ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಗ್ರೇನ್ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.
ಹಾಗೆಂದು ಎಲ್ಲಾ ತಲೆನೋವುಗಳೂ ಮೈಗ್ರೇನ್ ಅಲ್ಲ. ದೃಷ್ಟಿದೋಷ, ನೆಗಡಿಗೆ ಸಂಬಂಧಿಸಿದ ತೊಂದರೆಗಳು, ಜ್ವರ ಇತ್ಯಾದಿ ಕಾರಣಗಳಿಂದಲೂ ತಲೆನೋವು ಬರುತ್ತದೆ. ಆದರೆ ಅದು ಮೈಗ್ರೇನ್ ಅಲ್ಲ. ಆದರೆ ಮೈಗ್ರೇನ್ ತಲೆನೋವು ಅತ್ಯಂತ ಸಾಮಾನ್ಯವಾದದ್ದು.
ಮೈಗ್ರೇನ್ ಎಂದರೇನು ?
ಕೆಲವು ಕಾರಣಗಳಿಂದ ಒಂದು ವ್ಯಕ್ತಿಯ ತಲೆಯೊಳಗಿನ ರಕ್ತನಾಳಗಳ ಗಾತ್ರದಲ್ಲಿ ಅಸ್ತಿರತೆಯುಂಟಾಗಿ, ಅವು ಮೊದಲು ಸಂಕುಚಿತವಾಗಿ ನಂತರ ವಿಕಸಿತವಾಗುತ್ತದೆ.ಆಗ ರಕ್ತನಾಳಗಳಿಗೆ ಸಂಬಂಧಿಸಿದ ಸೂಕ್ಷ್ಮ ನರಗಳು ಉದ್ರೇಕಗೊಂಡು ತಲೆಯಲ್ಲಿ ನೋವು ಕಾಣಿಸಿಕೊಳ್ಳುತ್ತದೆ, ಅದೇ ಮೈಗ್ರೇನ್.
ಕಾರಣಗಳು, ಸಂದರ್ಭ ಮತ್ತು ಅಪಾಯಕಾರಿ ಅಂಶಗಳು:
ಸಾಮಾನ್ಯವಾಗಿ ಮೈಗ್ರೇನ್ ತಲೆನೋವು 10 ರಿಂದ 45 ವಯಸ್ಸಿನ ನಡುವೆ ಕಾಣಿಸಿಕೊಳ್ಳುತ್ತದೆ. ಕೆಲವು ಸಂದರ್ಭಗಳಲ್ಲಿ ಇದು ಜೀವನದ ಅಂತಿಮ ಹಂತಗಳಲ್ಲಿಯೂ ಸಹ ಕಾಣಿಸಿಕೊಳ್ಳಬಹುದು.ಮೈಗ್ರೇನ್ ಪುರುಷರಿಗಿಂತಲೂ ಮಹಿಳೆಯರಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತದೆ. ಮೈಗ್ರೇನ್ ತಲೆನೋವು ವಂಶಪರಂಪರಾಗತವಾಗಿ ಬರಬಹುದು. ಕೆಲವು ಮಹಿಳೆಯರಲ್ಲಿ , ಎಲ್ಲರಲ್ಲಿಯೂ ಅಲ್ಲ , ಅವರು ಗರ್ಭಿಣಿ ಆಗಿರುವಾಗ ಮೈಗ್ರೇನ್ ಕಾಣಿಸಿಕೊಳ್ಳಬಹುದು.
ಇದಕ್ಕೆ ನಿರ್ಧಿಷ್ಟ ಕಾರಣವನ್ನು ಹೇಳಲಾಗದಿದ್ದರೂ ಈ ಕೆಲವು ಸಾಮಾನ್ಯ ಕಾರಣಗಳನ್ನು ಹೇಳಬಹುದು.
1 ಹೆಚ್ಚು ಕೆಲಸದಿಂದಾಗಿ ಮಾನಸಿಕ ಒತ್ತಡ ಇರುವ ಸಾಫ್ಟ್ವೇರ್ ಎಂಜಿನಿಯರುಗಳಿಗೆ ಇದು ಸಾಮಾನ್ಯ. ಅವರಿಗೆ ದಿನದ ಹೆಚ್ಚುಕಾಲ ಒತ್ತಡದ ಕೆಲಸ ಮತ್ತು ನಿದ್ರೆ ಕಡಿಮೆ, ಅನಿಯಮಿತ ಆಹಾರದ ಸೇವನೆ ಇರುತ್ತದೆ.
2 . ಮಾನಸಿಕ ಒತ್ತಡಗಳಾದ ಕೋಪ,ಚಿಂತೆ, ಖಿನ್ನತೆ,ಗಾಬರಿಗಳಿಂದ ತಲೆನೋವು ಉದ್ರೇಕವಾಗಬಹುದು.
3 .ಆಹಾರ ಸೇವನೆಯಿಂದ ವ್ಯತ್ಯಾಸವಾದ ಹಸಿವೆ, ಮದ್ಯ ಸೇವನೆ, ಕಡಿಮೆ ನೀರು ಕುಡಿಯುವುದರಿನ್ದಲೂ ತಲೆನೋವು ಉದ್ರೇಕವಾಗುತ್ತದೆ.
4 . ನಿದ್ರೆ ಮಾತ್ರೆ ಸೇವನೆ, ಬಿ. ಪಿ., ಹಲ್ಲು ನೋವು, ಕಣ್ಣಿನ ತೊಂದರೆ, ತಂಬಾಕು ಅಥವಾ ಸಿಗರೇಟು ಸೇವನೆ, ಗರ್ಭನಿರೋಧಕ ಮಾತ್ರೆ, ಮೂಗಿನ ಉಸಿರಾಟದ ತೊಂದರೆ, ಸಂಸ್ಕರಿಸದ ಆಹಾರ ಸೇವನೆ, ಅತಿ ಮುಖ್ಯವಾಗಿ ನಿದ್ರಾಹೀನತೆ ಮುಂತಾದುವುಗಳಿಂದ ಸಹ ತಲೆನೋವು ಉದ್ರೇಕಗೊಳ್ಳಬಹುದು.
5 . ಹೆಚ್ಚು ಕಾಲ ಬಿಸಿಲಿನಲ್ಲಿ ಇರುವುದು, ದೀರ್ಘಕಾಲ ಪ್ರಯಾಣ ಮಾಡುವುದು, ಮದುವೆ ಅಥವಾ ಇತರೆ ಗಲಾಟೆ ಇರುವ ಸಮಾರಂಭದಲ್ಲಿ ಹೆಚ್ಚು ಹೊತ್ತು ಭಾಗವಹಿಸುವುದು, ಕೆಲವರಿಗೆ ಹೆಚ್ಚಾಗಿ ಓದುವುದು, ಹೆಚ್ಚು ಕಾಲ ಸಿನೆಮಾ / ಟಿ. ವಿ, ನೋಡುವುದು ಇವುಗಳಿಂದ ತಲೆನೋವು ಉದ್ರೇಕಗೊಳಬಹುದು.
6 . ಕೆಲವು ಸ್ತ್ರೀಯರಿಗೆ ಋತುಚಕ್ರದ ಏರುಪೇರುಗಳಿಂದ ತಲೆನೋವು ಉದ್ರೇಕಗೊಳ್ಳಬಹುದು.
ಮೈಗ್ರೇನ್ ರೋಗಲಕ್ಷಣಗಳು:
ದೃಷ್ಟಿ ಅಸ್ತವ್ಯಸ್ತಗೊಳ್ಳುವುದು, ಅಥವಾ ಕಣ್ಣಿನ ಬದಿಗಳಲ್ಲಿ ಬೆಳಕಿನ ಬಿಂಬಗಳು ಅಥವಾ ಪ್ರಭಾವಳಿ ಸುತ್ತುತ್ತಿರುವಂತೆ ಅನ್ನಿಸುವುದನ್ನು ಮೈಗ್ರೇನ್ ಬರುತ್ತಿದೆ ಎನ್ನುವುದರ ಎಚ್ಚರಿಕೆಯ ಸೂಚನೆ ಎಂಬುದಾಗಿ ಪರಿಗಣಿಸಲಾಗುತ್ತದೆ. ಬೆಳಕಿನ ಬಿಂಬಗಳು ಒಂದು ಅಥವಾ ಎರಡೂ ಕಣ್ಣಿನ ಬದಿಗಳಲ್ಲಿ ಕಾಣಿಸಿಕೊಳ್ಳಬಹುದು ಮತ್ತು ಕೆಳಗೆ ಹೇಳುವ ಒಂದು ಅಥವಾ ಎಲ್ಲ ರೋಗಲಕ್ಷಣಗಳ ಜತೆಗೆ ಕಾಣಿಸಿಕೊಳ್ಳಬಹುದು.
ಕಣ್ಣಿನಲ್ಲಿ ತಾತ್ಕಾಲಿಕವಾಗಿ ಆಂಶಿಕ ಕುರುಡುತನ ಅಥವಾ ಕಣ್ಣಿನ ಎದುರು ಕಪ್ಪು ಚುಕ್ಕೆಗಳು ಗೋಚರಿಸುವುದು,ದೃಷ್ಟಿ ಮಬ್ಟಾಗುವುದು,ಕಣ್ಣು ನೋವು,ಕಣ್ಣಿನ ಸುತ್ತಲೂ ನಕ್ಷತ್ರಗಳು ಅಥವಾ ಅಂಕುಡೊಂಕಾದ ಗೆರೆಗಳು ಗೋಚರಿಸುವುದು
ಕೊಳವೆಯೊಳಗಿನಿಂದ ನೋಡಿದಂತೆ ದೃಶ್ಯಗಳು ಅರೆಬರೆ ಕಾಣಿಸುವುದು (ಟನೆಲ್ಷನ್-ಕಣ್ಣಿನ ಮುಂಭಾಗದ ದೃಶ್ಯಗಳು ಮಾತ್ರವೇ ಗೋಚರಿಸಿ ಬದಿಗಳಲ್ಲಿನ ದೃಶ್ಯ ಕಾಣಿಸದೆಯೇ ಇರುವುದು)
ಮೈಗ್ರೇನ್ ಇರುವ ಎಲ್ಲ ವ್ಯಕ್ತಿಗಳಿಗೂ ಬೆಳಕಿನ ಪುಂಜ ಕಾಣಿಸದೆ ಇರಬಹುದು. ಇಂತಹ ಬೆಳಕಿನ ಪುಂಜ ಕಾಣಿಸಿಕೊಳ್ಳುವವರಲ್ಲಿ ತಲೆನೋವು ಕಾಣಿಸಿಕೊಳ್ಳುವುದಕ್ಕೆ ಸುಮಾರು 10-15 ನಿಮಿಷ ಮೊದಲು ಇದು ಕಾಣಿಸಿಕೊಳ್ಳಬಹುದು. ಹಾಗಿದ್ದರೂ ಸಹ ಅದು ಕೆಲವೇ ನಿಮಿಷಗಳಿಗೆ ಮೊದಲು ಅಥವಾ 24 ಗಂಟೆಗಳಿಗೂ ಮೊದಲು ಕಾಣಿಸಿಕೊಳ್ಳಬಹುದು. ಬೆಳಕಿನ ಪುಂಜ ಕಾಣಿಸಿಕೊಂಡ ಅನಂತರ ಯಾವಾಗಲೂ ತಲೆನೋವು ಬಂದೇ ಬರುತ್ತದೆ ಎಂದು ಹೇಳುವಂತಿಲ್ಲ.
