News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಇದೊಂದು ಭಯಾನಕ ಸುದ್ದಿ ; ನೀವು ಶೌಚಾಲಯಕ್ಕೆ ಹೋಗುವ ಮುನ್ನ ಇದನ್ನೊಮ್ಮೆ ಓದಿ…!

46

ಇದೊಂದು ಭಯಾನಕ ಸುದ್ದಿ.  ಎಲ್ಲರೂ ಭಹಯಬೀಳುವಂತಹ  ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್‌ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ  ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ  ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು. ಬಾಕಿ ಇಲಿಗಳು ಹಾವಿನ ಬಾಯಿಯಿಂದ ತಪ್ಪಿಸಿಕೊಂಡು ಓಡಿದರೆ ಒಂದು ಮಾತ್ರ ಹೆಬ್ಬಾವಿಗೆ ಆಹಾರವಾಗಿತ್ತು. ಈ ಭಯಾನಕ ದೃಶ್ಯ ಕಂಡ ಮಹಿಳೆ ಹೆದರಿ ತಕ್ಷಣ ತನ್ನ ಮಗ ಮಲಗಿದ್ದ ಕೋಣೆ ಹೋಗಿ ಮಗನನ್ನೂ ಎಬ್ಬಿಸಿದ್ದರು.

ಆದರೆ, ಈ ಘಟನೆಯಿಂದ ಎಂಗ್ಲರ್ ಭಯಗೊಂಡಿದ್ದರೆ ಮಗ ಮಾತ್ರ ತುಂಬಾ ಕುತೂಹಲಿಗನಾಗಿದ್ದ. ಕಾರಣ, ಹಾವು ಇಲಿಯನ್ನು ಬೇಟೆಯಾಡುವುದನ್ನು ಆತ ನೋಡಿರಲಿಲ್ಲ. ಇದೇ ಕಾರಣಕ್ಕೆ ಮಗ ಅಮ್ಮನನ್ನೂ ಕರೆದುಕೊಂಡು ಹೆಬ್ಬಾವಿನ ಇಲಿ ಬೇಟೆಯನ್ನು ನೋಡಲು   ನಿಂತಿದ್ದ. ಆದರೆ, ಎಂಗ್ಲರ್‌ ಮಾತ್ರ ಭಯದಲ್ಲಿ ನಡುಗುತ್ತಿದ್ದರು, ಅವರ ಧ್ವನಿಯೂ ಕಂಪಿಸುತ್ತಿತ್ತು… ಈ ಭಯದ ನಡುವೆಯೇ ಜನ್ನಾ ಈ ಹೆಬ್ಬಾವಿನ ಇಲಿ ಶಿಕಾರಿಯ ಫೋಟೋಗಳನ್ನು ತೆಗೆದಿಟ್ಟುಕೊಂಡಿದ್ದರು. ಇದನ್ನು ಜನ್ನಾ  ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ  ಸಾಕಷ್ಟು ಲೈಕ್  ಕಾಮೆಂಟ್ ಬಂದಿದೆ.

ಹಾವನ್ನು ಕಂಡ ಬಳಿಕ ಜನ್ನಾ ಬಾತ್‌ ರೂಮ್‌ನ ಬಾಗಿಲನ್ನು ಮುಚ್ಚಿದ್ದರು. ಸಣ್ಣ ಸಣ್ಣ ರಂಧ್ರಗಳಿಗೂ ಬಟ್ಟೆ ಇಟ್ಟು ಹಾವು ಮನೆಯೊಳಗೆ ಬರದಂತೆ ತಡೆದಿದ್ದರು. ಬಳಿಕ ಇವರು ಕೆಲಸಕ್ಕೆ ಹೋಗಿದ್ದರು. ಇಲ್ಲಿಂದ ಮರಳಿದ ಬಳಿಕ ಬಾತ್‌ ರೂಮ್‌ನ ಬಾಗಿಲು ತೆಗೆದರೆ ಹೆಬ್ಬಾವು ಇರಲಿಲ್ಲ. ಆದರೆ, ಇಲಿಗಳು ಸತ್ತು ಬಿದ್ದಿದ್ದವು. ಉರಗ ಸೆರೆ ಹಿಡಿಯುವವರು ಬಂದು ಹುಡುಕಿದಾಗಲೂ ಹಾವು ಪತ್ತೆಯಾಗಿರಲಿಲ್ಲ. ಬಹುಶಃ ಅಂದು ಹಾವು ಪೈಪಿನ ಮೂಲಕ ಹೊರಗೆ ಹೋಗಿರಬಹುದು ಎಂದು ಎಂಗ್ಲರ್ ಹೇಳಿಕೊಂಡಿದ್ದಾರೆ.

ಇದಾದ ಬಳಿಕ ಮತ್ತೆ ಎಂಗ್ಲರ್ ತಮ್ಮ ಮನೆಯ ಆವರಣದಲ್ಲಿ ಮತ್ತೆ ಹೆಬ್ಬಾವನ್ನು ಕಂಡಿದ್ದರು. ತಕ್ಷಣ ಇವರು ಸಂಬಂಧಪಟ್ಟವರಿಗೆ ಮಾಹಿತಿ ನೀಡಿ ಇವರು ಈ ಹೆಬ್ಬಾವನ್ನು ಸೆರೆ ಹಿಡಿಸಿದ್ದಾರೆ. ಬಳಿಕ ಈ ಹಾವನ್ನು ಹಿಡಿದು ಸುರಕ್ಷಿತವಾಗಿ ಬೇರೆ ಕಡೆಗೆ  ಸಾಗಿಸಲಾಗಿದೆ ಎಂದಿದ್ದಾರೆ .  ಇದಕ್ಕೂ ಮೊದಲು ಇದೇ ಪ್ರದೇಶದಲ್ಲಿ ಇಂತಹದ್ದೇ ಮತ್ತೊಂದು ಘಟನೆಯೂ ಸಹ  ನಡೆದಿತ್ತು. ಈ ಫೋಟೋಗಳನ್ನು ಹಾವು ರಕ್ಷಿಸುವ ತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.ಸದ್ಯ ಇಂತಹ ಘಟನೆಯಿಂದ ಜನರು ತುಂಬಾ  ಭಯಭೀತರಾಗಿದ್ದಾರೆ. ಯಾವಾಗ ಮನೆಯೊಳಗೆ ಹಾವು ಕಾಣಿಸಿಕೊಳ್ಳುತ್ತದೋ ಎಂಬ ಆತಂಕದಲ್ಲೇ ಇವರು ಜೀವನವನ್ನು  ನಡೆಸಲು ಮುಂದಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    5 ವರ್ಷ ಅಪಾರ್ಟ್‌ಮೆಂಟ್ ನಿಷೇಧಜ್ಞೆ……!

    ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್‌ ನೀಡಿದ್ದಾರೆ. ನಗರದಲ್ಲಿ ಅಪಾರ್ಟ್‌ಮೆಂಟ್‌ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ…

  • ಸುದ್ದಿ

    ಟ್ರೆಂಡ್ ಸೃಷ್ಟಿಮಾಡಿದ ಮೋದಿ – ಕೇದಾರನಾಥ ಗುಹೆಯಲ್ಲಿ ಧ್ಯಾನಕ್ಕೆ ಮುಗಿಬಿದ್ದ ಯಾತ್ರಿಕರು

    ಕೇದಾರನಾಥ ಗುಹೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು. ಈಗ ಪ್ರಧಾನಿ ಅವರ ನಡೆಯನ್ನೇ ಇಲ್ಲಿಗೆ ಬರುವ ಯಾತ್ರಿಕರು ಅನುಸರಿಸುತ್ತಿದ್ದಾರೆ.ಹೌದು, ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೂ ಮೊದಲು ಮೇ 18ರಂದು ಮೋದಿ ಅವರು ಕೇದಾರನಾಥದಲ್ಲಿರುವ ಗುಹೆಯಲ್ಲಿ 24 ಗಂಟೆಗಳು ಸುದೀರ್ಘ ಧ್ಯಾನ ಮಾಡಿ ಎಲ್ಲೆಡೆ ಸುದ್ದಿಯಾಗಿದ್ದರು. ಹಾಗೆಯೇ ಹಲವರ ಗಮನ ಸೆಳೆದಿದ್ದರು. ಈಗ ಈ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು ತಾ ಮುಂದು ನಾ ಮುಂದು ಅಂತ ಮುಗಿಬಿದ್ದಿದ್ದಾರೆ. ಕೇದಾರನಾಥ ಗುಹೆಯಲ್ಲಿ…

  • ಸುದ್ದಿ

    ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಸಂವಾದ ನಡೆಸಿ ಮಾದರಿಯಾದ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು..

    ಚುನಾಯಿತರಾದ ಶಾಸಕರು ತಮ್ಮ ತಮ್ಮ ಕ್ಷೇತ್ರಕ್ಕೆ ಎಷ್ಟರ ಮಟ್ಟಿಗೆ ಭೇಟಿ ನೀಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ.. ಆದರೆ ಇಲ್ಲೊಬ್ಬರು ಶಾಸಕರಿದ್ದಾರೆ.. ತಮ್ಮ ಕ್ಷೇತ್ರದ ಜನರ ಜೊತೆ ಸಾಮಾನ್ಯ ಜನರಂತೆ ಬೆರೆತು ಕ್ಷೇತ್ರದ ಹಾಗು ಹೋಗುಗಳ ಬಗ್ಗೆ ಸ್ವತಃ ತಾವೇ ಖುದ್ದಾಗಿ ವಿಚಾರಿಸುತ್ತಿರುತ್ತಾರೆ.. ಹೌದು ಇವರು ಮತ್ಯಾರು ಅಲ್ಲ ಅಭಿವೃದ್ಧಿ ಹೊಂದಿದ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು.. ಈಗಾಗಲೇ ಪ್ರತಿಭೆಗಳಿಗಾಗಿ ತಮ್ಮ ಕ್ಷೇತ್ರದಲ್ಲಿ ಮಾಡಿಕೊಟ್ಟಿರುವ ಅನುಕೂಲಗಳು ಲೆಕ್ಕವಿಲ್ಲ.. ಶಾಸಕರ ಅನುದಾನ…

  • ಸುದ್ದಿ

    ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತ ಸಮಿತಿಗಳ ರಚನೆ – ಡಿಸಿ ಸಸಿಕಾಂತ್ ಸೆಂಥೀಲ್…!

    ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…

  • ಆಧ್ಯಾತ್ಮ

    ರುದ್ರಾಕ್ಷಿ ಧರಿಸುವುದರ ಹಿಂದಿದೆ ನಿಮಗೆ ಗೊತ್ತಿಲ್ಲದ ವೈಜ್ಞಾನಿಕ ಸತ್ಯ! ಹಾಗಾದ್ರೆ ರುದ್ರಾಕ್ಷಿ ಮಹತ್ವ ಏನು ಗೊತ್ತಾ???

    ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.

  • inspirational

    ಹೃದಯಾಘಾತ ( Heart attack ) ತಪ್ಪಿಸಲು ಇಲ್ಲಿವೆ ಸಿಂಪಲ್ ಟಿಪ್ಸ್

    ಚಳಿಗೂ ಹಾರ್ಟ್ ಅಟ್ಯಾಕ್‌ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್‌ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ. ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ…