ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ. ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ.
ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು ಭ್ರಮೆಗೆ ಒಳಗಾಗುವಿರಿ. ಇದರಿಂದ ನಿಮ್ಮ ಮನಸ್ಸಿಗೆ ಘಾತವಾಗುವುದು. ಆದಾಯ – ಖರ್ಚುಗಳನ್ನು ಸಮತೋಲನದಲ್ಲಿ ಇರಿಸಿಕೊಳ್ಳುವಿರಿ. ಮಿತವಾದ ಆಹಾರ ಸೇವನೆಯಿಂದ ಆರೋಗ್ಯದಲ್ಲಿ ಸುಧಾರಣೆ. ಸಂಸಾರದಲ್ಲಿ ನೆಮ್ಮದಿ. ವಿಶೇಷ ವ್ಯಕ್ತಿಗಳ ಆಗಮನ ಸಾಧ್ಯತೆ. ಮಾತಾ ದುರ್ಗಾದೇವಿಯನ್ನು ಸ್ಮರಿಸಿ.
ರಾಜಕೀಯ ಭವಿಷ್ಯದ ಬಗ್ಗೆ ಪ್ರಭಾವಿ ರಾಜಕಾರಣಿಗಳೊಂದಿಗೆ ಚರ್ಚೆ, ಮಹತ್ತರ ನಿರ್ಣಯ ಕೈಗೊಳ್ಳುವ ಸಾಧ್ಯತೆ. ಎಲ್ಲಾ ದಿಕ್ಕುಗಳಲ್ಲಿಯೂ ನೀವು ಹಲವು ಒತ್ತಡಗಳನ್ನು ಎದುರಿಸಬೇಕಾಗುವುದು. ಗುರುವಿನ ಅನುಗ್ರಹವಿರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ. ಮಕ್ಕಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುವರು. ವಸ್ತ್ರಾಭರಣ ಖರೀದಿ ಮಾಡಲು ಸುಸಮಯ. ಅನಿರೀಕ್ಷಿತ ಧನಾಗಮನ.
ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡರು ಎನ್ನುವಂತೆ ಆಗಬಾರದು ಎಂದರೆ ಮೈಯೆಲ್ಲಾ ಕಣ್ಣಾಗಿ ಆಗುವ ಕೆಲಸಗಳತ್ತ ಗಮನ ಹರಿಸಬೇಕು. ಇಲ್ಲದೆ ಇದ್ದಲ್ಲಿ ಬಂದ ಮಹತ್ತರ ಅವಕಾಶ ತಪ್ಪಿಹೋಗುವ ಸಾಧ್ಯತೆ ಇರುತ್ತದೆ. ಸಹಕಾರ ಸಂಘ ಮುಂತಾದ ಸಾರ್ವಜನಿಕ ಕ್ಷೇತ್ರಗಳಲ್ಲಿ ಉತ್ತಮ ಹುದ್ದೆ ಹೊಂದುವ ಅವಕಾಶ. ಬಂಧುಗಳ ಆಗಮನದಿಂದ ಮನೆಯಲ್ಲಿ ಹಬ್ಬದ ವಾತಾವರಣ. ಕಾರ್ಯ ಸಾಧನೆಗಾಗಿ ಗಣೇಶ ಆರಾಧನೆ ಮಾಡಿ.
ಆಡಳಿತಾತ್ಮಕ ಹುದ್ದೆಯಲ್ಲಿರುವವರಿಗೆ ಗೌರವಾದರ ಲಭಿಸಲಿದೆ. ಹೊಸ, ಹೊಸ ಯೋಜನೆಗಳು ನಿಮ್ಮ ತಲೆಯಲ್ಲಿ ಸುಳಿದು ಮಾಯವಾಗುವವು. ಆದರೆ ಅವುಗಳನ್ನು ಕಾರ್ಯ ರೂಪಕ್ಕೆ ತರುವಲ್ಲಿ ಶಿಸ್ತುಬದ್ಧತೆಯನ್ನು ಪ್ರದರ್ಶಿಸಬೇಕಾಗುವುದು. ಸಾಮಾಜಿಕವಾಗಿ ಎಲ್ಲರಿಂದ ಗುರುತಿಸಿಕೊಳ್ಳುವಿರಿ. ಬರಹಗಾರರಿಗೆ ಕವಿಗಳಿಗೆ, ಕಲಾವಿದರಿಗೆ ಉತ್ತಮ ಅವಕಾಶ, ಪ್ರಶಸ್ತಿಗಳಿಗೆ ಭಾಜನರಾಗುವ ಸಾಧ್ಯತೆ. ಮಗಳಿಗೆ ಉತ್ತಮ ಸಂಬಂಧ ಕೂಡಿಬರಲಿದೆ.
ನಿಮ್ಮ ಕಾರ್ಯಯೋಜನೆಗಳು ಸಫಲವಾಗುವುದನ್ನು ತಪ್ಪಿಸಲು ಹಲವರು ಹೊಂಚುಹಾಕಿ ಕಾಯುತ್ತಿರುವರು. ಆದರೆ ದೈವಬಲವಿರುವವರಿಗೆ ಯಾರ ಹಂಗೇನು? ನಿಮ್ಮ ಕಾರ್ಯಯೋಜನೆಗಳು ಭಗವಂತನ ದಯೆಯಿಂದ ಸಫಲಗೊಳ್ಳುವವು. ಚಿತ್ರ ಕಲಾವಿದರು, ಕವಿಗಳಿಗೆ ಮನ್ನಣೆ ದೊರಕಲಿದೆ. ರಾಜಕಾರಣಿಗಳ ಮಾತಿಗೆ ಮರುಳಾಗುವ ಸಾಧ್ಯತೆ. ಹಿತ ಶತ್ರುಗಳ ಭರವಸೆಗಳ ಬಗ್ಗೆ ಎಚ್ಚರಿಕೆ ಅಗತ್ಯ. ಮನೆಯಲ್ಲಿ ಸಂತಸದ ವಾತಾವರಣ ಮೂಡಲಿದೆ
ಪೂರ್ವಾಪರ ಯೋಚನೆಯನ್ನು ಮಾಡದೆ ದಿಢೀರನೆ ಮಾಡುತ್ತಿರುವ ಉದ್ಯೋಗಕ್ಕೆ ರಾಜೀನಾಮೆ ನೀಡದಿರಿ. ಒಂದು ವೇಳೆ ರಾಜೀನಾಮೆ ನೀಡಿದಲ್ಲಿ ಕಷ್ಟ ಪರಂಪರೆಯನ್ನು ಎದುರಿಸಬೇಕಾಗುವುದು. ಸಂಶೋಧನಾ ಕಾರ್ಯಗಳಲ್ಲಿ ತೊಡಗಿದವರಿಗೆ ಹೊಸ ಸಂಶೋಧನೆಗೆ ಆರ್ಥಿಕ ಸಹಕಾರ. ಆರಕ್ಷಕ, ರಕ್ಷಣಾ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಬಿಡುವಿಲ್ಲದ ಕೆಲಸ ಮತ್ತು ಜವಾಬ್ದಾರಿ ಹೆಚ್ಚಲಿದೆ. ಗುರು, ಹಿರಿಯರ ಆಶೀರ್ವಾದ ಪಡೆಯಿರಿ.
ಕಟ್ಟಡ, ವಸ್ತ್ರವಿನ್ಯಾಸಕಾರರಿಗೆ ಬೇಡಿಕೆಯೊಂದಿಗೆ ಉದ್ಯೋಗಾವಕಾಶ. ಹಲವು ದಿನಗಳಿಂದ ಕಂಡ ಕನಸು ನನಸಾಗುವ ಸಾಧ್ಯತೆ ಇರುತ್ತದೆ. ಎಲ್ಲಾ ಮೂಲಗಳಿಂದ ಶುಭವಾರ್ತೆಯನ್ನು ಕೇಳುವಿರಿ. ಮನೆಯ ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುವುದು. ಉದ್ಯೋಗದಲ್ಲಿರುವವರಿಗೆ ಸ್ಥಾನ ಬದಲಾವಣೆ ಅಥವಾ ಬಡ್ತಿಯಿಂದಾಗಿ ಉತ್ತಮ ಆದಾಯ. ಉತ್ತಮ ಆರೋಗ್ಯ.
ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ ಎನ್ನುವಂತೆ ವಿದೇಶದಿಂದ ಬರುವ ಉದ್ಯೋಗದ ವಿಚಾರವಾಗಿ ತೀರ್ಮಾನ ಕೈಗೊಳ್ಳುವಲ್ಲಿ ಹಿರಿಯರ ಆಶೀರ್ವಾದ ಪಡೆಯಿರಿ. ಈ ದಿನಗಳಲ್ಲಿ ವಿದೇಶ ಪ್ರಯಾಣ ನಿಮಗೆ ಲಾಭಕಾರಿಯಾಗುವುದಿಲ್ಲ. ಕಲಾವಿದರು, ನಟರು, ಸಂಗೀತಗಾರರಿಗೆ ಉತ್ತಮ ದಿನ. ವಾಹನ ಖರೀದಿ ಅಥವಾ ವಿಕ್ರಿಯಲ್ಲಿ ಎಚ್ಚರಿಕೆ ವಹಿಸುವುದು ಉತ್ತಮ. ಹೊಸ ಆದಾಯ ಮೂಲಕ್ಕಾಗಿ ಹುಡುಕಾಟ ನಡೆಸುವಿರಿ.
ಹೊಸ ಪುಸ್ತಕ ಅಥವಾ ಗ್ರಂಥ ಸಂಪಾದನೆಯಾಗಲಿದೆ. ವಿವಾಹದ ವಿಷಯದಲ್ಲಿ ನೇರ ಮಾತುಕತೆಯಿಂದ ಯಶಸ್ವಿಯಾಗುವಿರಿ. ಸಜ್ಜನರೊಂದಿಗಿನ ಮಾತುಕತೆಯಿಂದಾಗಿ ಮಾನಸಿಕ ಉಲ್ಲಾಸ. ವೈದ್ಯರಿಗೆ ಹೆಚ್ಚಿನ ಆದಾಯ. ಸಂಸಾರ ಗುಟ್ಟು ವ್ಯಾದಿ ರಟ್ಟು ಎನ್ನುವಂತೆ ಸಾಂಸಾರಿಕ ಜೀವನದ ಒಳ ತುಮುಲಗಳನ್ನು ಹೊರಗೆ ಹಾಕುವುದು ಸೂಕ್ತವಲ್ಲ. ಮನೆಯೊಳಗಿನ ವಿಚಾರವನ್ನು 4 ಗೋಡೆಗಳ ಮಧ್ಯದಲ್ಲಿಯೇ ಕುಳಿತು ಬಗೆಹರಿಸಿಕೊಳ್ಳಿ.
ಲೆಕ್ಕಪರಿಶೋಧನಾ ಅಥವಾ ಲೆಕ್ಕಪತ್ರಗಳನ್ನು ನೋಡಿಕೊಳ್ಳುವವರಿಗೆ ಬಿಡುವಿಲ್ಲದ ಕೆಲಸ. ದೂರದ ಊರಿನ ಪ್ರಯಾಣವು ದಿಢೀರನೆ ನಿರ್ಣಯವಾಗುವುದು. ಇದರಿಂದ ದಿನನಿತ್ಯದ ಕಾರ್ಯಗಳಿಗೆ ಹಿಂಚಲನೆ ಉಂಟಾಗುವುದು. ಆದಾಗ್ಯೂ ಗುರು, ಹಿರಿಯರ ಆಶೀರ್ವಾದದಿಂದ ನೀವು ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸನ್ನು ಹೊಂದುವಿರಿ. ಸಂಪಾದನೆಯಲ್ಲಿ ಏರುಮುಖವನ್ನು ಕಾಣುವಿರಿ. ವಾದವಿವಾದಗಳು ಬಗೆಹರಿದು ನಿರಾಳತೆ ನೆಲೆಸುವುದು.
ಮಹತ್ತರ ಕಾರ್ಯವನ್ನು ಹಮ್ಮಿಕೊಳ್ಳಲು ಯೋಚಿಸಿರುವಿರಿ. ಆದರೆ ಅದನ್ನು ಆರಂಭಿಸಲು ಸೂಕ್ತಕಾಲವಲ್ಲ. ಸ್ವತಂತ್ರವಾಗಿ ನಿರ್ಧಾರ ತಳೆಯದೇ ಬಂಧುಮಿತ್ರರ ಸಲಹೆಯನ್ನು ಸ್ವೀಕರಿಸಿ. ಹಾಸ್ಯ ಕಲಾವಿದರಿಗೆ ವಿಶೇಷ ಗೌರವ ಮನ್ನಣೆ. ಮಾತುಗಳಿಗೆ ಮನ್ನಣೆ ಹೊಂದುವಿರಿ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರದಿಂದಾಗಿ ಕಾರ್ಯಬಾಹುಳ್ಯದ ನಡುವೆಯೂ ನೆಮ್ಮದಿ. ಉದ್ವೇಗಗೊಳ್ಳದಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.
ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ…
ಲೋಕಸಮರದ ಫಲಿತಾಂಶಕ್ಕೂ ಮುನ್ನ ಮಧ್ಯಪ್ರದೇಶದ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿದೆ. ಈಗಾಗಲೇ ಆಡಳಿತರೂಢ ಸರ್ಕಾರಕ್ಕೆ ಬಹುಮತವಿಲ್ಲ ವಿಶೇಷ ಅಧಿವೇಶನ ಕರೆಯಬೇಕೆಂದು ಬಿಜೆಪಿ ರಾಜ್ಯಪಾಲರಿಗೆ ಪತ್ರ ಬರೆದಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಸಿಎಂ ಕಮಲ್ನಾಥ್ ಬಿಜೆಪಿ ರಾಜ್ಯದಲ್ಲಿ ಕುದುರೆ ವ್ಯಾಪಾರಕ್ಕೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ. ಸುಮಾರು 10 ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಕಮಲದಡಿಯಲ್ಲಿ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ನಮ್ಮ ಶಾಸಕರಿಗೆ ಆಫರ್ ಸುರಿಮಳೆಯ ಫೋನ್ ಕರೆಗಳು ಬರುತ್ತಿವೆ. ಬೇಕಾದರೆ ಆ 10 ಶಾಸಕರ ಹೆಸರನ್ನು ಬಹಿರಂಗಗೊಳಿಸಬಲ್ಲೆ ಎಂದು ಕಮಲ್…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ 90 ದಿನಗಳನ್ನು ಮುಗಿಸಿದೆ. ಈ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವು ದಿನಗಳು ಇರುವಾಗಲೇ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಡಬಲ್ ಎಲಿಮಿನೇಟ್ ಆಗಿದ್ದಾರೆ. ಹೌದು.ಭಾನುವಾರ ನಟ ಸುದೀಪ್ ಅವರು ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಇಬ್ಬರನ್ನು ಎಲಿಮಿನೇಟ್ ಮಾಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ಮುಂದಿನ ವಾರ ಡಬಲ್ ಎಲಿಮಿನೇಷನ್ ಇದೆ. ಹೀಗಾಗಿ ಈ ವಾರ ಎಲಿಮಿನೇಟ್ ಇರಲಿಲ್ಲ. ಈ ವಿಚಾರ ಮನೆಯ ಸದಸ್ಯರಿಗೆ ಗೊತ್ತಿರಲಿಲ್ಲ….
ಹೌದು ಸರ್ಕಾರದಿಂದ ಕಲ್ಲಡ್ಕ ಶಾಲೆಗೆ ಸಿಗುತಿದ್ದ ಅನುದಾನ ನಿಲ್ಲಿಸಿದ್ದು ಎಲ್ಲರಿಗೂ ತಿಳಿದೇ ಇದೆ.. ಹೀಗಿರುವಾಗ ಹಲವಾರು ಮಂದಿ ಶಾಲೆಯ ನೆರವಿಗೆ ಬಂದರು..
2013 ಡಿಸೆಂಬರ್ 2 ರಂದು ಕಲರ್ಸ ಕನ್ನಡ ವಾಹಿನಿಯಲ್ಲಿ ತನ್ನ ಮೊದಲ ಎಪಿಸೋಡ್ ಆರಂಭಿಸಿದ ‘ಅಗ್ನಿಸಾಕ್ಷಿ’ ಪ್ರತಿರಾತ್ರಿ 8 ಗಂಟೆ ಆಗುತ್ತಿದ್ದಂತೆ ಮಹಿಳೆಯರು ಎಲ್ಲಾ ಕೆಲಸ ಮುಗಿಸಿ ಅಥವಾ ಇರುವ ಕೆಲಸ ಎಲ್ಲಾ ಬಿಟ್ಟು ‘ಅಗ್ನಿಸಾಕ್ಷಿ’ ಧಾರಾವಾಹಿ ನೋಡಲು ಕುಳಿತುಬಿಡುತ್ತಿದ್ದರು. ಆದರೆ ಇದೀಗ ಆ ಧಾರಾವಾಹಿ ಅಭಿಮಾನಿಗಳಿಗೆ ಏನೋ ಕಳೆದುಕೊಂಡಂತಾಗಿದೆ ಏಕೆಂದರೆ ಧಾರಾವಾಹಿ 6 ವರ್ಷಗಳ ಸುಧೀರ್ಘ ಪಯಣವನ್ನು ನಿಲ್ಲಿಸಿದೆ. ಅಂತೆಯೇ ಜನವರಿ 3 2020 ರಂದು ಕೊನೆಯ ಎಪಿಸೋಡ್ ಪ್ರಸಾರವಾಗಿದೆ. ಅರ್ಕ ಮೀಡಿಯಾ ಹೌಸ್ ನಿರ್ಮಾಣದ…