ಜ್ಯೋತಿಷ್ಯ

ಹೇಗಿದೆ ನೋಡಿ ಗುರುವಾರದ ನಿಮ್ಮ ರಾಶಿ ಭವಿಷ್ಯ…ಗುರು ಒಲಿಯುತ್ತಾನೆಯೇ..?

291

ಇಂದು ಗುರುವಾರ,  15/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ ಉಂಟಾಗಬಹುದು. ನಿಮ್ಮ ಮೇಲಧಿಕಾರಿಗಳು ಸಂತುಷ್ಟರಾಗುವರು. ಯಾರೊಂದಿಗೂ ಈ ವಾರ ಜಗಳ ಬೇಡ. ಇದರಿಂದ ನಿಮಗೆ ಹೆಚ್ಚು ತೊಂದರೆಯಾಗಲಿದೆ. ಹಣದ ಹರಿವು ಹೆಚ್ಚಾಗುತ್ತದೆ. ತೆರಿಗೆ ಮತ್ತು ವಿಮೆ ವಿಷಯಗಳ ಬಗ್ಗೆ ಗಮನ ನೀಡುವ ಅಗತ್ಯವಿದೆ. ಹಣಕಾಸಿನ ಮುಗ್ಗಟ್ಟು ಟೀಕೆ ಮತ್ತು ವಾದಗಳಿಗೆ ಕಾರಣವಾಗಬಹುದು,ನಿಮ್ಮಿಂದ ಬಹಳಷ್ಟು ನಿರೀಕ್ಷಿಸುವವರಿಗೆ ಇಲ್ಲ ಎಂದು ಹೇಳಲು ಸಿದ್ಧರಾಗಿರಿ.ನಿಮಗೆ ಸರ್ಕಾರದಿಂದ ಬರಬೇಕಾಗಿದ್ದ ಸೌಲಭ್ಯಗಳು ಬೇಗನೆ ಬರುವಂತೆ ಒತ್ತಡ ತರುವರು.

ವೃಷಭ:-

ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಒಡಹುಟ್ಟಿದವರು ಹಾಗೂ ಬಂಧುಗಳ ನಡುವೆ ಸ್ವಲ್ಪ ಮುಸುಕಿನ ಗುದ್ದಾಟ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ನೀವು ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಮನಸ್ಥಿತಿಯಲ್ಲಿರುತ್ತೀರಿ. ಅದರೆ ಹಾಗೆ ಮಾಡಿದಲ್ಲಿ ನೀವು ವಿಷಾದಿಸುತ್ತೀರಿ. ಈ ರಾಶಿಯ ಮಕ್ಕಳ ಅಭಿವೃದ್ಧಿ ಇದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆ. ನೀವು ಒಂದು ದೊಡ್ಡ ಖರ್ಚಿನಿಂದಾಗಿ ನಿಮ್ಮ ಸಂಗಾತಿಯ ಮೇಲೆ ಸಿಡುಕಬಹುದು.

ಮಿಥುನ:

ವೃತ್ತಿಯಲ್ಲಿನ ಒಂದು ಸಣ್ಣ ತಪ್ಪು ನಿಮಗೆ ಬೇಸರ ಉಂಟುಮಾಡುವುದು. ಈ ವಾರ ಸಜ್ಜನರ ಸಹವಾಸ ದೊರೆಯುತ್ತದೆ.  ಇದರಿಂದಾಗಿ ನಿಮ್ಮ ಮನೋಕಾಮನೆಗಳು ಪೂರೈಸಿಕೊಳ್ಳಲು ಪುನಃ ಕಾಲಾವಕಾಶ ಬೇಕಾಗುವುದು. ವಾಹನಗಳನ್ನು ಓಡಿಸುವಾಗ ಎಚ್ಚರ ಪಾಲಿಸುವುದು ಒಳ್ಳೆಯದು. ದೇಹದಲ್ಲಿ ಉಷ್ಣಾಂಶ ಹೆಚ್ಚಾಗಿ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು. ಧನಾತ್ಮಕ ಚಿಂತನೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ. ಪ್ರಯಾಣ ಮಾಡುವಾಗ ಮೊಬೈಲ್‌ ಉಪಯೋಗಿಸದೆ ಇರುವುದು ಒಳ್ಳೆಯದು. ಶತ್ರುಗಳು ನಿಮ್ಮನ್ನು ಹೊಗಳಲಿದ್ದಾರೆ. ಎಚ್ಚರಿಕೆವಹಿಸುವುದು ಒಳಿತು.

ಕಟಕ :-

ನೀವು ಎಷ್ಟೇ ಪ್ರಾಮಾಣಿಕವಾಗಿ ವರ್ತಿಸಿದರೂ ಮಡದಿ ಮಕ್ಕಳೇ ನಿಮ್ಮ ಬಗ್ಗೆ ಅಪನಂಬಿಕೆ ತೋರುವರು. ನಿರುದ್ಯೋಗಿಗಳಿಗೆ ನೌಕರಿ ದೊರೆಯಲಿದೆ. ಕೂಡಿಟ್ಟ ಹೊನ್ನು ಕರಗಿ ಹೋಗುವ ಸಾಧ್ಯತೆ ಇರುತ್ತದೆ. ಸಾಲಮಾಡಿ ಜೀವನ ನಡೆಸುವ ಹಂತಕ್ಕೆ ಬರುವುದನ್ನು ತಪ್ಪಿಸಿಕೊಳ್ಳಿ. ಸಂಸಾರದಲ್ಲಿ ಸುಖಮಯ ವಾತಾವರಣ ಮೂಡಿ ಬರುತ್ತದೆ. ಇಂದು ಕುಟುಂಬದ ಒಬ್ಬ ಸದಸ್ಯರು ನಿಮಗೆ ಕೋಪ ಬರಿಸಬಹುದು- ಪರಿಸ್ಥಿತಿ ಕೈಮೀರುವ ಮೊದಲು ಮಿತಿಗಳನ್ನು ಅಳವಡಿಸಲು ಮರೆಯಬೇಡಿ.  ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.

 ಸಿಂಹ:

ಬಾಳಸಂಗಾತಿಯ ವಿಚಾರದಲ್ಲಿ ಸ್ವಲ್ಪ ಹೆಚ್ಚಿನ ಮುತುವರ್ಜಿ ತೋರಬೇಕಾಗುವುದು. ಇದರಿಂದ ಬರಬಹುದಾದ ಬಿಕ್ಕಟ್ಟು ದೂರವಾಗಲಿದೆ.ನೀವು ಇಂದು ನಿಮಗೆ ನೀಡಲಾದ ಹೂಡಿಕೆಯ ಯೋಜನೆಗಳ ಬಗ್ಗೆ ಚೆನ್ನಾಗಿ ಆಲೋಚಿಸಬೇಕು. ಸಂಬಂಧಿಗಳು ನಿಮಗೆ ಸಹಾಯ ಹಸ್ತ ನೀಡಲು ಒಪ್ಪಿಕೊಳ್ಳುತ್ತಾರೆ. ಈ ರಾಶಿಯ ಹಲವರಿಗೆ ನಾಯಕತ್ವದ ಗುಣ ಒಲಿದು ಜನಗಳ ನಡುವೆ ಗುರುತಿಸಲ್ಪಡುತ್ತಾರೆ. ನಿಮ್ಮ ಸಂಗಾತಿಯ ಬಗ್ಗೆ ಇಂದು ನೀವು ಸಾಕಷ್ಟು ತಿಳಿದುಕೊಳ್ಳಬೇಕು. ಕಣ್ಣಲ್ಲಿ ನೋವು ಅಥವಾ ತಲೆನೋವು ಕಾಡಬಹುದು.

ಕನ್ಯಾ :-

ತಾಳ್ಮೆ ರೂಢಿಸಿಕೊಂಡರೆ ಒಳ್ಳೆಯದು. ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಾಗಿರಿ. ಇಂದು ನಿಮ್ಮ ಮಾತುಗಳ ಬಗ್ಗೆ ಲಕ್ಷ್ಯವಿರಲಿ. ದೂರದ ಊರಿನ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇರುತ್ತದೆ. ವಾರ ಚುರುಕಾಗಿ ಕೆಲಸ ಮಾಡುವಿರಿ. ಇಂದು ನಿಮ್ಮ ಪ್ರಿಯತಮೆ ಉಡುಗೊರೆಗಳ ಜೊತೆ ನಿಮ್ಮ ಸ್ವಲ್ಪ ಸಮಯವನ್ನೂ ಅಪೇಕ್ಷಿಸಬಹುದು. ಧನದ ಒಳಹರಿವು ಹೆಚ್ಚಲಿದೆ. ಈ ಈ ರಾಶಿಯ ಸ್ತ್ರೀಯರು ತಾಳ್ಮೆಯಿಂದ ಇರುವುದು ಉತ್ತಮ. ಇದರಿಂದ ನಿಮಗೆ ಬರಬೇಕಾಗಿದ್ದ ಆದಾಯ ಬರಲಿದೆ. ಒಡವೆಗಳನ್ನು ಕೊಂಡುಕೊಳ್ಳುವ ಯೋಗವಿದೆ.

ತುಲಾ:

ಸ್ಥಿರಾಸ್ತಿ ಖರೀದಿಸಲು ಯೋಜನೆ ರೂಪಿಸುತ್ತೀರಿ. ಹಳೆಯ ಸ್ನೇಹಿತರು ನಿಮ್ಮನ್ನು ಭೇಟಿ ಆಗುವರು. ನಿಮ್ಮ ಹಠಮಾರಿ ಸ್ವಭಾವದಿಂದ ಜನರ ಬಳಿ ನಿಷ್ಠುರವಾಗುವ ಸಾಧ್ಯತೆ. ಸಂಗಾತಿಗೆ ಸ್ಥಿರಾಸ್ತಿ ಒದಗಿ ಬರುವ ಸಾಧ್ಯತೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ವಿದೇಶದಲ್ಲಿ ವ್ಯಾಪಾರ ಮಾಡುವವರಿಗೆ ಅವರ ವ್ಯಾಪಾರದಲ್ಲಿ ಸಾಕಷ್ಠು ಪ್ರಗತಿಯಾಗುತ್ತದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಹಿನ್ನಡೆ ಉಂಟಾಗುವುದು. ಹನುಮಾನ್‌ ಚಾಲೀಸ್‌ ಪಠಿಸುವುದು ಒಳ್ಳೆಯದು. ಒತ್ತಡವು ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಅದನ್ನು ತಪ್ಪಿಸಿ ಹಣದ ಪರಿಸ್ಥಿತಿ ದಿನದಲ್ಲಿ ನಂತರ ಸುಧಾರಿಸುತ್ತದೆ.

ವೃಶ್ಚಿಕ :-

ಆರ್ಥಿಕ ಸ್ಥಿತಿ ಭದ್ರಗೊಳಿಸಿಕೊಳ್ಳಲು ಒತ್ತು. ನಿಮ್ಮ ಮಾತಿನಿಂದ ಎಲ್ಲರನ್ನೂ ಗೆಲ್ಲುತ್ತೀರಿ. ಆದರೆ, ಅತಿಮಾತು ಸಮಸ್ಯೆಯನ್ನು ತರಬಹುದು. ನಿಮ್ಮ ಆರೋಗ್ಯ ಇಂದು ಪೂರ್ಣವಾಗಿರುವುದಿಲ್ಲ. ನಿಮ್ಮ ಜೀವನದ ದಿಕ್ಕನ್ನೆ ಧನಾತ್ಮಕವಾಗಿ ಬದಲಿಸುವ ಶಕ್ತಿಯನ್ನು ಹೊಂದಿರುತ್ತದೆ. ನಿಮ್ಮ ಕೆಲಸಗಳಿಗೆ ಬೇರೆಯವರು ಗೌರವ ಪಡೆಯಲು ಬಿಡಬೇಡಿ.  ಸಂತೋಷದ ದಿನವಾಗಿರುತ್ತದೆ. ಇಂದು ನೀವು ಉತ್ತಮ ವಿಚಾರಗಳಿಂದ ತುಂಬಿರುತ್ತೀರಿ ಮತ್ತು ಚಟುವಟಿಕೆಗಳ ನಿಮ್ಮ ಆಯ್ಕೆ ನಿಮ್ಮ ನಿರೀಕ್ಷೆಗಳನ್ನು ಮೀರಿ ನಿಮಗೆ ಆದಾಯ ತರುತ್ತದೆ.

ಧನಸ್ಸು:

ಮಕ್ಕಳು ಮತ್ತು ದಾಯಾದಿಗಳ ನಡುವೆ ಸಂಬಂಧ ವೃದ್ಧಿಯಾಗುತ್ತದೆ. ಕಚೇರಿಯಲ್ಲಿ ಹೊಸ ಜವಾಬ್ದಾರಿ ಲಭಿಸಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ನೀವು ಮತ್ತೊಂದು ಗಳಿಕೆಯತ್ತ ಆಲೋಚನೆ ಮಾಡುತ್ತಾ ಅಲ್ಪಕಾಲದ ಸಂಪಾದನೆಗೆ ತೊಡಗುವಿರಿ. ನಿಮ್ಮ ಹೆತ್ತವರೆದುರಿಗೆ ನಿಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಲು ಸಾಧ್ಯವಾಗದಿರುವುದರಿಂದ ನಿಮ್ಮನ್ನು ಇಂದು ತಪ್ಪಾಗಿ ತಿಳಿದುಕೊಳ್ಳುವ ಸಾಧ್ಯತೆಯಿದೆ. ಅಗತ್ಯ ವಸ್ತುಗಳ ಖರೀದಿ. ನೀವೆಂದುಕೊಂಡಂತೆ  ಏನೂ ನಡೆಯುತ್ತಿಲ್ಲ ಎಂದು ನಿಮಗನಿಸಬಹುದು, ಆದರೆ ಇದು ಕೇವಲ ಒಂದು ನಕಾರಾತ್ಮಕ ಚಿಂತನೆ. ಸಾಧ್ಯವಾದಷ್ಟೂ ಸಕಾರಾತ್ಮಕವಾಗಿರಲು ಪ್ರಯತ್ನಪಡಿ.

ಮಕರ :-

ದೇವರ ಕೃಪೆಯಿಂದ ನಿಮ್ಮ ಕಾರ್ಯಗಳು ಸುಗಮವಾಗುತ್ತವೆ. ಈ ವಾರ ಹಣದ ಕೊರತೆ ಅಷ್ಟಾಗಿ ಬಾಧಿಸುವುದಿಲ್ಲ. ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ನಿಮ್ಮ ಪ್ರಿಯತಮೆಯ ಜೊತೆ ಇಂದು ಸಭ್ಯತೆಯಿಂದ ವರ್ತಿಸಿ.ವಿರಸ ಮೂಡಿದ್ದ ದಾಂಪತ್ಯದಲ್ಲಿ ತಣ್ಣನೆ ಗಾಳಿ ಬೀಸಲು ಶುರುವಾಗಲಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ಹೋಗುತ್ತಿರುವವರು ಶಾಂತವಾಗಿರಬೇಕು. ಪರೀಕ್ಷೆಯ ಭಯ ನೀವು ದೈರ್ಯಗೆಡಿಸುವುದು ಬೇಡ. ಈ ದಿನ ಬರುವ ಉತ್ತಮ ಅವಕಾಶಗಳನ್ನು ನಿರಾಕರಿಸದೆ ಒಪ್ಪಿಕೊಳ್ಳಿ. ಇದರಿಂದ ಒಳಿತಾಗುವುದು. ನಿಮ್ಮ ಪ್ರಯತ್ನಗಳು ಖಂಡಿತವಾಗಿಯೂ ಸಕಾರಾತ್ಮಕ ಫಲಿತಾಂಶ ತರುತ್ತವೆ.

ಕುಂಭ:-

ಸಂಪಾದನೆಗಿಂತ ಖರ್ಚು ಹೆಚ್ಚು ಎಂದು ರೋಸಿ ಹೋಗಿದ್ದೀರಿ. ಆದರೆ ಇದಕ್ಕೆ ನಿಮ್ಮ ಸ್ವಯಂಕೃತ ಅಪರಾಧವೇ ಕಾರಣವೆಂದು ಹೇಳಬೇಕಾಗಿಲ್ಲ. ಹೆಚ್ಚು ಹಣ ಬಂದಾಗ ಅದರಲ್ಲಿ ಸ್ವಲ್ಪ ಭಾಗವಾದರು ಉಳಿತಾಯ ಮಾಡಿ. ನಿಮಗೆ ಮಾನಸಿಕ ಧೈರ್ಯ-ಸ್ಥೈರ್ಯ ಬರುವುದು ಮತ್ತು ಮಾಡುವ ಕೆಲಸ ಕಾರ್ಯಗಳಲ್ಲಿ ಉತ್ಸಾಹ ತೋರುವಿರಿ. ವ್ಯಾಪಾರದಲ್ಲಿ ಎಂದಿನಂತೆ ಲಾಭ ಬರುತ್ತವೆ. ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ ಒದಗುತ್ತದೆ.

ಮೀನ:-

ಹೊಸ ವ್ಯವಹಾರಗಳು ನಿಮ್ಮ ವ್ಯಕ್ತಿತ್ವವನ್ನು ಎತ್ತರದ ಶ್ರೇಣಿಗೆ ಒಯ್ಯುತ್ತವೆ. ಮಕ್ಕಳು ಮತ್ತು ಹಿರಿಯರಿಗೆ ಹೆಚ್ಚು ಗಮನ ನೀಡಬೇಕು. ಕಬ್ಬಿಣದ ವ್ಯವಹಾರ ಮಾಡುವವರಿಗೆ ಅನಿರೀಕ್ಷಿತ ಲಾಭ ಬರಲಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಬೇಡಿಕೆ ಹೆಚ್ಚಲಿದೆ. ಯಾವ ಕೆಲಸವನ್ನು ಮೊದಲು ಮಾಡಬೇಕು ಎಂದು ಮಾನಸಿಕ ಗೊಂದಲದಲ್ಲಿ ನರಳುವಿರಿ. ಮಾಡಬೇಕಾಗಿರುವ ಕೆಲಸಗಳ ಪಟ್ಟಿ ತಯಾರಿಸಿ. ಆದ್ಯತೆಯ ಮೇರೆಗೆ ಕೆಲಸವನ್ನು ಮಾಡುತ್ತಾ ಬನ್ನಿ ಒಳಿತಾಗುವುದು. ಮನೆಯ ಕರ್ತವ್ಯಗಳನ್ನು ತಪ್ಪಿಸುವುದು ಮತ್ತು ಹಣಕ್ಕಾಗಿ ಪರಿತಪಿಸುವುದು ನಿಮ್ಮ ವೈವಾಹಿಕ ಜೀವನಕ್ಕೆ ಹಾನಿ ತರಬಹುದು ಹೊಸ ಪಾಲುದಾರಿಕೆ ಇಂದು ಭರವಸೆಯಿಂದ ಕೂಡಿರುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿಮ್ಮ ರಾಶಿ ಪ್ರಕಾರ ಈ ನಾಣ್ಯ ನಿಮ್ಮ ಪರ್ಸ್ ನಲ್ಲಿದ್ದರೆ ಏನಾಗುತ್ತೆ ಗೊತ್ತಾ?ನಿಮ್ಮ ರಾಶಿಗೆ ಯಾವ ನಾಣ್ಯ ನೋಡಿ…

    ಪ್ರತಿಯೊಬ್ಬರ ಪರ್ಸ್ ನಲ್ಲಿಯೂ ನಾಣ್ಯಗಳು ಇದ್ದೇ ಇರುತ್ವೆ. ಕೆಲವರ ಪರ್ಸ್ ನಲ್ಲಿ 10 ರೂಪಾಯಿ ನಾಣ್ಯವಿದ್ರೆ ಇನ್ನು ಕೆಲವರ ಪರ್ಸ್ ನಲ್ಲಿ 2 ರೂಪಾಯಿ, ಒಂದು ರೂಪಾಯಿ ನಾಣ್ಯವಿರುತ್ತದೆ. ಶಾಸ್ತ್ರದ ಪ್ರಕಾರ, ರಾಶಿಗನುಗುಣವಾಗಿ ನಾಣ್ಯವನ್ನು ಪರ್ಸಿನಲ್ಲಿಟ್ಟರೆ ಶುಭಕರ. ಪ್ರತಿಯೊಂದು ರಾಶಿಗೂ ಬೇರೆ ಬೇರೆ ಲೋಹ ಶುಭ ಫಲ ನೀಡುತ್ತವೆ. ಹಾಗಾಗಿ ರಾಶಿಗನುಗುಣವಾಗಿ ಲೋಹದ ನಾಣ್ಯಗಳನ್ನು ಪರ್ಸಿನಲ್ಲಿ ಇಟ್ಟುಕೊಂಡರೆ ಎಂದೂ ಪರ್ಸ್ ಖಾಲಿಯಾಗುವುದಿಲ್ಲ. ಮೇಷ : ಈ ರಾಶಿಯವರು ಪರ್ಸ್ ನಲ್ಲಿ ತಾಮ್ರದ ನಾಣ್ಯವನ್ನು ಇಟ್ಟುಕೊಳ್ಳಬೇಕು. ವೃಷಭ : ಈ ರಾಶಿಯವರು…

  • ಸುದ್ದಿ

    ಗ್ರಾಹಕರಿಗೊಂದು ಸಿಹಿ ಸುದ್ದಿ ನಿಡಿದ SBI ಬ್ಯಾಂಕ್….!

    ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬ್ಯಾಂಕ್ ಗಳಲ್ಲಿ ಖಾತೆ ಹೊಂದಿರುವ ಗ್ರಾಹಕರು ಬದಲಾವಣೆಯಗಿರುವ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕಾಗಿದ್ದು, ಆಗಸ್ಟ್ 1ರಿಂದ ಹಲವಾರು ನಿಯಮಗಳು ಬದಲಾವಣೆಯಾಗಲಿವೆ. ಬ್ಯಾಂಕ್‌ನಲ್ಲಿ ಆರ್‌ಟಿಜಿಎಸ್‌ ಮತ್ತು ಎನ್‌ಇಎಫ್‌ಟಿ ಮೂಲಕ ಹಣ ವರ್ಗಾವಣೆ ಮಾಡುವವರಿಗೆ ಇದು ಸಿಹಿಸುದ್ದಿ. ದೇಶವನ್ನು ನಗದುರಹಿತ ಆರ್ಥಿಕತೆಯನ್ನಾಗಿಸುವ ಗುರಿಯೊಂದಿಗೆ ಹಣ ವರ್ಗಾವಣೆ ಶುಲ್ಕವನ್ನು ಹಿಂಪಡೆಯಲು ಆರ್‌ಬಿಐ ನಿರ್ಧರಿಸಿದ ಬೆನ್ನಲ್ಲೇ, ಎಸ್‌ಬಿಐ ಜು.1ರಿಂದ ಅನ್ವಯವಾಗುವಂತೆ ಎನ್‌ಇಎಫ್‌ಟಿ ಮತ್ತು ಆರ್‌ಟಿಜಿಎಸ್‌ ಹಣ ವರ್ಗಾವಣೆ ಶುಲ್ಕವನ್ನು ರದ್ದುಗೊಳಿಸಿದೆ.ಬ್ಯಾಂಕ್‌ನಲ್ಲಿ ಆರ್‌ಟಿಜಿಎಸ್‌ ಮತ್ತು ಎನ್‌ಇಎಫ್‌ಟಿ ಮೂಲಕ…

  • ಜ್ಯೋತಿಷ್ಯ

    ಶುಕ್ರವಾರದ ಶುಭ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ವೃಷಭ:- ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ…

  • ಆರೋಗ್ಯ, ತಂತ್ರಜ್ಞಾನ

    ಏನಿದು ಗೋವುಗಳ ಹೊಟ್ಟೆಯ ಮೇಲೆ ದೊಡ್ಡದಾದ ರಂಧ್ರಗಳು..!ನಂಬೋದಿಲ್ಲ ಅಲ್ವಾ?ಈ ಲೇಖನಿ ಓದಿ ತಿಳಿಯುತ್ತೆ…

    ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.

  • ಸಿನಿಮಾ

    ನುಡಿದಂತೆ ನಡೆದ “ಹಳ್ಳಿ ಹುಡುಗ ಪ್ರಥಮ್”.

    ನಮ್ಮ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರೋ ರಾಜಕಾರಣಿಗಳೇ ಸಾವಿರಾರೂ ಭರವಸೆಗಳನ್ನು ಕೊಡ್ತಾ ಇನ್ನೂ ಜೀವಂತವಾಗಿ ಸನ್ಮಾನ ಮಾಡಿಸಿಕೊಂಡು ಓಡಾಡುತ್ತಿರುವಾಗ, ಕನ್ನಡದ ಬಿಗಬಾಸ್ ಸಂಚಿಕೆ-4ರ ವಿಜೇತರಾದ ಒಳ್ಳೆ ಹುಡುಗ “ಪ್ರಥಮ್” ರವರು ಆ ದಿನ ತಾವು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.

  • inspirational

    ಹಣ ಉಳಿಸುವ ಸುಲಭ ಮಾರ್ಗಗಳು

    ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು…