ಜ್ಯೋತಿಷ್ಯ

ಇಂದು ಸೋಮವಾರ,12/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

380

ಇಂದು ಸೋಮವಾರ,  12/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಮಡದಿಯ ಕಿರಿಕಿರಿ ಹೆಚ್ಚಲಿದೆ.ಏಕಾಏಕಿ ಹೊಸ ಕಾರ್ಯಗಳನ್ನು ಆರಂಭಿಸುವುದು ಅಷ್ಟು ಸೂಕ್ತವಲ್ಲ. ಸ್ವಲ್ಪ ತಾಳ್ಮೆ ವಹಿಸಿರಿ. ಮುಂದೆ ಒಳಿತಾಗುವುದು. ಸಾಮಾಜಿಕ ಕಾರ್ಯಕರ್ತರಿಗೆ ಯೋಗ್ಯ ಪುರಸ್ಕಾರ ದೊರಕಲಿದೆ.ನೀವು ಪ್ರಮುಖ ಭೂಮಿ ಒಪ್ಪಂದಗಳನ್ನು ಮಾಡಲು ಹಾಗೂ ಮನರಂಜನಾ ಯೋಜನೆಗಳಿಗಾಗಿ ಅನೇಕರನ್ನು ಸಂಘಟಿಸುವ ಒಂದು ಸ್ಥಾನದಲ್ಲಿರುತ್ತೀರಿ. ವೃತ್ತಿರಂಗದಲ್ಲಿ ಮುನ್ನಡೆ ಗೌರವವನ್ನು ಕೊಡಲಿದೆ.

ವೃಷಭ:-

ಖರ್ಚು ಮಾಡಲು ಮುಂದೆಹೋದಲ್ಲಿ ನೀವು ಖಾಲಿ ಜೇಬಿನಿಂದ ಮನೆ ಸೇರಬೇಕಾಗುತ್ತದೆ. ಕೆಲಸ, ಕಚೇರಿ ಕೆಲಸಗಳಿಗೆ ಒತ್ತಡ ನಿಮ್ಮನ್ನು ಬಾಧಿಸುವ ಸಾಧ್ಯತೆ ಇದೆ.ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯ ಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು. ವೈಯಕ್ತಿಕ ಆರೋಗ್ಯದ ಕಡೆ ಗಮನ ಹರಿಸುವುದು ಒಳ್ಳೆಯದು. ಮಹಿಳೆಯರು ಅಧಿಕ ಮಾತಿನಿಂದಾಗಿ ಸಂಕಷ್ಟಕ್ಕೊಳಗಾಗಬಹುದು. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ಮನೆಯವರ ಕೆಲಸ ಕಾರ್ಯಗಳಿಗೆ ಸಹಕಾರ ನೀಡುವ ಮೂಲಕ ಆನಂದ ಅನುಭವಿಸುವಿರಿ.

ಮಿಥುನ:

ನಿಮಗೆ ಸಹಾಯ ಮಾಡಲು ನಾ ಮುಂದು ತಾ ಮುಂದು ಎಂದು ಜನರು ಸಹಕರಿಸುವರು.ಪ್ರಯತ್ನಕ್ಕೆ ತಕ್ಕುದಾದ ಪ್ರತಿಫಲ ದೊರಕಲಿದೆ. ನಿಮ್ಮ ಮಗುವಿಗೆ ಪರೀಕ್ಷೆಯಲ್ಲಿ ಚೆನ್ನಾಗಿ ಮಾಡಲು ಸಾಧ್ಯವಾಗದಿದ್ದಲ್ಲಿ ಅದಕ್ಕೆ ಛೀಮಾರಿ ಹಾಕಬೇಡಿ. ಬದಲಿಗೆ ನೀವು ಮುಂದಿನ ಬಾರಿ ಚೆನ್ನಾಗಿ ಮಾಡುವಂತೆ ಅವರನ್ನು ಪ್ರೋತ್ಸಾಹಿಸಬೇಕು. ಸರ್ಕಾರಿ ಉದ್ಯೋಗಿಗಳಿಗೆ ಇಲಾಖೆಗಳಲ್ಲಿ ಮುಂಬಡ್ತಿ. ನಿಮ್ಮ ಪಾಲುದಾರರು ಅವರ ಮಾತು ನಡೆಸದಿದ್ದರೆ ಬೇಸರಿಸಿಕೊಳ್ಳಬೇಡಿ-ನೀವು ಕುಳಿತುಕೊಂಡು ಮಾತನಾಡಬೇಕಾದ ಅಗತ್ಯವಿದೆ. ಮೀನು ಮುಂತಾದ ಸಮುದ್ರ ಖಾದ್ಯ ಉದ್ಯಮಿಗಳಿಗೆ ಲಾಭದ ನಿರೀಕ್ಷೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಪ್ರಗತಿ. ನೀವು ಇಚ್ಚಿಸಿದ ಕಾರ್ಯಗಳು ಕೈಗೂಡುವುದು. ನಿಮಗೆ ತಿಳಿದ ಜನರ ಮೂಲಕ ಆದಾಯದ ಹೊಸ ಮೂಲಗಳು ಕಂಡುಬರುತ್ತವೆ.

ಕಟಕ :-

ಹೊಸ ಗ್ರಾಹಕರೊಂದಿಗೆ ಮಾತುಕತೆಗೆ ಇದೊಂದು ಅದ್ಭುತ ದಿನ. ತೃಪ್ತಿದಾಯಕ ದಾಂಪತ್ಯ ಜೀವನ. ವಸ್ತ್ರಾಭರಣ ಖರೀದಿ ಸಾಧ್ಯತೆ. ಕಚೇರಿಯ ಅಧಿಕಾರಿಗಳೊಡನೆ ವಿನಾಕಾರಣ ಮನಃಸ್ತಾಪ ಮಾಡಿಕೊಳ್ಳದಿರಿ. ನೀವು ಹಾಗೂ ನಿಮ್ಮ ಪ್ರೀತಿಪಾತ್ರರು ಒಬ್ಬರೊನ್ನಬ್ಬರು ಚೆನ್ನಾಗಿ ಅರ್ಥಮಾಡಿಕೊಳ್ಳಲು ಸಮಯ ವ್ಯಯಿಸಬೇಕು. ಪುಣ್ಯ ಕ್ಷೇತ್ರ ದರ್ಶನ ಭಾಗ್ಯ ಒದಗಿಬರುವುದು.

 ಸಿಂಹ:

ವೃತ್ತಿ ಸಮಸ್ಯೆಗಳು ಉಲ್ಬಣಗೊಂಡರೂ ಕ್ರಮೇಣ ಪರಿಹಾರ ಕಂಡುಕೊಳ್ಳುವವು. ಆರೋಗ್ಯ ವಿಷಯಗಳಲ್ಲಿ ನಿಮ್ಮ ಬಗ್ಗೆ ನೀವೇ ನಿರ್ಲಕ್ಷ್ಯ ಮಾಡದಂತೆ ಎಚ್ಚರಿಕೆ ವಹಿಸಿ. ಉದ್ಯೋಗ ಪ್ರಾಪ್ತಿ. ವಾಹನ ಸವಾರರು ಎಚ್ಚರಿಕೆ ಯಿಂದಿರುವುದು ಒಳಿತು. ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ. ನಿಮ್ಮ ವೈವಾಹಿಕ ಜೀವನ ದೈನಂದಿನ ಅಗತ್ಯಗಳ ನೆರವೇರಿಸುವಿಕೆಯ ಕೊರತೆಯಿಂದಾಗಿ ಇಂದು ಒತ್ತಡಕ್ಕೊಳಗಾಗಬಹುದು. ಚಾಣಾಕ್ಷ ಮತಿಗಳಾದ ನೀವು ಯೋಚಿಸದೆ ಯಾವ ಕೆಲಸವನ್ನು ಮಾಡಲಾರಿರಿ. ಇಂದು ಹೂಡಿಕೆಗಳನ್ನು ಮಾಡಬಾರದು.

ಕನ್ಯಾ :-

ವಿಶೇಷ ವ್ಯಕ್ತಿಗಳ ಪರಿಚಯದಿಂದ ಪ್ರಭಾವಿತರಾಗಿ ಮನಸ್ಸಿನಲ್ಲಿ ಉಲ್ಲಾಸ ಮೂಡುವುದು. ಹಣಕಾಸಿನ ಸ್ಥಿತಿ ಸಾಧಾರಣವಾಗಿರುತ್ತದೆ. ಹೆಣ್ಣುಮಕ್ಕಳ ವಿಚಾರದಲ್ಲಿ ಸ್ವಲ್ಪಮಟ್ಟಿನ ಮುತುವರ್ಜಿ ವಹಿಸುವುದು ಉತ್ತಮ. ವದಂತಿಗಳಿಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಗ್ರಹಗಳ ಪ್ರತಿಕೂಲ ಸಂಚಾರದ ದೆಸೆಯಿಂದ ಹಮ್ಮಿಕೊಂಡ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಹಾಗಾಗಿ ದೊಡ್ಡ ಕಾರ್ಯಗಳನ್ನು ಆರಂಭಿಸುವುದು ಸೂಕ್ತವಲ್ಲ. ಹಣವನ್ನು ಹೂಡುವ ಪ್ರಶ್ನೆ ಬಂದಾಗ ಆತುರದ ನಿರ್ಧಾರಗಳನ್ನು ಮಾಡಬೇಡಿ. ನೀವು ಇಂದು ಏನು ಮಾಡಬೇಕು ಅಥವಾ ಮಾಡಬಾರದು ಎಂಬುದನ್ನು ನಿಮ್ಮ ಕುಟುಂಬದ ಸದಸ್ಯರು ನಿರ್ಧರಿಸಲು ಬಿಡಬೇಡಿ. ಗುರುಹಿರಿಯರ ಆಶೀರ್ವಾದವನ್ನು ಪಡೆಯಿರಿ.

ತುಲಾ:

ಹಿರಿಯರ ಮಾತುಗಳಿಗೆ ಅಗೌರವ ತೋರದಿರಿ. ಮಕ್ಕಳ ಪ್ರಗತಿಯು ನಿಮಗೆ ಸಂತಸವನ್ನು ನೀಡುವುದು. ಯಾವುದೇ ಸಂಕಷ್ಟಗಳು ಬಂದರೂ ಹಿರಿಯರ ಮಾತುಗಳಿಂದಾಗಿ ಪರಿಹಾರ ಕಂಡುಕೊಳ್ಳುವವು. ನೀವು ಇಂದು ಪ್ರಯಾಣಿಸುತ್ತಿದ್ದರೆ ನಿಮ್ಮ ಸಾಮಾನಿನ ಬಗ್ಗೆ ಹೆಚ್ಚುವರಿ ಕಾಳಜಿ ತಗೆದುಕೊಳ್ಳಬೇಕಾಗುತ್ತದೆ. ಮಕ್ಕಳ ಶೈಕ್ಷಣಿಕ ವಿಚಾರದಲ್ಲಿ ಒತ್ತಡ ಹೇರದಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಸಂಗಾತಿಯ ಜೊತೆಗಿನ ಸಂಬಂಧ ನಿಮ್ಮ ಕಚೇರಿ ಕೆಲಸದ ಕಾರಣ ಹಾಳಾಗಬಹುದು.

ವೃಶ್ಚಿಕ :-

ನೆರೆಹೊರೆಯವರಿಂದ ನಿಮ್ಮ ಕೆಲಸಗಳಿಗೆ ಸಹಕಾರ. ಇನ್ನೂ ಸ್ವಲ್ಪ ದಿನದಲ್ಲಿ ನಿಮ್ಮ ಸಮಸ್ಯೆಗಳು ತಿಳಿಗೊಳ್ಳುವುದು. ಮಂಗಳ ಕಾರ್ಯಗಳಲ್ಲಿ ಭಾಗಿಯಾಗುವ ಸುಯೋಗ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಪ್ರವಾಸ ಕಾರ್ಯಕ್ರಮವನ್ನು ಮುಂದೂಡುವುದು ಒಳಿತು. ಕೆಲಸಕ್ಕೆ ಸಂಬಂಧಿಸಿದಂತೆ ಈ ದಿನ ಒಳ್ಳೆಯದಿರುವಂತೆ ಕಾಣುತ್ತದೆ. ಗುರುವಿನ ಸ್ತೋತ್ರವನ್ನು ಪಠಿಸಿ.

ಧನಸ್ಸು:

ಉತ್ತಮ ಕೆಲಸಗಳಿಗಾಗಿ ಮುನ್ನುಗ್ಗಿ ಯಶಸ್ಸನ್ನು ಸಾಧಿಸುವಿರಿ.ನಿಮಗೆ ತಿಳಿಯದಂತೆ ಕೆಲವು ಹಿತಶತ್ರುಗಳ ಕಾಟ ಆರಂಭವಾಗುವುದು. ಬದಲಾಗುತ್ತಿರುವ ಕಾಲಕ್ಕೆ ಹೊಂದಿಕೊಳ್ಳಲು ಹೊಸ ತಂತ್ರಜ್ಞಾನವನ್ನು ಬಳಸಿಕೊಳ್ಳುವುದು ಮುಖ್ಯ.ಬೂದಿ ಮುಚ್ಚಿದ ಕೆಂಡದಂತೆ ಇರುವ ಕೆಲವರು ಏಕಾಏಕಿ ನಿಮ್ಮ ಮೇಲೆ ಏರಿ ಬರುವ ಸಂದರ್ಭವಿರುತ್ತದೆ. ನಕಾರಾತ್ಮಕ ಆಲೋಚನೆಗಳು ಮಾನಸಿಕ ಕಾಯಿಲೆಗಳಾಗುವ ಮೊದಲೇ ನೀವು ಅವುಗಳನ್ನು ನಾಶಮಾಡಬೇಕು.  ಹಣಕಾಸಿನ ವ್ಯವಹಾರ ಅಷ್ಟೊಂದು ಲಾಭ ತರಲಾರದು. ಕುಟುಂಬ ಸಮೇತರಾಗಿ ಕ್ಷೇತ್ರ ದರ್ಶನ ಮಾಡುವ ಅವಕಾಶ. ಪ್ರೀತಿಯ ವ್ಯವಹಾರಗಳಲ್ಲಿ ಬಲವಂತ ಮಾಡುವುದನ್ನು ತಪ್ಪಿಸಿ.

ಮಕರ :-

ಪತ್ನಿ ವರ್ಗದವರಿಂದ ನೆರವಿನ ನಿರೀಕ್ಷೆ. ಖರ್ಚಿನ ದೃಷ್ಟಿಯಿಂದ ಹೊಸದಾದ ಒತ್ತಡ ಎದುರಾದರೂ ಬೇರೆ ರೂಪಗಳಿಂದ ಹಣವು ಹರಿದು ಬರುವುದರಿಂದ ಅನುಕೂಲವಾಗುವುದು. ಇಂದು ಜನರು ಹೊಗಳಿಕೆಗಳನ್ನು ನೀಡುತ್ತಾರೆ-ಇವುಗಳನ್ನು ನೀವು ಯಾವಾಗಲೂ ಕೇಳಬಯಸಿರುತ್ತೀರಿ. ನಿಮ್ಮ ಕಾರ್ಯಗಳು ಸುಗಮವಾಗುವುದು. ವೈಯಕ್ತಿಕ ಮತ್ತು ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ. ನಿಮ್ಮ ಸಂತಸಕ್ಕೆ ಮಡದಿ ಮಕ್ಕಳು ಸಹಾಯ ಮಾಡುವರು.

ಕುಂಭ:-

ಸ್ನೇಹಿತರಿಂದಾಗಿ ಬಹುದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ. ತಾಳ್ಮೆಗೂ ಒಂದು ಮಿತಿ ಇರುತ್ತದೆ. ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆಯಿಂದಾಗಿ ಉತ್ತಮ ಕಾರ್ಯನಿರ್ವಹಣೆ. ಮನರಂಜನೆ ಮತ್ತು ವೈಭೋಗಗಳ ಮೇಲೆ ಅತಿಯಾಗಿ ಖರ್ಚು ಮಾಡಬೇಡಿ. ನೆನೆಗುದಿಗೆ ಬಿದ್ದಿದ್ದ ಕಾರ್ಯಕ್ಕೆ ಚಾಲನೆ ದೊರೆಯುವುದು. ನಿಮ್ಮ ಬಾಸ್ ಇಂದು ನಿಜವಾಗಿಯೂ ಕೆಟ್ಟ ಮನಸ್ಥಿತಿಯೊಡನೆ ಬರಬಹುದು ಹಾಗೂ ಅದನ್ನು ನೀವು ನಿರ್ವಹಿಸುವುದು ನಿಮಗೆ ಕಷ್ಟಕರವಾಗಬಹುದು. ದೂರದ ನೆಂಟರ ಆಗಮನ ಸಾಧ್ಯತೆ. ಹಾಗಾಗಿ ಕೋಪಗೊಳ್ಳುವುದರಲ್ಲಿ ಒಂದು ಅರ್ಥವಿರುತ್ತದೆ.

ಮೀನ:-

ಕೌಟುಂಬಿಕ ಸಮಸ್ಯೆಗಳು ಪರಿಹಾರವಾಗಿ ನೆಮ್ಮದಿ ದೊರಕುವುದು. ನಿಮ್ಮ ಕಷ್ಟದ ದಿನಗಳು ಕೆಲವೇ ದಿನಗಳಲ್ಲಿ ಕರಗಿ ಹೋಗಲಿವೆ. ಒಬ್ಬ ಕುಟುಂಬದ ಸದಸ್ಯರ ಆರೋಗ್ಯದ ಸ್ಥಿತಿ ಸ್ವಲ್ಪ ಒತ್ತಡಕ್ಕೆ ಕಾರಣವಾಗುತ್ತದೆ.  ಮಹಿಳೆಯರು ಸಮಾರಂಭಗಳಲ್ಲಿ ಭಾಗಿಯಾದಾಗ ಆಭರಣಗಳ ಬಗ್ಗೆ ಎಚ್ಚರಿಕೆ. ನಿಮ್ಮನ್ನು ವಿರೋಧಿಸುತ್ತಿದ್ದವರು ನಿಮಗೆ ಹಣಕಾಸಿನ ಸಹಾಯ ಮಾಡಲು ಮುಂದೆ ಬರುವರು. ರಾಜಕೀಯದಲ್ಲಿರುವವರಿಗೆ ಯಶಸ್ಸು. ನೀವು ಸ್ವಲ್ಪ ಪ್ರೀತಿ ಹಂಚಿಕೊಂಡಲ್ಲಿ ಇಂದು ನಿಮ್ಮ ಪ್ರಿಯತಮೆ ನಿಮ್ಮ ದೇವತೆಯಾಗುತ್ತಾಳೆ.  ಆರ್ಥಿಕ ಸ್ಥಿತಿ ಉತ್ತಮಗೊಳ್ಳುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಈ ಪ್ರದೇಶದಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ..!ತಿಳಿಯಲು ಈ ಲೇಖನ ಓದಿ..

    ಯೆಮೆನ್ ನಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ವಿಶ್ವದಾದ್ಯಂತ ಮಹಿಳಾ ಸಂಘಟನೆಗಳು ಇದರ ವಿರುದ್ಧ ತಿರುಗಿ ಬಿದ್ದಿವೆ. ಯೆಮೆನ್ ಕೆಟ್ಟ ಪದ್ಧತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ.

  • ಸುದ್ದಿ, ಸ್ಪೂರ್ತಿ

    70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ, 3 ವರ್ಷದ ಬಾಲಕನ ಪ್ರಾಣ ಉಳಿಸಿದ ಅಂಬುಲೆನ್ಸ್ ಚಾಲಕ.

    21 ವರ್ಷದ ತಿರುಪುರ್ ಮೂಲಕದ  ಅಂಬುಲೆನ್ಸ್ ಚಾಲಕ ಆಕಾಶ್ ಜ್ವರದಿಂದ ಬಳಲುತ್ತಿದ್ದ ಬಾಲಕ ಸಂತೋಷ್‍ನನ್ನು ಗುರುವಾರ ರಾತ್ರಿ ವೆಲ್ಲಾಕೋಯಿಲ್‍ನಿಂದ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೇವಲ 70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ ತಲುಪಿದ್ದಾರೆ. ಆಕಾಶ್ 3 ವರ್ಷದ  ಬಾಲಕನನ್ನು ಆಸ್ಪತ್ರೆಗೆ ತಲುಪಿಸಿದ ಬಳಿಕ ಅಂಬುಲೆನ್ಸ್ ಮುಂದೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ ತಕ್ಷಣ ಸಾಕಷ್ಟು ವೈರಲ್ ಆಗಿದ್ದು ಇವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವರದಿಗಳ ಪ್ರಕಾರ, ಸಂತೋಷ್ ತೀವ್ರ ಜ್ವರದಿಂದ ಬಳಲುತ್ತಿದ್ದು,…

  • ಸುದ್ದಿ

    ದೇವಾಲಯಕ್ಕೆ ಹೋಗ್ತಿದ್ದ ವಿವಾಹಿತೆ ಮಹಿಳೆಯ ಮೇಲೆ ಅತ್ಯಾಚಾರವೆಸೆಗಿದ ಕಾಮುಕರು -ವಿಡಿಯೋ ಮಾಡಿ ಅಪ್ಲೋಡ್…!

    ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ.30 ವರ್ಷದ ಸಂತ್ರಸ್ತೆ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆರೋಪಿಗಳ ವಿರುದ್ಧ ದೂರು ದಾಖಲಿಸಿದ ನಂತರ ಸೋಮವಾರ ಐವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ತನ್ನ ಸ್ನೇಹಿತೆಯೊಂದಿಗೆ ದೇವಾಲಯಕ್ಕೆ ಹೋಗುತ್ತಿದ್ದರು. ಆಗ ಐವರು ಆರೋಪಿಗಳು ಬಂದು ಬಲವಂತವಾಗಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳು ಅತ್ಯಾಚಾರದ ವಿಡಿಯೋವನ್ನು ಕೂಡ ರೆಕಾರ್ಡ್ ಮಾಡಿದ್ದಾರೆ. ಬಳಿಕ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮೇಲ್ನೋಟಕ್ಕೆ ಎಲ್ಲವೂ ಸರಿಯಿದ್ದಂತೆ ಕಂಡರೂ ಸರ್ರನೆ ಕೆಲವು ಬಗೆಯ ಕಿರಿಕಿರಿಗಳು ಎದುರಾಗುವವು. ಸಾಯಿ ಮಂದಿರಕ್ಕೋ ಅಥವಾ ರಾಘವೇಂದ್ರ ಸ್ವಾಮಿಗಳ ಮಠಕ್ಕೋ ಭೇಟಿ ನೀಡಿ ಸಾಂತ್ವನ ಮಾಡಿಕೊಳ್ಳಿ…ನಿಮ್ಮ ಸಮಸ್ಯೆ.ಏನೇ .ಇರಲಿ…

  • ಸುದ್ದಿ

    ಇಲಿಗಳನ್ನು ತಿಂದು ಜೀವನವನ್ನು ನಡೆಸುತ್ತಿದ್ದರೆ ಇಲ್ಲಿನ ಜನರು …ಕಾರಣ..?

    ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ! ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು…

  • ತಂತ್ರಜ್ಞಾನ, ವಿಸ್ಮಯ ಜಗತ್ತು

    ಇವಳೇ ರೋಬೋಟ್ ತಯಾರಿಸಿ, ಇವಳೇ ರೋಬೋಟ್ ಪ್ರೀತಿಯಲ್ಲಿ ಬಿದ್ದಿದ್ದಾಳೆ..!ಈ ಲೇಖನ ಓದಿ ಶಾಕ್ ಆಗ್ತೀರಾ… ..

    ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.