ಆಧ್ಯಾತ್ಮ

ಈ ಮಂತ್ರಗಳನ್ನು ಹೇಳಿದರೆ ಏನಾಗುತ್ತೆ ಗೊತ್ತಾ !!! ಹಾಗಾದ್ರೆ ಮುಂದೆ ಓದಿದ್ರೆ ಮಾತ್ರ ನಿಮಗೆ ಗೊತ್ತಾಗುತ್ತೆ…..

4960

ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ. ‘ಮನಯೇವ ಮನುಷ್ಯಾಣಾಂ, ಕಾರಣಯೋ ಬಂಧನ, ಮೋಕ್ಷಯಃ‘ ಎಂದಿವೆ ಸ್ಮೃತಿ ವಾಕ್ಯಗಳು. ಅಂದರೆ ಬಂಧನದಿಂದ ಬಿಡಿಸಿಕೊಳ್ಳುವುದಕ್ಕೆ ಹಾಗೂ ಮೋಕ್ಷ ಪಡೆಯುವುದಕ್ಕೆ ಮನಸ್ಸೇ ಮುಖ್ಯ ಕಾರಣವಾಗುತ್ತದೆ.

ಮನಸ್ಸನ್ನು ನಿಗ್ರಹಿಸಿ ಬುದ್ಧಿವಂತಿಕೆ ಹೆಚ್ಚಿಸಿಕೊಳ್ಳುವುದಕ್ಕೆ ಬ್ರಹ್ಮರ್ಷಿ ವಿಶ್ವಾಮಿತ್ರರು ಗಾಯತ್ರಿ ಮಂತ್ರವನ್ನು ರಚಿಸಿದ್ದಾರೆ. 24 ಅಕ್ಷರಗಳ ಒಂದು ಛಂದಸ್ಸಿನ ಗಾಯತ್ರಿ ಮಂತ್ರಕ್ಕೆ ಸಮನಾದ ಮಂತ್ರ ವೇದದಲ್ಲಿಯೇ ಮತ್ತೊಂದಿಲ್ಲ ಎನ್ನುತ್ತಾರೆ ಋಷಿಗಳು. ‘ಬ್ರಹ್ಮದೇವರು ಮೂರು ವೇದದ ಸಾರವನ್ನು ಗಾಯತ್ರಿ ಮಂತ್ರದ ಮೂರು ಚರಣಗಳಲ್ಲಿ ತುಂಬಿಸಿಕೊಟ್ಟಿರುವವರು‘ ಗಾಯತ್ರಿಯಿಂದ ಸರ್ವ ರೀತಿಯ ಸಿದ್ಧಿಪ್ರಾಪ್ತಿಯಾಗುತ್ತದೆ ಎನ್ನುತ್ತಾನೆ ಭಗವಾನ್ ಮನು.

ಎಲ್ಲಾ ಮಂತ್ರ, ಪೂಜೆ, ಪುರಸ್ಕಾರಗಳಿಗೂ ಅತೀ ಎತ್ತರದಲ್ಲಿ ರಾರಾಜಿಸುವುದು ಗಾಯತ್ರಿ ಮಹಾಮಂತ್ರ. ಅಥರ್ವವೇದದಲ್ಲಿ ಗಾಯತ್ರಿ ಮಂತ್ರವನ್ನು ಶಕ್ತಿ, ಧನ ಸಂಪತ್ತು ಮತ್ತು ಬ್ರಹ್ಮತೇಜಸ್ಸನ್ನು ನೀಡುವ ಮಹಾಮಾತೆ ಎಂದು ಉಲ್ಲೇಖಿಸಿದ್ದಾರೆ.

ಇನ್ನು ಮಹಾಭಾರತವನ್ನು ರಚಿಸಿದ ವ್ಯಾಸ ಮಹರ್ಷಿಗಳೂ ಸಹ ಗಾಯತ್ರಿ ಮಂತ್ರವನ್ನು ಕೊಂಡಾಡಿದ್ದು, ಗಾಯತ್ರಿವನ್ನು ಪಕ್ವಾನ್ನ( ಮೃಷ್ಟಾನ್ನ)ಕ್ಕೆ ಹೋಲಿಕೆ ಮಾಡಿದ್ದಾರೆ. ಗಾಯತ್ರಿಯು ಲೋಕಕ್ಕೆ ತಾಯಿ. ಪರಬ್ರಹ್ಮನ ಸ್ವರೂಪವುಳ್ಳವಳು, ಶ್ರೇಷ್ಠ ಸಂಪತ್ತನ್ನು ಕೊಡುವವಳು, ಜಪಿಸಲು ಯೋಗ್ಯಳು, ಬ್ರಹ್ಮತೇಜಸ್ಸನ್ನು ಹೆಚ್ಚಿಸುವವಳು ಆಗಿದ್ದಾಳೆ.

ಗಾಯತ್ರಿ ಮಂತ್ರ :-

“ಓಂ ಭೂರ್ಭುವಃ ಸ್ವಃ ತತ್ಸವಿತುರ್ವರೇಣ್ಯಂ ಭರ್ಗೋ ದೇವಸ್ಯ ಧೀಮಹಿ ಧಿಯೋ ಯೋ ನಃ ಪ್ರಚೋದಯಾತ್”           ಹೀಗೆ ಗಾಯತ್ರಿ ಮಂತ್ರವನ್ನು ಜಪಿಸುವುದರಿಂದ ಏಕಾಗ್ರತೆ ಹೆಚ್ಚಲಿದ್ದು, ಮನಸ್ಸನ್ನು ನಿಯಂತ್ರಿಸಿ ಇಷ್ಟಾರ್ಥಗಳನ್ನು ಸಿದ್ಧಿಸುವ ಮನೋಬಲ ಸಿದ್ಧಿಸುತ್ತದೆ. ಈ ಮೂಲಕ ಸಂಪತ್ತು ಬುದ್ಧಿಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು ಎಂಬ ನಂಬಿಕೆ ಇದೆ.

ಸಂಪತ್ತಿನ ವೃದ್ಧಿಗಾಗಿ ಜಪಿಸಬೇಕಿರುವ ಮತ್ತೊಂದು ಮಂತ್ರವೆಂದರೆ ಅದು ಭಗವಾನ್  ವಿಷ್ಣುವಿನ ಮಂತ್ರ :-

ಮಹಾ ವಿಷ್ಣು ಸಂಪತ್ತಿನ ಅಧಿದೇವತೆ ಲಕ್ಷ್ಮಿ ದೇವಿಯ ಪತಿ. ಲಕ್ಷ್ಮಿ ಪತಿಯ ಮಂತ್ರ                                             “ಓಂ ನಾರಾಯಣಾಯ ವಿದ್ಮಹೇ ವಾಸುದೇವಾಯ ಧೀಮಹಿ ತನ್ನೋ ವಿಷ್ಣು ಪ್ರಚೋದಯಾತ್” ವನ್ನು ಜಪಿಸಿದರೆ ಸಂಪತ್ತು ವೃದ್ಧಿಸಲಿದೆ ಎಂಬ ನಂಬಿಕೆ ಇದೆ.

ಓಂ ಮಹಾಲಕ್ಷ್ಮೈಚ ವಿದ್ಮಹೇ ವಿಷ್ಣು ಪತ್ನೀಚ ಧೀಮಹಿ ತನ್ನೋ ಲಕ್ಷ್ಮೀ ಪ್ರಚೋದಯಾತ್ ಎಂಬುದೂ ಸಹ ಲಕ್ಷ್ಮಿಯನ್ನು ಒಲಿಸಿಕೊಳ್ಳಲು ಇರುವ ಮಂತ್ರವಾಗಿದ್ದು ಈ ಮಂತ್ರವನ್ನು ಜಪಿಸಿದರೂ ಸಹ ಸಂಪತ್ತು, ಸಂವೃದ್ಧಿ ಹೆಚ್ಚಲಿದೆ ಎಂಬ ದೃಢ ನಂಬಿಕೆ ಇದೆ.

ಮಂತ್ರಗಳನ್ನು ಬರೀ ಉಚ್ಚರಿಸುವುದಲ್ಲ, ಅದರ ಮೇಲೆ ನಿಮಗೆ ನಂಬಿಕೆ ಇರಬೇಕು. ನಂಬಿಕೆ ಇಲ್ಲಂದ್ರೆ ಏನು ಮಾಡಿದರೂ ಯಶಸ್ಸು ಸಿಗುವುದಿಲ್ಲ. ಆದ್ರಿಂದ ನಂಬಿಕೆ ಇಟ್ಟು ಮಾಡಿ ಎಲ್ಲಾ ಒಳ್ಳೆಯದೇ ಆಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಾಯಿ ಸಾಕಾಣಿಕೆ ಇಂದ ಹೃದಯ ಆರೋಗ್ಯವಾಗಿ ಇರುತ್ತಂತೆ!

    ಕೆಲವರಿಗೆ ನಾಯಿ ಎಂದರೆ ಅಪಾರ ಪ್ರೀತಿ. ಅವರು ಹೋದಲ್ಲಿ ಬಂದಲ್ಲಿ ಎಲ್ಲಾ ಕಡೆ ನಾಯಿ ಜೊತೆಗಿರಬೇಕು. ಇನ್ನು ಕೆಲವರು ನಾಯಿ ಎಂದರೆ ಮೂಗು ಮುರಿಯುತ್ತಾರೆ. ಆದರೆ ನಾಯಿ ಸಾಕುವುದರಿಂದ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ. ಹಾಗೂ ಅವರಲ್ಲಿ ಹೃದಯ ಸಂಬಂಧಿ ರೋಗಗಳೂ ಕಡಿಮೆ ಎಂದು ಸಮೀಕ್ಷೆಯೊಂದು ಹೇಳುತ್ತಿದೆ. ಅದರಲ್ಲೂ ನಗರಗಳಲ್ಲಿ ನಾಯಿ ಸಾಕುವುದರಿಂದ ಆ ಮನೆಯವರಿಗೆ ಪ್ರಯೋಜನ ಹೆಚ್ಚು ಎಂದು ವಿಜ್ಞಾನಿಗಳ ತಂಡವೊಂದು ಹೇಳಿದೆ. ಹಲವಾರು ಸಮೀಕ್ಷೆಗಳ ಪ್ರಕಾರ ನಾಯಿ ಮಾಲಿಕರಿಗೆ ರಕ್ತದೊತ್ತಡ ಕಡಿಮೆ ಇರುತ್ತದೆ. ಕಾರಣ ಸಾಕಿದ…

  • ಸುದ್ದಿ

    ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ,..ಯಾರೆಂದು ತಿಳಿಯಿರಿ,..?

    ಬಿಜೆಪಿ ವಲಯದಿಂದ ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ. ಅಲ್ಲದೇ, ಅಥಣಿ ಮಾಜಿ ಶಾಸಕ ಲಕ್ಷ್ಮಣ್ ಸವದಿಗೂ ಕೂಡ ಸಚಿವ ಸ್ಥಾನ ಸಿಕ್ಕಿರೋದು ವಿಶೇಷ. 1.ಗೋವಿಂದ ಕಾರಜೋಳ: ಮುಧೋಳ್, ಬಾಗಲಕೋಟೆ,  2.ಅಶ್ವಥ್ ನಾರಾಯಣ: ಮಲ್ಲೇಶ್ವರಂ, ಬೆಂಗಳೂರು3.ಲಕ್ಷ್ಮಣ ಸವದಿ: ಅಥಣಿ ಮಾಜಿ ಶಾಸಕ                       4.ಕೆ.ಎಸ್ ಈಶ್ವರಪ್ಪ: ಶಿವಮೊಗ್ಗ5.ಆರ್ ಅಶೋಕ್: ಪದ್ಮನಾಭನಗರ,    6.ಜಗದೀಶ್ ಶೆಟ್ಟರ್: ಧಾರವಾಡ ಸೆಂಟ್ರಲ್, (ಹುಬ್ಬಳ್ಳಿ- ಧಾರವಾಡ)7 ಶ್ರೀರಾಮುಲು: ಮೊಳಕಾಲ್ಮೂರು, ಚಿತ್ರದುರ್ಗ              8. ಸುರೇಶ್ ಕುಮಾರ್: ರಾಜಾಜಿನಗರ9.ಸಿ.ಟಿ ರವಿ: ಚಿಕ್ಕಮಗಳೂರು     …

  • ಜ್ಯೋತಿಷ್ಯ

    ದಿನ ಭವಿಷ್ಯ , ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….

    ನಿತ್ಯ ಭವಿಷ್ಯ………… ಮೇಷ ರಾಶಿ ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ವೃಷಭ ರಾಶಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು.  ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ…

  • ಸುದ್ದಿ

    ಕೇವಲ 850ರೂಪಾಯಿಗೆ ತೆಗೆದುಕೊಂಡಿದ್ದ ಉಂಗುರ ಮಾರಿದಾಗ ಸಿಕ್ಕಿದ್ದು 4.5 ಕೋಟಿ ರೂಪಾಯಿ!ಅಚ್ಚರಿ ಆದರೂ ಇದು ನಿಜ…

    ಹೆಚ್ಚಿನ ಸಂಖ್ಯೆಯ ಮಹಿಳೆಯರಿಗೆ ಬೆಲೆ ಬಾಳುವ ಆಭರಣಗಳು ತಮ್ಮದಾಗಬೇಕು ಎಂಬ ಆಸೆ ಇರುತ್ತದೆ. ಆರ್ಥಿಕವಾಗಿ ಚಿನ್ನದ ಆಭರಣ ಖರೀದಿಸಲು ಸಾಧ್ಯವಾಗದಿದ್ದಾಗ ಮಾರುಕಟ್ಟೆಯಲ್ಲಿ ದೊರೆಯುವ ನಕಲಿ ಆಭರಣಗಳನ್ನು ಖರೀದಿಸುತ್ತಾರೆ. ಅಂತೆಯೇ ಇಂಗ್ಲೆಂಡ್ ನಿವಾಸಿಯ ಮಹಿಳೆ 33 ವರ್ಷಗಳ ಹಿಂದೆ ಮಾರುಕಟ್ಟೆಯಲ್ಲಿ 850 ರೂ.ಗೆ ಖರೀದಿಸಿದ್ದ ವಜ್ರದ ಉಂಗುರ ಇಂದು ಬರೋಬ್ಬರಿ 6.5 ಕೋಟಿ ರೂ.ಗೆ ಮಾರಾಟವಾಗಿದೆ. ವಜ್ರದ ಉಂಗುರ ಧರಿಸಬೇಕೆಂದು ಆಸೆ ಪಟ್ಟಿದ್ದ ಲಂಡನ್ ನಿವಾಸಿ 33 ವರ್ಷಗಳ ಹಿಂದೆ ಡೆಬ್ರಾ ಗಾಂಡರ್ಡ್(55), ರಸ್ತೆ ಬದಿಯ ಅಂಗಡಿಯಲ್ಲಿ 850…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಶ್ರೀ ಹನುಮ ಜಯಂತಿಯ ಶುಭಾಶಯಗಳು, ಈ ಶುಭ ದಿನದಂದು ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(20 ಡಿಸೆಂಬರ್, 2018) ಒತ್ತಡ ತೊಡೆದುಹಾಕಲು ಹಿತವಾದ ಸಂಗೀತವನ್ನುಆಲಿಸಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ…