ಉಪಯುಕ್ತ ಮಾಹಿತಿ

ಈ ಭಯಾನಕ ಕೋಳಿ ಜ್ವರದ ಬಗ್ಗೆ ನಿಮಗೆಷ್ಟು ಗೊತ್ತು?ಈ ರೋಗದ ಲಕ್ಷಣಗಳು ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಗೊತ್ತಾ..?ಉಪಯುಕ್ತ ಮಾಹಿತಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…

1320

ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್‌ಫ್ಲೂಯೆನ್‌ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.ಇದು ಟರ್ಕಿ ಕೋಳಿ,ಗಿಣಿ ಕೋಳಿ,ಬಾತು ಕೋಳಿ,ಗೀಜಗ ಮುಂತಾದ ಹಕ್ಕಿಗಳಲ್ಲಿ ಕಾಣಿಸಿಕೊಳ್ಳುವ ಖಾಯಿಲೆ.ಇದೊಂದು ಸಾಂಕ್ರಾಮಿಕ ಖಾಯಿಲೆಯಾಗಿದ್ದು,ಸಾಮಾನ್ಯವಾಗಿ ಹಕ್ಕಿಗಳಿಂದ ಹಕ್ಕಿಗಳಿಗೆ ಹರಡುತ್ತದೆ.ಕೆಲವೊಮ್ಮೆ ರೋಗ ಪೀಡಿತ ಹಕ್ಕಿಗಳ ಸಂಪರ್ಕದಿಂದ ಮನುಷ್ಯರಲ್ಲೂ ಈ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚು.

ಈ ರೋಗ ಹೇಗೆ ಹರಡುತ್ತದೆ…

ರೋಗ ಪೀಡಿತ ಕೋಳಿ ಅಥವಾ ಹಕ್ಕಿಗಳ ಮಾಂಸವನ್ನು ಸರಿಯಾಗಿ ಬೇಯಿಸದೇ ತಿನ್ನುವುದರಿಂದ ಸೋನ್ಕಿರುವ ಹಸಿ ಮೊಟ್ಟೆಗಳನ್ನು ಸೇವಿಸುವುದರಿಂದ ಹಾಗೂ ಕೋಳಿಗಳ ಹಿಕ್ಕೆಗಳು, ಮನುಷ್ಯರು ಕುಡಿಯುವ ನೀರಿನೊಂದಿಗೆ ಬೆರೆತು ಕಲುಶಿತಗೊಂಡಾಗ ಈ ಖಾಯಿಲೆ ಹರಡುತ್ತದೆ ಮತ್ತು ಕೆಲವು ಸಂದರ್ಭಗಳಲ್ಲಿ ಗಾಳಿಯ ಮೂಲಕವೂ ಮನುಷ್ಯರಿಗೆ ಹರಡುತ್ತದೆ. ಸೋಂಕಿಗೆ ಒಳಗಾದ ಹಕ್ಕಿಯ ಮಲ, ಮೂತ್ರ, ಸಿಂಬಳ ಮತ್ತು ಉಸಿರು ರೋಗಾಣುಗಳಿಂದ ತುಂಬಿರುತ್ತದೆ. ಹಕ್ಕಿ ವಾಸಿಸುವ ಸ್ಥಳ, ಅಲ್ಲಿನ ಗಾಳಿ, ಸಾಕಣೆಗೆ ಬಳಸುವ ಉಪಕರಣ ಎಲ್ಲವೂ ವೈರಸ್‌ಮಯವಾಗಿರುತ್ತವೆ. ಇವುಗಳ ಸಂಪರ್ಕಕ್ಕೆ ಬರುವ ಎಲ್ಲ ಪಕ್ಷಿಗಳಿಗೂ ಸೋಂಕು ತಗುಲುತ್ತದೆ. ಕೋಳಿ ಫಾರಂನಲ್ಲಿ ಒಂದು ಕೋಳಿಗೆ ಸೋಂಕು ಉಂಟಾದರೆ ಕೆಲವೇ ಗಂಟೆಗಳಲ್ಲಿ ಎಲ್ಲ ಕೋಳಿಗಳಿಗೂ ಕಾಯಿಲೆ ಅಂಟಿಕೊಳ್ಳುತ್ತದೆ. ಪಕ್ಷಿಗಳಿಗೆ ಹಂದಿಯಿಂದ, ಹಂದಿಗಳಿಗೆ ಪಕ್ಷಿಗಳಿಂದ ಸೋಂಕು ಅಂಟುವುದೂ ಉಂಟು. ಅತಿ ಅಪರೂಪವಾಗಿ ಪಕ್ಷಿಗಳ ಕಾಯಿಲೆ ಮಾನವನಿಗೆ ಅಂಟುವುದೂ ಇದೆ. ಹೀಗಾಗಿ ಕೋಳಿ ಫಾರಂನಲ್ಲಿ ಕೆಲಸ ಮಾಡುವವರು, ಕೋಳಿ ಸಾಕಿರುವ ಮನೆಯವರು ಹಕ್ಕಿ ಜ್ವರಕ್ಕೆ ಸೆರೆಯಾಗುತ್ತಾರೆ. ಪಕ್ಷಿಗಳನ್ನು, ಮೊಟ್ಟೆಯನ್ನು ಮಾರುವವರಿಗೂ, ಕತ್ತರಿಸುವವರಿಗೂ, ಕೋಳಿ ಮಾಂಸದ ಅಡುಗೆ ಮಾಡುವವರಿಗೂ ಹಕ್ಕಿ ಜ್ವರ ಅಂಟುವ ಸಂಭವ ಇರುತ್ತದೆ. ರೋಗಾಣುಗಳು ಮುಖ್ಯವಾಗಿ ಉಸಿರಾಡುವ ಗಾಳಿಯೊಂದಿಗೆ ಮಾನವನ ದೇಹ ಸೇರುತ್ತವೆ. ಮನುಷ್ಯನಿಗೆ ಅಂಟಿದ ಸೋಂಕು ಮತ್ತೊಬ್ಬರಿಗೆ ಅಂಟುವುದಿಲ್ಲ. ಹಾಗೇನಾದರೂ ಆಗಿದ್ದರೆ ಸೋಂಕು ಅತ್ಯಂತ ತೀವ್ರಗತಿಯಲ್ಲಿ ಹರಡಿ ಮನುಷ್ಯರ ಮಾರಣಹೋಮವೇ ನಡೆದುಹೋಗುತ್ತಿತ್ತು.

ಈ ರೋಗದ ಲಕ್ಷಣಗಳು:-

ಹಕ್ಕಿ ಜ್ವರದ ಲಕ್ಷಣಗಳು ಸಾಮಾನ್ಯವಾಗಿ ಹೆಚ್1ಏನ್1 ಜ್ವರದ ಲಕ್ಷಣಗಳನ್ತಯೇ ಇರುತ್ತವೆ.

  • ಈ ರೋಗದ ಸೋಂಕಿಗೆ ಒಳಗಾದ ವ್ಯಕ್ತಿಗಳಲ್ಲಿ 2-3 ದಿನದಲ್ಲಿ ರೋಗ ಲಕ್ಷಣಗಳು ಪ್ರಕಟವಾಗುತ್ತವೆ.
  • ಜ್ವರ,ಕೆಮ್ಮು,ಶೀತ,ತಲೆನೋವು,ಗಂಟಲು ಕೆರೆತ,ನೆಗಡಿ,ಸ್ನಾಯುಗಳಲ್ಲಿ ನೋವು,ಮತ್ತು ಆಯಾಸ ಕಾಣಿಸಿಕೊಳ್ಳುತ್ತದೆ.
  • ಕೆಲವೊಮ್ಮೆ ವಾಂತಿ ಮತ್ತು ಭೇದಿ ಆಗಬಹುದು.ಉಸಿರಾಟದಲ್ಲಿ ತೊಂದರೆ ಕಾಣಿಸಬಹುದು.
  • ಹಕ್ಕಿ ಜ್ವರದಿಂದ ಉಸಿರಾಟ ಸಮಸ್ಯೆ ಎದುರಾಗಿ ಸಾವು ಸಂಭವಿಸಬಹುದು.
  • ಕಾಯಿಲೆ ಆರಂಭದ 48 ಗಂಟೆಗಳಲ್ಲಿ ಔಷಧ ತೆಗೆದುಕೊಂಡರೆ ಪರಿಣಾಮ ಹೆಚ್ಚು.

ಮುನ್ನೆಚ್ಚರಿಕೆ ಕ್ರಮಗಳು:-

ಹಕ್ಕಿ ಜ್ವರ ಪೀಡಿತ ಪ್ರದೇಶಗಳಲ್ಲಿ ವಾಸಿಸುವ ಜನರು ಕೆಲವು ಮುನ್ನೆಚ್ಚರಿಕ ಕ್ರಮಗಳನ್ನು ಕೈ ಗೊಂಡರೆ ಹಕ್ಕಿ ಜ್ವರದ ಸೋಂಕು ಹರಡದಂತೆ ತಡೆಯಬಹುದು…

  • ಶಂಕಿತ ಹಕ್ಕಿ ಜ್ವರ ಪೀಡಿತ ಕೋಳಿಗಳು,ಹಕ್ಕಿಗಳು ಹಾಗೂ ಬಾತು ಕೋಳಿಗಳ ಸಂಪರ್ಕಕ್ಕೆ ಬರದಂತೆ ಎಚ್ಚರವಹಿಸಬೇಕು.
  • ಬೇರೆಯವರ ಮನೆಗೆ ಭೇಟಿ ನೀಡಿದಾಗ ಅಲ್ಲಿರುವ ಶಂಕಿತ ಹಕ್ಕಿ ಜ್ವರ ಪೀಡಿತ ಕೋಳಿ ಅಥವಾ ಹಕ್ಕಿಗಳನ್ನು ಮುಟ್ಟಬಾರದು.
  • ಕೋಳಿ ಮತ್ತು ಹಕ್ಕಿಗಳ ಮಾಂಸವನ್ನು ಹಾಗೂ ಮೊಟ್ಟೆಗಳನ್ನು ಸೂಕ್ತ ರೀತಿಯಲ್ಲಿ ಬೇಯಿಸಿ ತಿನ್ನುವುದು ಸುರಕ್ಷಿತ.
  • ಕೋಳಿ ಮತ್ತು ಹಕ್ಕಿಗಳನ್ನು ಮನೆಯಲ್ಲಿಯೇ ಕತ್ತರಿಸಬೇಡಿ. ಇವುಗಳನ್ನು ಮನೆಯಲ್ಲಿಯೇ ಕತ್ತರಿಸಿ ಕೊಲ್ಲುವುದರಿಂದ ಸೋಂಕು ಉಂಟಾಗುವ ಸಾಧ್ಯತೆ ಹೆಚ್ಚಿರುತ್ತದೆ.
  • ಹಕ್ಕಿಜ್ವರದ ಚಿಕಿತ್ಸೆಯಲ್ಲಿ “ಟ್ಯಾಮಿಫ್ಲೂ’ ಮಾತ್ರೆ ಬಳಸಲಾಗುತ್ತದೆ. ಮಾತ್ರೆಗಳ ಸ೦ಗ್ರಹ ಸಾಕಷ್ಟು ಇರುವುದರಿ೦ದ ಚಿಕಿತ್ಸೆಗೂ ಯಾವುದೇ ತೊ೦ದರೆಯಾಗುವುದಿಲ್ಲ ಎ೦ದು ಆರೋಗ್ಯ ಇಲಾಖೆ ಸಹ ಮಾಹಿತಿ ನೀಡಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಈ ಊರಲ್ಲಿ ಕಪ್ಪೆಗಳಿಗೆ ಮದುವೆ ಮಾಡಿದ್ರು, ಆಮೇಲೆ ಏನಾಯ್ತು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಮಳೆ ಬಂದಿಲ್ಲ ಅಂದ್ರೆ ಹಳ್ಳಿಗಳ ಕಡೆ ಮಳೆರಾಯನ ಪೂಜೆ ಮತ್ತು  ಕಪ್ಪೆಗಳಗೆ ಮದುವೆ ಮಾಡಿಸುವುದು ವಾಡಿಕೆ. ಹಾಗೂ ಕಪ್ಪೆಗಳಿಗೆ ಮದುವೆ ಮಾಡಿಸಿ ಮಳೆರಾಯನ ಮೊರೆಹೊದರೆ ಖಂಡಿತ ಮಳೆ ಬರುತ್ತದೆ ಎಂಬ ನಂಬಿಕೆ ಇದೆ… ಹೌದು, ಕೋಲಾರ ತಾಲ್ಲೂಕಿನ ತೊಟ್ಲಿ ಗ್ರಾಮಸ್ಥರು ಹೀಗೆ ಕಪ್ಪೆಗಳಗೆ ಮದುವೆ ಮಾಡಿಸಿ ಮೂರೇ ದಿನದಲ್ಲಿ ಮಳೆ ಬರಿಸಿದ್ದಾರೆ. ಕಪ್ಪೆ ಮದುವೆ ಮಾಡಿಸುವುದು ಹೇಗೆ? ಊರಿನ ಜನರು ಮಳೆರಾಯನಿಗೆ ಪ್ರಾರ್ಥಿಸಿ ಹೆಣ್ಣು ಮತ್ತು ಗಂಡು ಕಪ್ಪೆಗಳಿಗೆ ಸಿಂಗಾರ ಮಾಡಿ ಗ್ರಾಮದ ಮುಖ್ಯಬೀದಿಗಳಲ್ಲಿ ತಮಟೆವಾದ್ಯಗಳೊಂದಿಗೆ ಕಪ್ಪೆ ಜೊಡಿಯ ಮೆರವಣಿಗೆ…

  • ಸುದ್ದಿ

    ಮತ್ತೆ ಪ್ಲೇ ಸ್ಟೋರ್‌ನಲ್ಲಿ ನಕಲಿ ಆ್ಯಪ್ಸ್ ಕಾಟ,ಯಾವ ಆ್ಯಪ್ಸ್ ಮಾಹಿತಿ ಕದಿಯುತ್ತಿವೆ,ತಿಳಿದುಕೊಳ್ಳಿ…!

    ಗೂಗಲ್‌ನ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗೆ ಆ್ಯಪ್ಸ್ಒದಗಿಸುವ ಪ್ಲೇ ಸ್ಟೋರ್ ಈಬಾರಿ ಮತ್ತೆ ಸುದ್ದಿಯಾಗಿದೆ. ಪ್ಲೇಸ್ಟೋರ್ ತುಂಬಾ ಇರುವ ಆ್ಯಪ್‌ಗಳ ಪೈಕಿ ಬಹುತೇಕಆ್ಯಪ್ಸ್ ನಕಲಿ ಮತ್ತು ಮಾಹಿತಿಕದಿಯುವ ಕೆಲಸ ಮಾಡುತ್ತಿವೆ. ಮಾಲ್ವೇರ್ಮತ್ತು ವೈರಸ್ ಹೊಂದಿರುವ ಆ್ಯಪ್ಸ್ಬಗ್ಗೆ ಗೂಗಲ್ ಪ್ಲೇ ಸ್ಟೋರ್ ಮತ್ತೆಸುದ್ದಿಯಲ್ಲಿದೆ.  ಕಂಪ್ಯೂಟರ್ ಮತ್ತು ಸ್ಮಾರ್ಟ್‌ಫೋನ್ ಭದ್ರತೆ, ಸುರಕ್ಷತೆ ಒದಗಿಸುವ ಸೈಮಂಟೆಕ್ ಸಂಸ್ಥೆ ಹೊಸದಾಗಿ ಪ್ರಕಟಿಸಿರುವ ವರದಿಯಲ್ಲಿ ಗೂಗಲ್ ಪ್ಲೇ ಸ್ಟೋರ್‌ನಲ್ಲಿನ ಕೆಲವೊಂದು ಆ್ಯಪ್ಸ್ ನಕಲಿಯಾಗಿದ್ದು, ಗ್ರಾಹಕರ ಮಾಹಿತಿ ಕದಿಯುವ ಕೆಲಸದ ಜತೆಗೆ, ಪಾಪ್‌ ಅಪ್‌ ಜಾಹೀರಾತಿನ ಮೇಲೆ ಕ್ಲಿಕ್ ನೀಡುವ ಕೆಲಸ ಮಾಡುತ್ತಿವೆ ಎಂದು…

  • ಸ್ಪೂರ್ತಿ

    ಜೀವನದಲ್ಲಿ ಸಮಾಜಕ್ಕೆ ಏನನ್ನಾದರೂ ಕೊಡುಗೆ ನೀಡಬೇಕೆಂಬುದು ಸತ್ಯ..ಅದಕ್ಕೆ ಸುನಿತಾ ಮಂಜುನಾಥ್ ರವರೇ ನೈಜ್ಯ ಉದಾಹರಣೆ…

    ಸಾಕಷ್ಟು ಸಮಾಜಸೇವೆಗಳನ್ನು ಮಾಡಿ ಹೆಸರಾಗಿರುವ ಸುನಿತಾ ಮಂಜುನಾಥ್ ರವರ ಬಹು ದೊಡ್ಡ ಕನಸಿನ ಆಂದೋಲನವೇ “ಕಸದಿಂದ ರಸ” ತಮ್ಮದೇ ಶಾಲೆಯ ಮಕ್ಕಳಿಗೆ ಹುರಿದುಂಬಿಸಿ..‌ ದೇಶದ ಬಗ್ಗೆ ಅಭಿಮಾನವನ್ನು ಹೆಚ್ಚು ಮಾಡುತ್ತಿರುವ ಇವರು ನಿಜಕ್ಕೂ ಗ್ರೇಟ್..

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಸ್ಮರಿಸುತ್ತ ಈ ದಿನದ ನಿಮ್ಮ ರಾಶಿಯ ಶುಭ ಫಲವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷ ಕುಟುಂಬದ ಸದಸ್ಯರು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(5 ಡಿಸೆಂಬರ್, 2018) ನಿಮ್ಮ ಮನದನ್ನೆಯ ವಿಚಿತ್ರ ನಡವಳಿಕೆ ಇಂದು ನಿಮ್ಮ ಪ್ರೇಮವನ್ನು ಘಾಸಿಗೊಳಿಸುತ್ತದೆ. ಹೊಸ ಪ್ರಸ್ತಾಪಗಳ ಅಕರ್ಷಕವಾಗಿದ್ದರೂ ಯಾವುದೇ ಆತುರದ…

  • ಜ್ಯೋತಿಷ್ಯ

    ಶಿರಡಿ ಶ್ರೀ ಸಾಯಿಬಾಬಾನನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯದ ಬಗ್ಗೆ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Sunday, November 28, 2021) ವಿಧಿಯನ್ನು ಆಧರಿಸದಿರಿ ಮತ್ತು ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿ ದೇವತೆಯಾಗಿದ್ದು ಇದು ಎಂದಿಗೂ ತಾನಾಗಿಯೇ ನಿಮ್ಮ ಬಳಿ ಬರುವುದಿಲ್ಲ. ನಿಮ್ಮ ತೂಕವನ್ನು ನಿಯಂತ್ರಿಸಲು ಮತ್ತು ನಿಮ್ಮ ಆರೋಗ್ಯವನ್ನು ಪುನಃ ಪಡೆಯಲು ವ್ಯಾಯಾಮ ಮಾಡಲು ಇದು ಒಳ್ಳೆಯ ಸಮಯ. ದೀರ್ಘಕಾಲದವರೆಗೆ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದವರು, ಅವರು ಇಂದು ಎಲ್ಲಿಂದಲಾದರೂ ಹಣವನ್ನು ಪಡೆಯಬಹುದು, ಇದು ಜೀವನದ ಅನೇಕ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ನೀವು ಇಡೀ ಕುಟುಂಬಕ್ಕೆ…