ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಒಂದೆನಿಸಿರುವ ಅಮರನಾಥ ಯಾತ್ರೆಗೆ ತೆರಳಿದ್ದ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ನಿರಂತರ ದಾಳಿಯಿಂದ ನಲುಗಿರೋ ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ರಾತ್ರಿ ಉಗ್ರರು ನಡೆಸಿದ ಬೀಭತ್ಸ ಕೃತ್ಯಕ್ಕೆ 7 ಮಂದಿ ಅಮರನಾಥ ಯಾತ್ರಿಗಳು ಬಲಿಯಾಗಿದ್ದಾರೆ.
ಕಾಶ್ಮೀರದಲ್ಲಿ ಉದ್ವಿಗ್ನ ವಾತಾವರಣ ಇರುವ ಹಿನ್ನಲೆಯಲ್ಲಿ ಉಗ್ರರು ಅಮರನಾಥ ಯಾತ್ರಿಕರ ಮೇಲೆ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದಾರೆಂದು ಕೆಲ ದಿನಗಳ ಹಿಂದಷ್ಟೇ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಸೋಮವಾರ ರಾತ್ರಿ 8.30ರ ಸುಮಾರಿಗೆ ಅನಂತನಾಗ್ ಜಿಲ್ಲೆಯ ಖನಬಾಲ್ನದಲ್ಲಿ ಪೊಲೀಸರನ್ನು ಗುರಿಯಾಗಿರಿಸಿಕೊಂಡು ಉಗ್ರರು ದಾಳಿ ನಡೆಸಿದ್ದಾರೆ. ಈ ವೇಳೆ 6 ಮಹಿಳೆಯರು ಸೇರಿದಂತೆ ಬಸ್ನಲಲ್ಲಿದ್ದ 7 ಮಂದಿ ಅಮರನಾಥ ಯಾತ್ರಿಕರು ಬಲಿಯಾಗಿದ್ದು, 15 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಗುಪ್ತಚರ ಇಲಾಖೆ ಮಾಹಿತಿ ನೀಡಿದ್ದ ಹಿನ್ನಲೆಯಲ್ಲಿ ಯಾತ್ರೆಗೆ ಭಾರೀ ಭದ್ರತೆಯನ್ನು ಒದಗಿಸಲಾಗಿತ್ತು. ಭದ್ರತೆಗಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜತೆಗೆ 40 ಸಾವಿರ ಅರೆ ಮಿಲಿಟರಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು. ಅಲ್ಲದೆ, ಉಪಗ್ರಹ ವ್ಯವಸ್ಥೆ, ಡ್ರೋನ್ ಕಣ್ಗಾವಲು ಇಡಲಾಗಿತ್ತು. ಭಾರೀ ಭದ್ರತೆಯ ನಡುವೆಯೂ ಉಗ್ರರು ದಾಳಿ ನಡೆಸಿರುವುದು ಜನರಲ್ಲಿರುವ ಆತಂಕ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.
ಅಮರನಾಥ ಯಾತ್ರೆ ಮುಗಿಸಿ ಮರಳುತ್ತಿರುವಾಗ ಈ ಕೃತ್ಯ ನಡೆದಿದೆ. ಉಗ್ರರ ದಾಳಿಗೆ ತುತ್ತಾದ ಗುಜರಾತ್ ನೋಂದಣಿಯ ಬಸ್ ಅಮರನಾಥ ದೇಗುಲದ ಬೋರ್ಡ್ನೊಂ ದಿಗೆ ರಿಜಿಸ್ಟರ್ ಮಾಡಿಕೊಂಡಿರಲಿಲ್ಲ. ರಾತ್ರಿ 7ರ ನಂತರ ಭದ್ರತೆ ವಾಪಸ್ ಪಡೆದಿದ್ದ ಹಿನ್ನೆಲೆಯಲ್ಲಿ ಪ್ರಯಾಣಕ್ಕೆ ಅವಕಾಶ ಇರಲಿಲ್ಲ. ಆದರೂ ಬಸ್ ಡ್ರೈವರ್ ನಿಯಮ ಮೀರಿ ಬಸ್ ಚಲಾಯಿಸಿದ್ದ.
ಜಮ್ಮುವಿನಿಂದ ಅಮರನಾಥ ದೇಗುಲ 200 ಕಿಲೋ ಮೀಟರ್ ದೂರದಲ್ಲಿದೆ. ಅಮರನಾಥ ಯಾತ್ರೆಯ ದಾರಿಯಲ್ಲಿ 40 ಸಾವಿರ ಭದ್ರತಾ ಪಡೆಗಳನ್ನ ನಿಯೋಜಿಸಲಾಗಿತ್ತು. ಗುಪ್ತಚರ ಇಲಾಖೆಯ ಮಾಹಿತಿಯಂತೆ ಉಗ್ರರು ಸುಮಾರು 150 ಯಾತ್ರಿಕರು ಹಾಗೂ 200 ಪೊಲೀಸರನ್ನ ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎನ್ನಲಾಗಿದೆ.
ಇನ್ನು ಉಗ್ರರ ದಾಳಿ ಹಿನ್ನಲೆಯಲ್ಲಿ ಅಮರನಾಥ ಯಾತ್ರೆಯನ್ನು ಮುಂದೂಡಲಾಗಿದೆ ಎಂಬ ಗುಮಾನಿಗಳು ಕೇಳಿಬರತೊಡಗಿವೆ. ಆದರೆ, ಈ ಬಗ್ಗೆ ಅಧಿಕೃತವಾಗಿ ಸರ್ಕಾರ ಮಾಹಿತಿಯನ್ನು ನೀಡಿಲ್ಲ. ಈ ಬಗ್ಗೆ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಮರನಾಥ ಯಾತ್ರಿಕರ ಹತ್ಯೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಸಿಎಂ ಮೆಹಬೂಬಾ ಮುಫ್ತಿ ಅನಂತ್ನಾ7ಗ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಇದು ಪ್ರತಿಯೊಬ್ಬ ಕಾಶ್ಮೀರಿ ತಲೆತಗ್ಗಿಸುವಂತ ಕೃತ್ಯ. ಇದು ಕೇವಲ ನಮ್ಮ ಅತಿಥಿಗಳ ಮೇಲೆ ನಡೆದ ಭಯಂಕರ ದಾಳಿಯಲ್ಲ. ಇಡೀ ಕಾಶ್ಮೀರ ಹಾಗೂ ಕಾಶ್ಮೀರಿಯತ್ ಮೇಲೆ ನಡೆದ ಲಜ್ಜೆಗೆಟ್ಟ ದಾಳಿ. ಉಗ್ರರನ್ನ ಶಿಕ್ಷಿಸದೇ ಬಿಡೋದಿಲ್ಲ ಅಂತಾ ಗುಡುಗಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಈ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಹೇಡಿಗಳ ಪೈಶಾಚಿಕ ಕೃತ್ಯಕ್ಕೆ ಭಾರತ ತಲೆಬಾಗೋದಿಲ್ಲ ಎಂದು ಗುಡುಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ. ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ…
ಹುಟ್ಟುಹಬ್ಬದಂದು ಸ್ನೇಹಿತರು ಎಲ್ಲ ಸೇರಿ ಯುವಕನಿಗೆ ಬರ್ತ್ ಡೇ ಬಂಪ್ಸ್ ಕೊಟ್ಟಿದ್ದು, ಇದರಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ತಮಿಳುನಾಡಿದ ಚೆನ್ನೈನಲ್ಲಿ ನಡೆದಿದೆ. ಕಳೆದ ಎರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮೃತಪಟ್ಟ ಯುವಕ ಬೆಂಗಳೂರಿನ ಐಐಎಂ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಯುವಕ ಎರಡು ತಿಂಗಳ ಹಿಂದೆ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರ ಜೊತೆ ಆಚರಿಸಿಕೊಂಡಿದ್ದನು. ಈ ವೇಳೆ ಸ್ನೇಹಿತರು ಎಲ್ಲರು ಸೇರಿ ಆತನಿಗೆ ಬರ್ತ್ ಡೇ…
ತಾಮ್ರದ ಪಾತ್ರೆಗಳಿಂದ ನೀರು ಕುಡಿಯುವ ಪ್ರಾಚೀನ ಭಾರತೀಯ ಅಭ್ಯಾಸದ ಹಿಂದಿನ ವಿಜ್ಞಾನವನ್ನು ಇತರ ಹಲವಾರು ಅಧ್ಯಯನಗಳೂ ಬೆಂಬಲಿಸಿವೆ ಹಾಗೂ ಎಲ್ಲವೂ ಸಕಾರಾತ್ಮಕ ತೀರ್ಮಾನವನ್ನೇ ನೀಡಿವೆ. ಸಾವಿರಾರು ವರ್ಷಗಳಿಂದ ನಮ್ಮ ಪೂರ್ವಜರು ತಾಮ್ರದ ಪಾತ್ರೆಗಳಿಂದ ನೀರು ಕುಡಿಯುತ್ತಾ ಬಂದಿದ್ದಾರೆ ಹಾಗೂ ಇದರ ಪ್ರಯೋಜನಗಳನ್ನು ಪಡೆದಿದ್ದಾರೆ. ಇಂದಿಗೂ ಹಲವು ಹಿರಿಯರು ತಾಮ್ರದ ಲೋಟಗಳಿಂದಲೇ ನೀರು ಕುಡಿಯುವುದನ್ನು ಬೆಂಬಲಿಸುತ್ತಾರೆ. ಆದರೆ ಯುವಜನತೆ ಕೈಗೆ ಸಿಕ್ಕಿದ ಪ್ಲಾಸ್ಟಿಕ್ ಅಥವಾ ಇತರ ಲೋಹಗಳ ಲೋಟಗಳಿಂದಲೇ ನೀರು ಕುಡಿಯುತ್ತಾರೆ. ಇಂದು ನಮ್ಮ ಹಳೆಯ ಸಂಪ್ರದಾಯಗಳು ವೈಜ್ಞಾನಿಕ ಕಾರಣಗಳಿಂದಾಗಿ…
ನಟ ಚಿರಂಜೀವಿ ಸರ್ಜಾ ಅವರ ಹಠಾತ್ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…
ಇಂದು ಶುಕ್ರವಾರ, 23/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಭಯ ಹೋಗಲಾಡಿಸಿ ಪರೀಕ್ಷೆ ಬಗ್ಗೆ ಆತ್ಮವಿಶ್ವಾಸ ಮೂಡಿಸುವ ಸಲುವಾಗಿ 6 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಳಿಕ ಬುಧವಾರ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಅವರು ಬ್ಯಾಡಮೂಡ್ಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಬಗ್ಗೆ ಚರ್ಚಿಸಿದ ಬಳಿಕ…