ಮೈಗ್ರೇನ್ ತಲೆನೋವು ಬಹಳ ಸಣ್ಣದಾಗಿ ಇರಬಹುದು ಅಥವಾ ತೀವ್ರ ರೂಪದಲ್ಲಿಯೂ ಬಾಧಿಸಬಹುದು. ನೋವು ಕಣ್ಣಿನ ಹಿಂಭಾಗದಲ್ಲಿ ಅಥವಾ ಕತ್ತು ಮತ್ತು ತಲೆಯ ಹಿಂಭಾಗದಲ್ಲಿ ಕಾಣಿಸಿಕೊಳ್ಳಬಹುದು. ಕೆಲವು ರೋಗಿಗಳಲ್ಲಿ ಪ್ರತಿಯೊಂದು ಬಾರಿಯೂ ತಲೆನೋವು ಒಂದೇ ಭಾಗದಲ್ಲಿ ಕಾಣಿಸಿಕೊಳ್ಳಬಹುದು. ತಲೆನೋವು ಸಾಮಾನ್ಯವಾಗಿ ಈ ರೀತಿಯಲ್ಲಿ ಇರಬಹುದು.
ಬಹಳ ಸಣ್ಣದಾಗಿ ಆರಂಭವಾದ ನೋವು ಕೆಲವೇ ನಿಮಿಷಗಳಲ್ಲಿ ಅಥವಾ ಗಂಟೆಗಳಲ್ಲಿ ತೀವ್ರಗೊಳ್ಳಬಹುದು. 6 ರಿಂದ 48 ಗಂಟೆಗಳ ವರೆಗೂ ಇರಬಹುದು.
ಮೈಗ್ರೇನ್ ನ ನಿವಾರಣೆ :-
1 . ಮೈಗ್ರೇನ್ ತಲೆನೋವು ಬಂದಾಗ ಕೆಲವರಿಗೆ ಯಾವುದಾದರೂ ನೋವು ನಿವಾರಕ ಮಾತ್ರೆಯನ್ನು [ Pain killer ] ತೆಗೆದುಕೊಂಡರೆ ಸ್ವಲ್ಪ ಸಮಯದ ನಂತರ ನೋವು ಕಡಿಮೆಯಾಗುತ್ತದೆ.
2 . ಇನ್ನು ಕೆಲವರಿಗೆ ಏನನ್ನೂ ಉಪಯೋಗಿಸದೆ ನಿಷ್ಯಬ್ದವಾದ ಕೊಠಡಿಯಲ್ಲಿ ಕೆಲವು ಕಾಲ ವಿಶ್ರಾಂತಿ ತೆಗೆದುಕೊಳ್ಳುವುದರಿಂದಲೇ ತಲೆನೋವು ಕಡಿಮೆಯಾಗುತ್ತದೆ.
3 . ಇದಲ್ಲದೆ ಜೀವನ ಶೈಲಿಯನ್ನ್ನು ಬದಲಾಯಿಸಿಕೊಳ್ಳುವುದರಿಂದ ಈ ತೆರನ ತಲೆನೋವನ್ನು ನಿಯಂತ್ರಿಸಿಕೊಳ್ಳಬಹುದು.
ಮುನ್ಸೂಚನೆಗಳು:–
ಚಿಕಿತ್ಸೆಗೆ ಪ್ರತಿಯೊಬ್ಬನೂ ಸ್ಪಂದಿಸುವ ರೀತಿ ಹಾಗೂ ಪ್ರಮಾಣ ಭಿನ್ನ-ಭಿನ್ನವಾಗಿರುತ್ತವೆ. ಕೆಲವರಿಗೆ ಸ್ವಲ್ಪಮಟ್ಟಿನ ಚಿಕಿತ್ಸೆಯಿಂದ ಅಥವಾ ಚಿಕಿತ್ಸೆಯೇ ಇಲ್ಲದೆ ತಲೆನೋವು ಕಡಿಮೆ ಆಗಬಹುದು, ಇನ್ನು ಕೆಲವರಿಗೆ ಅನೇಕ ಔಷಧಿಗಳನ್ನು ಉಪಯೋಗಿಸಬೇಕಾಗಿ ಬರಬಹುದು ಅಥವಾ ಆಸ್ಪತ್ರೆಗೂ ಸೇರಬೇಕಾಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….
ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.
ತುಮಕೂರು, ಜು. 27- ಬಾಣಂತನಕ್ಕೆ ಹೋಗಿದ್ದ ಪತ್ನಿಯನ್ನು ಮನೆಗೆ ಕರೆಸದ ತಾಯಿ ಜತೆ ಜಗಳವಾಡಿ ಪದೇ ಪದೇ ಅವರ ಮೇಲೆ ಹಲ್ಲೆ ನಡೆಸುತ್ತಿದ್ದ ಅಣ್ಣನ ವರ್ತನೆಯಿಂದ ಕುಪಿತಗೊಂಡ ತಮ್ಮ ರಾತ್ರಿ ಅಣ್ಣನ ಕುತ್ತಿಗೆಗೆ ಚಾಕುವಿನಿಂದ ಬಲವಾಗಿ ಇರಿದು ಕೊಲೆ ಮಾಡಿರುವ ಧಾರುಣ ಘಟನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ರಾಮಗೊಂಡನಹಳ್ಳಿಯ ಮಹೇಶ್ (35) ಕೊಲೆಯಾದ ದುರ್ದೈವಿಯಾಗಿದ್ದು, ಆರೋಪಿ ತಮ್ಮ ಅಂಜನಮೂರ್ತಿ ಪೊಲೀಸರ ಅತಿಥಿಯಾಗಿದ್ದಾನೆ. ಚಿಕ್ಕಹನುಮಯ್ಯ-ಗಂಗಮ್ಮ ದಂಪತಿಯ ಮೊದಲ ಮಗನಾದ ಮಹೇಶ್ ನಿಗೆ ಮದುವೆಯಾಗಿದ್ದು ಬಾಣಂತನಕ್ಕೆಂದು ಪತ್ನಿ ತನ್ನ…
ನವದೆಹಲಿ, ಮಾರಾಟ ಕುಸಿತದ ಬೆನ್ನಲ್ಲೇ ಗ್ರಾಹಕರನ್ನು ಸೆಳೆಯಲು ಮಾರುತಿ ಸುಜುಕಿ ಭರ್ಜರಿ ಡಿಸ್ಕೌಂಟ್ ಆಫರ್ ನೀಡಿದೆ. ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ. ವಾಹನ ಮಾರಾಟ ಕುಸಿತ ಕಂಡಿರುವ ಬೆನ್ನಲ್ಲೇ ಬಹುತೇಕ ಎಲ್ಲಾ ಆಟೋಮೊಬೈಲ್ ಕಂಪನಿಗಳು ಡಿಸ್ಕೌಂಟ್ ಆಫರ್ ನೀಡುತ್ತಿದೆ. ಇದೀಗ ಸೆಪ್ಟೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ಭರ್ಜರಿ ಡಿಸ್ಕೌಂಟ್ ಆಫರ್ ಘೋಷಿಸಿದೆ. ಈ ತಿಂಗಳಲ್ಲಿ S ಕ್ರಾಸ್ ಖರೀದಿಸುವ ಗ್ರಾಹಕರಿಗೆ ಗರಿಷ್ಠ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಏಪ್ರಿಲ್, 2019) ನಿಮ್ಮ ನೀಡುವ ವರ್ತನೆ ಪರೋಕ್ಷವಾಗಿ ನಿಮಗೆ ಆಶೀರ್ವಾದವೇ…
ಬಳ್ಳಾರಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಭಾರೀ ಅಂತರದಲ್ಲಿ ಜಯ ಸಾಧಿಸಿದ್ದಾರೆ.ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ. ಉಗ್ರಪ್ಪ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಶಾಂತಾ ಅವರಿಗಿಂತ ಒಂದೂವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯ ಸಾಧಿಸಿದ್ದು, ಹೊಸ ದಾಖಲೆ ಬರೆದಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಚುನಾವಣಾ ಆಯೋಗ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಬೇಕಿದೆ.ಇದೇ…