ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಗ್ರೇನ್ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.
ಹಾಗೆಂದು ಎಲ್ಲಾ ತಲೆನೋವುಗಳೂ ಮೈಗ್ರೇನ್ ಅಲ್ಲ. ದೃಷ್ಟಿದೋಷ, ನೆಗಡಿಗೆ ಸಂಬಂಧಿಸಿದ ತೊಂದರೆಗಳು, ಜ್ವರ ಇತ್ಯಾದಿ ಕಾರಣಗಳಿಂದಲೂ ತಲೆನೋವು ಬರುತ್ತದೆ. ಆದರೆ ಅದು ಮೈಗ್ರೇನ್ ಅಲ್ಲ. ಆದರೆ ಮೈಗ್ರೇನ್ ತಲೆನೋವು ಅತ್ಯಂತ ಸಾಮಾನ್ಯವಾದದ್ದು.
ಮೈಗ್ರೇನ್ ಎಂದರೇನು ?
ಕೆಲವು ಕಾರಣಗಳಿಂದ ಒಂದು ವ್ಯಕ್ತಿಯ ತಲೆಯೊಳಗಿನ ರಕ್ತನಾಳಗಳ ಗಾತ್ರದಲ್ಲಿ ಅಸ್ತಿರತೆಯುಂಟಾಗಿ, ಅವು ಮೊದಲು ಸಂಕುಚಿತವಾಗಿ ನಂತರ ವಿಕಸಿತವಾಗುತ್ತದೆ.ಆಗ ರಕ್ತನಾಳಗಳಿಗೆ ಸಂಬಂಧಿಸಿದ ಸೂಕ್ಷ್ಮ ನರಗಳು ಉದ್ರೇಕಗೊಂಡು ತಲೆಯಲ್ಲಿ ನೋವು ಕಾಣಿಸಿಕೊಳ್ಳುತ್ತದೆ, ಅದೇ ಮೈಗ್ರೇನ್.
ಕಾರಣಗಳು, ಸಂದರ್ಭ ಮತ್ತು ಅಪಾಯಕಾರಿ ಅಂಶಗಳು:
ಸಾಮಾನ್ಯವಾಗಿ ಮೈಗ್ರೇನ್ ತಲೆನೋವು 10 ರಿಂದ 45 ವಯಸ್ಸಿನ ನಡುವೆ ಕಾಣಿಸಿಕೊಳ್ಳುತ್ತದೆ. ಕೆಲವು ಸಂದರ್ಭಗಳಲ್ಲಿ ಇದು ಜೀವನದ ಅಂತಿಮ ಹಂತಗಳಲ್ಲಿಯೂ ಸಹ ಕಾಣಿಸಿಕೊಳ್ಳಬಹುದು.ಮೈಗ್ರೇನ್ ಪುರುಷರಿಗಿಂತಲೂ ಮಹಿಳೆಯರಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತದೆ. ಮೈಗ್ರೇನ್ ತಲೆನೋವು ವಂಶಪರಂಪರಾಗತವಾಗಿ ಬರಬಹುದು. ಕೆಲವು ಮಹಿಳೆಯರಲ್ಲಿ , ಎಲ್ಲರಲ್ಲಿಯೂ ಅಲ್ಲ , ಅವರು ಗರ್ಭಿಣಿ ಆಗಿರುವಾಗ ಮೈಗ್ರೇನ್ ಕಾಣಿಸಿಕೊಳ್ಳಬಹುದು.
ಇದಕ್ಕೆ ನಿರ್ಧಿಷ್ಟ ಕಾರಣವನ್ನು ಹೇಳಲಾಗದಿದ್ದರೂ ಈ ಕೆಲವು ಸಾಮಾನ್ಯ ಕಾರಣಗಳನ್ನು ಹೇಳಬಹುದು.
1 ಹೆಚ್ಚು ಕೆಲಸದಿಂದಾಗಿ ಮಾನಸಿಕ ಒತ್ತಡ ಇರುವ ಸಾಫ್ಟ್ವೇರ್ ಎಂಜಿನಿಯರುಗಳಿಗೆ ಇದು ಸಾಮಾನ್ಯ. ಅವರಿಗೆ ದಿನದ ಹೆಚ್ಚುಕಾಲ ಒತ್ತಡದ ಕೆಲಸ ಮತ್ತು ನಿದ್ರೆ ಕಡಿಮೆ, ಅನಿಯಮಿತ ಆಹಾರದ ಸೇವನೆ ಇರುತ್ತದೆ.
2 . ಮಾನಸಿಕ ಒತ್ತಡಗಳಾದ ಕೋಪ,ಚಿಂತೆ, ಖಿನ್ನತೆ,ಗಾಬರಿಗಳಿಂದ ತಲೆನೋವು ಉದ್ರೇಕವಾಗಬಹುದು.
3 .ಆಹಾರ ಸೇವನೆಯಿಂದ ವ್ಯತ್ಯಾಸವಾದ ಹಸಿವೆ, ಮದ್ಯ ಸೇವನೆ, ಕಡಿಮೆ ನೀರು ಕುಡಿಯುವುದರಿನ್ದಲೂ ತಲೆನೋವು ಉದ್ರೇಕವಾಗುತ್ತದೆ.
4 . ನಿದ್ರೆ ಮಾತ್ರೆ ಸೇವನೆ, ಬಿ. ಪಿ., ಹಲ್ಲು ನೋವು, ಕಣ್ಣಿನ ತೊಂದರೆ, ತಂಬಾಕು ಅಥವಾ ಸಿಗರೇಟು ಸೇವನೆ, ಗರ್ಭನಿರೋಧಕ ಮಾತ್ರೆ, ಮೂಗಿನ ಉಸಿರಾಟದ ತೊಂದರೆ, ಸಂಸ್ಕರಿಸದ ಆಹಾರ ಸೇವನೆ, ಅತಿ ಮುಖ್ಯವಾಗಿ ನಿದ್ರಾಹೀನತೆ ಮುಂತಾದುವುಗಳಿಂದ ಸಹ ತಲೆನೋವು ಉದ್ರೇಕಗೊಳ್ಳಬಹುದು.
5 . ಹೆಚ್ಚು ಕಾಲ ಬಿಸಿಲಿನಲ್ಲಿ ಇರುವುದು, ದೀರ್ಘಕಾಲ ಪ್ರಯಾಣ ಮಾಡುವುದು, ಮದುವೆ ಅಥವಾ ಇತರೆ ಗಲಾಟೆ ಇರುವ ಸಮಾರಂಭದಲ್ಲಿ ಹೆಚ್ಚು ಹೊತ್ತು ಭಾಗವಹಿಸುವುದು, ಕೆಲವರಿಗೆ ಹೆಚ್ಚಾಗಿ ಓದುವುದು, ಹೆಚ್ಚು ಕಾಲ ಸಿನೆಮಾ / ಟಿ. ವಿ, ನೋಡುವುದು ಇವುಗಳಿಂದ ತಲೆನೋವು ಉದ್ರೇಕಗೊಳಬಹುದು.
6 . ಕೆಲವು ಸ್ತ್ರೀಯರಿಗೆ ಋತುಚಕ್ರದ ಏರುಪೇರುಗಳಿಂದ ತಲೆನೋವು ಉದ್ರೇಕಗೊಳ್ಳಬಹುದು.
ಮೈಗ್ರೇನ್ ರೋಗಲಕ್ಷಣಗಳು:
ದೃಷ್ಟಿ ಅಸ್ತವ್ಯಸ್ತಗೊಳ್ಳುವುದು, ಅಥವಾ ಕಣ್ಣಿನ ಬದಿಗಳಲ್ಲಿ ಬೆಳಕಿನ ಬಿಂಬಗಳು ಅಥವಾ ಪ್ರಭಾವಳಿ ಸುತ್ತುತ್ತಿರುವಂತೆ ಅನ್ನಿಸುವುದನ್ನು ಮೈಗ್ರೇನ್ ಬರುತ್ತಿದೆ ಎನ್ನುವುದರ ಎಚ್ಚರಿಕೆಯ ಸೂಚನೆ ಎಂಬುದಾಗಿ ಪರಿಗಣಿಸಲಾಗುತ್ತದೆ. ಬೆಳಕಿನ ಬಿಂಬಗಳು ಒಂದು ಅಥವಾ ಎರಡೂ ಕಣ್ಣಿನ ಬದಿಗಳಲ್ಲಿ ಕಾಣಿಸಿಕೊಳ್ಳಬಹುದು ಮತ್ತು ಕೆಳಗೆ ಹೇಳುವ ಒಂದು ಅಥವಾ ಎಲ್ಲ ರೋಗಲಕ್ಷಣಗಳ ಜತೆಗೆ ಕಾಣಿಸಿಕೊಳ್ಳಬಹುದು.
ಕಣ್ಣಿನಲ್ಲಿ ತಾತ್ಕಾಲಿಕವಾಗಿ ಆಂಶಿಕ ಕುರುಡುತನ ಅಥವಾ ಕಣ್ಣಿನ ಎದುರು ಕಪ್ಪು ಚುಕ್ಕೆಗಳು ಗೋಚರಿಸುವುದು,ದೃಷ್ಟಿ ಮಬ್ಟಾಗುವುದು,ಕಣ್ಣು ನೋವು,ಕಣ್ಣಿನ ಸುತ್ತಲೂ ನಕ್ಷತ್ರಗಳು ಅಥವಾ ಅಂಕುಡೊಂಕಾದ ಗೆರೆಗಳು ಗೋಚರಿಸುವುದು
ಕೊಳವೆಯೊಳಗಿನಿಂದ ನೋಡಿದಂತೆ ದೃಶ್ಯಗಳು ಅರೆಬರೆ ಕಾಣಿಸುವುದು (ಟನೆಲ್ಷನ್-ಕಣ್ಣಿನ ಮುಂಭಾಗದ ದೃಶ್ಯಗಳು ಮಾತ್ರವೇ ಗೋಚರಿಸಿ ಬದಿಗಳಲ್ಲಿನ ದೃಶ್ಯ ಕಾಣಿಸದೆಯೇ ಇರುವುದು)
ಮೈಗ್ರೇನ್ ಇರುವ ಎಲ್ಲ ವ್ಯಕ್ತಿಗಳಿಗೂ ಬೆಳಕಿನ ಪುಂಜ ಕಾಣಿಸದೆ ಇರಬಹುದು. ಇಂತಹ ಬೆಳಕಿನ ಪುಂಜ ಕಾಣಿಸಿಕೊಳ್ಳುವವರಲ್ಲಿ ತಲೆನೋವು ಕಾಣಿಸಿಕೊಳ್ಳುವುದಕ್ಕೆ ಸುಮಾರು 10-15 ನಿಮಿಷ ಮೊದಲು ಇದು ಕಾಣಿಸಿಕೊಳ್ಳಬಹುದು. ಹಾಗಿದ್ದರೂ ಸಹ ಅದು ಕೆಲವೇ ನಿಮಿಷಗಳಿಗೆ ಮೊದಲು ಅಥವಾ 24 ಗಂಟೆಗಳಿಗೂ ಮೊದಲು ಕಾಣಿಸಿಕೊಳ್ಳಬಹುದು. ಬೆಳಕಿನ ಪುಂಜ ಕಾಣಿಸಿಕೊಂಡ ಅನಂತರ ಯಾವಾಗಲೂ ತಲೆನೋವು ಬಂದೇ ಬರುತ್ತದೆ ಎಂದು ಹೇಳುವಂತಿಲ್ಲ.
ಮೈಗ್ರೇನ್ ತಲೆನೋವು ಬಹಳ ಸಣ್ಣದಾಗಿ ಇರಬಹುದು ಅಥವಾ ತೀವ್ರ ರೂಪದಲ್ಲಿಯೂ ಬಾಧಿಸಬಹುದು. ನೋವು ಕಣ್ಣಿನ ಹಿಂಭಾಗದಲ್ಲಿ ಅಥವಾ ಕತ್ತು ಮತ್ತು ತಲೆಯ ಹಿಂಭಾಗದಲ್ಲಿ ಕಾಣಿಸಿಕೊಳ್ಳಬಹುದು. ಕೆಲವು ರೋಗಿಗಳಲ್ಲಿ ಪ್ರತಿಯೊಂದು ಬಾರಿಯೂ ತಲೆನೋವು ಒಂದೇ ಭಾಗದಲ್ಲಿ ಕಾಣಿಸಿಕೊಳ್ಳಬಹುದು. ತಲೆನೋವು ಸಾಮಾನ್ಯವಾಗಿ ಈ ರೀತಿಯಲ್ಲಿ ಇರಬಹುದು.
ಬಹಳ ಸಣ್ಣದಾಗಿ ಆರಂಭವಾದ ನೋವು ಕೆಲವೇ ನಿಮಿಷಗಳಲ್ಲಿ ಅಥವಾ ಗಂಟೆಗಳಲ್ಲಿ ತೀವ್ರಗೊಳ್ಳಬಹುದು. 6 ರಿಂದ 48 ಗಂಟೆಗಳ ವರೆಗೂ ಇರಬಹುದು.
ಮೈಗ್ರೇನ್ ನ ನಿವಾರಣೆ :-
1 . ಮೈಗ್ರೇನ್ ತಲೆನೋವು ಬಂದಾಗ ಕೆಲವರಿಗೆ ಯಾವುದಾದರೂ ನೋವು ನಿವಾರಕ ಮಾತ್ರೆಯನ್ನು [ Pain killer ] ತೆಗೆದುಕೊಂಡರೆ ಸ್ವಲ್ಪ ಸಮಯದ ನಂತರ ನೋವು ಕಡಿಮೆಯಾಗುತ್ತದೆ.
2 . ಇನ್ನು ಕೆಲವರಿಗೆ ಏನನ್ನೂ ಉಪಯೋಗಿಸದೆ ನಿಷ್ಯಬ್ದವಾದ ಕೊಠಡಿಯಲ್ಲಿ ಕೆಲವು ಕಾಲ ವಿಶ್ರಾಂತಿ ತೆಗೆದುಕೊಳ್ಳುವುದರಿಂದಲೇ ತಲೆನೋವು ಕಡಿಮೆಯಾಗುತ್ತದೆ.
3 . ಇದಲ್ಲದೆ ಜೀವನ ಶೈಲಿಯನ್ನ್ನು ಬದಲಾಯಿಸಿಕೊಳ್ಳುವುದರಿಂದ ಈ ತೆರನ ತಲೆನೋವನ್ನು ನಿಯಂತ್ರಿಸಿಕೊಳ್ಳಬಹುದು.
ಮುನ್ಸೂಚನೆಗಳು:–
ಚಿಕಿತ್ಸೆಗೆ ಪ್ರತಿಯೊಬ್ಬನೂ ಸ್ಪಂದಿಸುವ ರೀತಿ ಹಾಗೂ ಪ್ರಮಾಣ ಭಿನ್ನ-ಭಿನ್ನವಾಗಿರುತ್ತವೆ. ಕೆಲವರಿಗೆ ಸ್ವಲ್ಪಮಟ್ಟಿನ ಚಿಕಿತ್ಸೆಯಿಂದ ಅಥವಾ ಚಿಕಿತ್ಸೆಯೇ ಇಲ್ಲದೆ ತಲೆನೋವು ಕಡಿಮೆ ಆಗಬಹುದು, ಇನ್ನು ಕೆಲವರಿಗೆ ಅನೇಕ ಔಷಧಿಗಳನ್ನು ಉಪಯೋಗಿಸಬೇಕಾಗಿ ಬರಬಹುದು ಅಥವಾ ಆಸ್ಪತ್ರೆಗೂ ಸೇರಬೇಕಾಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಗಿನ ತಿಂಡಿಯನ್ನು ತಿನ್ನಲೂ ಹೆಚ್ಚಿನವರಿಗೆ ಪುರಸೊತ್ತು ಇರುವುದಿಲ್ಲ. ಹೆಚ್ಚಿನ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳೂ ಇದಕ್ಕೆ ಹೊರತಲ್ಲ. ಬ್ರೇಕ್ಫಾಸ್ಟ್ ತಪ್ಪಿಸುವುದರಿಂದ ಆರೋಗ್ಯ ಸಮಸ್ಯೆಗಳಿಗೆ ಮುಕ್ತ ಆಹ್ವಾನ ನೀಡಿದಂತಾಗುತ್ತದೆ ಎನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ
ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !
ಸೌಭಾಗ್ಯಲಕ್ಷ್ಮಿ, ಉಷಾ, ಸಾವಿರ ಸುಳ್ಳು, ದಿಗ್ವಿಜಯ ಸಿನಿಮಾಗಳಲ್ಲಿ ನಟಿಸಿರುವ ಸುಂದರ ಮೊಗದ ನಟಿ ರಾಧಾ ಕನ್ನಡ ಚಿತ್ರಪ್ರೇಮಿಗಳಿಗೆ ಚೆನ್ನಾಗಿ ಪರಿಚಯ. ಕನ್ನಡದಲ್ಲಿ ನಟಿಸಿದ್ದು ಬೆರಳೆಣಿಕೆ ಸಿನಿಮಾಗಳಲ್ಲಾದರೂ ಅವರಿಗೆ ಹೆಸರು ತಂದುಕೊಟ್ಟದ್ದು ಮಾತ್ರ ಸಾಹಸಸಿಂಹ ವಿಷ್ಣುವರ್ಧನ್ ಜೊತೆ ಅಭಿನಯಿಸಿದ ಸೌಭಾಗ್ಯಲಕ್ಷ್ಮಿ ಸಿನಿಮಾ.ರಾಧಾ ಮೊದಲ ಹೆಸರು ಉದಯಚಂದ್ರಿಕ. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದವರು. ಕನ್ನಡದಲ್ಲಿ ಹೆಚ್ಚು ಸಿನಿಮಾಗಳಲ್ಲಿ ನಟಿಸದಿದ್ದರೂ ತಮಿಳು, ಮಲಯಾಳಂ ಹಾಗೂ ತೆಲುಗು ಸಿನಿಮಾಗಳಲ್ಲಿ ಹೆಸರು ಮಾಡಿದವರು ರಾಧಾ. 1991 ರಲ್ಲಿ ರಾಧಾ ಉದ್ಯಮಿ ರಾಜಶೇಖರನ್ ನಾಯರ್ ಅವರನ್ನು ವಿವಾಹವಾದರು.ಈ ದಂಪತಿಗೆ…
ನಿರುದ್ಯೋಗ ಸಮಸ್ಯೆ ನಿವಾರಿಸುವ ಸಲುವಾಗಿ ಮೈ ಜಾಬ್ ಆ್ಯಪ್ ಬಿಡುಗಡೆಗೊಳಿಸಲಾಯಿತು. ಉದ್ಯೋಗಕ್ಕಾಗಿ ಯುವಜನರು -ಕರ್ನಾಟಕ ವತಿಯಿಂದ ಬಿಡುಗಡೆಗೊಳಿಸಲಾಗಿರುವ ಈ ಆ್ಯಪ್ನಲ್ಲಿ ಉದ್ಯೋಗ ಕುರಿತು ಮಾಹಿತಿ ನೆರವು ಅರಿವು ನೀಡಲಾಗುತ್ತದೆ.
ನಟ ರಾಕಿಂಗ್ ಸ್ಟಾರ್ ಯಶ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಯಶ್ ಅವರು ಹೊಂದಿರುವ ಕೊಠಡಿಯನ್ನು ಕೂಡ ಪರಿಶೀಲಿಸಿದ್ದಾರೆ. ಯಶ್ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ತೆರಳಿದ್ದು, ಐಟಿ ದಾಳಿಯ ಮಾಹಿತಿ ತಿಳಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಯಶ್, ಅಲ್ಲಿಂದ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ. ಯಶ್ ಅವರು…
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ. ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.