ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ.
ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ ನಂಬಿಕೆ ಇದೆ. ಅಮಾವಾಸ್ಯೆಯ ದಿನ ದುಷ್ಟ ಶಕ್ತಿಗಳು ಶಕ್ತಿ ಪಡೆಯುತ್ತದೆ ಹಾಗೂ ಸ್ವತಂತ್ರವಾಗಿ ಓಡಾಡುತ್ತದೆ ಎನ್ನುತ್ತಾರೆ. ಮಾಟ ಮಂತ್ರಗಳನ್ನು ಮಾಡುವವರಿಗೆ ಅಮಾವಾಸ್ಯೆ ಸೂಕ್ತ ದಿನ ಎನ್ನಲಾಗುತ್ತದೆ. ದೀಪಾವಳಿಯಂದು ಬರುವ ಅಮಾವಾಸ್ಯೆಯನ್ನೂ ಅತ್ಯಂತ ದೋಷ ಪೂರಿತ ಅಮವಾಸ್ಯೆ ಎಂದು ಕರೆಯುತ್ತಾರೆ. ಹಾಗಾಗಿ ದೀಪಾವಳಿಯಂದು ದೇವರನ್ನು ಪೂಜಿಸಿ, ದುಷ್ಟಶಕ್ತಿಗಳು ಬರದಂತೆ ದೀಪಗಳನ್ನು ಹಚ್ಚುತ್ತಾರೆ. ದೇಶದ ಕೆಲವೊಂದು ಭಾಗಗಳಲ್ಲಿ ಮಹಾಕಾಳಿಯು ದುಷ್ಟಶಕ್ತಿಗಳನ್ನು ನಾಶ ಮಾಡುವುದರಿಂದ ಅಮಾವಾಸ್ಯೆಯಂದು ಮಹಾಕಾಳಿಯನ್ನು ಆರಾಧಿಸುತ್ತಾರೆ.
ಹುಣ್ಣಿಮೆ : ಹುಣ್ಣಿಮೆ ಅಥವಾ ಪೌರ್ಣಮಿಯು ಸಮೃದ್ಧಿ ಹಾಗೂ ದೈವತ್ವಕ್ಕೆ ಸಂಬಂಧಿಸಿದೆ. ಅಮವಾಸ್ಯೆಯಂದು ಯಾವುದೇ ಶುಭಕಾರ್ಯಗಳನ್ನು ಮಾಡದಿದ್ದರೂ, ಹುಣ್ಣಿಮೆಯಂದು ಮಾಡುವ ಶುಭಕಾರ್ಯಗಳು ಅಥವಾ ಕೆಲಸಗಳು ಯಶಸ್ವಿಯಾಗುತ್ತದೆ ಎನ್ನುವ ನಂಬಿಕೆ ಇದೆ. ಅಮವಾಸ್ಯೆಯು ಶುಭವಲ್ಲವೆಂದೂ, ಬುಧವಾರ ಅಮಾವಾಸ್ಯೆ ಬಿದ್ದರೆ ಕಾಲಸರ್ಪದೋಷ ಪೂಜೆಯನ್ನು ಮಾಡಲಾಗುತ್ತದೆ. ಈ ಪೂಜೆಯನ್ನು ಯಾರಾದರೂ ಕಾಳಸರ್ಪದೋಷದಿಂದ ಬಳಲುತ್ತಿದ್ದರೆ ಈ ದೋಷವನ್ನು ಪರಿಹರಿಸಲು ಅಮವಾಸ್ಯೆಯಂದು ಪೂಜೆ ಮಾಡುತ್ತಾರೆ. ಈ ಪೂಜೆಯು ರಾಹುವನ್ನು ನಿಯಂತ್ರಿಸುತ್ತದೆ ಹಾಗೂ ಕಾಲಸರ್ಪದ ದೋಷವನ್ನು ಶೇಕಡಾ ಎಪ್ಪತ್ತರಷ್ಟು ಕಡಿಮೆಗೊಳಿಸುತ್ತದೆ
ಹುಣ್ಣಿಮೆಯಂದು ಉಪವಾಸ : ಹುಣ್ಣಿಮೆ ಅಂದರೆ ಪೂರ್ಣ ಚಂದಿರನ ದಿನವನ್ನು ಹಿಂದೂಗಳು ಮಹತ್ತರವಾದ ದಿನವೆಂದು ನಂಬುತ್ತಾರೆ. ಹಾಗಾಗಿ ಹುಣ್ಣಿಮೆಯಂದು ಉಪವಾಸ ಮಾಡಿ ಶ್ರೀ ವಿಷ್ಣುವನ್ನು ಆರಾಧಿಸುತ್ತಾರೆ. ಇಡೀ ದಿನ ಉಪವಾಸವಿದ್ದು ಪ್ರಾರ್ಥನೆ ಮಾಡಿ ನಂತರ ನದಿಯಲ್ಲಿ ಮಿಂದ ನಂತರವೇ ಮುಸ್ಸಂಜೆಯ ವೇಳೆ ಲಘು ಆಹಾರವನ್ನು ಸೇವಿಸುತ್ತಾರೆ. ಹುಣ್ಣಿಮೆ ಹಾಗೂ ಅಮಾವಾಸ್ಯೆಯಂದು ಉಪವಾಸ ಅಥವಾ ಲಘು ಆಹಾರ ಸೇವನೆ ಒಳ್ಳೆಯದು ಎನ್ನುತ್ತಾರೆ ಯಾಕೆಂದರೆ ಇದು ನಮ್ಮ ಜೀರ್ಣಾಂಗ ವ್ಯವಸ್ಥೆಯಲ್ಲಿನ ಆಮ್ಲೀಯತೆಯನ್ನು ಕಡಿಮೆ ಮಾಡುತ್ತದೆ. ಹಾಗೂ ಚಯಾಪಚಯ ಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಸಹಿಷ್ಣುತೆಯನ್ನು ಹೆಚ್ಚಿಸುತ್ತದೆ. ಇದು ದೇಹ ಮತ್ತು ಮನಸ್ಸಿನ ಸಮತೋಲನವನ್ನು ಪುನಃಸ್ಥಾಪಿಸುತ್ತದೆ..
ಅಮಾವಾಸ್ಯೆಯಂದು ಹೀಗೆ ಮಾಡಿ, : ಅಮಾವಾಸ್ಯೆಯಂದು ಉಪವಾಸ ಮಾಡುವುದರಿಂದ ಎಲ್ಲಾ ಋಣಾತ್ಮಕ ಶಕ್ತಿಗಳನ್ನು ದೂರವಿರಿಸಬಹುದು. ಇದು ದುಷ್ಟ ಶಕ್ತಿಗಳ ದೃಷ್ಟಿ ನಿಮ್ಮ ಮೇಲೆ ಬೀಳದಂತೆ ಹಾಗೂ ಋಣಾತ್ಮಕ ಶಕ್ತಿ ಹತ್ತಿರ ಸುಳಿಯದಂತೆ ಮಾಡುತ್ತದೆ. ಅಮಾವಾಸ್ಯೆಯಂದು ಮಾಡುವ ವೃತದಿಂದ ದುಷ್ಟಶಕ್ತಿಗಳನ್ನು ನಿಗ್ರಹಿಸುವ ದೇವತಾ ಶಕ್ತಿಗಳ ಆಶೀರ್ವಾದವು ದುಷ್ಟಶಕ್ತಿಗಳ ನೆರಳೂ ನಿಮ್ಮ ಮೇಲೆ ಬೀಳದಂತೆ ತಡೆಯುತ್ತದೆ ಹಾಗೂ ನಿಮಗೆ ಅದೃಷ್ಟವನ್ನು ದಯಪಾಲಿಸುತ್ತದೆ. ನಂಬಿಕೆಯ ಪ್ರಕಾರ ಅಮಾವಾಸ್ಯೆಯಂದು ಉಪವಾಸ ಮಾಡಿದರೆ ನಿಮ್ಮ ಆಸೆ, ಆಕಾಂಕ್ಷೆಗಳೆಲ್ಲವೂ ಈಡೇರುತ್ತದೆ ಎನ್ನಲಾಗುತ್ತದೆ. ಪೂರ್ವಜರಿಗಾಗಿ ಉಪವಾಸ ಮಾಡಿದರೆ ನೀವು ಯಾವ ಅದೃಷ್ಟವನ್ನು ಬಯಸುತ್ತೀರೋ ಅದು ನಿಮ್ಮೆಡೆಗೆ ಬರುತ್ತದೆ.
ಅಮಾವಾಸ್ಯೆಯಂದು, ನಿಂಬೆ ಹಣ್ಣನ್ನು ನಾಲ್ಕು ಭಾಗಗಳಾಗ ಕತ್ತರಿಸಿ, ನಿಮ್ಮ ನಾಲ್ಕು ದಿಕ್ಕು ಅಂದರೆ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದಿಕ್ಕುಗಳಿಗೆ ಎಸೆಯಿರಿ, ನಿಮಗೆ ನಿರುದ್ಯೋಗ ಸಮಸ್ಯೆಯಿದ್ದರೆ ಈ ಪರಿಹಾರವನ್ನು ಅನುಸರಿಸಿ. ಈ ವಿಧಾನವನ್ನು ಅನುಸರಿಸುವಾಗ ನಾಲ್ಕು ದಿಕ್ಕುಗಳಿಗೂ ಅಡ್ಡವಾಗಿ ನಿಂತಿರುವುದನ್ನು ಹಾಗೂ ನಿಮ್ಮನ್ನು ಯಾರೂ ನೋಡುತ್ತಿಲ್ಲವೆಂದೂ ಖಚಿತಪಡಿಸಿಕೊಳ್ಳಿ. ಈ ವಿಧಾನವನ್ನು ಯಾರಿಗೂ ಗೊತ್ತಾಗದಂತೆ ಮಾಡಿ. ಅಮಾವಾಸ್ಯೆಯಂದು ವೃತವನ್ನು ಮಾಡುವುದರಿಂದ ಆರೋಗ್ಯ ಸಂಬಂಧಿತ ಎಲ್ಲಾ ಸಮಸ್ಯೆಗಳೂ ನಿವಾರಣೆಯಾಗುವುದು. ಹಾಗೂ ದೈಹಿಕವಾಗಿ, ಮಾನಸಿಕವಾಗಿ ಸಾಮರ್ಥ್ಯವನ್ನು ವೃದ್ಧಿಸಬಹುದು. ಜೊತೆಗೆ ಅನಾರೋಗ್ಯ ಹಾಗೂ ಆರ್ಥಿಕ ಸಮಸ್ಯೆಗಳು ಎಂದಿಗೂ ಎದುರಾಗದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿಗಷ್ಟೇ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೆ ಈಗ ಸಿಬಿಎಸ್ಇ 12ನೇ ತರಗತಿಯ ಫಲಿತಾಂಶ ಕೂಡ ಹೊರಬಿದ್ದಿದೆ. ಈ ಪರೀಕ್ಷೆಯಲ್ಲಿ ನಟಿ ಸುಧಾರಾಣಿ ಪುತ್ರಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಸುಧಾರಾಣಿ ಮಗಳು ನಿಧಿ ಸಿಬಿಎಸ್ಇ ಪರೀಕ್ಷೆಯಲ್ಲಿ 96.4% ಮಾರ್ಕ್ಸ್ ಪಡೆದಿದ್ದು, ಈ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಈ ಸಂತೋಷವನ್ನು ನಟಿ ಸುಧಾರಾಣಿ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಇದು ನಮ್ಮ ಜೀವನದಲ್ಲಿ ತುಂಬಾ ಸಂತೋಷದ ಸಮಯವಾಗಿದೆ. ನಮ್ಮ ಸುಬ್ಬಿಕುಟ್ಟಿ…
ಇಂದು ಮಹಾಶಿವರಾತ್ರಿ ಮಂಗಳವಾರ, 13/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ. * ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ. * ಹೊಟ್ಟೆ ಉಬ್ಬರ, ಗ್ಯಾಸ್ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ…
