೋನಿಯ ನಿವಾಸಿ ಗೌರವ್ ತಾಯಿಗಾಗಿ ಸೂಕ್ತ ವರನನ್ನು ಹುಡುಕುತ್ತಿದ್ದಾರೆ. ಐದು ವರ್ಷಗಳ ಹಿಂದೆ ನನ್ನ ತಂದೆ ವಿಧಿವಶರಾಗಿದ್ದು, 45 ವರ್ಷದ ನನ್ನ ಅಮ್ಮ ಮನೆಯಲ್ಲಿ ಏಕಾಂಗಿ ಆಗಿರುತ್ತಾರೆ. ಮದ್ಯ ಸೇವಿಸದ ಮತ್ತು ಶುದ್ಧ ಸಸ್ಯಹಾರಿಯಾಗಿರುವ ವರ ಬೇಕಿದೆ ಎಂದು ಗೌರವ್ ಫೇಸ್ಬುಕ್…
ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.