ನಟ, ನಿರ್ದೇಶಕನಾಗಿ ಹೆಸರು ಮಾಡಿದ್ದು ಯುವತಿಯೊರ್ವಳನ್ನು ಅತ್ಯಾಚಾರ ಮಾಡುತ್ತಿದ್ದರೂ ಅದನ್ನು ವಿರೋಧಿಸದೇ ಆತನ ವಿಕೃತ ಕಾರ್ಯಕ್ಕೆ ತಾಯಿಯೋರ್ವಳು ಸಹಾಯ ಮಾಡಿರುವ ಹೀನಾಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ. ಕಿರುಚಿತ್ರ ನಿರ್ದೇಶಕ, ನಟ ಪಿ ಪ್ರಮೋದ್ ಕುಮಾರ್ ಎಂಬಾತ 21 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ವೇಳೆ ನಟನ ತಾಯಿ ಮನೆಯಲ್ಲಿ ಇದ್ದರೂ ಸಹ ಏನು ಮಾಡದೇ ಸುಮ್ಮನಿದ್ದಾರೆ. ಈ ಸಂಬಂಧ ಪ್ರಮೋದ್ ಕುಮಾರ್ ಮೊದಲ ಆರೋಪಿಯಾಗಿದ್ದು ಆತನ ತಾಯಿ…
ಪ್ರೇಮಿಗಳ ದಿನ ಹತ್ತಿರ ಬರ್ತಿದೆ. ಪ್ರೀತಿಯಲ್ಲಿ ಬಿದ್ದವರು ಪ್ರೇಮಿಗಳ ದಿನ ಆಚರಣೆಗೆ ತಯಾರಿ ನಡೆಸುತ್ತಿದ್ದರೆ ಇನ್ನು ಕೆಲವರು ಪ್ರೇಮ ಪರೀಕ್ಷೆಗೆ ಸಿದ್ಧವಾಗ್ತಿದ್ದಾರೆ. ತಮ್ಮ ಹೃದಯ ಕದ್ದವರ ಮುಂದೆ ಪ್ರೇಮ ನಿವೇದನೆ ಮಾಡಿಕೊಳ್ಳುವ ತವಕದಲ್ಲಿದ್ದಾರೆ. ನಿಜವಾದ ಪ್ರೀತಿ ಸಿಗಬೇಕೆಂದ್ರೆ ಅದೃಷ್ಟ ಕೂಡ ಚೆನ್ನಾಗಿರಬೇಕು. ಈ ಬಾರಿ ಫೆಬ್ರವರಿ 14ರಂದು ಮೂರು ರಾಶಿಯವರ ಅದೃಷ್ಟ ಬದಲಾಗಲಿದೆ. ಅವ್ರಿಗೆ ನಿಜವಾದ ಪ್ರೀತಿ ಸಿಗಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ ಪ್ರೇಮಿಗಳ ದಿನ ವೃಷಭ ರಾಶಿಯವರಿಗೆ ಖುಷಿ ತರಲಿದೆಯಂತೆ. ವೃಷಭ ರಾಶಿಯವರು…
ಈ ತರಕಾರಿ ವ್ಯಾಪಾರಿಯ ಸಮಯೋಚಿತ ನಿರ್ಧಾರದಿಂದ ಆಗಬಹುದಾದ ಭಾರೀ ಅನಾಹುತ ತಪ್ಪಿದೆ. ಕಂಜೂರ್ ಮಾರ್ಗ್ ಮತ್ತು ಭಂದೂಪ್ ರೈಲು ನಿಲ್ದಾಣಗಳ ನಡುವೆ ಸುಮಾರು ಒಂದೂವರೆ ಅಡಿಗಳಷ್ಟು ರೈಲು ಹಳಿ ಕಾಣಿಸದಿರುವುದನ್ನು ಈ ವ್ಯಾಪಾರಿ ಗಮನಿಸಿದ್ದಾರೆ. ಅದೇ ವೇಳೆಗೆ ರೈಲೊಂದು ಬರುತ್ತಿರುವುದನ್ನೂ ನೋಡಿದ್ದಾರೆ. ರೈಲು ಇಲ್ಲಿಗೆ ಬಂದರೆ ಭಾರೀ ಅನಾಹುತ ಸಂಭವಿಸುವುದು ಗ್ಯಾರಂಟಿ ಎಂಬುದನ್ನು ಅರಿತ ಆತ ತಡ ಮಾಡದೇ ತನ್ನ ಕೈಲಿದ್ದ ಛತ್ರಿಯನ್ನು ಓಪನ್ ಮಾಡಿ ರೈಲು ಹಳಿಗಳ ಮಧ್ಯೆ ನಿಂತು ರೈಲು ನಿಲ್ಲಿಸುವಂತೆ ಸೂಚಿಸಿದ್ದಾರೆ. ಇದನ್ನು…